Tag: minister

  • ಉದ್ಘಾಟನೆಗೆ ಮುಂಚೆಯೇ ರೇವಣ್ಣ ಕ್ಷೇತ್ರದಲ್ಲಿ ಸತತ ಮೂರನೇ ಬಾರಿ ಕುಸಿದ ಮೇಲ್ಸೇತುವೆ!

    ಉದ್ಘಾಟನೆಗೆ ಮುಂಚೆಯೇ ರೇವಣ್ಣ ಕ್ಷೇತ್ರದಲ್ಲಿ ಸತತ ಮೂರನೇ ಬಾರಿ ಕುಸಿದ ಮೇಲ್ಸೇತುವೆ!

    ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಬಳಿ ಸತತ ಮೂರನೇ ಬಾರಿ ರೈಲ್ವೇ ಮೇಲ್ಸೇತುವೆ ಕುಸಿದಿದೆ.

    ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಪ್ರತಿನಿಧಿಸುವ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ 40 ಕೋಟಿ ರೂ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗಿದ್ದು, ಉದ್ಘಾಟನೆಗೂ ಮುನ್ನ ಈ ರೇಲ್ವೇ ಮೇಲ್ಸೇತುವೆ ಪದೇ ಪದೇ ಕುಸಿಯುತ್ತಿದೆ. ಕಳಪೆ ಗುಣಮಟ್ಟದ ಕಾಮಗಾರಿಯಿಂದಾಗಿ ಸೇತುವೆ ಆಗಾಗ್ಗೆ ಕುಸಿಯುತ್ತಿದೆ ಅಂತ ಸ್ಥಳೀಯರು ಹಾಗೂ ಪ್ರಯಾಣಿಕರು ಆರೋಪಿಸುತ್ತಿದ್ದಾರೆ.

    ನೂತನ ಫ್ಲೈಓವರ್ ಇದಾಗಿದ್ದು, ಕೆಲ ತಿಂಗಳ ಹಿಂದೆ ರೈಲ್ವೇ ಮೇಲ್ಸೇತುವೆ ತಡೆಗೋಡೆ ಒಂದು ಬಾರಿ ಮೊದಲೇ ಕುಸಿದು ಬಿದ್ದಿತ್ತು. ನಂತರ ಅದರ ಪಕ್ಕದ ಎಡಭಾಗದಲ್ಲಿ ಕಳೆದ ಜುಲೈ ತಿಂಗಳಿನಲ್ಲಿ 2ನೇ ಬಾರಿಗೆ ಕುಸಿದಿತ್ತು. ಇದರಿಂದಾಗಿ ಸ್ಥಳೀಯರು ಮತ್ತು ಪ್ರಯಾಣಿಕರು ಹೆಚ್ಚಿನ ಆತಂಕಪಟ್ಟಿದ್ದರು.

    ಸೇತುವೆಯ ಗೋಡೆಗಳು ಕುಸಿತವಾಗಿದ್ದು, ಸಾರ್ವಜನಿಕರಿಗೆ ಕಾಣಬಾರದೆಂದು ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಉದ್ಘಾಟನೆಗೂ ಮುನ್ನವೇ ಮೇಲ್ಸೇತುವೆ ಕುಸಿತಕೊಂಡಿದ್ದು ಕಳಪೆ ಕಾಮಾಗಾರಿಗೆ ಉದಾಹರಣೆಯಾಗಿದೆ. ಇನ್ನು ಗೋಡೆ ಕುಸಿತದ ವೇಳೆಯಲ್ಲಿ ಯಾವುದೇ ವಾಹನಗಳು ಚಲಿಸುತ್ತಿರಲಿಲ್ಲ. ಹಾಗಾಗಿ ಅನಾಹುತವೊಂದು ತಪ್ಪಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=hcPdS2X3dPI

  • ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್‍ಗೆ ಅವಕಾಶ ಸಾಧ್ಯವಿಲ್ಲ- ಡಿಕೆಶಿ

    ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಕೌನ್ಸಿಲಿಂಗ್‍ಗೆ ಅವಕಾಶ ಸಾಧ್ಯವಿಲ್ಲ- ಡಿಕೆಶಿ

    ಬೆಂಗಳೂರು: ಮಡಿಕೇರಿಯ ಪ್ರವಾಹ ಸಂತ್ರಸ್ತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ವೈದ್ಯಕೀಯ ಸೀಟ್ ಕೌನ್ಸಿಲಿಂಗ್‍ಗೆ ಅವಕಾಶ ಸಾಧ್ಯವಿಲ್ಲ. ಈ ಕುರಿತು ಸರ್ಕಾರ ಮಧ್ಯ ಪ್ರವೇಶ ಮಾಡುವುದಿಲ್ಲ. ಇದು ಅವರ ವೈಯಕ್ತಿಕ ಸಮಸ್ಯೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಕೌನ್ಸಿಲಿಂಗ್ ಭಾಗಿಯಾಗಲು ಅವಕಾಶ ಕೋರಿ ಯಾವುದೇ ದೂರು ಕೂಡ ಬಂದಿಲ್ಲ. ಆ ರೀತಿ ದೂರು ಬಂದ್ರು ಸರ್ಕಾರ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

    ಇಂದು ಕೊನೆ ದಿನದ ಮೆಡಿಕಲ್ ಕೌನ್ಸಿಲಿಂಗ್ ನಡೆಯುತ್ತಿದೆ. ನಾನು ಇಂಟರ್ ಫಿಯರ್ ಆಗಬಾರದು ಅಂತಾ ಕೊನೆ ದಿನ ಬಂದಿದ್ದೇನೆ. ಕೆಇಎ ಸರಿಯಾಗಿ ಪಾರದರ್ಶಕವಾಗಿ ಒಟ್ಟು 49 ಕಾಲೇಜುಗಳ 6,260 ಸೀಟ್ ಗೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆದಿದೆ. ಬಾಕಿ ಉಳಿದ 750 ಸೀಟ್ ಗೆ ಇಂದು ಕೊನೆ ಹಂತದ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಮಹಾರಾಷ್ಟ್ರ ತಮಿಳುನಾಡು ಕೇರಳ ರಾಜ್ಯಗಳು ನಮ್ಮನ್ನ ನೋಡಿ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಸುತ್ತಿದೆ. ಕಾನೂನಿನ ಅಡಿಯಲ್ಲಿ ಒಂದು ಸೀಟ್ ಸಹ ದೋಖಾ ಆಗಿಲ್ಲ. ಇನ್ನು 15 ಸೆಪ್ಟೆಂಬರ್ ಒಳಗೆ ರಿಂದ ಉಳಿದ ಡೆಂಟಲ್ ಸೀಟ್ ಕೌನ್ಸಿಲಿಂಗ್ ಮುಗಿಸಲಾಗುತ್ತೆ ಅಂತ ಅವರು ಹೇಳಿದ್ರು.

    ಇದಕ್ಕೂ ಮೊದಲು ಕೌನ್ಸಿಲಿಂಗ್ ನಲ್ಲಿ ಗೋಲ್ ಮಾಲ್ ನಡೆಯುತ್ತಿರುವ ಅರೋಪ ಹಿನ್ನೆಲೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅವರು ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ದಿಢೀರ್ ಭೇಟಿ ನೀಡಿದ್ದಾರೆ. ಅಲ್ಲದೇ ಇದೇ ವೇಳೆ ಕೌನ್ಸಿಲಿಂಗ್ ಬಂದ ವಿದ್ಯಾರ್ಥಿಗಳ, ಪೋಷಕರ ಜತೆ ಸಚಿವರ ಚರ್ಚೆ ನಡೆಸಿದ್ದು, ಕೌನ್ಸಿಲಿಂಗ್ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದಾರೆ

    16 ಸಾವಿರ ಶುಲ್ಕವನ್ನ ಏಕಾಏಕಿ 50 ಸಾವಿರಕ್ಕೆ ಏರಿಕೆ ಮಾಡಿದ ಕುರಿತ ಮಾಧ್ಯಮಗಳ ಪ್ರಶ್ನೆಗೆ, ಒಂದು ಮೆಡಿಕಲ್ ವಿದ್ಯಾರ್ಥಿಯನ್ನ ಓದಿಸಲು 10 ಲಕ್ಷ ರೂ. ಖರ್ಚಾಗುತ್ತೆ. ಯುಕೆಜಿ ಎಲ್ ಕೆಜಿ ಮಕ್ಕಳನ್ನ 50 ಸಾವಿರ ಕೊಟ್ಟು ಶಾಲೆಗೆ ಕಳುಹಿಸುತ್ತಾರೆ. ಮೆಡಿಕಲ್ ಗೆ ಸೇರುವವರಿಗೆ ಏನು ಕಷ್ಟನಾ ಅಂತ ಮರು ಪ್ರಶ್ನೆ ಹಾಕಿದ್ದಾರೆ. ಸಚಿವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮಂಜುಳಾ ಸಾಥ್ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶೀಘ್ರದಲ್ಲೇ ಮನೆ ರಿಪೇರಿ, ಸಂಪೂರ್ಣ ಕುಸಿದ ಮನೆಗೆ ಹೆಚ್ಚಿನ ಅನುದಾನ – ಯು.ಟಿ ಖಾದರ್

    ಶೀಘ್ರದಲ್ಲೇ ಮನೆ ರಿಪೇರಿ, ಸಂಪೂರ್ಣ ಕುಸಿದ ಮನೆಗೆ ಹೆಚ್ಚಿನ ಅನುದಾನ – ಯು.ಟಿ ಖಾದರ್

    ಮಡಿಕೇರಿ: ಪ್ರಕೃತಿಯ ವಿಕೋಪಕ್ಕೆ ಕೊಡಗು ಬಲಿಯಾಗಿದೆ. ಜಿಲ್ಲೆಯ ಜನ ನೋವಿನಲಿದ್ದಾರೆ. ರಾಜ್ಯ ಸರ್ಕಾರ ಕೊಡಗಿನ ಪರ ಇದ್ದು, ಮನೆ ರಿಪೇರಿಗೆ ಅನುದಾನವನ್ನು ಶೀಘ್ರದಲ್ಲೇ ನೀಡುತ್ತೇವೆ ಎಂದು ವಸತಿ ಸಚಿವ ಯು.ಟಿ ಖಾದರ್ ಭರವಸೆ ನೀಡಿದ್ದಾರೆ.

    ಮಡಿಕೇರಿ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರೀ ಮಳೆಯಿಂದ ಪ್ರವಾಹ ಹಾಗೂ ಭೂಕುಸಿತ ಉಂಟಾದ ಪರಿಣಾಮ ಕೊಡಗಿನ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಸರ್ಕಾರ ಜಿಲ್ಲಾಡಳಿತ ಮೂಲಕ ಸಮರ್ಪಕ ಅನುದಾನ ನೀಡುತ್ತದೆ. ಮನೆ ರಿಪೇರಿಗೆ ಅನುದಾನ ಹಾಗೂ ಸಂಪೂರ್ಣ ಕುಸಿದ ಮನೆಗೆ ಹೆಚ್ಚಿನ ಅನುದಾನ ನೀಡುತ್ತೇವೆ ಅಂತ ಹೇಳಿದ್ರು.

    ಅವೈಜ್ಞಾನಿಕ ಮನೆ ನಿರ್ಮಿಸಬೇಡಿ:
    ಜಾಗ ಕಳೆದುಕೊಂಡವರಿಗೆ ಜಾಗ ಒದಗಿಸುವ ಯೋಜನೆ ಇದೆ. 7 ಕಡೆ ಜಾಗ ಗುರುತು ಮಾಡಲಾಗಿದೆ. ಹೌಸಿಂಗ್ ಕಾರ್ಪೋರೇಶನ್ ತಾತ್ಕಾಲಿಕವಾಗಿ ಜಿಲ್ಲೆಗೆ ಬರಲಿದೆ. ನೂತನ ತಂತ್ರಜ್ಞಾನದ ಮೂಲಕ ಮನೆ ಕಟ್ಟಲಾಗುವುದು. ಕುಶಾಲನಗರ ಭಾಗದಲ್ಲಿ ಜಾಗ ಗುರುತು ಮಾಡಲಾಗಿದೆ. ಮನೆ ಕಳೆದುಕೊಂಡವರ ಸಮೀಕ್ಷೆ ನಡೆಸಲಾಗುವುದು. ಕುಶಾಲನಗರದಲ್ಲಿ ಮನೆ ಕಳೆದುಕೊಂಡವರ 836 ಅರ್ಜಿಗಳು ಬಂದಿವೆ. ನಿಯಮಗಳನ್ನು ಕೂಡ ಜನ ಪಾಲಿಸಬೇಕು. ಜನ ಮನೆ ಕಟ್ಟುವ ಮುನ್ನ ಯೋಚನೆ ಮಾಡಬೇಕು. ಅವೈಜ್ಞಾನಿಕ ಮನೆ ನಿರ್ಮಾಣ ಮಾಡಬಾರದು ಅಂದ್ರು.

    ಕೊಡಗಿನ ಮರುನಿರ್ಮಾಣ:
    ಕಷ್ಟಕಾಲದಲ್ಲಿ ಮಾನವೀಯತೆಯನ್ನು ಮನುಕುಲ ಪ್ರದರ್ಶಿಸಿದೆ. ಕೊಡಗಿಗೆ ಜನಸಾಮಾನ್ಯರು ಸಹಾಯ ಮಾಡಿದ್ದಾರೆ. ಸಮಸ್ಯೆಯನ್ನು ವೈಜ್ಞಾನಿಕ ಪರಿಹಾರಿಸುತ್ತೇವೆ. ನಿರೀಕ್ಷೆಗಿಂತ ಉತ್ತಮವಾಗಿ ಕೊಡಗನ್ನು ಮರು ನಿರ್ಮಾಣ ಮಾಡ್ತೇವೆ ಅಂತ ಖಾದರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=KYPt_BTDW7s

  • ಕೊಡಗಿನ 61 ಶಾಲೆಗಳಿಗೆ ಹೋಗುವಂತಿಲ್ಲ, 76 ರಿಪೇರಿಯಾಗಬೇಕಿದೆ: ಎನ್.ಮಹೇಶ್

    ಕೊಡಗಿನ 61 ಶಾಲೆಗಳಿಗೆ ಹೋಗುವಂತಿಲ್ಲ, 76 ರಿಪೇರಿಯಾಗಬೇಕಿದೆ: ಎನ್.ಮಹೇಶ್

    ಮಡಿಕೇರಿ: ಕೊಡಗಿನಲ್ಲಿ 61 ಹೆಚ್ಚಿನ ಶಾಲೆಗಳಿಗೆ ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, 76 ಶಾಲೆಗಳು ರಿಪೇರಿಯಾಗಬೇಕಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯಿಂದಾಗಿ 61 ಕ್ಕೂ ಹೆಚ್ಚಿನ ಶಾಲೆಗಳಿಗೆ ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. 61 ಶಾಲೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಶಾಲೆಗಳು ಪ್ರಾರಂಭವಾಗಲಿದೆ. ಶಾಲೆಗೆ ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಹತ್ತಿರದ ಬೇರೆ ಶಾಲೆಗಳಿಗೆ ತೆರಳುವ ವ್ಯವಸ್ಥೆ ಮಾಡಲಾಗುತ್ತಿದೆ. ಪರಿಹಾರ ಕೇಂದ್ರಗಳಲ್ಲೇ ವಿದ್ಯಾರ್ಥಿಗಳಿಗೆ ಶಿಕ್ಷಣ ನಡೆಸುವಂತೆ ಸೂಚಿಸಿದ್ದೇನೆ. ಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ಸಹ ನಡೆಸಲಾಗುತ್ತದೆ. ಇನ್ನು ಎರಡು-ಮೂರು ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆಯನ್ನು ಕಾರ್ಯವನ್ನು ಆರಂಭಿಸಲಾಗುತ್ತದೆ ಎಂದು ಹೇಳಿದರು.

    ಪ್ರವಾಹದಿಂದಾಗಿ ಶಾಲೆಗಳ ದುರಸ್ಥಿ ಕಾರ್ಯ ಸವಾಲಿನ ಕೆಲಸವಾಗಿದೆ. ಜಿಲ್ಲೆಯ ಎಲ್ಲಾ ಶಾಲೆಗಳ ದುರಸ್ಥಿಗೆ ಒಟ್ಟು 4 ಕೋಟಿ ರೂಪಾಯಿಯ ಅಗತ್ಯವಿದೆ. ಇದಕ್ಕೆ ಸ್ಪಂದಿಸಿರುವ ಎಲ್ಲಾ ಜಿಲ್ಲೆಗಳ ಶಿಕ್ಷಕರುಗಳ ತಮ್ಮ ಒಂದು ದಿನದ ಸಂಬಳವನ್ನು ಸರ್ಕಾರಕ್ಕೆ ನೀಡಲಿದ್ದಾರೆ. ಇದರಿಂದಾಗಿ ಒಟ್ಟು ಸುಮಾರು 100 ಕೋಟಿ ರೂಪಾಯಿಯಷ್ಟು ಹಣ ಕ್ರೋಢಿಕೃತವಾಗುತ್ತದೆ. ಅದರಲ್ಲಿ 4 ಕೋಟಿ ರೂಪಾಯಿಯನ್ನು ಶಿಕ್ಷಣ ಕ್ಷೇತ್ರದ ದುರಸ್ಥಿಗಾಗಿ ಬಳಸಿಕೊಂಡು, ಉಳಿದ ಮೊತ್ತವನ್ನು ಕೊಡಗು ಅಭಿವೃದ್ಧಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

    ಪ್ರವಾಹದಿಂದಾಗಿ ಸಾವಿರಾರು ನಿರಾಶ್ರಿತರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡಬೇಕು. ಮನೆ ನಿರ್ಮಾಣ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಿರಾಶ್ರಿತರು ಯಾವುದೇ ಸ್ತ್ರೀ-ಶಕ್ತಿ ಸಂಘದ ಸಾಲದ ಬಗ್ಗೆ ಚಿಂತೆ ಮಾಡಬೇಡಿ, ಉದ್ಯೋಗ ಖಾತ್ರಿ ಯೋಜನೆ ಮೂಲಕ ಉದ್ಯೋಗ ಸೃಷ್ಟಿಮಾಡಲು ಯೋಚಿಸಿದ್ದೇವೆ ಎಂದು ನಿರಾಶ್ರಿತರಿಗೆ ಅಭಯಹಸ್ತ ನೀಡಿದರು.

    ಈ ಹಿಂದೆ ನಾನು ಸಹ ಕೊಡಗಿನಲ್ಲಿ ಕೆಲಸ ಮಾಡಿದ್ದೇನೆ. ಆದರೆ ನನ್ನ ಅವಧಿಯಲ್ಲಿ ಇಂತಹ ಮಳೆಯನ್ನೇ ನೋಡಿರಲಿಲ್ಲವೆಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪರಿಹಾರ ಕೇಂದ್ರದಲ್ಲಿ ಆಹಾರ ದುರುಪಯೋಗವಾಗಿರುವುದು ನಿಜ: ಸಾ.ರಾ ಮಹೇಶ್

    ಪರಿಹಾರ ಕೇಂದ್ರದಲ್ಲಿ ಆಹಾರ ದುರುಪಯೋಗವಾಗಿರುವುದು ನಿಜ: ಸಾ.ರಾ ಮಹೇಶ್

    ಮಡಿಕೇರಿ: ಪರಿಹಾರ ಕೇಂದ್ರಗಳಲ್ಲಿ ಆಹಾರ ಹಾಗೂ ಇತರೆ ಪದಾರ್ಥಗಳು ದುರಪಯೋಗವಾಗುತ್ತಿರುವುದು ಸತ್ಯವೆಂದು ಜಿಲ್ಲಾ ಉಸ್ತುವಾರಿ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿಕೆ ನೀಡಿದ್ದಾರೆ.

    ರಾಜ್ಯದ ಜನತೆ ಸಂತ್ರಸ್ತರಿಗಾಗಿ ಕಳುಹಿಸಿದ್ದ ಅಪಾರ ಪ್ರಮಾಣದ ವಸ್ತುಗಳನ್ನು ದುರುಪಯೋಗವಾಗುತ್ತಿರುವ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು, ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಬೇಕಾದವರಿಗೆ ಪದಾರ್ಥಗಳನ್ನು ಹಂಚುತ್ತಿದ್ದಾರೆ. ಪರಿಹಾರ ಕೇಂದ್ರಗಳಲ್ಲಿ ಆಹಾರ ಪದಾರ್ಥ ಹಾಗೂ ಇತರೆ ವಸ್ತುಗಳು ದುರಪಯೋಗವಾಗುತ್ತಿರುವುದು ಸತ್ಯವೆಂದು ಮಾಹಿತಿ ನೀಡಿದ್ದಾರೆ.

    ಈ ಕುರಿತು ಜಿಲ್ಲಾಧಿಕಾರಿಗಳಿಗೆ ಜೊತೆ ಈಗಾಗಲೇ ಚರ್ಚಿಸಿದ್ದು, ಸಂತ್ರಸ್ತರಿಗೆ ತಲುಪಬೇಕಾದ ಯಾವುದೇ ವಸ್ತುಗಳು ದುರಪಯೋಗವಾಗದಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದೇನೆ. ಅಲ್ಲದೇ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದ್ದೇನೆ. ರಾಜ್ಯದ ಜನತೆ ತಮ್ಮ ಸಹಾಯಹಸ್ತ ಚಾಚಿ ಸಂತ್ರಸ್ತರಿಗೆ ಕಳುಹಿಸಿರುವ ಪರಿಹಾರ ಸಾಮಗ್ರಿಗಳು ಉಳ್ಳವರ ಪಾಲಾಗದಂತೆ ಎಚ್ಚರವಹಿಸುತ್ತೇನೆಂದು ಭರವಸೆ ನೀಡಿದ್ದಾರೆ.

    ಪ್ರವಾಹದಿಂದಾಗಿ ಜಿಲ್ಲೆ ಸಂಪೂರ್ಣವಾಗಿ ನಾಶಹೊಂದಿದ್ದು, ಕೊಡಗನ್ನು ಪುನಃ ಸಹಜ ಸ್ಥಿತಿಗೆ ಮರಳಿಸಲು ಯತ್ನಿಸುತ್ತೇವೆ. ಇದಕ್ಕಾಗಿ ಸುಮಾರು 2 ಸಾವಿರ ಕೋಟಿ ರೂಪಾಯಿ ಖರ್ಚಾದರೂ ತೊಂದರೆಯಿಲ್ಲ. ನಾನು ಸಹ ನನ್ನ ಒಂದು ತಿಂಗಳ ಸಂಬಳವನ್ನು ಮಡಿಕೇರಿ ನಿರಾಶ್ರಿರಿಗಾಗಿ ನೀಡಿದ್ದೇನೆಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಂದೆರಡು ದಿನ ನೋಡಿ ಮೋಡ ಬಿತ್ತನೆಗೆ ಕ್ರಮ: ಪ್ರಿಯಾಂಕ್ ಖರ್ಗೆ

    ಒಂದೆರಡು ದಿನ ನೋಡಿ ಮೋಡ ಬಿತ್ತನೆಗೆ ಕ್ರಮ: ಪ್ರಿಯಾಂಕ್ ಖರ್ಗೆ

    ಕಲಬುರಗಿ: ಜಿಲ್ಲೆಯಲ್ಲಿ ಮಳೆ ಕೈಕೊಟ್ಟಿದ್ದು, ಒಂದೆರಡು ದಿನಗಳ ಕಾಲ ನೋಡಿ ಮೋಡ ಬಿತ್ತನೆಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲೆಯಲ್ಲಿ ಮಳೆ ಕೈಕೊಟ್ಟಿದ್ದು, ಈ ಬಾರಿ ಶೇ. 65 ರಿಂದ ಶೇ.70 ರಷ್ಟು ಮಳೆ ಕೊರತೆ ಕಂಡುಬಂದಿದೆ. ಅಲ್ಲದೇ ಹವಾಮಾನ ಇಲಾಖೆಯವರು ಮಳೆಯಾಗುತ್ತದೆ ಎನ್ನುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಒಂದುವೇಳೆ ಇದೇ ರೀತಿ ಮುಂದುವರಿದರೆ ಮೋಡ ಬಿತ್ತನೆ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

    ಈ ಕುರಿತು ಕೃಷಿ ಸಚಿವರಾದ ಕೃಷ್ಣ ಭೈರೆಗೌಡರೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವ ಕುರಿತು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

    ಸುರಿಯುತ್ತಿರುವ ಮಹಾಮಳೆಗೆ ರಾಜ್ಯದ ಜನತೆ ತತ್ತರಿಸಿ ಹೋಗಿದ್ದು, ರಾಜ್ಯದ ಬಹುತೇಕ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಈ ಬಾರಿ ರಾಜ್ಯದ ಎಲ್ಲಾ ಜಲಾಶಯಗಳು ಅವಧಿಗೂ ಮುನ್ನವೇ ತುಂಬಿವೆ. ಆದರೆ ಪ್ರಕೃತಿಯ ಆಟಕ್ಕೆ ಕಲಬುರಗಿ ಜಿಲ್ಲೆಯ ಜನರು ಕನಿಷ್ಠ ವರ್ಷಧಾರೆಯನ್ನು ಕಾಣದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕರ್ತವ್ಯದ ಕೇಂದ್ರ ಸ್ಥಾನದಲ್ಲಿಯೇ ಮನೆ, ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

    ಕರ್ತವ್ಯದ ಕೇಂದ್ರ ಸ್ಥಾನದಲ್ಲಿಯೇ ಮನೆ, ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು: ಅಧಿಕಾರಿಗಳಿಗೆ ಡಿಕೆಶಿ ಸೂಚನೆ

    ಬಳ್ಳಾರಿ: ಅಧಿಕಾರಿಗಳು ತಾವು ನಿರ್ವಹಿಸುವ ಕೇಂದ್ರದ ಸ್ಥಾನದಲ್ಲಿಯೇ ಮನೆ ಹಾಗೂ ಕಚೇರಿ ಮಾಡಿ ಬೋರ್ಡ್ ಹಾಕಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

    ಜಿಲ್ಲೆಗೆ ಪ್ರಪ್ರಥಮಬಾರಿ ಉಸ್ತುವಾರಿ ಸಚಿವರಾಗಿ ಧ್ವಜಾರೋಹಣ ನಡೆಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆ ಅಭಿವೃದ್ಧಿಶೀಲ ಜಿಲ್ಲೆಯಾಗಿದೆ. ಮಲೆನಾಡಿನಿಂದ ಹರಿದು ಬರುವ ಪವಿತ್ರ ತುಂಗಭದ್ರ ನದಿಯು ಜಿಲ್ಲೆಯ ಜೀವನಾಡಿಯಾಗಿದ್ದಾಳೆ. ಇದರಿಂದ ರೈತರು ಶಿಸ್ತುಬದ್ಧವಾದ ಕೃಷಿಯನ್ನು ಅಳವಡಿಸಿಕೊಳ್ಳಬೇಕು. ನೀರು ಮತ್ತು ವಿದ್ಯುತ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಜನರ ನಡುವೆ ಅಧಿಕಾರಿಗಳಿರಬೇಕು. ಹೀಗಾಗಿ ಎಲ್ಲಾ ಅಧಿಕಾರಿಗಳು ಏನು ಮಾಡುತ್ತಿರೋ ಗೊತ್ತಿಲ್ಲ, ಇನ್ನು ಎರಡು ತಿಂಗಳ ಒಳಗಾಗಿ ನೀವು ನಿಮ್ಮ ನಿಮ್ಮ ಕಾರ್ಯಕ್ಷೇತ್ರದಲ್ಲೇ ಜನರಿಗೆ ಸಿಗುವಂತಾಗಬೇಕು. ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿಯೇ ವಾಸ ಮಾಡಬೇಕು, ನೀವು ಬಾಡಿಗೆ ಮನೆ ಮಾಡ್ತಿರೋ, ಕ್ವಾರ್ಟರ್ಸ್ ನಲ್ಲಿ ಇರುತ್ತಿರೋ ಗೊತ್ತಿಲ್ಲ ಎಂದು ಖಡಕ್ ಆಗಿ ತಿಳಿಸಿದರು.

    ಎಲ್ಲಾ ಹಂತಗಳಲ್ಲಿನ ಯಾವುದೇ ಕಾಮಗಾರಿ ನಡೆದರೂ ಅದು ಪಾರದರ್ಶಕವಾಗಿರಬೇಕು. ಎಲ್ಲದಕ್ಕೂ ಬಿಲ್ ಇರಬೇಕು, ಜಿಪಿಎಸ್ ಮೂಲಕ ಕೆಲಸ ಮಾಡಬೇಕು. ಎಲ್ಲಾ ಅಧಿಕಾರಿಗಳು ಎಲ್ಲಿದ್ದಾರೆ? ಎಲ್ಲಿ ಹೋಗುತ್ತಿದ್ದಾರೆ ಅನ್ನುವ ಮಾಹಿತಿ ಮೇಲಾಧಿಕಾರಿಗಳಿಗೆ ಹಾಗೂ ಜನಸಾಮಾನ್ಯರಿಗೆ ಗೊತ್ತಾಗಬೇಕು ಎಂಬುದು ನನ್ನ ಆಡಳಿತ ವೈಖರಿಯ ಮೊದಲ ಹೆಜ್ಜೆಯಾಗಿದೆ. ಯಾವುದೇ ಇಲಾಖೆಯಲ್ಲಿ ಸರ್ಕಾರದ ಹಣ ಎಷ್ಟೇ ಖರ್ಚಾದರೂ ಅದಕ್ಕೆ ದಾಖಲೆ ಇರಬೇಕು. ಅಲ್ಲದೇ ಎಲ್ಲಾ ಇಲಾಖೆಗಳಲ್ಲೂ ಪರಿಚಯ ಪುಸ್ತಕ ಹೊಂದಿರಬೇಕು. ಈಗಾಗಲೇ ನಾನು ಜಿಪಿಎಸ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇನೆ ಎಂದು ಹೇಳಿದರು.

    ನಾನು ಬಳ್ಳಾರಿಗೆ ಬಂದು ಎರಡು ನಿಮಿಷ ಆಗಿದೆ. ಒಮ್ಮೆಲೆ ಎಲ್ಲ ಕೆಲಸ ಮಾಡಲು ಆಗುವುದಿಲ್ಲ. ಆದರೆ ಅಧಿಕಾರಿಗಳನ್ನು ಕೇಂದ್ರ ಸ್ಥಾನದಿಂದ ಕಾರ್ಯಕ್ಷೇತ್ರಕ್ಕೆ ಅಲ್ಲಾಡಿಸುವ ಕೆಲಸ ಮಾಡುತ್ತೇನೆ. ಜನಪ್ರತಿನಿಧಿಗಳು ಕೆಡಿಪಿ ಹಾಗೂ ತಾಪಂ ಸಭೆಗೆ ಹಾಗೂ ಇನ್ನಿತರ ಸಭೆಗಳಿಗೆ ಹಾಜರಾಗುವುದಿಲ್ಲವೆಂಬ ಗಂಭೀರ ಆರೋಪ ಇದೆ. ಇದನ್ನು ಸರಿ ಪಡಿಸುವ ಕೆಲಸ ಮಾಡುತ್ತೇನೆ ಎಂದರು.

    ಈ ವೇಳೆ ಎಸ್ ಆರ್ ಹಿರೇಮಠರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳಲ್ಲಿ ಹೇಳಿಕೆ ನೀಡುವ ಬದಲು, ಚುನಾವಣೆ ನಿಂತು ಆಯ್ಕೆಯಾಗಿ ಸದನದಲ್ಲಿ ಅಕ್ರಮಗಳ ಬಗ್ಗೆ ಪ್ರಸ್ತಾಪ ಮಾಡಲಿ. ಆಗ ಬೇಕಾದರೇ ತಪ್ಪು ಮಾಡಿದವರನ್ನು ಗಲ್ಲಿಗೆ ಹಾಕಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಕಟುಕನ ಕೈಗೆ ಕುರಿ ಕೊಟ್ಟಂತೆ ಆಗಿದೆ- ಡಿಕೆಶಿ ವಿರುದ್ಧ ಹಿರೇಮಠ್ ಕಿಡಿ

    ಸುಪ್ರೀಂ ತೀರ್ಪು ಬರುವ ಮುನ್ನವೇ ಯಡಿಯೂರಪ್ಪನವರಿಗೆ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿರುವುದು ಅಚ್ಚರಿಯ ಸಂಗತಿಯಾಗಿದೆ. ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿದೆ. ತೀರ್ಪಿನ ಬಗ್ಗೆ ನಮ್ಮ ಪಕ್ಷದ ಕೆಲ ಸಚಿವರು ಸಮಾಧಾನಪಟ್ಟಿರಬಹುದು. ಆದರೆ ನಾನು ಈ ರೀತಿ ತೀರ್ಪು ಬರುತ್ತದೆಂದು ನಿರೀಕ್ಷೆ ಸಹ ಮಾಡಿರಲಿಲ್ಲ. ಮಹದಾಯಿ ನ್ಯಾಯಾಧಿಕರಣಕ್ಕೆ ಮತ್ತೆ ಮೇಲ್ಮನವಿ ಸಲ್ಲಿಸುತ್ತೇವೆ. ರಾಜ್ಯದ ನೀರಾವರಿ ಸಚಿವನಾಗಿದ್ದುಕೊಂಡು ಒಂದು ಹನಿ ನೀರನ್ನೂ ನಾನು ಬಿಡೋದಿಲ್ಲ, ನಮಗೆ ಸೇರಬೇಕಾದ ನೀರು ನಮಗೆ ಸೇರಲೇಬೇಕು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏರ್ ಶೋ ಯಾವುದೇ ಕಾರಣಕ್ಕೂ ಸ್ಥಳಾಂತರಗೊಳ್ಳುವುದಿಲ್ಲ: ಕೇಂದ್ರ ಸಚಿವ ಅನಂತ್ ಕುಮಾರ್

    ಏರ್ ಶೋ ಯಾವುದೇ ಕಾರಣಕ್ಕೂ ಸ್ಥಳಾಂತರಗೊಳ್ಳುವುದಿಲ್ಲ: ಕೇಂದ್ರ ಸಚಿವ ಅನಂತ್ ಕುಮಾರ್

    ಬೆಂಗಳೂರು: ನಗರದಲ್ಲಿ ನಡೆಯುತ್ತಿದ್ದ ಏರ್ ಶೋ ಯಾವುದೇ ಕಾರಣಕ್ಕೂ ಲಕ್ನೋಗೆ ಸ್ಥಳಾಂತರಗೊಳ್ಳುವುದಿಲ್ಲವೆಂದು ರಾಸಾಯನಿಕ ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.

    ಏರ್ ಶೋ ಕುರಿತು ಉಂಟಾಗಿರುವ ಗೊಂದಲಕ್ಕೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ ಅವರು, 2019ರಲ್ಲಿ ಬೆಂಗಳೂರಿನಲ್ಲಿ ನಡೆಯುವ ಏರ್ ಶೋ ಲಕ್ನೋಗೆ ಸ್ಥಳಾಂತರಗೊಳ್ಳುವುದಿಲ್ಲವೆಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಈ ವಿಚಾರವಾಗಿ ನಾನು ಸಹ ಖುದ್ದು ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್‍ರವರೊಂದಿಗೆ ಮಾತನಾಡಿದ್ದೇನೆ. ಅವರು ಸಹ ಸ್ಥಳಾಂತರಗೊಳ್ಳುವ ಯಾವುದೇ ನಿರ್ಧಾವಿಲ್ಲವೆಂದು ಹೇಳಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಏರ್ ಶೋ ಲಕ್ನೋಗೆ ಶಿಫ್ಟ್ ಆಗಲ್ಲ: ಬಿಎಸ್‍ವೈ

    ಏರ್ ಶೋ ಸ್ಥಳಾಂತರ ಕುರಿತು ಎದ್ದಿರುವ ಊಹಾಪೋಹಗಳಿಗೆ ಜನರು ಕಿವಿಗೊಡಬಾರದು, ಕಳೆದ ಬಾರಿಯೂ ಸಹ ಇಂತಹುದೇ ಗೊಂದಲ ಏರ್ಪಟ್ಟಿತ್ತು. ಕೇಂದ್ರ ಸರ್ಕಾರವು ಸ್ಥಳಾಂತರ ಕುರಿತು ಎಲ್ಲಿಯೂ ಮಾಹಿತಿ ನೀಡಿಲ್ಲ. 2019ರಲ್ಲಿ ನಡೆಯುವ ಏರ್ ಶೋ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ.

    ಏರ್ ಶೋ ಲಕ್ನೋಗೆ ಸ್ಥಳಾಂತರವಾಗುತ್ತಿದೆ ಎನ್ನುವ ಸುದ್ದಿ ಪ್ರಕಟವಾದ ಬೆನ್ನಲ್ಲೆ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿತ್ತು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಧಾನಿ ಮೋದಿಗೆ ಪತ್ರ ಬರೆದು ಯಾವುದೇ ಕಾರಣಕ್ಕೂ ಲಕ್ನೋಗೆ ಸ್ಥಳಾಂತರ ಮಾಡಬಾರದು ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಏರ್ ಶೋ ಉಳಿಸಿಕೊಳ್ಳಲು ಅಖಾಡಕ್ಕೆ ಇಳಿದ ಎಚ್‍ಡಿಕೆ-ಮೋದಿಗೆ ಪತ್ರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

    ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

    ದಾವಣಗೆರೆ: ಸಚಿವರನ್ನು ಮೆಚ್ಚಿಸಲು ಕೃಷಿ ಅಧಿಕಾರಿಗಳು ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರು ತುಂಬಿಸಿ ಸಚಿವರನ್ನು ಮೆಚ್ಚಿಸಿದ ಘಟನೆ ಜಿಲ್ಲೆಯ ಈಚಘಟ್ಟ ಗ್ರಾಮದಲ್ಲಿ ನಡೆದಿದೆ.

    ಈಚಗಟ್ಟ ಗ್ರಾಮದಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ ರೈತರ ಜೊತೆ ಸಂವಾದವನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಗ್ರಾಮದ ಮಲ್ಲಿಕಾರ್ಜುನ್ ಎಂಬವರ ಜಮೀನಿನ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನೆರವೇರಿಸಿದರು. ಆದರೆ ಮಳೆಯೇ ಇಲ್ಲದ ಜಿಲ್ಲೆಯಲ್ಲಿ ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರನ್ನು ತುಂಬಿಸಿ ಸಚಿವರಿಂದ ಮೆಚ್ಚುಗೆ ಪಡಿಯಲು ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

     

    ಮಳೆ ನೀರಿನ ಮೂಲಕ ಕೃಷಿ ಹೊಂಡ ತುಂಬಿಸುವ ಯೋಜನೆಗೆ ಇದಾಗಿದೆ. ಆದರೆ ಈ ಯೋಜನೆಗೆ ಅಧಿಕಾರಿಗಳೇ ಎಳ್ಳುನೀರು ಬಿಟ್ಟಿದ್ದಾರೆ. ಇದರ ಮಾಹಿತಿ ಅರಿಯದ ಕೃಷಿ ಸಚಿವರು ತುಂಬಿದ್ದ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸಿ ಸಂವಾದ ಕಾರ್ಯಕ್ರಮಕ್ಕೆ ತೆರಳಿದರು. ಅಲ್ಲದೇ ಕೃಷಿ ಸಚಿವರು ಬರುತ್ತಾರೆಂದು ಕೃಷಿ ಹೊಂಡಕ್ಕೆ ಅಧಿಕಾರಿಗಳು ತಂತಿ ಬೇಲಿಯನ್ನು ಸಹ ನಿರ್ಮಿಸಿದ್ದರು.

    ನಂತರ ರೈತರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಕೃಷಿ ಭಾಗ್ಯ ಪರಿಕರ ವಿತರಿಸಿ, ಮಾತನಾಡಿದ ಕೃಷಿ ಸಚಿವರು, ಆತ್ಮಹತ್ಯೆ ಮಾಡಿಕೊಂಡು ಸತ್ತವರೆಲ್ಲಾ ಸಾಲಭಾದೆಯಿಂದ ಸಾವನ್ನಪ್ಪಿದ್ದಾರೆಂದು ಹೇಳಲು ಸಾಧ್ಯವಿಲ್ಲ. ಕೆಲವರು ತಮ್ಮ ಕೌಟುಂಬಿಕ ತೊಂದರೆ ಹಾಗೂ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇಂತಹ ಆತ್ಮಹತ್ಯೆ ವಿಚಾರಗಳನ್ನು ಮಾಧ್ಯಮಗಳು ವೈಭವಿಕರಿಸುವುದು ಸರಿಯಲ್ಲ. ನಮ್ಮ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು: ಸಚಿವ ಪುಟ್ಟರಂಗ ಶೆಟ್ಟಿ

    ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು: ಸಚಿವ ಪುಟ್ಟರಂಗ ಶೆಟ್ಟಿ

    ದಾವಣಗೆರೆ: ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗಶೆಟ್ಟಿ ನಗರದಲ್ಲಿ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರು ನನಗೆ ಪಕ್ಷದಲ್ಲಿ ಟಿಕೆಟ್ ಕೊಡಿಸಿ ಗೆಲ್ಲುವಂತೆ ಮಾಡಿದ್ದಾರೆ. ಅವರು ಉಪ್ಪಾರ ಜನಾಂಗಕ್ಕೆ ಹಲವು ಸೌಲಭ್ಯಗಳನ್ನು ಸಹ ಕಲ್ಪಿಸಿಕೊಟ್ಟಿರುವುದರಿಂದ ನನಗೆ ಯಾವಾಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹೇಳಿದರು.

    ಕೇವಲ ನಾನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹುದ್ದೆ ಸಾಕು ಎಂದುಕೊಂಡಿದ್ದ ನನಗೆ ಅವರು, ಸಚಿವರನ್ನಾಗಿ ಮಾಡಿದ್ದಾರೆ. ನಾನು ಸಚಿವನಾದ ಕೀರ್ತಿಯು ಕೇವಲ ಸಿದ್ದರಾಮಯ್ಯನವರಿಗೆ ಸಲ್ಲಿಸುತ್ತದೆ. ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದರೆ ನನಗೆ ಎಂದಿಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ತಿಳಿಸಿದರು.

    ಇಂದು ರಾಜ್ಯದಲ್ಲಿ ಹಿಂದುಳಿದ ಜನಾಂಗದವರು ಮುಂದುವರಿಯುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ನಮ್ಮ ನಾಯಕರಾದ ಸಿದ್ದರಾಮಯ್ಯನವರ ಅಭಿವೃದ್ಧಿ ಕಾರ್ಯಗಳೇ. ನಾನು ಹಿಂದುಳಿದ ಇಲಾಖೆಯಲ್ಲಿ ಸಲ್ಲಿಸುವ ಪ್ರತಿಯೊಂದು ಸೇವೆಯ ಕೀರ್ತಿಯು ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಹಾಡಿ ಹೊಗಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews