Tag: minister

  • ಅಪಘಾತ ನಡೆದರೂ ಕಾರು ನಿಲ್ಲಿಸದೆ ಹೋದ ಸಚಿವ ಅನಂತ್ ಕುಮಾರ್ ಹೆಗ್ಡೆ!

    ಅಪಘಾತ ನಡೆದರೂ ಕಾರು ನಿಲ್ಲಿಸದೆ ಹೋದ ಸಚಿವ ಅನಂತ್ ಕುಮಾರ್ ಹೆಗ್ಡೆ!

    ಚಿಕ್ಕಬಳ್ಳಾಪುರ: ಕೌಶಾಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಅವರ ಹಿಂಬಾಲಕರ ಕಾರಿನ ಡ್ರೈವರ್ ಸಡನ್ ಬ್ರೇಕ್ ಹಾಕಿದ್ರಿಂದ ಕಾರ್ ಬೈಕಿಗೆ ಡಿಕ್ಕಿ ಹೊಡೆದಿದೆ. ಆದ್ರೆ ಅಪಘಾತವಾದರೂ ಕಾರು ನಿಲ್ಲಿಸದೆ ಸಚಿವರು ಸ್ಥಳದಿಂದ ತೆರಳುವ ಮೂಲಕ ಮಾನವೀಯತೆಯನ್ನು ಮರೆತಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದ ಸಾವಕನಹಳ್ಳಿ ಗೇಟ್ ಬಳಿ ಭಾನುವಾರ ಘಟನೆ ಈ ನಡೆದಿದೆ. ಅಪಘಾತದಿಂದಾಗಿ ಸಚಿವರ ಕಾರ್ ನ ಹಿಂದಿನಿಂದ ಬರುತ್ತಿದ್ದ ವಾಹನಗಳಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಸಚಿವ ಅನಂತ್‍ಕುಮಾರ್ ಹೆಗ್ಡೆ ಅವರು ತುಮಕೂರಿನಿಂದ ದೊಡ್ಡಬಳ್ಳಾಪುರ ಮಾರ್ಗವಾಗಿ ದೇವನಹಳ್ಳಿ ಏರ್ ಪೋರ್ಟ್ ಗೆ ತೆರಳುತ್ತಿದ್ದರು. ಈ ವೇಳೆ ಸಚಿವರ ಕಾರಿನ ಮುಂಭಾಗದ ಪೊಲೀಸ್ ವಾಹನಕ್ಕೆ ಕೋತಿ ಅಡ್ಡ ಬಂದಿದೆ ಎನ್ನಲಾಗಿದ್ದು, ಕಾರು ಚಾಲಕ ಸಡನ್ ಬ್ರೇಕ್ ಹಾಕಿದ್ದಾನೆ. ಹೀಗಾಗಿ ಹೆಗ್ಡೆ ಅವರ ಕಾರಿನ ಹಿಂದೆ ಬಂದ ಪೊಲೀಸ್ ಜೀಪ್, ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.

    ಅಪಘಾತದಲ್ಲಿ ಬೈಕ್ ಸವಾರ ಹಾಗೂ ಇನ್ನೊವಾ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತವಾದರೂ ಕಾರು ನಿಲ್ಲಿಸದೆ ಅನಂತ್ ಕುಮಾರ್ ಹೆಗಡೆ ಸ್ಥಳದಿಂದ ಹೊರಟು ಹೋಗಿದ್ದಾರೆ ಅಂತ ಅಪಘಾತಕ್ಕೊಳಗಾದವರು ದೂರಿದ್ದಾರೆ. ಸಚಿವರು ಮಾನವೀಯತೆ ಇಲ್ಲದೆ ನಡೆದುಕೊಂಡ ಕ್ರಮದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಸಣ್ಣಪುಟ್ಟ ಗಾಯಗೊಂಡ ಮೂವರನ್ನು ಬೇರೆ ವಾಹನದಲ್ಲಿ ಸ್ಥಳೀಯರು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತದಲ್ಲಿ ಇನ್ನೋವಾ ಕಾರು ದ್ವಿಚಕ್ರ ವಾಹನವೂ ಕೂಡ ಜಖಂ ಆಗಿದ್ದು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

     

  • ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಲು `ಕಾವಿ’ಯಿಂದ ಮಾತ್ರ ಸಾಧ್ಯ: ಸಚಿವ ಅನಂತ್ ಕುಮಾರ್ ಹೆಗ್ಡೆ

    ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸಲು `ಕಾವಿ’ಯಿಂದ ಮಾತ್ರ ಸಾಧ್ಯ: ಸಚಿವ ಅನಂತ್ ಕುಮಾರ್ ಹೆಗ್ಡೆ

    ದಾವಣಗೆರೆ: ನಾನು ಜೀವನದಲ್ಲಿ ಗೌರವ ಕೊಡುವುದು ಕಾವಿಗೆ ಮಾತ್ರ. ಅದಕ್ಕೆ ಸದಾ ತಲೆಬಾಗುತ್ತೇನೆ. ಕಾವಿಗೆ ರಾಜಕೀಯ ವ್ಯವಸ್ಥೆಯನ್ನು ಸರಿಪಡಿಸುವ ಸಾಮರ್ಥ್ಯವಿದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ನೀಡಿದ್ರು.

    ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ತರಳುಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಮಾಜದಲ್ಲಿ ಎಲ್ಲದಕ್ಕೂ ಮಿಗಿಲಾಗಿ ನಾನು ಕಾವಿತೊಟ್ಟ ಸ್ವಾಮೀಜಿಗಳಿಗೆ ಸದಾ ತಲೆಬಾಗುವೆ. ರಾಜಕೀಯ ಇತಿಹಾಸದಲ್ಲಿ ಸರಿದಾರಿಗೆ ತರುವ ಶಕ್ತಿ ಇರುವುದು ಕೇಸರಿ ಬಟ್ಟೆಗೆ ಮಾತ್ರ. ಇತಿಹಾಸದ ಮಹಾಪುರುಷರು ರಾಜ ಮಹಾರಾಜರುಗಳಲ್ಲ. ಇತಿಹಾಸ ಹುಟ್ಟಿದ್ದು ಸಂತರಿಂದ ಕಾವಿಧಾರಿಗಳಿಂದ ಎಂದರು.

    ಬಸವಣ್ಣ ಎಲ್ಲರನ್ನೂ ಒಂದು ಮಾಡಲು ಮುಂದಾಗಿದ್ದರು. ಜಾತಿ ವ್ಯವಸ್ಥೆಯನ್ನು ಸರಿದಾರಿಗೆ ತರಲು ಯತ್ನಿಸಿದ್ದರು. ಅಲ್ಲದೇ ಜಾತಿ ವ್ಯವಸ್ಥೆ ನಿರ್ಮೂಲನೆ ಆಗಬೇಕು ಎಂದು ಬಸವಣ್ಣ ಹೇಳಿದ್ದರು. ಆದ್ರೆ ಇದೀಗ ಅದೇ ಒಂದು ಜಾತಿಯಾಗುತ್ತಿದೆ. ಅವರು ಹೇಳಿದ್ದನ್ನು ನಾವು ಸರಿಯಾಗಿ ಗ್ರಹಿಸಿದ್ದೇವೆಯೇ ಎಂದು ಅವಲೋಕನ ಮಾಡಿಕೊಳ್ಳಬೇಕಿದೆ. ಬಸವಣ್ಣನವರು ಹೇಳಿದ್ದು ಒಂದು ಆದರೆ ನಡೆಯುತ್ತಿರುವುದು ಬೇರೆ ಎಂದು ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಟಾಂಗ್ ನೀಡಿದ್ರು.

    ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ ಎಂದು ತಿಳಿದ ದಲಿತ ಸಂಘಟನೆಗಳು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ರು.

  • ಶಾಸಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ – ಕಾರ್ಕಳದಲ್ಲೇ ರಮಾನಾಥ ರೈ ವಾಗ್ದಾಳಿ

    ಶಾಸಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ – ಕಾರ್ಕಳದಲ್ಲೇ ರಮಾನಾಥ ರೈ ವಾಗ್ದಾಳಿ

    ಉಡುಪಿ: ಶಾಸಕ, ವಿಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಒಬ್ಬ ಉಗ್ರಗಾಮಿ ಎಂದು ಸಚಿವ ರಮಾನಾಥ ರೈ ವಿವಾದತ್ಮಾಕ ಹೇಳಿಕೆ ನೀಡಿದ್ದಾರೆ.

    ಜಿಲ್ಲೆಯ ಕಾರ್ಕಳದ ಅತ್ತೂರು ಚರ್ಚ್‍ಗೆ ಬಂದಿದ್ದ ಸಚಿವ ರಮಾನಾಥ ರೈ ಅವರು, ಶಾಸಕ ಸುನೀಲ್ ಒಬ್ಬ ರ್ಯಾಡಿಕಲ್ ವ್ಯಕ್ತಿತ್ವದ ಶಾಸಕ ಎಂದು ಸುನೀಲ್ ಕುಮಾರ್ ಅವರ ಸ್ವ-ಕ್ಷೇತ್ರದಲ್ಲೇ ವಾಗ್ದಾಳಿ ನಡೆಸಿದರು.

    ನನ್ನ ಕ್ಷೇತ್ರಕ್ಕೆ ಬಂದು ಸುನೀಲ್ ಕುಮಾರ್ ವೃಥಾರೋಪ ಮಾಡಿದ್ದಾರೆ. ಎಷ್ಟೇ ಮಾತನಾಡಿದರೂ ನನ್ನನ್ನು ಸುನೀಲ್ ಕುಮಾರ್ ಗೆ ಏನೂ ಮಾಡಲು ಆಗಲ್ಲ. ಅವನ ಮಾತುಗಳಲ್ಲಿ ಎಲ್ಲವೂ ಸುಳ್ಳೇ ಇತ್ತು. ಸತ್ಯ ಕಾಣುವುದಿಲ್ಲ. ಸುನೀಲ್ ಗೆ ಕನಿಷ್ಠ ಜ್ಞಾನವೂ ಇಲ್ಲ. ಜನಪ್ರತಿನಿಧಿಯಾಗಿ ಹೇಗೆ ವರ್ತಿಸಬೇಕು ಎಂದು ಅವನಿಗೆ ಗೊತ್ತೇ ಇಲ್ಲ ಎಂದು ಏಕವಚನದಲ್ಲಿ ಬೈಗುಳಗಳ ಸುರಿಮಳೆಗೈದರು.

    ದೇವರೊಬ್ಬನೇ ಎಂದು ನಾನು ತಿಳಿದುಕೊಂಡಿದ್ದೇನೆ. ನನಗೆ ಬೇಧಭಾವ ಇಲ್ಲ. ದೇವರ ಮೇಲೆ ನಂಬಿಕೆ, ಗೌರವ ಇದ್ದವರು ಇಂತಹ ಸಣ್ಣತನದ ಮಾತುಗಳನ್ನು ಹೇಳಬಾರದು. ನನಗೆ ನನ್ನ ತಂದೆ ರಾಮೇಶ್ವರದಲ್ಲಿ ರಮಾನಾಥ ಎಂದು ಹೆಸರಿಟ್ಟಿದ್ದಾರೆ. ನಾನೇನೂ ಹಿಂದೂ ವಿರೋಧಿಯಲ್ಲ. ಕೋಮು ಸೂಕ್ಷ್ಮ ಪ್ರದೇಶವಾದ ಬಂಟ್ವಾಳದಲ್ಲಿ ಪ್ರಚೋದನಾತ್ಮಕ ಭಾಷಣ ಸರಿಯಲ್ಲ ಎಂದು ಹೇಳಿದರು.

    ಸುನೀಲ್ ಕುಮಾರ್ ಮನಸ್ಸಲ್ಲಿ ಬರೀ ಮತೀಯವಾದ ತುಂಬಿಕೊಂಡಿದೆ. ಮನಸ್ಸಲ್ಲಿ ಇದ್ದದ್ದು ಮಾತಿನ ಮೂಲಕ ಬಾಯಲ್ಲಿ ಬಂದಿದೆ. ಈ ಬಾರಿ ಚುನಾವಣೆಯಲ್ಲಿ ನನ್ನ ಕ್ಷೇತ್ರದ ಜನ ಇದಕ್ಕೆ ಸರಿಯಾಗಿಯೇ ಉತ್ತರ ಕೊಡುತ್ತಾರೆ ಎಂದು ಹೇಳಿದರು. ಅಲ್ಲದೇ ಹುಲಿ ಯೋಜನೆಯ ಭಯ ಹುಟ್ಟಿಸಿ ಸುನೀಲ್ ಕಾರ್ಕಳದಲ್ಲಿ ಶಾಸಕರಾದರು. ಜೋಳಿಗೆ ಹಿಡಿದು ಬಂದಿದ್ದ ಸುನೀಲ್ ಇಂದು ಎಷ್ಟು ಸಂಪತ್ತು ಮಾಡಿದ್ದಾರೆ ಎಂದು ಗೊತ್ತಿದೆ ಎಂದು ಮಾತಿನ ಚಾಟಿ ಬೀಸಿದರು.

    ನನ್ನ ಜಾತ್ಯಾತೀತ ನಿಲುವನ್ನು ಸುನೀಲ್ ಕುಮಾರ್ ಪ್ರಶ್ನಿಸಬಾರದು. ಆರು ಬಾರಿ ಒಬ್ಬ ಒಂದು ಕ್ಷೇತ್ರದಿಂದ ಗೆದ್ದಿದ್ದಾನೆ ಎಂದರೆ ಆ ವ್ಯಕ್ತಿಯನ್ನು ಜನ ಮತ್ತೆ ಮತ್ತೆ ಯಾಕೆ ಆರಿಸುತ್ತಾರೆ ಎಂದು ತಿಳಿದುಕೊಳ್ಳುವ ಸಾಮಾನ್ಯ ಪರಿಜ್ಞಾನವೂ ಶಾಸಕರಿಗೆ ಇಲ್ಲ ಎಂದರು.

  • ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮಿಷನ್ ಪಡೆದ ಆರೋಪ- ಎಚ್‍ಡಿಡಿಗೆ ಸಚಿವ ಮಂಜು ತಿರುಗೇಟು

    ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮಿಷನ್ ಪಡೆದ ಆರೋಪ- ಎಚ್‍ಡಿಡಿಗೆ ಸಚಿವ ಮಂಜು ತಿರುಗೇಟು

    ಹಾಸನ: ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮೀಷನ್ ಪಡೆದಿರುವುದಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಆರೋಪಕ್ಕೆ ಸಚಿವ ಎ ಮಂಜು ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ತಕಾಭಿಷೇಕ ಕಾಮಗಾರಿಯಲ್ಲಿ ನಾನು ಕಮೀಷನ್ ಪಡೆದಿರುವುದಾಗಿ ಮಾಜಿ ಪ್ರಧಾನಿಯವರು ಹೇಳಿದ್ದಾರೆ. ಮಾಜಿ ಪ್ರಧಾನಿ ಆರೋಪ ನನಗೆ ಅತೀವ ನೋವು ತಂದಿದೆ. 2006 ಮಸ್ತಕಾಭಿಷೇಕ ಕಾಮಗಾರಿ ದಾಖಲೆಯನ್ನು ಅವರು ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ ಮಂಜು, ಈ ಕುರಿತು ನಾನು ಬೆಂಗಳೂರಿನಲ್ಲೇ ಸುದ್ದಿಗೋಷ್ಠಿ ನಡೆಸಿ ಕಾಮಗಾರಿಯ ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಅಂತ ಸಚಿವರು ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ನಾನು ನಡೆದು ಬಂದ ದಾರಿ, ಹಿನ್ನೆಲೆ ಎಲ್ಲಾ ಹೇಳುವೆ. ಚುನಾವಣೆ ಸಂದರ್ಭದಲ್ಲಿ ಸಣ್ಣ ವಿಷಯಕ್ಕೆ ಖ್ಯಾತೆ ತೆಗೆಯುತ್ತಿದ್ದಾರೆ. ನಾನು ರಾಜಕೀಯದಲ್ಲಿದ್ದಾಗ ಕುಮಾರಸ್ವಾಮಿ ರಾಜಕೀಯದಲ್ಲಿ ಇರಲಿಲ್ಲ. ಅನಾಗರಿಕನಾಗಿ ನಾನು ಮಾತನಾಡಿಲ್ಲ, ಅವರಂತೆ ಛಿ, ಥೂ ಅಂತ ಮಾತನಾಡಿಲ್ಲ. ಇದು ದೇಶಕ್ಕೆ, ಮತದಾರರಿಗೆ ನಾಚಿಗೇಡಿನ ವಿಷಯವಾಗಿದೆ. ದೇವೇಗೌಡರು ಬಾರದೇ ಹೋದ್ರೆ ಮಸ್ತಕಾಭಿಷೇಕ ನಿಂತು ಹೋಗುತ್ತಾ? ಇಂಥ ಮಾತಾಡುವುದನ್ನು ನಿಲ್ಲಿಸಬೇಕು. ಇಲ್ಲವಾದ್ರೆ ನನಗೂ ಮಾತನಾಡುವುದು ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

    ಡಿಸಿ ವರ್ಗ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಅಧಿಕಾರಿ ಸರಕಾರದ ಸೇವಕರು, ಹುದ್ದೆ ಮುಖ್ಯವಲ್ಲ, ಕಾರ್ಯ ನಿರ್ವಹಣೆ ಮುಖ್ಯ ಅಂತ ಅವರು ತಿಳಿಸಿದ್ರು.

  • ಸಚಿವ ಜಯಚಂದ್ರರನ್ನು ದಿಢೀರ್ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

    ಸಚಿವ ಜಯಚಂದ್ರರನ್ನು ದಿಢೀರ್ ಭೇಟಿ ಮಾಡಿದ ಹಿರಿಯ ನಟಿ ಲೀಲಾವತಿ

    ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರನ್ನು ಹಿರಿಯ ನಟಿ ಲೀಲಾವತಿ ಮತ್ತು ವಿನೋದ್ ರಾಜ್ ಕುಮಾರ್ ಭೇಟಿ ಮಾಡಿದ್ದಾರೆ.

    ವಿಧಾನಸೌಧದ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿದ ತಾಯಿ-ಮಗ, ನೆಲಮಂಗಲ ತಾಲೂಕು ಸೋಲದೇವನಹಳ್ಳಿಯನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆದಿದೆ. ಅದು ಕಂದಾಯ ಭೂಮಿ ಎಂದು ಕಾನೂನು ತಿದ್ದುಪಡಿ ಮಾಡಬೇಕಾಗಿದೆ. ಜತೆಗೆ ಬ್ಯಾರೇಜ್ ನಿರ್ಮಾಣಕ್ಕೂ ಸಚಿವರಲ್ಲಿ ಮನವಿ ಸಲ್ಲಿಸಿದರು.

    ಇದಕ್ಕೆ ಜನವರಿ 27 ರಂದು ಸ್ಥಳ ಪರಿಶೀಲನೆ ಮಾಡಿ ವಿವಾದ ಬಗೆ ಹರಿಸುವುದಾಗಿ ಸಚಿವ ಜಯಚಂದ್ರ ಭರವಸೆ ನೀಡಿದ್ದಾರೆ ಅಂತ ಭೇಟಿ ಬಳಿಕ ಸುದ್ದಿಗಾರರಿಗೆ ನಟಿ ಲೀಲಾವತಿ ತಿಳಿಸಿದರು.

  • ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್

    ಬಂಟ್ವಾಳದಲ್ಲಿ ರಮಾನಾಥ್ ರೈ-ರಾಜೇಶ್ ನಡುವೆ ಸ್ಪರ್ಧೆ ಅಲ್ಲ, ಅಲ್ಲಾ-ರಾಮನ ನಡುವೆ ಸಮರ: ಶಾಸಕ ಸುನಿಲ್ ಕುಮಾರ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಅರಣ್ಯ ಸಚಿವ ರಮಾನಾಥ ರೈ ಹಾಗೂ ರಾಜೇಶ್ ನಾಯ್ಕ್ ನಡುವೆ ಸ್ಫರ್ಧೆ ಅಲ್ಲ. ಈ ಚುನಾವಣೆ ಅಲ್ಲಾ ಮತ್ತು ರಾಮನ ನಡುವೆ ನಡೆಯುವ ಸ್ಪರ್ಧೆ ಎಂದು ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸೋಮವಾರ ಕಲ್ಲಡ್ಕದಲ್ಲಿ ನಡೆದ ಬಿಜೆಪಿ ಗ್ರಾಮ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿರೋವವರು ಹೇಳ್ತಾರೆ ನಾನು ಅಲ್ಲಾಹುವಿನ ಕೃಪೆಯಿಂದ ಗೆದ್ದೆ ಅಂತ. ಹೀಗಾಗಿ ನರೆದಿರುವ ಬಂಧುಗಳಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ. ಮುಂಬರುವ ಚುನಾವಣೆ ರಾಜೇಶ್ ನಾಯ್ಕ್ ಮತ್ತು ರಮಾನಾಥ ರೈ ನಡುವೆ ಅಲ್ಲ. ಬದಲಾಗಿ ಅಲ್ಲಾಹು ಮತ್ತು ರಾಮನ ನಡುವೆ ನಡೆಯುವ ಚುನಾವಣೆಯಾಗಿದೆ. ಹೀಗಾಗಿ ಮತ್ತೆ ಮತ್ತೆ ಅಲ್ಲಾಹುವನ್ನ್ನು ಗೆಲ್ಲಿಸ್ತೀರೋ? ಅಥವಾ ರಾಮನನ್ನು ಪ್ರೀತಿಸುವಂತಹ ವ್ಯಕ್ತಿಯನ್ನು ಗೆಲ್ಲಿಸ್ತಿರೋ? ಎಂಬುದನ್ನು ಬಂಟ್ವಾಳದ ಜನತೆ ತೀರ್ಮಾನಿಸಬೇಕು ಅಂತ ರಮಾನಾಥ ರೈ ವಿರುದ್ಧ ಶಾಸಕರು ಪರೋಕ್ಷವಾಗಿ ಟಾಂಗ್ ನೀಡಿದ್ರು.

    ಒಟ್ಟಿನಲ್ಲಿ ಇದು ಬಿಜೆಪಿ-ಕಾಂಗ್ರೆಸ್ ಚುನಾವಣೆಯ ವಿಷಯ ಅಲ್ಲ ಇದು. 6 ಬಾರಿ ಗೆದ್ದಿರುವ ವ್ಯಕ್ತಿ ಹಿಂದೂಗಳ ಮತದಿಂದಲ್ಲ ಅಂತ ಹೇಳುತ್ತಾರಾದ್ರೆ, ಇದು ನಮಗೆ ಮರ್ಯಾದೆಯ ಪ್ರಶ್ನೆಯಾಗುತ್ತದೆ. ಇದು ಬಂಟ್ವಾಳದ ಪ್ರಶ್ನೆಯಲ್ಲ. ಬದಲಾಗಿ ಯಾರನ್ನು ಗೆಲ್ಲಿಸಬೇಕೆಂಬುದು ಇಡೀ ಜಿಲ್ಲೆಯ ಪ್ರತಿಷ್ಠೆಯ ಪ್ರಶ್ನೆಯಾಗಿದೆ ಅಂತ ಹೇಳಿದ್ರು.

    ಚುನಾವಣೆ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನನ್ನ ಹೆಸರಿನಲ್ಲಿ ರಾಮ ಇದ್ದಾನೆ. ನಾನು ಹಿಂದೂ ಅಂತ. ಹೌದು. ನಿಮ್ಮ ಹೆಸರಿನಲ್ಲಿ ರಾಮ ಇರಬಹುದು. ಆದ್ರೆ ನಿಮ್ಮ ಮನಸ್ಸು, ಭಾಷೆಯಲ್ಲಿ ರಾವಣ ಇದ್ದಾನೆ. ನಿಮ್ಮ ನಡವಳಿಕೆಯಲ್ಲಿ ಟಿಪ್ಪು ಇದ್ದಾನೆ ಎಂಬುದನ್ನು ನಾವಿಂದು ನೆನಪಿಟ್ಟುಕೊಳ್ಳಬೇಕಾಗಿದೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಚುನಾವಣೆಯನ್ನು ಬಂಟ್ವಾಳದ ಜನ ಪ್ರತಿಷ್ಠೆಯಾಗಿ ತೆಗೆದುಕೊಳ್ಳೋಣ ಅಂತ ಕಿವಿ ಮಾತು ಹೇಳಿದ್ರು.

    ರೈ ಹೇಳಿದ್ದೇನು?: ಮಂಗಳೂರಿನ ಪುರಭವನದಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ಇವತ್ತು ಅಲ್ಲಾಹುನ ಕೃಪೆಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಇದಕ್ಕೆ ಮುಸ್ಲಿಂ ಸಮುದಾಯದ ಜಾತ್ಯಾತೀತ ನಿಲುವು ಕಾರಣವಾಗಿದೆ. ಜಾತಿಯವನೊಬ್ಬ ನಿಂತಿದ್ದಾನೆ ಅಂತ ಹೇಳಿ 10-15 ಸಾವಿರ ಮತ ಹಾಕ್ತಿದ್ರೆ ರಮಾನಾಥ ರೈ ಯಾವಗ್ಲೋ ಮಾಜಿಯಾಗ್ತಿದ್ದ. ಬ್ಯಾರಿ ಭಾಷೆ ಮಾತಾನಾಡುವಂತಹ ಜನರ ಒಂದು ಜಾತ್ಯಾತೀತ ನಿಲುವನ್ನು ಎಲ್ಲರೂ ಮೆಚ್ಚಬೇಕಾಗಿದೆ. ಜಾತಿ, ಧರ್ಮದ ಪರಿಧಿಯನ್ನು ಮೀರಿ ರಮಾನಾಥ ರೈಯನ್ನು ವಿಧಾನಸಭೆಗೆ ಆಯ್ಕೆ ಮಾಡುವಂತಹ ಕೆಲಸವನ್ನು ತಾವು ಮಾಡಿದ್ದೀರಿ. ಈ ನಿಮ್ಮ ಋಣವನ್ನು ನಾನು ಜನ್ಮ ಜನ್ಮಾಂತರ ಕಾಲಕ್ಕೂ ಮರೆಯಲು ಸಾಧ್ಯವಿಲ್ಲ ಅಂತ ಅವರು ಹೇಳಿದ್ದರು.

    https://www.youtube.com/watch?v=0feDGe5–0Y

    https://www.youtube.com/watch?v=PJ8h1JAxwDk

     

  • ಪಿಎಸ್‍ಐಗೆ ಧಮ್ಕಿ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸಚಿವರ ಪಿಎ!

    ಪಿಎಸ್‍ಐಗೆ ಧಮ್ಕಿ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಸಚಿವರ ಪಿಎ!

    ಬಳ್ಳಾರಿ: ಪಿಎಸ್‍ಐ ಒಬ್ಬರಿಗೆ ಮುಜರಾಯಿ ಸಚಿವರ ಪಿಎ ಅವಾಚ್ಯ ಶಬ್ಧಗಳಿಂದ ನಿಂದಿಸಿ ಧಮ್ಕಿ ಹಾಕಿದ ಘಟನೆ ನಡೆದಿದೆ. ಮುಜರಾಯಿ ಖಾತೆ ಸಚಿವ ರುದ್ರಪ್ಪ ಲಮಾಣಿಯವರ ಪಿಎ ಸಾಲಿಮಠ, ಕೊಟ್ಟೂರಿನ ಪಿಎಸ್‍ಐ ತಿಮ್ಮಣ್ಣ ಎಂಬವರಿಗೆ ಧಮ್ಕಿ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

    ಕೂಡ್ಲಿಗಿ ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿ ನಡೆದ ಕೊಟ್ಟೂರಿನ ಗುರುಬಸವೇಶ್ವರ ರಥ ಲೋಕಾರ್ಪಣೆ ಸಮಾರಂಭದಲ್ಲಿ ವೇದಿಕೆ ಹತ್ತುವ ವೇಳೆಯಲ್ಲಿ ಸಚಿವರ ಪಿಎ ಪೊಲೀಸ್ ಅಧಿಕಾರಿಗೆ ನಿಂದನೆ ಮಾಡಿದ್ದಾರೆ. ವೇದಿಕೆಯ ಮೇಲೆ ಸಾಕಷ್ಟು ಅತಿಥಿಗಳಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸಚಿವರ ಪಿಎ ಎಂದು ತಿಳಿಯದೇ ವೇದಿಕೆ ಹತ್ತಲು ಬಿಡಲಿಲ್ಲ. ಈ ವೇಳೆ ಸಚಿವರ ಪಿಎ ಪಿಎಸ್‍ಐ ಗೆ ನಿಂದಿಸಿದರು. ನಂತರ ವೇದಿಕೆ ಬಳಿಯಿದ್ದ ಜನರು ಇಬ್ಬರನ್ನೂ ಸಮಾಧಾನಪಡಿಸಿ ಪಿಎಯನ್ನು ವೇದಿಕೆ ಹತ್ತಿಸಿದ ನಂತರ ಪರಿಸ್ಥಿತಿ ತಿಳಿಗೊಂಡಿತು.

    ಕಳೆದ ವರ್ಷ ರಥೋತ್ಸವದ ವೇಳೆ ಮಗುಚಿ ಬಿದ್ದಿದ್ದ ಕೊಟ್ಟೂರಿನ ಶ್ರೀ ಗುರು ಬಸವೇಶ್ವರ ರಥವನ್ನು ನೂತನವಾಗಿ ರಚಿಸಲಾಗಿದೆ. 2 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಈ ರಥವನ್ನು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹಾಗೂ ಉಜ್ಜಯಿನಿ ಶ್ರೀ ಸಿದ್ಧಲಿಂಗ ಶಿವಾರ್ಚಾರ್ಯ ಮಹಾಸ್ವಾಮಿಗಳು ಲೋಕಾರ್ಪಣೆ ಮಾಡಿದ್ದಾರೆ.

    ಕೊಟ್ಟೂರಿನಲ್ಲಿ ನೂತನವಾಗಿ ನಿರ್ಮಿಸಿದ ರಥ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟನೆ ಮಾಡಿದ ಗಣ್ಯರು, ವರ್ಷದೊಳಗೆ ನೂತನ ರಥ ನಿರ್ಮಾಣಕ್ಕೆ ನೆರವು ನೀಡಿದ ಸರ್ಕಾರ ಹಾಗೂ ಭಕ್ತರನ್ನು ಸ್ಮರಿಸಿದರು.

       

  • ಬುದ್ಧಿಜೀವಿಗಳು ಬರೆದ ಸಾಹಿತ್ಯಕ್ಕೆ ಅರ್ಥ, ತಲೆಬುಡ ಇರಲ್ಲ: ಅನಂತ್ ಕುಮಾರ್ ಹೆಗ್ಡೆ ಕಿಡಿ

    ಬುದ್ಧಿಜೀವಿಗಳು ಬರೆದ ಸಾಹಿತ್ಯಕ್ಕೆ ಅರ್ಥ, ತಲೆಬುಡ ಇರಲ್ಲ: ಅನಂತ್ ಕುಮಾರ್ ಹೆಗ್ಡೆ ಕಿಡಿ

    ಬೆಳಗಾವಿ: ತನ್ನ ವಿವಾದಾತ್ಮಕ ಹೇಳಿಕೆಯಿಂದಲೇ ಸದಾ ಸುದ್ದಿಯಲ್ಲಿರೋ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಮತ್ತೆ ತನ್ನ ಹೇಳಿಕೆಯಿಂದಲೇ ಮತ್ತೆ ಸುದ್ದಿಯಾಗಿದ್ದಾರೆ.

    ನಗರದಲ್ಲಿ ಮಂಗಳವಾರ ಕೆ.ಎಲ್.ಇ ಜೀರಗಿ ಸಭಾಭವನದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಕುರಿತ ರಾಷ್ಟ್ರೀಯ ಯುವ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬುದ್ಧಿಜೀವಿಗಳು ಹಾಗೂ ಸಾಹಿತಿಗಳ ವಿರುದ್ಧ ಹರಿಹಾಯ್ದಿದ್ದಾರೆ.

    ಸೋ ಕಾಲ್ಡ್ ಬುದ್ಧಿ ಜೀವಿಗಳು ಬರಿದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯ, ಅರ್ಥವೂ ಇರೋದಿಲ್ಲಾ, ತಲೆ, ಬುಡವೂ ಇರೋದಿಲ್ಲ. ಅವರಿಗೆ ಯಾವುದು ಇಂದು ಸರ್ಕಾರಿ ಸೈಟ್ ಬೇಕಾಗಿರುತ್ತೆ, ಅದಕ್ಕೆ ವಿಚಾರವಾದಿಗಳ ಪಟ್ಟ ಕಟ್ಟಿಕೊಂಡಿರುತ್ತಾರೆ ಅಂತ ಹೇಳಿದ್ದಾರೆ.

    ನಾವು ಮಾನವರಾಗಬೇಕು ಎಂದು ಸ್ಪಷ್ಟನೆ ಇಲ್ಲದವರು ಏನಾಗಬೇಕು ಎಂದು ಕೇಳಿದಾಗ ಮಾನವರಾಗಬೇಕು ಅಂತಾರೆ. ಹಾಗಾದ್ರೆ ನಾವು ದನಾನಾ ಎಂದು ಪ್ರಶ್ನಿಸಿದ ಅವರು, ನಾವು ಪ್ರಾಣಿಗಳ ತರಾ ಇದ್ದಿವಾ? ನಾವು ಹುಟ್ಟಿದ್ದೆ ಮಾನವರಾಗಿ. ಇನ್ನು ಆಗಬೇಕಾಗಿರುವುದು ದೇವರಾಗಿ. ಮನುಷ್ಯ ದೇವರಾಗಲು ಪ್ರಯತ್ನ ಮಾಡಬೇಕು. ಆದ್ರೆ ಕಲಿತಿರುವ ಸೋ ಕಾಲ್ಡ್ ಬುದ್ಧಿ ಜೀವಿಗಳು ಹೇಳತಾರೆ ನಾವು ಮಾನವರಾಗಬೇಕು. ಅವರ ದೃಷ್ಟಿಯಲ್ಲಿ ನಾವು ಹೆಂಗೆ ಕಂಡಿದ್ದೇವೆ ಗೊತ್ತಿಲ್ಲ. ಅವರಿಗೆ ದೃಷ್ಟಿ ದೋಷ ಆಗಿರಬೇಕು ಎಂದು ಅವರು ಹೇಳಿದ್ರು.

  • ಕರ್ನಾಟಕವನ್ನು ನೋಡಿ ಮೋದಿಗೆ ಗಾಬರಿ: ಡಿಕೆಶಿ ‘ಪವರ್’ ಫುಲ್ ಪಂಚ್

    ಕರ್ನಾಟಕವನ್ನು ನೋಡಿ ಮೋದಿಗೆ ಗಾಬರಿ: ಡಿಕೆಶಿ ‘ಪವರ್’ ಫುಲ್ ಪಂಚ್

    ಚಿತ್ರದುರ್ಗ: ತುಮಕೂರಿನ ಪಾವಗಡ ಸೋಲಾರ್ ಪಾರ್ಕ್ ನೋಡಿ ಪ್ರಧಾನಿ ಮೋದಿ ಗಾಬರಿಯಾಗಿದ್ದಾರೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

    ಇಂದು ಜಿಲ್ಲೆಯ ಹೊಸದುರ್ಗದಲ್ಲಿ ವಿದ್ಯುತ್ ಉಪಕೇಂದ್ರಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದ ಅತೀ ದೊಡ್ಡ ಸೋಲಾರ್ ಪಾರ್ಕ್ ಪಾವಗಡದಲ್ಲಿ ನಿರ್ಮಾಣವಾಗುತ್ತಿದೆ. ಜಮೀನು ಖರೀದಿ ಮಾಡದೇ, ಭೂ ಸ್ವಾಧೀನವೂ ಇಲ್ಲದೆ, 12 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣವಾಗುತ್ತಿದೆ. ಇದನ್ನು ಕಂಡು ಪ್ರಧಾನಿ ಮೋದಿ ಅವರೇ ಗಾಬರಿಯಾಗಿದ್ದಾರೆ ಎಂದು ಹೇಳಿದರು.

    ಸರ್ಕಾರ ಆರಂಭದಲ್ಲಿ ತಮಗೇ ಸಚಿವ ಸ್ಥಾನ ನೀಡಿರಲಿಲ್ಲ. ನಾನು ಕಳಂಕಿತ ಎಂದು ದೂರು ಕೊಟ್ಟ ಕಾರಣಕ್ಕೆ ಆರಂಭದಲ್ಲಿ ಸಚಿವ ಸ್ಥಾನ ಸಿಗಲಿಲ್ಲ. ನಂತರದಲ್ಲಿ ಸತ್ಯಾಂಶ ತಿಳಿದು ಇಂಧನ ಇಲಾಖೆ ಜವಾಬ್ದಾರಿ ನೀಡಿದರು. ಅನೇಕರು ಶೋಭಕ್ಕ ಉಗಿಸಿಕೊಂಡಿದ್ದು ಆಯ್ತು. ಇನ್ನೂ ನೀನು ಏಕೆ ಇಂಧನ ಇಲಾಖೆ ತೆಗೆದುಕೊಳ್ಳುತ್ತೀರಾ ಎಂದರು. ಅದರೂ ನಾನು ಈ ವೇಳೆ ಕಷ್ಟವಾದ ಇಲಾಖೆ ನಿಭಾಯಿಸಿಯೇ ಹೋಗಬೇಕು ಎಂಬ ಕಾರಣಕ್ಕೆ ಇಂಧನ ಇಲಾಖೆ ವಹಿಸಿಕೊಂಡೆ. ಈಗ ಈ ಇಲಾಖೆಯನ್ನು ನಾನು  ಯಶಸ್ವಿಯಾಗಿ ನಿಭಾಯಿಸಿದ್ದೇನೆ ಎಂದು ಹೇಳಿದರು.

    ಕೇಂದ್ರ ಸರ್ಕಾರಕ್ಕೆ ಸಾಲ ಮನ್ನಾ ಮಾಡಲು ಮನಸ್ಸಿಲ್ಲ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ರಾಜ್ಯದ ಸರ್ಕಾರ ರೈತರ ಸಾಲ ಮನ್ನಾ ಮಾಡಿದರೆ ಅದನ್ನು ಲಾಲಿಪಪ್ ಎಂದಿದ್ದಾರೆ. 50 ಸಾವಿರ ಲಾಲಿಪಪ್ ಸರ್ಕಾರ ನೀಡಿದೆ. ನೀವು ಕೇಂದ್ರದವರು ಕನಿಷ್ಟ ಚಾಕೊಲೇಟ್ ಆದರು ನೀಡಿ ಎಂದರು. ಇದನ್ನೂ ಓದಿ:  ಮೆಗಾ ಸೋಲಾರ್ ಹಗರಣ – ಡಿಕೆಶಿ ವಿರುದ್ಧ ಇಡಿಗೆ ದೂರು

    ಬಿಜೆಪಿಯವರು ಅವರೇ ಪರಿವರ್ತನೆ ಮಾಡಿಕೊಳ್ಳುತ್ತಿದ್ದಾರೆ. ಮೋದಿ ನೋಡಿಕೊಂಡು ಮತ ಹಾಕುತ್ತಾರೆ ಅಂದುಕೊಂಡಿದ್ದಾರೆ. ಆದರೆ ಜನ ಹೋದ ಕಡೆ ಎಲ್ಲಾ ಖಾತೆಗೆ 15 ಲಕ್ಷ ನೀಡಿ ಎನ್ನುತ್ತಿದ್ದಾರೆ. ಅಧಿಕಾರಲ್ಲಿ ಇದ್ದಾಗ ಜೈಲಿಗೆ ಹೋಗಿ, ಬ್ಲೂಫಿಲಂ ನೋಡಿ ಎಂದು ಯಾರು ಹೇಳಿದ್ದರು. ಯಡಿಯೂರಪ್ಪ ಸೈಕಲ್ ಕೊಟ್ಟೆ, ಸೀರೆ ಕೊಟ್ಟೆ ಎನ್ನುತ್ತಿದ್ದಾರೆ. ಅದನ್ನು ಬಿಟ್ಟು ಬೇರೆ ಏನು ಹೇಳುತ್ತಿಲ್ಲ. ರಾಜ್ಯದ ಜನರು ಗುರುತಿಸುವಂತಹ ಒಂದು ಕಾರ್ಯಕ್ರಮ ನೀಡಿಲ್ಲ ಎಂದರು.

    ಇದೇ ವೇಳೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ ಅವರು, ಸಿಎಂ ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ಬರುವುದಕ್ಕಿಂತ ಮೊದಲಿಂದಲೂ ನಾನು ಗೋವಿಂದಪ್ಪನವರು ಸ್ನೇಹಿತರು. ಕಳೆದ ಐದು ವರ್ಷದಲ್ಲಿ ನಿಮ್ಮ ಕೆಲಸ ಮಾಡಿದ್ದೇವೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇವೆ. ನಾನು 6 ಬಾರಿ ಗೆಲವು ಪಡೆದಿದ್ದೇನೆ, ಗೋವಿಂದಪ್ಪರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.  ಇದನ್ನೂ ಓದಿ: ಭಾಷಣದ ವೇಳೆ ಜಾವಡೇಕರ್ ಬದಲು ಜಾವೀದ್ ಎಂದ ಡಿಕೆ ಶಿವಕುಮಾರ್

    ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಸಿದ್ದರಾಮಯ್ಯ ನಮ್ಮ ನಾಯಕ ಅವರ ನಾಯಕತ್ವದಲ್ಲೇ ಚುನಾವಣೆಗೆ ಎದುರಿಸುತ್ತೇವೆ. ಮಹದಾಯಿ ವಿಚಾರದಲ್ಲಿ ನಾವು ಕಾನೂನು ಬಿಟ್ಟು ಏನು ಮಾಡಿಲ್ಲ. ಆದರೆ ಗೋವಾ ಸಚಿವ ಪ್ಯಾಲೆಕರ್ ಸುಮ್ಮನೆ ಮಹದಾಯಿ ವಿಚಾರವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂಷಿಸಿದರು.

  • ಮಹದಾಯಿಗಾಗಿ ಸುಳ್ಳು ಸಾಕ್ಷಿ ಹೇಳಲು ಕರ್ನಾಟಕದಿಂದ 50 ಸಾವಿರ ರೂ. ಲಂಚ: ಗೋವಾ ಸಚಿವ

    ಮಹದಾಯಿಗಾಗಿ ಸುಳ್ಳು ಸಾಕ್ಷಿ ಹೇಳಲು ಕರ್ನಾಟಕದಿಂದ 50 ಸಾವಿರ ರೂ. ಲಂಚ: ಗೋವಾ ಸಚಿವ

    ಬೆಂಗಳೂರು: ಕನ್ನಡಿಗರನ್ನು ಹರಾಮಿಗಳು ಎಂದಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲ್ಯೇಕರ್ ಮತ್ತೊಮ್ಮೆ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕದ ವಿರುದ್ಧ ಸುಳ್ಳು ಸಾಕ್ಷಿಯ ಆರೋಪ ಮಾಡಿದ್ದಾರೆ.

    ಈ ಕುರಿತು ರಾಷ್ಟ್ರೀಯ ಮಾಧ್ಯಮದೊಂದಿಗೆ ಮಾತನಾಡುವ ವೇಳೆ ಮಹದಾಯಿ ಬಗ್ಗೆ ಸುಳ್ಳು ಸಾಕ್ಷಿ ಹೇಳಲು ಕರ್ನಾಟಕ ಸರ್ಕಾರ ಸಾಕ್ಷಿಗಳಿಗೆ 50 ಸಾವಿರ ಲಂಚ ನೀಡುತ್ತಿದೆ. ಗೋವಾ ಸರ್ಕಾರ ಮಾತ್ರ ಸಾಕ್ಷಿಗಳಿಗೆ ನಯಾಪೈಸೆ ಕೊಟ್ಟಿಲ್ಲ ಎಂದು ಮತ್ತೆ ತಮ್ಮ ಬಾಯಿ ಹರಿಬಿಟ್ಟಿದ್ದಾರೆ.

    ಮಹದಾಯಿ ಸಮಸ್ಯೆಯ ನ್ಯಾಯಾಧೀಕರಣದ ವಿಚಾರಣೆ ಫೆಬ್ರವರಿ 6 ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪಾಲ್ಯೇಕರ್ ಮತ್ತೊಮ್ಮೆ ಕರ್ನಾಟಕ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

    ಕೆಲವೇ ದಿನಗಳ ಹಿಂದೆ ಕಣಕುಂಬಿಗೆ ಭೇಟಿ ನೀಡಿದ್ದ ಪಾಲ್ಯೇಕರ್, ಕರ್ನಾಟಕ ಸರ್ಕಾರ ನ್ಯಾಯಾಧೀಕರಣ ಆದೇಶ ವಿರುದ್ಧವಾಗಿ ಡ್ಯಾಂ ನಿರ್ಮಾಣ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಕುರಿತು ಪಣಜಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪಾಲ್ಯೇಕರ್ ಕರ್ನಾಟಕದವರು ಹರಾಮಿಗಳು ಎಂದು ಹೇಳಿಕೆ ಕೊಟ್ಟಿದ್ದರು. ನಂತರ ಕನ್ನಡಿಗರ ಆಕ್ರೋಶಕ್ಕೆ ಒಳಗಾದ ಕಾರಣ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.

    ಈ ಕುರಿತು ಟ್ವೀಟ್ ಮಾಡಿರುವ ಅವರು, ನ್ಯಾಯಾಧೀಕರಣದ ನಿಯಮಗಳ ಆನ್ವಯ ಮಹದಾಯಿ ನೀರಾವರಿ ಕಮಿಟಿ ಕನಿಷ್ಟ ವಾರಕ್ಕೆ ಒಮ್ಮೆಯಾದರು ವಿವಾದಿತ ಸ್ಥಳಕ್ಕೆ ಭೇಟಿ ನೀಡಬಹುದು. ಅಲ್ಲದೇ ಆ ಪ್ರದೇಶದಲ್ಲಿ ನಡೆಯುವ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಬಹುದು. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುವ ವರದಿಗಳನ್ನು ಪರಿಗಣಿಸಬಹುದು. ಅಗತ್ಯ ವೇಳೆ ಸ್ಥಳಕ್ಕೆ ಭೇಟಿ ನೀಡಿ ವಸ್ತು ಸ್ಥಿತಿ ಬಗ್ಗೆ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿ ನೀಡಬಹುದು ಎಂಬ ನಿಯಮಗಳ ಪಟ್ಟಿಯ ಫೋಟೋವನ್ನು ಟ್ವೀಟ್ ಮಾಡಿದ್ದಾರೆ.

    ಈ ಕುರಿತ ಸರಣಿ ಟ್ವೀಟ್‍ಗಳಲ್ಲಿ ಕರ್ನಾಟಕ ಸಚಿವರು ಯಾವುದೇ ನಿಯಮಗಳನ್ನು ಉಲ್ಲಂಘನೆ ಮಾಡಿ ಅಭಿವೃದ್ಧಿ ಮಾಡಿಲ್ಲ ಎನ್ನುತ್ತಾರೆ. ಆದರೆ ಈ ಕುರಿತು ವಿಡಿಯೋ ಸಮೇತ ಸಾಕ್ಷ್ಯವನ್ನು ನ್ಯಾಯಾಲಯದಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

     

    ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಟ್ವೀಟ್ ಗೆ ರಾಜ್ಯ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಟ್ವಿಟ್ಟರ್ ಮೂಲಕವೇ ತಿರುಗೇಟು ನೀಡಿದ್ದಾರೆ. ನಮ್ಮ ನಾಡ ರಕ್ಷಣೆಯ ಪಾಠ ನಿಮ್ಮಿಂದ ಕಲಿಯಬೇಕಿಲ್ಲ. ನೀವು ಅಲ್ಲ, ನಿಮ್ಮಂತ ಸಾವಿರ ಜನರು ಬಂದರು ನಮನ್ನು ಬಗ್ಗಿಸಲು ಸಾಧ್ಯವಿಲ್ಲ. ಮಹಾದಾಯಿ ಭಿಕ್ಷೆ ಅಲ್ಲ, ಅದು ನಮ್ಮ ಹಕ್ಕು ಎಂದು ಟಾಂಗ್ ನೀಡಿದ್ದಾರೆ.