Tag: Ministry of Defense

  • ಭಾರತಕ್ಕೆ ಭೇಟಿ ನೀಡಲಿದ್ದಾರೆ ಒಮಾನ್ ರಕ್ಷಣಾ ಅಧಿಕಾರಿಗಳು

    ಭಾರತಕ್ಕೆ ಭೇಟಿ ನೀಡಲಿದ್ದಾರೆ ಒಮಾನ್ ರಕ್ಷಣಾ ಅಧಿಕಾರಿಗಳು

    ನವದೆಹಲಿ: ಜನವರಿ 30 ರಿಂದ ಫೆಬ್ರವರಿ 3 ರವರೆಗೆ ಒಮಾನ್ ರಕ್ಷಣಾ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಾಸರ್ ಅಲ್ ಝಾಬಿ ಸೇರಿದಂತೆ ಹಲವಾರು ಉನ್ನತ ಮಟ್ಟದ ರಕ್ಷಣಾ ಅಧಿಕಾರಿಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ.

    ಭೇಟಿ ಬಳಿಕ ಭಾರತ ಮತ್ತು ಒಮಾನ್ ರಕ್ಷಣಾ ಸಂಬಂಧಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದ್ದಾರೆ. ಜಂಟಿ ಮಿಲಿಟರಿ ಸಹಕಾರ ಸಮಿತಿ(ಜೆಎಂಎಂಸಿ) ಭಾರತ ಮತ್ತು ಒಮಾನ್ ನಡುವಿನ ರಕ್ಷಣಾ ವೇದಿಕೆಯಾಗಿದೆ.

    ಕೊನೆಯ (ಜೆಎಂಸಿಸಿ) 2018 ರಲ್ಲಿ ಒಮಾನ್‍ನಲ್ಲಿ ನಡೆದಿತ್ತು. ಕೋವಿಡ್ ಬಿಕ್ಕಟ್ಟಿನಿಂದಾಗಿ 3 ವರ್ಷಗಳ ಅಂತರದ ನಂತರ ನಡೆಯುತ್ತಿರುವ ಭೇಟಿ ಇದಾಗಿದೆ. ಭಾರತ ಪ್ರವಾಸದ ವೇಳೆ ಝಾಬಿ ಅವರು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಭೇಟಿಯ ವೇಳೆ ರಕ್ಷಣಾ ಉತ್ಪನ್ನಗಳ ಖರೀದಿ ಸಂಬಂಧ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ. ಇದನ್ನೂ ಓದಿ: ಇರಾಕ್ ಏರ್‌ಸ್ಟ್ರೈಕ್ ದಾಳಿ- 6 ಇಸ್ಲಾಮಿಕ್ ಸ್ಟೇಟ್ ಉಗ್ರರ ಹತ್ಯೆ

    ಫೆಬ್ರವರಿಯಲ್ಲಿ ಒಮಾನ್‍ನ ವಾಯುಪಡೆಯ ಮುಖ್ಯಸ್ಥರು ಮತ್ತು ರಾಯಲ್ ನೌಕಾಪಡೆ ಮುಖ್ಯಸ್ಥರು ಸಹ ಭಾರತಕ್ಕೆ ಭೇಟಿಯಾಗಲಿದ್ದಾರೆ

    ಒಮಾನ್‍ನ ನೌಕಾ ಮತ್ತು ವಾಯುಪಡೆ ಮುಖ್ಯಸ್ಥರ ಭೇಟಿಯು 5 ವರ್ಷಗಳ ನಂತರ ನಡೆಯುತ್ತಿದೆ. ಫೆಬ್ರವರಿಯಲ್ಲಿ ಭಾರತ ಮತ್ತು ಒಮಾನ್ ವಾಯುಪಡೆಯ ನಡುವೆ ಜೋಧ್‍ಪುರದಲ್ಲಿ ಜಂಟಿಯಾಗಿ ವೈಮಾನಿಕ ಸಮರ ಅಭ್ಯಾಸ ನಡೆಯಲಿದೆ. ಒಮಾನ್‍ನಿಂದ 150 ಕ್ಕೂ ಹೆಚ್ಚು ಸಿಬ್ಬಂದಿ ಈ ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ.  ಇದನ್ನೂ ಓದಿ: ಬಾಪು ಆದರ್ಶಗಳನ್ನು ಮತ್ತಷ್ಟು ಜನಪ್ರಿಯಗೊಳಿಸುತ್ತೇವೆ: ಮೋದಿ

    ಒಮಾನ್ ದೇಶವು ಭಾರತದ ಅತ್ಯಂತ ನಿಕಟ ರಕ್ಷಣಾ ಪಾಲುದಾರರ ದೇಶಗಳಲ್ಲಿ ಒಂದಾಗಿದೆ. ಗಲ್ಫ್ ವಲಯದಲ್ಲಿರುವ ದೇಶಗಳ ಪೈಕಿ ಭಾರತದ ಮೂರು ಸೇನೆಯ ಜೊತೆ ಜಂಟಿಯಾಗಿ ಸಮರಭ್ಯಾಸ ನಡೆಸುತ್ತಿರುವ ಏಕೈಕ ದೇಶ ಒಮಾನ್ ಆಗಿದೆ.

  • ಪಾಕ್‍ಗೆ ಶಸ್ತ್ರಾಸ್ತ್ರ ನೀಡಲ್ಲ ಎಂದ ರಷ್ಯಾ – ಭಾರತಕ್ಕೆ ದೊಡ್ಡ ಗೆಲುವು

    ಪಾಕ್‍ಗೆ ಶಸ್ತ್ರಾಸ್ತ್ರ ನೀಡಲ್ಲ ಎಂದ ರಷ್ಯಾ – ಭಾರತಕ್ಕೆ ದೊಡ್ಡ ಗೆಲುವು

    – ಭಾರತದ ಮನವಿಗೆ ಸ್ಪಂದಿಸಿ ರಷ್ಯಾ ನಿರ್ಧಾರ

    ಮಾಸ್ಕೋ: ಭಯೋತ್ಪಾದನೆಯನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಭಾರತಕ್ಕೆ ಮತ್ತೊಂದು ಬಹುದೊಡ್ಡ ಗೆಲುವು ಲಭಿಸಿದ್ದು, ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಕೆ ಮಾಡಬಾರದು ಎಂಬ ಭಾರತ ಮನವಿಯನ್ನು ರಷ್ಯಾ ಪುರಸ್ಕರಿಸಿದೆ. ಪಾಕಿಸ್ತಾನಕ್ಕೆ ಯಾವುದೇ ರೀತಿಯ ಶಸ್ತ್ರಾಸ್ತ್ರಗಳನ್ನು ಪೂರೈಸುವುದಿಲ್ಲ ಎಂದು ಹೇಳಿದೆ.

    ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಸಂಜೆ ಮಾಸ್ಕೋದಲ್ಲಿ ಜನರಲ್ ಸರ್ಜರಿ ಶೋಯಿಗು ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದಾರೆ. ಈ ವೇಳೆ ಪಾಕಿಸ್ತಾನಕ್ಕೆ ಯಾವುದೇ ರೀತಿಯ ಶಸ್ತ್ರಾಸ್ತ್ರ ಪೂರೈಸುವುದಿಲ್ಲ. ಹಿಂದಿನ ನೀತಿಯನ್ನೇ ಮುಂದುವರಿಸುತ್ತೇವೆ ಎಂದು ರಷ್ಯಾ ಸ್ಪಷ್ಟಪಡಿಸಿದೆ.

    ಮಾತುಕತೆ ವೇಳೆ ರಷ್ಯಾ ತನ್ನ ನೀತಿಯನ್ನು ಪುನರುಚ್ಛರಿಸಿದ್ದು, ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸುವುದಿಲ್ಲ. ಭಾರತದ ಮನವಿಯನ್ನು ಪುರಸ್ಕರಿಸುತ್ತೇವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಭಾರತ ರಕ್ಷಣಾ ಸಚಿವಾಲಯ ಸಹ ಈ ಕುರಿತು ಸ್ಪಷ್ಟಪಡಿಸಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಜನರಲ್ ಶೋಯಿಗು ನಡುವೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಸಭೆ ನಡೆದಿದ್ದು, ಮಾಸ್ಕೋದ ರಷ್ಯನ್ ರಕ್ಷಣಾ ಸಚಿವಾಲಯದಲ್ಲಿ ನಡೆದಿತ್ತು ಎಂದು ಈ ಹಿಂದೆ ತಿಳಿಸಿತ್ತು.

    ಸಭೆಯಲ್ಲಿ ಉಭಯ ದೇಶಗಳ ನಡುವೆ ಸಹಕಾರ ಹಾಗೂ ಸಂಬಂಧದ ಕುರಿತು ನಡೆದಿದ್ದು, ಎರಡು ದೇಶಗಳ ರಕ್ಷಣಾ ವಿಭಾಗಕ್ಕೆ ಶಕ್ತಿ ತುಂಬುವುದು ಹಾಗೂ ಎರಡೂ ದೇಶಗಳ ನಡುವೆ ಸಹಕಾರ, ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಿದ್ದಾರೆ.

    ಸಭೆ ಬಳಿಕ ಟ್ವೀಟ್ ಮಾಡಿದ್ದ ರಾಜನಾಥ್ ಸಿಂಗ್, ರಷ್ಯಾದ ರಕ್ಷಣಾ ಸಚಿವ ಜನರಲ್ ಸೆರ್ಗೆ ಶೋಯಿಗು ಅವರೊಂದಿಗೆ ಅದ್ಭುತ ಸಭೆ ನಡೆದಿದ್ದು, ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಿದೆವು. ರಕ್ಷಣಾ ವಿಭಾಗದ ಕುರಿತು ಆಳವಾಗಿ ಚರ್ಚೆ ನಡೆಸಿದ್ದೇವೆ. ಎರಡೂ ದೇಶಗಳ ನಡುವೆ ಸ್ನೇಹ, ಸಂಬಂಧ ವೃದ್ಧಿಸುವ ಕುರಿತು ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.

  • ಬೆಂಗಳೂರಲ್ಲೇ ಫೆಬ್ರವರಿ 3 ರಿಂದ 7ರವರೆಗೆ ನಡೆಯಲಿದೆ ಏರ್ ಶೋ

    ಬೆಂಗಳೂರಲ್ಲೇ ಫೆಬ್ರವರಿ 3 ರಿಂದ 7ರವರೆಗೆ ನಡೆಯಲಿದೆ ಏರ್ ಶೋ

    – ಪೂರ್ವಭಾವಿ ಸಭೆ ನಡೆಸಿದ ರಾಜನಾಥ್ ಸಿಂಗ್

    ನವದೆಹಲಿ: ಏಷ್ಯಾದ ಅತಿ ದೊಡ್ಡ ಏರ್ ಶೋ ‘ಏರೋ ಇಂಡಿಯಾ’ ಬೆಂಗಳೂರಿನಲ್ಲೇ 2021ರ ಫೆಬ್ರವರಿ 3 ರಿಂದ 7ರವರೆಗೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ‘ಏರೋ ಇಂಡಿಯಾ’ ಏರ್ ಶೋ ಸಂಬಂಧ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿದ್ದು, ಪ್ರತಿ ವರ್ಷದಂತೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಇಲಾಖೆ ಮೂಲಗಳು ಮಾಹಿತಿ ನೀಡಿವೆ.

    ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಪೂರ್ಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಚಿವರು ಸಭೆಯಲ್ಲಿ ಸೂಚಿಸಿದ್ದಾರೆ. ಈಗಾಗಲೇ ಖ್ಯಾತ ವೈಮಾನಿಕ ಸಂಸ್ಥೆಗಳು ಏರೋ ಇಂಡಿಯಾದಲ್ಲಿ ಪಾಲ್ಗೊಳ್ಳಲು ಉತ್ಸುಕತೆ ತೋರಿವೆ. ಹಲವು ರಾಷ್ಟ್ರಗಳ ಪ್ರತಿನಿಧಿಗಳು, ರಕ್ಷಣಾ ಕ್ಷೇತ್ರದ ಪ್ರಮುಖ ಸಂಸ್ಥೆಗಳು ಹಾಗೂ ಹೂಡಿಕೆದಾರರು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ.

    1996ರಲ್ಲಿ ಮೊದಲ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಬೆಂಗಳೂರಿನಲ್ಲಿ ಶುರುವಾಗಿತ್ತು. ಅಂದಿನಿಂದಲೂ ಏರ್ ಶೋ ಬೆಂಗಳೂರಿನಲ್ಲೇ ನಡೆಯುತ್ತಿದೆ. ಪ್ರತಿ ವರ್ಷ ಫೆಬ್ರವರಿಯಲ್ಲಿ ಏರ್ ಶೋ ನಡೆಯುತ್ತದೆ. ಈ ವೇಳೆ ಲೋಹದ ಹಕ್ಕಿಗಳನ್ನು ನೋಡೋದೆ ಚೆಂದ. ಇದೀಗ ಇದರ 13ನೇ ಆವೃತ್ತಿ ನಡೆಯಲಿದೆ. ಕೋವಿಡ್-19 ಹರಡುವಿಕೆ ತಡೆಯಲು ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು. ನಿಗದಿಯಂತೆಯೇ ಏರ್ ಶೋ ಕಾರ್ಯಕ್ರಮ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಕಳೆದ ವರ್ಷ ಫೆಬ್ರವರಿಯಲ್ಲಿ ಏರ್ ಶೋ ವೇಳೆ ಭಾರೀ ಅವಘಡ ಸಂಭವಿಸಿತ್ತು. ಸ್ಥಳದಲ್ಲಿದ್ದ ಒಣ ಹುಲ್ಲಿನಿಂದಾಗಿ ಎಲ್ಲೆಡೆ ಬೆಂಕಿ ವ್ಯಾಪಿಸಿದ್ದು, ಸುಮಾರು 32 ಎಕರೆ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಹರಡಿತ್ತು. ಪರಿಣಾಮ ಪಾರ್ಕ್ ಮಾಡಿದ್ದ 200 ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿಯಾಗಿದ್ದವು. ಕಾರು ನಿಲ್ಲಿಸಿದ್ದ ಸ್ಥಳ ಖಾಸಗಿ ಪಾರ್ಕಿಂಗ್ ಪ್ರದೇಶವಾಗಿದ್ದು, ಘಟನೆ ಸಂಬಂಧ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಬೆಂಕಿಯ ತೀವ್ರತೆಯ ವಿಡಿಯೋ, ಫೋಟೋ ತೆಗೆದು ಪೋಸ್ಟ್ ಮಾಡಿದ್ದರು.

  • ರಕ್ಷಣಾ ಸಚಿವಾಲಯದ ಸಮಿತಿಯಿಂದ ಪ್ರಜ್ಞಾ ಸಿಂಗ್ ಔಟ್

    ರಕ್ಷಣಾ ಸಚಿವಾಲಯದ ಸಮಿತಿಯಿಂದ ಪ್ರಜ್ಞಾ ಸಿಂಗ್ ಔಟ್

    ನವದೆಹಲಿ: ನಾಥೂರಾಮ್ ಗೋಡ್ಸೆ ದೇಶ ಭಕ್ತ ಎಂದು ಹೇಳಿದ ಬೆನ್ನಲ್ಲೇ ಭೋಪಾಲ್ ಸಂಸದೆ ಸಾಧ್ವಿಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ಕೈ ಬಿಡಲಾಗಿದೆ.

    ಬುಧವಾರವಷ್ಟೇ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಗೋಡ್ಸೆ ದೇಶ ಭಕ್ತ ಎಂಬ ಹೇಳಿಕೆಯನ್ನು ಲೋಕಸಭೆಯಲ್ಲಿ ನೀಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳ ಸಂಸದರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂದ ಸಾಧ್ವಿ ಪ್ರಜ್ಞಾಸಿಂಗ್

    ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮಲೇಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯಿಂದ ತೆಗೆದು ಹಾಕಲಾಗಿದೆ.

    ಬುಧವಾರ ಲೋಕಸಭೆಯಲ್ಲಿ ಅವರು ಹೇಳಿಕೆ ನೀಡಿರುವುದು ಖಂಡನಾರ್ಹ. ಇಂತಹ ಹೇಳಿಕೆಗಳು ಹಾಗೂ ಸಿದ್ಧಾಂತಗಳಿಗೆ ಬಿಜೆಪಿ ಎಂದೂ ಬೆಂಬಲ ನೀಡುವುದಿಲ್ಲ ಎಂದು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ ನಡ್ಡಾ ಸಹ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಕ್ಷದಿಂದ ಅಮಾನತುಗೊಳಿಸುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಪಕ್ಷ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ರಾಹುಲ್ ಗಾಂಧಿ ಅವರು ಈ ಕುರಿತು ಟ್ವೀಟ್ ಮಾಡಿ, ಟೆರರಿಸ್ಟ್ ಪ್ರಜ್ಞಾ ಅವರು ಟೆರರಿಸ್ಟ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಾರೆ. ಭಾರತದ ಲೋಕಸಭೆಯ ಇತಿಹಾಸದಲ್ಲಿ ಇದೊಂದು ಕರಾಳ ದಿನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ನಾಮನಿರ್ದೇಶನ ಮಾಡಲಾಗಿತ್ತು.

    21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿಯ ನೇತೃತ್ವವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದಾರೆ. ಈ ಸಮಿತಿಯಲ್ಲಿ ಪ್ರತಿ ಪಕ್ಷದ ಸದಸ್ಯರಾದ ಫಾರೂಕ್ ಅಬ್ದುಲ್ಲಾ ಮತ್ತು ಎನ್‍ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ವಿವಿಧ ಪ್ರಮುಖ ನಾಯಕರು ಇರಲಿದ್ದಾರೆ. ಈ ಸಮಿತಿಗೆ ಸಾಧ್ವಿ ಪ್ರಜ್ಞಾ ಅವರನ್ನು ಆಯ್ಕೆ ಮಾಡಿದ್ದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

    ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್, 21 ಸಂಸತ್ತಿನ ಹಿರಿಯ ಸದಸ್ಯರು ಇರುವ ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸಮಾಜದ ಶಾಂತಿಯನ್ನು ಕದಡುವ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಕೇಂದ್ರ ಸರ್ಕಾರ ಸ್ಥಾನ ನೀಡಿರುವುದು ನಿಜಕ್ಕೂ ವಿಪರ್ಯಾಸ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

  • ಭಾರತೀಯ ವಾಯುಸೇನೆಗೆ ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ

    ಭಾರತೀಯ ವಾಯುಸೇನೆಗೆ ಅಪಾಚೆ ಹೆಲಿಕಾಪ್ಟರ್ ಸೇರ್ಪಡೆ

    ನವದೆಹಲಿ: ಅಮೆರಿಕ ಬಾಹ್ಯಾಕಾಶ ಸಂಸ್ಥೆಯ ಮಹತ್ವದ ಅಪಾಚೆ ಹೆಲಿಕಾಪ್ಟರ್ ಗಳನ್ನು ಭಾರತಕ್ಕೆ ಹಸ್ತಾಂತರಿಸಿದ್ದು, ಈ ಮೂಲಕ ಭಾರತೀಯ ವಾಯು ಸೇನೆಯ ಶಕ್ತಿ ಇನ್ನೂ ನೂರ್ಮಡಿಯಾದಂತಾಗಿದೆ.

    ಎದುರಾಳಿ ಮೇಲೆ ದಾಳಿ ಮಾಡಲು ಸಿದ್ಧಪಡಿಸಿದ ಹೆಲಿಕಾಪ್ಟರ್ ಇದಾಗಿದ್ದು, ವಿಶ್ವದಲ್ಲೇ ಅತ್ಯತ್ತಮ ದಾಳಿ ಮಾಡುವ ಹೆಲಿಕಾಪ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೀಗ ಭಾರತೀಯ ವಾಯು ಪಡೆಗೆ ಸೇರಿರುವುದು ಭಾರತಕ್ಕೆ ಆನೆ ಬಲವನ್ನು ತಂದಂತಾಗಿದೆ.

    ಭಾರತ ಒಟ್ಟು 22 ಅಪಾಚೆ ಹೆಲಿಕಾಪ್ಟರ್‍ಗಳ ಖರೀದಿಗೆ ಅಮೆರಿಕದ ಬೋಯಿಂಗ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಪೈಕಿ ಮೊದಲ ಹಂತದಲ್ಲಿ ನಾಲ್ಕು ಹೆಲಿಕಾಪ್ಟರ್‍ಗಳನ್ನು ಬೋಯಿಂಗ್ ಭಾರತಕ್ಕೆ ಹಸ್ತಾಂತರಿಸಿದೆ. ಇನ್ನೂ ನಾಲ್ಕು ಹೆಲಿಕಾಪ್ಟರ್ ಗಳನ್ನು ಮುಂದಿನ ವಾರ ಹಸ್ತಾಂತರಿಸಲಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‍ನ ಹಿಂಡನ್ ವಾಯುನೆಲೆಯಲ್ಲಿ ಮೊದಲ ಹಂತದ ಎಎಚ್-64ಇ ಅಪಾಚೆ ಹೆಲಿಕಾಪ್ಟರ್ ಗಳನ್ನು ಭಾರತೀಯ ವಾಯು ಸೇನೆಗೆ ಹಸ್ತಾಂತರಿಸಲಿದೆ. ಈ ಮೂಲಕ ಸುಮಾರು ನಾಲ್ಕು ವರ್ಷಗಳ ಚಾಪರ್‍ಗಳ ಶತಕೋಟಿ ಡಾಲರ್ ಒಪ್ಪಂದಕ್ಕೆ ಮುದ್ರೆಯೊತ್ತಿದಂತಾಗಿದೆ.

    ಸೆಪ್ಟೆಂಬರ್ ವೇಳೆಗೆ ಎಂಟು ಕಾಪರ್ ಗಳು ಪಠಾಣ್‍ಕೋಟ್‍ಗೆ ಸ್ಥಳಾಂತರವಾಗಲಿದ್ದು, ಈ ಮೂಲಕ ಔಪಚಾರಿಕವಾಗಿ ಐಎಎಫ್‍ನ ಸುಪರ್ದಿಗೆ ವಹಿಸಲಾಗುವುದು ಎಂದು ಬೋಯಿಂಗ್ ಕಂಪನಿ ತಿಳಿಸಿದೆ.

    ಎಎಚ್-64ಇ ಅಪಾಚೆ ಹೆಲಿಕಾಪ್ಟರ್ ಗಳು ವಿಶ್ವದ ಅತ್ಯಾಧುನಿಕ ಬಹು ಪಾತ್ರದಲ್ಲಿ ಕಾರ್ಯನಿರ್ವಹಿಸುವ ಹೆಲಿಕಾಪ್ಟರ್ ಗಳಲ್ಲಿ ಒಂದಾಗಿದ್ದು, ಅಮೆರಿಕ ಸೈನ್ಯವೂ ಈ ಹೆಲಿಕಾಪ್ಟರ್ ಗಳನ್ನು ಬಳಸುತ್ತಿದೆ. ಭಾರತೀಯ ವಾಯು ಸೇನೆ ಈ ಬಹು ಶತಕೋಟಿ ಡಾಲರ್ ಗುತ್ತಿಗೆಗೆ ಅಮೆರಿಕ ಸರ್ಕಾರ ಹಾಗೂ ಬೋಯಿಂಗ್ ಲಿ. ಜೊತೆಗೆ ಸೆಪ್ಟೆಂಬರ್ 2015ರಲ್ಲಿ 22 ಹೆಲಿಕಾಪ್ಟರ್ ಗಳಿಗೆ ಸಹಿ ಹಾಕಲಾಗಿತ್ತು.

    ಹೆಚ್ಚುವರಿಯಾಗಿ ರಕ್ಷಣಾ ಸಚಿವಾಲಯ 2017ರಲ್ಲಿ ಸುಮಾರು 4,168 ಕೋಟಿ ರೂ. ವೆಚ್ಚದಲ್ಲಿ ಶಸ್ತ್ರಾಸ್ತ್ರ ವ್ಯವಸ್ಥೆ ಸೇರಿದಂತೆ 6 ಹೆಲಿಕಾಪ್ಟರ್ ಗಳ ಸಂಗ್ರಹಣೆಗೆ ಒಪ್ಪಿಗೆ ಸೂಚಿಸಿತ್ತು.

    ಅಪಾಚೆ ದಾಳಿ ಮಾಡುವ ದೇಶದ ಮೊದಲ ಕಾಪರ್ ಆಗಿದ್ದು, ಭಾರತೀಯ ವಾಯುಸೇನೆಯ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಕಾಪರ್ ಖರೀದಿಸಲಾಗುತ್ತಿದೆ. ಅಪಾಚೆ ಸೇರ್ಪಡೆಯಿಂದ ನಮ್ಮ ಯುದ್ಧದ ಸಾಮಥ್ರ್ಯ ಗಮನಾರ್ಹವಾಗಿ ಹೆಚ್ಚಲಿದೆ ಎಂದು ಐಎಎಫ್‍ನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    ಬೋಯಿಂಗ್ ಸಂಸ್ಥೆಯು ಈವರೆಗೆ 2,200 ಅಪಾಚೆ ಹೆಲಿಕಾಪ್ಟರ್ ಗಳನ್ನು ವಿವಿಧ ದೇಶಗಳಿಗೆ ಹಸ್ತಾಂತರಿಸಿದೆ. ಅಪಾಚೆ ಉತ್ಪಾದಿಸಲು ಪ್ರಾರಂಭಿಸಿದಾಗಿನಿಂದ ಈವರೆಗೆ ವಿಶ್ವದಾದ್ಯಂತ ಗ್ರಾಹಕರಿದ್ದಾರೆ. ಈ ಪೈಕಿ ಭಾರತ ಅಪಾಚೆ ಖರೀದಿಸುತ್ತಿರುವ 14ನೇ ರಾಷ್ಟ್ರವಾಗಿದೆ. 2020ರ ವೇಳೆ ಭಾರತೀಯ ವಾಯು ಸೇನೆ ಎಲ್ಲ 22 ಅಪಾಚೆ ಹೆಲಿಕಾಪ್ಟರ್ ಗಳ ಮೂಲಕ ಕಾರ್ಯನಿರ್ವಹಿಸಲಿದೆ ಎಂದು ಬೋಯಿಂಗ್ ಸಂಸ್ಥೆ ತಿಳಿಸಿದೆ.

    ಏರ್ ಸ್ಪೇಸ್ ಮೇಜರ್ ಈ ಕುರಿತು ಮಾತನಾಡಿ, ಎಎಚ್-64ಇ ಅಪಾಚೆ ಸುಧಾರಿತ ತಂತ್ರಜ್ಞಾನ ಹೊಂದಿದ್ದು, ಇದು ವಿಶ್ವದಲ್ಲೇ ಅತ್ಯುತ್ತಮ ದಾಳಿ ಮಾಡುವ ಹೆಲಿಕಾಪ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದ್ದಾರೆ.

    ಜುಲೈ 2018ರಂದು ಭಾರತೀಯ ವಾಯು ಸೇನೆಗಾಗಿ ಮೊದಲ ಅಪಾಚೆ ಹೆಲಿಕಾಪ್ಟರ್ ನ್ನು ಪೂರ್ಣಗೊಳಿಸಿತ್ತು. ಭಾರತೀಯ ವಾಯುಪಡೆಯ ಮೊದಲ ಬ್ಯಾಚ್ 2018ರಲ್ಲಿ ಅಮೇರಿಕಾದಲ್ಲಿ ಅಪಾಚೆ ಹಾರಾಟದ ಕುರಿತು ತರಬೇತಿ ಪ್ರಾರಂಭಿಸಲಾಗಿತ್ತು.