Tag: minor boy

  • 7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ  ಬೆದರಿಕೆ ಕರೆ

    7ನೇ ತರಗತಿ ವಿದ್ಯಾರ್ಥಿಯಿಂದ ಕೇರಳ ಸಿಎಂಗೆ ಬೆದರಿಕೆ ಕರೆ

    ತಿರುವನಂತಪುರ: ಅಪ್ರಾಪ್ತ ಬಾಲಕನೋರ್ವ (Minor) ಕೇರಳ (Kerala) ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ (Pinarayi Vijayan) ಬೆದರಿಕೆ (Threat) ಹಾಕಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

    ಬುಧವಾರ ರಾತ್ರಿ ಕೇರಳ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುವುದಾಗಿ ಗುರುವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ

    ಈ ಕುರಿತು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದು, ಕರೆ ಮಾಡಿದಾತ 12 ವರ್ಷದ ಬಾಲಕ ಎಂದು ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಳಿಕ ಪೊಲೀಸರು ಬಾಲಕನ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಬಾಲಕನ ಪೋಷಕರು, 7 ನೇ ತರಗತಿಯಲ್ಲಿ ಓದುತ್ತಿರುವ ತಮ್ಮ ಮಗ ಮೊಬೈಲ್‌ನಲ್ಲಿ ಆಟವಾಡುವ ವೇಳೆ ಅಚಾತುರ್ಯವಾಗಿ ಕಂಟ್ರೋಲ್ ರೂಮ್‌ಗೆ ಕರೆ ಮಾಡಿದ್ದಾನೆ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಬಾಯಿಂದ ಬಾಯಿಗೆ ಎಂಜಲು ನೀರು ಉಗಿದುಕೊಂಡು ಚೆಲ್ಲಾಟ – ಪ್ರೇಮಿಗಳಿಗೆ ಶುರುವಾಯ್ತು ಪೀಕಲಾಟ

    ಪೋಷಕರ ಹೇಳಿಕೆ ಪೊಲೀಸರಿಗೆ ಸಮಂಜಸವೆನಿಸಲಿಲ್ಲ. ಆದ್ದರಿಂದ ತನಿಖೆ ಮುಂದುವರಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಪಿಣರಾಯಿ ವಿಜಯನ್ ಅವರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 118 (ಬಿ) (ಪೊಲೀಸ್, ಅಗ್ನಿಶಾಮಕ ದಳ ಅಥವಾ ಇತರ ಯಾವುದೇ ಅಗತ್ಯ ಸೇವೆಯನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ವದಂತಿಗಳನ್ನು ಹರಡುವುದು ಅಥವಾ ಸುಳ್ಳು ಎಚ್ಚರಿಕೆಗಳನ್ನು ನೀಡುವುದರೊಂದಿಗೆ ವ್ಯವಹರಿಸುತ್ತದೆ) ಮತ್ತು 120 (ಒ) (ಯಾವುದೇ ಸಂವಹನ ವಿಧಾನದ ಮೂಲಕ ಯಾವುದೇ ವ್ಯಕ್ತಿಗೆ ತೊಂದರೆ ಉಂಟುಮಾಡುವ ಬಗ್ಗೆ ವ್ಯವಹರಿಸುತ್ತದೆ) ಅಡಿಯಲ್ಲಿ ಬೆದರಿಕೆ ಹಾಕಲು ಬಳಸಿದ ಮೊಬೈಲ್ ಸಂಖ್ಯೆಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಐಬ್ರೋಸ್ ಮಾಡಿಸಿದ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರಿನಲ್ಲಿ 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!

    ಮೈಸೂರಿನಲ್ಲಿ 17ರ ಹುಡುಗನನ್ನು ಇರಿದು ಕೊಂದ 15ರ ಬಾಲಕ!

    ಮೈಸೂರು: ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸುರಿನ (Mysuru) ಸುನ್ನಿಚೌಕ್ ಬಳಿ ನಡೆದಿದೆ.

    ಫರ್ವೇಜ್ ಖಾನ್ (17) ಕೊಲೆಯಾದ ಹುಡುಗ. ಆತನನ್ನು 15 ವರ್ಷದ ಬಾಲಕ (Boy) ಕೊಲೆ ಮಾಡಿದ್ದಾನೆ. ಆಟವಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಫರ್ವೇಜ್ ಖಾನ್‌ಗೆ ಬಾಲಕ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: ಪತಿ, ಆತನ ಗರ್ಲ್‍ಫ್ರೆಂಡ್ ವಿರುದ್ಧ ಡೆತ್‍ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

    ಚಾಕು ಇರಿತಕ್ಕೊಳಗಾದ ಫರ್ವೇಜ್ ಖಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪ್ರಾಪ್ತ ಆರೋಪಿಯನ್ನು ಮಂಡಿ ಪೊಲೀಸರು (Mandi Police) ಇದೀಗ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಮಂಗಳೂರಿನ ಪಂಪ್‍ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 17ರ ವಿದ್ಯಾರ್ಥಿನಿ ಮೇಲೆ 6 ಮಂದಿಯಿಂದ ಅತ್ಯಾಚಾರ

    17ರ ವಿದ್ಯಾರ್ಥಿನಿ ಮೇಲೆ 6 ಮಂದಿಯಿಂದ ಅತ್ಯಾಚಾರ

    ಮುಂಬೈ: 17 ವರ್ಷದ ವಿದ್ಯಾರ್ಥಿನಿ ಮೇಲೆ ಐವರು ಪುರುಷರು ಹಾಗೂ ಓರ್ವ ಅಪ್ರಾಪ್ತ ಬಾಲಕ ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಗಳಲ್ಲಿ ಓರ್ವ ವಿದ್ಯಾರ್ಥಿನಿ ಜಮೀನೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ನಂತರ ಅಲ್ಲಿ 6 ಜನರು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಈ ಆರು ಆರೋಪಿಗಳ ಪೈಕಿ ಐವರು 19 ರಿಂದ 33 ವರ್ಷ ಒಳಗಿನವರಾಗಿದ್ದಾರೆ. ಮತ್ತೊಬ್ಬ ಅಪ್ರಾಪ್ತನಾಗಿದ್ದಾನೆ. ಘಟನೆಗೆ ಸಂಬಂಧಿಸಿ ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನೆಲ್ಲರನ್ನು ಬಂಧಿಸಲಾಗಿದೆ.

    POLICE JEEP

    ಬಂಧನದ ನಂತರ, ಆರು ಜನರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈ ಸಂದರ್ಭದಲ್ಲಿ ಅವರನ್ನು ಆ. 17ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾರಿನಿಂದ ಆಟೋಗೆ ಡಿಕ್ಕಿ ಹೊಡೆದ ಅಪ್ರಾಪ್ತ- ಊಟ ಮಾಡಿ ಕುಳಿತಿದ್ದ ಚಾಲಕ ಸ್ಥಳದಲ್ಲೇ ದುರ್ಮರಣ

    ಕಾರಿನಿಂದ ಆಟೋಗೆ ಡಿಕ್ಕಿ ಹೊಡೆದ ಅಪ್ರಾಪ್ತ- ಊಟ ಮಾಡಿ ಕುಳಿತಿದ್ದ ಚಾಲಕ ಸ್ಥಳದಲ್ಲೇ ದುರ್ಮರಣ

    ಬೆಂಗಳೂರು: 15 ವರ್ಷದ ಅಪ್ರಾಪ್ತ ಬಾಲಕ ಕಾರು ಓಡಿಸುತ್ತಾ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆಟೋ ಚಾಲಕ ಸಾವನ್ನಪ್ಪಿ ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಭೂಪಸಂದ್ರ ಬಳಿ ನಡೆದಿದೆ.

    ಮಧ್ಯಾಹ್ನದ ಊಟ ಮುಗಿಸಿ ಆಟೋದಲ್ಲಿ ಕುಳಿತಿದ್ದ ಚಾಲಕ ನಾಗರಾಜ್ (47) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇಂದು ಸಂಜೆ 4 ಗಂಟೆ ವೇಳೆಯಲ್ಲಿ ಅಪಘಾತ ನಡೆದಿದ್ದು, ಸ್ವಿಫ್ಟ್ ಕಾರು ಚಲಾಯಿಸಿಕೊಂಡು ಬಂದ ಬಾಲಕ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋದಲ್ಲಿ ಕುಳಿತಿದ್ದ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದರು.

    ಇದೇ ವೇಳೆ ಮತ್ತೊಬ್ಬ ಆಟೋ ಚಾಲಕ ಕೂಡ ಆಟೋದಲ್ಲಿ ಇದ್ದರು ಎಂಬ ಮಾಹಿತಿ ಲಭಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಘಟನೆ ಕಾರಣ ಎನ್ನಲಾಗಿದೆ. ಆಟೋದಲ್ಲಿದ್ದ ಇಬ್ಬರು ಚಾಲಕರು ಕೂಡ ನಾಗಶೆಟ್ಟಿಹಳ್ಳಿ ಮೂಲವರಾಗಿದ್ದಾರೆ.

    ಕೆಎ 31 ಎಎ 3298 ಸಂಖ್ಯೆಯ ಸ್ವಿಫ್ಟ್ ಕಾರಿನಲ್ಲಿ ಬಾಲಕ ಬಂದಿದ್ದು, ಕಾರು ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ವೇಳೆ ಆಟೋ ಒಳಗೆ ಸಿಲುಕಿಕೊಂಡಿದ್ದ ಮೃತ ದೇಹವನ್ನು ಸ್ಥಳೀಯರು ಹೊರ ತೆಗೆದಿದ್ದಾರೆ. ಅಪಘಾತದ ಕುರಿತು ಮಾಹಿತಿ ಪಡೆದ ಆರ್.ಟಿ.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಐಪಿಸಿ ಸೆಕ್ಷನ್ 279, 304ಎ, 337 ಅಡಿಯಲ್ಲಿ ಆರ್.ಟಿ.ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಪ್ರಾಪ್ತ ಬಾಲಕನಿಂದ ಅಡ್ಡಾದಿಡ್ಡಿ ಜೀಪ್ ಚಾಲನೆ – ವಿದ್ಯಾರ್ಥಿನಿ ಸೇರಿ ಮೂವರಿಗೆ ಗಂಭೀರ ಗಾಯ

    ಅಪ್ರಾಪ್ತ ಬಾಲಕನಿಂದ ಅಡ್ಡಾದಿಡ್ಡಿ ಜೀಪ್ ಚಾಲನೆ – ವಿದ್ಯಾರ್ಥಿನಿ ಸೇರಿ ಮೂವರಿಗೆ ಗಂಭೀರ ಗಾಯ

    ಬೆಂಗಳೂರು: ಅಪ್ರಾಪ್ತ ಬಾಲಕನೊಬ್ಬ ಮಹೀಂದ್ರ ಜೀಪನ್ನು ಅಡ್ಡಾದಿಡ್ಡಿ ಚಾಲನೆ ಮಾಡಿದ ಪರಿಣಾಮ ಶಾಲಾ ವಿದ್ಯಾರ್ಥಿನಿ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯಾ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕಾರು ಚಲಾಯಿಸಿದ ಯುವಕ ಸ್ಥಳೀಯ ನಿವಾಸಿಯಾಗಿದ್ದು, ತನ್ನ ಇತರೇ ಇಬ್ಬರು ಗೆಳೆಯರೊಂದಿಗೆ ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಮಹೀಂದ್ರ ಥಾರ್ ಜೀಪ್ ಚಲಾಯಿಸಿಕೊಂಡು ಬಂದಿದ್ದ. ಈ ವೇಳೆ ಜೀಪನ್ನು ನಿಯಂತ್ರಿಸಲು ವಿಫಲವಾಗಿದ್ದು, ರಸ್ತೆಬದಿ ನಿಲ್ಲಿಸಿದ್ದ ಬೈಕಿಗೆ ಡಿಕ್ಕಿ ಹೊಡೆದು ನಂತರ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿದೆ. ಆ ಬಳಿಕ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಜೀಪ್ ನಿಂತಿದೆ.

    ಪುಟ್ ಪಾತ್ ಮೇಲೆ ನಡೆದುಹೋಗುತ್ತಿದ್ದ ಮಹಿಳೆಗೆ ಜೀಪ್ ಡಿಕ್ಕಿ ಹೊಡೆದಿದ್ದು, ಕ್ಷಣ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಲ್ಲಿ ಗಾಯಗೊಂಡ ಶಾಲಾ ವಿದ್ಯಾರ್ಥಿನಿ ತಂದೆಯೊಂದಿಗೆ ಶೂ ಖರೀದಿ ಮಾಡಲು ಆಗಮಿಸಿದ್ದರು. ರಾಷ್ಟ್ರೀಯ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿನಿ ಸಿದ್ಧತೆ ನಡೆಸಿದ್ದರು ಎಂಬ ಮಾಹಿತಿ ಲಭಿಸಿದೆ.

    ಕಾರು ಡಿಕ್ಕಿಯಾದ ರಭಸಕ್ಕೆ ಕಾರಿನ ಅಡಿ ಸಿಕ್ಕ ಸ್ಕೂಟರ್ ನಜ್ಜುಗುಜ್ಜಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹಾಗೂ ಕಾಮಾಕ್ಷಿಪಾಳ್ಯಾ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಜೀಪನ್ನು ಸ್ಥಳದಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

  • ಅಪ್ರಾಪ್ತನ ಜೊತೆ ಇಬ್ಬರು ಮಕ್ಕಳ ತಾಯಿ ಸೆಕ್ಸ್- ಚಪ್ಪಲಿ ಹಾರ ಹಾಕಿ ಮೆರವಣಿಗೆ

    ಅಪ್ರಾಪ್ತನ ಜೊತೆ ಇಬ್ಬರು ಮಕ್ಕಳ ತಾಯಿ ಸೆಕ್ಸ್- ಚಪ್ಪಲಿ ಹಾರ ಹಾಕಿ ಮೆರವಣಿಗೆ

    ಚಂಡೀಗಢ: ಅಪ್ರಾಪ್ತ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಕ್ಕೆ ಗ್ರಾಮಸ್ಥರು ಇಬ್ಬರು ಮಕ್ಕಳ ತಾಯಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿಸಿದ ಘಟನೆ ಹರಿಯಾಣದ ಕರ್ನಾಲ್‍ನಲ್ಲಿ ನಡೆದಿದೆ.

    ಅಪ್ರಾಪ್ತನ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾರೆ ಎಂಬ ಆರೋಪ ಕೇಳಿ ಗ್ರಾಮಸ್ಥರು ಮೊದಲು ಇಬ್ಬರನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪಂಚಾಯ್ತಿ ಇಬ್ಬರನ್ನು ಗ್ರಾಮದಿಂದ ಹೊರ ಹೋಗಲು ಆದೇಶಿಸಿದ್ದಾರೆ. ಈ ಬಗ್ಗೆ ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಈ ಘಟನೆ ಬಗ್ಗೆ ಮೊದಲು ನಾವು ತನಿಖೆ ನಡೆಸುತ್ತೇವೆ. ಬಳಿಕ ತಪ್ಪಿತಸ್ಥರು ಯಾರು ಎಂಬುದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ. ಅಗತ್ಯವಿದ್ದರೆ, ನಾವು ಅಪ್ರಾಪ್ತ ಬಾಲಕನಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುತ್ತೇವೆ. ಅವನಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲು ನಾವು ಪ್ರಯತ್ನಿಸುತ್ತೇವೆ ಎಂದು ಡಿಎಸ್‍ಪಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾಮದ ಮುಖ್ಯಸ್ಥ, ಮಹಿಳೆ ಬಿಹಾರ್ ನಿವಾಸಿಯಾಗಿದ್ದು, ಬಾಲಕ 12ನೇ ತರಗತಿ ಓದುತ್ತಿದ್ದಾನೆ. ಈ ಘಟನೆ ಬಗ್ಗೆ ಪಂಚಾಯ್ತಿಯಲ್ಲಿ ಸಭೆ ನಡೆದಿದೆ ಎಂಬ ವಿಷಯ ತಿಳಿಯಿತು. ಆದರೆ ಅಲ್ಲಿ ಏನೂ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ಇದುವರೆಗೂ ವೈರಲ್ ವಿಡಿಯೋ ಕೂಡ ನೋಡಿಲ್ಲ. ಮಹಿಳೆಗೆ ಮದುವೆ ಆಗಿ ಮಕ್ಕಳಿದ್ದು, ಇಬ್ಬರು ಬೇರೆ ಜಾತಿಯವರು ಎಂದು ತಿಳಿಸಿದ್ದಾರೆ.

    ಅಲ್ಲದೆ ಇದನ್ನು ಬಂಜಾರಾ ಸಮುದಾಯದವರು ಮಾಡಿದ್ದಾರೆ. ಪಂಚಾಯ್ತಿ ಸದಸ್ಯರು ನನ್ನ ಮಗನಿಗೆ ಹಾಗೂ ಮಹಿಳೆಗೆ ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿದ್ದಾರೆ ಎಂದು ಬಾಲಕನ ತಂದೆ ಹೇಳುತ್ತಿದ್ದಾರೆ ಎಂದು ಗ್ರಾಮದ ಮುಖ್ಯಸ್ಥ ತಿಳಿಸಿದ್ದಾರೆ.

  • ಯುವತಿ ಸ್ನಾನ ಮಾಡುವಾಗ ವಿಡಿಯೋ- ಅಪ್ರಾಪ್ತನ ಟ್ಯಾಬ್ ಪರಿಶೀಲಿಸಿದಾಗ ಬರೋಬ್ಬರಿ 3 ಸಾವಿರ ವಿಡಿಯೋ ಪತ್ತೆ

    ಯುವತಿ ಸ್ನಾನ ಮಾಡುವಾಗ ವಿಡಿಯೋ- ಅಪ್ರಾಪ್ತನ ಟ್ಯಾಬ್ ಪರಿಶೀಲಿಸಿದಾಗ ಬರೋಬ್ಬರಿ 3 ಸಾವಿರ ವಿಡಿಯೋ ಪತ್ತೆ

    ಹೈದರಾಬಾದ್: 14 ವರ್ಷದ ಅಪ್ರಾಪ್ತನೊಬ್ಬ ಯುವತಿಯರು ಸ್ನಾನ ಮಾಡತ್ತಿರುವ ವಿಡಿಯೋ ಮಾಡಿ ಸಿಕ್ಕಿಬಿದ್ದ ಪ್ರಕರಣವೊಂದು ಮಂಗಳವಾರ ಆಂಧ್ರಪ್ರದೇಶದ ಮಾದಾಪುರದಲ್ಲಿ ನಡೆದಿದೆ.

    ಅಪ್ರಾಪ್ತ ಬಾಲಕನ ಮನೆ ಲೇಡಿಸ್ ಹಾಸ್ಟೆಲ್ ಪಕ್ಕದಲ್ಲಿದ್ದು, ಅಲ್ಲಿ ಯುವತಿಯರು ಸ್ನಾನ ಮಾಡುವಾಗ ತನ್ನ ಟ್ಯಾಬ್‍ನಲ್ಲಿ ವಿಡಿಯೋ ಮಾಡುತ್ತಿದ್ದನು. ಮಂಗಳವಾರ ಬಾಲಕ ವಿಡಿಯೋ ಮಾಡುತ್ತಿದ್ದಾಗ ಯುವತಿ ಗಮನಿಸಿದ್ದಾರೆ. ಬಳಿಕ ಹಾಸ್ಟೆಲ್‍ನಲ್ಲಿದ್ದವರಿಗೆ ಈ ವಿಷಯ ತಿಳಿಸಿ ಬಾಲಕನ ಮನೆಗೆ ಹೋಗಿ ಆತನನ್ನು ರೆಡ್‍ಹ್ಯಾಂಡಾಗಿ ಹಿಡಿದಿದ್ದಾರೆ.

    ಯುವತಿ ಬಾಲಕನನ್ನು ರೆಡ್‍ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿ ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ಟ್ಯಾಬ್ ಪರಿಶೀಲಿಸಿದ್ದಾಗ ಅದರಲ್ಲಿ ಬರೋಬ್ಬರಿ 3 ಸಾವಿರ ಯುವತಿಯರು ಸ್ನಾನ ಮಾಡುತ್ತಿರುವ ವಿಡಿಯೋಗಳು ಹಾಗೂ ಫೋಟೋಗಳು ಪತ್ತೆಯಾಗಿದೆ.

    ಬಾಲಕ 9ನೇ ತರಗತಿ ಓದುತ್ತಿದ್ದಾನೆ. ಮನೆಯ ಪಕ್ಕದಲ್ಲೇ ಹಾಸ್ಟೆಲ್‍ಯಿದ್ದು, ಬಾಲಕ ತನ್ನ ಮನೆಯ ಶೌಚಾಲಯದ ಕಿಟಕಿಯಿಂದ ಯುವತಿಯರ ಹಾಸ್ಟೆಲ್ ಶೌಚಾಲಯವನ್ನು ಇಣುಕಿ ನೋಡುತ್ತಿದ್ದನು. ಬಳಿಕ ತನ್ನ ಟ್ಯಾಬ್‍ನಲ್ಲಿ ಮಹಿಳೆಯರು ಸ್ನಾನ ಮಾಡುವ ವಿಡಿಯೋವನ್ನು ಸೆರೆ ಹಿಡಿಯುತ್ತಿದ್ದನು ಎಂದು ಮಾದಾಪುರ ಎಸಿಪಿ ಶ್ಯಾಮ್ ಪ್ರಸಾದ್ ರಾವ್ ತಿಳಿಸಿದ್ದಾರೆ.

    ಬಾಲಕನ ಟ್ಯಾಪ್ ಪರಿಶೀಲಿಸಿದ್ದಾಗ ಬರೋಬ್ಬರಿ 3,000 ಫೋಟೋ ಹಾಗೂ ವಿಡಿಯೋ ಪತ್ತೆಯಾಗಿದೆ. ಬಾಲಕನ ಟ್ಯಾಬ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 354-ಸಿ(ಮಹಿಳೆಗೆ ಗೊತ್ತಿಲ್ಲದೆ ರಹಸ್ಯವಾಗಿ ಕ್ಯಾಮೆರಾದ ಮೂಲಕ ತೆಗೆಯುವುದು) ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದೇವೆ ಎಂದು ಮಾದಾಪುರ ಡಿಸಿಪಿ ಎ. ವೆಂಕಟೇಶ್ವರ ರಾವ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿದ 10ನೇ ಕ್ಲಾಸ್ ಬಾಲಕ ಪೊಲೀಸರ ವಶಕ್ಕೆ

    ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿದ 10ನೇ ಕ್ಲಾಸ್ ಬಾಲಕ ಪೊಲೀಸರ ವಶಕ್ಕೆ

    ಮಡಿಕೇರಿ: ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ 10ನೇ ಕ್ಲಾಸ್ ಬಾಲಕನೊಬ್ಬ ವಿಡಿಯೋ ಮಾಡಿದ್ದು, ಈಗ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೊಡಗಿನ ಸೋಮವಾರಪೇಟೆಯ ಮಾದ್ರೆಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

    ಹೊಸಳ್ಳಿ ಗ್ರಾಮದ 10ನೇ ತರಗತಿ ಬಾಲಕನೊಬ್ಬ ಹಲವು ದಿನಗಳ ಹಿಂದೆ ಪಕ್ಕದ ಮನೆಯ 6ನೇ ತರಗತಿಯ ಅಪ್ರಾಪ್ತ ಬಾಲಕಿಯ ವಿಡಿಯೋ ಮಾಡಿದ್ದಾನೆ. ಭಾನುವಾರ ಬಾಲಕ ಮಾಡಿದ್ದ ವಿಡಿಯೋವನ್ನು ಪಕ್ಕದ ಮನೆಯೆ ಇನ್ನೊಬ್ಬ ಬಾಲಕ ನೋಡಿದ್ದಾನೆ. ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.

    ಪೊಲೀಸರು ಮೊದಲು ಪ್ರಕರಣ ದಾಖಲಿಸಲು ತಡ ಮಾಡಿದ್ದಾರೆ. ಇದರಿಂದ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದು, ನಂತರ ಈ ಪ್ರಕರಣ ಸಂಬಂಧ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಶನಿವಾರಸಂತೆ ಜಿಲ್ಲಾ ಆಸ್ಪತ್ರೆಯಲ್ಲಿ ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.