Tag: minor girl

  • ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    – ಹಣ್ಣು ಕೊಡುವುದಾಗಿ ಕರೆದೊಯ್ದು ಕೃತ್ಯ, ಆರೋಪಿ ಅರೆಸ್ಟ್

    ಲಕ್ನೋ: 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆ ನಿರಂತರ ಅತ್ಯಾಚಾರವೆಸಗಿದ್ದು, ಹೆರಿಗೆಯಾದ ಅರ್ಧ ಗಂಟೆಯಲ್ಲಿ ನವಜಾತ ಶಿಶು (Infant) ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ (Bareilly) ನಡೆದಿದೆ.

    ಆರೋಪಿ ರಶೀದ್ (31) ಅಪ್ರಾಪ್ತೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಆರರಿಂದ ಏಳು ತಿಂಗಳ ಹಿಂದೆ ರಶೀದ್ ಬಾಲಕಿಯನ್ನು ತನ್ನ ಮನೆಗೆ ಹಣ್ಣು ಕೊಡಿಸುವುದಾಗಿ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಅವಳನ್ನು ಹಲವು ಬಾರಿ ಬ್ಲ್ಯಾಕ್‌ಮೇಲ್ ಮಾಡಲು ವೀಡಿಯೋ ಕೂಡ ಮಾಡಿದ್ದಾನೆ ಎಂದು ಬಾಲಕಿಯ ಅಣ್ಣ ಹೇಳಿದ್ದಾನೆ. ಇದನ್ನೂ ಓದಿ: ಬಿಡಿಎ ಫ್ಲಾಟ್ / ವಿಲ್ಲಾ ಖರೀದಿಸಿ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಸುವರ್ಣಾವಕಾಶ

    ಗುರುವಾರ ಬಾಲಕಿ ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರಿಣಾಮ ಆಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪರೀಕ್ಷೆಯಲ್ಲಿ ಆಕೆ ಏಳು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಆಕೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಬಾಲಕಿ ಅದೇ ದಿನ ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳಲ್ಲೇ ಹೆರಿಗೆಯಾಗಿದ್ದು, ಅರ್ಧ ಗಂಟೆಯ ಬಳಿಕ ಮಗು ಮೃತಪಟ್ಟಿದೆ. ಇದನ್ನೂ ಓದಿ: ಚಾಮರಾಜನಗರ | ಲಾರಿ, ಕಾರು ಮೊಪೆಡ್ ನಡುವೆ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

    ಘಟನೆ ಸಂಬಂಧ ಎರಡು ಮಕ್ಕಳ ತಂದೆ ರಶೀದ್ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ನವಾಬ್‌ಗಂಜ್ ಠಾಣೆಯ ಅಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಶುಕ್ರವಾರ ರಶೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಅಲ್ಲದೇ ಆರೋಪಿಯೊಂದಿಗೆ ಹೊಂದಾಣಿಕೆಯಾಗಲು ಮಗುವಿನಿಂದ ಡಿಎನ್‌ಎ ಮಾದರಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಅರುಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

  • ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ

    ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಕಾಮಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ

    -ಮೃತ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ಪರಿಹಾರ ನೀಡುವಂತೆ ಆದೇಶ

    ಶಿವಮೊಗ್ಗ: ಅಪ್ರಾಪ್ತ ಬಾಲಕಿ (Minor Girl) ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ (Penalty) ವಿಧಿಸಿ ಶಿವಮೊಗ್ಗ (Shivamogga) ನ್ಯಾಯಾಲಯ ತೀರ್ಪು ನೀಡಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಹೆಚ್ಚುವರಿ ಸಾದಾ ಶಿಕ್ಷೆ ಅನುಭವಿಸುವಂತೆ ಹಾಗೂ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ (Court) ಆದೇಶಿಸಿದೆ.

    2020ರಲ್ಲಿ ತೀರ್ಥಹಳ್ಳಿ ತಾಲೂಕಿನ 23 ವರ್ಷದ ಯುವಕ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ್ದ. ಇದರಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಳು. ಘಟನೆಯ ಬಳಿಕ ಬಾಲಕಿ ತಂದೆ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನೂ ಓದಿ: ‘ಮೈ ಲಾರ್ಡ್’ ಹೇಳೋದು ಬಿಟ್ರೆ ನನ್ನ ಸಂಬಳದಲ್ಲಿ ಅರ್ಧ ಕೊಡ್ತೀನಿ: ಸುಪ್ರೀಂ ಜಡ್ಜ್

    ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 1.25 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೇ ಮೃತ ಬಾಲಕಿ ಕುಟುಂಬಕ್ಕೆ ಸರ್ಕಾರದಿಂದ 17 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ಚುನಾವಣಾ ಬಾಂಡ್‌ಗಳ ಕೊಡುಗೆ ಆಡಳಿತ ಪಕ್ಷಕ್ಕೆ ಹೆಚ್ಚು – ಸುಪ್ರೀಂಗೆ ಕೇಂದ್ರ ಹೇಳಿಕೆ

  • ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

    ಅಪ್ರಾಪ್ತ ಬಾಲಕಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

    ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ (Minor Girl) ಮದ್ಯ (Alcohol) ಕುಡಿಸಿ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ (Gang Rape) ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ.

    ಸಾಗರದ ಜೆ.ಪಿ.ನಗರ ನಿವಾಸಿಗಳಾದ ಶಾಬಾದ್ (26), ಅಜಯ್ (32) ಅತ್ಯಾಚಾರ ನಡೆಸಿದ ಕಿಡಿಗೇಡಿಗಳು. ಸಾಗರ ನಿವಾಸಿಯಾದ ಅಪ್ರಾಪ್ತ ಬಾಲಕಿಯನ್ನು ಆರೋಪಿಗಳು ಪ್ರವಾಸಕ್ಕೆಂದು ಜೋಗಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ್ದಾರೆ. ಮದ್ಯದ ಅಮಲಿನಲ್ಲೇ ಮನೆಗೆ ವಾಪಸ್ ಬಂದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾಳೆ. ಇದನ್ನೂ ಓದಿ: ಲೇಡಿಸ್‌ ಹಾಸ್ಟೆಲ್‌ ಮುಂದೆಯೇ ಹಸ್ತಮೈಥುನ – ವಿಕೃತ ಕಾಮಿ ಹೆಡೆಮುರಿ ಕಟ್ಟಿದ ಕೊಡಗು ಪೊಲೀಸರು

    ಘಟನೆ ಕುರಿತು ಸಾಗರ ಪಟ್ಟಣ ಠಾಣೆಯಲ್ಲಿ ಬಾಲಕಿಯ ಪೋಷಕರು ಪೋಕ್ಸೋ ಕಾಯ್ದೆ ಹಾಗೂ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದಾರೆ. ಘಟನೆ ಬಳಿಕ ಆರೋಪಿಗಳು ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಗಂಡ ಜೈಲಿಗೆ – ಮನನೊಂದು ಪತ್ನಿ ಆತ್ಮಹತ್ಯೆ; ಜೈಲಲ್ಲಿದ್ದ ಪತಿ ಹೃದಯಾಘಾತದಿಂದ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

    ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

    – ಜೈಪುರ ವಿಮಾನ ನಿಲ್ದಾಣದಲ್ಲಿ ಹೈಡ್ರಾಮಾ

    ಜೈಪುರ: ಇನ್ಸ್ಟಾಗ್ರಾಂ (Instagram) ಸ್ನೇಹಿತನನ್ನು ಭೇಟಿ ಮಾಡುವ ಸಲುವಾಗಿ ಪಾಸ್‌ಪೋರ್ಟ್ (Passport) ಮತ್ತು ವೀಸಾ (Visa) ಇಲ್ಲದೆ ಪಾಕಿಸ್ತಾನಕ್ಕೆ (Pakistan) ತೆರಳಲು ಮುಂದಾಗಿದ್ದ 16 ವರ್ಷದ ಅಪ್ರಾಪ್ತ (Minor) ಬಾಲಕಿಯನ್ನು ಜೈಪುರ (Jaipur) ವಿಮಾನ ನಿಲ್ದಾಣದಲ್ಲಿ (Airport) ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆದ ಬಾಲಕಿಯನ್ನು ಗಜಲ್ ಪರ್ವಿನ್ ಎಂದು ಗುರುತಿಸಲಾಗಿದೆ. ಈಕೆ ರಾಜಸ್ಥಾನದ ಸಿಕಾರ್‌ನ ಶ್ರೀಮಧೋಪುರದ ನಿವಾಸಿಯಾಗಿದ್ದು, ಪಾಕಿಸ್ತಾನಕ್ಕೆ ತೆರಳಲು ಬೇಕಾದ ಅಗತ್ಯ ದಾಖಲೆಗಳನ್ನು ಆಕೆ ಹೊಂದಿರಲಿಲ್ಲ ಎಂದು ವಿಮಾನ ನಿಲ್ದಾಣದ ಠಾಣಾಧಿಕಾರಿ ದಿಗ್ಪಾಲ್ ಸಿಂಗ್ ಹೇಳಿದ್ದಾರೆ. ತನ್ನ ಇನ್ಸ್ಟಾಗ್ರಾಂ ಸ್ನೇಹಿತನನ್ನು ಭೇಟಿ ಮಾಡಲು ಪಾಕಿಸ್ತಾನದ ಲಾಹೋರ್‌ಗೆ ತೆರಳಲು ನಿರ್ಧರಿಸಿ ವಿಮಾನ ನಿಲ್ದಾಣಕ್ಕೆ ಬಂದಿರುವುದಾಗಿ ವಿಚಾರಣೆ ವೇಳೆ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಹಸ್ತಕ್ಷೇಪ: ಮಾಜಿ ಸೇನಾ ಮುಖ್ಯಸ್ಥ

    ಈ ಕುರಿತು ಆಕೆಯ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಆಕೆಯನ್ನು ಅವರಿಗೆ ಒಪ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನಕ್ಕೆ ಟಿಕೆಟ್ ಪಡೆಯುವ ಸಲುವಾಗಿ ಈಕೆ ಸುಳ್ಳು ಕಥೆಯೊಂದನ್ನು ಹೆಣೆದಿದ್ದು, ವಿಚಾರಣೆ ವೇಳೆ ನಿಜಾಂಶ ಹೊರಬಿದ್ದಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರ ರಕ್ಷಣೆ

    ವಿಮಾನ ನಿಲ್ದಾಣಕ್ಕೆ ಇಬ್ಬರು ಹುಡುಗರೊಂದಿಗೆ ಬಂದ ಬಾಲಕಿ ತಾನು ಪಾಕಿಸ್ತಾನದ ನಿವಾಸಿಯಾಗಿದ್ದು, ಮೂರು ವರ್ಷಗಳ ಹಿಂದೆ ಚಿಕ್ಕಮ್ಮನೊಂದಿಗೆ ಭಾರತಕ್ಕೆ ಬಂದು ಸಿಕಾರ್‌ನ ಶ್ರೀಮಧೋಪುರದಲ್ಲಿ ನೆಲೆಸಿದ್ದೆ. ಇದೀಗ ಆಕೆಯ ಜೊತೆ ಹೊಂದಾಣಿಕೆಯಾಗದೆ ವಾಪಸ್ ಪಾಕಿಸ್ತಾನಕ್ಕೆ ತೆರಳುವ ಸಲುವಾಗಿ ಇಲ್ಲಿಗೆ ಬಂದಿದ್ದೇನೆ ಎಂದು ವಿಮಾನ ನಿಲ್ದಾಣದಲ್ಲಿ ಬಾಲಕಿ ಹೈಡ್ರಾಮ ಮಾಡಿದ್ದಳು. ಆದರೆ ಆಕೆಯ ಬಳಿ ಯಾವುದೇ ವೀಸಾ ಮತ್ತು ಪಾಸ್‌ಪೋರ್ಟ್ ಇಲ್ಲದ ಹಿನ್ನೆಲೆ ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಇದನ್ನೂ ಓದಿ: ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಕಲಬುರಗಿಯಲ್ಲಿ ನಾಲ್ವರು ಅಪ್ರಾಪ್ತರಿಂದಲೇ 9ರ ಬಾಲಕಿ ಮೇಲೆ ಅತ್ಯಾಚಾರ

    ಕಲಬುರಗಿ: ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ (Rape) ಆಘಾತಕಾರಿ ಘಟನೆ ಕಲಬುರಗಿ (Kalaburagi) ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್‌ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗರ್ಲ್‌ಫ್ರೆಂಡ್ಸ್‌ ನಿಭಾಯಿಸಿ, ಶೋಕಿ ಮಾಡಲು ಹೈಟೆಕ್ ಬೈಕ್‌ಗಳ ಕಳ್ಳತನ

    ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಟೆರರಿಸ್ಟ್‌ಗಳು ಬಾಂಬ್ ಇಟ್ಟಿದ್ದಾರೆ – ಪೊಲೀಸ್ರ ನಿದ್ದೆಗೆಡಿಸಿದ ಫೇಕ್‌ ಕಾಲ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್

    ಅಪ್ರಾಪ್ತೆಯ ಅತ್ಯಾಚಾರ- ಕೃತ್ಯದ ವೇಳೆ ಬಳಸಿದ್ದ ಶರ್ಟ್ ಬಣ್ಣದಿಂದ ಆರೋಪಿ ಅರೆಸ್ಟ್

    ನವದೆಹಲಿ: 16 ವರ್ಷದ ಅಪ್ರಾಪ್ತ ಬಾಲಕಿಯ (Minor girl) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 27 ವರ್ಷದ ಯುವಕನನ್ನು ಆತನ ಶರ್ಟ್ ಸುಳಿವಿನಿಂದ ಬಂಧಿಸಿದ (Arrest) ಪ್ರಕರಣ ದೆಹಲಿಯಲ್ಲಿ (Delhi) ನಡೆದಿದೆ. ಆರೋಪಿಯನ್ನು ಮೋನು ಎಂದು ಗುರುತಿಸಲಾಗಿದೆ. ಕೃತ್ಯ ಎಸಗುವಾಗ ಧರಿಸಿದ್ದ ಹಳದಿ ಬಣ್ಣದ ಶರ್ಟ್ ನಿಂದ ಆರೋಪಿ ಸಿಕ್ಕಿಬಿದ್ದಿದ್ದಾನೆ.

    ಬಾಲಕಿಯ ಪೋಷಕರು ಶಾಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ (Contractual labourers) ಕೆಲಸ ಮಾಡುತ್ತಿದ್ದರು. ಅವರ ಕುಟುಂಬ ಶಾಲೆಯ ಒಂದು ಕೊಠಡಿಯಲ್ಲಿ ಉಳಿದುಕೊಂಡಿತ್ತು. ಕೆಲವು ದಿನಗಳಿಂದ ಶಾಲೆಗೆ ರಜೆ ಘೋಷಿಸಲಾಗಿತ್ತು. ಬಾಲಕಿಯ ಪೋಷಕರು ವೇತನ ಪಡೆಯಲು ಮಂಗಳವಾರ ತೆರಳಿದ್ದರು. ಈ ವೇಳೆ ಸಂತ್ರಸ್ತೆ ಮತ್ತು ಆಕೆಯ 18 ವರ್ಷದ ಸಹೋದರಿ ಇಬ್ಬರೇ ಮನೆಯಲ್ಲಿದ್ದರು. ಇದನ್ನು ಗಮನಿಸಿದ ಆರೋಪಿ ಮನೆಗೆ ನುಗ್ಗಿದ್ದ. ಇದನ್ನೂ ಓದಿ: ರಥಕ್ಕೆ ಕಳಸ ಕಟ್ಟುತ್ತಿದ್ದಾಗ ಆಯಾತಪ್ಪಿ ಬಿದ್ದು ವ್ಯಕ್ತಿ ಸಾವು – ಜಾತ್ರೆ ಮುಂದೂಡಿದ ಗ್ರಾಮಸ್ಥರು

    CRIME

    ಬೆಳಗ್ಗೆ 11.30 ರ ಸುಮಾರಿಗೆ ಆರೋಪಿ ನುಗ್ಗಿ ಬಾಲಕಿಯ ಮನೆಯನ್ನು ದರೋಡೆ (Robbery) ಮಾಡಿದ್ದಾನೆ. ಬಳಿಕ ಅಡುಗೆ ಮನೆಯಿಂದ ಚಾಕುವನ್ನು ಎತ್ತಿಕೊಂಡು 16 ವರ್ಷದ ಅಪ್ರಾಪ್ತ ಬಾಲಕಿಗೆ ಬೆದರಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಎಫ್‍ಐಆರ್ (FIR) ದಾಖಲಿಸಿ ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಆರೋಪಿ ಹಳದಿ ಶರ್ಟ್ ಧರಿಸಿದ್ದಾನೆ ಎಂದು ಅಪ್ರಾಪ್ತ ಬಾಲಕಿ ತಿಳಿಸಿದ್ದಾಳೆ. ಸುತ್ತಮತ್ತಲಿನ ಸಿಸಿಟಿವಿ ಪರಿಶೀಲಿಸಿದಾಗ ಹಳದಿ ಶರ್ಟ್‍ನಲ್ಲಿ ಆರೋಪಿಯ ಮಸುಕಾದ ಚಿತ್ರ ಕಂಡುಬಂದಿದೆ. ಇದರ ಆಧಾರದ ಮೇಲೆ ಸಂತ್ರಸ್ತೆ ಆರೋಪಿಯನ್ನು ಗುರುತಿಸಿದ್ದು ಬಂಧನಕ್ಕೆ ನೆರವಾಗಿದೆ. ಇದನ್ನೂ ಓದಿ: ಟ್ರ್ಯಾಕ್ಟರ್-ಟೆಂಪೋ ನಡುವೆ ಡಿಕ್ಕಿ – ತಂದೆ, ಮೂವರು ಮಕ್ಕಳ ದುರ್ಮರಣ

  • ಅತ್ಯಾಚಾರಗೈದು ಬಾಲಕಿಯ ಕೊಲೆ- ಕಾಮುಕನಿಗೆ ಗಲ್ಲುಶಿಕ್ಷೆ

    ಅತ್ಯಾಚಾರಗೈದು ಬಾಲಕಿಯ ಕೊಲೆ- ಕಾಮುಕನಿಗೆ ಗಲ್ಲುಶಿಕ್ಷೆ

    ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ್ದ ಪ್ರಕರಣದ (Rape And Murder) ಅಪರಾಧಿಗೆ ವಿಶೇಷ ನ್ಯಾಯಾಲಯ (Court) ಮರಣದಂಡನೆ (Death Sentence) ವಿಧಿಸಿದೆ.

    ವ್ಯಕ್ತಿಯು 9 ವರ್ಷದ ಬಾಲಕಿಯ (Minor Girl) ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ.

    ಗಾಜಿಯಾಬಾದ್ ಪೋಕ್ಸೋ ನ್ಯಾಯಾಲಯವು ( Ghaziabad POCSO Court) ಶಿಕ್ಷೆಯನ್ನು ಪ್ರಕಟಿಸಿದೆ. ಘಟನೆ ನಡೆದ ಸುಮಾರು 6 ತಿಂಗಳ ನಂತರ ನ್ಯಾಯಾಲಯವು ಆರೋಪಿಗಳಿಗೆ ಐಪಿಸಿ ಸೆಕ್ಷನ್ 302 (ಮರಣದಂಡನೆ), 363 (ಅಪಹರಣ) ಮತ್ತು 376 (ಅತ್ಯಾಚಾರ) ರ ಅಡಿಯಲ್ಲಿ ಶಿಕ್ಷೆ ವಿಧಿಸಿದೆ ಎಂದು ಗಾಜಿಯಾಬಾದ್ ಗ್ರಾಮಂತರದ ಡಿಸಿಪಿ ರವಿ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: 20 ವರ್ಷದ ಯುವಕನನ್ನು 100ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದು ಪೊದೆಗೆ ಎಸೆದ!

    2022ರ ಆ. 18ರಂದು ಮೋದಿನಗರ ಪ್ರದೇಶದ ಹಳ್ಳಿಯೊಂದರಲ್ಲಿ ಅಪ್ರಾಪ್ತ ಬಾಲಕಿಯು ಶವವಾಗಿ ಪತ್ತೆಯಾಗಿದ್ದಳು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೊಲೀಸರು ಅದೇ ಗ್ರಾಮದ ವ್ಯಕ್ತಿಯನ್ನು ಬಂಧಿಸಿದ್ದರು. ಇದನ್ನೂ ಓದಿ: 8 ವರ್ಷದ ಮಗ, ಪತ್ನಿಯನ್ನು ಹತ್ಯೆಗೈದು, ತಾನು ಆತ್ಮಹತ್ಯೆಗೆ ಶರಣಾದ ಟೆಕ್ಕಿ

  • ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ

    ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ

    ರಾಮನಗರ: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯ (Minor Girl) ಮೇಲೆ ಆ್ಯಸಿಡ್ ದಾಳಿ (Acid Attack) ನಡೆಸಿದ ಘಟನೆ ಕನಕಪುರದ (Kanakapura) ಬೈಪಾಸ್ ರಸ್ತೆಯ ನಾರಾಯಣಪ್ಪ ಕೆರೆ ಬಳಿ ನಡೆದಿದೆ.

    ಕನಕಪುರದ ಕುರುಪೇಟೆ ನಿವಾಸಿ ಸುಮಂತ್ ಅಲಿಯಾಸ್ ಅಪ್ಪು ಎಂಬಾತ 17 ವರ್ಷದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಅಪ್ರಾಪ್ತೆಯ ಬಳಿ ಮಾತನಾಡುವ ಬಾ ಎಂದು ಕರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿ ತಮ್ಮನ ಜೊತೆ ಬೈಪಾಸ್ ರಸ್ತೆಗೆ ಬಂದಿದ್ದಳು. ಈ ವೇಳೆ ಸುಮಂತ್ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾನೆ. ಆದರೆ ಸುಮಂತ್ ಪ್ರೀತಿಯನ್ನು ಯುವತಿ ನಿರಾಕರಿಸಿದ್ದಾಳೆ.

    ಅಷ್ಟೇ ಅಲ್ಲದೇ ಸುಮಂತ್ ಈ ಹಿಂದೆಯೂ ಹಲವು ಬಾರಿ ಪ್ರೀತಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸುಮಂತ್ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಇದಾದ ಬಳಿಕ ಸುಮಂತ್ ಬೈಕ್‍ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಆಮ್ ಆದ್ಮಿಯಿಂದ ತುರುವೇಕೆರೆಯಲ್ಲಿ ಟೆನ್ನಿಸ್ ಕೃಷ್ಣ ಸ್ಪರ್ಧೆ

    ಯುವತಿಯ ಮುಖಕ್ಕೆ ಆ್ಯಸಿಡ್ ಎರಚಿದ್ದರಿಂದ ಯುವತಿಯ ಎಡಗಣ್ಣು ಹಾಗೂ ಮುಖಕ್ಕೆ ಗಾಯಗಳಾಗಿದೆ. ಕೂಡಲೇ ಯುವತಿಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು, ಬಳಿಕ ಬೆಂಗಳೂರಿನ ನಿಮ್ಹಾನ್ಸ್‌ಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ವೇಳೆ ಕಿರಿಕ್ – ಇಬ್ಬರ ಹತ್ಯೆಯಲ್ಲಿ ಅಂತ್ಯ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೈ ಕಾಲುಗಳನ್ನು ಕಟ್ಟಿಹಾಕಿ 14ರ ಬಾಲಕಿಯ ಮೇಲೆ ಗ್ಯಾಂಗ್ ರೇಪ್

    ಕೈ ಕಾಲುಗಳನ್ನು ಕಟ್ಟಿಹಾಕಿ 14ರ ಬಾಲಕಿಯ ಮೇಲೆ ಗ್ಯಾಂಗ್ ರೇಪ್

    ದಿಸ್ಪೂರ್: ಅಪ್ರಾಪ್ತ ಬಾಲಕಿಯ (Minor Girl) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ.

    ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಬಂಧಿತ ಆರೋಪಿಗಳು. ಅಸ್ಸಾಂನ ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ಎಸಗಿದ್ದಾರೆ. ಅಷ್ಟೇ ಅಲ್ಲದೇ ಆಕೆಯ ಕೈ ಹಾಗೂ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು ಎಂದು ಶಂಕಿಸಲಾಗಿದೆ.

    ಅಸ್ಸಾಂನ ದಿಬ್ರುಗಢದ ಅಥಾಬರಿ ಚಹಾ ತೋಟದ ಬಳಿ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಫೆ. 3ರಿಂದ ಆಕೆ ನಾಪತ್ತೆ ಆಗಿದ್ದಳು. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇವಾಲಯದ 12 ವಿಗ್ರಹಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

    ಘಟನೆಗೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ 2012ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಇದನ್ನೂ ಓದಿ: ಭವಾನಿ ರೇವಣ್ಣ ಸ್ಪರ್ಧೆ ಮಾಡೋದನ್ನು ಪಕ್ಷದ ವರಿಷ್ಠರು ತೀರ್ಮಾನ ಮಾಡ್ತಾರೆ: ನಿಖಿಲ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ಆಗ್ರಹ

    ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ಆಗ್ರಹ

    ಹೈದರಾಬಾದ್: ಮರ್ಸಿಡಿಸ್ ಕಾರಿನಲ್ಲಿ ಅಪ್ರಾಪ್ತೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಚಾರವೆಸಗಿರುವ ಘಟನೆ ಮೇ 28 ರಂದು ಹೈದರಾಬಾದ್‍ನಲ್ಲಿ ನಡೆದಿತ್ತು. ಘಟನೆಯಲ್ಲಿ ಶಾಸಕರೊಬ್ಬರ ಪುತ್ರನ ಕೈವಾಡವಿದ್ದು, ಪ್ರಕರಣದ ಐವರು ಆರೋಪಿಗಳು ಅಪ್ರಾಪ್ತರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

    police (1)

    ಎಫ್‍ಐಆರ್‌ನ ಪ್ರಕಾರ, ಆರೋಪಿಯು ತನ್ನ ಮಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆಕೆಯ ಕುತ್ತಿಗೆಗೆ ಗಾಯಗಳನ್ನು ಕೂಡ ಮಾಡಿದ್ದಾನೆ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಇದೀಗ ಪ್ರಕರಣವನ್ನು ಬದಲಾಯಿಸಿ ಐಪಿಸಿಯ ಸೆಕ್ಷನ್ 376 (ಸಾಮೂಹಿಕ ಅತ್ಯಾಚಾರ) ಎಂದು ಸೇರಿಸಿದ್ದಾರೆ. ಇದನ್ನೂ ಓದಿ: ಮಾರುವೇಶದಲ್ಲಿ ಪೊಲೀಸರ ದಾಳಿ – 400 ಕೆ.ಜಿ ದನದ ಮಾಂಸ ವಶ

    ಶಾಸಕರ ಪುತ್ರ ಮತ್ತು ಅಲ್ಪಸಂಖ್ಯಾತ ಮಂಡಳಿಯ ಅಧ್ಯಕ್ಷರು ಪಾರ್ಟಿಯಲ್ಲಿ ಬಾಲಕಿಯ ಜೊತೆಗಿದ್ದರು. ಅದರಲ್ಲಿ ಒಬ್ಬ ಅಪ್ರಾಪ್ತ ಆರೋಪಿಯನ್ನು ಮಾತ್ರ ಗುರುತಿಸಲು ಮತ್ತು ಹೆಸರಿಸಲು ಸಾಧ್ಯವಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಘಟನೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ದೌರ್ಜನ್ಯ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು, ತನಿಖೆಯು ಇನ್ನೂ ಪ್ರಗತಿಯಲ್ಲಿದೆ.

    ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಅಪರಾಧದ ಐವರು ಅಪರಾಧಿಗಳಲ್ಲಿ ಒಬ್ಬ ವ್ಯಕ್ತಿ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಂಐಎಂ) ಶಾಸಕರ ಮಗನಾಗಿದ್ದು, ಮತ್ತೋರ್ವ ಅಲ್ಪಸಂಖ್ಯಾತ ಅಧ್ಯಕ್ಷರ ಮಗ ಎಂದು ಆರೋಪಿಸಲಾಗಿದೆ ಎಂದು ತೆಲಂಗಾಣ ಬಿಜೆಪಿ ಹೇಳಿದೆ.

    ಸಂತ್ರಸ್ತೆಯ ಪೋಷಕರು ಕ್ರಿಮಿನಲ್ ದೂರು ನೀಡಿದ್ದರೂ ಹೈದರಾಬಾದ್ ಪೊಲೀಸರು ಇನ್ನೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ನಿಧಾನಗತಿಯ ಕ್ರಮ ಕೈಗೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದನ್ನೂ ಓದಿ: ಹಸು ಜೊತೆಗೆ ಸೆಕ್ಸ್ – ವಿಕೃತ ಕಾಮಿ ಅರೆಸ್ಟ್

    ಈ ಪ್ರಕರಣದಲ್ಲಿ ಬಂಧಿಸಲು ಪೊಲೀಸರು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಅಥವಾ ಸಿಎಂ ಕೆಸಿಆರ್ ಅವರ ಅನುಮತಿಗಾಗಿ ಕಾಯುತ್ತಿದ್ದಾರೆಯೇ ಎಂದು ನಾವು ಆಶ್ಚರ್ಯ ಪಡುತ್ತಿದ್ದೇವೆ. ಹಗಲು ಹೊತ್ತಿನಲ್ಲಿ ಹ್ಯಾಕಿಂಗ್‍ಗಳು, ಅಂತರ ಧರ್ಮೀಯ ಕೊಲೆಗಳು ಮತ್ತು ಅತ್ಯಾಚಾರಗಳಂತಹ ಭಯಾನಕ ಅಪರಾಧಗಳ ಸರಣಿಗಳು ತೆಲಂಗಾಣವನ್ನು ಕಳಪೆ ಬೆಳಕಿನತ್ತ ಪ್ರದರ್ಶಿಸುತ್ತಿವೆ. ರಾಜ್ಯದಲ್ಲಿ ಕಾನೂನಿನ ಭಯ ತಳಮಟ್ಟದಲ್ಲಿ ಕಂಡುಬರುತ್ತಿದೆ ಎಂದು ತೆಲಂಗಾಣ ಬಿಜೆಪಿಯ ಮುಖ್ಯ ವಕ್ತಾರ ಕೃಷ್ಣ ಸಾಗರ್ ರಾವ್ ಹೇಳಿದ್ದಾರೆ.

    ಪ್ರಕರಣದ ಎಲ್ಲ ಐವರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.