Tag: minor girl

  • ಗೆಳತಿಯ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಕ್ಕೆ ಮದ್ವೆಯಾಗುವಂತೆ ದುಂಬಾಲು

    ಗೆಳತಿಯ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಕ್ಕೆ ಮದ್ವೆಯಾಗುವಂತೆ ದುಂಬಾಲು

    – ಮನನೊಂದ ಯುವಕ ಆತ್ಮಹತ್ಯೆಗೆ ಶರಣು

    ಚಿತ್ರದುರ್ಗ: ಅಪ್ರಾಪ್ತ ಮಗಳ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಯುವಕನಿಗೆ ಪೋಷಕರು ಬೆದರಿಕೆ ಹಾಕಿ, ಮದುವೆಯಾಗುವಂತೆ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ತಾಲೂಕಿನ ಆಯಿತೋಳು ಗ್ರಾಮದಲ್ಲಿ ನಡೆದಿದೆ.

    ಆಯಿತೋಳು ಗ್ರಾಮದ ಪ್ರಹ್ಲಾದಪ್ಪ ಅವರ ಮಗ ಅಭಿಷೇಕ್ ಆತ್ಮಹತ್ಯೆಗೆ ಶರಣಾದ ಯುವಕ. ಅಭಿಷೇಕ್ ತನ್ನ ಸ್ನೇಹಿತರೊಂದಿಗೆ ಡಿಸೆಂಬರ್ 27ರಂದು ಗಂಜಿಗಟ್ಟೆ ಬೆಟ್ಟದಲ್ಲಿರುವ ಶ್ರೀರಂಗನಾಥಸ್ವಾಮಿ ದೇಗುಲದ ಬಳಿ ಬಾಲ್ಯದ ಗೆಳತಿಯ ಹುಟ್ಟುಹಬ್ಬದ ಪಾರ್ಟಿಗೆ ತೆರಳಿದ್ದ. ಆಗ ಇಲ್ಲ ಸಲ್ಲದ ಅನುಮಾನದಿಂದ ದಿಢೀರ್ ಸ್ಥಳಕ್ಕೆ ಧಾವಿಸಿದ ಅಪ್ರಾಪ್ತ ಬಾಲಕಿಯ ತಂದೆ ಹಾಗೂ ಮಾವ ಸೇರಿ ಅಭಿಷೇಕ್‍ಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಅಭಿಷೇಕ್‍ನ ಸ್ನೇಹಿತ ಆಟೋ ಚಾಲಕ ಶ್ರೀಧರ್ ಹಾಗೂ ತಂದೆ ಪ್ರಹ್ಲಾದಪ್ಪ ಅವರನ್ನು ಎಳೆದು ತಂದು ಮೂರು ದಿನಗಳ ಕಾಲ ಮನೆಯೊಂದರಲ್ಲಿ ಆಟೋ ಸಹಿತ ಕೂಡಿ ಹಾಕಿದ್ದರು.

    ನೀವು ಪದೇ ಪದೇ ನಮ್ಮ ಮಗಳನ್ನು ಆಟೋ, ಬೈಕ್‍ಲ್ಲಿ ಕೂರಿಸಿಕೊಂಡು ಎಲ್ಲೋಲ್ಲೋ ಸುತ್ತಾಡಿದ್ದೀರ. ಈಗ ಅವಳನ್ನು ಯಾರು ಮದುವೆಯಾಗುತ್ತಾರೆ. ಹೀಗಾಗಿ ಅಭಿಷೇಕ್ ಜೊತೆಗೆ ಆಕೆಯ ಮದುವೆಯಾಗಬೇಕು ಎಂದು ಒತ್ತಾಯಿಸಿ, ಹಲ್ಲೆ ನಡೆಸಿದ್ದರು. ಜೊತೆಗೆ ಕೊಠಡಿಯೊಂದರಲ್ಲಿ ಬಂಧಿಸಿಟ್ಟಿದ್ದ ಮೂವರಿಗೂ ಮನಬಂದಂತೆ ಥಳಿಸಿ, ಕಿರುಕುಳ ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಅಪ್ರಾಪ್ತೆಯ ತಂದೆ ನೀಡಿದ ಕಿರುಕುಳ ತಡೆಯಲಾಗದೇ ಅಭಿಷೇಕ್ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಮೂವರನ್ನು ಬಿಟ್ಟು ಕಳುಹಿಸಿದ್ದರು. ಆದರೆ ಇಷ್ಟಕ್ಕೆ ಸುಮ್ಮನಾಗದ ಬಾಲಕಿಯ ತಂದೆ ಹಾಗೂ ಸಂಬಂಧಿಕರು, ಅಭಿಷೇಕ್ ಮದುವೆಯಾಗದಿದ್ದರೆ ಜೀವಂತವಾಗಿ ಬಿಡುವುದಿಲ್ಲವೆಂದು ಪ್ರಾಣ ಬೆದರಿಕೆ ಹಾಕಿದ್ದರು. ಹೀಗಾಗಿ ಈ ಅವಮಾನ ಹಾಗೂ ಪ್ರಾಣ ಬೆದರಿಕೆಯನ್ನು ಸಹಿಸಲಾಗದ ಅಭಿಷೇಕ್ ಗ್ರಾಮದ ಹೊರವಲಯದಲ್ಲಿ ಡಿಸೆಂಬರ್ 30ರಂದು ನೇಣಿಗೆ ಶರಣಾಗಿದ್ದಾನೆ.

    ಮೃತ ಅಭಿಷೇಕ್ ಸರ್ಕಾರಿ ಕಲಾ ಕಾಲೇಜಿನಲ್ಲಿ ಪ್ರಥಮ ಬಿಎ ಓದುತ್ತಿದ್ದು, ಬಾಲಕಿ ಸಹ ಅಪ್ರಾಪ್ತಳಾಗಿದ್ದಾಳೆ. ಹೀಗಾಗಿ ಮದುವೆ ಮಾಡಿಕೊಳ್ಳುವುದಕ್ಕೆ ಆಗಲ್ಲ ಎಂದಾಗ ಬಾಲಕಿಯ ಮಾವ ಹಾಗೂ ತಂದೆ ಇಲ್ಲ ಸಲ್ಲದ ಆರೋಪವನ್ನು ಅಭಿಷೇಕ್ ಮೇಲೆ ಹೋರಿಸಿದ್ದರು. ಪೊಲೀಸರಿಗೆ ದೂರು ನೀಡಿದರೆ, ತಾವೂ ದೂರು ನೀಡುವುದಾಗಿ ಬೆದರಿಸಿದ್ದರು. ಹೀಗಾಗಿ ಅವರ ಕಿರುಕುಳ ಸಹಿಸಲಾಗದೇ ಅಭಿಷೇಕ್ ಸಾವಿಗೀಡಾಗಿದ್ದಾನೆ ಎಂದು ಮೃತನ ಸಹೋದರ ಮಹೇಶ್ ಆರೋಪಿಸಿದ್ದಾರೆ.

    ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ಅಭಿಷೇಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

  • ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ಲಕ್ನೋ: ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೇ ಅತ್ಯಾಚಾರಗೊಂಡಿದ್ದ ಅಪ್ರಾಪ್ತ ಮಗಳನ್ನು ತಂದೆಯೋರ್ವ ಬೆನ್ನಿನ ಮೇಲೆ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಮಾರ್ಹೆರಾ ಪ್ರದೇಶದಲ್ಲಿ ನಡೆದಿದೆ.

    ಡಿಸೆಂಬರ್ 14 ರಂದು ಅತ್ಯಾಚಾರವಾದ ಮಗಳನ್ನು ವೈದ್ಯಕೀಯ ತಪಾಸಣೆಗೆಂದು ಕರೆದುಕೊಂಡ ಬಂದ ತಂದೆಯೋರ್ವ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೋತ್ತುಕೊಂಡು ಹೋಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಡಿ.14 ರಂದು ತನ್ನ ಮನೆಯಲ್ಲಿದ್ದ 15 ವರ್ಷದ ಬಾಲಕಿಯನ್ನು ಆಕೆಯ ಮನೆಯ ಪಕ್ಕದಲ್ಲಿ ವಾಸವಿದ್ದ 19 ವರ್ಷದ ಯುವಕ ಅಂಕಿತ್ ಯಾದವ್ ಮನೆಯಿಂದ ಎಳೆದುಕೊಂಡು ಹೋಗಿ ಹಲವು ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಬಾಲಕಿಯು ಆತನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾಳೆ. ಆಗ ಅವಳ ಕಾಲು ಮತ್ತು ಕೈಗೆ ಗಂಭೀರವಾದ ಗಾಯವಾಗಿದ್ದು, ನಡೆಯಲು ಆಗದ ಸ್ಥಿತಿಗೆ ತಲುಪಿದ್ದಾಳೆ.

    ಇದಾದ ನಂತರ ಬಾಲಕಿಯ ತಂದೆ ದೂರು ನೀಡಲು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಆಗ ತಂದೆ ಮತ್ತು ಬಾಲಕಿ ಹಾಗೂ ಅವರ ಜೊತೆ ಒಬ್ಬರು ಮಹಿಳಾ ಪೇದೆ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಗೆ ಬಂದ ಸಮಯದಲ್ಲಿ ನಡೆಯಲಾರದ ಮಗಳನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ವ್ಹೀಲ್ ಚೇರ್ ಅಥವಾ ಸ್ಟ್ರೆಚರ್ ಸಿಗದೇ ಇದ್ದಾಗ ತಂದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಹೋಗಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

    ಈ ಫೋಟೋವನ್ನು ಸ್ಥಳೀಯರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಈ ಫೋಟೋ ವೈರಲ್ ಆಗಿದೆ. ಹಾಗೆಯೇ ಈ ರೀತಿಯ ಘಟನೆಗಳು ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಯೋಗಿ ಅದಿತ್ಯನಾಥ್ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ನಾವು ಡಿಸೆಂಬರ್ 14 ರಂದು ದೂರು ಪಡೆದ ನಂತರ, ಆರೋಪಿಯಾದ 19 ವರ್ಷದ ಅಂಕಿತ್ ಯಾದವ್ ನನ್ನು ಬಂಧಿಸಿದ್ದೇವೆ ಹಾಗೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಆಸ್ಪತ್ರೆಯ ಅಡಳಿತ ಮಂಡಳಿಯನ್ನು ವಿಚಾರಿಸಿದಾಗ ಹಾರಿಕೆಯ ಉತ್ತರ ನೀಡಿರುವ ಅವರು, ಈ ಆಸ್ಪತ್ರೆ ಈಗ ತಾನೇ ಆರಂಭಗೊಂಡಿದೆ. ಆದ ಕಾರಣ ಇಲ್ಲಿ ಸೌಲ್ಯಭ್ಯಗಳು ಕಮ್ಮಿ, ಈ ಕಾರಣದಿಂದಲೇ ಅವರಿಗೆ ಬಾಲಕಿಯನ್ನು ಕರೆದುಕೊಂಡು ಹೋಗಲು ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

  • ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತೆಯ ರೇಪ್ ಮಾಡಿ ಕೊಲೆಗೈದ ದುರುಳ

    ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತೆಯ ರೇಪ್ ಮಾಡಿ ಕೊಲೆಗೈದ ದುರುಳ

    ಕಲಬುರಗಿ: ಚಾಕಲೇಟ್ ಕೊಡಿಸುವುದಾಗಿ 8 ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರವೆಸಗಿ, ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ನಡೆದಿದೆ.

    ಯಾಕಾಪುರ ಗ್ರಾಮದ ಯಲ್ಲಪ್ಪ(35) ಕೃತ್ಯವೆಸೆಗಿದ ಕಾಮುಕ. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ತನ್ನೊಡನೆ ಕರೆದುಕೊಂಡು ಹೋಗಿ ಕಾಮುಕ ಅತ್ಯಾಚಾರಗೈದಿದ್ದಾನೆ. ಬಳಿಕ ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿ, ಶವವನ್ನು ಗ್ರಾಮದ ಹೊರವಲಯದಲ್ಲಿ ಬಿಸಾಡಿದ್ದಾನೆ. ಸೋಮವಾರ ಮಧ್ಯಾಹ್ನ ಶಾಲೆಗೆ ಹೋಗಿದ್ದ ಬಾಲಕಿ ಮನೆಗೆ ಮರಳದಿದ್ದಾಗ ಆತಂಕಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 6ರ ಬಾಲಕಿಯನ್ನು ಅತ್ಯಾಚಾರಗೈದು ಬೆಲ್ಟ್‌ನಿಂದ ಕತ್ತು ಹಿಸುಕಿ ಕೊಂದ ಕಾಮುಕರು

    ಆದರೆ ಸಂಜೆ ಸಮಯದಲ್ಲಿ ಯಲ್ಲಪ್ಪ ಜೊತೆ ಬಾಲಕಿ ಓಡಾಡುತ್ತಿರುವದನ್ನು ಕೆಲ ಗ್ರಾಮಸ್ಥರು ನೋಡಿದ್ದು, ಸಂಶಯದ ಮೇಲೆ ಯಲ್ಲಪ್ಪನನ್ನು ಸುಲೇಪೇಠ್ ಠಾಣೆಯ ಪೊಲೀಸರು ವಿಚಾರಿಸಿದ್ದಾಗ ಆರೋಪಿ ಅಸಲಿ ಸತ್ಯವನ್ನು ಬಾಯಿಬಿಟ್ಟಿದ್ದಾನೆ. ತಾನೇ ಅತ್ಯಾಚಾರಗೈದು, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಪಶುವೈದ್ಯೆಯನ್ನು ಕೊಂದಂತೆ ನನ್ನ ಮಗನನ್ನು ಕೊಲ್ಲಿ – ಸಿಡಿದೆದ್ದ ಅತ್ಯಾಚಾರಿಯ ತಾಯಿ

    ಈ ಪ್ರಕರಣದಿಂದ ಮೃತ ಬಾಲಕಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆರೋಪಿ ವಿರುದ್ಧ ಸಿಟ್ಟಿಗೆದ್ದಿದ್ದು, ಸದ್ಯ ಇದರಿಂದ ಗ್ರಾಮದಲ್ಲಿ ಎರಡು ಕೋಮಿನ ಮಧ್ಯೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ಪೊಲೀಸರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಇಡ್ಲಿ ಆಸೆ ತೋರಿಸಿ 5ರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ

    ಹೈದರಾಬಾದ್‍ನಲ್ಲಿ ಪಶುವೈದ್ಯೆ ಮೇಲಿನ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವೇ ಆರೋಪಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಇತ್ತ ಕರ್ನಾಟಕದಲ್ಲಿಯೂ ಹೆಣ್ಣುಮಕ್ಕಳ ಮೇಲೆ ಕಾಮುಕರು ವಿಕೃತಿ ಮೆರೆಯುತ್ತಿರುವುದು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿದೆ.

  • ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್

    ಹುಟ್ಟುಹಬ್ಬ ಆಚರಣೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್

    ಚೆನ್ನೈ: ತನ್ನ ಹುಟ್ಟುಹಬ್ಬದ ಆಚರಣೆಗೆ ಹೊರಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ 6 ಜನರು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

    ತೆಲಂಗಾಣದಲ್ಲಿ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮಾಸುವ ಮುನ್ನವೇ ತಮಿಳುನಾಡಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತನ್ನ ಹುಟ್ಟುಹಬ್ಬವನ್ನು ಆಚರಿಸಲು ಪಾರ್ಕಿಗೆ ಹೋಗಿದ್ದ 11 ನೇ ತರಗತಿಯ ವಿದ್ಯಾರ್ಥಿನಿಯನ್ನು 6 ಜನ ದುಷ್ಕರ್ಮಿಗಳು ಅತ್ಯಾಚಾರ ಮಾಡಿದ್ದಾರೆ,

    ಈ ಘಟನೆ ಗುರುವಾರ ನಡೆದಿದ್ದು, ಅಂದು ತನ್ನ ಹುಟ್ಟುಹಬ್ಬ ಇದ್ದ ಕಾರಣ ಬಾಲಕಿ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬವನ್ನು ಆಚರಿಸಲು ಪಾರ್ಕ್ ಗೆ ಹೋಗಿದ್ದಾರೆ. ಪಾರ್ಟಿ ಮುಗಿಸಿ ರಾತ್ರಿ ಸುಮಾರು 9 ಗಂಟೆಗೆ ಮನೆಗೆ ವಾಪಸ್ ಬರುತ್ತಿದ್ದ ಬಾಲಕಿ ಮತ್ತು ಆಕೆಯ ಸ್ನೇಹಿತರನ್ನು ಅಡ್ಡಗಟ್ಟಿದ ಆರೋಪಿಗಳು ಆಕೆಯ ಗೆಳೆಯರನ್ನು ಥಳಿಸಿ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರಗೈದು ವಿಡಿಯೋ ಕೂಡ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಇದಾದ ನಂತರ ಮನೆಗೆ ಬಂದ ಬಾಲಕಿ ನಡೆದ ಘಟನೆಯ ಬಗ್ಗೆ ಮರುದಿನ ತನ್ನ ತಾಯಿಗೆ ವಿವರಿಸಿದ್ದಾಳೆ. ಆಗ ತಾಯಿ ಪೋಲಿಸ್ ಠಾಣೆಗೆ ದೂರು ನೀಡಿದ್ದು, ದೂರ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಇಬ್ಬರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

  • ಟ್ಯೂಷನ್ ನೆಪದಲ್ಲಿ 1ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಶಿಕ್ಷಕ

    ಟ್ಯೂಷನ್ ನೆಪದಲ್ಲಿ 1ನೇ ತರಗತಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದ ಶಿಕ್ಷಕ

    – ಶಾಲಾ ಶೌಚಾಲಯದಲ್ಲಿ ಕೃತ್ಯವೆಸೆಗಿದ
    – ಅಣ್ಣನಿಗೆ ಚಾಕಲೇಟ್ ಆಸೆ ತೋರಿಸಿ ತಂಗಿ ಮೇಲೆ ರೇಪ್

    ಲಕ್ನೋ: ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಕಾಮುಕ ಶಿಕ್ಷಕನೋರ್ವ 6 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರಗೈದ ಹೀನಾಯ ಘಟನೆ ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯಲ್ಲಿ ನಡೆದಿದೆ.

    ಬಾಂಡಾ ಜಿಲ್ಲೆಯ ಟಿಂಡ್ವಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಾಸಗಿ ಶಾಲೆಯ ಶಿಕ್ಷಕ ಕಿಶನ್ ಮಿಶ್ರಾ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಶಿಕ್ಷಕ. ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಶಾಲೆಯಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕ ಅತ್ಯಾಚಾರ ಮಾಡಿದ್ದಾನೆ. ಇದನ್ನೂ ಓದಿ:ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಶುಕ್ರವಾರ ಸಂಜೆ ಶಾಲೆ ಮುಗಿದ ಬಳಿಕ ಟ್ಯೂಷನ್ ಹೇಳಿ ಕೊಡುವ ನೆಪದಲ್ಲಿ ಬಾಲಕಿ ಹಾಗೂ ಆಕೆಯ ಅಣ್ಣನನ್ನು ಶಿಕ್ಷಕ ಶಾಲೆಯಲ್ಲಿ ಉಳಿಸಿಕೊಂಡಿದ್ದನು. ಸುಮಾರು 5 ಗಂಟೆ ವೇಳೆಗೆ ಇಬ್ಬರನ್ನು ಮನೆಗೆ ಹೋಗುವಂತೆ ಶಿಕ್ಷಕ ಹೇಳಿದ್ದಾನೆ.

    ಅಣ್ಣಾ, ತಂಗಿ ಮನೆಗೆ ತೆರಳುತ್ತಿದ್ದ ವೇಳೆ ಬಾಲಕಿಗೆ ಚಾಕಲೇಟ್ ತೆಗೆದುಕೊಂಡು ಬಾ ಎಂದು ಹೇಳಿ ಅಂಗಡಿಗೆ ಕಳುಹಿಸಿ, ಬಳಿಕ ಬಾಲಕಿಯನ್ನು ಪುಸಲಾಯಿಸಿ ಶಾಲಾ ಶೌಚಾಲಯಕ್ಕೆ ಶಿಕ್ಷಕ ಕರೆದುಕೊಂಡು ಹೋಗಿ ಆಕೆಯನ್ನು ಅತ್ಯಾಚಾರಗೈದಿದ್ದಾನೆ. ಈ ವೇಳೆ ಹೇಗೋ ಬಾಲಕಿ ಕಾಮುಕ ಶಿಕ್ಷಕನಿಂದ ತಪ್ಪಿಸಿಕೊಂಡು ಮನೆಗೆ ಸೇರಿದ್ದಳು. ಇದನ್ನೂ ಓದಿ:ಅಪ್ರಾಪ್ತೆ ಮೇಲೆ ತಂದೆಯಿಂದಲೇ ಅತ್ಯಾಚಾರ- 8 ವರ್ಷ ಬಳಿಕ ಆರೋಪಿ ಅರೆಸ್ಟ್

    ಮನೆಗೆ ಬಂದ ಬಾಲಕಿ ತಾಯಿಯ ಬಳಿ ನಡೆದ ವಿಚಾರವನ್ನು ಹೇಳಿದ್ದಾಳೆ. ಹೀಗಾಗಿ ಶನಿವಾರ ಬಾಲಕಿ ತಾಯಿ ಪೊಲೀಸರಿಗೆ ಶಿಕ್ಷಕನ ವಿರುದ್ಧ ದೂರು ಕೊಟ್ಟಿದ್ದರು. ತಾಯಿ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸದ್ಯ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯ ವೈದ್ಯಕೀಯ ಪರೀಕ್ಷೆ ನಡೆದಿದ್ದು, ವರದಿ ಬರಬೇಕಿದೆ.

  • ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಮನೆಗೆ ನುಗ್ಗಿ ಅಪ್ರಾಪ್ತೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿದ ಕಾಮುಕ

    ಲಕ್ನೋ: 16 ವರ್ಷದ ಆಪ್ರಾಪ್ತೆಯನ್ನು ನೆರೆ ಮನೆ ವ್ಯಕ್ತಿ ಅತ್ಯಾಚಾರಗೈದು, ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಸಂಭಾಲ್ ಜಿಲ್ಲೆಯ ನಖ್ಸಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಖ್ಸಾ ನಿವಾಸಿ ಝೀಷನ್ ಕೃತ್ಯವೆಸೆಗಿದ ಆರೋಪಿ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಬಾಲಕಿ ಮನೆಯ ಪಕ್ಕದಲ್ಲಿಯೇ ಆರೋಪಿ ವಾಸಿಸುತ್ತಿದ್ದನು. ಗುರುವಾರ ರಾತ್ರಿ ಬಾಲಕಿಯ ತಾಯಿ ಮತ್ತು ಸಹೋದರ ಕಾರ್ಯಕ್ರಮಕ್ಕೆ ಹೋಗಿದ್ದರು. ಹೀಗಾಗಿ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದಳು. ಇದನ್ನೂ ಓದಿ:ದಲಿತ ಯುವಕನನ್ನು ಪ್ರೀತಿಸಿದ ಮಗಳನ್ನು ಜೀವಂತ ಸುಟ್ಟ ತಾಯಿ

    ಆಗ ಆರೋಪಿ ಏಕಾಏಕಿ ಬಾಲಕಿ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸೆಗಿದ್ದಾನೆ. ಬಳಿಕ ಈ ಬಗ್ಗೆ ದೂರು ಕೊಡುವುದಾಗಿ ಆರೋಪಿಗೆ ಬಾಲಕಿ ಹೆದರಿಸಿದಾಗ, ಭಯದಿಂದ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಇದನ್ನೂ ಓದಿ:ನಾಲ್ಕರ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಮನೆಗೆ ಬೆಂಕಿ ಹಚ್ಚಿದ ಮೂರು ಮಕ್ಕಳ ತಂದೆ

    ಈ ವೇಳೆ ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಮನೆ ಬಳಿ ಬರುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ. ತಕ್ಷಣ ಬಾಲಕಿಯನ್ನು ರಕ್ಷಿಸಿದ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ರವಾನಿಸಿದರು. ಘಟನೆಯಲ್ಲಿ ಶೇ. 70ರಷ್ಟು ಬಾಲಕಿಯ ದೇಹದ ಭಾಗ ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

    ಬಾಲಕಿ ಕುಟುಂಬ ಶುಕ್ರವಾರ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಐಪಿಸಿ ಸೆಕ್ಷನ್ 376, 307, 452 ಹಾಗೂ 506ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಯನ್ನು ಶುಕ್ರವಾರ ಪೊಲೀಸರು ಕೋರ್ಟಿಗೆ ಹಾಜರುಪಡಿಸಿದ್ದು, ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಬಾಲಕಿಯನ್ನು ಮಂಚಕ್ಕೆ ಕಟ್ಟಿ 16ರ ಬಾಲಕನಿಂದ ರೇಪ್

    ಬಾಲಕಿಯನ್ನು ಮಂಚಕ್ಕೆ ಕಟ್ಟಿ 16ರ ಬಾಲಕನಿಂದ ರೇಪ್

    ಚಂಡೀಗಢ: 16 ವರ್ಷದ ಬಾಲಕ ತನ್ನ ಸೋದರ ಸಂಬಂಧಿಯನ್ನು ಮಂಚಕ್ಕೆ ಹಗ್ಗದಿಂದ ಕಟ್ಟಿ ಅತ್ಯಾಚಾರವೆಸಗಿದ ಘಟನೆ ಹರಿಯಾಣಾದ ಗುರುಗ್ರಾಮದಲ್ಲಿ ನಡೆದಿದೆ.

    ಬಾಲಕ ಗುರುವಾರ ತನ್ನ ಸೋದರ ಸಂಬಂಧಿಯ ಮೇಲೆ ಅತ್ಯಾಚಾರ ಮಾಡಿದ್ದನು. ಶುಕ್ರವಾರ 15 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಳು. ಬಳಿಕ ಶಿಕ್ಷಕರು ಆಕೆಯನ್ನು ಎಚ್ಚರಗೊಳಿಸಿ ವಿಚಾರಿಸಿದಾಗ ನಡೆದ ಘಟನೆ ಬಗ್ಗೆ ವಿವರಿಸಿದಳು.

    ಬಾಲಕಿ ಘಟನೆ ಬಗ್ಗೆ ಶಿಕ್ಷಕರಿಗೆ ಹೇಳಿದ ನಂತರ ಅವರು ಆಕೆಯ ಪೋಷಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಬಾಲಕಿಯ ತಾಯಿ ತನ್ನ ಅತ್ತಿಗೆಯ ಮಗನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಅತ್ತಿಗೆಗೆ ಹುಷಾರಿಲ್ಲದ ಕಾರಣ ಮನೆಯ ಕೆಲಸ ಮಾಡಲು ಮಹಿಳೆ ತನ್ನ ಮಗಳನ್ನು ಅವರ ಮನೆಗೆ ಕಳುಹಿಸಿದ್ದರು. ಬಾಲಕಿ ಮನೆಗೆ ಬಂದ ನಂತರ ಅತ್ತಿಗೆ ತನ್ನ ಮಗನನ್ನು ಆಕೆಯ ಬಳಿ ಬಿಟ್ಟು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು.

    ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿದ ಬಾಲಕ, ಬಾಲಕಿಯನ್ನು ಎಳೆದು ಆಕೆಯ ಕೈ, ಕಾಲುಗಳನ್ನು ಮಂಚಕ್ಕೆ ಕಟ್ಟಿ ಅತ್ಯಾಚಾರ ಮಾಡಿದ್ದಾನೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಬಾಲಕನನ್ನು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

  • 6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

    6ರ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿದ ಆರೋಪಿಗೆ ಮರಣದಂಡನೆ

    ಭುವನೇಶ್ವರ: 6 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದ ಆರೋಪಿಗೆ ಒಡಿಶಾ ವಿಶೇಷ ಪೋಸ್ಕೋ ನ್ಯಾಯಾಲಯವು ಮರಣದಂಡನೆ ವಿಧಿಸಿದೆ.

    ಕಳೆದ ವರ್ಷ ಅಪರಾಧಿ ಮುಸ್ತಾಕ್ ಒಡಿಶಾದ ಸಲಿಪುರ ಗ್ರಾಮದಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕಲ್ಲಿನಿಂದ ಜಜ್ಜಿ ಬಾಲಕಿಯನ್ನು ಕೊಲೆ ಮಾಡಿದ್ದನು. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ, ಆಕೆಯನ್ನು ಶಾಲೆಯ ಆವರಣಕ್ಕೆ ಕರೆದೊಯ್ದು ಮುಸ್ತಾಕ್ ಅತ್ಯಾಚಾರ ಮಾಡಿದ್ದನು. ಬಳಿಕ ಈ ಬಗ್ಗೆ ಬಾಲಕಿ ಯಾರಿಗಾದರೂ ಹೇಳುತ್ತಾಳೆ ಎಂಬ ಭಯದಿಂದ ಬಾಲಕಿಯ ತಲೆಯನ್ನು ಕಲ್ಲಿನಿಂದ ಜಜ್ಜಿ ಅಮಾನುಷವಾಗಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದನು.

    ಮಗಳು ಮನೆಯಲ್ಲಿ ಕಾಣದಿದ್ದಾಗ ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದಾಗ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಾಗ ಆರೋಪಿ ಮುಸ್ತಾಕ್ ಎಂಬುದು ತಿಳಿದುಬಂದು, ಆತನನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬಗ್ಗೆ ಒಡಿಶಾದ ವಿಶೇಷ ಪೋಸ್ಕೋ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಗುರುವಾರ ಆರೋಪ ಪ್ರಕರಣ ಸಾಬೀತಾಗಿದ್ದು ನ್ಯಾಯಾಧೀಶರು ಅಪರಾಧಿಗೆ ಮರಣದಂಡನೆ ವಿಧಿಸಿದ್ದಾರೆ.

    ಈ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ಮಾತನಾಡಿ, ನನ್ನ ಮಗಳ ಸಾವಿಗೆ ಕಾರಣವಾದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ನೀಡಿರುವುದು ಖುಷಿಯಾಗಿದೆ. ಇದರಿಂದ ನನ್ನ ಮಗಳ ಸಾವಿಗೆ ನ್ಯಾಯ ಸಿಕ್ಕಿದೆ, ನ್ಯಾಯಾಲಯಕ್ಕೆ ಧನ್ಯವಾದ. ಈ ತೀರ್ಪು ಅತ್ಯಾಚಾರಿಗಳಿಗೆ ಪಾಠವಾಗಲಿದೆ ಎಂದು ಹೇಳಿದ್ದಾರೆ.

    ಪೋಸ್ಕೋ ಕಾಯ್ದೆ ಅನ್ವಯ 12 ವರ್ಷದ ಒಳಗಿನ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದರೆ ಅಪರಾಧಿಗೆ ಮರಣದಂಡನೆ ಶಿಕ್ಷೆ ನೀಡಲಾಗುತ್ತದೆ. ಐಪಿಸಿ ಸೆಕ್ಷನ್ 302(ಕೊಲೆ), 363(ಅಪಹರಣ), 376ಬಿ (12 ವರ್ಷದ ಒಳಗಡೆ ಇರುವ 12 ವರ್ಷದೊಳಗಿನ ಬಾಲಕಿ ಮೇಲೆ ಅತ್ಯಾಚಾರ) ಅಡಿಯಲ್ಲಿ ಮುಸ್ತಾಕ್ ದೋಷಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದೆ. ವಾದ, ಪ್ರತಿವಾದ ಹಾಗೂ ಸಾಕ್ಷಿಯ ಆಧಾರದ ಮೇಲೆ ನ್ಯಾಯಾಲಯವು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ ಮರಣದಂಡನೆ ವಿಧಿಸಿದೆ.

  • ಗಣೇಶ ಪೂಜೆ ವೇಳೆ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಕಿರುಕುಳ

    ಗಣೇಶ ಪೂಜೆ ವೇಳೆ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಕಿರುಕುಳ

    ಭುವನೇಶ್ವರ: ಶಾಲೆಯಲ್ಲಿ ಗಣೇಶ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ 8ನೇ ತರಗತಿ ವಿದ್ಯಾರ್ಥಿನಿಗೆ ಶಾಲೆಯ ಮುಖ್ಯ ಶಿಕ್ಷಕ ಕಿರುಕುಳ ನೀಡಿರುವ ಘಟನೆ ಓಡಿಶಾದಲ್ಲಿ ನಡೆದಿದೆ.

    ಪರಾರಿಯಾಗಿರುವ ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಶಾಲೆಯಲ್ಲಿ ಗಣೇಶ ಪೂಜೆಯನ್ನು ನೆರವೇರಿಸುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸೆಪ್ಟೆಂಬರ್ 2ರಂದು ಮಧ್ಯಾಹ್ನ 2.30ರ ಸುಮಾರಿಗೆ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣೇಶನ ಪೂಜೆ ನಡೆಯುತ್ತಿತ್ತು. ಪೂಜೆಯಲ್ಲಿ ಭಾಗವಹಿಸಿದ್ದ ಮುಖ್ಯ ಶಿಕ್ಷಕ 8ನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮುಗ್ಧತೆಯನ್ನು ಬಳಸಿಕೊಂಡು ಕೆಟ್ಟದಾಗಿ ವರ್ತಿಸಿದ್ದಾನೆ. ಈ ಕುರಿತು ಗ್ರಾಮಸ್ಥರಿಗೆ ತಿಳಿಸಿದರೂ ಆರೋಪಿ ಪತ್ತೆಯಾಗಲಿಲ್ಲ. ಹೀಗಾಗಿ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿ ಮುಖ್ಯ ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ ಎಂದು ಎಸ್‍ಡಿಪಿಓ ಎಸ್.ಟಿಗ್ಗಾ ತಿಳಿಸಿದ್ದಾರೆ.

    ಆರೋಪಿ ಪರಾರಿಯಾಗಿದ್ದು, ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೋಕ್ಸೊ ಕಾಯ್ದೆಯಲ್ಲದೆ, ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಹಾಗೂ ಎಸ್‍ಸಿ, ಎಸ್‍ಟಿ ಕಾಯ್ದೆಯ ವಿಭಾಗಗಳಡಿ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

  • ಅಪ್ರಾಪ್ತೆ ಜೊತೆ ಫೇಸ್‍ಬುಕ್‍ನಲ್ಲಿ ರಷ್ಯಾ ಯುವಕನ ಗೆಳೆತನ

    ಅಪ್ರಾಪ್ತೆ ಜೊತೆ ಫೇಸ್‍ಬುಕ್‍ನಲ್ಲಿ ರಷ್ಯಾ ಯುವಕನ ಗೆಳೆತನ

    – ರಾಜಸ್ಥಾನಕ್ಕೆ ಬಂದು ಅತ್ಯಾಚಾರಗೈದು ಪರಾರಿ

    ಜೈಪುರ: ರಷ್ಯಾ ಯುವಕನೊಬ್ಬ ಅಪ್ರಾಪ್ತೆ ಜೊತೆ ಫೇಸ್‍ಬುಕ್‍ನಲ್ಲಿ ಗೆಳೆತನ ಮಾಡಿಕೊಂಡು ಬಳಿಕ ಆಕೆ ಇರುವ ಸ್ಥಳಕ್ಕೆ ಬಂದು ಅತ್ಯಾಚಾರ ಮಾಡಿ ಪರಾರಿಯಾದ ಘಟನೆ ರಾಜಸ್ಥಾನದ ದುಂಗರಪುರ ಜಿಲ್ಲೆಯ ಸಾಗ್ವಾರಾದಲ್ಲಿ ನಡೆದಿದೆ.

    ಆರೋಪಿ ಮೂಲತಃ ರಾಜಸ್ಥಾನದವನಾಗಿದ್ದು, ವಿದ್ಯಾಭ್ಯಾಸಕ್ಕಾಗಿ ರಷ್ಯಾಗೆ ತೆರಳಿದ್ದನು. ಈ ವೇಳೆ ಆರೋಪಿ ಅಪ್ರಾಪ್ತೆಯನ್ನು ಫೇಸ್‍ಬುಕ್‍ನಲ್ಲಿ ಫ್ರೆಂಡ್ ಮಾಡಿಕೊಂಡಿದ್ದಾನೆ. ಬಳಿಕ ಇಬ್ಬರು ಪರಸ್ಪರ ಇಷ್ಟಪಡಲು ಶುರು ಮಾಡಿದ್ದು, ಮದುವೆ ಆಗಲು ನಿರ್ಧರಿಸಿದ್ದರು.

    ನನ್ನನ್ನು ಮದುವೆ ಆಗಲು ಆತ ಸಾಗ್ವಾರಾಕ್ಕೆ ಬಂದಿದ್ದು, ಭೇಟಿ ಮಾಡಲು ಹತ್ತಿರದ ಹೋಟೆಲಿನಲ್ಲಿ ರೂಂ ಬುಕ್ ಮಾಡಿದ್ದನು. ಬಳಿಕ ಮದುವೆ ಆಗುತ್ತೇನೆ ಎಂದು ಸುಳ್ಳು ಭರವಸೆ ನೀಡಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.

    ಆರೋಪಿ ಅತ್ಯಾಚಾರ ಮಾಡಿದ ನಂತರ ರಷ್ಯಾಗೆ ಪರಾರಿ ಆಗಿದ್ದಾನೆ. ಅಲ್ಲಿ ಆರೋಪಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಸದ್ಯ ಆತನ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಅಪ್ರಾಪ್ತೆ ಮೊದಲು ಆರೋಪಿಯನ್ನು ಫೇಸ್‍ಬುಕ್ ಫ್ರೆಂಡ್ ಮಾಡಿಕೊಂಡಿದ್ದಳು. ಬಳಿಕ ಫೇಸ್‍ಬುಕ್ ಅಲ್ಲದೆ ಕಳೆದ ಒಂದು ವರ್ಷದಿಂದ ಆರೋಪಿ ಜೊತೆ ಇನ್‍ಸ್ಟಾಗ್ರಾಂ ಹಾಗೂ ವಾಟ್ಸಾಪ್‍ನಲ್ಲಿ ಚಾಟಿಂಗ್ ಮಾಡುತ್ತಿದ್ದಳು ಎಂಬ ವಿಷಯ ತನಿಖೆ ವೇಳೆ ತಿಳಿದು ಬಂದಿದೆ.

    ಅಲ್ಲದೆ ಆರೋಪಿ ಮುಂದಿನ ಬಾರಿ ಭಾರತಕ್ಕೆ ಬಂದಾಗ ಮದುವೆ ಆಗುತ್ತೇನೆ ಎಂದು ಹೇಳಿ ಅತ್ಯಾಚಾರ ಮಾಡಿದ್ದಾನೆ. ರಷ್ಯಾಗೆ ತೆರಳುತ್ತಿದ್ದಂತೆ ಆರೋಪಿ ಸಂತ್ರಸ್ತೆ ಜೊತೆಗಿನ ಎಲ್ಲ ಸಂಪರ್ಕವನ್ನು ಕಡಿದುಕೊಂಡಿದ್ದಾನೆ. ಹೀಗಾಗಿ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

    ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸುವಂತೆ ರಷ್ಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಮನವಿ ಮಾಡಿಕೊಂಡಿದ್ದಾರೆ.