Tag: minor girl

  • ಹಣ, ತಿಂಡಿ ನೀಡಿ ಅಪ್ರಾಪ್ತೆಯ ಅತ್ಯಾಚಾರಕ್ಕೆ ಯತ್ನ- ವೃದ್ಧನಿಗೆ ಚಪ್ಪಲಿ ಸೇವೆ

    ಹಣ, ತಿಂಡಿ ನೀಡಿ ಅಪ್ರಾಪ್ತೆಯ ಅತ್ಯಾಚಾರಕ್ಕೆ ಯತ್ನ- ವೃದ್ಧನಿಗೆ ಚಪ್ಪಲಿ ಸೇವೆ

    ಚಿಕ್ಕಬಳ್ಳಾಪುರ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಂಕೇನಹಳ್ಳಿ ಗ್ರಾಮದ ನಿವಾಸಿ 70 ವರ್ಷದ ಗಂಗಾಧರಪ್ಪ ಹಲ್ಲೆಗೊಳಗಾದ ವೃದ್ಧ. 3ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಗೆ ಹಣ ಹಾಗೂ ತಿಂಡಿ ಆಸೆ ತೋರಿಸಿರುವ ವೃದ್ಧ ಗಂಗಾಧರಪ್ಪ, ಬಾಲಕಿಯನ್ನ ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿದ್ದಾನೆ.

     

    ಇದನ್ನು ಕಂಡ ಸ್ಥಳೀಯರು ವೃದ್ಧ ಗಂಗಾಧರಪ್ಪನನ್ನು ಹಿಡಿದು ಸಖತ್ ಆಗಿ ಥಳಿಸಿದ್ದಾರೆ. ಬಾಲಕಿಯ ಪೋಷಕರು ಹಾಗೂ ಮಹಿಳೆಯರು ಚಪ್ಪಲಿ ಮೂಲಕ ವೃದ್ಧ ಗಂಗಾಧರಪ್ಪನ ಮೇಲೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಹಲ್ಲೆಗೊಳಗಾದ ಗಂಗಾಧರಪ್ಪ ಸತ್ತು ಹೋಗಬಹುದು ಎನ್ನುವ ಅನುಮಾನದಿಂದ ಕೆಲವರು ಹಲ್ಲೆಯನ್ನ ತಡೆದಿದ್ದಾರೆ.

    ಸದ್ಯ ಈ ಸಂಬಂಧ ವೃದ್ಧ ಗಂಗಾಧರಪ್ಪನನ್ನು ಮಂಚೇನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಪ್ರಾಪ್ತ ಬಾಲಕಿಗೆ ಶೌಚಾಲಯದಲ್ಲಿ ಲೈಂಗಿಕ ಕಿರುಕುಳ – ಕಾಮುಕ ವಿದ್ಯಾರ್ಥಿ ಬಂಧನ

    ಅಪ್ರಾಪ್ತ ಬಾಲಕಿಗೆ ಶೌಚಾಲಯದಲ್ಲಿ ಲೈಂಗಿಕ ಕಿರುಕುಳ – ಕಾಮುಕ ವಿದ್ಯಾರ್ಥಿ ಬಂಧನ

    ಬೆಂಗಳೂರು: ಅಪ್ರಾಪ್ತ ಬಾಲಕಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವಿದ್ಯಾರ್ಥಿಯೊಬ್ಬನನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರು ಪೂರ್ವ ತಾಲೂಕಿನ ಬೊಮ್ಮನಹಳ್ಳಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಲೈಂಗಿಕ ಕಿರುಕುಳ ನೀಡಿದ್ದಾನೆ.

    ವಿದ್ಯಾರ್ಥಿನಿ ಶೌಚಾಲಯದಲ್ಲಿ ಕಿರುಚಾಡಿದ್ದನ್ನು ಗಮನಿಸಿದವರು ವಿದ್ಯಾರ್ಥಿಯನ್ನು ಹಿಡಿದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಆವಲಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ಹೊಸಕೋಟೆ ತಾಲೂಕಿನ ಕುರುಬರಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಸದ್ಯ ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ

    ಅತ್ಯಾಚಾರ ಸಂತ್ರಸ್ತ ಮಕ್ಕಳ ಬ್ಲರ್ ಫೋಟೋಗಳನ್ನೂ ಪ್ರಕಟಿಸುವಂತಿಲ್ಲ: ಮಾಧ್ಯಮಗಳಿಗೆ ಸುಪ್ರೀಂ

    ನವದೆಹಲಿ: ಇನ್ನು ಮುಂದೆ ಅತ್ಯಾಚಾರ ಸಂತ್ರಸ್ತ ಮಕ್ಕಳ ಫೋಟೋವನ್ನು ಬ್ಲರ್ ಮಾಡಿ ಮಾಧ್ಯಮಗಳು ಸುದ್ದಿ ಪ್ರಕಟಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ.

    ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಮಕ್ಕಳ ಗುರುತು ಬಹಿರಂಗ ಕುರಿತು ಸ್ವಯಃ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ ನ್ಯಾಯಾಲಯ ಮಾಧ್ಯಮಗಳಿಗೆ ಸೂಚನೆ ನೀಡಿದೆ.

    ಕಳೆದ ಕೆಲ ದಿನಗಳ ಬಿಹಾರದ ಅಪ್ರಾಪ್ತ ಬಾಲಕಿಯರ ಮೇಲೆ ವಸತಿ ನಿಯಲಯದ ಅಧಿಕಾರಿಗಳೇ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದ ಬಳಿಕ ನ್ಯಾಯಾಲಯ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರ ಸರ್ಕಾರ ಹಾಗೂ ಬಿಹಾರ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿದೆ.

    ಬಿಹಾರದ ಸ್ವಯಂ ಸೇವಾ ಸಂಸ್ಥೆಯೊಂದು ನಡೆಸುತ್ತಿದ್ದ ವಸತಿ ನಿಲಯದಲ್ಲಿದ್ದ ಸುಮಾರು 40 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿತ್ತು. ಅಲ್ಲದೇ ಈ ಕುರಿತು ವೈದ್ಯಕೀಯ ಪರೀಕ್ಷೆಯ ರಿಪೋರ್ಟ್ ಸಹ ಲೈಂಗಿಕ ದೌಜನ್ಯ ನಡೆದಿರುವುದನ್ನು ಖಚಿತ ಪಡಿಸಿತ್ತು. ಈ ವರದಿಯ ಅನ್ವಯ ಎನ್‍ಜಿಒ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಿ ವಸತಿ ನಿಲಯದಲ್ಲಿದ್ದ ಎಲ್ಲಾ ಬಾಲಕಿಯನ್ನು ರಕ್ಷಣೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ರಾಜ್ಯಪಾಲರು ಸಹ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಇಂತಹ ಇತರೇ ಎನ್‍ಜಿಒ ಗಳ ವಿರುದ್ಧ ನೇರ, ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು.

    ಬಿಹಾರದ ಮುಜಾಫರ್ ನಗರದ ಬ್ರಿಜೆಷ್ ಠಾಕೂರ್ ಎಂಬಾತ ತನ್ನ ಎನ್‍ಜಿಒ ಅಡಿ ಎರಡು ಬಾಲಕಿಯರ ವಸತಿ ನಿಲಯಗಳನ್ನು ನಡೆಸುತ್ತಿದ್ದ. ಈ ವಸತಿ ನಿಲಯದಲ್ಲಿದ್ದ 34 ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಅಲ್ಲದೇ 11 ಬಾಲಕಿಯರು ವಸತಿ ನಿಲಯದಿಂದ ನಾಪತ್ತೆಯಾಗಿದ್ದರು.

    ವಿಚಾರಣೆ ವೇಳೆ ದೇಶದಲ್ಲಿ ನಡೆದ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳನ್ನು ಉದಾಹಣೆಯಾಗಿ ನೀಡಿದ ನ್ಯಾಯಾಲಯ, ಅಪ್ರಾಪ್ತ ಮಕ್ಕಳ ಗುರುತು ಬಹಿರಂಗವಾದ ಬಳಿಕ ಬಾಲಕಿಯರ ಭವಿಷ್ಯ ಮೇಲೆ ಬೀಳುವ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿತು.

    ಜಮ್ಮು ಕಾಶ್ಮೀರದ ಕತುವಾದಲ್ಲಿ ನಡೆದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ವೇಳೆ ಬಾಲಕಿಯ ಫೋಟೋ ಹಾಗೂ ಧರ್ಮವನ್ನು ಕೆಲ ಮಾಧ್ಯಮಗಳು ಬಹಿರಂಗಗೊಳಿಸಿತ್ತು. ಪ್ರಕರಣಕ್ಕೆ ಸಂಬಂಧಿಸದಂತೆ ದೆಹಲಿ ಹೈಕೋರ್ಟ್ 12 ಮಾಧ್ಯಮಗಳಿಗೆ ತಲಾ 10 ಲಕ್ಷ ರೂ. ದಂಡವನ್ನು ವಿಧಿಸಿ ಆದೇಶಿಸಿತ್ತು. ದಂಡ ಹಣವನ್ನು ಜಮ್ಮು ಕಾಶ್ಮೀರದ ಸಂತ್ರಸ್ತ ಪರಿಹಾರ ನಿಧಿಗೆ ನೀಡುವಂತೆ ಸೂಚಿಸಿತ್ತು.

    ಈ ವಿಚಾರಣೆ ವೇಳೆ ಮಾಧ್ಯಮಗಳ ಪರ ವಕೀಲರು ಕಾನೂನನ್ನು ಅರ್ಥ ಮಾಡಿಕೊಳ್ಳುವಲ್ಲಿ ಲೋಪವಾಗಿದೆ. ಸಂತ್ರಸ್ತ ಬಾಲಕಿ ಮೃತಪಟ್ಟ ಕಾರಣ ನಾವು ಆಕೆಯ ಫೋಟೋವನ್ನು ಪ್ರಕಟಿಸಿದ್ದೇವೆ. ನಾವು ಎಸಗಿರುವ ತಪ್ಪಿಗೆ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದ್ದರು. ಆದರೆ ಹೈಕೋರ್ಟ್ ಮಾಧ್ಯಮಗಳ ಕ್ಷಮೆಯನ್ನು ಒಪ್ಪದೇ 10 ಲಕ್ಷ ರೂ. ದಂಡವನ್ನು ವಿಧಿಸಿತ್ತು. ಈ ಪ್ರಕರಣ ಬಳಿಕ ನ್ಯಾಯಾಲಯ ಮತ್ತೊಮ್ಮೆ ಮಾಧ್ಯಮಗಳಿಗೆ ಸೂಚನೆ ರವಾನಿಸಿದೆ.

    ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದಾಖಲಾಗುತ್ತದೆ. ಈ ಕಾಯ್ದೆ ಅಡಿಯಲ್ಲಿ ಪ್ರಕರಣಗಳು ದಾಖಲಾದರೆ ಸಂತ್ರಸ್ತರ ವಿವರ, ಫೋಟೋ ಸೇರಿದಂತೆ ಯಾವುದೇ ಮಾಹಿತಿಯನ್ನು ಪ್ರಕಟಿಸುವಂತಿಲ್ಲ.

  • ಸೆಕ್ಸ್ ವಿಡಿಯೋ ವೈರಲ್ ಆಗಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ!

    ಸೆಕ್ಸ್ ವಿಡಿಯೋ ವೈರಲ್ ಆಗಿದ್ದಕ್ಕೆ ಅಪ್ರಾಪ್ತೆ ಆತ್ಮಹತ್ಯೆ!

    ಭುವನೇಶ್ವರ್: ತನ್ನ ಪ್ರಿಯಕರ ಜೊತೆಗಿನ ಸೆಕ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ನಾಬರಂಗ್‍ಪುರದಲ್ಲಿ ನಡೆದಿದೆ.

    ಬಾಲಕಿ ತನ್ನದೇ ಏರಿಯಾದ ಯುವಕನನ್ನು ಪ್ರೀತಿಸುತ್ತಿದ್ದಳು. ಆತನ ಜೊತೆ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದಳು. ದೈಹಿಕ ಸಂಪರ್ಕ ಬೆಳೆಸಿದ ಆ ವಿಡಿಯೋವನ್ನು ಯುವಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ವೈರಲ್ ಮಾಡಿದ್ದಾನೆ.

    ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಇಂದು ಬೆಳಗ್ಗೆ ಹತ್ತಿರದ ಕಾಡಿಗೆ ಹೋಗಿ ಅಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಡಿನ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ದೊರೆತ್ತಿದ್ದು, ನಂತರ ಆಕೆಯ ಮೃತದೇಹವನ್ನು ಮನೆಗೆ ಕರೆತರಲಾಗಿತ್ತು.

    ಗ್ರಾಮಸ್ಥರು ಆಕೆಯ ಮೃತದೇಹವನ್ನು ಕಾಡಿನಿಂದ ಆಕೆಯ ಮನೆಗೆ ತಂದರು. ನಂತರ ವೈರಲ್ ಆಗಿದ ಆಕೆಯ ವಿಡಿಯೋವನ್ನು ಗ್ರಾಮಸ್ಥರು ಬಾಲಕಿಯ ತಂದೆಗೆ ತೋರಿಸಿದ್ದರು. ಈ ವಿಡಿಯೋ ವೈರಲ್ ಆಗಿದ್ದಕ್ಕೆ ನಿನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗ್ರಾಮಸ್ಥರು ಬಾಲಕಿಯ ತಂದೆಗೆ ತಿಳಿಸಿದ್ದಾರೆ.

    ಈ ಬಗ್ಗೆ ಬಾಲಕಿಯ ತಂದೆ ಜರಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಈ ಪ್ರಕರಣದ ನಂತರ ಯುವಕ ಪರಾರಿಯಾಗಿದ್ದಾನೆ. ಇನ್ನೂ ಬಾಲಕಿಯ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

  • ವಿಜಯಪುರದಲ್ಲಿ ದಾನಮ್ಮನ ನಂತರ ಮತ್ತೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ- ಇಂದು ಮುದ್ದೇಬಿಹಾಳ ಬಂದ್‍ಗೆ ಕರೆ

    ವಿಜಯಪುರದಲ್ಲಿ ದಾನಮ್ಮನ ನಂತರ ಮತ್ತೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ- ಇಂದು ಮುದ್ದೇಬಿಹಾಳ ಬಂದ್‍ಗೆ ಕರೆ

    ವಿಜಯಪುರ: ದಾನಮ್ಮ ಅತ್ಯಾಚಾರ ಪ್ರಕರಣದ ನಂತರ ಜಿಲ್ಲೆಯಲ್ಲಿ ಮತ್ತೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ವಿಜಯಪುರದ ಮುದ್ದೇಬಿಹಾಳ ಪಟ್ಟಣದಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ಅಪ್ರಾಪ್ತೆ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ ನಡೆದಿದೆ.

    ಸಂತ್ರಸ್ತೆಯನ್ನು ಬಾಳೆತೋಟಕ್ಕೆ ಎತ್ತೊಯ್ದ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಸಂತ್ರಸ್ತೆ ಕಿರುಚಾಡಿದಾಗ ಸ್ಥಳೀಯರು ಬಂದ ಕಾರಣ ಮೂವರು ಕಾಮುಕರು ಪರಾರಿಯಾಗಿದ್ದಾರೆ. ಇನ್ನೋರ್ವ ಕಾಮುಕ ಸ್ಥಳೀಯರ ಕೈಗೆ ಸಿಕ್ಕಿದ್ದು, ಅವನನ್ನು ಮುದ್ದೇಬಿಹಾಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

    ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಲಾಗಿದ್ದು, ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಮೂವರು ಕಾಮುಕರನ್ನು ಸೆರೆಹಿಡಿಯಲು ವಿವಿಧ ಸಂಘಟನೆಗಳು ಆಗ್ರಹಿಸಿ ಮುದ್ದೇಬಿಹಾಳದಲ್ಲಿ ಪ್ರತಿಭಟನೆ ನಡಿಸಿದ್ದಾರೆ. ಜೊತೆಗೆ ಇಂದು ಮುದ್ದೇಬಿಹಾಳ ಬಂದ್‍ಗೆ ಕರೆ ನೀಡಿದ್ದಾರೆ.

     

  • ಅಕ್ಕನ ಮಗಳಿಗೆ ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಮಾವನಿಂದಲೇ ರೇಪ್- ಕೃತ್ಯಕ್ಕೆ ಚಿಕ್ಕಮ್ಮ ಸಾಥ್!

    ಅಕ್ಕನ ಮಗಳಿಗೆ ಜ್ಯೂಸಿನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಮಾವನಿಂದಲೇ ರೇಪ್- ಕೃತ್ಯಕ್ಕೆ ಚಿಕ್ಕಮ್ಮ ಸಾಥ್!

    ಚಿಕ್ಕಬಳ್ಳಾಪುರ: ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ಹಾಕಿ ಅಪ್ರಾಪ್ತ ಬಾಲಕಿಯ ಮೇಲೆ ಸ್ವತಃ ಸೋದರಮಾವನೇ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಜಿಲ್ಲೆಯ ಚಿಂತಾಮಣಿಯಲ್ಲಿ ಕೇಳಿಬಂದಿದೆ.

    ಆರೋಪಿ ಮಂಜುನಾಥ್ ಎಂಬಾತ 13 ವರ್ಷದ ತನ್ಮ ಅಕ್ಕನ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಲಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಅತ್ಯಾಚಾರಕ್ಕೆ ಬಾಲಕಿಯ ಚಿಕ್ಕಮ್ಮ ಕೂಡ ಸಹಕರಿಸಿದ್ದಾಳೆ ಎಂದು ದೂರಿನಲ್ಲಿ ಸಂತ್ರಸ್ತೆ ತಾಯಿ ತಿಳಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಶುಕ್ರವಾರ ರಾತ್ರಿ ಸುಮಾರು 11 ಗಂಟೆಗೆ ನಾನು ಚಿಕ್ಕಮ್ಮನ ಮನೆಗೆಂದು ಹೋಗಿದ್ದೆ. ಅಲ್ಲಿ ಚಿಕ್ಕಮ್ಮ ನನಗೆ ಕುಡಿಯಲು ಜ್ಯೂಸ್ ಕೊಟ್ಟರು. ನಾನು ಜ್ಯೂಸ್ ಕುಡಿದ ನಂತರ ತಲೆ ಸುತ್ತು ಬಂದಿತ್ತು. ಆಗ ನನ್ನ ಮಾವ ಬಂದು ನನ್ನ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನು. ನಾನು ಅದಕ್ಕೆ ನಿರಾಕರಿಸಿದೆ. ಆಗ ನನ್ನ ಮಾವ ನನ್ನನ್ನು ಬಲವಂತವಾಗಿ ತಬ್ಬಿಕೊಂಡು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಮಾವ ಅಲ್ಲಿಂದ ಹೊರಟು ಹೋದನು. ಬಳಿಕ ಚಿಕ್ಕಮ್ಮ ಬಂದು ಇಲ್ಲಿ ನಡೆದಿರುವ ವಿಚಾರವನ್ನು ಯಾರಿಗಾದರೂ ಹೇಳಿದರೆ ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾಳೆ.

    ನಾನು ಗಾರೆ ಕೆಲಸ ಮುಗಿಸಿ ಮನೆಗೆ ಬಂದಾಗ ನನ್ನ ಮಗಳು ಹೊಟ್ಟೆ ನೋವು ಎಂದು ಹೇಳುತ್ತಿದ್ದಳು. ಪ್ರಶ್ನೆ ಮಾಡಿದಾಗ ನಡೆದ ವಿಚಾರವನ್ನು ನನಗೆ ತಿಳಿಸಿದ್ದಾಳೆ. ಮಂಜುನಾಥ್ ಗೆ ಈಗಾಗಲೇ ಎರಡು ಮದುವೆಯಾಗಿದ್ದು, ಇಬ್ಬರು ಪತ್ನಿಯರು ಬಿಟ್ಟಿದ್ದಾರೆ. ಹೀಗಾಗಿ ನನ್ನ ಮಗಳನ್ನ ಮದುವೆ ಮಾಡಿಕೊಳ್ಳುವ ಉದ್ದೇಶದಿಂದ ಈ ಪ್ಲಾನ್ ಮಾಡಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗಳಿಬ್ಬರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.

    ಈ ಸಂಬಂಧ ಸಂತ್ರಸ್ತೆ ಹಾಗೂ ಆಕೆಯ ತಾಯಿ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯಕ್ಕೆ ಆರೋಪಿ ಮಂಜುನಾಥ್‍ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕೃತ್ಯಕ್ಕೆ ಸಹಕರಿಸಿದ ಸಂತ್ರಸ್ತೆಯ ಚಿಕ್ಕಮ್ಮ ತಲೆಮರೆಸಿಕೊಂಡಿದ್ದಾಳೆ.

  • 7 ವರ್ಷದ ಬಾಲಕಿಯನ್ನ ರೇಪ್ ಮಾಡಿ ಕೊಂದಿದ್ದ ಎಂಜಿನಿಯರ್‍ ಗೆ ಗಲ್ಲು ಶಿಕ್ಷೆ

    7 ವರ್ಷದ ಬಾಲಕಿಯನ್ನ ರೇಪ್ ಮಾಡಿ ಕೊಂದಿದ್ದ ಎಂಜಿನಿಯರ್‍ ಗೆ ಗಲ್ಲು ಶಿಕ್ಷೆ

    ಚೆನ್ನೈ: ಸುಮಾರು 1 ವರ್ಷದ ಹಿಂದೆ 7ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನ ಕೊಲೆ ಮಾಡಿದ್ದ ಎಂಜಿನಿಯರ್‍ಗೆ ತಮಿಳುನಾಡಿನ ಕಂಚೀಪುರಂನ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಜೊತೆಗೆ ಆತನಿಗೆ 46 ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಲಾಗಿದೆ.

    ಚೆನ್ನೈನ ಅಪಾರ್ಟ್‍ಮೆಂಟ್ ಕಾಂಪ್ಲೆಕ್ಸ್ ಬಳಿ ತನ್ನ ನಾಯಿಮರಿಯೊಂದಿಗೆ ಆಟವಾಡಲು ಬರುತ್ತಿದ್ದ ಬಾಲಕಿ ಮೇಲೆ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದ ಎಸ್. ದಶ್‍ವಂತ್(23) ಅತ್ಯಾಚಾರವೆಸಗಿದ್ದ. ನಂತರ ಮೃತದೇಹವನ್ನ ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ. ಕಳೆದ ವರ್ಷ ಈತ ತಂದೆಯಿಂದ ಜಾಮೀನು ಪಡೆದು ಹೊರಬಂದಾಗ ತನ್ನ ತಾಯಿಯನ್ನೂ ಕೊಲೆ ಮಾಡಿದ್ದ ಎಂದು ವರದಿಯಾಗಿದೆ.

    ಇಂದಿನಿಂದ ನಾವು ನೆಮ್ಮದಿಯಾಗಿ ನಿದ್ದೆ ಮಾಡಬಹುದು. ಅವನೊಬ್ಬ ರಾಕ್ಷಸ ಎಂದು ಮೃತ ಬಾಲಕಿಯ ತಂದೆ ಬಾಬು ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

    ಏನಿದು ಪ್ರಕರಣ?: 2017ರ ಫೆಬ್ರವರಿಯಲ್ಲಿ ದಶ್‍ವಂತ್, ನಾಯಿಮರಿಯನ್ನ ತೋರಿಸಿ ಬಾಲಕಿಯನ್ನ ತನ್ನ ಪಾರ್ಟ್‍ಮೆಂಟ್‍ಗೆ ಕರೆದೊಯ್ದಿದ್ದ. ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಮೃತದೇಹವನ್ನ ಬ್ಯಾಗ್‍ನಲ್ಲಿ ತುಂಬಿ ಹೆದ್ದಾರಿ ಬಳಿ ಸುಟ್ಟು ಹಾಕಿದ್ದ.

    ಘಟನೆಗೆ ಸಾಕ್ಷಿಗಳು ಇಲ್ಲದಿದ್ದರಿಂದ ಈ ಪ್ರಕರಣ ದೊಡ್ಡ ಸವಾಲಾಗಿತ್ತು. ಕೇವಲ ಸಾಂದರ್ಭಿಕ ಪುರಾವೆಗಳನ್ನ ಅವಲಂಬಿಸಬೇಕಿತ್ತು. ವೈಜ್ಞಾನಿಕವಾಗಿ ಆರೋಪ ಸಾಬೀತು ಮಾಡಬೇಕಿತ್ತು. ಬಾಲಕಿಯ ಬಟ್ಟೆಯಿಂದ ಸಂಗ್ರಹಿಸಲಾದ ವೀರ್ಯ ದಶವಂತ್‍ನದ್ದು ಎಂದು ಡಿಎನ್‍ಎ ಪರೀಕ್ಷೆಯಿಂದ ದೃಢಪಟ್ಟಿತ್ತು. ಆರೋಪಿಯ ಬೆಡ್‍ರೂಮಿನಲ್ಲಿ ಬಾಲಕಿಯ ಆಭರಣ ಕೂಡ ಪತ್ತೆಯಾಗಿತ್ತು ಎಂದು ಬಾಲಕಿಯ ಪೋಷಕರ ಪರ ವಕೀಲರಾದ ಕಣ್ಣದಾಸನ್ ಹೇಳಿದ್ದಾರೆ.

    ಪೊಲೀಸರು ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

    ಡಿಸೆಂಬರ್‍ನಲ್ಲಿ ದಶವಂತ್ ಜಾಮೀನಿನ ಮೇಲೆ ಹೊರಬಂದಾಗ ತನ್ನ ತಾಯಿ ಸರಳಾ ಅವರನ್ನು ಕೂಡ ಕೊಲೆ ಮಾಡಿದ್ದಾನೆ ಎಂಬ ಆರೋಪವಿದೆ. ದಶವಂತ್ ತಾಯಿಯನ್ನ ಕೊಂದು, ಅವರ ಒಡವೆಗಳನ್ನ ದೋಚಿ ಮುಂಬೈಗೆ ಪರಾರಿಯಾಗಿದ್ದ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

    ಚೆನ್ನೈ ಪೊಲೀಸರಿಗೆ ಮಂಕುಬೂದಿ ಎರಚಿ ಓಡಿಹೋಗಿದ್ದ ಆತ ನಂತರ ಮುಂಬೈನಲ್ಲಿ ಸಿಕ್ಕಿಬಿದ್ದಿದ್ದ. ಒಂದು ದಿನದ ಬಳಿಕ ಆತನನ್ನು ಬಂಧಿಸಲಾಗಿತ್ತು.

    ಆರೋಪಿ ವಿರುದ್ಧ ಮತ್ತೊಂದು ಪ್ರತ್ಯೇಕ ಪ್ರಕರಣ ಇನ್ನೂ ಬಾಕಿ ಇದೆ.

  • ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿ ವಿಡಿಯೋ ಮಾಡ್ದ 65ರ ವೃದ್ಧ!

    ಅಪ್ರಾಪ್ತ ಬಾಲಕಿಯ ಮೇಲೆ ರೇಪ್ ಮಾಡಿ ವಿಡಿಯೋ ಮಾಡ್ದ 65ರ ವೃದ್ಧ!

    ತುಮಕೂರು: 65 ವರ್ಷದ ವೃದ್ಧನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಅದರ ವೀಡಿಯೋ ಮಾಡಿ ವಿಕೃತಿ ಮೆರೆದಿರುವ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.

    ತಿಪಟೂರು ನಗರದ ಕೊಬ್ಬರಿ ವ್ಯಾಪಾರಿ ಹರೀಶ್ (65) ಈ ಕೃತ್ಯವನ್ನು ಎಸಗಿದ ಆರೋಪಿ. ಹರೀಶ್ ಕ್ರೀಡಾ ತರಬೇತಿಯನ್ನು ನೀಡುವ ನೆಪದಲ್ಲಿ 15 ವರ್ಷದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು, ಅತ್ಯಾಚಾರವನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾನೆ.

    ತರಬೇತಿ ನೀಡುವ ನೆಪದಲ್ಲಿ ಹಲವಾರು ಬಾಲಕಿಯರನ್ನು ಲೈಂಗಿಕವಾಗಿ ಹರೀಶ್ ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಈಗ ಕೇಳಿ ಬಂದಿದೆ.

    ನೊಂದ ಬಾಲಕಿಯ ಪೋಷಕರು ಆ ವೀಡಿಯೋ ಸಮೇತವಾಗಿ ತಿಪಟೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರನ್ನ ದಾಖಲಿಸಿಕೊಂಡ ಪೊಲೀಸರು ಈ ತನಿಖೆಯನ್ನು ನಡೆಸುತ್ತಿದ್ದಾರೆ.

  • 11 ವರ್ಷದ ಬಾಲಕಿಯ ಮೇಲೆ 65ರ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ

    11 ವರ್ಷದ ಬಾಲಕಿಯ ಮೇಲೆ 65ರ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ

    ಬೆಂಗಳೂರು: 11 ವರ್ಷದ ಬಾಲಕಿಯ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ನಗರದ ಹೊರವಲಯದ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    65 ವರ್ಷದ ನಾಗಪ್ಪ ಎಂಬಾತನೇ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ ವೃದ್ಧ. ಎರಡು ದಿನಗಳ ಹಿಂದೆ ನಾಗಪ್ಪ ತನ್ನ ಪಕ್ಕದ ಮನೆಯ ಬಾಲಕಿಗೆ ಇಟ್ಟಿಗೆಗಳನ್ನು ಎತ್ತಲು ಸಹಾಯ ಮಾಡುವಂತೆ ನಟಿಸಿ ಶೌಚಾಲಯದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

    ಈ ವೇಳೆ ಭಯಬೀತಳಾದ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಕೂಡಲೇ ನೆರೆಹೊರೆಯವರು ಬಾಲಕಿಯನ್ನು ರಕ್ಷಿಸಿದ್ದಾರೆ. ಗ್ರಾಮದಲ್ಲಿ 2 ದಿನಗಳ ಕಾಲ ರಾಜಿ-ಪಂಚಾಯ್ತಿ ನಡೆಸಲಾಗಿದೆ. ಪಂಚಾಯ್ತಿ ಇತ್ಯರ್ಥವಾಗದ ಹಿನ್ನೆಲೆಯಲ್ಲಿ ಬಾಲಕಿಯ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಗಪ್ಪನ ವಿರುದ್ಧ ದೂರು ದಾಖಲಿಸಿದ್ದಾರೆ.

    ಇದೀಗ ಪೊಲೀಸರು ಆರೋಪಿ ನಾಗಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಗಪ್ಪನ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿ ನಾಗಪ್ಪನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

  • ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು

    ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿ ಕೊಲೆಗೈದ ಕಾಮುಕರು

    ಚಿಕ್ಕಬಳ್ಳಾಪುರ: ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಗ್ರಾಮದ 9 ವರ್ಷದ ಬಾಲಕಿಯನ್ನ ಅಪಹರಿಸಿರುವ ದುಷ್ಕರ್ಮಿಗಳು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಬಾಲಕಿ ನಾಪತ್ತೆಯಾದ ನಂತರ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ರೂ ಪತ್ತೆಯಾಗಿರಲಿಲ್ಲ. ರಾತ್ರಿ ನಾಪತ್ತೆಯಾದ ಬಾಲಕಿ ಬೆಳಗ್ಗೆ ಗ್ರಾಮದ ಹೊರವಲಯದ ತೋಟವೊಂದರ ಬಳಿಯ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

    ಅರೆ ನಗ್ನ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮೈ ಮೇಲೆ ತರಚಿದ ಗಾಯಗಾಳಗಿದ್ದು, ಕತ್ತು ಹಿಸುಕಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸರು ಸೇರಿದಂತೆ ಎಸ್ಪಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.