Tag: minor girls

  • ಪೋಷಕರಿಲ್ಲದ ಸಮಯ ನೋಡ್ಕೊಂಡು 12ರ ಬಾಲಕಿಯರ ಮೇಲೆ 59ರ ವೃದ್ಧನಿಂದ ಅತ್ಯಾಚಾರ

    ನವದೆಹಲಿ: ಪೋಷಕರಿಲ್ಲ ಸಮಯ ನೋಡಿಕೊಂಡು ಆಗಾಗ್ಗೆ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ 59 ವರ್ಷದ ವೃದ್ಧನೊಬ್ಬ ಸುಮಾರು 12 ವರ್ಷದ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

    STOP RAPE

    ಬಾಲಕಿಯರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿ ಕಾಳಿಚರಣ್ (59) ಅನ್ನು ಬಂಧಿಸಿದ್ದಾರೆ. ಇಬ್ಬರು ಬಾಲಕಿಯರ ವಯಸ್ಸು ಸುಮಾರು 12 ವರ್ಷಕ್ಕಿಂತ ಕಡಿಮೆಯಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ಆಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನ. 11ರಿಂದ ಒಂದು ತಿಂಗಳ ಕಾಲ ಬೆಂಗಳೂರು ಡಿಸೈನ್ ಫೆಸ್ಟಿವಲ್: ಅಶ್ವಥ್ ನಾರಾಯಣ

    ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಆರೋಪಿ ಕಾಳಿ ಚರಣ್ ಆಗಾಗ್ಗೆ ಬಂದು ಕಿರುಕುಳ ನೀಡುತ್ತಿದ್ದ. ಇದೇ ಸಮಯದಲ್ಲಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯರು ಘಟನೆ ಬಗ್ಗೆ ಮನೆಯವರಿಗೆ ತಿಳಿಸಿದ ನಂತರ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: 9 ವರ್ಷದ ಬಾಲಕನಾಗಿದ್ದಾಗ ನನ್ನನ್ನು ಕಳ್ಳಸಾಗಣೆ ಮಾಡಲಾಗಿತ್ತು: ಒಲಿಂಪಿಕ್, ವಿಶ್ವ ಚಾಂಪಿಯನ್‌ನ ಸ್ಫೋಟಕ ಹೇಳಿಕೆ

    ಸಿಐಸಿ ಆಯುಕ್ತರಾದ ದೀಪಾಲಿ ಅವರು ಇಬ್ಬರು ಮಕ್ಕಳಿಗೆ ಕೌನ್ಸಿಲಿಂಗ್ ನಡೆಸಿದ ನಂತರ ಅತ್ಯಾಚಾರ ಆಗಿರುವುದು ದೃಢಪಟ್ಟಿದೆ. ಇಬ್ಬರು ಬಾಲಕಿಯರು 12 ವರ್ಷಕ್ಕಿಂತ ಕಡಿಮೆ ವಯೋಮಾನದವರಾಗಿದ್ದಾರೆ ಎಂದು ಹೇಳಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತ ಬಾಲಕಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ – ಇಬ್ಬರು ಮಹಿಳೆಯರ ಜೊತೆ ಓರ್ವ ಅರೆಸ್ಟ್

    ಅಪ್ರಾಪ್ತ ಬಾಲಕಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ – ಇಬ್ಬರು ಮಹಿಳೆಯರ ಜೊತೆ ಓರ್ವ ಅರೆಸ್ಟ್

    ಮಂಗಳೂರು: ಕರಾವಳಿ ನಗರಿಯ ಪ್ರತಿಷ್ಠಿತ ಕಾಲೇಜೊಂದರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ಪೆಂಟ್ ಹೌಸ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

    ಶಮೀನಾ, ಆಯಿಷಮ್ಮ, ಸಿದ್ದೀಕ್ ಬಂಧಿತ ಆರೋಪಿಗಳು. ಪಿಯುಸಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರ ರಕ್ಷಣೆ ಮಾಡಲಾಗಿದೆ. ಪೆಂಟ್ ಹೌಸ್‍ನಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ವೇಶ್ಯಾವಾಟಿಕೆಯ ಚಲನವಲನವನ್ನು ಸೆರೆ ಹಿಡಿದಿಟ್ಟುಕೊಂಡ ದೃಶ್ಯಾವಳಿಗಳಿಂದ ಯುವತಿಯೊಬ್ಬಳು ಬಾಲಕಿಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದಳು. ಇದನ್ನೂ ಓದಿ: ಅಜ್ಮೀರ್ ದರ್ಗಾಕ್ಕೆ ಚಾದರ ಕಳಿಸಿಕೊಟ್ಟ ಪ್ರಧಾನಿ ಮೋದಿ

    ಈ ಕುರಿತು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆ, ಐ.ಟಿ.ಪಿ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ- ನೀರು ಅಂತ ಎಣ್ಣೆ ಕಾಯಿಸಿ ಪತ್ನಿ ಮೇಲೆ ಎರಚಿದ್ದವ ಅರೆಸ್ಟ್

    ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಸಿ.ಸಿ.ಬಿ ಪೊಲೀಸರಿಗೆ ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ಹೆಚ್ಚಿನ ತನಿಖೆ ನಡೆಸಲು ಸೂಚಿಸಿದ್ದಾರೆ.

  • ತಾಯಿ ಮೇಲೆ ಹಲ್ಲೆ ಮಾಡಿದವನ ಹತ್ಯೆಗೈದ ಅಪ್ರಾಪ್ತ ಬಾಲಕಿಯರು

    ತಾಯಿ ಮೇಲೆ ಹಲ್ಲೆ ಮಾಡಿದವನ ಹತ್ಯೆಗೈದ ಅಪ್ರಾಪ್ತ ಬಾಲಕಿಯರು

    ತಿರುವನಂತಪುರಂ: ತಾಯಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ 79 ವರ್ಷದ ವ್ಯಕ್ತಿಯನ್ನು ಅಪ್ರಾಪ್ತ ಬಾಲಕಿಯರು ಕೊಂದಿರುವ ಘಟನೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದಿದೆ.

    ಅಂಬಳವಯಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಮ್ಮದ್ ಕೋಯಾ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಾಲಕಿಯರ ತಂದೆಯ ಚಿಕ್ಕಮ್ಮನ ಪತಿ ಮಹಮ್ಮದ್ ಕೋಯಾ ತಾಯಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿಯರು ಹಲ್ಲೆ ನಡೆಸುತ್ತಿರುವುದನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ತಡೆಯಲಾಗದೇ ಕೊನೆಗೆ ಕೊಡಲಿ ಹಿಡಿದು ಮಹಮ್ಮದ್ ಕೋಯಾ ಹತ್ಯೆಗೈದಿದ್ದಾರೆ. ಇದನ್ನೂ ಓದಿ: ಮಾಜಿ ಸೈನಿಕರನ್ನು ಹತ್ಯೆಗೈದ ತಾಲಿಬಾನಿಗಳ ವಿರುದ್ಧ ಅಫ್ಘಾನ್ ಮಹಿಳೆಯರ ಪ್ರತಿಭಟನೆ

    ನಂತರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಾವಿಯಲ್ಲಿದ್ದ ಶವವನ್ನು ಹೊರತೆಗೆದಿದ್ದು, ಬಾಲಕಿಯರು ತಮ್ಮ ತಪ್ಪನ್ನು ಒಪ್ಪಿಕೊಂಡು ಶರಣಾಗಿದ್ದಾರೆ. ವಿಚಾರಣೆ ವೇಳೆ ಎರಡು ಕುಟುಂಬದವರು ಒಂದೇ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮೊಹಮ್ಮದ್ ಬಾಲಕಿಯರನ್ನು ಹಿಂಸಿಸುತ್ತಿದ್ದ. ಇಷ್ಟು ದಿನ ಕಿರುಕುಳ ಸಹಿಸಿಕೊಂಡಿದ್ದ ಬಾಲಕಿಯರು ಇದೀಗ ಕೊಲೆ ಮಾಡಿರಬಹುದು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿಗಾಗಿ ಜಡೆ ಜಗಳ – ಯುವತಿಯನ್ನ ಕಚ್ಚಿದ ಮಹಿಳೆ!

  • ತಾಯಿ ಮೇಲೆ ಹಲ್ಲೆ ಮಾಡಿದನೆಂದು  ಸಂಬಂಧಿಯನ್ನೇ  ಕೊಂದ ಬಾಲಕಿಯರು!

    ತಾಯಿ ಮೇಲೆ ಹಲ್ಲೆ ಮಾಡಿದನೆಂದು  ಸಂಬಂಧಿಯನ್ನೇ  ಕೊಂದ ಬಾಲಕಿಯರು!

    ತಿರುವನಂತಪುರಂ: ತಮ್ಮ ತಾಯಿಯ ಮೇಲೆ ಹಲ್ಲೆಗೆ ಯತ್ನಿಸಿದ 70 ವರ್ಷದ ವ್ಯಕ್ತಿಯನ್ನು ಬಾಲಕಿಯರು ಕೊಲೆ ಮಾಡಿದ ಘಟನೆ ಕೇರಳದ ವಯನಾಡ್ ಜಿಲ್ಲೆಯ ಅಂಬಲವಾಯಲ್ ಪ್ರದೇಶದಲ್ಲಿ ನಡೆದಿದೆ.

    ಮಹಮ್ಮದ್ ಕೋಯಾ (70) ಮೃತ ದುರ್ದೈವಿ. ತಮ್ಮ ತಾಯಿಗೆ ಹೊಡೆಯಲು ಬಂದಾಗ ಬಾಲಕಿಯರು ಮೊದಲಿಗೆ ತಡೆಯಲು ಮುಂದಾಗಿದ್ದಾರೆ. ತಡೆಯಲು ಎಷ್ಟೇ ಪ್ರಯತ್ನಿಸಿದರೂ ವ್ಯಕ್ತಿ ಹೊಡೆಯುವುದನ್ನು ನಿಲ್ಲಿಸಿರಲಿಲ್ಲ. ಇದರಿಂದ ಕೋಪಗೊಂಡ ಹುಡುಗಿಯರು ಕೋಯಾನನ್ನು ಕೊಡಲಿಯಿಂದ ಹೊಡೆದು ಕೊಂದು ಶವವನ್ನು ಬಾವಿಗೆ ಎಸೆದಿದ್ದಾರೆ.  ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಮಹಡಿಯಿಂದ ಬಿದ್ದ ಎಂಬಿಬಿಎಸ್ ವಿದ್ಯಾರ್ಥಿ!

    ಘಟನೆಯ ಬಳಿಕ ಬಾಲಕಿಯರು ವ್ಯಕ್ತಿಯನ್ನು ಕೊಂದಿರುವುದಾಗಿ ಪೊಲೀಸರ ಬಳಿ ಶರಣಾಗಿದ್ದಾರೆ. ನಂತರ ಶವವನ್ನು ಬಾವಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಎರಡೂ ಕುಟುಂಬದವರು ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಮನೆಯಲ್ಲಿ ಪ್ರತಿದಿನವೂ ಜಗಳ ನಡೆಯುತ್ತಿತ್ತು ಎಂದು ನೆರೆಹೊರೆಯವರು ಹೇಳಿದ್ದಾರೆ. ಈ  ಸಂಬಂಧ  ವಯನಾಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 6 ದಿನದ ಹೆಣ್ಣು ಮಗುವನ್ನು ಗುಟ್ಟಾಗಿ ಸಮಾಧಿ ಮಾಡಿ ದಂಪತಿ ಎಸ್ಕೇಪ್!

  • ವಿಡಿಯೋ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ

    ವಿಡಿಯೋ ಮಾಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ

    ಚಿಕ್ಕಬಳ್ಳಾಪುರ: 6ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿದ ಇಬ್ಬರು ಕಿಡಿಗೇಡಿಗಳು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಅದನ್ನು ವಿಡಿಯೋ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

    ರಜಾದಿನದಂದು ಯಾರೂ ಇಲ್ಲದ ವೇಳೆ ಶಾಲೆಯ ಬಳಿ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿರುವ ಪಿಯುಸಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ನಡೆಸಿದ್ದಾರೆ. ಒಬ್ಬ ವಿದ್ಯಾರ್ಥಿ ಅಪ್ರಾಪ್ತೆಯ ಜೊತೆ ಲೈಂಗಿಕ ದೌರ್ಜನ್ಯ ನಡೆಸುತ್ತ ಅತ್ಯಾಚಾರಕ್ಕೆ ಯತ್ನಿಸಿದ್ದು, ಮತ್ತೋರ್ವ ವಿದ್ಯಾರ್ಥಿ ಅದನ್ನ ತನ್ನ ಮೊಬೈಲ್ ಮೂಲಕ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾನೆ.

    ಈ ಘಟನೆ ನಡೆದ ಹಲವು ದಿನಗಳ ನಂತರ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದು, ವಿಡಿಯೋ ಬಯಲಿಗೆ ಬಂದ ನಂತರ ವಿಡಿಯೋ ಕಂಡ ಅಪ್ರಾಪ್ತ ಬಾಲಕಿಯ ಪೋಷಕರು ಕೃತ್ಯ ಎಸಗಿದ ಇಬ್ಬರು ವಿದ್ಯಾರ್ಥಿಗಳ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಕೃತ್ಯ ನಡೆಸಿದ ಇಬ್ಬರು ಬಾಲಕರು ಹಾಗೂ ಸಂತ್ರಸ್ತೆ ಸಹಿತ ಅಪ್ರಾಪ್ತರಾಗಿದ್ದು ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

  • ಸೆಕ್ಸ್ ಟಾಯ್ಸ್ ಬಳಸಿ ಅಪ್ರಾಪ್ತೆಯರಿಗೆ ಮಹಿಳೆಯಿಂದ ಕಿರುಕುಳ

    ಸೆಕ್ಸ್ ಟಾಯ್ಸ್ ಬಳಸಿ ಅಪ್ರಾಪ್ತೆಯರಿಗೆ ಮಹಿಳೆಯಿಂದ ಕಿರುಕುಳ

    –  ಪತ್ನಿಯ ಅವಮಾನವೀಯ ಕೃತ್ಯ ಪತಿ ಆತ್ಮಹತ್ಯೆಗೆ ಶರಣು

    ಹೈದರಾಬಾದ್: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪತ್ನಿಯ ಅವಮಾನವೀಯ ಕೃತ್ಯಕ್ಕೆ ಮನನೊಂದು ವ್ಯಕ್ತಿಯೊಬ್ಬ ಮೂರು ಅಂತಸ್ತಿನ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಪ್ರಕಾಶಂ ಜಿಲ್ಲೆಯ ಒಂಗೋಲ್ ನಗರದ ಕೃಷ್ಣ ಕಿಶೋರೆ (32) ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮಹಿಳೆ. ಆರೋಪಿಯ ಮೂರನೇ ಪತಿ, 47 ವರ್ಷದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಂಗೋಲ್ ನಗರದಲ್ಲಿ ಘಟನೆ ನಡೆದಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮದ್ವೆಯಾಗದ ಯುವಕರೇ ಟಾರ್ಗೆಟ್- ಬರೋಬ್ಬರಿ 14 ಮಂದಿಯೊಂದಿಗೆ ವಕೀಲೆಯ ಪ್ರೇಮ ಪುರಾಣ

    ಕೃಷ್ಣ ಕಿಶೋರೆ ಪುರುಷರಂತೆ ಬಟ್ಟೆ ಧರಿಸಿ, ಹೇರ್ ಕಟ್ಟಿಂಗ್ ಮಾಡಿಸಿದ್ದಾಳೆ. ಈ ಮೂಲಕ ಅಪ್ರಾಪ್ತೆಯರನ್ನು ಪರಿಚಯ ಮಾಡಿಕೊಂಡು ಸೆಕ್ಸ್ ಟಾಯ್ಸ್ ಬಳಸಿ ಅವರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದಳು. 17 ವರ್ಷದ ಬಾಲಕಿ ಪ್ರಕಾಶಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕೃತ ದೂರು ದಾಖಲಿಸಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯ ದೂರಿನಲ್ಲಿ, ಕೃಷ್ಣ ಕುಮಾರ್ ರೆಡ್ಡಿ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತಿಳಿಸಿದ್ದಳು. ಆದರೆ ಪ್ರಕರಣದ ಪ್ರಾಥಮಿಕ ತನಿಖೆಯ ವೇಳೆ, ಆರೋಪಿ ಬೇರೆ ಯಾರು ಅಲ್ಲ, ಪುರುಷರ ಧಿರಿಸಿನಲ್ಲಿ ಓಡುತ್ತಿರುವ ಕೃಷ್ಣ ಕಿಶೋರೆ ಎನ್ನುವುದು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

    ಈ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಒಂಗೋಲ್ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ರವಿ ಚಂದ್ರ, ಆರೋಪಿ ಮಹಿಳೆ ಪುರುಷರ ಬಟ್ಟೆಗಳನ್ನು ಧರಿಸುವುದನ್ನು ಇಷ್ಟಪಡುತ್ತಾಳೆ. ಪುರುಷನಂತೆ ಕಾಣಲು ಕೂದಲನ್ನು ಚಿಕ್ಕದಾಗಿ ಕತ್ತರಿಸಿಕೊಂಡಿದ್ದಾಳೆ. ಆರೋಪಿಯು ಈ ಮೊದಲು ಎರಡು ಬಾರಿ ಮದುವೆಯಾಗಿದ್ದಳು. ಆಕೆ 2016ರಲ್ಲಿ ತನ್ನ ಗ್ರಾಮವನ್ನು ತೊರೆದು ಒಂಗೋಲ್‍ಗೆ ಬಂದಿದ್ದಳು. ಈ ವೇಳೆ ಇಲ್ಲಿಯೇ 47 ವರ್ಷದ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಳು. ಬಳಿಕ ಅಪ್ರಾಪ್ತ ಬಾಲಕಿಯರ ಪರಿಚಯ ಮಾಡಿ ಅವರೊಂದಿಗೆ ಆತ್ಮೀಯ ಸಂಬಂಧವನ್ನು ಪ್ರಾರಂಭಿಸಲು ಯತ್ನಿಸುತ್ತಿದ್ದಳು ಎಂದು ತಿಳಿಸಿದ್ದಾರೆ.

    17 ವರ್ಷದ ಬಾಲಕಿ ಹಾಗೂ ಪತಿಯೊಂದಿಗೆ ಒಂದೇ ಮನೆಯಲ್ಲಿ ಇರಲು ಮಹಿಳೆ ಮುಂದಾಗಿದ್ದಳು. ಅಷ್ಟೇ ಅಲ್ಲದೆ 28 ವರ್ಷದ ಸ್ನೇಹಿತ ಮತ್ತು ಅಪ್ರಾಪ್ತೆಗೆ ನಕಲಿ ವಿವಾಹ ಮಾಡಿಸಲು ಮನವೊಲಿಸಿದ್ದಳು. ಈ ವಿಚಾರವನ್ನು ಸಂತ್ರಸ್ತೆಯು ಪೋಷಕರ ಮುಂದೆ ಹೇಳಿಕೊಂಡಿದ್ದಳು. ಇದರಿಂದ ಗಾಬರಿಗೊಂಡ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ಕೃಷ್ಣ ಕಿಶೋರೆ ಕೃತ್ಯ ಬಯಲಿಗೆ ಬಂದಿತ್ತು ಎಂದು ಬಿ.ರವಿ ಚಂದ್ರ ಮಾಹಿತಿ ನೀಡಿದ್ದಾರೆ.

    ಸಂತ್ರಸ್ತ ಬಾಲಕಿ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿ ಆರೋಪಿಯ ಮನೆಯ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಪತ್ನಿಯ ಕೃತ್ಯ ತಿಳಿದ ಪತಿ, ಪೊಲೀಸರಿಂದ ತಪ್ಪಿಸಿಕೊಂಡು ಮೂರನೇ ಮಹಡಿಯಿಂದ ಜಿಗಿದಿದ್ದ. ಪರಿಣಾಮ ಗಂಭೀರಾಗಿ ಗಾಯಗೊಂಡಿದ್ದ ಆತನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆರೋಪಿ ಮಹಿಳೆಯ ಪತಿ ಮೃತಪಟ್ಟಿದ್ದಾನೆ. ಮಹಿಳೆಯ ಮನೆಯಲ್ಲಿದ್ದ ದೊಡ್ಡ ಬ್ಯಾಗ್‍ನಲ್ಲಿ ಸೆಕ್ಸ್ ಟಾಯ್ಸ್ ಸಿಕ್ಕಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಿ.ರವಿ ಚಂದ್ರ ತಿಳಿಸಿದ್ದಾರೆ.

    ಆರೋಪಿ ಕೃಷ್ಣ ಕಿಶೋರೆಯನ್ನು ಬಂಧಿಸಿರುವ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಬಂಧಿತಳ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.