Tag: Minor irrigation

  • ಏತ ನೀರಾವರಿ ಯೋಜನೆ ಮೂಲಕ ಕೆರೆಗಳನ್ನ ತುಂಬಿಸಿ – ಸಚಿವ ಬೋಸರಾಜು ಸೂಚನೆ

    ಏತ ನೀರಾವರಿ ಯೋಜನೆ ಮೂಲಕ ಕೆರೆಗಳನ್ನ ತುಂಬಿಸಿ – ಸಚಿವ ಬೋಸರಾಜು ಸೂಚನೆ

    ಬೆಂಗಳೂರು: ರಾಜ್ಯಾದ್ಯಂತ ಮಳೆಯ (Karnataka Rains) ಪ್ರಮಾಣ ಹೆಚ್ಚಾಗಿದ್ದು ಅಣೆಕಟ್ಟುಗಳು ತುಂಬಿವೆ. ನಮ್ಮ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌ ಬೋಸರಾಜು (NS Bosaraju) ಅಧಿಕಾರಿಗಳಿಗೆ ಸೂಚನೆ ನೀಡಿದರು.

    ವಿಕಾಸಸೌಧದಲ್ಲಿಂದು ಪಿಎಂಕೆಎಸ್‌ವೈ ಕಾಮಗಾರಿಗಳ (PMKSY works) ಪ್ರಗತಿ ಪರಿಶೀಲನೆ ಹಾಗೂ ಕೇಂದ್ರ ಅನುದಾನದ ಕುರಿತು ಚರ್ಚಿಸಲು ಕೇಂದ್ರ ಜಲ ಆಯೋಗದ ನಿರ್ದೇಶಕರು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ನಡೆಸಲಾಯಿತು.

    ಪಿಎಂಕೆಎಸ್‌ವೈ ಯೋಜನೆ ಅಡಿಯಲ್ಲಿ ಈಗಾಗಲೇ ಮಂಜೂರಾಗಿರುವ ಯೋಜನೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಈಗಾಗಲೇ ಸಲ್ಲಿಸಲಾಗಿರುವ ಪ್ರಸ್ತಾವನೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಜಲ ಆಯೋಗದ ನಿರ್ದೇಶಕರು, ಅದಕ್ಕೆ ಬೇಕಾದಂತಹ ಅಗತ್ಯ ಕ್ರಿಯಾಯೋಜನೆ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿ:
    ರಾಜ್ಯಾದ್ಯಾಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹತೇಕ ಅಣೆಕಟ್ಟುಗಳು ತುಂಬಿವೆ. ಆದರೂ ಕೆಲವು ಕೆರೆಗಳಲ್ಲಿ ಹೆಚ್ಚಿನ ನೀರಿನ ಸಂಗ್ರಹವಾಗದೇ ಇರುವ ಬಗ್ಗೆ ಅಧಿಕಾರಿಗಳು ವರದಿಯನ್ನು ನೀಡಿದ್ದಾರೆ. ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಕೆರೆ ತುಂಬಿಸುವ ಕಾರ್ಯವನ್ನ ಮರುಚಾಲನೆಗೊಳಿಸಬೇಕು. ಎಲ್ಲಾ ಕೆರೆಗಳು ತುಂಬುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವುದಲ್ಲದೇ, ಅವುಗಳ ಸಮರ್ಪಕ ನಿರ್ವಹಣೆಗೂ ಆದ್ಯತೆ ನೀಡುವಂತೆ ಸೂಚನೆ ನೀಡಿದರು.

    ನಿಷ್ಕ್ರಿಯಗೊಂಡಿರುವ ಏತ ನೀರಾವರಿ ಯೋಜನೆ ವರದಿ ನೀಡಿ:
    ಆಯಾ ಕಾಲಕ್ಕೆ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಹಲವಾರು ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡು ಅವುಗಳ ನಿರ್ಮಾಣ ಮಾಡಲಾಗಿದೆ. ಅವುಗಳ ನಿರ್ವಹಣೆ ಅವಧಿ ಮುಗಿದ ನಂತರ ಹಾಗೂ ಕಾಲಕ್ರಮೇಣ ಹಲವು ನಿಷ್ಕ್ರಿಯಗೊಂಡಿವೆ. ಆಯಾ ವಲಯವಾರು ಕೈಗೊಂಡಿರುವ ಏತ ನೀರಾವರಿ ಯೋಜನೆಗಳ ಬಗ್ಗೆ, ಈಗ ಚಾಲ್ತಿಯಲ್ಲಿರುವ, ಸರಿಯಾದ ನಿರ್ವಹಣೆ ಆಗುತ್ತಿರುವ ಹಾಗೂ ನಿಷ್ಕ್ರಿಯಗೊಂಡಿರುವ ಯೋಜನೆಗಳ ಬಗ್ಗೆ ವರದಿ ನೀಡಬೇಕು. ಇವುಗಳನ್ನು ಪುನರುಜ್ಜೀವನಗೊಳಿಸಿದರೇ ಆಗುವ ಅನುಕೂಲಗಳು ಹಾಗೂ ಅದಕ್ಕೆ ತಗಲುವ ವೆಚ್ಚದ ಬಗ್ಗೆಯು ಮಾಹಿತಿಯನ್ನು ಅದರಲ್ಲಿ ಅಳವಡಿಸುವಂತೆ ಸೂಚನೆ ನೀಡಿದರು.

    ವಿಭಾಗವಾರು ಹಾಗೂ ಉಪವಿಭಾಗವಾರು ಕಚೇರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಜಾಗದ ಕೊರತೆಯಿದ್ದಲ್ಲಿ ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರುವಂತೆ ಸೂಚನೆ ನೀಡಿದರು. ತೆರೆದ ಬಾವಿಗಳು ಹಾಗೂ ಹೂಳು ಎತ್ತುವ ಹೊಸ ಯೋಜನೆಗಳ ಪ್ರಸ್ತಾವನೆ ಸಲ್ಲಿಸುವುದನ್ನೂ ನಿಲ್ಲಿಸುವಂತೆ ಸೂಚಿಸಿದರು.

    ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ರಾಘವನ್‌, ಕೇಂದ್ರ ಜಲ ಆಯೋಗದ ನಿರ್ದೇಶಕ ಹರ್ಷ ಸೇರಿದಂತೆ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ಸ್‌ ಉಪಸ್ಥಿತರಿದ್ದರು.

  • ನಗರಾಭಿವೃದ್ಧಿ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ನಗರಾಭಿವೃದ್ಧಿ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಒಟ್ಟು ಅನುದಾನ – 18,127 ಕೋಟಿ ರೂ.

    ಬೆಂಗಳೂರು ಅಭಿವೃದ್ಧಿಗೆ

    > ಬೆಂಗಳೂರು ಮಹಾನಗರ ಪಾಲಿಕೆ 690 ಕೋಟಿ ವೆಚ್ಚದಲ್ಲಿ 80 ಕಿಲೋಮೀಟರ್ ಉದ್ದದ 43 ರಸ್ತೆಗಳನ್ನು ಶ್ರೇಷ್ಠ ದರ್ಜೆ ಮಟ್ಟದಲ್ಲಿ ಅಭಿವೃದ್ಧಿ ಹಾಗೂ ಪಾದಚಾರಿ ಸೌಲಭ್ಯ ಮೇಲ್ದರ್ಜೆಗೆ.
    > ಟೆಂಡರ್ ಶ್ಯೂರ್ ಮಾದರಿಯ 25 ಕಿಲೋಮೀಟರ್ ಉದ್ದದ್ದ 25 ಅಂತರ್ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಮೇಲ್ದರ್ಜೆಗೇರಿಸುವುದು.
    > ಸಂಚಾರ ದಟ್ಟಣೆ ಇರುವ 12 ಕಾರಿಡಾರ್‍ಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ 150 ಕೋಟಿ ರೂ.
    > 200 ಕಿ.ಮೀ ಫುಟ್‍ಪಾತ್‍ಗಳ ಅಭಿವೃದ್ಧಿಗೆ 200 ಕೋಟಿ ರೂ.
    > ತಡೆರಹಿತ ವಾಹನ ಸಂಚಾರಕ್ಕೆ ಆಯ್ದ 9 ಜಂಕ್ಷನ್‍ಗಳಲ್ಲಿ ಗ್ರೇಡ್ ಸೆಪರೇಟರ್ ನಿರ್ಮಾಣ – 420 ಕೋಟಿ ರೂ. ಅನುದಾನ
    > ರೈಲ್ವೇ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣಕ್ಕೆ ಬಿಬಿಎಂಪಿಗೆ 150 ಕೋಟಿ ರೂ .
    > ಖಾಸಗಿ ಸಹಭಾಗಿತ್ವದಲ್ಲಿ ಸ್ಕೈವಾಕ್ ನಿರ್ಮಾಣ – 80 ಕೋಟಿ ರೂ.
    > 1000 ಸಾರ್ವಜನಿಕ ಶೌಚಾಲಯಗಳ ನಿರ್ಮಾಣ – 50 ಕೋಟಿ ರೂ.
    > ಬೃಹತ್ ಮಳೆ ನೀರು ಚರಂಡಿ ಅಭಿವೃದ್ಧಿಗೆ – 300 ಕೋಟಿ ರೂ.
    > ರಸ್ತೆ ಉಬ್ಬು, ಲೇನ್ ಮಾರ್ಕಿಂಗ್, ಜಂಕ್ಷನ್ ಅಭಿವೃದ್ದಿ ಇತ್ಯಾದಿ ಸಂಚಾರಿ ಎಂಜಿನಿಯರಿಂಗ್ ಕಾಮಾಗಾರಿಗಳಿಗೆ -200 ಕೋಟಿ ರೂ.
    > ನಮ್ಮ ಕ್ಯಾಟಿಂನ್‍ಗೆ 100ಕೋಟಿ – ಬೆಂಗಳೂರಿನ 198 ವಾರ್ಡ್‍ಗಳಲ್ಲಿ ತಲಾ ಒಂದು ಕ್ಯಾಟಿಂನ್- 5 ರೂ. ಗೆ ತಿಂಡಿ, 10 ರೂ. ಗೆ ಮಧ್ಯಾಹ್ನ, ರಾತ್ರಿ ಊಟ

    ನಮ್ಮ ಮೆಟ್ರೋ

    > ಮೆಟ್ರೋ ಹಂತ 1ರ 42.3 ಕಿ.ಮೀ ಉದ್ದದ ಇಡೀ ಮಾರ್ಗ 2017ರ ಏಪ್ರಿಲ್‍ಗೆ ಪೂರ್ಣಗೊಳಿಸುವುದು.
    > ಮೆಟ್ರೋ ಹಂತ 2 – 72.095 ಕಿ.ಮೀ.ಗೆ ಅಂದಾಜು ವೆಚ್ಚ – 26,406 ಕೋಟಿ ರೂ.
    > ಮೆಟ್ರೋ ಹಂತ 2ಎ – ಸಿಲ್ಕ್ ಬೋರ್ಡ್‍ನಿಂದ ಕೆಆರ್ ಪುರಂ ಜಂಕ್ಷನ್ – 17 ಕಿಲೋಮೀಟರ್ – 4.200 ಕೋಟಿ ರೂ.
    > ಮೆಟ್ರೋ ಹಂತ 3 ಯೋಜನೆ ಅಧ್ಯಯನ ಪೂರ್ಣ – ಏರ್‍ಪೋರ್ಟ್‍ಗೆ ಸೂಕ್ತ ಮಾರ್ಗ ಕಲ್ಪಿಸುವ ಮಾರ್ಗ ಅಂತಿಮ ಹಂತದಲ್ಲಿ.

    ನಗರ ಭೂ ಸಾರಿಗೆ

    > ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಉಪನಗರ ರೈಲ್ವೆ ಯೋಜನೆ ಆರಂಭ – 345 ಕೋಟಿ ರೂ.
    > ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ.
    > ಮೈಸೂರಿನ ಮಾದರಿಯಂತೆ ಬೆಂಗಳೂರಲ್ಲಿ ಕೆಲವೆಡೆ ಬಾಡಿಗೆ ಸೈಕಲ್ ಒದಗಿಸುವ ಯೋಜನೆ.

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

    – ಕೆಂಪೇಗೌಡ ಬಡವಾಣೆಯಲ್ಲಿ 5 ಸಾವಿರ ನಿವೇಶನ ಹಂಚಿಕೆ, 3 ಸಾವಿರ ಫ್ಲಾಟ್.
    – ಕೋನದಾಸಪುರ ಗ್ರಾಮದಲ್ಲಿ 166 ಎಕರೆ ಪ್ರದೇಶದಲ್ಲಿ ಬಿಡಿಎನಿಂದ ಟೌನ್‍ಶಿಪ್ ಅಭಿವೃದ್ಧಿ ಪಡಿಸಲು ಉದ್ದೇಶ.
    – ಕೆಂಪೇಗೌಡ ಬಡಾವಣೆಯಿಂದ ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ ಸಂಪರ್ಕ ಕಲ್ಪಿಸುವ 10.7 ಕಿ.ಮೀ ಅರ್ಟೀರಿಯಲ್ ರಸ್ತೆ ನಿರ್ಮಾಣ- 350 ಕೋಟಿ ರೂ. ಅನುದಾನ.
    – 42 ಕೋಟಿ ರೂ. ವೆಚ್ಚದಲ್ಲಿ 10 ಕೆರೆ ಸಮಗ್ರ ಅಭಿವೃದ್ಧಿ, ಬೆಳ್ಳಂದೂರು, ವರ್ತೂರು ಕೆರೆಗಳ ಸಮಗ್ರ ಅಭಿವೃದ್ಧಿ.
    – ಹೆಬ್ಬಾಳ ಜಂಕ್ಷನ್‍ನಲ್ಲಿ ಕೆಳಸೇತುವೆ ನಿರ್ಮಾಣ, ಮೇಲ್ಸೇತುವೆ ಅಗಲೀಕರಣ – 88 ಕೋಟಿ ರೂ. ವೆಚ್ಚ.
    – ಬೆಂಗಳೂರು ಸಂಚಾರ ಅನುಕೂಲಕ್ಕಾಗಿ ಸಿಲ್ಕ್ ಬೋಡ್ ಜಂಕ್ಷನ್ ಹಾಗೂ ಕೆಆರ್ ಪುರಂ ಜಂಕ್ಷನ್ ಬಿಎಂಆರ್‍ಸಿಎಲ್ ಸಹಯೋಗದೊಂದಿಗೆ ಅಭಿವೃದ್ಧಿ.

  • ಸಣ್ಣ ನೀರಾವರಿ, ಜಲಸಂಪನ್ಮೂಲ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಸಣ್ಣ ನೀರಾವರಿ, ಜಲಸಂಪನ್ಮೂಲ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ರಾಜ್ಯ ಬಾಜೆಟ್‍ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಹಾಗೂ ಸಣ್ಣ ನೀರಾವರಿಗೆ ಸಿಕ್ಕ ಸನುದಾನವೆಷ್ಟು, ಘೋಷಣೆಗಳೇನು ಎಂಬ ಮಾಹಿತಿ ಇಲ್ಲಿದೆ.

    ಸಣ್ಣ ನೀರಾವರಿ ಇಲಾಖೆಗೆ ಒಟ್ಟು ಅನುದಾನ – 2099 ಕೋಟಿ ರೂ.

    – ಕೆರೆಗಳ ಹೂಳೆತ್ತಲು ಕೆರೆ ಸಂಜೀವಿನಿ ಯೋಜನೆ – 100 ಕೋಟಿ ರೂ.
    – ಪಶ್ಚಿಮ ವಾಹಿನಿ ಯೋಜನೆಯಡಿ ಕಿಂಡಿ ಅಣೆಕಟ್ಟುಗಳ ನಿರ್ಮಾಣ- 100 ಕೋಟಿ ರೂ.
    – ಅಂತರ್ಜಲ ತೀವ್ರವಾಗಿ ಕುಸಿದಿರುವ ಬೀದರ್, ಚಾಮರಾಜನಗರ, ಹಾವೇರಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಚೆಕ್ ಡ್ಯಾಮ್ ನಿರ್ಮಾಣ- 50 ಕೋಟಿ ರೂ.ವೆಚ್ಚ
    – ಕಲಬುರಗಿಯ ಅಳಂದ ತಾಲೂಕಿನಲ್ಲಿ ಅಂತರ್ಜಲ ಅಭಿವೃದ್ಧಿಪಡಿಸುವ ವಿಶೇಷ ಯೋಜನೆ

    ಜಲಸಂಪನ್ಮೂಲ ಇಲಾಖೆಗೆ ಒಟ್ಟು ಅನುದಾನ – 15,929 ಕೋಟಿ ರೂ

    * 6 ಸಾವಿರ ಕೋಟಿ ರೂ. ಮೊತ್ತದಲ್ಲಿ ಕೆಳಕಂಡ ಯೋಜನೆಗಳನ್ನು ಕೈಗೊಳ್ಳುವ ಉದ್ದೇಶ
    – ನಾರಾಯಣಪುರ ಎಡದಂಡೆ ಕಾಲುವೆ ಜಾಲದ ಆಧುನೀಕರಣ ಯೋಜನೆಯಡಿ ಎಸ್‍ಸಿಎಡಿಎ ಬೇಸ್ಡ್ ಆಟೋಮೇಷನ್ ಅನುಷ್ಠಾನ.
    – ಕೆಂಪೇವಾಡ ಏತ ನೀರಾವರಿ ಯೋಜನೆ.
    – ಹಗರಿಬೊಮ್ಮನಹಳ್ಳಿಯ ಚಿಲವಾರ ಬಂಡಿ ಏತ ನೀರಾವರಿ ಯೋಜನೆ.
    – ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ.
    – ಹನಗೋಡು ಸರಣಿ ನಾಲೆಗಳ ಆಧುನೀಕರಣ.
    – ಎತ್ತಿನಹೊಳೆ ಯೋಜನೆಯಡಿ, ಭೈರಗೊಂಡ್ಲು ಜಲಾಶಯ ನಿರ್ಮಾಣ, ಕಾಲುವೆ ಕಾಮಗಾರಿ ಆರಂಭ.
    – 68,264 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ.
    – 35 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಹೊಲಗಾಲುವೆ ನಿರ್ಮಾಣ.
    – 12,500 ಹೆಕ್ಟೇರ್ ಪ್ರದೇಶದ ಸವಳು- ಜವಳು ಭೂಮಿ ಅಭಿವೃದ್ಧಿ
    – 28 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಬಸಿಗಾಲುವೆ ನಿರ್ಮಾಣ.

    * ಕಾವೇರಿ ಕೊಳ್ಳದಲ್ಲಿ 374 ಕಿಮೀ ನಾಲೆ ಅಭಿವೃದ್ಧಿ – 509 ಕೋಟಿ ರೂ.
    * ಹಾರಂಗಿ ಎಡದಂಡೆ ನಾಲೆಯ ಸರಪಳಿ 27.083 ಕಿ.ಮೀ ನಿಂದ 149.38 ಕಿ.ಮೀ ವರೆಗಿನ ಆಧುನೀಕರಣ.
    * ಕಣ್ವ ನಾಲೆಗಳ ಆಧುನೀಕರಣ.
    * ಕೆಆರ್‍ಎಸ್ ಯೋಜನೆಯ ಆರ್‍ಬಿಎಲ್‍ಎಲ್ ಆಧುನೀಕರಣ.
    * ಮಾರ್ಕೋನಹಳ್ಳಿ ಎಡ, ಬಲದಂಡೆ ನಾಲೆ ಆಧುನೀಕರಣ.
    * ಹಾರೋಹಳ್ಳಿ ಮೇಲ್ಮಟ್ಟದ ನಾಲೆ ಆಧುನೀಕರಣ.
    * ತೀವ್ರ ಬರಗಾಲ ಎದುರಿಸುತ್ತಿರುವ ಪ್ರದೇಶಗಳಲ್ಲಿ ಮೋಡಬಿತ್ತನೆ- 30 ಕೋಟಿ ರೂ.