Tag: minority

  • ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 2-3 ಸ್ಥಾನ ಅಲ್ಪಸಂಖ್ಯಾತರಿಗೆ ನೀಡಿ – ಕಾಂಗ್ರೆಸ್‌ಗೆ ಮುಖಂಡರ ಬೇಡಿಕೆ

    ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 2-3 ಸ್ಥಾನ ಅಲ್ಪಸಂಖ್ಯಾತರಿಗೆ ನೀಡಿ – ಕಾಂಗ್ರೆಸ್‌ಗೆ ಮುಖಂಡರ ಬೇಡಿಕೆ

    ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕನಿಷ್ಠ 2-3 ಸ್ಥಾನ ಅಲ್ಪಸಂಖ್ಯಾತರಿಗೆ (Minorities) ನೀಡಬೇಕು ಎಂದು ಅಲ್ಪಸಂಖ್ಯಾತ ಮುಖಂಡರು ಕರ್ನಾಟಕ ಕಾಂಗ್ರೆಸ್‌ಗೆ (Karnataka Congress) ಬೇಡಿಕೆ ಇಟ್ಟಿದ್ದಾರೆ.

    ಅಲ್ಪಸಂಖ್ಯಾತ ಸಮುದಾಯದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ (KPCC Office) ಅಲ್ಪಸಂಖ್ಯಾತ ಶಾಸಕರು, ಮುಖಂಡರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ನೇತೃತ್ವದಲ್ಲಿ ಇಂದು ಸಭೆ ನಡೆಯಿತು.  ಇದನ್ನೂ ಓದಿ: ಚೆನ್ನೈನ ಬೈಕ್ ರೇಸ್‌ನಲ್ಲಿ ಅಪಘಾತ – ಬೆಂಗಳೂರು ಮೂಲದ 13ರ ಪ್ರತಿಭೆ ದುರ್ಮರಣ

     
    ಲೋಕಸಭೆ ಚುನಾವಣೆ ಮತ್ತು ಮುಂದಿನ ದಿನಗಳಲ್ಲಿ ಬರುವ ಬಿಬಿಎಂಪಿ, ತಾಲೂಕು ಪಂಚಾಯತ್,‌ ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಸಮಯದಾಯದ ಸಂಘಟನೆ ಕುರಿತಂತೆ ಸಮಾಲೋಚನೆ ನಡೆಯಿತು. ಈ ಚುನಾವಣೆಯಲ್ಲಿ 95% ಮುಸ್ಲಿಮರು ಕಾಂಗ್ರೆಸ್‌ ಪಕ್ಷಕ್ಕೆ ಮತವನ್ನು ಚಲಾಯಿಸಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 2-3 ಟಿಕೆಟ್‌ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

    ಸಭೆಯ ಬಳಿಕ ಡಿಕೆ ಶಿವಕುಮಾರ್‌ ಮಾತನಾಡಿ, ಲೋಕಸಭೆ ಚುನಾವಣೆ, ಜಿಲ್ಲಾ, ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಕೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರ ಸ್ಥಾನಗಳನ್ನ ಕಸಿದುಕೊಂಡಿದ್ದರು. ಅಲ್ಪಸಂಖ್ಯಾತರು ಹೆಚ್ಚು ಇರುವ ಕಡೆಯೂ ಅವಕಾಶ ಕೊಟ್ಟಿರಲಿಲ್ಲ. ಜನಸಂಖ್ಯೆ ಆಧಾರದಲ್ಲಿ ಸ್ಥಾನ ಕೊಡಬೇಕು ಅಂತ ಮುಖಂಡರು ಕೇಳಿದ್ದಾರೆ ಎಂದು ತಿಳಿಸಿದರು.

     

    ಮುಖಂಡರು ಅವರ ಅಭಿಪ್ರಾಯ ಹೇಳಿದ್ದಾರೆ. ಅವರು ಕೇಳುವುದರಲ್ಲಿ ತಪ್ಪಿಲ್ಲ. ಅವರ ಬೇಡಿಕೆ ಅವರು ಕೇಳಿದ್ದಾರೆ. ರಾಜ್ಯಸಭೆ, ವಿಧಾನ ಪರಿಷತ್‌ನಲ್ಲಿ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಲೋಕಸಭೆಗೂ ಅವರು ಕೇಳಿದ್ದು, ಈ‌ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕ ತನ್ವೀರ್ ಸೇಠ್, ಎನ್ ಎ ಹ್ಯಾರಿಸ್ ಸೇರಿ ಸುಮಾರು 30ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

    Karnataka Budget 2023: ವಕ್ಫ್ ಆಸ್ತಿ ರಕ್ಷಣೆ, ಅಭಿವೃದ್ಧಿಗೆ 50 ಕೋಟಿ

    ಬೆಂಗಳೂರು: ರಾಜ್ಯದಲ್ಲಿರುವ 40 ಸಾವಿರಕ್ಕೂ ಅಧಿಕ ವಕ್ಫ್ (Waqf Property) ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ 50 ಕೋಟಿ ರೂ. ಹಣವನ್ನು ಸಿದ್ದರಾಮಯ್ಯ ಬಜೆಟ್‍ನಲ್ಲಿ (Karnataka Budget 2023) ಮೀಸಲಿಟ್ಟಿದ್ದಾರೆ.

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ಈ ಯೋಜನೆಯನ್ನು ಮುಂದುವರಿಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಹೇಳಿದರು.

    ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ 2 ವರ್ಷಗಳ ತರಬೇತಿಯನ್ನು ನೀಡಲು 8 ಕೋಟಿ ರೂ. ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?

    ಬೆಂಗಳೂರು ನಗರದಲ್ಲಿರುವ ಹಜ್ ಭವನದಲ್ಲಿ (Haj Bhavan) ಐಎಎಸ್ (IAS) ಹಾಗೂ ಕೆಎಎಸ್ (KAS) ಮತ್ತು ಇತರೆ ಸ್ಪರ್ದಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭ ಮಾಡಲಾಗುವುದು. ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿಯಲ್ಲಿ 20 ಲಕ್ಷ ಸಾಲ ನೀಡಲಾಗುವುದಾಗಿ ಇದೇ ವೇಳೆ ತಿಳಿಸಿದರು.

    126 ಶಾದಿ ಮಹಲ್ (Shaadi Mahal) ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 54 ಕೋಟಿ ಮೀಸಲಿಡಲಾಗುವುದು. ಅಲ್ಪಸಂಖ್ಯಾತ 10 ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ 20% ರಷ್ಟು ಅಥವಾ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್

    ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ – ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ: ಸುಪ್ರೀಂಕೋರ್ಟ್

    ನವದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ (Reservation) ಕಲ್ಪಿಸಿ ಸಂವಿಧಾನಕ್ಕೆ ಮಾಡಲಾದ 103ನೇ ತಿದ್ದುಪಡಿಯು ಸಂವಿಧಾನ ಬದ್ಧವಾಗಿದೆ (103rd Constitutional Amendment) ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಖ್ಯ ನ್ಯಾ. ಯು.ಯು ಲಲಿತ್ (CJI Lalit) ನೇತೃತ್ವದ ಸಾಂವಿಧಾನಿಕ ಪೀಠ 3:2 (Majority)  ಅಂತರದಲ್ಲಿ ಈ ತೀರ್ಪು ಪ್ರಕಟಿಸಿದೆ.

    ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ. ಇಬ್ಬರು ನ್ಯಾಯಮೂರ್ತಿಗಳು ಮಾತ್ರ ಭಿನ್ನಮತದ ತೀರ್ಪು ನೀಡಿದ್ದಾರೆ. ನ್ಯಾಯಮೂರ್ತಿ ದೀನೇಶ್ ಮಹೇಶ್ವರಿ, ನ್ಯಾ. ಬೇಲಾ ತ್ರಿವೇದಿ, ನ್ಯಾ ಜೆ.ಬಿ ಪರ್ದಿವಾಲಾ ಆರ್ಥಿಕ ಹಿಂದುಳಿದ ವರ್ಗ (EWS) ಪರವಾಗಿ ಆದೇಶ ನೀಡಿದರೆ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾ ರವೀಂದ್ರ ಭಟ್ ವಿರುದ್ಧವಾಗಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆ ಧ್ವಂಸ – ಮಹಿಳೆಯರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

    103ನೇ ಸಾಂವಿಧಾನಿಕ ತಿದ್ದುಪಡಿಯನ್ನು ಎತ್ತಿಹಿಡಿದ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಇದು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುವುದಿಲ್ಲ, ಏಕೆಂದರೆ ಇದು ಆರ್ಥಿಕ ಮಾನದಂಡಗಳನ್ನು ಆಧರಿಸಿದೆ, EWS ಕೋಟಾಕ್ಕೆ ವಿಶೇಷ ನಿಬಂಧನೆಯನ್ನು ರೂಪಿಸುವ ರಾಜ್ಯವು ಮೂಲಭೂತ ರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

    ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಪ್ರತ್ಯೇಕ ತೀರ್ಪಿನ ಮೂಲಕ ನ್ಯಾಯಮೂರ್ತಿ ಮಹೇಶ್ವರಿ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) ಹೊರತುಪಡಿಸಿ ಇತರರಿಗೆ ವಿಶೇಷ ಅವಕಾಶ ಕಲ್ಪಿಸಲು ರಾಜ್ಯಕ್ಕೆ ಅನುವು ಮಾಡಿಕೊಡುವ ತಿದ್ದುಪಡಿಯನ್ನು ಸಂಸತ್ತಿನ ದೃಢವಾದ ಕ್ರಮವೆಂದು ಪರಿಗಣಿಸಬೇಕು ಎಂದು ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ಸದ್ಯಕಿಲ್ಲ ಮುಕ್ತಿ – ರಾಹುಲ್, ಸೋನಿಯಾಗೆ ಮತ್ತೆ ED ಸಮನ್ಸ್?

    ನ್ಯಾಯಮೂರ್ತಿ ಜೆಬಿ ಪರ್ದಿವಾಲಾ, ಅನಿರ್ದಿಷ್ಟಾವಧಿಗೆ ಮೀಸಲಾತಿಯ ಮುಂದುವರಿಕೆಗೆ ಅಂತ್ಯ ಹಾಡುವ ಬಗ್ಗೆ ಪ್ರಸ್ತಾಪಿಸಿದರು. ಇಂದಿನ ಕಾಲದಲ್ಲಿ ಪ್ರಸ್ತುತವಾಗುವಂತೆ ಮೀಸಲಾತಿ ಮರುಪರಿಶೀಲಿಸುವ ಅಗತ್ಯವಿದೆ. ಮೀಸಲಾತಿ ಅನಿರ್ದಿಷ್ಟ ಕಾಲಕ್ಕೆ ಮುಂದುವರಿಯಬಾರದು. ಅದು ಪಟ್ಟಭದ್ರ ಹಿತಾಸಕ್ತಿಯಾಗುತ್ತದೆ ಎಂದು ಅವರು ಹೇಳಿ EWS ಪರ ಆದೇಶ ನೀಡಿದರು.

    ಅಲ್ಪಸಂಖ್ಯಾತರ ದೃಷ್ಟಿಯಿಂದ ಇಡಬ್ಲ್ಯೂಎಸ್ ಕೋಟಾಕ್ಕೆ ನ್ಯಾಯಮೂರ್ತಿ ಎಸ್ ರವೀಂದ್ರ ಭಟ್ ಅಸಮ್ಮತಿ ವ್ಯಕ್ತಪಡಿಸಿದ್ದರು. ಈ ತಿದ್ದುಪಡಿಯು ಸಾಮಾಜಿಕ ಮತ್ತು ಹಿಂದುಳಿದ ವರ್ಗದ ಪ್ರಯೋಜನವನ್ನು ಪಡೆಯುವವರು, ಎರಡು ಪ್ರಯೋಜನಗಳನ್ನು ನೀಡುವ ಈ ತಿದ್ದುಪಡಿಯು ತಪ್ಪಾಗಿದೆ. ಈ ತಿದ್ದುಪಡಿಯು ಸಾಂವಿಧಾನಿಕವಾಗಿ ಅಸಮರ್ಥನೀಯವಾಗಿದೆ, ಆದಾಗ್ಯೂ SC, ST, OBC ಯಂತಹ ವರ್ಗಗಳನ್ನು ಹೊರತುಪಡಿಸಿ ಸಂವಿಧಾನಾತ್ಮಕವಾಗಿ ಅನುಮತಿಸಲಾಗುವುದಿಲ್ಲ ಎಂದು ತೀರ್ಪು ನೀಡಿದರು. ನ್ಯಾಯಮೂರ್ತಿ ಭಟ್ ಅವರ ಅಭಿಪ್ರಾಯಕ್ಕೆ ಸಿಜೆಐ ಲಲಿತ್ ಸಹಮತ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರವು 2019ರಲ್ಲಿ ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದಿತ್ತು. ಆ ಮೂಲಕ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದಿತ್ತು. ಇದು ಸಂವಿಧಾನಬಾಹಿರ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧ ಎಂದು ಸುಪ್ರೀಂಕೋರ್ಟ್‍ಗೆ ಹಲವರು ಅರ್ಜಿ ಸಲ್ಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಧರ್ಮ ನಿಂದನೆ ಆರೋಪ – ಹಿಂದೂ ವ್ಯಕ್ತಿ ಅಪಾರ್ಟ್ಮೆಂಟ್ ಸುತ್ತ ಜನವೋ ಜನ

    ಧರ್ಮ ನಿಂದನೆ ಆರೋಪ – ಹಿಂದೂ ವ್ಯಕ್ತಿ ಅಪಾರ್ಟ್ಮೆಂಟ್ ಸುತ್ತ ಜನವೋ ಜನ

    ಇಸ್ಲಾಮಾಬಾದ್: ಕೇವಲ ಧರ್ಮನಿಂದನೆಯ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಅದೆಷ್ಟೋ ಹತ್ಯೆಗಳು ನಡೆದಿವೆ. ವಕೀಲರು ತಮ್ಮ ಪ್ರಾಣಕ್ಕೆ ಹೆದರಿ ಅಲ್ಪಸಂಖ್ಯಾತರ ಪರ ವಾದಿಸಲು ನಿರಾಕರಿಸುತ್ತಾರೆ. ಈ ಕಾರಣದಿಂದ ಅಸಂಖ್ಯಾತ ಜನರು ಅದೆಷ್ಟೋ ವರ್ಷಗಳಿಂದ ಜೈಲಿನಲ್ಲಿಯೇ ಕೊಳೆಯುವ ಪರಿಸ್ಥಿತಿ ಬಂದೊದಗಿದೆ. ಇದೇ ರೀತಿಯ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಅಲ್ಪಸಂಖ್ಯಾತರ ಭದ್ರತೆಗೆ ಇದು ಒಂದು ಸವಾಲಾಗಿದೆ.

    ಪಾಕಿಸ್ತಾನದಲ್ಲಿ ಹಿಂದೂ ನೈರ್ಮಲ್ಯ ಕಾರ್ಮಿಕನೊಬ್ಬ ಖುರಾನ್ ಅನ್ನು ಅಪವಿತ್ರಗೊಳಿಸಿರುವುದಾಗಿ ಆರೋಪಿಸಲಾಗಿದ್ದು, ಆತನ ವಿರುದ್ಧ ಧರ್ಮ ನಿಂದನೆಯ ಪ್ರಕರಣ ದಾಖಲಿಸಲಾಗಿದೆ. ಹಿಂದೂ ಅಲ್ಪಸಂಖ್ಯಾತನ ಸೆರೆ ಹಿಡಿಯಲು ಹಾಗೂ ದಾಳಿ ನಡೆಸಲು ಆತನ ಅಪಾರ್ಟ್ಮೆಂಟ್ ಕಟ್ಟಡದ ಸುತ್ತಲೂ ಜನರು ಜಮಾಯಿಸಿರುವುದು ವೀಡಿಯೋವೊಂದರಲ್ಲಿ ಕಂಡುಬಂದಿದೆ.

    ಪಾಕಿಸ್ತಾನದ ಹೈದರಾಬಾದ್‌ನಲ್ಲಿ ನೈರ್ಮಲ್ಯ ಕಾರ್ಮಿಕ ಅಶೋಕ್ ಕುಮಾರ್ ಸ್ಥಳೀಯ ನಿವಾಸಿಯೊಬ್ಬರೊಂದಿಗೆ ಜಗಳವಾಡಿದ್ದು, ಬಳಿಕ ನಿವಾಸಿ ಅಶೋಕ್ ವಿರುದ್ಧ ಧರ್ಮನಿಂದನೆಯ ದೂರು ದಾಖಲಿಸಿದ್ದಾರೆ. ಧರ್ಮನಿಂದನೆಗೆ ಕೋಪಗೊಂಡ ಜನರು ಆತನನ್ನು ಸೆರೆ ಹಿಡಿಯಲು ಹಿಂಸಾತ್ಮಕ ರೂಪದಲ್ಲಿ ಆತನ ನಿವಾಸದ ಸುತ್ತಲೂ ಜಮಾಯಿಸಿದ್ದಾರೆ. ಕೊನೆಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾಗೆ ಶೂ ಎತ್ತಿಕೊಟ್ಟ ಬಿಜೆಪಿ ನಾಯಕನ ವೀಡಿಯೋ ವೈರಲ್

    ಹಿಂದೂ ವ್ಯಕ್ತಿಯ ಮೇಲೆ ದಾಳಿ ಮಾಡಲು ನೂರಾರು ಜನರು ಮುಂದಾದಾಗ ಸ್ಥಳೀಯ ಮಾಧ್ಯಮವೊಂದು ಮುಸ್ಲಿಮರ ಪವಿತ್ರ ಪುಸ್ತಕವನ್ನು ಮುಸ್ಲಿಂ ಮಹಿಳೆಯೇ ಸುಟ್ಟು ಅಪಮಾನ ಮಾಡಿರುವುದಾಗಿ ವರದಿ ಮಾಡಿದೆ. ಇದರಲ್ಲಿ ಅಶೋಕ್ ಕುಮಾರ್‌ನ ಯಾವುದೇ ತಪ್ಪಿಲ್ಲ, ಆತನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ತಿಳಿಸಿದೆ.

    ಅಶೋಕ್ ಕುಮಾರ್ ಮೇಲೆ ದಾಳಿ ನಡೆಸಲು ಪ್ರಯತ್ನಿಸುತ್ತಿದ್ದ ಗುಂಪನ್ನು ಪೊಲೀಸರು ಚದುರಿಸಿದ್ದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಅದರ ವೀಡಿಯೋಗಳು ಕೂಡಾ ವೈರಲ್ ಆಗುತ್ತಿದ್ದು, ಮತಾಂಧತೆಗೆ ಒಬ್ಬನ ಜೀವ ಬಲಿಯಾಗುತ್ತಿದ್ದುದು ತಪ್ಪಿದಂತಾಗಿದೆ ಎಂದು ಜನರು ಕೊಂಡಾಡಿದ್ದಾರೆ. ಇದನ್ನೂ ಓದಿ: ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

    ಪಾಕಿಸ್ತಾನ ಧರ್ಮನಿಂದನೆಗೆ ಕ್ರೂರವಾದ ಕಾನೂನನ್ನು ಹೊಂದಿದೆ. ಕೇವಲ ಆರೋಪಗಳ ಮೇಲೆ ಅನೇಕ ಜನರನ್ನು ಹತ್ಯೆ ಮಾಡಲಾಗಿದೆ. ಡಿಸೆಂಬರ್ 2021 ರಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಪಾಕಿಸ್ತಾನದ ಜನರ ಗುಂಪೊಂದು ಶ್ರೀಲಂಕಾದ ಫ್ಯಾಕ್ಟರಿ ಮ್ಯಾನೇಜರ್ ಅನ್ನು ಹೊಡೆದು ಕೊಂದು, ಸುಟ್ಟು ಹಾಕಿತ್ತು. ಈ ಘಟನೆ ಭಾರೀ ಆಕ್ರೋಶಕ್ಕೂ ಕಾರಣವಾಗಿ, ಆಗಿನ ಪ್ರಧಾನಿ ಇಮ್ರಾನ್ ಖಾನ್ ಅದನ್ನು ಪಾಕಿಸ್ತಾನಕ್ಕೆ ಅವಮಾನದ ದಿನ ಎಂದು ಕರೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

    ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಶಂಕಿತರು ವಶ

    ಜೈಪುರ: ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಬರಿ ಎಂಬಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

    ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿಕೊಂಡಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಮುಳುಗಡೆಯಾದ ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ: ಮತ್ತೆ ಪ್ರವಾಹದ ಭೀತಿ 

    ಬ್ಯಾರಿ ಸರ್ಕಲ್ ಆಫೀಸ್ ಮನೀಶ್ ಶರ್ಮಾ ಅವರು ಈ ಕುರಿತು ಮಾಹಿತಿ ಕೊಟ್ಟಿದ್ದು, 14 ವರ್ಷದ ಬಾಲಕಿ ಮೇಲೆ 6 ರಿಂದ 7 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬೈಕಿನಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅವಳನ್ನು ಹತ್ತಿರದ ಟೋಲ್‍ಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಆಕೆಯನ್ನು 6 ರಿಂದ 7 ಪುರುಷರು ಕರೆದೊಯ್ದಿದ್ದು, ಅತ್ಯಾಚಾರ ಮಾಡಿದ್ದಾರೆ. ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.

    ಪ್ರಸ್ತುತ ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಾಗಿದೆ. ಘಟನೆಯ ಕುರಿತು ತನಿಖೆ ನಡೆಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

    CRIME 2

    ನಡೆದಿದ್ದೇನು?
    ಘಟನೆಯ ಕುರಿತು ವಿವರಿಸಿದ ಶರ್ಮಾ ಅವರು, ಸಂತ್ರಸ್ತ ಜುಲೈ 26 ರಂದು ಸಂಜೆ ಮಾರುಕಟ್ಟೆಗೆ ಹೋಗಿದ್ದಳು. ಅಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬ ಅವಳನ್ನು ತನ್ನ ಬೈಕ್‍ನಲ್ಲಿ ಕುಳಿತುಕೊಳ್ಳುವಂತೆ ಆಮಿಷವೊಡ್ಡಿದ್ದಾನೆ. ಅದಕ್ಕೆ ಆಕೆ ಬೈಕ್ ಮೇಲೆ ಕುಳಿತುಕೊಂಡಿದ್ದಾಳೆ. ಆದರೆ ಬೆಸರಿ ರಸ್ತೆಯಲ್ಲಿರುವ ಟೋಲ್‍ನಲ್ಲಿ ಅವಳನ್ನು ಬೀಳಿಸಿದ್ದಾನೆ. ತಕ್ಷಣ ಅಲ್ಲಿದ್ದ ಸುಮಾರು ಆರರಿಂದ ಏಳು ಜನರು ಆಕೆಯನ್ನು ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ:  ಯುವತಿ ಫೋಟೋ ಬಳಸಿ ಯುವಕರಿಂದ 19 ಲಕ್ಷ ರೂ. ಎಗರಿಸಿದ್ದ ಆರೋಪಿ ಅರೆಸ್ಟ್

    ರಾತ್ರಿಯಿಡೀ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಮರುದಿನ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ. ಆಕೆಯ ಕುಟುಂಬದವರು ಆಕೆಯನ್ನು ಹುಡುಕಿಕೊಂಡು ಹೋಗುವಾಗ ದೇವಸ್ಥಾನದಲ್ಲಿ ಪತ್ತೆಯಾಗಿದ್ದಾಳೆ. ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ. ಈ ಹಿನ್ನೆಲೆ ಕುಟುಂಬದವರು ಆರೋಪಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸಂತ್ರಸ್ತೆಗೆ ಪೊಲೀಸರೇ ವೈದ್ಯಕೀಯ ಚಿಕಿತ್ಸೆ ಕೊಡಿಸಿದರು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಲಿಂಗಾಯತ ಪ್ರತ್ಯೇಕ ಧರ್ಮ, ಅದಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೊಡ್ಬೇಕು- ನಿವೃತ್ತ ನ್ಯಾ. ನಾಗಮೋಹನ್‍ದಾಸ್ ಸಮಿತಿ ಶಿಫಾರಸು

    ಲಿಂಗಾಯತ ಪ್ರತ್ಯೇಕ ಧರ್ಮ, ಅದಕ್ಕೆ ಅಲ್ಪಸಂಖ್ಯಾತ ಸ್ಥಾನಮಾನ ಕೊಡ್ಬೇಕು- ನಿವೃತ್ತ ನ್ಯಾ. ನಾಗಮೋಹನ್‍ದಾಸ್ ಸಮಿತಿ ಶಿಫಾರಸು

    ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಲಿಂಗಾಯಿತ ಧರ್ಮ ಹಿಂದೂ ಧರ್ಮ ಅಲ್ಲ, ವೀರಶೈವ ಧರ್ಮವೂ ಅಲ್ಲ. ಲಿಂಗಾಯಿತ ಧರ್ಮ ಒಂದು ಪ್ರತ್ಯೇಕ ಧರ್ಮ ಅಂತ ನಿವೃತ್ತ ನ್ಯಾ.ನಾಗಮೋಹನ್ ದಾಸ್ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಕುರಿತಂತೆ ವಿವಿಧ ಸಂಘಟನೆಗಳ ಅಹವಾಲು ಆಧರಿಸಿ, ಶಿಫಾರಸಲು ಮಾಡಲು ಈ ಸಮಿತಿಯನ್ನು ರಚಿಸಲಾಗಿತ್ತು. ಶುಕ್ರವಾರ ಸಂಜೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಜೀರ್ ಅಹ್ದದ್‍ರನ್ನು ಭೇಟಿಯಾಗಿ ವರದಿ ಸಲ್ಲಿಸಿರುವ ಸಮಿತಿ, ಲಿಂಗಾಯಿತ ಧರ್ಮಕ್ಕೆ ಅಲ್ಪಸಂಖ್ಯಾತರ ಮಾನ್ಯತೆ ನೀಡಬೇಕೆಂದು ಹೇಳಿದೆ.

    ಇದರ ಜೊತೆಗೆ ಭಾರತದಲ್ಲಿ ಹುಟ್ಟಿದ ಜೈನ, ಸಿಖ್ ಧರ್ಮದಂತೆ ಲಿಂಗಾಯತವೂ ಒಂದು ಸ್ವತಂತ್ರ ಧರ್ಮ. ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು ಮಾಡಬಹುದು ಅಂತ ಹೇಳಿದೆ.

    ವೀರಶೈವ-ಲಿಂಗಾಯತರ ಬೇಡಿಕೆ ಪರಿಶೀಲಿಸಲು 2017ರ ಡಿಸೆಂಬರ್ 22ರಂದು ತಜ್ಞರ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಸಮಿತಿ ರಚನೆಯಾದ ಎರಡು ತಿಂಗಳ ಬಳಿಕ ತಜ್ಞರ ತಂಡ ವರದಿ ಸಲ್ಲಿಸಿದೆ.

    ಶಿಫಾರಸ್ಸಿನಲ್ಲಿರುವ ಅಂಶಗಳೇನು?
    – ಬಸವಣ್ಣ ಸ್ಥಾಪಿಸಿದ ಲಿಂಗಾಯತ ಧರ್ಮ ಹಿಂದೂ ಧರ್ಮಕ್ಕಿಂತ ಭಿನ್ನ
    – ಹಿಂದೂ ಧರ್ಮ ಮತ್ತು ಲಿಂಗಾಯತ ಸಂಸ್ಕøತಿ, ಪರಂಪರೆ, ಆಚರಣೆ ಭಿನ್ನ
    – ಜೈನ, ಬೌದ್ಧ, ಮುಸ್ಲಿಂ, ಸಿಖ್ ಧರ್ಮಗಳಂತೆ ಪ್ರತ್ಯೇಕ ಧರ್ಮವಾಗುವ ಅರ್ಹತೆ ಇದೆ
    – ವೀರಶೈವ ಪರಂಪರೆಯಡಿ ಗುರುತಿಸಿಕೊಂಡಿರುವವರು ಈ ಧರ್ಮ ಸೇರಬಹುದು
    – ವೀರಶೈವರಿಗೆ ಯಾವುದೇ ಅಭ್ಯಂತರ ಇರಬಾರದು, ಮುಕ್ತ ಅವಕಾಶ ನೀಡಬೇಕು
    – ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಿಸಲು ಕೇಂದ್ರಕ್ಕೆ ಶಿಫಾರಸು ಮಾಡಬಹುದು.

  • ಯುಪಿ ಬಜೆಟ್ 2018: ಮದರಸಾಗಳ ಆಧುನೀಕರಣಕ್ಕೆ 404 ಕೋಟಿ ರೂ. ಅನುದಾನ

    ಯುಪಿ ಬಜೆಟ್ 2018: ಮದರಸಾಗಳ ಆಧುನೀಕರಣಕ್ಕೆ 404 ಕೋಟಿ ರೂ. ಅನುದಾನ

    -ಹಿಂದಿನ ಬಜೆಟ್‍ಗಿಂತಲೂ 282 ಕೋಟಿ ರೂ. ಹೆಚ್ಚಳ

    ಉತ್ತರಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಮದರಸಾಗಳ ಆಧುನೀಕರಣ (ಇಸ್ಲಾಮಿಕ್ ಶಾಲೆಗಳು) ಕ್ಕೆ ತಮ್ಮ ಬಜೆಟ್ ನಲ್ಲಿ ಹೆಚ್ಚಿನ ಪ್ರಮುಖ್ಯತೆ ನೀಡಿ 404 ಕೋಟಿ ರೂ. ಗಳನ್ನು ಮೀಸಲಿಟ್ಟಿದ್ದಾರೆ. ಕಳೆದ ಬಾರಿ ಬಜೆಟ್ ಅಲ್ಪಸಂಖ್ಯಾತರಿಗೆ ನೀಡಿದ ಅನುದಾನಕ್ಕಿಂತಲೂ ಶೇ.10 ರಷ್ಟು ಮೊತ್ತವನ್ನು ಹೆಚ್ಚಿಸಿದ್ದಾರೆ.

    ಈ ಬಾರಿಯ ಯುಪಿ ಸರ್ಕಾರ ಬಜೆಟ್ ನಲ್ಲಿ ಒಟ್ಟಾರೆ 2,757 ಕೋಟಿ ರೂ. ಅಲ್ಪ ಸಂಖ್ಯಾತರ ಅಭಿವೃದ್ಧಿ ಮತ್ತು ಕಲ್ಯಾಣ ಇಲಾಖೆಗೆ ನೀಡಿದೆ.

    ರಾಜ್ಯ ಸರ್ಕಾರ ಕ್ರಮ ಸ್ವಾಗತಾರ್ಹ ಕ್ರಮವಾಗಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಆಧುನಿಕ ಶಿಕ್ಷಣ ಒದಗಿಸಲು ಮತ್ತು ಮೂಲಸೌಕರ್ಯವನ್ನು ನೀಡಲು ಈ ಹಣವನ್ನು ಬಳಸಿಕೊಳ್ಳಲಾಗುವುದು ಎಂದು ಲಕ್ನೋ-ಸಿಟಾಪುರ ಹೆದ್ದಾರಿಯಲ್ಲಿ ಮದರಸಾ ಮುಖ್ಯಸ್ಥ ಮೊಹದ್ ಫಾರೂಕ್ ಹೇಳಿದ್ದಾರೆ.

    ಈಗಾಗಲೇ ಸಿಎಂ ಯೋಗಿ ನೇತ್ರತ್ವದ ಸರ್ಕಾರ ಮದರಸಾಗಳಲ್ಲಿ ಎನ್‍ಸಿಇಆರ್ ಟಿ ಪಠ್ಯಕ್ರಮ ಹಾಗೂ ಉನ್ನತ ಮಾಧ್ಯಮಿಕ ಶಿಕ್ಷಣದಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ಭೋದಿಸಲು ಆದೇಶ ನೀಡಿದೆ.

    ಮದರಸಾ ನೋಂದಣಿ ಯೋಜನೆಯಡಿ ಯುಪಿ ಸರ್ಕಾರ ಪ್ರತ್ಯೇಕ 215 ಕೋಟಿ ರೂ. ನೀಡಲು ಮುಂದಾಗಿದೆ. ಈವರೆಗೆ ರಾಜ್ಯ ಸರ್ಕಾರ ಈ ಯೋಜನೆ ಅಡಿ ಪ್ರಾಥಮಿಕವಾಗಿ 246 ಆಲಿಯಾ ಮಟ್ಟ ಶಾಲೆಗಳನ್ನು ಗುರುತಿಸಲಾಗಿದೆ.

    ಈ ಹಿಂದೆ ಅಧಿಕಾರ ವಹಿಸಿದ್ದ ಅಖಿಲೇಶ್ ಯಾದವ್ ಸರ್ಕಾರಕ್ಕೆ ಹೊಲಿಕೆ ಮಾಡಿದರೆ ಕಳೆದ ವರ್ಷ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮೊದಲು ಅಲ್ಪಸಂಖ್ಯಾತರಿಗೆ ನೀಡಿದ ಅನುದಾನದಲ್ಲಿ ಕಡಿತಗೊಳಿಸಿತ್ತು. ಆದರೆ ಕಳೆದ ಬಾರಿ ನೀಡಿದ್ದ 2,475.61 ಕೋಟಿ ರೂ. ಮೊತ್ತವನ್ನು ಈ ಬಾರಿ 282 ಕೋಟಿ ರೂ. ಗೆ ಹೆಚ್ಚಿಸುವ ಮೂಲಕ ಒಟ್ಟಾರೆ 2,757 ಕೋಟಿ ರೂ.ಗಳನ್ನು ನೀಡಿದ್ದಾರೆ.

    ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿವಿಧ ವಿದ್ಯಾರ್ಥಿ ವೇತನ ಯೋಜನೆಗಳ ಮೂಲಕ 1,500 ಕೋಟಿ ರೂ.ಗಳನ್ನು ನೀಡಲಾಗುತ್ತದೆ. ಅಲ್ಲದೇ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಇನ್ನುಳಿದಂತೆ ಅಲ್ಪಸಂಖ್ಯಾತ ಹೆಣ್ಣು ಮಕ್ಕಳ ಮದುವೆಗಾಗಿ 74 ಕೋಟಿ. ರೂಗಳನ್ನು ನೀಡಲಾಗಿದೆ.

    ಉತ್ತರ ಪ್ರದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.20 ರಷ್ಟು ಅಲ್ಪಸಂಖ್ಯಾತರಿದ್ದಾರೆ. ಈ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ನೀಡಿರುವ 800 ಕೋಟಿ ರೂ. ಮೀಸಲಿಟಿದ್ದು ಉತ್ತಮ ಕ್ರಮ. ಆದರೆ ರಾಜ್ಯಸರ್ಕಾರ ಐಟಿಐ, ಐಐಟಿ, ವೈದ್ಯಕೀಯ ಮತ್ತು ಮ್ಯಾನೇಜ್‍ಮೆಂಟ್ ಸಂಸ್ಥೆಗಳಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಿದರೆ ಹೆಚ್ಚು ಸಂತೋಷ ನೀಡುತ್ತಿತ್ತು ಎಂದು ಯುವ ಉದ್ಯಮಿ ಫೌಜನ್ ಆಲ್ವಿ ಹೇಳಿದ್ದಾರೆ.

     

  • ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

    ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

    ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ 2,281 ಕೋಟಿ ರೂ. ಮೀಸಲಿಡಲಾಗಿದೆ. ಹಾಗಿದ್ರೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೇಳಲಾದ ಹೊಸ ಯೋಜನೆಗಳು ಈ ಕೆಳಗಿನಂತಿವೆ.

    * ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಮೆಕ್ಯಾನಿಕ್, ಕಾರ್‍ಪೆಂಟರ್, ಹಣ್ಣು ಮತ್ತು ತರಕಾರಿ ಮಾರಾಟ, ಬೇಕರಿ, ಪಂಚರ್ ಮತ್ತು ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ ರಿಪೇರಿ ಇತ್ಯಾದಿ ವೃತ್ತಿಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು 30 ಕೋಟಿ ರೂ.ಗಳ ಮೊತ್ತದಲ್ಲಿ ಹೊಸ ಯೋಜನೆ ಜಾರಿಗೊಳಿಸಲಾಗುವುದು.
    * ಕ್ರೈಸ್ತ ಸಮುದಾಯ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * ಜೈನ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.
    * ದಾರುಲ್ ಉಲೂಮ್ ಸಬೀಲುರ್ ರೆಹಮಾನ ರಿಷಾದ್ ಅರೆಬಿಕ್ ಕಾಲೇಜು ಬೆಂಗಳೂರು ಆವರಣದಲ್ಲಿ ಐವಾನ್-ಎ-ಅಶ್ರಫ್ ಸ್ಮಾರಕ ಭವನ ನಿರ್ಮಾಣ ಮಾಡಲು 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

    * ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ (ಸೆಂಟ್ರಲ್ ಕಾಲೇಜು) ವೈವಿಧ್ಯತೆ ಮತ್ತು ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸಲಾಗುವುದು.
    * ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಅತ್ಯುತ್ತಮ ಫಲಿತಾಂಶ ಗಳಿಸಿದ ವಸತಿ ಶಾಲೆ/ ಕಾಲೇಜುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
    * ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 15 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳೆಯರಿಗೆ ಕಾರ್ಯಾರಂಭ ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಲಾಗುವುದು.
    * ಮದರಸಗಳ ಆಧುನೀಕರಣ, ಔಪಚಾರಿಕ ಶಿಕ್ಷಣ ಒದಗಿಸಲು ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ 15 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

    * ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿನ ರಜತ ಮಹೋತ್ಸವ ಅಂಗವಾಗಿ ಮುಂದಿನ 5 ವರ್ಷಗಳಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಪರಿಷತ್ತಿನ ಕಾರ್ಪಸ್ ಫಂಡ್‍ಗೆ 2018-19ನೇ ಸಾಲಿನಲ್ಲಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * 25 ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆ, 5 ಪದವಿ ಪೂರ್ವ ಮಹಿಳಾ ವಸತಿ ಕಾಲೇಜು, 2 ಮಾದರಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
    * ಎಂ.ಎಸ್.ಡಿ.ಪಿ. ಯೋಜನೆಯಡಿಯಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿರುವ 25 ಸ್ಥಳಗಳಲ್ಲಿ ವಿದ್ಯಾರ್ಥಿನಿಲಯ/ಮಾದರಿ/ಆದರ್ಶ ಶಾಲೆ/ ವಸತಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
    *25 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸುವುದು. ಎಲ್ಲಾ ಮೆಟ್ರಿಕ್ ಪೂರ್ವ/ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪರಸ್ಪರ ಪ್ರವೇಶ ನೀಡಲಾಗುವುದು. ಐದು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು.

    * 5 ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸ್ತುತ ವಿಜ್ಞಾನ ವಿಭಾಗವಿದ್ದು, ಜೊತೆಗೆ ವಾಣಿಜ್ಯ ವಿಭಾಗ ಪ್ರಾರಂಭಿಸಲಾಗುವುದು. 10 ಮೊರಾರ್ಜಿ ದೇಸಾಯಿ ವಸತಿ ಶಾಲೆ ದಾಖಲಾತಿ ಸಂಖ್ಯಾಬಲ 50 ರಿಂದ 60ಕ್ಕೆ ಹೆಚ್ಚಿಸಲಾಗುವುದು.
    * ದಾಖಲಾತಿ ಪಡೆಯಲು ಪೋಷಕರ ವರಮಾನ ವಿದ್ಯಾರ್ಥಿನಿಲಯಗಳಿಗೆ 44,500 ರೂ ಹಾಗೂ ವಸತಿ ಶಾಲೆಗಳಿಗೆ 1 ಲಕ್ಷ ರೂ. ಇದ್ದು, ಇದನ್ನು 2.50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
    * ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಕ್ರೈಸ್ ಮಾದರಿಯಲ್ಲಿ ದುರ್ಘಟನೆಗೆ ಪರಿಹಾರ ನೀಡಲಾಗುವುದು.

    * ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಲ್ಲಾ ವಸತಿ ಶಾಲೆಯ/ಕಾಲೇಜುಗಳ ಪ್ರತಿ ವಿದ್ಯಾರ್ಥಿಗೆ ಆಹಾರ ಭತ್ಯೆಯನ್ನು ಮಾಸಿಕ 100 ರೂ.ಗಳಷ್ಟು ಹೆಚ್ಚಿಸಲಾಗುವುದು. ಖಾಸಗಿ ಅನುದಾನಿತ ಅನಾಥಾಲಯ/ ವಿದ್ಯಾರ್ಥಿಗಳ ಭೋಜನಾ ವೆಚ್ಚದ ದರಗಳನ್ನು ಮಾಹೆಯಾನ 750 ರೂ.ಗಳಿಂದ 800 ರೂ.ಗಳಿಗೆ ಹೆಚ್ಚಿಸಲಾಗುವುದು.
    * ಎಸ್.ಎಸ್.ಎಲ್.ಸಿ. ಮತ್ತು 2ನೇ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಗೆ 2000 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

    * ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ 1ನೇ ವರ್ಷದಲ್ಲಿ ಪ್ರವೇಶ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ಯೋಜನೆಯಡಿ 25 ಸಾವಿರ ರೂ.ಗಳನ್ನು ನೀಡಲಾಗುವುದು.
    * ಬಿ.ಎಡ್. ಹಾಗೂ ಡಿ.ಎಡ್. ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹ ಧನ ನೀಡಲಾಗುವುದು.
    * ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆಯನ್ನು 25,000ಕ್ಕೆ ಹೆಚ್ಚಿಸಲಾಗುವುದು.
    * ನದಾಫ್/ಪಿಂಜಾರ್ ಸಮುದಾಯದ ರಾಜ್ಯಮಟ್ಟದ ಸಂಘಕ್ಕೆ 2 ಕೋಟಿ ರೂ.ಗಳನ್ನು ಮತ್ತು ದಿ ಬ್ಯಾರಿ ವೆಲ್‍ಫೇರ್ ಅಸೋಸಿಯೇಷನ್‍ಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ 2 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

    * ಮೈಸೂರಿನಲ್ಲಿ ದಿವಂಗತ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ.ಗಳ ಅನುದಾನ ನೀಡಲಾಗುವುದು.
    * ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಮಾದರಿಯಲ್ಲಿ ಮಾಸಿಕ ತರಬೇತಿ ಭತ್ಯೆಯನ್ನು 4000 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಲಾಗುವುದು.
    * ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿರುವ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸಿ.ಇ.ಟಿ., NEET ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು.
    * ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ JEE, NEET, GATE, GMAT ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

    * ಭಾರತದ ಪುರಾತತ್ವ ಸಮೀಕ್ಷೆ ಮತ್ತು ಕರ್ನಾಟಕ ರಾಜ್ಯದ ಪುರಾತತ್ವ ಸಮೀಕ್ಷೆ ಅಧೀನದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅತೀ ಸೂಕ್ಷ್ಮ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 15 ಕೋಟಿ ರೂ.ಗಳನ್ನು ಒದಗಿಸಲಾಗುವುದು.
    * ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲು 800 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.

  • ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

    ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ಪಿಐಎಲ್ ತಿರಸ್ಕರಿಸಿದ ಸುಪ್ರೀಂ

    ನವದೆಹಲಿ: ದೇಶದ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಈ ಕುರಿತು ಅಲ್ಪಸಂಖ್ಯಾತ ಆಯೋಗದ ಮೊರೆ ಹೋಗುವಂತೆ ಸೂಚಿಸಿದೆ.

    ಬಿಜೆಪಿ ಮುಖಂಡ ಹಾಗೂ ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಂಜನ್ ಗೊಗೊಯ್ ಪೀಠವು ಈ ವಿಚಾರವನ್ನು ಅಲ್ಪಸಂಖ್ಯಾತ ಆಯೋಗವೇ ತೀರ್ಮಾನ ಮಾಡಬೇಕು ಎಂದು ಅಭಿಪ್ರಾಯ ಪಟ್ಟಿದೆ.

    ವಕೀಲ ಉಪಾಧ್ಯಾಯ್ ಅವರು ತಮ್ಮ ಅರ್ಜಿಯಲ್ಲಿ ಹಿಂದೂ ಅಲ್ಪಸಂಖ್ಯಾತರಿಗೆ ಸಲ್ಲಬೇಕಾದ ಹಕ್ಕುಗಳು ಅವರಿಗೆ ದೊರೆಯುತ್ತಿಲ್ಲ. ಕೇಂದ್ರ ಅಥವಾ ರಾಜ್ಯಗಳು ಹಿಂದೂಗಳನ್ನು ಅಲ್ಪಸಂಖ್ಯಾತರ ಅಡಿಯಲ್ಲಿ ಗುರುತಿಸಲ್ಲ ಎಂದು ಉಲ್ಲೇಖಿಸಿದ್ದರು.

    ಅಲ್ಲದೇ ಜಮ್ಮು ಕಾಶ್ಮೀರ, ಪಂಜಾಬ್, ಲಕ್ಷದ್ವೀಪ, ಮಿಜೊರಾಂ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ, ಮಣಿಪುರ ರಾಜ್ಯಗಳಲ್ಲಿರುವ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಗುರುತಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಸಲ್ಲಿಸಿದ್ದರು.

    ತಮ್ಮ ಅರ್ಜಿಗೆ ಪೂರಕವಾಗಿ, ಕೇಂದ್ರ ಸರ್ಕಾರ ಟೆಕ್ನಿಕಲ್ ಶಿಕ್ಷಣ ಓದುತ್ತಿರುವ 20 ಸಾವಿರ ಮಂದಿಗೆ ವಿದ್ಯಾರ್ಥಿ ವೇತನ ನೀಡಿದೆ. ಜಮ್ಮು ಕಾಶ್ಮೀರದಲ್ಲಿ ಮುಸ್ಲಿಮರ ಜನಸಂಖ್ಯೆ ಶೇ.68.30 ಇದ್ದರೂ ವಿತರಣೆಯಾದ 753 ಮಂದಿಯಲ್ಲಿ 717 ಮಂದಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಕ್ಕಿದೆ. ನಿಜವಾಗಿಯೂ ಇಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದರೂ ಅವರಿಗೆ ವಿದ್ಯಾರ್ಥಿ ವೇತನ ಸಿಗದೇ ಅನ್ಯಾಯವಾಗಿದೆ ಎನ್ನುವ ವಿಚಾರವನ್ನು ಉಲ್ಲೇಖಿಸಿದ್ದರು.

    ಮುಸ್ಲಿಂ, ಕೈಸ್ತ, ಸಿಖ್, ಬೌದ್ಧ ಧರ್ಮ, ಪಾರ್ಸಿ, ಧರ್ಮದ ಸಮುದಾಯಗಳನ್ನು 1993 ರಲ್ಲಿ ಕೇಂದ್ರ ಸರ್ಕಾರ ನೋಟಿಫಿಕೇಶನ್ ಹೊರಡಿಸಿ ಅಲ್ಪಸಂಖ್ಯಾತರ ಮಾನ್ಯತೆ ನೀಡಿತ್ತು. 2014ರಲ್ಲಿ ಈ ಪಟ್ಟಿಗೆ ಜೈನ ಧರ್ಮವನ್ನು ಸೇರಿಸಿತ್ತು.

    ಆದರೆ ಹಿಂದೂಗಳಿಗೆ ಯಾವುದೇ ಅಲ್ಪ ಸಂಖ್ಯಾತ ಸ್ಥಾನಮಾನ ನೀಡಿಲ್ಲ. ನಿಜವಾಗಿಯೂ ಬಹುಸಂಖ್ಯಾತರು ಎಂದು ಗುರುತಿಸಿಕೊಂಡ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದು, ಇದರಿಂದಾಗಿ ಸರ್ಕಾರಿ ಲಾಭಗಳು ತಲುಪಬೇಕಾದ ಜನರಿಗೆ ತಲುಪುತ್ತಿಲ್ಲ. ಹೀಗಾಗಿ ಈ 8 ರಾಜ್ಯಗಳಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸ್ಥಾನಮಾನ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

    2011ರ ಜನಗಣತಿಯ ಪ್ರಕಾರ ಲಕ್ಷದ್ವೀಪದಲ್ಲಿ ಶೇ.2.5, ಮಿಜೊರಾಂ ಶೇ.2.75, ನಾಗಾಲ್ಯಾಂಡ್ ಶೇ.8.75, ಮೇಘಾಲಯ ಶೇ.11.53, ಜಮ್ಮು ಕಾಶ್ಮೀರ ಶೇ. 28.44, ಅರುಣಾಚಲ ಪ್ರದೇಶ ಶೇ.29, ಮಣಿಪುರ ಶೇ. 31.39 ಮತ್ತು ಪಂಜಾಬ್‍ನಲ್ಲಿ ಶೇ.38.40 ರಷ್ಟು ಹಿಂದೂಗಳು ವಾಸಿಸುತ್ತಿದ್ದಾರೆ. ಲಕ್ಷದ್ವೀಪ ಶೇ.96.20, ಜಮ್ಮು ಕಾಶ್ಮೀರ ಶೇ.68.30, ಅಸ್ಸಾಂ ಶೇ.34.20, ಪಶ್ಚಿಮ ಬಂಗಾಳ ಶೇ.27.5, ಕೇರಳ ಶೇ.26.20 ಉತ್ತರ ಪ್ರದೇಶ ಶೇ.19.30, ಬಿಹಾರದಲ್ಲಿ ಶೇ.18 ರಷ್ಟು ಮುಸ್ಲಿಮರು ನೆಲೆಸಿದ್ದಾರೆ.

  • ಮೋದಿ, ಶಾ, ಬಿಎಸ್‍ವೈ ಕಟ್ಟಿಹಾಕಲು ಸಿಎಂ  ಕಟ್ಟುತ್ತಿದ್ದಾರೆ LDMK ಸೇನೆ!

    ಮೋದಿ, ಶಾ, ಬಿಎಸ್‍ವೈ ಕಟ್ಟಿಹಾಕಲು ಸಿಎಂ ಕಟ್ಟುತ್ತಿದ್ದಾರೆ LDMK ಸೇನೆ!

    ಬೆಂಗಳೂರು: ತಮಿಳುನಾಡಿನ ರಾಜಕೀಯದಲ್ಲಿ ನೀವೆಲ್ಲಾ ಎಐಡಿಎಂಕೆ, ಡಿಎಂಕೆ, ಪಿಎಂಕೆ ಹೆಸರುಗಳನ್ನ ಕೇಳಿರಬಹುದು. ಆದ್ರೆ ನಮ್ಮ ರಾಜ್ಯದಲ್ಲಿ ಆ ಹೆಸರುಗಳು ಅಷ್ಟೊಂದು ಸದ್ದು ಮಾಡಿಲ್ಲ. ಇನ್ನು ಎಲ್‍ಡಿಎಂಕೆ 2 ಹೆಸರನ್ನು ಕೇಳಿಯೇ ಇಲ್ಲ. ಆದರೆ ಈಗ ಇದೇ ಎಲ್‍ಡಿಎಂಕೆ ಸದ್ದು ಮಾಡಲು ಸಜ್ಜಾಗುತ್ತಿದೆ.

    2018ರ ಎಲೆಕ್ಷನ್‍ನಲ್ಲಿ ಇದೇ ಎಲ್‍ಡಿಎಂಕೆ ಕಾಂಬಿನೇಶನ್ ಹೆಚ್ಚು ಮಾಡಲಿದೆ. ಎಲ್ ಅಂದ್ರೆ ಲಿಂಗಾಯಿತ, ಡಿ ಅಂದ್ರೆ ದಲಿತ, ಎಂ ಅಂದ್ರೆ ಮುಸ್ಲಿಂ, ಕೆ ಸ್ಕ್ವಯರ್ ಅಂದ್ರೆ ಕುರುಬ ಪ್ಲಸ್ ಕನ್ನಡಿಗ. ಅಂದಹಾಗೆ ಈ ಕಾಂಬಿನೇಶನ್‍ನ ಕ್ಯಾಪ್ಟನ್ ಸಿಎಂ ಸಿದ್ದರಾಮಯ್ಯ. 2018ರ ಎಲೆಕ್ಷನ್‍ಗೆ ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್ ಮಾಡಿದ್ದು, ಬಿಎಸ್‍ವೈ ಕಟ್ಟಿಹಾಕಲು ಎಲ್‍ಡಿಎಂಕೆ ಸ್ಕ್ವಯರ್ ಕಾಂಬಿನೇಶನ್ ಕಾರ್ಡ್ ಪ್ಲೇಗೆ ಮುಂದಾಗಿದ್ದಾರೆ. ಲಿಂಗಾಯಿತ, ದಲಿತ, ಮುಸ್ಲಿಂ, ಕುರುಬ ಸಮುದಾಯಗಳನ್ನು ಒಂದೆಡೆ ಸೇರಿಸಲು ತಂತ್ರ ರೂಪಿಸಿದ್ದಾರೆ.

    ಸಮುದಾಯಗಳ ಸಮಾವೇಶ ನಡೆಸ್ತಾರೆ ಸಿದ್ದು:
    ಅಂದಹಾಗೆ 2018ರ ಚುನಾವಣೆಗೆ ಸಿದ್ದರಾಮಯ್ಯ ಮುಂದಿನ ತಿಂಗಳಿನಿಂದಲೇ ಅಖಾಡಕ್ಕೆ ಇಳಿಯಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಲಿಂಗಾಯಿತರನ್ನು ಸೆಳೆಯಲು ಸಿದ್ಧತೆ ನಡೆಸಿದ್ದು, ಬೆಳಗಾವಿ, ಹುಬ್ಬಳ್ಳಿ, ಬಾಗಲಕೋಟೆ, ಗುಲ್ಬರ್ಗಾಗಳಲ್ಲಿ ಲಿಂಗಾಯಿತರ ಬೃಹತ್ ಸಮಾವೇಶ ನಡೆಸಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

    ಸಚಿವರಾದ ಎಂ.ಬಿ.ಪಾಟೀಲ್, ವಿನಯ್‍ಕುಲಕರ್ಣಿ, ಉತ್ತರ ಕರ್ನಾಟಕದ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರಿಗೆ ಉಸ್ತುವಾರಿ ವಹಿಸಲಾಗಿದೆ ಎಂದು ಹೇಳಲಾಗುತ್ತದೆ. ಮೂವರು ನಾಯಕರನ್ನು ಮುಂದಿಟ್ಟುಕೊಂಡು ಬಿಎಸ್‍ವೈ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸ್ತಿದ್ದು, ಕೂಡಲಸಂಗಮದಲ್ಲಿ 150 ಕೋಟಿ ವೆಚ್ಚದಲ್ಲಿ ಅಕ್ಷರಧಾಮ ಮಾದರಿಯಲ್ಲಿ ಬಸವಣ್ಣನ ಅನುಭವ ಮಂಟಪ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದು, ನವೆಂಬರ್‍ನಲ್ಲಿ ಅಡಿಗಲ್ಲು ಹಾಕುವ ಸಾಧ್ಯತೆ ಇದೆ. ಇಲ್ಲಿಯೇ ವೀರಶೈವ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಮಾಸ್ಟರ್ ಫ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ.

    ಈ ನಡುವೆ ದಲಿತರನ್ನ ಒಗ್ಗೂಡಿಸಲು ಸಿದ್ದರಾಮಯ್ಯ ಫ್ಲ್ಯಾನ್ ಮಾಡಿದ್ದು, ದಲಿತರನ್ನ ಕಾಂಗ್ರೆಸ್‍ನತ್ತ ಸೆಳೆಯಲು ಹಲವು ಕಾಯಕ್ರಮಗಳು ರೂಪಿಸ್ತಿದ್ದಾರೆ. ಅಂಬೇಡ್ಕರ್ ಅವರ 125ನೇ ವರ್ಷಾಚರಣೆ ಹೆಸರಿನಲ್ಲಿ ಹಲವು ಕಾರ್ಯಕ್ರಮ ನಡೆಸುತ್ತಿದ್ದು ಮುಂದೆ ದಲಿತ, ಮುಸ್ಲಿಂ ಸಮಾವೇಶಗಳನ್ನು ನಡೆಸುತ್ತಾರೆ ಎನ್ನಲಾಗಿದೆ.

    ಈ ಎಲ್ಲದರ ಜೊತೆ ಆಗಸ್ಟ್ ನಿಂದ ಕಾಂಗ್ರೆಸ್ ನಡಿಗೆ ಜನರ ಬಳಿಗೆ ಕಾರ್ಯಕ್ರಮ ಆರಂಭಿಸುತ್ತಿದ್ದು, ಸಮುದಾಯಗಳ ಓಲೈಕೆಯೇ ಕಾರ್ಯಕ್ರಮದ ಪ್ರಮುಖ ಭಾಗ ಅಂತಾ ಹೇಳಲಾಗುತ್ತಿದೆ.. ಒಟ್ಟಿನಲ್ಲಿ ಸಿದ್ದರಾಮಯ್ಯ ಸದ್ದಿಲ್ಲದೆ ಸಮರಾಭ್ಯಾಸ ಆರಂಭಿಸಿದ್ದು, ಎಲ್‍ಡಿಎಂಕೆ ಕಾಂಬಿನೇಶನ್ ಎಷ್ಟರಮಟ್ಟಿಗೆ ಯಶಸ್ವಿ ಆಗುತ್ತೆ.? ಸಿಎಂಗೆ ತಿರುಗೇಟು ಕೊಡಲು ಶಾ, ಮೋದಿ, ಬಿಎಸ್‍ವೈ ಮೈಂಡ್‍ಗೇಮ್ ಏನು ಎನ್ನುವ ಪ್ರಶ್ನೆಗೆ ಕಾಲವೇ ಉತ್ತರಿಸಲಿದೆ.