Tag: Miss World

  • Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

    Miss World | ಥಾಯ್ಲೆಂಡ್‌ನ ಒಪಾಲ್ ಸುಚಾತಾಗೆ 72ನೇ ವಿಶ್ವ ಸುಂದರಿ ಕಿರೀಟ

    ಹೈದರಾಬಾದ್‌: ಥಾಯ್ಲೆಂಡ್‌ನ ಒಪಾಲ್ ಸುಚಾತಾ ಚೌಂಗಶ್ರೀ (Opal Suchata Chuangsri) ಅವರು 72ನೇ ಆವೃತ್ತಿಯ ವಿಶ್ವ ಸುಂದರಿ (Miss World) ಕಿರೀಟ ಮುಡಿಗೇರಿಸಿಕೊಂಡಿದ್ದು, ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ‘ರನ್ನ‌ರ್ ಅಪ್’ ಆಗಿ ಹೊರಹೊಮ್ಮಿದ್ದಾರೆ.

    ಶನಿವಾರ ಸಂಜೆ ಹೈದರಾಬಾದ್‌ನ (Hyderabad) ಹೈಟೆಕ್‌ ಎಕ್ಸಿಬಿಷನ್ ಸೆಂಟರ್‌ನಲ್ಲಿ ನಡೆದ 72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಸುಚಾತಾ ಕಿರೀಟ ತಮ್ಮದಾಗಿಸಿಕೊಂಡರು. ಇನ್ನೂ ಭಾರತವನ್ನು ಪ್ರತಿನಿಧಿಸಿದ ನಂದಿನಿ ಗುಪ್ತಾ ಅವರು ಅಗ್ರ 8ರಲ್ಲಿ ಸ್ಥಾನ ಪಡೆಯುವ ಮುನ್ನವೇ ಹೊರಬಿದ್ದರು. ಇದನ್ನೂ ಓದಿ: ‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್

    ವಿಜೇತರಿಗೆ 1 ಮಿಲಿಯನ್ ಡಾಲರ್ ಅಂದರೆ ಸುಮಾರು 8 ಕೋಟಿ ರೂ. ಬೆಲೆ ಬಾಳುವ ವಜ್ರದ ಕಿರೀಟ ಅವರ ಮುಡಿಗೆ ಸಿಂಗರಿಸಲಾಯಿತು. ಇಥಿಯೋಪಿಯಾದ ಹಾಸೆಟ್ ಡೆರೆಜ್ ಅದ್ಮಾಸ್ಸು ಮೊದಲ ರನ್ನರಪ್‌ ಆದ್ರೆ, ಪೋಲೆಂಡಿನ ಪೊಲ್ಯಾಂಡ್‌ನ ಸುಂದರಿ 2ನೇ ರನ್ನರ್ ಅಪ್ ಹಾಗೂ ಕೆರೆಬಿಯನ್ ದ್ವೀಪದ ಸುಂದರಿ 3ನೇ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

    ಈ ಬಾರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ ಒಟ್ಟು 108 ಸ್ಪರ್ಧಿಗಳು ಭಾಗವಹಿಸಿದ್ದರು. ಕಳೆದ ಒಂದು ತಿಂಗಳಿನಿಂದ ವಿವಿಧ ಸುತ್ತುಗಳಲ್ಲಿ ಈ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

    ಅಮೆರಿಕ ಮತ್ತು ಕೆರಿಬಿಯನ್, ಯುರೋಪ್, ಏಷ್ಯಾ ಹಾಗೂ ಓಸಿನಿಯಾ ಎಂಬ ನಾಲ್ಕು ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಿಂದ ಒಂದು ವಿಭಾಗದಿಂದ 10 ಜನರನ್ನು ಸೆಮಿಫೈನಲ್ಸ್‌ಗೆ ಆಯ್ಕೆ ಮಾಡಲಾಗಿತ್ತು. ನಂತರ ಒಂದು ವಿಭಾಗದಿಂದ 4 ಜನರಂತೆ 16 ಸ್ಪರ್ಧಿಗಳನ್ನು ಫೈನಲ್‌ಗೆ ಆಯ್ಕೆಮಾಡಲಾಗಿತ್ತು. ಅದರಲ್ಲಿ ಟಾಪ್ 8 ಹಾಗೂ ಫೈನಲ್ ನಡೆಯುತ್ತದೆ. ವಿಶ್ವ ಸುಂದರಿಯ ಜೊತೆಗೆ ಫೈನಲ್ ಪ್ರವೇಶಿಸಿದ ಮೂವರಿಗೆ ರನ್ನರ್ ಅಪ್ ಸ್ಥಾನ ಲಭಿಸಿದೆ.

    ಗ್ರಾಂಡ್ ಫಿನಾಲೆಯ ನಿರೂಪಣೆಯನ್ನು 2016ರ ವಿಶ್ವ ಸುಂದರಿ ಸ್ಪರ್ಧೆಯ ವಿಜೇತೆ ಸ್ಟೆಫನಿ ಡೆಲ್ ವ್ಯಾಲೆ ನಡೆಸಿಕೊಟ್ಟರು. ಅವರೊಂದಿಗೆ ಭಾರತದ ಸಚಿನ್ ಕುಂಬಾ‌ರ್ ಇದ್ದರು. ಕಾರ್ಯಕ್ರಮದಲ್ಲಿ 2017ರಲ್ಲಿ ವಿಶ್ವ ಸುಂದರಿಯಾಗಿದ್ದ ಮಾನುಶಿ ಚಿಲ್ಲ‌ರ್, ಬಾಲವುಡ್ ನಟ ಸೋನು ಸೂದ್ ಸೇರಿದಂತೆ ಹಲವು ನಟ – ನಟಿಯರು ಭಾಗವಹಿಸಿದ್ದರು.

  • 27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ

    ವಿಶ್ವ ಸುಂದರಿ (Miss World) ಸ್ಪರ್ಧೆಯನ್ನು ಈ ಬಾರಿ ಭಾರತದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಭಾರತವು (India) ಇಂಥದ್ದೊಂದು ಅವಕಾಶ ಪಡೆದಿದೆ. ನಿನ್ನೆ ನಡೆದ ಸಭೆಯಲ್ಲಿ ಈ ಬಾರಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತ ಆತಿಥ್ಯ ವಹಿಸಿಕೊಳ್ಳಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

    ವಿಶ್ವ ಸುಂದರಿ (Vishwasundari) ಸ್ಪರ್ಧೆಯನ್ನು ಆಯೋಜನೆ ಮಾಡಲು ಹಲವು ರಾಷ್ಟ್ರಗಳು ತುದಿಗಾಲಲ್ಲಿ ನಿಂತಿರುತ್ತವೆ. ಅದೊಂದು ಪ್ರತಿಷ್ಠಿತ ಸ್ಪರ್ಧೆ ಆಗಿರುವುದರಿಂದ ಆತಿಥ್ಯ ವಹಿಸಲು ಸಹಜವಾಗಿಯೇ ಪೈಪೋಟಿ ನಡೆದಿರುತ್ತದೆ. ಈ ಎಲ್ಲ ಪೈಪೋಟಿಯಾಚೆ ಈ ಬಾರಿ ಭಾರತದಲ್ಲಿ ಸ್ಪರ್ಧೆ ನಡೆಯಲಿದೆ.

    ಎರಡನೇ ಬಾರಿ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆಯುತ್ತಿದ್ದು, ಮೊದಲ ಬಾರಿಗೆ ಬೆಂಗಳೂರಿನಲ್ಲಿ (Bangalore) ನಡೆದಿತ್ತು ಎನ್ನುವುದು ವಿಶೇಷ. 1996ರಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತ ಆತಿಥ್ಯ ವಹಿಸಿಕೊಂಡಿತ್ತು. ಆ ಸ್ಪರ್ಧೆಯು ಬೆಂಗಳೂರಿನಲ್ಲಿ ಆಯೋಜನೆಗೊಂಡಿತ್ತು. ಅಮಿತಾಭ್ ಬಚ್ಚನ್ (Amitabh Bachchan) ಅದರ ನೇತೃತ್ವ ವಹಿಸಿಕೊಂಡಿದ್ದರು. ಇದನ್ನೂ ಓದಿ:ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ಬೆಂಗಳೂರಿನಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆದಾಗ ಭಾರೀ ಪ್ರತಿರೋಧ ವ್ಯಕ್ತವಾಯಿತು. ಇದರ ವಿರುದ್ಧ ಮಹಿಳಾ ಸಂಘಟನೆಗಳು ಬೀದಿಗೆ ಇಳಿದು ಹೋರಾಟ ನಡೆಸಿದ್ದವು. ಆಗ ಮುಖ್ಯಮಂತ್ರಿಗಳಾಗಿ ಜೆ.ಎಚ್. ಪಟೇಲ್ ಅವರು ಅಧಿಕಾರ ವಹಿಸಿದ್ದರು. ಪ್ರತಿಭಟನೆ ಎಷ್ಟೇ ಜೋರಾಗಿದ್ದರೂ, ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮ ನಡೆಸಲು ಪಟೇಲ್ (JH Patel) ಸೂಚಿಸಿದ್ದರು. ಈ ವೇಳೆಯಲ್ಲಿ ಅಮಿತಾಭ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆಗ ನಟ ಅಂಬರೀಶ್ ಅವರು ಅಮಿತಾಭ್ ನೆರವಿಗೆ ಧಾವಿಸಿದ್ದರು.

    ವಿಶ್ವಸುಂದರಿ ಸ್ಪರ್ಧೆಯು ಒಂದು ತಿಂಗಳುಗಳ ಕಾಲ ನಡೆಯಲಿದ್ದು, ಈ ಬಾರಿ ಯಾವ ರಾಜ್ಯದಲ್ಲಿ ಇದನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿಲ್ಲ. ಆಯೋಜಕರು ಮುಂದಿನ ದಿನಗಳಲ್ಲಿ ತಿಳಿಸಬಹುದು. ಅಂದಹಾಗೆ ಈ ಬಾರಿ ಭಾರತದಿಂದ ನಂದಿತಾ ಗುಪ್ತಾ ಸೇರಿದಂತೆ ಹಲವರು ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ: ಆತಂಕ ಬಿಚ್ಚಿಟ್ಟ ಭುವನಸುಂದರಿ

    ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ: ಆತಂಕ ಬಿಚ್ಚಿಟ್ಟ ಭುವನಸುಂದರಿ

    ‘ಹೃದಯಾಘಾತವಾದಾಗ (Heart Attack) ನನಗೂ ಆತಂಕವಾಗಿತ್ತು. ಕೂಡಲೇ ಆಸ್ಪತ್ರೆಗೆ ದಾಖಲಾದೆ. ನನಗೆ ಆಗ ಆಂಜಿಯೋಪ್ಲ್ಯಾಸ್ಟಿ ಮಾಡಿ, ಸ್ಟಂಟ್ ಹಾಕಿದ್ದಾರೆ. ವೈದ್ಯರು ನನ್ನೊಂದಿಗೆ ಮಾತನಾಡುತ್ತಾ ನನ್ನ ಹೃದಯ ವಿಶಾಲವಾಗಿದೆ ಮತ್ತು ಪ್ರೀತಿಯಿಂದ ತುಂಬಿದೆ ಎಂದಿದ್ದಾರೆ. ಹಾಗಾಗಿ ನಾನು ನೆಮ್ಮದಿಯಿಂದ ಇದ್ದೇನೆ. ನನ್ನ ಆರೋಗ್ಯದ ಬಗ್ಗೆ ವಿಚಾರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ’ ಎಂದಿದ್ದಾರೆ ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್.

    ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿಯೂ (Bhuvanasundari) ಆಗಿರುವ ಸುಶ್ಮಿತಾ ಸೇನ್ (Sushmita Sen) ಗೆ ಹೃದಯಾಘಾತ ಆಗಿರುವ ವಿಚಾರ ನಿನ್ನೆಯಷ್ಟೇ ತಿಳಿದಿತ್ತು. ಎರಡ್ಮೂರು ದಿನಗಳ ಹಿಂದೆಯೇ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ವಿಷಯವನ್ನು ಸ್ವತಃ ಸುಶ್ಮಿತಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು.

    ಡೇಟಿಂಗ್, ಡಿವೋರ್ಸ್ ವಿಚಾರವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಸುಶ್ಮಿತಾ, ಇಂಥದ್ದೊಂದು ವಿಷಯವನ್ನು ಹಂಚಿಕೊಂಡಾಗ ಅಭಿಮಾನಿಗಳಿಗೆ ಆತಂಕವಾಗಿದ್ದು ಸಹಜ. ಈಗ ನಿಮ್ಮ ಆರೋಗ್ಯ ಹೇಗಿದೆ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಹೃದಯಾಘಾತಕ್ಕೆ ಕಾರಣವನ್ನೂ ಹಲವರು ಕೇಳಿದ್ದಾರೆ. ತಡವಾಗಿ ಸುದ್ದಿ ಹಂಚಿಕೊಂಡಿದ್ದನ್ನೂ ಹಲವರು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್ 4ಕ್ಕೆ ‘ಕಬ್ಜ’ ಸಿನಿಮಾ ಟ್ರೈಲರ್: ಕಾಯುತ್ತಿದ್ದ ಅಭಿಮಾನಿಗಳಲ್ಲಿ ಸಂಭ್ರಮ

    ಸುಶ್ಮಿತಾ ಅವರೇ ಹೇಳಿಕೊಂಡಂತೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯದ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಅಭಿಮಾನಿಗಳಿಗೂ ಅವರು ಹೇಳಿದ್ದಾರೆ. ವೈದ್ಯರು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಚಿಕಿತ್ಸೆ ನೀಡಿದ್ದರಿಂದ ಗುಣಮುಖರಾಗುತ್ತಿರುವ ವಿಚಾರವನ್ನೂ ಅವರು ತಿಳಿಸಿದ್ದಾರೆ.  ತಮ್ಮ ತಂದೆಯು ಈ ಸಮಯದಲ್ಲಿ ಧೈರ್ಯ ನೀಡಿದ್ದನ್ನೂ ಅವರು ಸ್ಮರಿಸಿಕೊಂಡಿದ್ದಾರೆ.

  • ಈ ಹುಡುಗರಿಗೆ ಅವಳ ತೂಕದ್ದೇ ಚಿಂತೆ- ಭುವನ ಸುಂದರಿ ಹೀಗೆಕಾದರು..?

    ಈ ಹುಡುಗರಿಗೆ ಅವಳ ತೂಕದ್ದೇ ಚಿಂತೆ- ಭುವನ ಸುಂದರಿ ಹೀಗೆಕಾದರು..?

    ಭುವನ ಸುಂದರಿ ಆಗುವುದು ಸಾಮಾನ್ಯ ಮಾತಲ್ಲ. ಕೇವಲ ದೇಹಸಿರಿ ಮಾತ್ರವಲ್ಲ, ಅವರ ಬುದ್ದಿಮತ್ತೆಯನ್ನೂ ತೂಕಕ್ಕಿಟ್ಟು ಅಳೆಯಲಾಗುತ್ತದೆ. ಹಾಗಾಗಿ ಭುವನ ಸುಂದರಿಯರು ಏಳು ಮಲ್ಲಿಗೆಯ ತೂಕದವರಾಗಿರುತ್ತಾರೆ. ಸದಾ ಬಳುಕುವ ಬಳ್ಳಿಯಂತೆಯೇ ಇರಬೇಕೆಂದು ಬಯಸುತ್ತಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    2021ರ ಭುವನ ಸುಂದರಿ ಹರ್ನಾಜ್ ಸಂಧು ಈ ಹಿಂದೆ ತಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾ, ‘ನಾನು ಸೌಂದರ್ಯಕ್ಕೆ ತುಂಬಾ ಮಹತ್ವ ಕೊಡುತ್ತೇನೆ. ಒಂದು ಕೆ.ಜಿ ತೂಕ ಹೆಚ್ಚಾದರೂ ನನಗೆ ಟೆನ್ಷನ್ ಆಗುತ್ತದೆ’ ಎಂದು ಹೇಳಿಕೊಂಡಿದ್ದರು. ಅಷ್ಟರ ಮಟ್ಟಿಗೆ ಅವರಲ್ಲಿ ಬ್ಯುಟಿ ಕಾನ್ಸಿಯಸ್ ಇತ್ತು. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    ಇಂತಹ ಭುವನ ಸುಂದರಿಯು ಇದೀಗ ತೂಕದ ಕಾರಣಕ್ಕಾಗಿ ಟ್ರೋಲ್ ಆಗಿದ್ದಾರೆ. ಮೊನ್ನೆಯಷ್ಟೇ ನಡೆದ ಫ್ಯಾಶನ್ ಶೋನಲ್ಲಿ ಆಕರ್ಷಕ ಉಡುಪು ಧರಿಸಿ ಭಾಗಿಯಾಗಿದ್ದರು. ಶೋ ಸ್ಟಾಪರ್ ಆಗಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದರು. ಅವರು ತೊಟ್ಟಿದ್ದ ಕಾಸ್ಟ್ಯೂಮ್ ಎಲ್ಲರ ಗಮನ ಸೆಳೆದಿತ್ತು. ಆದರೆ, ಸೆರೆ ಹಿಡಿಯಲಾಗಿದ್ದ ಫೋಟೋ ಮತ್ತು ವಿಡಿಯೋಗಳು ಸೋಷಿಯಲ್ ಮೀಡಿಯಾಗೆ ಆಹಾರವಾಗಿ ಬಿಟ್ಟವು. ಇವರ ನಡಿಗೆ ಕಂಡ ನೆಟ್ಟಿಗರು ‘ಹರ್ನಾಜ್ ದಪ್ಪಗಾಗಿದ್ದಾರೆ. ಇಷ್ಟೊಂದು ತೂಕ ಏರಿಕೆ ಆಗಲು ಕಾರಣವೇನು? ಸಮಸ್ಯೆ ಏನು’ ಹೀಗೆ ನಾನಾ ರೀತಿಯಲ್ಲಿ ಪ್ರಶ್ನೆಗಳನ್ನು ಮಾಡಿದ್ದಾರೆ. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

    ಆದರೆ, ಹರ್ನಾಜ್ ಈ ಬಗ್ಗೆ ಯಾವುದೇ ಪತ್ರಿಕ್ರಿಯೆಯನ್ನೂ ನೀಡಿಲ್ಲ. ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದು ಅವರ ಗಮನಕ್ಕೂ ಬಂದಿದ್ದರೂ, ತಣ್ಣಗೆ ನಕ್ಕು ಸುಮ್ಮನಾಗಿದ್ದಾರೆ. ಅವರು ಸುಮ್ಮನಿದ್ದರೂ, ನೆಟ್ಟಿಗರು ಮಾತ್ರ ಪ್ರಶ್ನೆ ಮೇಲೆ ಪ್ರಶ್ನೆ ಮಾಡುವುದರ ಮೂಲಕ ಅವರನ್ನು ಟ್ರೋಲ್ ಮಾಡಿ, ಕಾಲೆಳೆಯುತ್ತಿದ್ದಾರೆ.

  • ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

    ಭಾರತೀಯ ನಾರಿ ಡಯಾನಾ ಹೆಡನ್ ಅಲ್ಲ, ಐಶ್ವರ್ಯಾ ರೈ: ಮೋದಿ ಎಚ್ಚರಿಕೆಯ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ಕೊಟ್ಟ ತ್ರಿಪುರಾ ಸಿಎಂ

    ಅಗರ್ತಲಾ: ಇತ್ತೀಚೆಗಷ್ಟೇ ಇಂಟರ್ ನೆಟ್ ಬಗ್ಗೆ ಹೇಳಿಕೆ ನೀಡಿದ್ದ ತ್ರಿಪುರಾ ಸಿಎಂ ವಿಪ್ಲವ್ ದೇವ್ ಇದೀಗ ಮತ್ತೊಂದು ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.

    ಅಗರ್ತಲಾದ ಪ್ರಜ್ಞಾ ಭವನ್ ನಲ್ಲಿ ನಡೆದ ಕೈ ಮಗ್ಗಗಳು ಮತ್ತು ಕರಕುಶಲ ವಸ್ತುಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಐಶ್ವರ್ಯಾ ರೈ ನಿಜವಾದ ಭಾರತೀಯ ನಾರಿ. ಆದ್ರೆ ಮಾಜಿ ವಿಶ್ವಸುಂದರಿ ಡಯಾನಾ ಹೆಡನ್ ಅಲ್ಲ. ಭಾರತೀಯ ನಾರಿ ಲಕ್ಷ್ಮಿ, ಸರಸ್ವತಿಯರನ್ನು ಪ್ರತಿನಿಧಿಸುತ್ತಾರೆ. ಐಶ್ವರ್ಯ ರೈ ಸಹ ಭಾರತೀಯ ಮಹಿಳೆಯರನ್ನು ಪ್ರತಿನಿಧಿಸುತ್ತಾರೆ ಅಂತ ಹೇಳಿದ್ದಾರೆ.

    `ಐಶ್ವರ್ಯ ರೈ ಅವರಿಗೆ ಈ ಕಿರೀಟ ತೊಡಿಸಿದ್ದರಲ್ಲಿ ಅರ್ಥವಿದೆ. ಆದರೆ ಡಯಾನಾ ಹೆಡನ್ ಗೆ ಈ ಪ್ರಶಸ್ತಿ ಸಿಕ್ಕಿದ್ದು ಹೇಗೆ?’ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:  ಮಹಾಭಾರತದ ಕಾಲದಲ್ಲೇ ಇಂಟರ್ ನೆಟ್ ಇತ್ತು : ತ್ರಿಪುರಾ ಸಿಎಂ

    `ಹಿಂದೆ ಭಾರತೀಯ ಮಹಿಳೆಯರು ಸೌಂದರ್ಯವರ್ಧಕ, ಶಾಂಪೂ ಮೊದಲಾದವುಗಳನ್ನು ಬಳಸುತ್ತಿರಲಿಲ್ಲ. ಆ ಸಂದರ್ಭದಲ್ಲಿ ಇವುಗಳೆಲ್ಲ ಅಂತಾರಾಷ್ಟ್ರೀಯ ಮಾಫಿಯಾಗಳಾಗಿದ್ದವು. ನಮ್ಮ ದೇಶದಲ್ಲಿ ಸಾಕಷ್ಟು ಮಾರುಕಟ್ಟೆ ಇದೆ. ಇಂದು ದೇಶದ ಮೂಲೆ ಮೂಲೆಯಲ್ಲಿಯೂ ಬ್ಯೂಟಿ ಪಾರ್ಲರ್ ಗಳು ತಲೆಯೆತ್ತಿವೆ. ಆದರೆ ಇವುಗಳಿಂದ ಸಿಗುವ ಸೌಂದರ್ಯ ನಿಜವಾದ ಸೌಂದರ್ಯವಲ್ಲ’ ಎಂದು ಅವರು ತಿಳಿಸಿದ್ದಾರೆ.

    ಒಟ್ಟಿನಲ್ಲಿ  ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ಎಲ್ಲಾ ನಾಯಕರಿಗೂ ಸೂಚನೆ ನೀಡಿದ್ದರು. ವಿನಾಕಾರಣ ಯಾರೊಬ್ಬರೂ ಮಾಧ್ಯಮದ ಮುಂದೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಬಾರದೆಂದು ಎಚ್ಚರಿಕೆ ನೀಡಿದ್ದರು. 1994ರಲ್ಲಿ ಐಶ್ವರ್ಯಾ ರೈ ವಿಶ್ವ ಸುಂದರಿಯಾದ್ರೆ, 1997 ರಲ್ಲಿ ಡಯಾನಾ ಹೆಡನ್ ವಿಶ್ವ ಸುಂದರಿ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದ್ದರು.

  • ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

    ವಿಶ್ವ ಸುಂದರಿ ಮಾನುಷಿ ಚಿಲ್ಲರ್ ಮೊದಲು ಡ್ಯಾನ್ಸ್ ಸ್ಟೆಪ್ ಕಲಿತಿದ್ದು ಬೆಂಗ್ಳೂರಿನಲ್ಲಿ!

    ಬೆಂಗಳೂರು: ವಿಶ್ವ ಸುಂದರಿ ಕಿರೀಟವನ್ನು ಪಡೆದ 21 ವರ್ಷದ ಮಾನುಷಿ ಚಿಲ್ಲರ್‍ ಗೂ ಬೆಂಗಳೂರಿಗೂ ಸಂಬಂಧವಿದೆ. ಮಾನುಷಿ ಅವರು ತಮ್ಮ ಬಾಲ್ಯದ 5 ವರ್ಷಗಳನ್ನು ಬೆಂಗಳೂರಿನಲ್ಲಿ ಕಳೆದಿರುವುದು ವಿಶೇಷ.

    ಹೌದು. ಬಾಲ್ಯವನ್ನು ಕಳೆಯುವುದರ ಜೊತೆಗೆ ಅವರು ನೃತ್ಯ ಅಭ್ಯಾಸವನ್ನು ಆರಂಭಿಸಿದ್ದು ಬೆಂಗಳೂರಿನಲ್ಲೇ. ಎಳವೆಯಲ್ಲೇ ಪ್ರತಿಭಾವಂತರಾಗಿದ್ದ ಚಿಲ್ಲರ್ ಓದುವುದರಲ್ಲಿ ಟಾಪರ್ ಆಗಿದ್ದರು. 1997ರ ಮೇ 14 ರಂದು ಹರ್ಯಾಣದ ರೊಹ್ಟಕ್ ನಲ್ಲಿ ಜನಿಸಿದ್ದ ಮಾನುಷಿ 2 ವರ್ಷವಿದ್ದಾಗ ತಂದೆ ಮಿತ್ರ ಬಸು ಚಿಲ್ಲರ್ ಮತ್ತು ತಾಯಿ ನೀಲಮ್ ಚಿಲ್ಲರ್ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿದ್ದಾಗ ಮಾನುಷಿ ಕುಚುಪುಡಿ ಕಲಿಯೋಕೆ ಆರಂಭಿಸಿದ್ದರು.

    ಮಾನುಷಿ ಈಗ ಸೋನೆಪತ್ ನಲ್ಲಿ ಬಿಪಿಎಸ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ಓದುತ್ತಿದ್ದು, ಅಲ್ಲಿನ ಪ್ರಾಧ್ಯಾಪಕಿ ಮತ್ತು ಸಂಬಂಧಿ ಆಗಿರುವ ಡಾ. ಉಷಾ ಚಿಲ್ಲರ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಮಾನುಷಿ ಹರ್ಯಾಣದಲ್ಲಿ ಜನಿಸುವ ವೇಳೆ ತಂದೆ ಮಿತ್ರ ಚಿಲ್ಲರ್ ಅವರು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆ(ಡಿಆರ್‍ಡಿಓ)ದಲ್ಲಿ ಹಿರಿಯ ವಿಜ್ಞಾನಿಯಾಗಿ ನೇಮಕಗೊಂಡಿದ್ದರು. ಮಾನುಷಿಗೆ 2 ವರ್ಷವಿದ್ದಾಗ ಆಕೆಯನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದರು. ಮಾನುಷಿ ಹಾಗೂ ಅವರ ಪೋಷಕರು 1999-2004 ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ತಿಳಿಸಿದ್ದಾರೆ.

    ಮಾನುಷಿ ಎಲ್‍.ಕೆ.ಜಿಯಿಂದ ಮೊದಲನೇ ತರಗತಿವರೆಗೂ ಬೆಂಗಳೂರಿನಲ್ಲಿಯೇ ಓದಿದ್ದರು. ನಂತರ ಹರ್ಯಾಣದಲ್ಲಿ ಓದನ್ನು ಮುಂದುವರಿಸುತ್ತಿದ್ದಾಳೆ. ಆಕೆ ಎಲ್ಲರ ಜೊತೆ ತುಂಬ ಸಲುಗೆಯಿಂದ ಹಾಗೂ ಹತ್ತಿರವಾಗಿದ್ದರು ಹಾಗೂ ತುಂಬಾ ಚೆನ್ನಾಗಿ ಓದುತ್ತಿದ್ದಳು. ಬೆಂಗಳೂರಿನಿಂದ ಬಂದ ಮೇಲೆ ಸೆಂಟ್. ಥಾಮಸ್ಸ್ ಶಾಲೆಗೆ ಸೇರಿದ್ದ ಆಕೆ ಅಲ್ಲೂ ಕೂಡ ಟಾಪರ್ ಆಗಿದ್ದಳು ಎಂದು ಹೊಗಳಿದರು.

    ಶನಿವಾರ ವಿಶ್ವ ಸುಂದರಿ ಕಿರೀಟವನ್ನು ಪಡೆಯುತ್ತಿದ್ದಾಗ ಮಾನುಷಿ ಓದಿದ್ದ ಶಾಲೆಯಲ್ಲಿ ಶಾಲಾ ವಾಷಿಕೋತ್ಸವವನ್ನು ಆಚರಿಸುತ್ತಿದ್ದರು. ಶಾಲೆಯ ಮುಖ್ಯ ಶಿಕ್ಷಕಿಯಾದ ಅನುರಾಧ ಅಮ್ಸ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾನುಷಿ ಮೂರನೇ ತರಗತಿಗೆ ನಮ್ಮ ಶಾಲೆ ಸೇರಿದ್ದಳು. ಆಕೆ ಶಾಲೆಯಲ್ಲಿದ್ದಾಗ ಎಲ್ಲರಿಗೂ ಹತ್ತಿರವಾಗಿದ್ದರು. ಅವರಿಗೆ ಸಾಂಸ್ಕೃತಿಕ ನೃತ್ಯಗಳಲ್ಲಿ ಸಾಕಷ್ಟು ಆಸಕ್ತಿಯಿತ್ತು. ಈ ಶಾಲೆಗೆ ಸೇರುವ ಮುಂಚೆ ಬೆಂಗಳೂರಿನಲ್ಲಿ ಸಾಂಸ್ಕೃತಿಕ ನೃತ್ಯವನ್ನು ಅಭ್ಯಾಸ ಮಾಡಿದ್ದರು ಎಂದು ಅನುರಾಧ ಅವರು ತಮ್ಮ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.

    ಚೀನಾದ ಸನ್ಯಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ 108 ದೇಶಗಳ ಸುಂದರಿಯರನ್ನು ಹಿಂದಿಕ್ಕುವ ಮೂಲಕ ಮಾನುಷಿ 2017ರ ಮಿಸ್ ವಲ್ಡ್ ಆಗಿದ್ದಾರೆ. ಮಿಸ್ ಇಂಗ್ಲೆಂಡ್ ಸ್ಟೆಫನಿ ಹಿಲ್ ಮೊದಲ ರನ್ನರ್ ಅಪ್ ಆದರೆ, ಮೆಕ್ಸಿಕೋ ಸುಂದರಿ ಆಂಡ್ರೆಜಾ ಮೆಜಾ ಎರಡನೇ ರನ್ನರ್ ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡರು.

    ಟಾಪ್ 5 ಸ್ಥಾನಕ್ಕೆ ತಲುಪಿದಾಗ ಪ್ರಶ್ನೋತ್ತರ ಸುತ್ತಿನಲ್ಲಿ ಮಾನುಷಿ ಅವರಿಗೆ, ಅತಿ ಹೆಚ್ಚು ಸಂಬಳ ನೀಡುವ ಯಾವ ವೃತ್ತಿಗೆ ನೀವು ಅರ್ಹರು ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಈ ವೇಳೆ ಸಂಬಳ ಯಾವುದೇ ವೃತ್ತಿಯ ಗೌರವವನ್ನು ನಿರ್ಧರಿಸುವುದಿಲ್ಲ. ತಾಯಿಯಾಗುವ ವೃತ್ತಿ ಮಹಿಳೆಯ ಜೀವನದಲ್ಲಿ ದೊರೆಯುವ ಅತ್ಯಂತ ಗೌರವಯುತವಾದ ಹುದ್ದೆಯಾಗಿದೆ. ಕೇವಲ ಹಣದಿಂದ ಮಾತ್ರ ಪ್ರೀತಿ ಮತ್ತು ಗೌರವ ಸಿಗುತ್ತದೆ ಎಂಬ ವಿಚಾರದಲ್ಲಿ ನನಗೆ ನಂಬಿಕೆಯಿಲ್ಲ. ನನ್ನ ತಾಯಿ ನನಗೆ ಜೀವನದ ಅತಿ ದೊಡ್ಡ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಹಾಗಾಗಿ ತಾಯಿಯಾಗುವ ವೃತ್ತಿ ಜಗತ್ತಿನಲ್ಲಿ ಅತ್ಯಂತ ಗೌರವಯುಕ್ತವಾದದ್ದು ಎಂದು ಮಾನುಷಿ ಭಾವನಾತ್ಮಕವಾಗಿ ಉತ್ತರಿಸಿದ್ದರು.

    https://www.youtube.com/watch?v=g9mR4KsHd6Q

  • 17 ವರ್ಷದ ಬಳಿಕ 2017ರ ಮಿಸ್ ​ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡ ಭಾರತೀಯ ಯುವತಿ

    17 ವರ್ಷದ ಬಳಿಕ 2017ರ ಮಿಸ್ ​ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡ ಭಾರತೀಯ ಯುವತಿ

    ಬೀಜಿಂಗ್: ಭಾರತದ 21 ವರ್ಷದ ಮಾನುಷಿ ಚಿಲ್ಲಾರ್ 17 ವರ್ಷಗಳ ಬಳಿಕ ಮಿಸ್ ​ವರ್ಲ್ಡ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಮಿಸ್ ​ವರ್ಲ್ಡ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.

    ಚೀನಾದ ಸನ್ಯಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ 108 ದೇಶಗಳ ಸುಂದರಿಯರನ್ನು ಹಿಂದಿಕ್ಕುವ ಮೂಲಕ ಮಾನುಷಿ 2017ರ ಮಿಸ್ ​ವರ್ಲ್ಡ್ ಆಗಿದ್ದಾರೆ. ಮಿಸ್ ಇಂಗ್ಲೆಂಡ್ ಸ್ಟೆಫನಿ ಹಿಲ್ ಮೊದಲ ರನ್ನರ್ ಅಪ್ ಆದರೆ, ಮೆಕ್ಸಿಕೋ ಸುಂದರಿ ಆಂಡ್ರೆಜಾ ಮೆಜಾ ಎರಡನೇ ರನ್ನರ್ ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡರು.

    ಮಾನುಷಿ ಮೂಲತಃ ಹರಿಯಾಣ ರಾಜ್ಯದ ನಿವಾಸಿಯಾಗಿದ್ದು, ನವದೆಹಲಿಯ ಸೇಂಟ್ ಥಾಮಸ್ ಸ್ಕೂಲ್ ಮತ್ತು ಸೋನ್‍ಪೇಟೆಯ ಭಗತ್ ಫೂಲ್ ಸಿಂಗ್ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದ್ದಾರೆ.

    ಟಾಪ್ 5 ಸ್ಥಾನಕ್ಕೆ ತಲುಪಿದಾಗ ಪ್ರಶ್ನೋತ್ತರ ಸುತ್ತಿನಲ್ಲಿ ಮಾನುಷಿ ಅವರಿಗೆ, ಅತಿ ಹೆಚ್ಚು ಸಂಬಳ ನೀಡುವ ಯಾವ ವೃತ್ತಿಗೆ ನೀವು ಅರ್ಹರು ಮತ್ತು ಯಾಕೆ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.

    ಸಂಬಳ ಯಾವುದೇ ವೃತ್ತಿಯ ಗೌರವವನ್ನು ನಿರ್ಧರಿಸುವದಿಲ್ಲ. ತಾಯಿಯಾಗುವ ವೃತ್ತಿ ಮಹಿಳೆಯ ಜೀವನದಲ್ಲಿ ದೊರೆಯುವ ಅತ್ಯಂತ ಗೌರವಯುತವಾದ ಹುದ್ದೆಯಾಗಿದೆ. ಕೇವಲ ಹಣದಿಂದ ಮಾತ್ರ ಪ್ರೀತಿ ಮತ್ತು ಗೌರವ ಸಿಗುತ್ತದೆ ಎಂಬ ವಿಚಾರದಲ್ಲಿ ನನಗೆ ನಂಬಿಕೆಯಿಲ್ಲ. ನನ್ನ ತಾಯಿ ನನಗೆ ಜೀವನದ ಅತಿ ದೊಡ್ಡ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ. ಹಾಗಾಗಿ ತಾಯಿಯಾಗುವ ವೃತ್ತಿ ಜಗತ್ತಿನಲ್ಲಿ ಅತ್ಯಂತ ಗೌರವಯುಕ್ತವಾದದದ್ದು ಎಂದು ಮಾನುಷಿ ಭಾವನಾತ್ಮಕವಾಗಿ ಉತ್ತರಿಸಿದರು.

    2016ರ ವಿಶ್ವ ಸುಂದರಿ ವಿಜೇತೆ ಪೋಟ್ ರಿಕೊದ ಸ್ಪೆಫನಿ ಡೆಲ್ ವ್ಯಾಲೆ ತಮ್ಮ ಮಿಸ್ ​ವರ್ಲ್ಡ್ ಕಿರೀಟವನ್ನು ಭಾರತೀಯ ಕುವರಿ ಮಾನುಷಿಯರಿಗೆ ತೊಡಿಸಿದರು.