Tag: Missed Call

  • ಕೊಲೆ ಆರೋಪಿ ಪತ್ತೆಗೆ ನೆರವಾಯ್ತು ಆ ಒಂದು ಮಿಸ್ಡ್‌ಕಾಲ್!

    ಕೊಲೆ ಆರೋಪಿ ಪತ್ತೆಗೆ ನೆರವಾಯ್ತು ಆ ಒಂದು ಮಿಸ್ಡ್‌ಕಾಲ್!

    ನವದೆಹಲಿ: ನಂಗ್ಲೋಯ್ ಪ್ರದೇಶದ 11 ವರ್ಷದ ಬಾಲಕಿಯ ಕೊಲೆ ಪ್ರಕರಣ ಭೇದಿಸಲು ಪೊಲೀಸರಿಗೆ ನೆರವಾಗಿದ್ದು ಒಂದು ಮಿಸ್ಡ್‍ಕಾಲ್ (Missed call). ಹತ್ಯೆಯಾದ ಬಾಲಕಿ ತಾಯಿಯ ಮೊಬೈಲ್‍ಗೆ (Mobile) ಅಪರಿಚಿತ ನಂಬರ್‍ನಿಂದ ಬಂದಿದ್ದ ಮಿಸ್ಡ್‌ಕಾಲ್‌ನಿಂದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.‌

    ಫೆ. 9ರಂದು ಮನೆಯಿಂದ ಶಾಲೆಗೆ ಹೊರಟಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಅದೇ ದಿನ ಬೆಳಗ್ಗೆ 11:50ರ ಸಮಯಕ್ಕೆ ಬಾಲಕಿಯ ತಾಯಿಗೆ ಅಪರಿಚಿತ ಸಂಖ್ಯೆಯಿಂದ ಮಿಸ್ಡ್‌ಕಾಲ್ ಬಂದಿತ್ತು. ನಂತರ ವಾಪಸ್ ಅದೇ ನಂಬರ್‍ಗೆ ಕರೆ ಮಾಡಿದಾಗ ಸ್ವಿಚ್ ಆಫ್ (switch off) ಆಗಿತ್ತು. ಇದನ್ನೂ ಓದಿ: ಸಚಿವರು ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣಿಸುವಂತಿಲ್ಲ, 5 ಸ್ಟಾರ್‌ ಹೋಟೆಲ್‌ನಲ್ಲಿ ಉಳಿಯುವಂತಿಲ್ಲ – ಪಾಕ್‌ ಸರ್ಕಾರ

    ಕೊಲೆಯಾದ ಬಾಲಕಿಯ ಪೋಷಕರು, ಆಕೆ ನಾಪತ್ತೆಯಾದ ದಿನವೇ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಮರುದಿನ ಫೆ. 10ರಂದು ಬಾಲಕಿ ಅಪಹರಣವಾಗಿರುವ ಶಂಕೆ ವ್ಯಕ್ತಪಡಿಸಿ ಮತ್ತೆ ದೂರು ದಾಖಲಿಸಿದ್ದರು. ಈ ಘಟನೆ ನಡೆದ 12 ದಿನಗಳ ಬಳಿಕ ಆರೋಪಿ ರೋಹಿತ್ ಅಲಿಯಾಸ್ ವಿನೋದ್‍ನನ್ನು (21) ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರು ತನಿಖೆ ಕೈಗೊಂಡು ಮೊಬೈಲ್ ಟ್ರೇಸ್ ಮಾಡಿ ಪಂಜಾಬ್ (Punjab) ಮತ್ತು ಮಧ್ಯಪ್ರದೇಶದಲ್ಲಿ (Madhya Pradesh) ದಾಳಿ ನಡೆಸಿದ್ದರು. ಫೆ. 21 ರಂದು ಆರೋಪಿಯನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಾಲಕಿಯ ಶವವನ್ನು ಘೇವ್ರಾ ಮೋರ್ ಬಳಿ ಎಸೆದಿದ್ದಾಗಿ ತಿಳಿಸಿದ್ದಾನೆ. ಕೊಳೆತ ಸ್ಥಿತಿಯಲ್ಲಿದ್ದ ಬಾಲಕಿಯ ಶವವನ್ನು ಮುಂಡ್ಕಾ ಗ್ರಾಮದ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಕಳುಹಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

    ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಲೈಂಗಿಕ ದೌರ್ಜನ್ಯ ನಡೆದಿದ್ದರೆ ಮರಣೋತ್ತರ ಪರೀಕ್ಷೆಯ ವರದಿ ದೃಢಪಡಿಸಲಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆ ಮಠ ಬಿಟ್ಟು ಪಕ್ಷ ಕಟ್ಟಿದ್ದಾರೆ- ಯಡಿಯೂರಪ್ಪ ಕೊಂಡಾಡಿದ ಯತ್ನಾಳ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಬಿಐ ದಾಳಿ ಬೆನ್ನಲ್ಲೇ ಹೊಸ ಮಿಸ್ಡ್‌ಕಾಲ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್

    ಸಿಬಿಐ ದಾಳಿ ಬೆನ್ನಲ್ಲೇ ಹೊಸ ಮಿಸ್ಡ್‌ಕಾಲ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್

    ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ದೇಶದ 130 ಕೋಟಿ ಜನರಿಗೆ “ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು” ಒತ್ತಾಯಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ರಾಷ್ಟ್ರವನ್ನು ಪ್ರಗತಿ ಮಾಡಲು ಅವರು ಬಿಡುವುದಿಲ್ಲ” ಎಂದು ಬಿಜೆಪಿಯನ್ನು ಹೆಸರಿಸದೇ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ನಮಗೆ ಕೆಲಸ ಮಾಡಲು ಬಿಡುವುದಿಲ್ಲ, ನಮ್ಮ ರಸ್ತೆಗಳಿಗೆ ಅಡ್ಡಲಾಗುತ್ತಿದ್ದಾರೆ. ಇದರ ಭಾಗವಾಗಿ ಈಗ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎಂದರು.

    ಕಳೆದ 7 ವರ್ಷಗಳಲ್ಲಿ ಅವರು, ನನ್ನ, ಕೈಲಾಶ್ ಗೆಹ್ಲೋಟ್ ಮತ್ತು ಎಎಪಿ ನಾಯಕರ ವಿರುದ್ಧ ಅನೇಕ ದಾಳಿಗಳು ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ ಏನೇ ಅಡ್ಡಿವುಂಟು ಮಾಡಿದರೂ ನಾವು ದೇಶದ ಅಭಿವೃದ್ಧಿಯನ್ನು ಕೈಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು ಮಾಡಿದೆ: ಶಿವರಾಮ್ ಗಂಭೀರ ಆರೋಪ

    ಬಿಜೆಪಿ ನಡುವಿನ ಉದ್ವಿಗ್ನತೆಯ ನಡುವೆ ಅವರು ಅಮೆರಿಕದ ಅತಿದೊಡ್ಡ ಪತ್ರಿಕೆಯಾದ ನ್ಯೂಯಾರ್ಕ್‌ ಟೈಮ್ಸ್‌ನಲ್ಲಿ  ದೆಹಲಿ ಶಿಕ್ಷಣ ಮಾದರಿಯ ವರದಿಯನ್ನು ಪ್ರಕಟಿಸಿರುವ ಬಗ್ಗೆ ಮಾಹಿತಿ ನೀಡಿದರು. ಈ ವರದಿ ದೆಹಲಿ ಸರ್ಕಾರಿ ಶಾಲೆಗಳಲ್ಲಿ ಕ್ರಾಂತಿಯ ಬಗ್ಗೆ ಮಾತನಾಡಿದೆ. ಇದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತರುವ ವಿಷಯವಾಗಿದೆ. ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಎಂದರು.

    MANISH SISODIA

    ವಿಶ್ವದ ಎಲ್ಲಾ ನಾಯಕರು ವರದಿ ಮಾಡಲು ಬಯಸುವ ಪತ್ರಿಕೆಯಲ್ಲಿ ಮನೀಷ್ ಸಿಸೋಡಿಯಾ ಅವರ ಫೋಟೋದೊಂದಿಗೆ ವರದಿ ಪ್ರಕಟವಾಗಿದೆ. ಇದರರ್ಥ ಸಿಸೋಡಿಯಾ ಒಂದು ರೀತಿಯಲ್ಲಿ ಅತ್ಯುತ್ತಮ ಶಿಕ್ಷಣ ಸಚಿವ ಎಂದು ಗುರುತಿಸಲ್ಪಟ್ಟಿದ್ದಾರೆ. ಆದರೆ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ – 20 ಕಡೆಗಳಲ್ಲಿ ಶೋಧ

    ನಾವು ಅವರಿಗೆ ದೇಶವನ್ನು ಬಿಟ್ಟರೆ, ಅವರು ದೇಶವನ್ನು ಎಂದಿಗೂ ಪ್ರಗತಿಯಾಗಲು ಬಿಡುವುದಿಲ್ಲ. ನಾವೆಲ್ಲರೂ ಒಟ್ಟಾಗಿ ಸೇರಬೇಕು. ನಾನು ಮಿಸ್ಡ್‌ಕಾಲ್‌ಗಾಗಿ ನಂಬರ್ ನೀಡುತ್ತಿದ್ದೇನೆ. 95100100 ಯಾರು ಬೇಕಾದರೂ ಮಿಸ್ಡ್‌ಕಾಲ್ ಮಾಡಬಹುದು. ಭಾರತ ಬಲಿಷ್ಠ ರಾಷ್ಟ್ರ ಮಿಷನ್‌ಗೆ ಸೇರಿಕೊಳ್ಳಬಹುದು, ನಾವೇಲ್ಲರು ಸೇರಿ ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರವನ್ನಾಗಿ ಮಾಡಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]