ನವದೆಹಲಿ: ಪಾಕಿಸ್ತಾನಕ್ಕೆ (Pakistan) ಯಾವುದೇ ಹೊಸ ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು (AMRAAMs) ನೀಡುವುದಿಲ್ಲ ಎಂದು ಅಮೆರಿಕ (USA) ಸ್ಪಷ್ಟಪಡಿಸಿದೆ.
ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಹೆಚ್ಚಳವಾಗುತ್ತಿದ್ದಂತೆ ಪಾಕಿಸ್ತಾನಕ್ಕೆ AMRAAMs ಕ್ಷಿಪಣಿಯನ್ನು ಅಮೆರಿಕ ನೀಡಲಿದೆ ಎಂದು ವರದಿಯಾಗಿತ್ತು. ಈ ವರದಿ ಪ್ರಕಟವಾದ ಬೆನ್ನಲ್ಲೇ ಭಾರತದಲ್ಲಿರುವ ರಾಯಭಾರ ಕಚೇರಿ ಈಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಮೆರಿಕದ ನಿಲುವು ತಿಳಿಸಿದೆ.
ಪಾಕಿಸ್ತಾನವು ಅಮೆರಿಕದಿಂದ AIM-120 ಸುಧಾರಿತ ಮಧ್ಯಮ-ಶ್ರೇಣಿಯ ಏರ್-ಟು-ಏರ್ ಕ್ಷಿಪಣಿಗಳನ್ನು ಪಡೆಯುವ ಸಾಧ್ಯತೆಯಿದೆ. ಟ್ರಂಪ್ (Donald Trump) ಅವಧಿಯಲ್ಲಿ ಯುದ್ಧ ಇಲಾಖೆಯಾಗಿ ಬದಲಾಗಿರುವ ಅಮೆರಿಕದ ರಕ್ಷಣಾ ಇಲಾಖೆ ಕ್ಷಿಪಣಿ ಖರೀದಿಸುವ ಒಟ್ಟು 35 ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಪಾಕಿಸ್ತಾನದ ಹೆಸರಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿತ್ತು.
ಸೆಪ್ಟೆಂಬರ್ನಲ್ಲಿ ಯುದ್ಧ ಇಲಾಖೆಯು ಪ್ರಮಾಣಿತ ಒಪ್ಪಂದ ಪ್ರಕಟಣೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಪಾಕಿಸ್ತಾನ ಸೇರಿದಂತೆ ಹಲವಾರು ದೇಶಗಳಿಗೆ ಸುಸ್ಥಿರತೆ ಮತ್ತು ಬಿಡಿಭಾಗಗಳಿಗಾಗಿ ಅಸ್ತಿತ್ವದಲ್ಲಿರುವ ವಿದೇಶಿ ಮಿಲಿಟರಿ ಮಾರಾಟ ಒಪ್ಪಂದವನ್ನು ತಿಳಿಸುತ್ತದೆ. ಈ ಒಪ್ಪಂದದ ಅನ್ವಯ ಬಹು ರಾಷ್ಟ್ರಗಳಲ್ಲಿ ನವೀಕರಣಗಳು, ಬಿಡಿಭಾಗಗಳು ಮತ್ತು ನಿರ್ವಹಣೆಯನ್ನು ಮಾಡಲಾಗುತ್ತದೆ ಎಂದು ಹೇಳಿದೆ.
ಒಪ್ಪಂದದ ಅನ್ವಯ ಯುನೈಟೆಡ್ ಕಿಂಗ್ಡಮ್, ಪೋಲೆಂಡ್, ಪಾಕಿಸ್ತಾನ, ಜರ್ಮನಿ, ಫಿನ್ಲ್ಯಾಂಡ್, ಆಸ್ಟ್ರೇಲಿಯಾ, ರೊಮೇನಿಯಾ, ಕತಾರ್, ಓಮನ್, ಕೊರಿಯಾ, ಗ್ರೀಸ್, ಸ್ವಿಟ್ಜರ್ಲ್ಯಾಂಡ್, ಪೋರ್ಚುಗಲ್, ಸಿಂಗಾಪುರ, ನೆದರ್ಲ್ಯಾಂಡ್ಸ್, ಜೆಕ್ ರಿಪಬ್ಲಿಕ್, ಜಪಾನ್, ಸ್ಲೋವಾಕಿಯಾ, ಡೆನ್ಮಾರ್ಕ್, ಕೆನಡಾ, ಬೆಲ್ಜಿಯಂ, ಬಹ್ರೇನ್, ಸೌದಿ ಅರೇಬಿಯಾ, ಇಟಲಿ, ನಾರ್ವೆ, ಸ್ಪೇನ್, ಕುವೈತ್, ಫಿನ್ಲ್ಯಾಂಡ್, ಸ್ವೀಡನ್, ತೈವಾನ್, ಲಿಥುವೇನಿಯಾ, ಇಸ್ರೇಲ್, ಬಲ್ಗೇರಿಯಾ, ಹಂಗೇರಿ ಮತ್ತು ಟರ್ಕಿಗೆ ಶಸ್ತ್ರಾಸ್ತ್ರ ನೀಡಲು ಅನುಮತಿ ನೀಡುತ್ತದೆ. ಇದನ್ನೂ ಓದಿ: ಕಾಬೂಲ್ ಮೇಲೆ ಪಾಕ್ ಏರ್ಸ್ಟ್ರೈಕ್ – ಇಸ್ಲಾಮಾಬಾದ್, ರಾವಲ್ಪಿಂಡಿಯಲ್ಲಿ ಇಂಟರ್ನೆಟ್ ಬಂದ್
ಬಾಲಾಕೋಟ್ ಏರ್ಸ್ಟ್ರೈಕ್ಗೆ ಪ್ರತಿಯಾಗಿ ಪಾಕ್ ಎಫ್-16 ಯುದ್ಧವಿಮಾನ ಬಳಸಿ ಪ್ರಯೋಗಿಸಿದ AMRAAM ಕ್ಷಿಪಣಿ ಭಾಗವನ್ನು ಪ್ರದರ್ಶಿಸುತ್ತಿರುವ ಸೇನೆಯ ಅಧಿಕಾರಿಗಳು
ಪಾಕ್ ಬಳಿಯಿದೆ ಎಫ್ 16:
ವಿಶ್ವ ವಾಣಿಜ್ಯ ಕೇಂದ್ರದ ಅವಳಿ ಕಟ್ಟಡ ಉರುಳಿದ ಬಳಿಕ ಅಮೆರಿಕ ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ (Taliban) ಮೇಲೆ ಯುದ್ಧ ಸಾರಿತ್ತು. ಈ ಯುದ್ಧಕ್ಕೆ ಪಾಕಿಸ್ತಾನ ತನ್ನ ಭೂಮಿ, ಬಂದರು, ವಾಯು ನೆಲೆಗಳ ನೆರವು ನೀಡಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕ ಪಾಕಿಸ್ತಾನಕ್ಕೆ ಎಫ್ 16 ಯುದ್ಧ ವಿಮಾನಗಳನ್ನು ನೀಡಿದೆ. ಸದ್ಯ ಪಾಕ್ ಬಳಿ 75 ಎಫ್-16 ಯುದ್ಧ ವಿಮಾನ ಇರಬಹುದು ಎಂದು ಅಂದಾಜಿಸಲಾಗಿದೆ.
ಭಯೋತ್ಪಾದನೆ ನಿಗ್ರಹ ಮತ್ತು ಆಂತರಿಕ ರಕ್ಷಣೆಗೆ ಮಾತ್ರ ಈ ಯುದ್ಧ ವಿಮಾನಗಳನ್ನು ಬಳಸಬೇಕು ಎಂದು ಅಮೆರಿಕ ಪಾಕಿಗೆ ಷರತ್ತು ವಿಧಿಸಿದೆ. ಹೀಗಿದ್ದರೂ 2019 ರಲ್ಲಿ ಬಾಲಾಕೋಟ್ ಏರ್ಸ್ಟ್ರೈಕ್ ಮಾಡಿದ ಬಳಿಕ ಭಾರತದ ಮೇಲೆ ದಾಳಿ ನಡೆಸಲು ಪಾಕ್ ಎಫ್-16 ಯುದ್ಧ ವಿಮಾನಗಳನ್ನು ಬಳಸಿತ್ತು. ಹೀಗಿದ್ದರೂ ಅಭಿನಂದನ್ ವರ್ಧಮಾನ್ ಅವರು ಹಳೆಯ ಮಿಗ್ 21 ಬೈಸನ್ ವಿಮಾನದ ಮೂಲಕ ಆಕಾಶದಲ್ಲೇ ಕಾದಾಟ(ಡಾಗ್ ಫೈಟ್) ನಡೆಸಿ ಎಫ್ 16 ಯುದ್ಧ ವಿಮಾನವನ್ನು ಹೊಡೆದು ಹಾಕಿದ್ದರು. ಪಾಕ್ ಎಫ್ 16 ವಿಮಾನದ ಮೂಲಕ AMRAAM ಕ್ಷಿಪಣಿಯನ್ನು ಭಾರತದ ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಇದಕ್ಕೆ ಸಾಕ್ಷ್ಯವಾಗಿ ಭಾರತ ಪಾಕ್ ಬಳಸಿದ್ದ AMRAAM ಕ್ಷಿಪಣಿಯ ಬಿಡಿ ಭಾಗವನ್ನು ಪ್ರದರ್ಶಿಸಿತ್ತು.
ಆಪರಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಪಾಕಿಸ್ತಾನದ 11 ವಾಯುನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಮುಖ್ಯವಾಗಿ ರಾವಲ್ಪಿಂಡಿ ಬಳಿಯ ನೂರ್ ಖಾನ್ ವಾಯುನೆಲೆಯ ಮೇಲೆ ದಾಳಿ ನಡೆಸಿತ್ತು. ಈ ವಾಯುನೆಲೆಯಲ್ಲಿ ಅಮೆರಿಕ ನಿರ್ಮಿತ ಎಫ್16 ಯುದ್ಧ ವಿಮಾನಗಳು ಇದ್ದವು. ದಾಳಿಯ ಸಂದರ್ಭದಲ್ಲಿ ಹಲವು ಎಫ್16 ಯುದ್ಧ ವಿಮಾನಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೇ ಇದನ್ನು ಅಮೆರಿಕದ ಅನಧಿಕೃತ ವಾಯು ನೆಲೆ ಎಂದೇ ಕರೆಯಲಾಗುತ್ತದೆ. ಈಗ ತನ್ನ ಎಫ್ 16 ವಿಮಾನಗಳ ರಕ್ಷಣೆಗೆ ಅಮೆರಿಕ AMRAAM ಕ್ಷಿಪಣಿಯನ್ನು ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ.
ನವದೆಹಲಿ: ಇರಾನ್ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ (US AirStrike) ನಡೆಸಿದ ಬೆನ್ನಲ್ಲೇ, ಭಾರತವು ತನ್ನ ಬಂಕರ್-ಬಸ್ಟರ್ ಕ್ಷಿಪಣಿ (Bunker Buster Missile) ಯೋಜನೆಯನ್ನು ತೀವ್ರಗೊಳಿಸಿದೆ ಎಂದು ವರದಿಯಾಗಿದೆ. ಈ ಯೋಜನೆಯು ಭಾರತದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ, ಅದರಲ್ಲೂ ವಿಶೇಷವಾಗಿ ಭೂಗತ ಸೌಲಭ್ಯಗಳನ್ನು ಗುರಿಯಾಗಿಸುವ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ.
ಭಾರತವು ಅಮೆರಿಕದ ‘ಬಂಕರ್ ಬಸ್ಟರ್’ ಬಾಂಬ್ಗಳಿಗಿಂತಲೂ ಹೆಚ್ಚು ಶಕ್ತಿಶಾಲಿ ಅಸ್ತ್ರವನ್ನು ಅಭಿವೃದ್ಧಿಪಡಿಸುತ್ತಿದೆ. ಇದು ಅಗ್ನಿ-5 ಕ್ಷಿಪಣಿಯ ಹೊಸ, ವಾಯುಪಡೆಯ ಆವೃತ್ತಿಯಾಗಿದೆ. ಈ ಕ್ಷಿಪಣಿಯು ಪಾಕಿಸ್ತಾನ ಮತ್ತು ಚೀನಾದ ರಹಸ್ಯ ಭೂಗತ ಪರಮಾಣು ಬಂಕರ್ಗಳನ್ನು ಕೆಲವೇ ನಿಮಿಷಗಳಲ್ಲಿ ನಾಶಮಾಡುವ ಸಾಮರ್ಥ್ಯ ಹೊಂದಿದೆ. ಶತ್ರುಗಳ ರಕ್ಷಣಾ ವ್ಯವಸ್ಥೆಯನ್ನು ಭೇದಿಸಿ, ನಿಖರವಾಗಿ ಗುರಿ ತಲುಪುವ ಈ ‘ಬ್ರಹ್ಮಾಸ್ತ್ರ’ವು ವಾಯುಪಡೆಯ (IAF) ಬತ್ತಳಿಕೆಗೆ ಸೇರಿದರೆ, ಭಾರತದ ಸೇನಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಲಿದೆ. ಈ ಬೆಳವಣಿಗೆಯು ಪ್ರತಿಸ್ಪರ್ಧಿ ರಾಷ್ಟ್ರಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್ ಇಟ್ಕೊಂಡಿದ್ದ – ಯಶ್ ದಯಾಳ್ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ
ಇದೇ ಜೂನ್ 22 ರಂದು ಅಮೆರಿಕದ B2 ಸ್ಟೆಲ್ತ್ ಬಾಂಬರ್ಗಳು ಇರಾನ್ನ ಫೊರ್ಡೋ, ನಟಾಂಜ್ ಮತ್ತು ಇಸ್ಫಹಾನ್ನಲ್ಲಿರುವ ಪರಮಾಣು ಕೇಂದ್ರಗಳ ಮೇಲೆ 30,000 ಪೌಂಡ್ ತೂಕದ GBU-57 ಮ್ಯಾಸಿವ್ ಆರ್ಡಿನೆನ್ಸ್ ಪೆನೆಟ್ರೇಟರ್ ಬಾಂಬ್ಗಳನ್ನು ಬಳಸಿ ದಾಳಿ ನಡೆಸಿದವು. ಈ ಬಂಕರ್-ಬಸ್ಟರ್ ಬಾಂಬ್ಗಳು 200 ಅಡಿ ಆಳದ ಭೂಗತ ರಚನೆಗಳನ್ನು ಭೇದಿಸಿ ಇಸ್ರೇಲ್ನ ನ್ಯೂಕ್ಲಿಯರ್ ಘಟಕಗಳನ್ನು ಧ್ವಂಸ ಮಾಡಿದ್ದವು. ಈ ದಾಳಿಯು ಇರಾನ್ನ ಪರಮಾಣು ಯೋಜನೆಗೆ ಗಣನೀಯ ಹಿನ್ನಡೆ ಉಂಟುಮಾಡಿದೆ ಎಂದು US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಇದನ್ನೂ ಓದಿ: ಭಾರತ್-NCAP ಕ್ರ್ಯಾಶ್ ಟೆಸ್ಟ್ನಲ್ಲಿ ಇನ್ನೋವಾ ಹೈಕ್ರಾಸ್ಗೆ ಸಿಕ್ತು 5 ಸ್ಟಾರ್ ರೇಟಿಂಗ್
ಈ ಘಟನೆಯಿಂದ ಪ್ರೇರಿತದ ಭಾರತವು ತನ್ನ ಭೂಗತ ಗುರಿಗಳನ್ನು ಭೇದಿಸುವ ಸಾಮರ್ಥ್ಯವಿರುವ ಕ್ಷಿಪಣಿಗಳ ಅಭಿವೃದ್ಧಿಯನ್ನು ಚುರುಕುಗೊಳಿಸಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಈ ಯೋಜನೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಭಾರತವು ಈಗಾಗಲೇ SPICE-2000 ಮತ್ತು HAMMER ಕ್ಷಿಪಣಿಗಳಂತಹ ನಿಖರ ಗುರಿಯ ಶಸ್ತ್ರಾಸ್ತ್ರಗಳನ್ನು 2019ರ ಬಾಲಕೋಟ್ ದಾಳಿಯಲ್ಲಿ ಬಳಸಿದೆ, ಆದರೆ GBU-57 ರಂತಹ ದೊಡ್ಡ ಪ್ರಮಾಣದ ಬಂಕರ್-ಬಸ್ಟರ್ ಬಾಂಬ್ಗಳಿಗೆ ಸಮನಾದ ಶಸ್ತ್ರಾಸ್ತ್ರವನ್ನು ಇನ್ನೂ ಅಭಿವೃದ್ಧಿಪಡಿಸಿಲ್ಲ. ಈ ಹೊಸ ಕ್ಷಿಪಣಿ ಯೋಜನೆಯು ಭಾರತದ ರಕ್ಷಣಾ ಶಕ್ತಿಯನ್ನು ಆಧುನೀಕರಿಸುವ ಭಾಗವಾಗಿದೆ. ಇದನ್ನೂ ಓದಿ: ತೆಲಂಗಾಣ | ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ – 8 ಮಂದಿ ದುರ್ಮರಣ, ಹಲವರಿಗೆ ಗಾಯ
ಇದು ಶತ್ರು ರಾಷ್ಟ್ರಗಳ ಭೂಗತ ಕಮಾಂಡ್ ಸೆಂಟರ್ಗಳು, ಶಸ್ತ್ರಾಸ್ತ್ರ ಗೋದಾಮುಗಳು ಮತ್ತು ಪರಮಾಣು ಸೌಲಭ್ಯಗಳಂತಹ ಗುರಿಗಳನ್ನು ನಿಖರವಾಗಿ ಭೇದಿಸುವ ಗುರಿಯನ್ನು ಹೊಂದಿದೆ. DRDO ಈಗಾಗಲೇ ಬ್ರಹ್ಮೋಸ್ ಸೂಪರ್ಸಾನಿಕ್ ಕ್ಷಿಪಣಿಯ ಯಶಸ್ಸನ್ನು ತೋರಿಸಿದೆ, ಇದು 450 ಕಿಮೀ ಗಿಂತಲೂ ಹೆಚ್ಚಿನ ವ್ಯಾಪ್ತಿ ಹೊಂದಿದೆ. ಆದರೆ, ಭೂಗತ ಗುರಿಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ಸುಧಾರಿತ ತಂತ್ರಜ್ಞಾನದ ಅಗತ್ಯವಿದೆ. ಹೀಗಾಗಿ DRDO ತನ್ನ ಗಮನವನ್ನು ದೀರ್ಘ-ವ್ಯಾಪ್ತಿಯ, ಭೂಗತ ಗುರಿಗಳನ್ನು ಭೇದಿಸುವ ಕ್ಷಿಪಣಿಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ.
– 1998 ರಲ್ಲಿ ಭಾರತ – ರಷ್ಯಾ ಜಂಟಿ ಹೂಡಿಕೆಯಲ್ಲಿ ಕಂಪನಿ ಆರಂಭ – ಪಾಕ್ ಉಗ್ರರ ನೆಲೆಗಳ ಮೇಲೆ ನಿಖರ ದಾಳಿ
ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯ ಬಳಿಕ ಭಾರತ (India) ಮತ್ತು ರಷ್ಯಾ (Russia) ಜಂಟಿಯಾಗಿ ಉತ್ಪಾದನೆ ಮಾಡಿದ ಬ್ರಹ್ಮೋಸ್ ಕ್ಷಿಪಣಿ (BrahMos Missile) ಖರೀದಿಗೆ ಹಲವು ದೇಶಗಳು ಈಗ ಆಸಕ್ತಿ ತೋರಿಸಿವೆ.
ಹಲವು ದೇಶಗಳು ಕ್ಷಿಪಣಿ ಖರೀದಿಗೆ ಆಸಕ್ತಿ ತೋರಿಸಲು ಕಾರಣವೂ ಇದೆ. ಬ್ರಹ್ಮೋಸ್ ಚೀನಾದ HQ-9 ವಾಯು ರಕ್ಷಣಾ ವ್ಯವಸ್ಥೆಗೂ ಕಾಣದಂತೆ ಪಾಕ್ ಒಳಗಡೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಕಡಿಮೆ ಬೆಲೆಯಲ್ಲಿ ನಿಖರ ದಾಳಿ ನಡೆಸಿದ್ದಕ್ಕೆ ಈಗ ಸುಮಾರು 18 ದೇಶಗಳು ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಆಸಕ್ತಿ ತೋರಿಸಿವೆ.
250 ಮಿಲಿಯನ್ ಡಾಲರ್ (ಇಂದಿನ ಮೌಲ್ಯದಲ್ಲಿ ಹೇಳುವುದಾದರೆ 2,135 ಕೋಟಿ ರೂ.) ಹೂಡಿಕೆಯೊಂದಿಗೆ 1998ರಲ್ಲಿ ಬ್ರಹ್ಮೋಸ್ ಕ್ಷಿಪಣಿ ತಯಾರಿಸುವ ಕಂಪನಿ ಆರಂಭವಾಯಿತು. ಬ್ರಹ್ಮೋಸ್ ಕ್ಷಿಪಣಿಯ ಅಭಿವೃದ್ಧಿಯ ವೆಚ್ಚ ಅಧಿಕೃತವಾಗಿ ಎಲ್ಲಿಯೂ ಪ್ರಕಟವಾಗಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ಬ್ರಹ್ಮೋಸ್ ಉತ್ಪಾದನಾ ಘಟಕವನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ.ವೆಚ್ಚ ಆಗಲಿದ್ದು ಪ್ರತಿ ಕ್ಷಿಪಣಿಗೆ ಮಾರುಕಟ್ಟೆ ಮೌಲ್ಯದಲ್ಲಿ ಸುಮಾರು 34 ಕೋಟಿ ರೂ. ವೆಚ್ಚವಾಗುತ್ತದೆ ಎಂದು ವರದಿಯಾಗಿದೆ.
ವೇಗ ಎಷ್ಟು?
ಎಷ್ಟು ವೇಗದಲ್ಲಿ ಹೋಗುತ್ತದೆ ಅಂದರೆ ಮ್ಯಾಕ್ 2.8 ರಿಂದ ಮ್ಯಾಕ್ 3.5 ವೇಗದಲ್ಲಿ ಸಂಚರಿಸುತ್ತದೆ. ಕ್ಷಿಪಣಿಗಳು ಶಬ್ದದ ವೇಗಕ್ಕಿಂತಲೂ ವೇಗವಾಗಿ ಹೋಗುವುದರಿಂದ ಅದರ ವೇಗವನ್ನು ಅಳೆಯಲು ಮ್ಯಾಕ್ ಸಂಖ್ಯೆಗಳನ್ನು ಬಳಸಲಾಗುತ್ತದೆ. ಶಬ್ಧದ ವೇಗ ಗಂಟೆಗೆ 1,234 ಕಿ.ಮೀ. ಅಂದರೆ ಬ್ರಹ್ಮೋಸ್ ಕ್ಷಿಪಣಿ ಗಂಟೆಗೆ 3,455 ಕಿ.ಮೀಗಿಂತಲೂ ಹೆಚ್ಚು ವೇಗದಲ್ಲಿ ಸಂಚರಿಸಿ ನೆಲೆಗಳನ್ನು ಧ್ವಂಸ ಮಾಡುತ್ತದೆ. ಇದನ್ನೂ ಓದಿ: ಪಾಕ್ ವಿರುದ್ಧ ‘ಬ್ರಹ್ಮೋಸ್’ ಪರಾಕ್ರಮ – ಬ್ರಹ್ಮೋಸ್ ಕ್ಷಿಪಣಿಗಾಗಿ 18 ರಾಷ್ಟ್ರಗಳಿಂದ ಬೇಡಿಕೆ
ಬ್ರಹ್ಮೋಸ್ ಅಭಿವೃದ್ಧಿಯಾಗಿದ್ದು ಹೇಗೆ?
ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ (India) ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್ಡಿಒ ವಿಜ್ಞಾನಿಗಳು 1989ರಲ್ಲಿ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್ ಸಾನಿಕ್ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ.
ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು.
ಕ್ಷಿಪಣಿ ಮನುಷ್ಯ ಅಬ್ಧುಲ್ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ʼಬ್ರಹ್ಮಪುತ್ರʼ ಮತ್ತು ರಷ್ಯಾದ ʼಮಾಸ್ಕೋವಾʼ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್ ಡಾಲರ್ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು 50.5% ಇದ್ದರೆ ರಷ್ಯಾದ ಪಾಲು 49.5% ಇದೆ.
ಬ್ರಹ್ಮೋಸ್ ವಿಶೇಷತೆ ಏನು?
ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳಾಗಿವೆ. ಇದನ್ನೂ ಓದಿ: ಪಾಕ್, ಉಗ್ರರ ಮೇಲೆ ಕಣ್ಣು – ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆ!
ಕ್ರೂಸ್ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.
ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್ ಜಾಮಿಂಗ್ ವ್ಯವಸ್ಥೆ ಬ್ರಹ್ಮೋಸ್ನಲ್ಲಿದೆ. ಈ ಕಾರಣಕ್ಕೆ ಬ್ರಹ್ಮೋಸ್ ಚೀನಾದ ವಾಯು ರಕ್ಷಣಾ ವ್ಯವಸ್ಥೆಗೂ ಸಿಗದಂತೆ ಯಶಸ್ವಿಯಾಗಿ ಒಳನಗ್ಗಿ ನೆಲೆಗಳನ್ನು ಧ್ವಂಸಗೊಳಿಸಿತ್ತು.
ಮೊದಲ ಬಾರಿಗೆ ಬ್ರಹ್ಮೋಸ್ ಕ್ಷಿಪಣಿಯನ್ನು 2001ರ ಜೂನ್ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. 300 ಕೆಜಿ ಸಿಡಿತಲೆಯನ್ನು ಹೊತ್ತುಕೊಂಡು 300 ಕಿ.ಮೀ ದೂರದವರೆಗಿನ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಬ್ರಹ್ಮೋಸ್ಗೆ ಇದೆ.
ನವದೆಹಲಿ: ಉಗ್ರರ ನೆಲೆಗಳ ಮೇಲೆ ಮಾಡಿದ ಏರ್ಸ್ಟ್ರೈಕ್ಗೆ (Air Strike) ಪ್ರತಿಯಾಗಿ ಪಾಕಿಸ್ತಾನ (Pakistan) ಭಾರತದ ಮೇಲೆ ಪ್ರಯೋಗಿಸಿದ ಕ್ಷಿಪಣಿಯನ್ನು ಅರ್ಧದಲ್ಲೇ ಧ್ವಂಸ ಮಾಡಲಾಗಿದೆ.
ಹೌದು. ಪಾಕ್ ರಾತ್ರಿ 1:20 ರಿಂದ 1:30 ರೊಳಗಡೆ ಪಂಜಾಬ್ನ ಅಮೃತಸರವನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿತ್ತು. ಹೀಗಿದ್ದರೂ ಭಾರತದಲ್ಲಿರುವ ಮುಂದುವರಿದ ಕ್ಷಿಪಣಿ ರಕ್ಷಣಾ ವ್ಯವಸ್ಥೆಯು (Advanced Missile Defence System) ತಕ್ಷಣವೇ ಪ್ರತಿಕ್ರಿಯಿಸಿ ಪಾಕಿಸ್ತಾನದ ಕ್ಷಿಪಣಿಯನ್ನು ಆಕಾಶದಲ್ಲಿಯೇ ಉಡೀಸ್ ಮಾಡಿದೆ. ಇದನ್ನೂ ಓದಿ: ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್ ಡ್ರೋನ್ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!
ಮಾಸ್ಕೋ/ನವದೆಹಲಿ: ಹೆಚ್ಚುಕಡಿಮೆ ಕಳೆದ ಎರಡು ವರ್ಷಗಳಿಂದ ರಷ್ಯಾ-ಉಕ್ರೇನ್ (Russia Ukraine War) ನಡ್ವೆ ಭೀಕರ ಯುದ್ಧ ನಡೀತಿದೆ. ಆದ್ರೆ, ಇಬ್ಬರೂ ಬದ್ಧ ವೈರಿಗಳು ಭಾರತಕ್ಕಾಗಿ (India) ಒಗ್ಗೂಡಿದ ಅಪರೂಪದ ಘಟನೆ ನಡೆದಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ವರ್ಷಗಳ ಸುದೀರ್ಘ ಯುದ್ಧದ ಹೊರತಾಗಿಯೂ, ಮಾಸ್ಕೋ ಮತ್ತು ಕೀವ್ ಭಾರತಕ್ಕಾಗಿ ಯುದ್ಧನೌಕೆ ನಿರ್ಮಾಣಕ್ಕಾಗಿ ಒಟ್ಟಾಗಿ ಸೇರಿವೆ. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಭೇಟಿಗಾಗಿ ಮಾಸ್ಕೋಗೆ ಆಗಮಿಸುತ್ತಿದ್ದಂತೆ ಸೋಮವಾರ ರಷ್ಯಾ-ಉಕ್ರೇನ್ ಜಂಟಿ ನಿರ್ಮಿತ ಯುದ್ಧ ನೌಕೆಯನ್ನು ಭಾರತಕ್ಕೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.
Delighted to attend the Commissioning Ceremony of #INSTushil, the latest multi-role stealth-guided missile frigate, at the Yantar Shipyard in Kaliningrad (Russia).
The ship is a proud testament to India’s growing maritime strength and a significant milestone in long-standing… pic.twitter.com/L6Pok31wQJ
ಯುದ್ಧನೌಕೆ INS ತುಶಿಲ್ ವಿತರಣೆ ಕಾರ್ಯಕ್ರಮದಲ್ಲಿ ರಷ್ಯಾ ಮತ್ತು ಉಕ್ರೇನ್ ಪ್ರತಿನಿಧಿಗಳು ಹಾಜರಿದಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. 2016ರಲ್ಲಿ ಭಾರತ ಸರ್ಕಾರ 2 ಯುದ್ಧನೌಕೆಗಾಗಿ ಆರ್ಡರ್ ಮಾಡಿತ್ತು. ಇದು ರಷ್ಯಾ ನಿರ್ಮಿತ ಕ್ರಿವಾಕ್ III-ವರ್ಗದ ಯುದ್ಧನೌಕೆಯಾಗಿದ್ದು, ಇದು ಸುಧಾರಿತ ಸ್ಟೆಲ್ತ್ ಮಿಸೈಲ್ ಫ್ರಿಗೇಟ್ ಆಗಿದೆ. ಭಾರತವು ಪ್ರಸ್ತುತ ಇಂತಹ ಆರು ಯುದ್ಧನೌಕೆಗಳನ್ನು ನಿರ್ವಹಿಸುತ್ತಿದೆ.
ಅಲ್ಲದೇ ರಷ್ಯಾದಲ್ಲಿ ತಯಾರಾಗುತ್ತಿರುವ ಎರಡು ಹಡಗುಗಳು ಮಾತ್ರವಲ್ಲದೇ, ಇದೇ ರೀತಿಯ ಇನ್ನೂ ಎರಡು ಹಡಗುಗಳನ್ನು ಭಾರತದಲ್ಲಿ ಕೂಡ ತಯಾರಿಸಲು ಆದೇಶಿಸಲಾಗಿದೆ. ಭಾರತದ ಗೋವಾ ಶಿಪ್ಯಾರ್ಡ್ನಲ್ಲಿ ಈ ಹಡಗುಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
ಶಸ್ತ್ರಾಸ್ತ್ರಗಳನ್ನು ಆಮದು ಮಾಡುಕೊಳ್ಳುವ ಟಾಪ್ ರಾಷ್ಟ್ರಗಳಲ್ಲಿ ಭಾರತ (India) ಮೊದಲನೇಯ ಸ್ಥಾನದಲ್ಲಿದೆ. ಆದರೆ ಈಗ ಭಾರತ ಶಸ್ತ್ರಾಸ್ತ್ರಗಳನ್ನು ರಫ್ತು (Arms Export) ಮಾಡುವ ದೇಶವಾಗಿ ನಿಧಾನವಾಗಿ ಹೊರಹೊಮ್ಮುತ್ತಿದೆ. ಇದರ ಭಾಗವಾಗಿ ಈಗ ಭಾರತ ವಿಶ್ವದ 12 ದೇಶಗಳಿಗೆ ಬ್ರಹ್ಮೋಸ್ ಕ್ಷಿಪಣಿಯನ್ನು (BrahMos Missile) ರಫ್ತು ಮಾಡಲು ಮಾತುಕತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿದ್ದು ಹೇಗೆ? ಬ್ರಹ್ಮೋಸ್ ಕ್ಷಿಪಣಿ ವಿಶೇಷತೆ ಏನು? ಮಿಸೈಲ್ ಮ್ಯಾನ್ ಅಬ್ದುಲ್ ಕಲಾಂ (APJ Abdul Kalam) ಪಾತ್ರ ಏನು? ಪಾಕಿಸ್ತಾನಕ್ಕೆ ಈ ಕ್ಷಿಪಣಿ ಹಾರಿದ್ದು ಹೇಗೆ? 10 ವರ್ಷದ ಹಿಂದೆ ಶಸ್ತ್ರಾಸ್ತ್ರ ರಫ್ತು ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ? ಈ ಎಲ್ಲಾ ವಿಷಯಗಳ ಬಗ್ಗೆ ಕೆಲ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ (Pakistan) ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್ಡಿಒ ವಿಜ್ಞಾನಿಗಳು 1989ರಲ್ಲೇ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್ ಸಾನಿಕ್ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ. ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು. ಕ್ಷಿಪಣಿ ಮನುಷ್ಯ ಅಬ್ಧುಲ್ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ಬಹ್ಮಪುತ್ರ ಮತ್ತು ರಷ್ಯಾದ ಮಾಸ್ಕೋವಾ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್ ಡಾಲರ್ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು ಶೇ.50.5 ಇದ್ದರೆ ರಷ್ಯಾದ ಪಾಲು ಶೇ.49.5 ಇದೆ. ಇದನ್ನೂ ಓದಿ: ನೀಲಿ ಬಣ್ಣದ ಜೀನ್ಸ್ ಬ್ಯಾನ್, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು
ಬ್ರಹ್ಮೋಸ್ ವಿಶೇಷತೆ ಏನು?
ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್ ಕ್ಷಿಪಣಿಗಳಾಗಿವೆ.
ಕ್ರೂಸ್ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.
ಬ್ರಹ್ಮೋಸ್ ಕ್ಷಿಪಣಿಗಳನ್ನು ಭೂಮಿಯಿಂದ, ಬಾನಿನಿಂದ, ಸಮುದ್ರದಿಂದ, ಜಲಾಂತರ್ಗಾಮಿ, ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದು. ಭೂ ನೆಲೆ ಮತ್ತು ಯುದ್ಧ ನೌಕೆ ಆಧಾರಿತ ಬ್ರಹ್ಮೋಸ್ ಕ್ಷಿಪಣಿಗಳು ಗರಿಷ್ಠ 200 ಕೆಜಿ ಸಿಡಿತಲೆಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರೆ ಯುದ್ಧ ವಿಮಾನದಿಂದ ಉಡಾವಣೆಯಾಗುವ ವೇರಿಯೆಂಟ್ 300 ಕೆಜಿ ಭಾರವನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.
ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್ ಜಾಮಿಂಗ್ ವ್ಯವಸ್ಥೆ ಬ್ರಹ್ಮೋಸ್ನಲ್ಲಿದೆ. ಮೊದಲ ಬಾರಿಗೆ ಬ್ರಹ್ಮೋಸ್ ಕ್ಷಿಪಣಿಯನ್ನು 2001ರ ಜೂನ್ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. ಇದನ್ನೂ ಓದಿ: ಡಾಲರ್ಗೆ ರೂಪಾಯಿ ಸೆಡ್ಡು – ಇಂಟರ್ನ್ಯಾಷನಲ್ ಕರೆನ್ಸಿ ಆಗುತ್ತಾ?
ಯಾವೆಲ್ಲ ದೇಶಗಳು ಆಸಕ್ತಿ ತೋರಿಸಿವೆ?
ಫಿಲಿಪೈನ್ಸ್ ಬ್ರಹ್ಮೋಸ್ ನೆವಿ ಮಿಸೈಲ್ ಖರೀದಿ ಸಂಬಂಧ 375 ಮಿಲಿಯನ್ ಡಾಲರ್ ಮೊತ್ತದ ಒಪ್ಪಂದಕ್ಕೆ 2022ರಲ್ಲಿ ಸಹಿ ಹಾಕಿದೆ. ಈ ವರ್ಷದ ಅಂತ್ಯಕ್ಕೆ ಕ್ಷಿಪಣಿ ರಫ್ತು ಆಗುವ ಸಾಧ್ಯತೆಯಿದೆ. ಈಗಾಗಲೇ 12 ದೇಶಗಳ ಜೊತೆ ಭಾರತ ಬ್ರಹ್ಮೋಸ್ ಕ್ಷಿಪಣಿ ರಫ್ತು ಸಂಬಂಧ ಮಾತುಕತೆ ನಡೆಸುತ್ತಿದೆ. ಈ ಜುಲೈ ತಿಂಗಳಿನಲ್ಲಿ ಅರ್ಜೆಂಟೀನಾ ರಕ್ಷಣಾ ಸಚಿವರ ಜೊತೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತುಕತೆ ನಡೆಸಿದ್ದಾರೆ.
ಬ್ರಹ್ಮೋಸ್ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿದ್ದು ಯಾಕೆ ಎನ್ನುವುದಕ್ಕೆ ಕಾರಣವಿದೆ. ಬ್ರಹ್ಮೋಸ್ ಭಾರತದಲ್ಲಿ ಪ್ರಯೋಗ ಯಶಸ್ವಿಯಾಗಿದ್ದು ಈಗಾಗಲೇ ಮೂರು ಸೇನೆಗೆ ಸೇರ್ಪಡೆಯಾಗಿದೆ. ನಿಖರವಾಗಿ ಗುರಿಯನ್ನು ಹೊಡೆಯುವುದು ಅಲ್ಲದೇ ಬೆಲೆಯೂ ಕಡಿಮೆ. ಅಧಿಕೃತವಾಗಿ ಈ ಕ್ಷಿಪಣಿಯ ಬೆಲೆ ಎಷ್ಟು ಎಂಬುದನ್ನು ಸರ್ಕಾರ ತಿಳಿಸದೇ ಇದ್ದರೂ ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಒಂದು ಕ್ಷಿಪಣಿಯ ಬೆಲೆ 35 ಕೋಟಿ ರೂ. ಇದೆಯಂತೆ.. ಇದರ ಜೊತೆ ಭಾರತದ ವಿಜ್ಞಾನಿಗಳ ಬಗ್ಗೆ ನಂಬಿಕೆ ಈಗ ವಿಶ್ವಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿವೆ.
ಪಾಕಿಸ್ತಾನಕ್ಕೆ ಹಾರಿತ್ತು ಬ್ರಹ್ಮೋಸ್
ಈ ಬ್ರಹ್ಮೋಸ್ ಕ್ಷಿಪಣಿ ಪಾಕಿಸ್ತಾನಕ್ಕೂ ಹಾರಿತ್ತು. 2022ರ ಮಾರ್ಚ್ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸಲಿಲ್ಲ. ಈ ವಿಷಯವನ್ನು ಇಟ್ಟುಕೊಂಡು ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಭಾರತ ತಾಂತ್ರಿಕ ಸಮಸ್ಯೆಯಿಂದ ಈ ಕ್ಷಿಪಣಿ ಉಡಾವಣೆಯಾಗಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸಿ ತನಿಖೆ ನಡೆಸುವುದಾಗಿ ಹೇಳಿತ್ತು. ತನಿಖೆಯ ಬಳಿಕ ವಾಯುಸೇನೆಯ ಇಮೇಜ್ಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿಂಗ್ ಕಮಾಂಡರ್ ಅಭಿನವ್ ಶರ್ಮಾ ಅವರನ್ನು ಸೇವೆಯಿಂದಲೇ ವಜಾಗೊಳಿಸಿತ್ತು. ಈ ಕ್ಷಿಪಣಿ ಪ್ರಕರಣದಿಂದ ಭಾರತ ಸರ್ಕಾರಕ್ಕೆ 24 ಕೋಟಿ ರೂ. ನಷ್ಟವಾಗಿತ್ತು.
ಶಸ್ತ್ರಾಸ್ತ ರಫ್ತು ಹೆಚ್ಚಳ
ಮೇಕ್ ಇನ್ ಇಂಡಿಯಾಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಕಾರಣ ಈಗ ಶಸ್ತ್ರಾಸ್ತ್ರಗಳನ್ನು ಭಾರತ ಹೆಚ್ಚು ರಫ್ತು ಮಾಡುತ್ತಿದೆ. ವರ್ಷದಿಂದ ವರ್ಷಕ್ಕೆ ರಫ್ತು ಪ್ರಮಾಣ ಹೆಚ್ಚಾಗುತ್ತಿದೆ. ರಕ್ಷಣಾ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 2014-15 – 1,941 ಕೋಟಿ ರೂ., 2017-18 – 4,682 ಕೋಟಿ ರೂ., 2018-19- 10,746 ಕೋಟಿ ರೂ., 2021-22- 12,815 ಕೋಟಿ ರೂ., 2022-23 – 15,918 ಕೋಟಿ ರೂ. ಮೊತ್ತದ ರಕ್ಷಣಾ ಸಾಮಾಗ್ರಿಗಳನ್ನು ರಫ್ತು ಮಾಡಿದೆ.
ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ರಫ್ತು ಮಾಡಲಾದ ಪ್ರಮುಖ ರಕ್ಷಣಾ ಸಾಧನಗಳಲ್ಲಿ ಸಿಮ್ಯುಲೇಟರ್, ಅಶ್ರುವಾಯು ಲಾಂಚರ್, ಟಾರ್ಪಿಡೊ-ಲೋಡಿಂಗ್ ಮೆಕ್ಯಾನಿಸಂ, ಅಲಾರ್ಮ್ ಮಾನಿಟರಿಂಗ್ ಮತ್ತು ಕಂಟ್ರೋಲ್, ನೈಟ್ ವಿಷನ್ ಮಾನೋಕ್ಯುಲರ್ ಮತ್ತು ಬೈನಾಕ್ಯುಲರ್, ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆಗಳು, ಶಸ್ತ್ರಸಜ್ಜಿತ ರಕ್ಷಣಾ ವಾಹನ, ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ರಾಡಾರ್, ಹೈ ಫ್ರಿಕ್ವೆನ್ಸಿ ರೇಡಿಯೊ ಇತ್ಯಾದಿಗಳನ್ನು ರಫ್ತು ಮಾಡಿವೆ. ಇಟಲಿ, ಶ್ರೀಲಂಕಾ, ರಷ್ಯಾ, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಫ್ರಾನ್ಸ್, ಶ್ರೀಲಂಕಾ, ಈಜಿಪ್ಟ್, ಇಸ್ರೇಲ್, ಭೂತಾನ್, ಯುಎಇ, ಸೌದಿ ಅರೇಬಿಯಾ, ಇಥಿಯೋಪಿಯಾ, ಫಿಲಿಪೈನ್ಸ್, ಪೋಲೆಂಡ್, ಸ್ಪೇನ್ ಮತ್ತು ಚಿಲಿ ದೇಶಗಳು ರಫ್ತು ಲಿಸ್ಟ್ನಲ್ಲಿವೆ.
2025ರ ವೇಳೆಗೆ ಭಾರತ 35 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಈ ಗುರಿಯನ್ನು ತಲುಪಬೇಕಾದರೆ ಸರ್ಕಾರ ಬಹಳ ಶ್ರಮಪಡಬೇಕಾದ ಅಗತ್ಯವಿದೆ.
ಪ್ಯೊಂಗ್ಯಾಗ್: ತನ್ನ ಖಾಸಗಿ ಬದುಕನ್ನು ಯಾವಾಗಲೂ ರಹಸ್ಯವಾಗಿಡಲು ಹೆಸರುವಾಸಿಯಾಗಿರುವ ಉತ್ತರ ಕೊರಿಯಾದ (North Korea) ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (Kim Jong Un) ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ತನ್ನ ಮಗಳೊಂದಿಗೆ (Daughter) ಕಾಣಿಸಿಕೊಂಡಿದ್ದಾರೆ.
ರಾಜ್ಯ ಏಜೆನ್ಸಿ ಹಂಚಿಕೊಂಡಿರುವ ಚಿತ್ರಗಳಲ್ಲಿ ಕಿಮ್ ಜಾಂಗ್ ಉನ್ ತಮ್ಮ ಮಗಳೊಂದಿಗೆ ಕೈ ಹಿಡಿದುಕೊಂಡು ಪಕ್ಕದಲ್ಲಿ ನಿಂತಿರುವುದು ಕಾಣಿಸಿಕೊಂಡಿದೆ. ಕೆಲವು ಫೋಟೋಗಳಲ್ಲಿ ಅವರು ಕ್ಷಿಪಣಿ ಉಡಾವಣೆ ಹಾಗೂ ಮಿಲಿಟರಿ ಕಾರ್ಯಗಳನ್ನು ನೋಡುತ್ತಿರುವುದು ಕಂಡುಬಂದಿದೆ.
ಕಿಮ್ ಜಾಂಗ್ ಉನ್ ತನ್ನ ವೈಯಕ್ತಿಕ ಜೀವನದ ಬಗ್ಗೆ ಹಲವು ವಿಚಾರಗಳು ಇನ್ನು ಕೂಡಾ ರಹಸ್ಯವಾಗಿಯೇ ಇದೆ. 2013ರಲ್ಲಿ ಮಾಜಿ ಬಾಸ್ಕೆಟ್ಬಾಲ್ ತಾರೆ ಡೆನ್ನಿಸ್ ರಾಡ್ಮನ್ ಬ್ರಿಟಿಷ್ ದಿನಪತ್ರಿಕೆಯೊಂದರಲ್ಲಿ ಕಿಮ್ಗೆ ‘ಜು ಎ’ ಹೆಸರಿನ ಮಗುವಿದೆ ಎಂದು ತಿಳಿಸಿದ್ದರು. ರಾಡ್ಮನ್ ಕಿಮ್ ಅವರ ಕುಟುಂಬದೊಂದಿಗೆ ಸಮಯ ಕಳೆದಿದ್ದು, ಕಿಮ್ ಅವರನ್ನು ಒಬ್ಬ ಒಳ್ಳೆಯ ತಂದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ನಾಪತ್ತೆಯಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಪತ್ತೆ – ಬಾಲಕಿಯನ್ನು ಕರೆದೊಯ್ದಿದ್ದ ಮಹಿಳೆ
ಶುಕ್ರವಾರ ಉತ್ತರ ಕೊರಿಯಾದಲ್ಲಿ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯ ವೇಳೆ ಕಿಮ್ ಜಾಂಗ್ ಉನ್ ಅವರೊಂದಿಗೆ ಕಾಣಿಸಿಕೊಂಡ ಬಾಲಕಿಯ ಹೆಸರನ್ನು ರಾಜ್ಯ ಮಾಧ್ಯಮ ಬಹಿರಂಗಪಡಿಸಿಲ್ಲ.
ಭುವನೇಶ್ವರ: 1 ರಿಂದ 2 ಸಾವಿರ ಕಿಮೀ ವರೆಗೆ ದಾಳಿ ನಡೆಸುವ ಸಾಮರ್ಥ್ಯ ಹೊಂದಿರುವ ಭಾರತದ ಮಧ್ಯಮ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ (Ballistic Missile) `ಅಗ್ನಿ ಪ್ರೈಮ್’ (Agni Prime) ಪರೀಕ್ಷೆ ಯಶಸ್ವಿಯಾಗಿದೆ.
ಇಂದು ಒಡಿಶಾದಿಂದ ಮೇಡ್ ಇನ್ ಇಂಡಿಯಾದ (Made In India) ಹೊಸ ತಲೆಮಾರಿನ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ. ಹೊಸ ತಲೆಮಾರಿನ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ (APG Abdul Kalam Island) ಬೆಳಗ್ಗೆ 9.45ರ ಸುಮಾರಿಗೆ ಮೊಬೈಲ್ ಲಾಂಚರ್ ನಿಂದ ಕ್ಷಿಪಣಿಯನ್ನು ಪರೀಕ್ಷಿಸಲಾಗಿದೆ ಎಂದು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮೂಲಗಳು ತಿಳಿಸಿವೆ. ಇದನ್ನೂ ಓದಿ: ಡಿಸೆಂಬರ್ವರೆಗೂ ಹಲವರು ಕಾಂಗ್ರೆಸ್ಗೆ ಸೇರ್ಪಡೆ ಆಗ್ತಾರೆ: ಜಮೀರ್ ಸ್ಫೋಟಕ ಹೇಳಿಕೆ
ಪರೀಕ್ಷಾರ್ಥ ಹಾರಾಟದ ಸಮಯದಲ್ಲಿ, ಕ್ಷಿಪಣಿಯು (Missile) ಗರಿಷ್ಠ ವ್ಯಾಪ್ತಿ ಪ್ರಯಾಣಿಸಿದೆ. ಎಲ್ಲಾ ಪರೀಕ್ಷಾ ಉದ್ದೇಶಗಳನ್ನು ಯಶಸ್ವಿಯಾಗಿ ಪೂರೈಸಿದೆ. ಅಗ್ನಿ ಪ್ರೈಮ್ ಕ್ಷಿಪಣಿಯ ಈ ಸತತ 3ನೇ ಬಾರಿಗೆ ಯಶಸ್ವಿ ಹಾರಾಟ ನಡೆಸಿದ್ದು, ಈ ಮೂಲಕ ವ್ಯವಸ್ಥೆಯ ನಿಖರತೆ ಮತ್ತು ವಿಶ್ವಾಸಾರ್ಹತೆಯನ್ನೂ ಸ್ಥಾಪಿಸಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಅಸಮಾಧಾನ ಇರೋದು ನಿಜ- JDS ಎಂಎಲ್ಸಿ ಅಚ್ಚರಿ ಹೇಳಿಕೆ
During the test flight, the missile travelled the maximum range and all test objectives were successfully met. With this third consecutive successful flight test of the Agni Prime missile, the accuracy and reliability of the system has been established: Defence officials
ರಾಡರ್, ಟೆಲಿಮೆಟ್ರಿ ಮತ್ತು ಎಲೆಕ್ಟ್ರೊ ಆಪ್ಟಿಕಲ್ ಟ್ರ್ಯಾಕಿಂಗ್ ಸಿಸ್ಟಮ್ಗಳಂತಹ ಹಲವಾರು ಶ್ರೇಣಿಯ ಉಪಕರಣಗಳಿಂದ ಪಡೆದ ಡೇಟಾವನ್ನು ಬಳಸಿಕೊಂಡು ಅಗ್ನಿ ಪ್ರೈಮ್ ಕ್ಷಿಪಣಿ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಮೌಲ್ಯೀಕರಿಸಲಾಗಿದೆ. ಸಂಪೂರ್ಣ ಪಥವನ್ನು ಕವರ್ ಮಾಡಲು ಟರ್ಮಿನಲ್ ಪಾಯಿಂಟ್ನಲ್ಲಿ ಎರಡು ಡೌನ್ ರೇಂಜ್ ಹಡಗುಗಳನ್ನು ಒಳಗೊಂಡಂತೆ ವಿವಿಧ ಸ್ಥಳಗಳಲ್ಲಿ ನಿಯೋಜಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕ್ಷಿಪಣಿಯು 1 ಸಾವಿರ ಕಿಮೀ ನಿಂದ 2 ಸಾವಿರ ಕಿಮೀ ವರೆಗೆ ದಾಳಿಯ ಸಾಮರ್ಥ್ಯವನ್ನು ಹೊಂದಿದೆ. 2021ರ ಡಿಸೆಂಬರ್ 18ರಂದು ಇದೇ ನೆಲೆಯಿಂದ ಕ್ಷಿಪಣಿಯ ಕೊನೆಯ ಪ್ರಯೋಗ ನಡೆಸಲಾಗಿತ್ತು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್ 9ರಂದು ಭಾರತದ ಬ್ರಹ್ಮೋಸ್ ಕ್ಷಿಪಣಿಯನ್ನು ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ್ದ ಕಾರಣಕ್ಕಾಗಿ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾಗೊಳಿಸಿದೆ.
ಭಾರತದ ಸೂಪರ್ಸಾನಿಕ್ ಕ್ಷಿಪಣಿ ಆಕಸ್ಮಿಕವಾಗಿ ಪಾಕಿಸ್ತಾನದ ಭೂಪ್ರದೇಶದ ಒಳಗೆ ಹೋಗಿರುವುದನ್ನು ಭಾರತದ ರಕ್ಷಣಾ ಸಚಿವಾಲಯ ಒಪ್ಪಿಕೊಂಡಿತ್ತು. ತಾಂತ್ರಿಕ ಸಮಸ್ಯೆಯಿಂದ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆಯಾಗಿದ್ದು, ಈ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ರಕ್ಷಣಾ ಸಚಿವಾಲಯ ಹೇಳಿತ್ತು. ಜತೆಗೆ ಈ ಘಟನೆಯನ್ನು ಭಾರತ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಉನ್ನತ ಮಟ್ಟದ ಕೋರ್ಟ್ ತನಿಖೆಗೆ ಆದೇಶಿತ್ತು. ಇದನ್ನೂ ಓದಿ: ಸೆ.2ರಂದು ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ ವಿಕ್ರಾಂತ್ ನೌಕಾಪಡೆಗೆ ಅಧಿಕೃತ ಸೇರ್ಪಡೆ
ಅದರಂತೆ ತನಿಖೆ ನಡೆಸಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್, ವಿಂಗ್ ಕಮಾಂಡರ್ ಹಾಗೂ ಸ್ಕ್ವಾಡ್ರನ್ ಲೀಡರ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ವಾಯುಪಡೆ ತಿಳಿಸಿದೆ.
ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ಅಲ್ಲಿನ ವಾಯು ವಲಯದಲ್ಲಿ 100 ಕಿಲೋ ಮೀಟರ್ಗೂ ಹೆಚ್ಚು ದೂರ, ಒಳಭಾಗಕ್ಕೆ ಸುಮಾರು 40,000 ಅಡಿಗಳಷ್ಟು ಎತ್ತರದಿಂದ ಅಪ್ಪಳಿಸಿತ್ತು. ಭಾರತದ ಬ್ರಹ್ಮೋಸ್ ಕ್ಷಿಪಣಿಯು ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತ್ತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನ ಆಗ್ರಹಿಸಿತ್ತು. ಇದನ್ನೂ ಓದಿ: ಗೋವು ಕಳ್ಳಸಾಗಣೆ ಪ್ರಕರಣ – ಅನುಬ್ರತಾ ಮೊಂಡಲ್ಗೆ ಜಾಮೀನು ನೀಡಿ, ಇಲ್ಲವೇ..: ನ್ಯಾಯಾಧೀಶರಿಗೆ ಬೆದರಿಕೆ ಪತ್ರ
ಭಾರತ ಮತ್ತು ಪಾಕಿಸ್ತಾನ ನಡುವೆ 2005ರಲ್ಲಿ ನಡೆದ ಒಪ್ಪಂದದ ಪ್ರಕಾರ, ಭೂಮಿಯ ಮೇಲ್ಮೈ ಮೇಲ್ಲೈನಿಂದ ಅಥವಾ ಸಮುದ್ರ ಉಡಾವಣಾ ಕ್ಷಿಪಣಿಗಳ ಪರೀಕ್ಷಾರ್ಥ ಪ್ರಯೋಗ ನಡೆಸುವುದಿದ್ದರೆ, ಕನಿಷ್ಠ ಮೂರು ದಿನಗಳ ಮುಂಚೆ ಇನ್ನೊಂದು ದೇಶಕ್ಕೆ ಅದರ ಮಾಹಿತಿ ನೀಡಬೇಕು. ಈ ಬಗ್ಗೆ ಖಂಡಾಂತರ ಕ್ಷಿಪಣಿ ಪರೀಕ್ಷೆಗಳ ಹಾರಾಟದ ಪೂರ್ವ ಅಧಿಸೂಚನೆ ಮಾಡಿಕೊಳ್ಳಲಾಗಿತ್ತು. ಜತೆಗೆ ಉಡಾವಣಾ ಸ್ಥಳಗಳು ಎರಡೂ ದೇಶಗಳ ನಡುವಿನ ಅಂತಾರಾಷ್ಟ್ರೀಯ ಗಡಿ ಅಥವಾ ಎಲ್ಒಸಿಯ 40 ಕಿಮೀ ಒಳಗೆ ಇರಬಾರದು ಹಾಗೂ ಅದರ ಪರಿಣಾಮ ಉಂಟಾಗುವ ವಲಯವು 75 ಕಿಮೀ ಒಳಗೆ ಇರಬಾರದು.
Live Tv
[brid partner=56869869 player=32851 video=960834 autoplay=true]
ಕೀವ್: ರಷ್ಯಾದ ಕ್ಷಿಪಣಿ ದಾಳಿಯಿಂದ ಉಕ್ರೇನ್ನ 16 ಮಂದಿ ಸಾವನ್ನಪ್ಪಿದ್ದು, 59 ಮಂದಿ ಗಾಯಗೊಂಡಿರುವ ಘಟನೆ ಕ್ರೆಮೆನ್ಚುಕ್ನಲ್ಲಿರುವ ಶಾಪಿಂಗ್ ಮಾಲ್ನಲ್ಲಿ ನಡೆದಿದೆ.
ರಷ್ಯಾದ ವಿರುದ್ಧ ಕಿಡಿಕಾರಿರುವ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಘಟನೆಯ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಮುಷ್ಕರವನ್ನು ಉದ್ದೇಶಪೂರ್ವಕವಾಗಿ ಜನನಿಬಿಡದ ಮಾಲ್ನಲ್ಲಿ ಮಾಡಲಾಗಿದೆ. ಇದರಿಂದಾಗಿ ಹೆಚ್ಚಿನ ಜನರು ಮೃತಪಟ್ಟಿದ್ದಾರೆ ಎಂದು ಗುಡುಗಿದರು.
Another act of the russian genocide of the Ukrainian people. This time the ruscists targeted a mall in #Kremenchuk, in the afternoon when it is always especially crowded. The war criminals wanted to kill the civilians, deliberately aiming for the maximum number of casualties. pic.twitter.com/3PbCnjc7PU
ಕ್ಷಿಪಣಿ ದಾಳಿ ನಡೆದಾಗ ಸಾವಿರಕ್ಕೂ ಅಧಿಕ ಜನರು ಮಾಲ್ನಲ್ಲಿದ್ದರು. ಮಾಲ್ನಲ್ಲಿ ಬೆಂಕಿಯನ್ನು ನಂದಿಸಲು ಅನೇಕರು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಸಂತ್ರಸ್ತರ ಸಂಖ್ಯೆಯನ್ನು ಊಹಿಸಿಕೊಳ್ಳಲು ಅಸಾಧ್ಯ ಎಂದಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ಗೆ ಭರ್ಜರಿ ಪ್ರತಿಕ್ರಿಯೆ – 4 ದಿನಕ್ಕೆ 94 ಸಾವಿರ ಅರ್ಜಿ
ಪಶ್ಚಿಮ ರಷ್ಯಾದ ಕುರ್ಸ್ಕ್ ಪ್ರದೇಶದಿಂದ Tu-22 ಬಾಂಬರ್ಗಳಿಂದ ಹಾರಿಸಲಾದ ಕ್ಷಿಪಣಿಗಳಿಂದ ಮಾಲ್ಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಉಕ್ರೇನಿಯನ್ ವಾಯುಪಡೆ ಹೇಳಿದೆ. ಇದನ್ನೂ ಓದಿ: ಯೋಧನ ಗುಂಡಿನ ದಾಳಿಗೆ ಇಬ್ಬರು ಅಧಿಕಾರಿಗಳು ಸಾವು