Tag: missile

  • ಅಗ್ನಿ 5 ಪ್ರಯೋಗ ಯಶಸ್ವಿ – ಚೀನಾಗೆ ಸಂದೇಶ ರವಾನಿಸಿದ ಭಾರತ

    ಅಗ್ನಿ 5 ಪ್ರಯೋಗ ಯಶಸ್ವಿ – ಚೀನಾಗೆ ಸಂದೇಶ ರವಾನಿಸಿದ ಭಾರತ

    ಭುವನೇಶ್ವರ: ರಕ್ಷಣಾ ವಲಯದಲ್ಲಿ ಭಾರತ ಇಂದು ಅತ್ಯದ್ಭುತ ಸಾಧನೆ ಮಾಡಿದೆ. ಅಣ್ವಸ್ತ್ರ ಸಿಡಿತಲೆಯ ಖಂಡಾಂತರ ಕ್ಷಿಪಣಿ ಅಗ್ನಿ-5ರ ಯಶಸ್ವಿ ಪ್ರಯೋಗವನ್ನು ನಡೆಸಿದೆ.

    ಭೂಮಿಯಿಂದ ಭೂಮಿಗೆ ಚಿಮ್ಮುವ ಬರೋಬ್ಬರಿ 5 ಸಾವಿರ ಕಿಲೋಮೀಟರ್ ದೂರ ಕ್ರಮಿಸಬಲ್ಲ ಕ್ಷಿಪಣಿಯನ್ನು ಒಡಿಶಾದ ಬಾಲಸೋರ್ ಜಿಲ್ಲೆಯ ಎಪಿಜೆ ಅಬ್ದುಲ್ ಕಲಾಂ ದ್ವೀಪ(ವೀಲರ್)ದಲ್ಲಿ ಯಶಸ್ವಿಯಾಗಿ ಪ್ರಯೋಗ ನಡೆಸಲಾಗಿದೆ. ಮೂರು ಹಂತಗಳ ಘನ ಇಂಧನ ಎಂಜಿನ್ ಅನ್ನು ಇದಕ್ಕೆ ಬಳಸಲಾಗಿದೆ. ಈ ಪ್ರಯೋಗದ ಯಶಸ್ಸಿನಿಂದ ಪಾಕಿಸ್ತಾನ ಮತ್ತು ಚೀನಾಗೆ ನಡುಕ ಶುರುವಾಗಿದೆ. ಇದನ್ನೂ ಓದಿ: ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

    ಚೀನಾದ ಯಾವುದೇ ಭಾಗವನ್ನು ಈ ಕ್ಷಿಪಣಿ ಮೂಲಕ ಭಾರತ ಟಾರ್ಗೆಟ್ ಮಾಡಬಹುದಾಗಿದೆ. ಅಷ್ಟೇ ಅಲ್ಲ, ಏಷ್ಯಾದ ಎಲ್ಲಾ ಭಾಗವನ್ನು, ಆಫ್ರಿಕಾದ ಕೆಲ ಭಾಗಗಳನ್ನು, ಯುರೋಪ್ ಖಂಡವನ್ನು ತಲುಪಬಲ್ಲ ಸಾಮರ್ಥ್ಯ ಇದಕ್ಕಿದೆ. ಕಳೆದ ಸೆಪ್ಟೆಂಬರ್ 23 ರಂದು ಇದರ ಯಶಸ್ವಿ ಪ್ರಯೋಗ ನಡೆಸಲಾಗಿತ್ತು. 17.5 ಮೀಟರ್ ಎತ್ತರದ ಈ ಕ್ಷಿಪಣಿ, 50 ಟನ್ ತೂಕ ಇದೆ. 1.5 ಟನ್ ಅಣ್ವಸ್ತ್ರ ಹೊತ್ತೊಯ್ಯುವ ಸಾಮರ್ಥ್ಯ ಇದಕ್ಕಿದೆ. ಇದನ್ನೂ ಓದಿ: ಈ ಬಾರಿಯ T20 ವಿಶ್ವಕಪ್‍ನಲ್ಲಿ ಕಂಡು ಬಂದ ವಿಶೇಷತೆಗಳಿವು 

    ಅಗ್ನಿ-5 ಎಂದರೇನು?
    ಇದು ಖಂಡಾಂತರ ಬ್ಯಾಲಸ್ಟಿಕ್ ಕ್ಷಿಪಣಿ. ಇವುಗಳ ಸಾಮರ್ಥ್ಯ ಸುಮಾರು 5 ಸಾವಿರದಿಂದ 6 ಸಾವಿರ ಕಿ.ಮೀ ವ್ಯಾಪ್ತಿ ಹೊಂದಿರುತ್ತದೆ. ಇದು ಸಾಂಪ್ರದಾಯಿಕ ಮತ್ತು ಅಣ್ವಸ್ತ್ರ ಎರಡೂ ರೀತಿಯ ಸಿಡಿತಲೆಗಳನ್ನು ಕೊಂಡುಯ್ಯುವ ಸಾಮರ್ಥ್ಯವನ್ನು ಹೊಂದಿದೆ. 1989ರಲ್ಲಿ ಮೊದಲ ಬಾರಿಗೆ ಅಗ್ನಿ ಕ್ಷಿಪಣಿಯನ್ನು ಪರೀಕ್ಷಾರ್ಥವಾಗಿ ಪ್ರಯೋಗಿಸಲಾಗಿತ್ತು. ಇದನ್ನೂ ಓದಿ: ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ – ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಬ್ಯಾಲಸ್ಟಿಕ್ ಕ್ಷಿಪಣಿ ಎಂದರೇನು?
    ಬ್ಯಾಲಸ್ಟಿಕ್ ಕ್ಷಿಪಣಿ ಪ್ರಕ್ಷೇಪಗಳ ರೀತಿಗಳಲ್ಲಿ ಚಲಿಸುವ ಕ್ಷಿಪಣಿಗಳು ಇವು ತಮ್ಮದೇ ಆದ ಚೋದನ ಕ್ರಮಗಳಿಂದ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ, ಮತ್ತೆ ಭೂಮಿಯ ವಾತಾವರಣವನ್ನು ಮರು ಪ್ರವೇಶಿಸಿ ಭೂಮಿಯನ್ನು ಅಪ್ಪಳಿಸುವ ಸಾಮರ್ಥ್ಯ ಈ ಕ್ಷಿಪಣಿಗಳಿಗಿದೆ. ಈ ಕ್ಷಿಪಣಿಗಳು ವೇಗವಾಗಿ ಭೂಮಿಯ ವಾತಾವರಣವನ್ನು ಮರುಪ್ರವೇಶಿಸುವಾಗ ವಾತಾವರಣದೊಂದಿಗೆ ಘರ್ಷಣೆಯುಂಟಾಗಿ ಅತಿ ಹೆಚ್ಚಿನ ತಾಪಮಾನ ಬಿಡುಗಡೆಯಿಂದ ಶತ್ರುಗಳ ಕ್ಷಿಪಣಿಗಳನ್ನು ನಾಶ ಮಾಡುವ ಸಾಮರ್ಥ್ಯ ಈ ಕ್ಷಿಪಣಿಗಿದೆ. ನಿಗದಿತ ಗುರಿಯನ್ನು ತಲುಪಲು ಜಿಪಿಎಸ್ ಅಳವಡಿಸಲಾಗಿರುತ್ತದೆ.

    ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಭೂಮಿಯಿಂದ, ಆಕಾಶದಿಂದ, ಸಮುದ್ರದಿಂದ, ಜಲಾಂತರ್ಗಾಮಿ ಅಲ್ಲದೇ ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದು.

  • ರಫೇಲ್‌ ಲ್ಯಾಂಡ್‌ ಆಗಿದ್ದ ವಾಯುನೆಲೆಯ ಸಮೀಪವೇ ಬಿತ್ತು ಇರಾನ್‌ ಕ್ಷಿಪಣಿ

    – ವಾಯುನೆಲೆಯಲ್ಲಿ ಹೈ ಅಲರ್ಟ್‌ ಘೋಷಣೆ
    – ಸೈನಿಕರಿಗೆ ಬಂಕರ್‌ಗೆ ಹೋಗುವಂತೆ ಸೂಚನೆ

    ಅಬುಧಾಬಿ: ಅತ್ಯಾಧುನಿಕ ಯುದ್ಧ ವಿಮಾನ ರಫೇಲ್‌ ಇಂದು ಮಧ್ಯಾಹ್ನ ಹರ್ಯಾಣದಲ್ಲಿರುವ ಅಂಬಾಲ ವಾಯುನೆಲೆಯಲ್ಲಿ ಲ್ಯಾಂಡ್‌ ಆಗಲಿದೆ. ಈ ಮಧ್ಯೆ ಮಂಗಳವಾರ ರಾತ್ರಿ ರಫೇಲ್‌ ತಂಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಲ್ ದಫ್ರಾ ವಾಯುನೆಲೆಯ ಸಮೀಪ ಇರಾಕ್‌ನ  ಕ್ಷಿಪಣಿಗಳು ಲ್ಯಾಂಡ್‌ ಆದ ವಿಚಾರ ಬೆಳಕಿಗೆ ಬಂದಿದೆ.

    ಭಾರತದ ಮೂರು ಸಿಂಗಲ್‌ ಸೀಟರ್‌ ಮತ್ತು ಎರಡು ಡಬಲ್‌ ಸೀಟರ್‌ ರಫೇಲ್‌ ವಿಮಾನಗಳು ಸೋಮವಾರ ಫ್ರಾನ್ಸ್‌ನ ಮೆರಿಗ್ನಾಕ್‌ನಿಂದ ಟೇಕಾಫ್‌ ಆಗಿ ಅಮೆರಿಕ ಮತ್ತು ಫ್ರಾನ್ಸ್‌ ವಾಯುನೆಲೆಯಾಗಿರುವ ಅಲ್ ದಫ್ರಾದಲ್ಲಿ ಲ್ಯಾಂಡ್‌ ಆಗಿತ್ತು. ಈ ನಡುವೆ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಮೂರು ಕ್ಷಿಪಣಿಗಳನ್ನು ಹಾರಿಸಿತ್ತು. ಕ್ಷಿಪಣಿ ಹಾರಿಸಿದ್ದ ವಿಚಾರ ತಿಳಿಯುತ್ತಿದ್ದಂತೆ ಅಲ್‌ ದಫ್ರಾ ಮತ್ತು ಕತಾರ್‌ನಲ್ಲಿರುವ ಅಮೆರಿಕದ ವಾಯು ನೆಲೆ ಅಲ್‌ ಉದಿದ್‌ನಲ್ಲಿ ಹೈ ಅಲರ್ಟ್‌ ಅಲರ್ಟ್‌ ಘೋಷಿಸಲಾಗಿತ್ತು.

    ಇರಾನ್‌ ಕ್ಷಿಪಣಿಗಳು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ಎರಡು ವಾಯು ನೆಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿತ್ತು. ಆದರೆ ಈ ಕ್ಷಿಪಣಿಗಳು ಯಾವುದು ವಾಯುನೆಲೆಯ ಮೇಲೆ ಅಪ್ಪಳಿಸಲಿಲ್ಲ. ವಾಯು ನೆಲೆಯ ಸಮೀಪ ಇರುವ ಪರ್ಷಿಯನ್‌ ಕೊಲ್ಲಿಯಲ್ಲಿ ಬಿತ್ತು ಎಂದು ಫಾಕ್ಸ್‌ ನ್ಯೂಸ್‌ ವರದಿ ಮಾಡಿದೆ.

    ಮಿಲಿಟರಿ ತಾಲೀಮಿನ ಭಾಗವಾಗಿ ಇರಾನ್‌ ಕ್ಷಿಪಣಿಗಳನ್ನು ಉಡಾವಣೆ ಮಾಡಿತ್ತು. ಅಮೆರಿಕದ ವಿಮಾನ ವಾಹಕ ಯುದ್ಧ ನೌಕೆಯ ಮಾದರಿಯನ್ನು ನಿಲ್ಲಿಸಿ ಅದರ ಮೇಲೆ ದಾಳಿ ನಡೆಸುವ ಭಾಗವಾಗಿ ಕ್ಷಿಪಣಿ ಹಾರಿಸಿತ್ತು. ಈ ಕ್ಷಿಪಣಿಗಳು ಎರಡು ವಾಯುನೆಲೆಯ ಸಮೀಪವೇ ಬಿದ್ದ ಕಾರಣ ಕೆಲ ಹೊತ್ತು ಆತಂಕಕ್ಕೆ ಕಾರಣವಾಗಿತ್ತು ಇರಾನ್‌ ಕ್ಷಿಪಣಿ ಬರುತ್ತಿರುವ ಸಿಗ್ನಲ್‌ ತಿಳಿಯುತ್ತಿದ್ದಂತೆ ಆಲ್‌ ದಫ್ರಾ ವಾಯುನೆಲೆಯಲ್ಲಿರುವ ಸೈನಿಕರಿಗೆ ಬಂಕರ್‌ ಒಳಗಡೆ ಹೋಗುವಂತೆ ಅಮೆರಿಕ ಸೂಚಿಸಿತ್ತು.

     

    ಕ್ಷಿಪಣಿ ಹಾರಿಸಿದ್ದು ಯಾಕೆ?
    ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್‌ ಕೋರ್‌ನ ಕಮಾಂಡರ್‌ ಮೇಜರ್‌ ಜನರಲ್‌ ಖಾಸಿಂ ಸುಲೇಮಾನಿ ಅವರನ್ನು ಅಮೆರಿಕ ಸೇನೆ ಈ ವರ್ಷದ ಜನವರಿ 3 ರಂದು ಹತ್ಯೆ ಮಾಡಿತ್ತು. ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿ ಬಿಗಿ ಭದ್ರತೆಯಲ್ಲಿದ್ದ ಸುಲೇಮಾನಿಯ ಮೇಲೆ ವೈಮಾನಿಕ ದಾಳಿ ನಡೆಸಿತ್ತು.

    ಇರಾಕ್‍ನ ಮಿಲಿಟರಿ ಕಮಾಂಡರ್ ಅಬು ಮಹ್ದಿ ಅಲ್ ಮುಹಾಂದಿಸ್ ಜೊತೆ ಇರಾಕ್ ರಾಜಧಾನಿ ಬಾಗ್ದಾದ್‍ನ ವಿಮಾನ ನಿಲ್ದಾಣಕ್ಕೆ ಇರಾನ್ ಸೇನಾ ಮುಖ್ಯಸ್ಥರಾಗಿದ್ದ ಸುಲೇಮಾನಿ ಕಾರಿನಲ್ಲಿ ತೆರಳುತ್ತಿದ್ದರು. ಈ ಇಬ್ಬರು ತೆರಳುತ್ತಿದ್ದ ಕಾರನ್ನು ಟಾರ್ಗೆಟ್ ಮಾಡಿದ ಅಮೆರಿಕ ಸೇನೆಗಳು ಡ್ರೋನ್ ಮೂಲಕ ಕ್ಷಿಪಣಿಯನ್ನು ಉಡಾವಣೆ ಮಾಡಿ ಏರ್ ಸ್ಟ್ರೈಕ್ ಮಾಡಿತ್ತು. ದಾಳಿಯ ತೀವ್ರತೆಗೆ ಇಬ್ಬರು ತೆರಳುತ್ತಿದ್ದ ಕಾರುಗಳು ಛಿದ್ರ-ಛಿದ್ರವಾಗಿದ್ದವು.

    ಈ ಘಟನೆಯ ಬಳಿಕ ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿರುವ ಅಮೆರಿಕ ಸೇನೆ ಬೀಡು ಬಿಟ್ಟಿರುವ ಅಲ್-ಬಲಾದ್ ವಾಯುನೆಲೆ ಮೇಲೆ ಇರಾನ್ ಎರಡು ರಾಕೆಟ್ ದಾಳಿ ನಡೆಸಿತ್ತು. ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸಲು ಇರಾನ್‌ ಮುಂದಾಗುತ್ತಿದ್ದು ಈಗ ಕ್ಷಿಪಣಿಗಳನ್ನು ಉಡಾಯಿಸುವ ಮೂಲಕ ಸಮರಾಭ್ಯಾಸ ನಡೆಸುತ್ತಿದೆ.  ಇದನ್ನೂ ಓದಿ: ಅಮೆರಿಕ, ಇರಾನ್ ಯುದ್ಧದ ಕಾರ್ಮೋಡ- ಭಾರೀ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ರೈತರು

     

  • ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ನವದೆಹಲಿ: ರಷ್ಯಾ ಜೊತೆಗಿನ ಮಾತುಕತೆಯ ವೇಳೆ ಭಾರತ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ ಕ್ಷಿಪಣಿ ಖರೀದಿ ಸೇರಿ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ.

    ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಸಭೆ ನಡೆಸಿದರು. ಮಾತುಕತೆಯ ವೇಳೆ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ, ಬಾಹ್ಯಾಕಾಶ ಸಹಕಾರ ಸೇರಿದಂತೆ ಒಟ್ಟು 8 ಒಪ್ಪಂದಗಳಿಗೆ ಸಹಿ ಹಾಕಲಾಯಿತು.

    ಭಾರತ 5.43 ಶತಕೋಟಿ ಡಾಲರ್(ಅಂದಾಜು 40 ಸಾವಿರ ಕೋಟಿ ರೂ.) ವೆಚ್ಚದಲ್ಲಿ 5 ಎಸ್-400 ಟ್ರಯಂಫ್ ಖರೀದಿಸಲು ಒಪ್ಪಂದಕ್ಕೆ ಸಹಿ ಹಾಕಿದೆ. ಹೀಗಾಗಿ ಏನಿದು ವಿಶೇಷ ವಾಯು ರಕ್ಷಣಾ ವ್ಯವಸ್ಥೆ? ಹೇಗೆ ಕೆಲಸ ಮಾಡುತ್ತದೆ ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

    ಏನಿದು ಎಸ್-400 ಏರ್ ಟ್ರಯಂಫ್?
    ಸುಲಭವಾಗಿ ಒಂದು ವಾಕ್ಯದಲ್ಲೇ ಹೇಳುವುದಾದರೆ ಆಕಾಶದಲ್ಲೇ ಶತ್ರುಗಳನ್ನು ನಿರ್ನಾಮ ಮಾಡುವ ಸಾಮರ್ಥ್ಯ ಇರುವ ವಿಶೇಷ ವಾಯು ರಕ್ಷಣಾ ವ್ಯವಸ್ಥೆ. ಶತ್ರು ರಾಷ್ಟ್ರಗಳು ಕ್ಷಿಪಣಿಗಳು ಉಡಾಯಿಸಿದರೆ ಅದನ್ನು ಹೊಡೆದು ಉರುಳಿಸುವುದು ಸುಲಭದ ಮಾತಲ್ಲ. ಆದರೆ ವೇಗವಾಗಿ ಬರುವ ಕ್ಷಿಪಣಿಯನ್ನು ಆಕಾಶದಲ್ಲಿ ಹೊಡೆದು ಉರುಳಿಸುವ ಸಾಮರ್ಥ್ಯ ಈ ಎಸ್-400 ಟ್ರಯಂಫ್ ಗೆ ಇದೆ. ರಷ್ಯಾ 2007ರಲ್ಲಿ ಮೊದಲ ಬಾರಿಗೆ ಈ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿತ್ತು.

    ಹೇಗೆ ಕೆಲಸ ಮಾಡುತ್ತೆ?
    ನೆಲದಲ್ಲೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಶತ್ರು ಪಡೆಗಳ ಯುದ್ಧ ವಿಮಾನ ಹಾಗೂ ಕ್ಷಿಪಣಿ ದಾಳಿಯನ್ನು ದಿಟ್ಟವಾಗಿ ಎದುರಿಸುವ ಸಾಮರ್ಥ್ಯ ಹೊಂದಿದೆ. ದೀರ್ಘ ದೂರ ಕ್ರಮಿಸಬಲ್ಲ ನೆಲದಿಂದ ಆಗಸಕ್ಕೆ ಉಡಾಯಿಸಬಹುದಾದ ಕ್ಷಿಪಣಿ ನಿರೋಧಕ ವ್ಯವಸ್ಥೆ ಇದ್ದು, 2007 ರಲ್ಲಿ ನಿರ್ಮಾಣಗೊಂಡಿದ್ದ ಎಸ್-300 ಶ್ರೇಣಿಯ ಹೊಸ ಆವೃತ್ತಿ ಇದಾಗಿದೆ.

    380 ಕಿ.ಮೀ ವ್ಯಾಪ್ತಿ ಒಳಗಡೆ ಬರುವ ಹಲವು ಕ್ಷಿಪಣಿ ಹಾಗೂ ವಿಮಾನಗಳನ್ನು ಏಕಕಾಲಕ್ಕೆ ಗುರುತಿಸಿ ಹೊಡೆದುರುಳಿಸುವ ಸೆಲ್ಫ್ ಸಿಸ್ಟಂ ವ್ಯವಸ್ಥೆ, ಬಹುಬಳಕೆಯ ರೇಡಾರ್ ಮತ್ತು ಗುರಿ ನಿಗದಿ ಉಡಾವಣೆ ವ್ಯವಸ್ಥೆ, ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರಗಳನ್ನು ಇದು ಒಳಗೊಂಡಿದೆ. ಲಾರಿಯ ಹಿಂಭಾಗದಲ್ಲಿ ವಾಯು ರಕ್ಷಣಾ ವ್ಯವಸ್ಥೆ ಇರುವ ಕಾರಣ ಯಾವ ಪ್ರದೇಶಕ್ಕೂ ಬೇಕಾದರೂ ಸುಲಭವಾಗಿ ತೆಗೆದುಕೊಂಡು ಹೋಗಬಹುದು. ಅಷ್ಟೇ ಅಲ್ಲದೇ ಕೆಲವೇ ನಿಮಿಷಗಳಲ್ಲಿ ಸಿದ್ಧಪಡಿಸಿ ಕಾರ್ಯಾಚರಣೆ ನಡೆಸಬಹುದಾಗಿದೆ. ಶತ್ರುಗಳ ದಾಳಿಯ ದಿಕ್ಕು ತಪ್ಪಿಸಲು ಏಕಕಾಲದಲ್ಲಿ 4 ಭಾಗಗಳಲ್ಲಿ ಕ್ಷಿಪಣಿಗಳನ್ನು ಗಗನಕ್ಕೆ ಚಿಮ್ಮಿಸಿ ರಕ್ಷಣಾ ಕವಚ ನಿರ್ಮಿಸಬಹುದಾಗಿದೆ. ಅಲ್ಲದೇ ಶತ್ರುನೆಲೆಯಿಂದ ತೂರಿ ಬರುವ ಮಾನವ ರಹಿತ ವಿಮಾನ, ಖಂಡಾಂತರ ಮತ್ತು ಕ್ರೂಸ್ ಕ್ಷಿಪಣಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ.

    ಭಾರತಕ್ಕೆ ಅಗತ್ಯ ಏಕೆ?
    ಪಾಕ್ ಬಳಿ ಇರುವ 20 ಫೈಟರ್ ಸ್ಕ್ವಾಡ್ ಡ್ರೋನ್ಸ್ ಹಾಗೂ ಚೀನಾ ಬಳಿ ಇರುವ ಎಫ್-16, ಜೆ-17 ಆವೃತ್ತಿಯ ಫೈಟರ್ ಡ್ರೋನ್ ಹಾಗೂ 800 4-ಜೆನ್ ಫೈಟರ್ ವಿಮಾನಗಳಿಗೆ ಎಸ್-400 ವಾಯು ರಕ್ಷಣಾ ವ್ಯವಸ್ಥೆ ದಿಟ್ಟ ಉತ್ತರ ನೀಡಲಿದೆ. ಭಾರತ ಈ ವ್ಯವಸ್ಥೆಯನ್ನು ಚೀನಾ ಗಡಿಯಲ್ಲಿ ನಿಯೋಜಿಸಲು ಸಿದ್ಧತೆ ನಡೆಸಿದೆ. ಭಾರತಕ್ಕೆ ಈ ವ್ಯವಸ್ಥೆ ಬಂದರೆ ವಾಯು ಪಡೆಯ ಸಾಮರ್ಥ್ಯ ಹೆಚ್ಚಾಗಲಿದೆ.

    ಯಾವೆಲ್ಲ ದೇಶಗಳಲ್ಲಿ ಈ ವ್ಯವಸ್ಥೆ ಇದೆ?
    ರಷ್ಯಾದಿಂದ ಈ ವ್ಯವಸ್ಥೆಯನ್ನು ಮೊದಲು ಚೀನಾ ಖರೀದಿ ಮಾಡಿದೆ. 2014ರಲ್ಲಿ ಚೀನಾ ಒಪ್ಪಂದ ಮಾಡಿಕೊಂಡಿದ್ದು ಈಗಾಗಲೇ ಎಸ್-400 ಕ್ಷಿಪಣಿ ವ್ಯವಸ್ಥೆ ಚೀನಾಗೆ ತಲುಪಿದೆ. ಎಷ್ಟು ಪ್ರಮಾಣದಲ್ಲಿ ರಷ್ಯಾ ವಿತರಣೆ ಮಾಡಿದೆ ಎನ್ನುವುದು ತಿಳಿದು ಬಂದಿಲ್ಲ. ಕಳೆದ ವರ್ಷ ಟರ್ಕಿ ಜೊತೆ ಒಪ್ಪಂದ ನಡೆದಿದೆ. ಭಾರತ ಅಷ್ಟೇ ಅಲ್ಲದೇ ಕತಾರ್ ಎಸ್-400 ಖರೀದಿಸಲು ಆಸಕ್ತಿ ತೋರಿಸಿದೆ.

    ಒಪ್ಪಂದದ ಉದ್ದೇಶ ಏನು?
    ರಷ್ಯಾದೊಂದಿಗೆ ಚೀನಾ ಉತ್ತಮ ಬಾಂಧವ್ಯ ಹೊಂದಿದರೆ ಭವಿಷ್ಯದಲ್ಲಿ ಭಾರತಕ್ಕೆ ಸಮಸ್ಯೆ ಉಂಟಾಗಬಹುದು ಎನ್ನುವ ಕಾರಣ ಮೋದಿ ವ್ಲಾದಿಮಿರ್ ಪುಟಿನ್ ಜೊತೆ ಉತ್ತಮ ಸಂಪರ್ಕ ಬೆಳೆಸಿದ್ದರು. ಇದಕ್ಕಾಗಿ ಕಳೆದ ಮೇನಲ್ಲಿ ರಷ್ಯಾಗೆ ಭೇಟಿ ನೀಡಿ ಮಾತುಕತೆ ಕೂಡ ನಡೆಸಿದ್ದರು. ಈ ವೇಳೆಯೇ ಎಸ್-400 ವಾಯು ರಕ್ಷಣಾ ವ್ಯವಸ್ಥೆ ಖರೀದಿಸುವ ಒಪ್ಪಂದದ ಬಗ್ಗೆಯೂ ಚರ್ಚೆ ನಡೆಸಲಾಗಿತ್ತು. ಅಷ್ಟೇ ಅಲ್ಲದೇ ವಿಶ್ವದ ಮಿಲಿಟರಿ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಲು ಭಾರತಕ್ಕೆ ಎಸ್-400 ಸಹಕಾರಿಯಾಗಲಿದೆ.

    ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ  ಆತಂಕ ಯಾಕೆ?
    ರಷ್ಯಾದೊಂದಿಗಿನ ಭಾರತದ ಉತ್ತಮ ಸಂಬಂಧ ಹೊಂದಿರುವುದು ಅಮೆರಿಕ ಹಾಗೂ ಚೀನಾ, ಪಾಕಿಸ್ತಾನದ ನಿದ್ದೆಗೆಡಿಸಿದೆ. ಈಗಾಗಲೇ ಅಮೆರಿಕವೂ ರಷ್ಯಾ ಯುದ್ಧ ಸಾಮಾಗ್ರಿ ಖರೀದಿ ಮೇಲೆ ನಿರ್ಬಂಧ ವಿಧಿಸಿದೆ. ಇದರ ನಡುವೆಯೂ ಭಾರತ ದಿಟ್ಟ ನಿರ್ಧಾರ ಮಾಡಿ ಒಪ್ಪಂದಕ್ಕೆ ಸಹಿ ಹಾಕಲು ಮುಂದಾಗಿದೆ. ಭಾರತದ ನೆರೆ ದೇಶಗಳ ಪೈಕಿ ಚೀನಾ ಮತ್ತು ಪಾಕಿಸ್ತಾನದಿಂದಲೇ ಕಿರಿಕ್ ಜಾಸ್ತಿ. ಆಗಾಗ ಖಂಡಾಂತರ ಕ್ಷಿಪಣಿಗಳನ್ನು ಚೀನಾ, ಪಾಕಿಸ್ತಾನ ಪರೀಕ್ಷೆ ಮಾಡುತ್ತಲೇ ಇರುತ್ತದೆ. ಹೀಗಾಗಿ ಯಾವುದೇ ಸಮಯದಲ್ಲಿ ಆಗಬಹುದಾದ ದಾಳಿಯನ್ನು ಹಿಮ್ಮೆಟ್ಟಿಸುವ ಸಾಮರ್ಥ್ಯ ಭಾರತಕ್ಕೆ ಸಿಗಲಿದೆ.

    ಅಮೆರಿಕ ಎಚ್ಚರಿಕೆ:
    ಅಮೆರಿಕ ಯಾವಾಗಲೂ ತನ್ನ ಆರ್ಥಿಕ ಪ್ರಭಾವ ಬಳಸಿ ಇತರ ರಾಷ್ಟ್ರಗಳ ಆಂತರಿಕ ವಿಚಾರಕ್ಕೆ ತಲೆ ಹಾಕುತ್ತಿರುತ್ತದೆ. ರಷ್ಯಾ, ಇರಾನ್, ದಕ್ಷಿಣ ಕೊರಿಯಾ ದೇಶಗಳಿಗೆ ಆರ್ಥಿಕ ವ್ಯವಹಾರ ನಡೆಸುವ ಕುರಿತು ದಿಗ್ಬಂಧನ ವಿಧಿಸಿರುವ ಅಮೆರಿಕ ವಿಶ್ವದ ಇತರೆ ರಾಷ್ಟ್ರಗಳಿಗೆ ಎಚ್ಚರಿಕೆ ನೀಡಿತ್ತು. ಒಂದೊಮ್ಮೆ ಇದನ್ನು ಮೀರಿ ಇತರ ದೇಶಗಳು ಈ ರಾಷ್ಟ್ರಗಳೊಂದಿಗೆ ಹೆಚ್ಚಿನ ಆರ್ಥಿಕ ಒಪ್ಪಂದ ಮಾಡಿಕೊಂಡರೆ ಆ ದೇಶಗಳ ಮೇಲೂ ದಿಗ್ಬಂಧನ ವಿಧಿಸುವ ಅವಕಾಶವನ್ನು `ಕಾಟ್ಸಾ’ ಒಪ್ಪಂದ ಮೂಲಕ ಅಮೆರಿಕ ಹೊಂದಿದೆ. ಭಾರತ ಅಮೆರಿಕದಿಂದ ಸಾಕಷ್ಟು ಪ್ರಮಣದಲ್ಲಿ ರಕ್ಷಣಾ ಸಾಮಾಗ್ರಿಗಳನ್ನು ಖರೀದಿಸುತ್ತಿರುವ ಕಾರಣ ಭಾರತದ ಮೇಲೆ ನಿರ್ಬಂಧ ಹೇರಲಿಕ್ಕಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

    ಏನಿದು ಕಾಟ್ಸಾ?
    ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.

    ವಿಶ್ವಸಂಸ್ಥೆಯ ಕಾಯ್ದೆಯಲ್ಲ:
    ರಷ್ಯಾದಿಂದ ಟ್ರಯಂಫ್ ಖರೀದಿಗೆ ಅಮೆರಿಕದಿಂದ ವಿರೋಧ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿ, ಕಾಟ್ಸಾ ಕಾಯ್ದೆ ಅಮೆರಿಕದ್ದು ಹೊರತು ವಿಶ್ವಸಂಸ್ಥೆಯದ್ದಲ್ಲ. ಇದು ಭಾರತ ಮತ್ತು ರಷ್ಯಾದ ಆಂತರಿಕ ವಿಚಾರ ಎಂದು ಹೇಳಿ ತಿರುಗೇಟು ನೀಡಿದ್ದರು.

     

  • ಚೀನಾದಿಂದ 10 ಪರಮಾಣು ಸಿಡಿತಲೆ ಹೊತ್ತೊಯ್ಯಬಲ್ಲ ಕ್ಷಿಪಣಿ ಪರೀಕ್ಷೆ

    ಬೀಜಿಂಗ್: ನೆರೆಯ ದೇಶ ಚೀನಾ, ಪರಮಾಣು ಕ್ಷಿಪಣಿ ಪರೀಕ್ಷೆ ಮಾಡಿದೆ. 10 ಪರಮಾಣು ಸಿಡಿತಲೆಗಳನ್ನ ಹೊತ್ತೊಯ್ಯಬಲ್ಲ ಡಿಎಫ್ – 5ಸಿ ಕ್ಷಿಪಣಿಯನ್ನ ಚೀನಾ ಪರೀಕ್ಷೆ ಮಾಡಿದೆ.

    ಅಮೆರಿಕಾದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತ ಶುರುವಾದ ತಕ್ಷಣ ಕಳೆದ ತಿಂಗಳು, ಚೀನಾದ ಶಾಂಕ್ಷಿ ಪ್ರಾಂತ್ಯದ ತೈಯುವಾನ್ ಬಾಹ್ಯಾಕಾಶ ಉಡವಾಣಾ ಕೇಂದ್ರದಲ್ಲಿ ಡೊಂಗ್‍ಫೆಂಗ್ – 5ಸಿ ಕ್ಷಿಪಣಿಯಲ್ಲಿ ಡಮ್ಮಿ ಪರಮಾಣು ಸಿಡಿತಲೆಗಳನ್ನ ಪರೀಕ್ಷೆ ಮಾಡಿದೆ ಅಂತ ಅಮೆರಿಕಾ ಗುಪ್ತಚರ ಸಂಸ್ಥೆಗಳು ಮಾಹಿತಿ ಕಲೆ ಹಾಕಿವೆ.

    ವ್ಯಾಪಾರ ಹಾಗೂ ದಕ್ಷಿಣ ಚೀನಾ ಸಮುದ್ರದಲ್ಲಿ ಸೇನಾ ನೆಲೆಯ ವಿಚಾರದಲ್ಲಿ ಟ್ರಂಪ್ ಚೀನಾ ವಿರುದ್ಧ ಕಠಿಣ ನಿಲುವು ತಳೆಯಬಹುದು ಎಂಬ ಸಂಕೇತ ಬರುವಾಗಲೇ ಚೀನಾ ಈ ಪರೀಕ್ಷೆ ನಡೆಸಿದೆ. ಸದ್ಯ ಚೀನಾ ಬಳಿ 250ರಷ್ಟು ಪರಮಾಣು ಬಲ ಇರೋದಾಗಿ ಅಮೆರಿಕಾ ಅಂದಾಜಿಸಿದೆ.

    ಈ ನಡುವೆ ಪಾಕಿಸ್ತಾನ ಸರ್ಕಾರ ಗೃಹ ಬಂಧನದಲ್ಲಿರೋ ಉಗ್ರ ಹಫೀಜ್ ಸಯೀದ್‍ನನ್ನ ನಿರ್ಗಮ ನಿಯಂತ್ರಣ ಪಟ್ಟಿಗೆ ಸೇರ್ಪಡೆ ಮಾಡಿದೆ. ದೇಶ ಬಿಟ್ಟು ತೆರಳದಂತೆ ತಡೆದಿರೋ ಈ ಕಾನೂನಿನಿಂದ ಇತರೆ ಉಗ್ರರಿಗೂ ಶಾಕ್ ಆಗಿದೆ.