Tag: mixer

  • ಶ್ರದ್ಧಾ ಹತ್ಯೆ ಕೇಸ್ – ಮೂಳೆಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿದ್ದ ಅಫ್ತಾಬ್

    ಶ್ರದ್ಧಾ ಹತ್ಯೆ ಕೇಸ್ – ಮೂಳೆಗಳನ್ನು ಮಿಕ್ಸಿಯಲ್ಲಿ ಪುಡಿ ಮಾಡಿದ್ದ ಅಫ್ತಾಬ್

    ನವದೆಹಲಿ: ಕಳೆದ ವರ್ಷ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ನಡೆದಿದ್ದ ಯುವತಿ ಶ್ರದ್ಧಾಳ (Shraddha Walkar) ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆಯ ಕುರಿತು 6,600 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಇನ್ನೂ ಅನೇಕ ಭಯಾನಕ ವಿವರಗಳು ಬಹಿರಂಗವಾಗಿದೆ.

    ಶ್ರದ್ಧಾಳನ್ನು ಕೊಲೆ ಮಾಡಿದ್ದ ಆಕೆಯ ಲಿವ್‌ಇನ್ ಪಾರ್ಟ್‌ನರ್ ಅಫ್ತಾಬ್ ಪೂನಾವಾಲ (Aaftab Poonawala) ಆಕೆಯ ಮೂಳೆಗಳನ್ನು ಮಿಕ್ಸಿಯಲ್ಲಿ (Mixer) ಹಾಕಿ ಪುಡಿ ಮಾಡಿದ್ದ. ಮೇ 18 ರಂದು ಅಫ್ತಾಬ್ ಕೊಲೆ ಮಾಡಿದ ಬಳಿಕ ಝೊಮಾಟೋದಿಂದ ಚಿಕನ್ ರೋಲ್ ಅನ್ನು ತರಿಸಿಕೊಂಡು ಊಟ ಮಾಡಿದ್ದ ಎಂದು ಉಲ್ಲೇಖಿಸಲಾಗಿದೆ.

    ಕಳೆದ ವರ್ಷ ಮೇ ತಿಂಗಳಿನಲ್ಲಿ ಶ್ರದ್ಧಾ ವಾಕರ್ ಮತ್ತು ಆಫ್ತಾಬ್ ಪೂನಾವಾಲಾ ದೆಹಲಿಗೆ ತೆರಳಿದ್ದರು. ಆದರೆ ಇಬ್ಬರ ಸಂಬಂಧದಲ್ಲಿ ಬಿರುಕು ಮೂಡಿತ್ತು. ತಮ್ಮ ಖರ್ಚು ವೆಚ್ಚಗಳು ಹಾಗೂ ಅಫ್ತಾಬ್‌ಗೆ ಇತರ ಯುವತಿಯರೊಂದಿಗಿದ್ದ ಸಂಬಂಧದ ಬಗ್ಗೆ ಆಗಾಗ ಜಗಳವಾಗುತ್ತಿತ್ತು. ಆತನಿಗೆ ದೆಹಲಿಯಿಂದ ದುಬೈ ತನಕವೂ ಗೆಳತಿಯರಿದ್ದರು ಎನ್ನಲಾಗಿದೆ.

    ಮೇ 18 ರಂದು ಅಫ್ತಾಬ್ ಹಾಗೂ ಶ್ರದ್ಧಾ ಇಬ್ಬರೂ ಮುಂಬೈಗೆ (Mumbai) ಹೋಗಲು ಯೋಜಿಸಿದ್ದರು. ಆದರೆ ಅಫ್ತಾಬ್ ಇದ್ದಕ್ಕಿದ್ದಂತೆ ಟಿಕೆಟ್ ಅನ್ನು ರದ್ದುಗೊಳಿಸಿದ್ದ. ಬಳಿಕ ಇಬ್ಬರ ನಡುವೆ ಮತ್ತೊಂದು ಖರ್ಚಿನ ವಿಚಾರವಾಗಿ ಜಗಳ ಏರ್ಪಟ್ಟಿತ್ತು. ಆ ಕ್ಷಣದ ಕೋಪದಲ್ಲಿ ಅಫ್ತಾಬ್ ಶ್ರದ್ಧಾಳ ಕತ್ತು ಹಿಸುಕಿ ಕೊಂದಿದ್ದ.

    ಗೆಳತಿಯ ಕೊಲೆ ಮಾಡಿದ ಬಳಿಕ ಅಫ್ತಾಬ್ ಆಕೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ವಿಲೇವಾರಿ ಮಾಡಲು ಯೋಜಿಸಿದ್ದ. ಇದಕ್ಕಾಗಿ ಆತ ಒಂದು ಚೀಲವನ್ನೂ ಖರೀದಿಸಿದ್ದ. ಆದರೆ ಇದರಿಂದ ಆತ ತಕ್ಷಣ ಸಿಕ್ಕಿಬೀಳುತ್ತಾನೆ ಎಂದು ಭಾವಿಸಿ, ಈ ಯೋಜನೆಯನ್ನು ಕೈಬಿಟ್ಟಿದ್ದ. ಬಳಿಕ ಶ್ರದ್ಧಾಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಯೋಜಿಸಿ, ಇದಕ್ಕಾಗಿ ಗರಗಸ, ಸುತ್ತಿಗೆ, 3 ಚಾಕುಗಳು ಮಾತ್ರವಲ್ಲದೇ ಬ್ಲೋಟಾರ್ಚ್‌ಗಳನ್ನೂ ಖರೀದಿಸಿದ್ದ. ಇದನ್ನೂ ಓದಿ: ಬೆಂಗಳೂರಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಅಗ್ನಿ ಅವಘಡ – ಎದ್ನೋ ಬಿದ್ನೋ ಎಂದು ಹೊರ ಓಡಿದ ಸಿಬ್ಬಂದಿ

    ಅಫ್ತಾಬ್ ಶ್ರದ್ಧಾಳ ದೇಹವನ್ನು 35 ತಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ. ಆತನ ಇತರ ಗೆಳತಿಯರು ಮನೆಗೆ ಭೇಟಿ ನೀಡುತ್ತಿದ್ದಾಗಲೆಲ್ಲಾ ಅವುಗಳನ್ನು ಅಲ್ಲಿಂದ ತೆಗೆದು ಅಡುಗೆ ಮನೆಯಲ್ಲಿ ಇಡುತ್ತಿದ್ದ. ಆಕೆಯ ಮೊಬೈಲ್ ಅನ್ನು ತಾನೇ ಇಟ್ಟುಕೊಂಡಿದ್ದು, ನಂತರ ಮುಂಬೈನಲ್ಲಿ ಅದನ್ನು ಎಸೆದಿದ್ದ. ಮೇ 18ರ ಬಳಿಕ ಶ್ರದ್ಧಾಳ ಸಾಮಾಜಿಕ ಮಾಧ್ಯಮಗಳ ಖಾತೆಗಳು ಆತನ ಫೋನ್‌ನಿಂದ ಚಾಲನೆಯಾಗುತ್ತಿದ್ದ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ.

    ಕೊಲೆಯಾದ ಶ್ರದ್ಧಾಳ ದೇಹವನ್ನು 35 ತುಂಡುಗಳಾಗಿ ಕತ್ತರಿಸಲಾಗಿದೆ ಎಂದು ಹೇಳಿಕೆ ನೀಡಲಾಗಿದೆಯಾದರೂ ಇಲ್ಲಿಯವರೆಗೆ ಕೇವಲ 20 ದೇಹದ ಭಾಗಗಳು ಮಾತ್ರವೇ ಪತ್ತೆಯಾಗಿವೆ. ಆಕೆಯ ತಲೆ ಇನ್ನೂ ಪತ್ತೆಯಾಗಿಲ್ಲ. ಕಳೆದ ವರ್ಷಾಂತ್ಯದಲ್ಲಿ ಪಾಲಿಗ್ರಾಫ್ ಹಾಗೂ ನಾರ್ಕೋ-ಅನಾಲಿಸಿಸ್ ಪರೀಕ್ಷೆಗಳಲ್ಲಿ ಅಫ್ತಾಬ್ ತಾನು ಕೊಲೆ ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾರು, ಟ್ಯಾಂಕರ್ ನಡುವೆ ಭೀಕರ ಅಪಘಾತ – ಪ್ರವಾಸಕ್ಕೆ ತೆರಳುತ್ತಿದ್ದ ಮೂವರು ಮಸಣಕ್ಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್- ಅಂಗಡಿಯಲ್ಲಿದ್ದ ವ್ಯಕ್ತಿಗೆ ಗಂಭೀರ ಗಾಯ

    ಕೊರಿಯರ್ ಅಂಗಡಿಯಲ್ಲಿ ಮಿಕ್ಸಿ ಬ್ಲಾಸ್ಟ್- ಅಂಗಡಿಯಲ್ಲಿದ್ದ ವ್ಯಕ್ತಿಗೆ ಗಂಭೀರ ಗಾಯ

    ಹಾಸನ: ಕೊರಿಯರ್ ಅಂಗಡಿಯಲ್ಲಿ ಅನುಮಾನಾಸ್ಪದವಾಗಿ ಹೊಸ ಮಿಕ್ಸರ್‌ (Mixer) ಬ್ಲಾಸ್ಟ್ ಆಗಿ ಅಂಗಡಿಯಲ್ಲಿದ್ದ ವ್ಯಕ್ತಿಯ ಕೈಗೆ ಗಂಭೀರ ಗಾಯವಾದ ಘಟನೆ ಹಾಸನದ (Hassan) ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.

    ಹಾಸನದ ಕುವೆಂಪುನಗರದ 16ನೇ ಕ್ರಾಸ್‍ನಲ್ಲಿರುವ ಡಿಟಿಡಿಸಿ ಕೊರಿಯರ್ ಅಂಗಡಿಯಲ್ಲಿ (Courier Shop) ಈ ಘಟನೆ ಸಂಭವಿಸಿದೆ. ಡಿಟಿಡಿಸಿ ಅಂಗಡಿಗೆ ಮಿಕ್ಸಿ ಪಾರ್ಸಲ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಪಾರ್ಸಲ್ ತೆಗೆದುಕೊಂಡು ಹೋಗಿದ್ದ ವ್ಯಕ್ತಿಯು, ಮಿಕ್ಸಿ, ಜಾರ್ ನಮಗೆ ಬೇಡ ಎಂದು ಅಂಗಡಿ ಮಾಲೀಕನಿಗೆ ವಾಪಸ್ ನೀಡಿದ್ದ. ಅಂಗಡಿ ಮಾಲೀಕ ಶಶಿ ಮಿಕ್ಸಿಯನ್ನು ಪರಿಶೀಲನೆ ಮಾಡುವಾಗ ಸ್ಫೋಟಗೊಂಡಿದೆ. ಇದನ್ನೂ ಓದಿ: ಮಾರುವೇಷದಲ್ಲಿ ಬೆಳಗಾವಿಗೆ ನುಗ್ಗಲು ಶಿವಸೇನೆ ಯತ್ನ

    ಸ್ಫೋಟದ ರಭಸಕ್ಕೆ ಕೊರಿಯರ್ ಅಂಗಡಿ ಮಾಲೀಕ ಶಶಿ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಸ್ಫೋಟದಿಂದಾಗಿ ಅಂಗಡಿಯ ಗ್ಲಾಸ್, ಗೋಡೆಗೂ ಹಾನಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಐಷಾರಾಮಿ ಕಾರು ಖರೀದಿ ನೆಪದಲ್ಲಿ ವಂಚಿಸಿದವ ಅರೆಸ್ಟ್- 10 ಕೋಟಿ ಮೌಲ್ಯದ 9 ಕಾರು ಜಪ್ತಿ

    Live Tv
    [brid partner=56869869 player=32851 video=960834 autoplay=true]

  • ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

    ಅಧಿಕಾರಿಗಳ ವಿರುದ್ಧ ವಿಭಿನ್ನ ಆಕ್ರೋಶ- ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಳ್ಳುವ ರೈತ

    ಶಿವಮೊಗ್ಗ: ರೈತರೊಬ್ಬರು ತನ್ನ ತೋಟದ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ನೀಡದ ಮೆಸ್ಕಾಂ ಅಧಿಕಾರಿಗಳ ವಿರುದ್ಧ ವಿಭಿನ್ನವಾಗಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

    ಹನುಮಂತಪ್ಪ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬುತ್ತಿದ್ದ ರೈತ. ಅವರು ಪ್ರತಿನಿತ್ಯ ಮನೆಯಿಂದ ಮಿಕ್ಸಿ ತಂದು ಮೆಸ್ಕಾಂ ಕಚೇರಿಯಲ್ಲಿ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದರು. ಹಲವು ವರ್ಷಗಳಿಂದ ಅವರು ತೋಟದ ಮನೆಯಲ್ಲಿಯೇ ವಾಸವಿದ್ದರು. ಅವರ ತೋಟದಲ್ಲಿರುವ ಕೊಳವೆ ಬಾವಿಯ ಐಪಿ ಸೆಟ್‍ಗೆ ವಿದ್ಯುತ್ ಸಂಪರ್ಕ ಇದೆ. ಆದರೆ ಐಪಿ ಸೆಟ್‍ನ ವಿದ್ಯುತ್‍ಗೆ ಸಮಯ ನಿಗದಿ ಇಲ್ಲ. ಹೀಗಾಗಿ ಮನೆಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅವರು ಮೆಸ್ಕಾಂಗೆ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಸಿದ್ದರಾಮಯ್ಯ ಮೆಂಟಲ್ ಗಿರಾಕಿಯ ರೀತಿ ಆಡಬಾರದು, ಪ್ರಬುದ್ಧವಾಗಿ ಮಾತನಾಡಬೇಕು: ಸಿ.ಟಿ.ರವಿ ವ್ಯಂಗ್ಯ

    ರೈತ ಕಳೆದ 6 ತಿಂಗಳಿನಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದು, ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲೇ ಮಸಾಲೆ ರುಬ್ಬಿಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ: ಮಗನ ಕಾಯಿಲೆ ಗುಣಪಡಿಸ್ತೀನೆಂದು ಮಹಿಳೆ ಮೇಲೆ ಸ್ವಯಂಘೋಷಿತ ದೇವಮಾನವ ರೇಪ್