Tag: mk ganapathi

  • ಡಿವೈಎಸ್‍ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

    ಡಿವೈಎಸ್‍ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

    ಬೆಂಗಳೂರು: ಡಿವೈಎಸ್ಪಿ ಎಂ ಕೆ ಗಣಪತಿ ಅವರ ಅಸಹಜ ಸಾವು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಆದ್ರೆ ಇದೀಗ ಈ ಪ್ರಕರಣಕ್ಕೆ ಸ್ಫೋಟಕ ತಿರುವೊಂದು ದೊರೆತಿದೆ.

    ಹೌದು. ಯಾರೋ ಕೊಲೆ ಮಾಡಿದ್ದಾರೆ, ಇಲ್ಲ ಆತ್ಮಹತ್ಯೆ ಮಾಡಿಕೊಳ್ಳೊದಕ್ಕೆ ಪ್ರಚೋದಿಸಿದ್ದಾರೆ ಅಂತ ಆರೋಪ ಮಾಡಿದ ಕುಟುಂಬವೇ ಇದೀಗ ಸಾವಿಗೆ ನ್ಯಾಯ ಸಿಕ್ಕೋದಕ್ಕೆ ಬರಲೇ ಇಲ್ಲ. ಆತ್ಮಹತ್ಯೆ ಪ್ರಕರಣ ಬಯಲಿಗೆ ಎಳೆಯೋದಕ್ಕೆ ಸರ್ಕಾರ ನಿವೃತ್ತ ನ್ಯಾಯಾಧೀಶರ ಆಯೋಗವೊಂದನ್ನು ಮಾಡಿದೆ. ಆ ಕೇಶವ ನಾರಾಯಣ ಆಯೋಗ ಎಲ್ಲರನ್ನು ವಿಚಾರಣೆ ಮಾಡಿ ಸತ್ಯಾಸತ್ಯತೆ ಬೆಳಕಿಗೆ ತರುವ ಸಲುವಾಗಿ ತನಿಖೆ ಮಾಡ್ತಾ ಇದೆ.

    ಆದ್ರೆ ಗಣಪತಿಯ ಮನೆಯವರೇ ತನಿಖೆಗೆ ಸಹಕಾರ ನೀಡಿಲ್ಲ. ಗಣಪತಿ ಪತ್ನಿ, ಮಗ ಮತ್ತು ತಮ್ಮ ಮೂವರು ಆಯೋಗದ ಮುಂದೆ ವಿಚಾರಣೆಗೆ ಹಾಜರಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ನಮಗೆ ಯಾರ ಮೇಲೂ ಅನುಮಾನ ಇಲ್ಲ ನೀವೆ ಪತ್ತೆ ಹಚ್ಚಿ ಅಂತ ಹೇಳಿ ಹೋಗಿದ್ದಾರೆ ಎನ್ನಲಾಗಿದೆ.

    ಇತ್ತ ಸುಪ್ರೀಂಕೋರ್ಟ್ ಕೋರ್ಟ್ ಮೆಟ್ಟಿಲೇರಿ ಹೋರಾಟ ಮಾಡಿದ ಗಣಪತಿ ಅಕ್ಕ ಸಬಿತಾ, ತಮ್ಮ ಮಾಚಯ್ಯ ಕೂಡ ಆಯೋಗದ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ. ಮೂರು ಮೂರು ಬಾರಿ ನೋಟೀಸ್ ನೀಡಿದ್ರು ಕೂಡ ಯಾವುದೇ ಪ್ರತಿಕ್ರಿಯೆಯನ್ನು ನೀಡ್ತಾ ಇಲ್ಲ. ಇನ್ನು ವಿಚಾರಣೆ ಹಾಜರಾದ ಮೂವರು ಯಾವುದೇ ಹೇಳಿಕೆ ಹಾಗೂ ಯಾರ ವಿರುದ್ಧವೂ ಹೇಳಿಕೆ ನೀಡದೇ ಇದ್ದಿದ್ರಿಂದ ಆರೋಪಿಗಳ ಸ್ಥಾನದಲ್ಲಿ ಇರುವ ಜಾರ್ಜ್, ಪ್ರಣವ್ ಮೊಹಂತಿ ಮತ್ತು ಎ ಎಂ ಪ್ರಸಾದ್‍ನ ವಿಚಾರಣೆಯೇ ನಡೆಸಿಲ್ಲ. ಕೇವಲ ಸಿಬಿಐ ಮೇಲೆ ನಂಬಿಕೆ ಇಟ್ಟುಕೊಂಡಿರೋದ್ರಿಂದ ಆಯೋಗವನ್ನು ಕ್ಯಾರೆ ಅನ್ನುತ್ತಿಲ್ಲ ಅನ್ನೋ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಇದನ್ನೂ ಓದಿ: ಗಣಪತಿ ಸಾವಿನ ಕೇಸಲ್ಲಿ ಕಲಾಪ ಕೋಲಾಹಲ- ಡಾಕ್ಟರ್ ಮೇಲೆ ಸರ್ಕಾರ ಹಾಕಿತ್ತಂತೆ ಒತ್ತಡ

    ಕಳೆದ ವರ್ಷ ಜು. 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮು ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.

    ಇದನ್ನೂ ಓದಿ: ಗಣಪತಿ ಕೇಸ್: ಕಾಟಾಚಾರದ ಸಿಐಡಿ ತನಿಖೆಗೆ ಸಿಕ್ತು ಪುರಾವೆ-ಸಿಬಿಐ ತನಿಖೆ ವೇಳೆ ಪತ್ತೆ ಆಯ್ತು ಗುಂಡು

    https://www.youtube.com/watch?v=ExzV6YadXj8

  • ವಿನಯ್ ಕುಲಕರ್ಣಿ ಬೆನ್ನು ಬಿಡದ ಕೊಲೆ ಕೇಸ್- ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ

    ವಿನಯ್ ಕುಲಕರ್ಣಿ ಬೆನ್ನು ಬಿಡದ ಕೊಲೆ ಕೇಸ್- ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹೋರಾಟ

    ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿಗೆ ಕಂಟಕವಾಗಿ ಪರಿಣಮಿಸಿದೆ.

    ಮಂತ್ರಿ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇವತ್ತು ರಾಜ್ಯಾದ್ಯಂತ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಇಂದು ಅಥಣಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಜೊತೆಗೆ ಡಿವೈಎಸ್‍ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ಅಭಿವೃದ್ಧಿ ಸಚಿವ ಕೆ ಜೆ ಜಾರ್ಜ್ ರಾಜೀನಾಮೆಗೂ ಆಗ್ರಹಿಸಲಿದೆ.

    ಸಿಬಿಐ ಎಫ್‍ಐಆರ್‍ನಲ್ಲಿ ಜಾರ್ಜ್ ಮೊದಲ ಆರೋಪಿಯಾಗಿದ್ದಾರೆ. ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ. ಇದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಪಕ್ಷದ ಕೆಲ ನಾಯಕರೊಂದಿಗೆ ಮಾಡಿರುವ ಷಡ್ಯಂತ್ರ. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದಿಂದ ಕಂಗೆಟ್ಟಿರುವ ಅವರೆಲ್ಲಾ ತಮ್ಮ ವಿರುದ್ಧ ಸಂಚು ರೂಪಿಸಿದ್ದಾರೆ ಅಂತಾ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ವಿನಯ್ ಕುಲಕರ್ಣಿ ತಿರುಗೇಟು ನೀಡಿದ್ದಾರೆ.

  • ಗಣಪತಿ ಕೇಸಲ್ಲಿ ಜಾರ್ಜ್ ಮೊದಲ ಆರೋಪಿ- ಇಂದು ಮಡಿಕೇರಿ, ಬೆಂಗ್ಳೂರಿಗೆ ಸಿಬಿಐ

    ಗಣಪತಿ ಕೇಸಲ್ಲಿ ಜಾರ್ಜ್ ಮೊದಲ ಆರೋಪಿ- ಇಂದು ಮಡಿಕೇರಿ, ಬೆಂಗ್ಳೂರಿಗೆ ಸಿಬಿಐ

    ಬೆಂಗಳೂರು: ಡಿವೈಎಸ್‍ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಗುರುವಾರವಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಸಿಬಿಐ ತನಿಖೆ ಚುರುಕುಗೊಳಿಸಲಿದೆ.

    ಸಿಬಿಐ ಅಧಿಕಾರಿಗಳ ತಂಡ ಇಂದು ಮಧ್ಯಾಹ್ನದೊಳಗೆ ಬೆಂಗಳೂರು ಮತ್ತು ಮಡಿಕೇರಿಗೆ ತಲುಪುವ ಸಾಧ್ಯತೆ ಇದ್ದು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ. ಜಾರ್ಜ್, ಗುಪ್ತಚರ ದಳ ಡಿಜಿ ಪ್ರಣವ್ ಮೊಹಾಂತಿಗೆ ಎರಡು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡೋ ಸಾಧ್ಯತೆ ಇದೆ.

    ಇತ್ತ ಬಂಧನದ ಭೀತಿಯಲ್ಲಿರುವ ಜಾರ್ಜ್ ಕೂಡಾ ಇಂದೇ ಕೋರ್ಟ್‍ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಬಹುದು. ನಾನು ಸಮಾಜದಲ್ಲಿ ಗುರುತಿಸಿಕೊಂಡಿರುವ ಪ್ರತಿಷ್ಠಿತ ವ್ಯಕ್ತಿಯಾಗಿದ್ದು, ಬಂಧನವಾದ್ರೆ ಮಾನಹಾನಿಯಾಗುತ್ತೆ ಅಂತಾ ವಾದಿಸಿ ನಿರೀಕ್ಷಣಾ ಜಾಮೀನು ಕೋರಬಹುದು. ಆಗ ಸಿಬಿಐ ಜಾರ್ಜ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬಹುದು.

    ನಿರೀಕ್ಷಣಾ ಜಾಮೀನು ನೀಡಿದ್ರೆ ಮೂವರು ಆರೋಪಿಗಳು ಪ್ರಭಾವಿಗಳಾಗಿರುವ ಕಾರಣ ಸಾಕ್ಷ್ಯನಾಶ ಮತ್ತು ಒತ್ತಡ ಹೇರುವ ಸಾಧ್ಯತೆ ಇದೆ ಅನ್ನೋ ವಾದವನ್ನು ಸಿಬಿಐ ವಕೀಲರು ಮಂಡಿಸಬಹುದು. ಹೀಗಾಗಿ ಬಂಧನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಬಹುದು. ಅಲ್ಲದೇ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆ ಮುಗಿಯುವವರೆಗೆ ಅಮಾನತಿನಲ್ಲಿಡುವಂತೆ ಕೋರಬಹುದು ಎಂಬುದಾಗಿ ತಿಳಿದುಬಂದಿದೆ.

    ಇದನ್ನೂ ಓದಿ: ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

    ಸಿಬಿಐನಿಂದ ಎಫ್‍ಐಆರ್ ದಾಖಲಾಗಿರೋ ಹೊರತಾಗಿಯೂ ಕಾಂಗ್ರೆಸ್ ಸಚಿವ ಜಾರ್ಜ್ ರಾಜೀನಾಮೆ ಪಡೆಯೋ ಸಾಧ್ಯತೆ ಇಲ್ಲ. ಇದು ನಮ್ಮ ನಾಯಕರ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಮಾಡ್ತಿರೋ ಕುತಂತ್ರ. ಚುನಾವಣೆ ಹೊತ್ತಲ್ಲಿ ಪ್ರತೀಕಾರದ ರಾಜಕಾರಣ ಮಾಡ್ತಿದೆ ಅಂತಾ ಕಾಂಗ್ರೆಸ್ ವಾದಿಸ್ತಿದೆ.

    ಈ ಹಿಂದೆ ಸಿಐಡಿ ತನಿಖೆ ಕೈಗೊಂಡಿದ್ದಾಗ ಜಾರ್ಜ್ ರಾಜೀನಾಮೆ ನೀಡಿದ್ರು. ಈಗ ಮತ್ತೊಮ್ಮೆ ರಾಜೀನಾಮೆ ನೀಡಿ ನಾವಾಗಿಯೇ ಬಿಜೆಪಿ ಕೈಗೆ ಮತ್ತೊಂದು ಅಸ್ತ್ರ ನೀಡೋದು ಬೇಡ ಅನ್ನೋದು ಕೈ ಲೆಕ್ಕಾಚಾರ. ಸುಪ್ರೀಂಕೋರ್ಟ್ ಸೂಚನೆಯಂತೆ ತನಿಖೆ ನಡೆಸಿ ಮೂರು ತಿಂಗಳೊಳಗೆ ಸಿಬಿಐ ವರದಿ ಸಲ್ಲಿಸಬೇಕು. ಆಗ ಒಂದು ವೇಳೆ ತಪ್ಪಿತಸ್ಥ ಅಂತಾ ಸಾಬೀತಾದಲ್ಲಿ ಮಾತ್ರ ರಾಜೀನಾಮೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರ ಈ ಅಭಿಪ್ರಾಯಕ್ಕೆ ಸಿಎಂ ಸಿದ್ದರಾಮಯ್ಯ ಕೂಡಾ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ.