Tag: MLA B. Sriramulu

  • ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದ್ರೂ ತಗ್ಗಿಬಗ್ಗಿ ನಡೀಬೇಕು- ಸಿದ್ದುಗೆ ಶ್ರೀರಾಮುಲು ಕಿವಿಮಾತು

    ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದ್ರೂ ತಗ್ಗಿಬಗ್ಗಿ ನಡೀಬೇಕು- ಸಿದ್ದುಗೆ ಶ್ರೀರಾಮುಲು ಕಿವಿಮಾತು

    ದಾವಣಗೆರೆ: ಶಿವಾಜಿನಗರ ಶಾಸಕ ರೋಷನ್ ಬೇಗ್ ಸ್ವಪಕ್ಷದ ವಿರುದ್ಧ ಹರಿಹಾಯ್ದದ್ದು ಸರಿಯಾಗಿದೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ತಗ್ಗಿಬಗ್ಗಿ ನಡೆಯಬೇಕು ಎಂದು ಬಿಜೆಪಿ ಶಾಸಕ ಶ್ರೀರಾಮುಲು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕಿವಿಮಾತು ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಾಜಿನಗರ ಶಾಸಕ ರೋಷನ್ ಬೇಗ್ ಸ್ವ-ಪಕ್ಷದ ವಿರುದ್ಧ ಹರಿಹಾಯ್ದದ್ದು ಸರಿಯಿದೆ. ರೋಷನ್ ಬೇಗ್ ಹೇಳೋ ಮಾತುಗಳು ಸರಿಯಾಗಿದೆ. ಸಿದ್ದರಾಮಯ್ಯ ಅವರಿಗೆ ಅಹಂಕಾರ ಬೆಳೆದಿದೆ ಆ ಅಹಂ ಎಲ್ಲಿಗೆ ತೆಗೆದುಕೊಂಡು ಹೋಗುತ್ತೋ ಗೊತ್ತಾಗುತ್ತಿಲ್ಲ. ಮಾತಾಡಲಿ, ಇಂತಹ ನಾಯಕರನ್ನು ರಾಜ್ಯದಲ್ಲಿ ಬಹಳಷ್ಟು ಮಂದಿನ ನೋಡಿದ್ದೇವೆ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆದರೂ ತಗ್ಗಿಬಗ್ಗಿ ನಡೀಬೇಕು, ಬದುಕಬೇಕು ಎಂದಿದ್ದಾರೆ.

    ಸಿದ್ದರಾಮಯ್ಯ ಅಹಿಂದ ಸಮುದಾಯ ಬಳಸಿಕೊಂಡು ದೊಡ್ಡ ಮಟ್ಟಕ್ಕೆ ಬೆಳೆದ ನಾಯಕ. ಅವರಿಗೆ ಈಗ ಅಹಂ, ಅಹಂಕಾರ ಎಲ್ಲವೂ ಬಂದಿದೆ. ಸಿದ್ದರಾಮಯ್ಯ ಒಬ್ಬರನ್ನೇ ನೋಡುತ್ತಿಲ್ಲ. ಸಿದ್ದರಾಮಯ್ಯನ ರೀತಿ ಮೆರೆದಂತಹ, ಉರಿದಂತಹ ನಾಯಕರುಗಳು ಎಲ್ಲಾ ರೀತಿಯಲ್ಲೂ, ಎಲ್ಲಾ ಸ್ಥಾನವನ್ನು ಕಳೆದುಕೊಂಡಿರುವುದನ್ನು ನಾವು ನೋಡಿದ್ದೇವೆ ಎಂದು ಟಾಂಗ್ ಕೊಟ್ಟರು.

    ಎಕ್ಸಿಟ್ ಪೋಲ್ ಸಮೀಕ್ಷೆ ವಿಚಾರವಾಗಿ ಮಾತನಾಡಿ, ಎಲ್ಲಾ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿಜೀ ಪರವಾಗಿ ಬಂದಿವೆ. ಎಣಿಕೆಯ ನಂತರ 300 ಕ್ಕೂ ಹೆಚ್ಚು ಸ್ಥಾನಗಳು ಎನ್‍ಡಿಎ ಸರ್ಕಾರಕ್ಕೆ ಬರಲಿದೆ. ಫಲಿತಾಂಶದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಕೇಂದ್ರದಲ್ಲಿ ಮೋದಿಯವರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ನವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಲೋಕಸಮರಕ್ಕೂ ಮುನ್ನ ಸಮ್ಮಿಶ್ರ ಸರ್ಕಾರ ಪತನ: ಶ್ರೀರಾಮುಲು

    ಲೋಕಸಮರಕ್ಕೂ ಮುನ್ನ ಸಮ್ಮಿಶ್ರ ಸರ್ಕಾರ ಪತನ: ಶ್ರೀರಾಮುಲು

    ರಾಯಚೂರು: ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗಿದ್ದು, ಎರಡು ಪಕ್ಷಗಳಲ್ಲಿ ಹೊಂದಾಣಿಕೆ ಇಲ್ಲದ ಕಾರಣ ಲೋಕಸಭಾ ಚುನಾವಣೆಯ ಮುನ್ನವೇ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು, ಮೈತ್ರಿ ಸರ್ಕಾರದ ಕಾಂಗ್ರೆಸ್ ಧೋರಣೆ ಇದೇ ರೀತಿ ಮುಂದುವರಿದರೆ ಸಿಎಂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಇದರಿಂದ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸಾಬೀತಾಗಿದೆ. ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದು ಕರೆಯಿಸಿಕೊಳ್ಳುವ ಡಿ.ಕೆ ಶಿವಕುಮಾರ್ ಅವರಿಗೂ ಅಸಮಾಧಾನವಿದ್ದು, ಸರ್ಕಾರದ ಸಚಿವರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಹೊಂದಾಣಿಕೆ ಗೊಂದಲದಿಂದಲೇ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದರು.

    ಇತ್ತ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಯಚೂರು ಜಿಲ್ಲೆಯ ಶಾಸಕರಾದ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಲಿಂಗಸುಗೂರು ಶಾಸಕ ಡಿ.ಎಸ್ ಹೂಲಿಗೇರಿ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ಅವರು, ಸಿಎಂ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದೇವೆ. ಸಮ್ಮಿಶ್ರ ಸರ್ಕಾರ ಇರುವುದರಿಂದ ನಮ್ಮ ನಾಯಕರಿಗೂ ಸಿಎಂ ಸ್ಥಾನ ಸಿಗಬೇಕೆಂಬ ಹಂಬಲ ಕೆಲವರಿಗೆ ಇರುತ್ತೆ. ಆದರೆ ಈಗ ಸಿಎಂ ಬದಲಾಗುವ ಸಂದರ್ಭ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿದೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಪ್ರತ್ಯೇಕ ರಾಜ್ಯ ಬೇಡಿಕೆಗೆ ಬೆಂಬಲ ಸೂಚಿಸಿದ ಶ್ರೀರಾಮುಲು ವಿರುದ್ಧ ನೆಟ್ಟಿಗರ ಆಕ್ರೋಶ

    ಪ್ರತ್ಯೇಕ ರಾಜ್ಯ ಬೇಡಿಕೆಗೆ ಬೆಂಬಲ ಸೂಚಿಸಿದ ಶ್ರೀರಾಮುಲು ವಿರುದ್ಧ ನೆಟ್ಟಿಗರ ಆಕ್ರೋಶ

    ಬಳ್ಳಾರಿ: ವಿಧಾನಸಭಾ ಕಲಾಪದಲ್ಲಿ ಹಾಗೂ ಇತ್ತೀಚೆಗೆ ಮಾಧ್ಯಮಗಳ ಮುಂದೆ ಪ್ರತ್ಯೇಕ ರಾಜ್ಯದ ಕುರಿತಾಗಿ ಮಾತನಾಡಿದ್ದ ಶಾಸಕ ಶ್ರೀರಾಮುಲು ಪರ ಹಾಗೂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬರುತ್ತಿದೆ.

    ಕನ್ನಡವನ್ನೇ ಸರಿಯಾಗಿ ಮಾತನಾಡಲು ಬಾರದ, ಆಂಧ್ರ ಪ್ರದೇಶದಿಂದ ಈ ವ್ಯಕ್ತಿ ಕರ್ನಾಟಕ ಎರಡು ಭಾಗವಾಗಬೇಕು ಎನ್ನುತ್ತಿದ್ದಾರೆ. ಎಂತಹ ಸುವರ್ಣ ಕಾಲ ಬಂದು ನೋಡಿ ಕನ್ನಡಿಗರಿಗೆ ಎಂದು ಶ್ರೀರಾಮುಲು ಚಿತ್ರ ಬಳಕೆ ಮಾಡಿ, ಬರೆದು ಅಮರನಾಥ್ ಎಂಬವರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಅಮರನಾಥ್ ಪೋಸ್ಟ್ ನಲ್ಲಿ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಹೀಗಾಗಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ಭಾರೀ ವಿರೋಧ ಹಾಗೂ ಬೆಂಬಲದ ಕಮೆಂಟ್‍ಗಳು ಹರಿದಾಡುತ್ತಿವೆ.

    ಶ್ರೀರಾಮುಲು ಹೇಳಿದ್ದೇನು?
    ಜೆಡಿಎಸ್ ಸೋತಿರುವ ಕ್ಷೇತ್ರಗಳ ಮೇಲೆ ಸೇಡನ್ನು ಬಜೆಟ್ ಮೂಲಕ ಸಿಎಂ ಎಚ್.ಡಿಕುಮಾರಸ್ವಾಮಿ ಅವರು ತೀರಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಹೋರಾಟವನ್ನು ಬೆಂಬಲಿಸುತ್ತೇನೆ ಎಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಶಾಸಕ ಬಿ.ಶ್ರೀರಾಮುಲು ಅವರು ಹೇಳಿದ್ದರು. ವಿಧಾನಸಭೆ ಅಷ್ಟೇ ಅಲ್ಲದೆ ಇತ್ತೀಚೆಗೆ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೋರಾಟದ ನಾಯಕತ್ವ ವಹಿಸಿಕೊಳ್ಳಲು ನಾನು ಸಿದ್ಧ ಎಂದು ತಿಳಿಸಿದ್ದರು.