Tag: MLA Devanand Chavan

  • ಆಪರೇಷನ್ ಕಮಲಕ್ಕೆ ರಿವರ್ಸ್ ಆಪರೇಷನ್ – ಜೆಡಿಎಸ್ ಶಾಸಕರ ಆಡಿಯೋ ವೈರಲ್

    ಆಪರೇಷನ್ ಕಮಲಕ್ಕೆ ರಿವರ್ಸ್ ಆಪರೇಷನ್ – ಜೆಡಿಎಸ್ ಶಾಸಕರ ಆಡಿಯೋ ವೈರಲ್

    ವಿಜಯಪುರ: ಮೈತ್ರಿ ಸರ್ಕಾರ ಬೀಳಿಸಲು ಆಪರೇಷನ್ ಕಮಲ ಮತ್ತೆ ಸದ್ದು ಮಾಡುತ್ತಿದೆ. ಇದಕ್ಕೆ ಪ್ರತಿ ಕಾಂಗ್ರೆಸ್ ಪ್ರತ್ಯುತ್ತರ ನೀಡಲು ರಿವರ್ಸ್ ಆಪರೇಷನ್ ನಡೆಸಿದೆಯಂತೆ.

    ಈ ಸಂಬಂಧ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಶಾಸಕರು ಶಿವಾಜಿ ಎಂಬವರ ಜೊತೆಗೆ ಮಾತನಾಡಿದ್ದು, ದೇವರಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರು ಕಾಂಗ್ರೆಸ್ ಸೇರಲಿದ್ದಾರೆ ಎಂದು ತಿಳಿಸಲಾಗಿದೆ.

    ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ಶಾಸಕ ಸೋಮನಗೌಡ ಪಾಟೀಲ್ ನಡುವೆ ಒಳ್ಳೆಯ ಸಂಬಂಧವಿದೆ. ಒಂದು ವೇಳೆ ಎಂ.ಬಿ.ಪಾಟೀಲ್ ಅವರು, ಬಿಜೆಪಿ ಬಿಟ್ಟು ಕಾಂಗ್ರೆಸ್‍ಗೆ ಬರುವಂತೆ ಸೋಮನಗೌಡ ಅವರಿಗೆ ತಿಳಿಸಿದರೆ, ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗುವ ಶಾಸಕರ ಪಟ್ಟಿಯಲ್ಲಿ ಸೋಮನಗೌಡ ಪಾಟೀಲ್ ಅವರ ಹೆಸರು ಮೊದಲಿಗೆ ಇದೆ ಎಂದು ದೇವಾನಂದ ಚವ್ಹಾಣ ತಿಳಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರು, ವೈರಲ್ ಆಗಿರುವ ಆಡಿಯೋ ನನ್ನದೆ. ಆದರೆ ಅದರಲ್ಲಿ ಕೆಲವೊಂದು ವಿಚಾರವನ್ನು ಎಡಿಟ್ ಮಾಡಲಾಗಿದೆ. ನಾನು ಮಾತನಾಡದೇ ಇರುವ ಕೆಲವು ವಿಚಾರಗಳನ್ನು ಸೇರಿಸಿದ್ದಾರೆ. ಎಂ.ಬಿ.ಪಾಟೀಲ್ ಹಾಗೂ ಸೋಮನಗೌಡ ಪಾಟೀಲ್ ಅವರ ಆತ್ಮೀಯತೆ ಬಗ್ಗೆ ಮಾತನಾಡಿದ್ದೇನೆ. ಪಕ್ಷ ಬಿಡುವ ಕುರಿತು ಏನನ್ನೂ ಹೇಳಿಲ್ಲ ಎಂದರು.

    ಶಾಸಕ ಸೋಮನಗೌಡ ಪಾಟೀಲ್ ಅವರ ಬಗ್ಗೆ ಸಣ್ಣತಣ ತೋರುವುದು ಸರಿಯಲ್ಲ. ದುರುದ್ದೇಶಪೂರ್ವಕವಾಗಿ ಹೀಗೆ ಆಡಿಯೋ ವೈರಲ್ ಮಾತನಾಡಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡುತ್ತೇನೆ. ಕಾನೂನು ಹೋರಾಟ ಮಾಡುತ್ತೇನೆ ಎಂದು ದೇವಾನಂದ ಚವ್ಹಾಣ ಪ್ರತಿಕ್ರಿಯಿಸಿದ್ದಾರೆ.

  • ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಿಂದ ಅಕ್ರಮ: ಶಾಸಕ ದೇವಾನಂದ ತರಾಟೆ

    ರೈತ ಸಂಪರ್ಕ ಕೇಂದ್ರ ಅಧಿಕಾರಿಗಳಿಂದ ಅಕ್ರಮ: ಶಾಸಕ ದೇವಾನಂದ ತರಾಟೆ

    ವಿಜಯಪುರ: ರೈತ ಸಂಪರ್ಕ ಕೇಂದ್ರವೊಂದಕ್ಕೆ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಅವರು ದಿಢೀರ್ ಭೇಟಿ ನೀಡಿದ್ದು, ಅಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ.

    ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ರೈತ ಸಂಪರ್ಕ ಕೇಂದ್ರದಲ್ಲಿ ರೈತರ ಶೋಷಣೆ ನಡೆಯುತ್ತಿದೆ ಎಂಬ ಮಾಹಿತಿಯನ್ನು ಶಾಸಕ ದೇವಾನಂದ ಅವರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ್ದು, ಅಕ್ರಮ ಅರಿತು ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.

    ಸಬ್ಸಿಡಿ ದರದಲ್ಲಿ ರೈತರಿಗೆ ವಿತರಿಸಬೇಕಾಗಿದ್ದ ಸಲಕರಣೆಗಳನ್ನು ಖಾಸಗಿ ಜಮೀನಿನಲ್ಲಿ ಇಡಲಾಗಿದೆ ಎನ್ನುವ ಮಾಹಿತಿಯನ್ನು ಶಾಸಕ ದೇವಾನಂದ ಪಡೆದುಕೊಂಡಿದ್ದರು. ಹೀಗಾಗಿ ಅಲ್ಲಿಗೇ ಭೇಟಿ ನೀಡಿ, ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಬೀಜ, ಔಷಧಿ ಮತ್ತು ಡೀಸೆಲ್ ಪಂಪ್‍ಸೆಟ್ ಎಂಜಿನ್ ಪತ್ತೆ ಹಚ್ಚಿದ್ದಾರೆ. ಅಧಿಕಾರಿಗಳು ಡೀಸೆಲ್ ಎಂಜಿನ್ ಯಾರಿಗೂ ಗೊತ್ತಾಗಬಾರದು ಎಂದು ಕಟ್ಟಿಗೆ ಬಾಕ್ಸ್‍ನಲ್ಲಿ ಇಟ್ಟಿದ್ದರು. ಕಟ್ಟಿಗೆ ಬಾಕ್ಸ್ ಒಡೆದು ಅಧಿಕಾರಿಗಳ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ವೇಳೆ ಯಾವುದೇ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸದೇ ಇರುವುದಕ್ಕೆ ಶಾಸಕರು ಅಸಮಾಧಾನ ಹೊರಹಾಕಿದರು.

    ಅಧಿಕಾರಿಗಳ ಅಕ್ರಮ ಸಂಗ್ರಹಣೆ ಆರೋಪದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ದೇವಾನಂದ ಚವ್ಹಾಣ ಅವರು, ಅಧಿಕಾರಿಗಳ ಅಕ್ರಮದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಗಮನಕ್ಕೆ ತರಲಾಗುವುದು. ಅಲ್ಲದೇ, ಅಧಿಕಾರಿಗಳ ವಿರುದ್ಧ ಚಡಚಣ ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತೇನೆ ಎಂದು ಶಾಸಕರು ಹೇಳಿದರು.