Tag: MLA Dr Sudhakar

  • ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದ ಭಿನ್ನಮತ – ಅಧ್ಯಕ್ಷಗಾದಿಗೆ ಬಿಗ್ ಫೈಟ್

    ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದ ಭಿನ್ನಮತ – ಅಧ್ಯಕ್ಷಗಾದಿಗೆ ಬಿಗ್ ಫೈಟ್

    ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕಾಗಿ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಸುಧಾಕರ್ ಹಾಗೂ ಕೃಷಿ ಸಚಿವರಾಗಿರುವ ಗೌರಿಬಿದನೂರು ಶಾಸಕ ಬೆಂಬಲಿಗರ ನಡುವಿನ ಭಿನ್ನಮತ ಸ್ಫೋಟಗೊಂಡಿದೆ.

    ಹಾಲಿ ಅಧ್ಯಕ್ಷರಾಗಿರುವ ಶಿವಶಂಕರರೆಡ್ಡಿ ಬೆಂಬಲಿತ ಜಿಲ್ಲಾ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಅವರನ್ನು ಅಧ್ಯಕ್ಷಗಾದಿಯಿಂದ ಕೆಳಗಿಳಿಸಿಲು ಶಾಸಕ ಸುಧಾಕರ್ ಬೆಂಬಲಿತ ಸದಸ್ಯರು ರಣತಂತ್ರ ರೂಪಿಸಿದ್ದಾರೆ. ಈ ಬಗ್ಗೆ ಸ್ವತಃ ಸ್ಪಷ್ಟಪಡಿಸಿರುವ ಸುಧಾಕರ್ ಬೆಂಬಲಿತ ಜಿಲ್ಲಾ ಪಂಚಾಯತಿ ಸದಸ್ಯ ಪ್ರಕಾಶ್ ಬಹಿರಂಗವಾಗಿ ಈ ಕುರಿತು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಕಾಶ್, ಮೊದಲೇ ತೀರ್ಮಾನ ಮಾಡಿರುವಂತೆ 8 ತಿಂಗಳ ನಂತರ ಅಧ್ಯಕ್ಷ ಸ್ಥಾನವನ್ನ ಹಾಲಿ ಅಧ್ಯಕ್ಷರಾದ ಮಂಜುನಾಥ್ ಬಿಟ್ಟುಕೊಡಬೇಕಿತ್ತು. ಆದರೆ ನವೆಂಬರ್ 6ಕ್ಕೆ ಅವರ 8 ತಿಂಗಳ ಅವಧಿ ಮುಗಿದರೂ ಅಧ್ಯಕ್ಷ ಸ್ಥಾನ ಬಿಟ್ಟುಕೊಟ್ಟಿಲ್ಲ. ಹೀಗಾಗಿ ನಾವು ಸ್ವತಃ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಗಮನಕ್ಕೆ ತಂದಿದ್ದೇವೆ. ಆದರೆ ಅವರು ಕೂಡ ನಮಗೆ ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ. ಇದರಿಂದ ಸುಧಾಕರ್ ಬೆಂಬಲಿಗರಾದ 14 ಮಂದಿ ಸದಸ್ಯರು ಇಂದಿನ ಸಾಮಾನ್ಯಸಭೆಗೆ ಗೈರು ಹಾಜರಾಗಿದ್ದಾಗಿ ಹೇಳಿದರು.

    ಕಳೆದ ಬಾರಿ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಯ ಗಮನಕ್ಕೆ ಬಂದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಭಿನ್ನಮತ ಶಮನವಾಗಿ ಶಿವಶಂಕರರೆಡ್ಡಿ ಬೆಂಬಲಿಗ ಎಚ್ ವಿ ಮಂಜುನಾಥ್ ಅಧ್ಯಕ್ಷರಾಗಿ ಆಯ್ಕೆಯಾಗಿದರು. ಆದರೆ ಇಂದು ಹಾಲಿ ಅಧ್ಯಕ್ಷರ ರಾಜೀನಾಮೆಗೆ ಪಟ್ಟು ಹಿಡಿದಿರುವ ಶಾಸಕ ಸುಧಾಕರ್ ಬೆಂಬಲಿತ ಜಿಲ್ಲಾ ಪಂಚಾಯತಿ ಸದಸ್ಯರು ಇಂದು ನಿಗದಿಯಾಗಿದ್ದ ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಗೆ ಗೈರು ಹಾಜರಾಗಿ ಭಿನ್ನಮತ ಬಹಿರಂಗ ಮಾಡಿದ್ದಾರೆ. ಅಲ್ಲದೇ ಶಾಸಕ ಸುಧಾಕರ್ ಬೆಂಬಲಿತ ಸದಸ್ಯರು ಅಜ್ಞಾತ ಸ್ಥಳದಲ್ಲಿ ಸಭೆ ನಡೆಸುವ ಮೂಲಕ ಹಾಲಿ ಅಧ್ಯಕ್ಷ ಮಂಜುನಾಥ್ ಅವರನ್ನ ಅಧ್ಯಕ್ಷ ಗಾದಿಯಿಂದ ಕೆಳಗಿಳಿಸಲು ರಣತಂತ್ರ ರೂಪಿಸಿದ್ದರು. ಸಭೆಗೆ ಆಡಳಿತ ಕಾಂಗ್ರೆಸ್ ಸುಧಾಕರ್ ಬೆಂಬಲಿಗರು ಬಾರದೇ ಕೋರಂ ಕೊರತೆ ಉಂಟಾಗಿ ಸಭೆ ಮುಂದೂಡಿದ ಹಾಲಿ ಅಧ್ಯಕ್ಷ ಮಂಜುನಾಥ್, ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಗಂಭೀರ ಚರ್ಚೆ ಮಾಡಬೇಕಾದ ಜನಪ್ರತಿನಿಧಿಗಳು ಸಭೆಗೆ ಬಾರದೇ ರಾಜಕಾರಣ ಮಾಡುತ್ತಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

     

  • ಚೆನ್ನೈ ಬಳಿ ದೇವಸ್ಥಾನಕ್ಕೆ ಹೋಗಿ ಬಂದ್ರು- ಸುಧಾಕರ್ ಪರ ಜಮೀರ್ ಬ್ಯಾಟಿಂಗ್

    ಚೆನ್ನೈ ಬಳಿ ದೇವಸ್ಥಾನಕ್ಕೆ ಹೋಗಿ ಬಂದ್ರು- ಸುಧಾಕರ್ ಪರ ಜಮೀರ್ ಬ್ಯಾಟಿಂಗ್

    ಬೆಂಗಳೂರು: ಶಾಸಕ ಡಾ.ಕೆ ಸುಧಾಕರ್ ಚೆನ್ನೈಗೆ ಹೋಗಿದ್ದು ನಿಜ. ಆದರೆ ಅವರು ಹೊಸೂರಿನ ದೇವಸ್ಥಾನಕ್ಕೆ ಭೇಟಿ ನೀಡಿ, ಶನಿವಾರ ರಾತ್ರಿಯೇ ವಾಪಸ್ ಆಗಿದ್ದಾರೆ. ಅವರು ಪಕ್ಷ ಬಿಡುವ ಮಾತೇ ಇಲ್ಲ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಜಮೀರ್ ಅವರು ಸುಧಾಕರ್ ಭೇಟಿ ಮಾಡಿದ್ದಾರೆ ಎನ್ನಲಾಗಿದ್ದು. ಇಂದು ಬೆಳಗ್ಗೆ ಡಾ.ಕೆ.ಸುಧಾಕರ್ ನಿವಾಸಕ್ಕೆ ಸಚಿವರು ಬಂದು ಭೇಟಿ ಮಾಡಿದ್ದಾರೆ. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸುಧಾಕರ್ ನನ್ನ ಸ್ನೇಹಿತರು. ತಿಂಡಿ ತಿನ್ನಲು ಕರೆದಿದ್ದರು. ಹೀಗಾಗಿ ಬಂದಿದ್ದೇನೆ. ಅವರು ಊಟಕ್ಕೆ ಕರೆದರೂ ಬರುತ್ತೇನೆ ಎಂದರು. ಇದನ್ನು ಓದಿ: ಸಮ್ಮಿಶ್ರ ಸರ್ಕಾರಕ್ಕೀಗ ಸಿದ್ದರಾಮಯ್ಯ ಟ್ರಬಲ್ ಶೂಟರ್!

    ಇದೇ ವೇಳೆ ಸುಧಾಕರ್ ಅವರು ದೇವಸ್ಥಾನಕ್ಕೆ ಹೋಗುವುದೇ ತಪ್ಪಾ ಎಂದು ಪ್ರಶ್ನಿಸಿದ ಅವರು, ಸುಧಾಕರ್ ಅವರು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಅವರು ಚೆನ್ನೈ ಪ್ರವಾಸದ ಕುರಿತು ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರು ಯಾವುದೇ ಶಾಸಕರಿಗೂ ಫೋನ್ ಮಾಡಿ, ಎಲ್ಲಿ ಇದ್ದಾರೆ ಅಂತ ವಿಚಾರಿಸಿಲ್ಲ ಎಂದು ತಿಳಿಸಿದರು.

    ಸಚಿವರ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುಧಾಕರ್ ಅವರು, ನನಗೆ ಬ್ಲಾಕ್‍ಮೇಲ್ ಮಾಡಲು ಗೊತ್ತಿಲ್ಲ. ಗೊತ್ತಿರುವುದು ಇ-ಮೇಲ್ ಮಾತ್ರ. ನಾನು ಯಾರನ್ನೂ ಹೆದರಿಸುತ್ತಿಲ್ಲ. ಕಾಂಗ್ರೆಸ್ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಬೇರೆ ಪಕ್ಷ ಸೇರುವ ಮಾತೇ ಇಲ್ಲ ಎಂದರು. ಇದನ್ನು ಓದಿ: ನಾನೊಬ್ಬ ಡಾಕ್ಟರ್, ಆಪರೇಷನ್‍ಗೆ ಒಳಗಾಗುವುದಿಲ್ಲ: ಶಾಸಕ ಸುಧಾಕರ್

    ಕೆಲವು ಅಭಿಪ್ರಾಯ ಹಾಗೂ ಭಿನ್ನಾಭಿಪ್ರಾಯಗಳು ರಾಜಕೀಯದಲ್ಲಿ ಇರುವುದು ಸಹಜ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಯಾರು ಉತ್ತಮ ಕೆಲಸ ಮಾಡುತ್ತಾರೋ ಅಂತಹ ನಾಯಕರನ್ನು ಗುರುತಿಸಿ ಸಚಿವ ಸ್ಥಾನ ನೀಡಬೇಕು. ನಮ್ಮ ಜ್ಞಾನ ಹಾಗೂ ಸಾಮಥ್ರ್ಯವನ್ನು ಹೈಕಮಾಂಡ್ ಗುರುತಿಸಿ, ಸಚಿವ ಸ್ಥಾನ ನೀಡಿದರೆ ಸ್ವಾಗತಾರ್ಹ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv