Tag: MLA Harris

  • ಡ್ರಗ್ಸ್ ಜಾಲ ಬೆಳೆಸಿಕೊಂಡು ಬಂದಿರುವುದು ನಾವೇ: ಎಚ್.ವಿಶ್ವನಾಥ್

    ಡ್ರಗ್ಸ್ ಜಾಲ ಬೆಳೆಸಿಕೊಂಡು ಬಂದಿರುವುದು ನಾವೇ: ಎಚ್.ವಿಶ್ವನಾಥ್

    – ಹ್ಯಾರಿಸ್ ಮಗನ ಮೇಲೆ ವಿಶ್ವನಾಥ್ ಗುಮಾನಿ
    – ಪೊಲೀಸರಿಗೆ ಎಲ್ಲಾ ಗೊತ್ತಿದ್ದರೂ ಹೇಳುವ ಸ್ಥಿತಿಯಲಿಲ್ಲ

    ಮೈಸೂರು: ಡ್ರಗ್ಸ್ ಮಾಫಿಯಾಗೆ ಪೊಲೀಸ್, ಚಿತ್ರರಂಗ, ರಾಜಕಾರಣ ಥಳಕು ಹಾಕಿಕೊಂಡಿರೋದು ಎಲ್ಲರಿಗೂ ಗೊತ್ತಿರುವ ವಿಚಾರ. ದೊಡ್ಡ ದೊಡ್ಡ ರಾಜಕಾರಣಿಗಳ ಮಕ್ಕಳ ಡ್ರಗ್ಸ್ ನಂಟಿನ ಬಗ್ಗೆ ಮಾಜಿ ಸಚಿವ ಎಚ್ ವಿಶ್ವನಾಥ್ ಮಾತನಾಡಿ, ಶಾಸಕ ಹ್ಯಾರಿಸ್ ಹಾಗೂ ಕಳಕಪ್ಪಬಂಡಿ ಪುತ್ರರ ಹೆಸರನ್ನು ಉದಾಹರಣೆಯಾಗಿ ನೀಡಿದ್ದಾರೆ.

    ಈ ಕುರಿತು ಮೈಸೂರಲ್ಲಿ ಮಾತನಾಡಿದ ಎಚ್.ವಿಶ್ವನಾಥ್, ಡ್ರಗ್ಸ್ ಜಾಲ ಬೆಳೆಸಿಕೊಂಡು ಬಂದಿರುವುದು ನಾವೇ. ರಾಜಕಾರಣಿಗಳ ಶ್ರೀಮಂತಿಕೆ, ಅಧಿಕಾರಿಗಳ ಶ್ರೀಮಂತಿಕೆ, ಚಿತ್ರರಂಗದ ಶ್ರೀಮಂತಿಕೆಯಿಂದ ಇದು ಹೆಚ್ಚಾಗಿದೆ. ಶಾಸಕ ಹ್ಯಾರೀಸ್ ಪುತ್ರ, ಶಾಸಕ ಕಳಕಪ್ಪ ಬಂಡಿ ಪುತ್ರರ ಹೆಸರು ಈ ವಿಚಾರದಲ್ಲಿ ಬಹಿರಂಗಗೊಂಡಿದೆ ಎಂದು ಹೇಳಿದರು.

    ಡ್ರಗ್ಸ್ ದಂಧೆ ಮಾಡುವವರು ಪ್ರಭಾವಿಯಾಗಿಲ್ಲ. ಅದಕ್ಕೆ ರಕ್ಷಣೆ ಕೊಡುವವರು ಪ್ರಭಾವಿಯಾಗಿದ್ದಾರೆ. ಇದು ಸರಿಯಲ್ಲ ಅದು ಯಾರೇ ಆಗಿದ್ದರೂ ದಂಡನೆ ಆಗಲೇಬೇಕು. ನಮ್ಮ ಮನೆಯ ಮಕ್ಕಳಾಗಿದ್ದರೂ ಸರಿಯೇ ಬಹಿರಂಗವಾಗಲೇಬೇಕು ಎಂದು ಆಗ್ರಹಿಸಿದ್ದರು.

    ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಬಹಳ ವರ್ಷದಿಂದ ನಡೆದು ಬರುತ್ತಿದೆ. ಯಾವುದೇ ಸರ್ಕಾರವನ್ನು ನಾವು ಬೊಟ್ಟು ಮಾಡಬಾರದು. ಇದು ನಿನ್ನೆ ಮೊನ್ನೆ ಪ್ರಕರಣ ಅಲ್ಲ, ನಮಗೆ ಅರಿವು ಇಲ್ಲದೆ ನಾವೇ ಬೆಳೆಸುಕೊಂಡು ಬಂದಿದ್ದೇವೆ. ಸೆಲೆಬ್ರಿಟಿಗಳ ಒಳಗೆ ಹರಡಿರೋ ದಂಧೆಯನ್ನು ಒಬ್ಬ ಸೆಲೆಬ್ರಿಟಿಯೇ ಬಹಿರಂಗ ಮಾಡಿದ್ದು ವಿಶೇಷ ಹಾಗೂ ಸೋಜಿಗ. ಪೊಲೀಸ್ ಇಲಾಖೆ ಮಾಡಬೇಕಿದ್ದ ಕೆಲಸವನ್ನು ಆ ಸೆಲೆಬ್ರಿಟಿ ಮಾಡಿದ್ದಾನೆ. ಪೊಲೀಸರು ಈಗ ತಲೆಬಾಗಿ ಸಮಾಜದ ಮುಂದೆ ನಿಲ್ಲುವ ಪರಿಸ್ಥಿತಿಗೆ ಬಂದಿದ್ದಾರೆ. ಆದರೆ ಇಂತಹ ಗಂಭೀರ ಸಮಸ್ಯೆಯನ್ನು ನಾವು ಎಂಜಾಯ್ ಮಾಡುತ್ತಿದ್ದೇವೆ. ಇಂತಹ ದಂಧೆಗಳ ಬಗ್ಗೆ ಪೊಲೀಸರಿಗೆ ಗೊತ್ತಿದ್ದರೂ ಸಹ ಅವರು ಹೇಳುವ ಸ್ಥಿತಿಯಲ್ಲಿ ಇಲ್ಲ. ಏಕೆಂದರೆ ಸ್ಥಳದ ರಾಜಕಾರಣ ಆ ರೀತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

    ಇದೇ ವೇಳೆ ಸೆಪ್ಟೆಂಬರ್ 8 ರಂದು ದಸರಾ ಉನ್ನತ ಮಟ್ಟದ ಮೊದಲ ಸಭೆ ನಡೆಯಲಿದೆ. ಬೆಂಗಳೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಮೈಸೂರಿನ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ಈ ಬಾರಿಯ ದಸರಾ ಹೇಗೆ ನಡೆಸಬೇಕು ಹಾಗೂ ಜಂಬೂಸವಾರಿ ನಡೆಸಬೇಕೋ ಬೇಡವೋ ಎಂಬುದರ ಕುರಿತು ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.

    ಆರ್‍ಎಸ್‍ಎಸ್ ಕಚೇರಿಗೆ ಭೇಟಿ: ಇಂದು ಮೊದಲ ಬಾರಿಗೆ ಮೈಸೂರಿನ ಆರ್‍ಎಸ್‍ಎಸ್ ಕಚೇರಿಗೆ ಹಳ್ಳಿಹಕ್ಕಿ ವಿಶ್ವನಾಥ್ ಭೇಟಿ ನೀಡಿ ಕುತೂಹಲ ಮೂಡಿಸಿದರು. ನಗರದ ಬಲ್ಲಾಳ್ ವೃತ್ತದ ಬಳಿ ಇರುವ ಮಾಧವ ಕೃಪ ಕಚೇರಿಯಲ್ಲಿ ಆರ್‍ಎಸ್‍ಎಸ್ ಹಿರಿಯರ ಜೊತೆ ಮಾತುಕತೆ ಪ್ರಸಕ್ತ ವಿದ್ಯಾಮಾನಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದರು.

  • ಅಮಾಯಕರನ್ನು ಬಿಟ್ಟು ಕಳಿಸಿ ಅನ್ನೋದು ಒತ್ತಡ ಹೇಗೆ ಆಗುತ್ತೆ – ಸಿಟ್ಟಾದ ಹ್ಯಾರಿಸ್

    ಅಮಾಯಕರನ್ನು ಬಿಟ್ಟು ಕಳಿಸಿ ಅನ್ನೋದು ಒತ್ತಡ ಹೇಗೆ ಆಗುತ್ತೆ – ಸಿಟ್ಟಾದ ಹ್ಯಾರಿಸ್

    ಬೆಂಗಳೂರು: ಅಮಾಯಕರು ಅರೆಸ್ಟ್ ಆಗಿದ್ದರೆ ಪೊಲೀಸರು ಬಿಟ್ಟು ಕಳಿಸಲ್ವೇ ನೀವ್ಯಾಕೆ ಒತ್ತಡ ಹಾಕುತ್ತೀರಾ ಅಂದಿದ್ದಕ್ಕೆ ಶಾಂತಿನಗರದ ಶಾಸಕ ಹ್ಯಾರಿಸ್ ಪಬ್ಲಿಕ್ ಟಿವಿ ಮೇಲೆ ಸಿಟ್ಟಾಗಿದ್ದಾರೆ.

    ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರು ಇರಬಹುದು. ಅಂತವರನ್ನ ಬಿಡಿ ಎಂದು ಮಾಜಿ ಸಚಿವ ರೋಷನ್ ಬೇಗ್ ಪೊಲೀಸ್ ಕಮೀಷನರ್ ಬಳಿ ಕೇಳಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಹ್ಯಾರಿಸ್, ಗೋರಿಪಾಳ್ಯ, ಟಿಪ್ಪು ನಗರದಿಂದ ಬಂದಿರೋದನ್ನು ರೋಷನ್ ಬೇಗ್ ನೋಡಿದ್ದರೆ ಅವರು ಮೊನ್ನೆಯೇ ಹೇಳಬಹುದಿತ್ತು. ಇದರಿಂದ ತನಿಖೆ ನಡೆಸೋದಕ್ಕೆ ಸುಲಭವಾಗಿರೋದು ಎಂದು ವ್ಯಂಗ್ಯವಾಡಿದರು.

    ನಡೆದಿರುವುದನ್ನು ನಾವು ಯಾರು ಒಪ್ಪಿಕೊಳ್ಳುತ್ತಿಲ್ಲ. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಮಾನವೀಯತೆ ದೃಷ್ಟಿಯಿಂದ ಕಮಿಷನರ್ ಜೊತೆ ಮಾತನಾಡಲು ಬಂದಿದ್ದೇನೆ. ಇದರಲ್ಲಿ ರಾಜಕಾರಣ ಮಾಡಲು ಬಂದಿಲ್ಲ ಎಂದರು.

    ಈ ವೇಳೆ ಅಮಾಯಕರು ಅರೆಸ್ಟ್ ಆಗಿದ್ದರೆ ಪೊಲೀಸರು ಬಿಟ್ಟು ಕಳಿಸುತ್ತಾರೆ. ನೀವ್ಯಾಕೆ ಒತ್ತಡ ಹಾಕುತ್ತೀರಿ ಎಂದು ಕೇಳಿದ್ದಕ್ಕೆ ಅಮಾಯಕರನ್ನು ಬಿಟ್ಟು ಕಳಿಸಿ ಅನ್ನೋದು ಒತ್ತಡ ಹೇಗೆ ಆಗುತ್ತೆ ಎಂದು ಮರು ಪ್ರಶ್ನಿಸಿ ಪಬ್ಲಿಕ್ ಟಿವಿ ಮೇಲೆ ಹ್ಯಾರಿಸ್ ಸಿಟ್ಟಾದರು.

    ಕಾಂಗ್ರೆಸ್ ನಾಯಕರು ಗಲಭೆಕೋರರ ಪರವಾಗಿ ನಿಂತಿದ್ದಾರಾ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಹ್ಯಾರಿಸ್, ನಾವು ಯಾವುದೇ ರೀತಿ ಒತ್ತಡವನ್ನು ಸರ್ಕಾರ ಮತ್ತು ಪೊಲೀಸರ ಮೇಲೆ ಹಾಕುವುದಿಲ್ಲ. ನಾವು ಮಾನವೀಯತೆ ದೃಷ್ಟಿಯಿಂದ ಏನು ಮಾಡಬೇಕೋ ಮಾಡಿ ಎಂದು ಹೇಳುತ್ತಿದ್ದೇವೆ. ಗಲಭೆ ನಡೆದ ಪ್ರದೇಶದಲ್ಲಿ ಕರ್ಫ್ಯೂ ಪರಿಸ್ಥಿತಿ ಎದುರಾಗಿದೆ. ಇದರಿಂದ ಪಾಪ ಅಮಾಯಕರಿಗೆ ಸಮಸ್ಯೆಯಾಗುತ್ತಿದೆ. ಅಲ್ಲಿ ಜನರು ಕುಟುಂಬದವರೊಂದಿಗೆ ವಾಸಿಸುತ್ತಿದ್ದಾರೆ. ಆದರೆ ಯಾರೂ
    ಹೊರಗೆ ಬಂದು ಓಡಾಡುವುದಕ್ಕೆ ಆಗುತ್ತಿಲ್ಲ. ಅವರಿಗೆ ಹಾಲು, ನೀರು ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನೇಕರನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ರೋಷನ್ ಬೇಗ್ ಕೆ.ಜೆ.ಹಳ್ಳಿ ಗಲಾಟೆಯಲ್ಲಿ ಕೆಲವು ಕಾಂಗ್ರೆಸ್ ನಾಯಕರ ಕೈವಾಡವು ಇದೆ. ಗೋರಿ ಪಾಳ್ಯದ ಮೌಲಾನ ಇಲ್ಲಿಗೆ ಯಾಕೆ ಬರಬೇಕಿತ್ತು. ಕಲಾಸಿ ಪಾಳ್ಯದಿಂದ, ಟಿಪ್ಪು ನಗರದಿಂದ ಇಲ್ಲಿಗೆ ಯಾಕೆ ಬರಬೇಕಿತ್ತು. ಹೊರಗಿನವರು ಯಾರ್ಯಾರೋ ಬಂದಿದ್ದರು ಅಂತ ಸ್ಥಳೀಯರೇ ಹೇಳುತ್ತಾರೆ. ಪೊಲೀಸರು ಬಂಧಿಸಿದವರಲ್ಲಿ ಕೆಲವರು ಅಮಾಯಕರು ಇರಬಹುದು. ಅಂತವರನ್ನ ಬಿಡಿ, ಆದರೆ ತಪ್ಪು ಮಾಡಿದವರಿಗೆ ಮಾತ್ರ ಶಿಕ್ಷೆ ಆಗಲೇಬೇಕು ಎಂದು ಹೇಳಿದ್ದರು.

  • ಸಚಿವ ಸ್ಥಾನ ನೀಡುವಂತೆ ಶಾಸಕ ಹ್ಯಾರಿಸ್ ಪರ ಬ್ಯಾಟ್ ಬೀಸಿದ್ರಾ ರಮ್ಯಾ

    ಸಚಿವ ಸ್ಥಾನ ನೀಡುವಂತೆ ಶಾಸಕ ಹ್ಯಾರಿಸ್ ಪರ ಬ್ಯಾಟ್ ಬೀಸಿದ್ರಾ ರಮ್ಯಾ

    ಬೆಂಗಳೂರು: ವಿಧಾನಸಭಾ ಚುನಾವಣೆಯ ಬಳಿಕ ಸೈಲೆಂಟಾಗಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ಇದೀಗ ಶಾಸಕ ಹ್ಯಾರಿಸ್ ಪರ ಲಾಬಿ ನಡೆಸಲು ಮುಂದಾಗಿದ್ದಾರೆ.

    ಹೌದು. ಕರ್ನಾಟಕ ವಿಧಾನ ಸಭೆ ಚುನಾವಣೆ ಮತ್ತು ಮೈತ್ರಿ ಸರ್ಕಾರ, ಸಂಪುಟ ರಚನೆಯಿಂದ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅಂತರ ಕಾಯ್ದುಕೊಂಡಿದ್ದರು. ಆದ್ರೆ ಇದೀಗ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎ.ಹ್ಯಾರಿಸ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ನಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ.

    ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಪುತ್ರ ನಲಪಾಡ್ ಜೈಲು ಸೇರಿರುವ ಹಿನ್ನೆಲೆಯಲ್ಲಿ ಹ್ಯಾರಿಸ್ ಯಾವುದೇ ಮುಖಂಡರಲ್ಲಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ರಮ್ಯಾ ಅವರನ್ನ ಮುಂದಿಟ್ಟುಕೊಂಡು ಹೈಕಮಾಂಡ್ ಮಟ್ಟದಲ್ಲಿ ಹ್ಯಾರಿಸ್ ಪರ ಲಾಬಿ ನಡೆಸಲು ಮುಂದಾಗಿದ್ದಾರಂತೆ. ರಮ್ಯಾ ದೆಹಲಿಯಲ್ಲಿ ತಮಗಿರುವ ಸಂಪರ್ಕ ಬಳಸಿ ಅಲ್ಪಸಂಖ್ಯಾತ ಖೋಟಾದಲ್ಲಿ ರೋಶನ್ ಬೇಗ್ ಬದಲು ಹ್ಯಾರಿಸ್‍ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.

    ಹ್ಯಾರಿಸ್ ಪರ ರಮ್ಯಾ ಲಾಬಿ ಯಾಕೆ ಗೊತ್ತೆ?
    ಈ ಹಿಂದೆ ರಮ್ಯಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2013ರ ವಿಧಾನಸಭಾ ಚುನಾವಣೆಯಲ್ಲಿ ರಮ್ಯಾ ಅವರು ಹ್ಯಾರಿಸ್ ಪರವಾಗಿ ರೋಡ್ ಶೋ ನಡೆಸಿದ್ದರು. ಅಲ್ಲದೇ ಶಾಂತಿನಗರ ನಿವಾಸಿಯಾಗಿರುವ ರಮ್ಯಾ ಅವರು ಶಾಸಕ ಹ್ಯಾರಿಸ್ ಜೊತೆ ಉತ್ತಮ ಒಡನಾಟ ಹೊಂದಿದ್ದಾರೆ. ಸ್ಥಳೀಯ ಶಾಸಕರಾಗಿರುವ ಹ್ಯಾರಿಸ್ ಪರವಾಗಿ ಸಚಿವರಾಗಬೇಕು ಎನ್ನುವ ಉದ್ದೇಶ ಅವರದ್ದಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

  • ನಲಪಾಡ್ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ನಲಪಾಡ್ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಬೆಂಗಳೂರು: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಶಾಸಕ ಹ್ಯಾರೀಸ್ ಮಗ ನಲಪಾಡ್ ಹಾಗೂ ಆತನ ಸ್ನೇಹಿತರ ವಿರುದ್ಧ ಸಿಸಿಬಿ ತನಿಖಾಧಿಕಾರಿಗಳು ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಫೆಬ್ರವರಿ 17ರಂದು ನಗರದ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಗ್ಯಾಂಗ್ ಗಂಭೀರವಾಗಿ ಹಲ್ಲೆ ಮಾಡಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸಿಸಿಬಿ ತನಿಖಾಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

    ಚಾರ್ಜ್ ಶೀಟ್‍ನಲ್ಲಿ ಏನಿದೆ?: ಆರೋಪಿಗಳ ಮತ್ತು ವಿದ್ವತ್ ವೈದ್ಯಕೀಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹಾಗೂ ಕೆಫೆ, ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳನ್ನು ಲಗತ್ತಿಸಲಾಗಿದೆ. ಆರೋಪಕ್ಕೆ ಸಂಬಂಧಿಸಿದಂತೆ ವಿದ್ವತ್ ಆತನ ಸ್ನೇಹಿತರು, ಫರ್ಜಿ ಕೆಫೆ ಸಿಬ್ಬಂದಿ, ಮಲ್ಯ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ 60 ಸಾಕ್ಷಿಗಳಿಂದ ಹೇಳಿಕೆಗಳನ್ನು ಚಾರ್ಜ್ ಶೀಟ್‍ನಲ್ಲಿ ದಾಖಲಿಸಲಾಗಿದೆ ಎಂದು ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

    ನಲಪಾಡ್, ಅರುಣ್ ಬಾಬು, ಶ್ರೀಕೃಷ್ಣ, ಮಂಜುನಾಥ್, ಅಶ್ರಫ್, ಬಾಲಕೃಷ್ಣ, ಅಭಿಷೇಕ್ ಮತ್ತು ನಾಸಿರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಸದ್ಯ ಎಲ್ಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಆರೋಪಿ ಕೃಷ್ಣ 2004 ರಿಂದಲೂ ಮೊಬೈಲ್ ಬಳಕೆ ಮಾಡುತ್ತಿಲ್ಲ. ಅವನು ವಿದೇಶಕ್ಕೆ ಹೋಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಹೇಳಲಾಗ್ತಿದೆ.

  • ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ವಿರುದ್ಧದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹುಡುಗಿಯರ ಮುಂದೆ ನಡೆದ ಪ್ರತಿಷ್ಠೆಗಾಗಿ ಅಂದು ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

    ಘಟನೆ ನಡೆದ ನಗರದ ಫರ್ಜಿ ಕೆಫೆ ಯಲ್ಲಿ ಅಂದು ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ವಿದ್ವತ್ ಹಾಗೂ ನಲ್ಪಾಡ್ ಮತ್ತು ಆತನ ಗ್ಯಾಂಗ್ ಕಾಣಿಸಿಕೊಂಡಿತ್ತು. ಈ ಪಾರ್ಟಿ ಆರಂಭದ ಸಮಯದಿಂದ ನಲಪಾಡ್ ನನ್ನು ಆತನ ಸ್ನೇಹಿತರು “ಪ್ರಿನ್ಸ್ ಪ್ರಿನ್ಸ್” ಎಂದು ಕೂಗಿ ಪಾರ್ಟಿಯಲ್ಲಿ ನೆರೆದಿದ್ದ ಯುವಕ ಯುವತಿಯರ ಮುಂದೇ ಪ್ರತಿಷ್ಠೆ ತೋರಿಸುತ್ತಿದ್ದರು ಎನ್ನಲಾಗಿದೆ.

    ಈ ಸಂದರ್ಭದಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತ್ತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ಅನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಹೊಡೆದಿದ್ದಾನೆ. ಇದನ್ನೂ ಓದಿ: ಮೈಮೇಲೆ ಕುರ್ಚಿಗಳನ್ನು ಎಸೆದ್ರು, sorry ಎಂದರೂ ಬಿಯರ್ ಬಾಟಲಿಯಿಂದ ಬಾಯಿಗೆ ಹೊಡೆದ್ರು- ನಲಪಾಡ್ ದಾಳಿ ಬಗ್ಗೆ ವಿದ್ವತ್ Exclusive ಮಾತು

    ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ಪಾರ್ಟಿಯಲ್ಲಿ ಹಲ್ಲೆ ನಡೆಸುವ ವೇಳೆ ಸಾಕಷ್ಟು ಜನ ಅಲ್ಲಿ ನೆರೆದಿದ್ದರೂ ಯಾರು ಗಲಾಟೆ ತಡೆಯುವ ಪ್ರಯತ್ನ ನಡೆಸಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    https://www.youtube.com/watch?v=TIPtfcxi6O4

  • ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    ಶಾಂತಿನಗರದಲ್ಲಿ ರೌಡಿ ನಲಪಾಡ್ ಹೇಳಿದ್ದೇ ಶಾಸನವಂತೆ..!

    ಬೆಂಗಳೂರು: ರೌಡಿ ನಲಪಾಡ್‍ನ ಮತ್ತಷ್ಟು ಕರ್ಮಕಾಂಡ ಬಯಲಾಗುತ್ತಿದ್ದು, ಶಾಂತಿನಗರದಲ್ಲಿ ರೌಡಿ ಮಹಮ್ಮದ್ ನಲಪಾಡ್ ಹೇಳಿದ್ದೇ ಶಾಸನ ಎನ್ನುವ ಮಾತು ಈಗ ಕೇಳಿಬಂದಿದೆ.

    ಈತನ ಮಾತು ಕೇಳಲಿಲ್ಲ ಬಿಸಿನೆಸ್ ನಡೆಸೋದೇ ಕಷ್ಟ ಹೊಸ ಪಬ್, ರೆಸ್ಟೋರೆಂಟ್ ಓಪನ್ ಆಗಬೇಕಾದರೆ ಈತನ ಅನುಮತಿ ಬೇಕು ಎನ್ನುವ ನಿಯಮವನ್ನು ಹೇರಿದ್ದ. ಒಂದು ವೇಳೆ ಯಾರಾದರೂ ಬಾರ್ ಓಪನ್ ಮಾಡಿದ್ದರೆ, ನನಗೆ ಗೊತ್ತಿಲ್ಲದೇ, ನನ್ನ ಅನುಮತಿ ಇಲ್ಲದೆ ಅದು ಹೇಗೆ ರೆಸ್ಟೋರೆಂಟ್ ಓಪನ್ ಮಾಡ್ತೀರಿ ಎಂದು ಧಮ್ಕಿ ಹೊಡೆಯುತ್ತಿದ್ದ ಎಂದು ಜನರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಜನರು ಪ್ರತಿಕ್ರಿಯಿಸಿ ಸಿನಿಮಾದಲ್ಲಿ ನಟರು ಬರುವಾಗ ಹೇಗೆ ಮೂರು ನಾಲ್ಕು ಕಾರುಗಳು ಬರುತ್ತದೋ ಅದೇ ರೀತಿಯಾಗಿ ಬರುತ್ತಿದ್ದ. ಲೈವ್ ಬ್ಯಾಂಡ್ ಮಂದಿಯನ್ನು ಬೆದರಿಸಿ ಹಫ್ತಾ ವಸೂಲಿ ಮಾಡುತ್ತಾನೆ. ಶಾಂತಿನಗರ, ಆಸ್ಟಿನ್ ಟೌನ್, ಬ್ರಿಗೇಡ್ ರೋಡ್, ಅಶೋಕ ನಗರ, ವಿವೇಕ್ ನಗರ, ಆನೆ ಪಾಳ್ಯ ಸುತ್ತಮುತ್ತ ನಲಪಾಡ್ ಗ್ಯಾಂಗ್ ಕಾರುಬಾರು. ಅಪ್ಪ ಹ್ಯಾರೀಸ್ ಹೆಸರಲ್ಲಿ ಮಗ ನಲಪಾಡ್ ಅಂಧಾ ದರ್ಬಾರ್ ನಡೆಸುತ್ತಿದ್ದ ಎಂದು ಹೇಳಿದ್ದಾರೆ.

    ಇಲ್ಲಿಯ ಪಾಲಿಕೆ ಸದಸ್ಯರು ಹೆಸರಿಗೆ ಮಾತ್ರ. ಪಾಲಿಕೆ ಸದಸ್ಯರು ಯಾವುದಾದರೂ ಕಟೌಟ್ ಹಾಕಿದ್ದರೂ ಈತನ ಫೋಟೋ ಇರಲೇಬೇಕು. ಎಲ್ಲರಿಗಿಂತಲೂ ಎತ್ತರದಲ್ಲಿ ದೊಡ್ಡದಾಗಿ ಫೋಟೋ ಕಾಣಬೇಕು ಎಂದು ತಾಕೀತು ಮಾಡುತ್ತಿದ್ದ ಎಂದು ಜನರು ಈತನ ಕೃತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೇ ನಗರದಲ್ಲಿನ ಬ್ರಿಗೇಡ್ ರೋಡ್ ಜಂಕ್ಷನ್, ಎಂಜಿ ರೋಡ್, ರೆಸಿಡೆನ್ಸಿ, ಬ್ರಿಗೇಡ್, ಯುಬಿ ಸಿಟಿಗೆ ಇವನೇ ಪ್ರಿನ್ಸ್ ಆಗಿದ್ದ ಎಂಬ ಆರೋಪ ಸಹ ಕೇಳಿಬಂದಿದೆ.

    ನಲಪಾಡ್ ಗ್ಯಾಂಗ್‍ನ ಆಟಾಟೋಪದಿಂದ ಅಲೆಗ್ಸಾಂಡರ್ ರಸ್ತೆಯಲ್ಲಿ ಅಪಾರ್ಟ್‍ಮೆಂಟ್ ಜನರ ಗೋಳು ಕೇಳುವವರು ಇಲ್ಲದಂತಾಗಿದೆ. ಪಕ್ಕದ ಫ್ಲ್ಯಾಟ್ ನವರು ಎಷ್ಟು ಸಾರಿ ಈ ಕುರಿತು ದೂರು ನೀಡಿದರೂ ಶಾಸಕ ಹ್ಯಾರಿಸ್ ಒತ್ತಡಕ್ಕೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂದು ಜನ ಹೇಳಿದ್ದಾರೆ.

    https://www.youtube.com/watch?v=Tc3R6gdWwHA

    https://www.youtube.com/watch?v=IHwUP3mtZXQ

    https://www.youtube.com/watch?v=IBc7ChOEbxg

     

  • ಸ್ಟಾರ್ ಹೋಟೆಲ್‍ಗಳಲ್ಲಿ ಮಜಾ ಮಾಡ್ತಿದ್ದ ನಲಪಾಡ್ ಕಂಬಿ ಹಿಂದೆ- ತಟ್ಟೆ ಊಟ, ಲಾಕಪ್‍ನಲ್ಲೇ ನಿದ್ದೆ

    ಸ್ಟಾರ್ ಹೋಟೆಲ್‍ಗಳಲ್ಲಿ ಮಜಾ ಮಾಡ್ತಿದ್ದ ನಲಪಾಡ್ ಕಂಬಿ ಹಿಂದೆ- ತಟ್ಟೆ ಊಟ, ಲಾಕಪ್‍ನಲ್ಲೇ ನಿದ್ದೆ

    ಬೆಂಗಳೂರು: ಉದ್ಯಮಿಯೊಬ್ಬರ ಮಗನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ಸೋಮವಾರ ಶರಣಾಗಿದ್ದನು. ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಮಜಾ ಮಾಡುತ್ತಿದ್ದ ಹ್ಯಾರಿಸ್ ಈಗ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿವರೆಗೂ ನಿದ್ದೆಯಿಲ್ಲದೆ ಕೂರುವಂತಾಗಿತ್ತು.

    ಶನಿವಾರ ರಾತ್ರಿ ಉದ್ಯಮಿ ಲೋಕನಾಥ್ ಅವರ ಮಗ ವಿದ್ವತ್ ಜೊತೆ ಜಗಳವಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ನಲಪಾಡ್ ಪಾರಾರಿಯಾಗಿದ್ದನು. ಆದ್ರೆ ಸೋಮವಾರ ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದನು. ನಂತರ ಪೊಲೀಸರು ನಲಪಾಡ್ ನನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ರಾತ್ರಿ ಸುಮಾರು 8ಕ್ಕೆ ಆರಂಭವಾದ ನಲಪಾಡ್ ವಿಚಾರಣೆ 11ಗಂಟೆ ವರೆಗೂ ನಡೆದಿದೆ.

    ಕೋರ್ಟ್ ಕಡಿಮೆ ಕಾಲಾವಧಿ ನೀಡಿರೋದ್ರಿಂದ ಪೊಲೀಸರು ಹಲ್ಲೆ ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮೊಹಮ್ಮದ್ ನಲಪಾಡ್ ಸೇರಿದಂತೆ ಏಳು ಆರೋಪಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ತರಿಸಿದ ಊಟವನ್ನೇ ಆರೋಪಿ ನಲಪಾಡ್‍ಗೂ ರಾತ್ರಿ ನೀಡಿದ್ದಾರೆ. ವಿಚಾರಣೆ ವೇಳೆ ಘಟನೆ ನಡೆದಾಗ ಯಾರು ಇದ್ದರು, ಯಾವ ಕಾರಣಕ್ಕೆ ಗಲಾಟೆ ನಡೆಯಿತು? ವಿದ್ವತ್ ಮೇಲೆ ಹಲ್ಲೆ ಮಾಡಿದ್ದು ಯಾಕೆ? ಎಂಬ ಪ್ರಶ್ನೆಗಳನ್ನ ಪೊಲೀಸರು ಕೇಳಿದ್ದಾರೆ. ಆದ್ರೆ ಆರೋಪಿ ನಲಪಾಡ್ ಮಾತ್ರ ನಗುಮುಖದಿಂದಲೇ ಉತ್ತರ ನೀಡಿದ್ದಾನೆ ಎನ್ನಲಾಗಿದೆ.

    ಪೊಲೀಸರು ರಾತ್ರಿ 11.30ವರೆಗೂ ವಿಚಾರಣೆ ನಡೆಸಿದ್ದು, ನಂತರ ನಲಪಾಡ್ ರಾತ್ರಿ 1 ಗಂಟೆವರೆಗೆ ರೌಡಿ ಟೀಮ್ ಜೊತೆ ಮಾತಾಡುತ್ತ ಕುಳಿತಿದ್ದನು. ಬಳಿಕ ಪೊಲೀಸರು ಲಾಕಪ್‍ನಲ್ಲೇ ಪೆಂಡಾಲ್ ಹಾಸಿ ಮಲಗಲು ಹೇಳಿದ್ದಾರೆ. ಪೊಲೀಸರು ಇಂದು ಬೆಳಗ್ಗೆ ಮತ್ತೆ ವಿಚಾರಣೆ ನಡೆಸಲಿದ್ದಾರೆ. ಆರೋಪಿ ನಲಪಾಡ್ ನನ್ನ ವಿಚಾರಣೆ ನಡೆಸುವಾಗ ಬೆಂಬಲಿಗರು ಪೊಲೀಸ್ ಠಾಣೆ ಹೊರಗಡೆ ಇದ್ದರು.

    ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ. ವಿದ್ವತ್ ಸಿಂಗಾಪೂರ್ ನಲ್ಲಿ ಪದವಿ ಮುಗಿಸಿ ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ. ಇದನ್ನು ಓದಿ: ಪಬ್ಲಿಕ್ ಟಿವಿ ಕ್ಯಾಮೆರಾಮೆನ್ ಮೇಲೆ ರೌಡಿ ನಲಪಾಡ್ ಗ್ಯಾಂಗ್ ಹಲ್ಲೆ

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನು ಓದಿ: ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

  • ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಕೊನೆಗೂ ಪೊಲೀಸರಿಗೆ ಶರಣಾದ ಶಾಸಕ ಹ್ಯಾರಿಸ್ ಪುತ್ರ

    ಬೆಂಗಳೂರು: ಯುವಕನೊಬ್ಬನ ಮೇಲೆ ನಡೆಸಿ ಪರಾರಿಯಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಕೊನೆಗೂ ಪೊಲೀಸರ ಮುಂದೆ ಶರಣಾಗಿದ್ದಾನೆ.

    ಶನಿವಾರ ರಾತ್ರಿ ಯುವಕನೊಬ್ಬನ ಜೊತೆ ಜಗಳವಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಬಳಿಕ ನಲಪಾಡ್ ಪಾರಾರಿಯಾಗಿದ್ದನು. ಆದ್ರೆ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

    ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಗನನ್ನು ನಾನೇ ಸರೆಂಡರ್ ಮಾಡಿಸ್ತೇನೆ- ಪೊಲೀಸರು ಬರ್ತಿದ್ದಂತೆ ಕಥೆ ಕಟ್ಟಿದ ಶಾಸಕ ಹ್ಯಾರಿಸ್

    ಏನಿದು ಘಟನೆ?: ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರ ಮಗ ಮಹಮ್ಮದ್ ನಲಪಾಡ್ ಯುಬಿ ಸಿಟಿ ರೆಸ್ಟೊರೆಂಟ್ ನಲ್ಲಿ ಊಟ ಮಾಡುವ ವಿಷಯಕ್ಕಾಗಿ ಕಿರಿಕ್ ತೆಗೆದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ್ದಾನೆ. ಉದ್ಯಮಿ ಲೋಕ್‍ನಾಥ್ ಪುತ್ರ ವಿದ್ವತ್ ಹಲ್ಲೆಗೊಳಗಾದ ಯುವಕನಾಗಿದ್ದು, ಇವರು ಇತ್ತೀಚೆಗೆ ವಿದ್ವತ್ ಸಿಂಗಾಪೂರ್‍ನಲ್ಲಿ ಪದವಿ ಮುಗಿಸಿ ನಗರಕ್ಕೆ ಆಗಮಿಸಿದ್ದರು. ಶನಿವಾರ ರಾತ್ರಿ ಸುಮಾರು 11 ಗಂಟೆಗೆ ವಿದ್ವತ್ ಊಟಕ್ಕೆಂದು ಯುಬಿ ಸಿಟಿ ರೆಸ್ಟೊರೆಂಟ್ ಗೆ ತೆರಳಿದ್ದರು. ಈ ವೇಳೆ ಊಟ ಮಾಡುವ ವಿಷಯಕ್ಕಾಗಿ ವಿದ್ವತ್ ಮತ್ತು ಮಹಮ್ಮದ್ ನಲಪಾಡ್ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿ ಹ್ಯಾರಿಸ್ ಅವರ ಪುತ್ರ ಮಹಮ್ಮದ್ ಮತ್ತು ಆತನ ಸ್ನೇಹಿತರು ವಿದ್ವತ್ ಮುಖಕ್ಕೆ ಪಂಚ್ ಕೊಟ್ಟು, ಮನಸ್ಸೋ ಇಚ್ಛೆ ಥಳಿಸಿದ್ದಾರೆ.

    ಹಲ್ಲೆಗೊಳಗಾದ ವಿದ್ವತ್ ರನ್ನು ನಗರದ ಮಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಷ್ಟಕ್ಕೆ ಸುಮ್ಮನಾಗದ ಶಾಸಕರ ಪುತ್ರ ಮತ್ತು ಆತನ ಗ್ಯಾಂಗ್ ಆಸ್ಪತ್ರೆಗೆ ನುಗ್ಗಿ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿದ್ದ ವಿದ್ವತ್ ಸಹೋದರ ಸಾತ್ವಿಕ್ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಈ ಸಂಬಂಧ ಮಹಮ್ಮದ್ ನಲಪಾಡ್ ಹ್ಯಾರಿಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಪ್ರಮುಖ ಆರೋಪಿಯಾಗಿರುವ ಶಾಸಕರ ಪುತ್ರ ಮಹಮ್ಮದ್ ನಲಪಾಡ್ ಪರಾರಿಯಾಗಿದ್ದಾನೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.
  • ಬೆಂಗಳೂರು ಜಾನ್ಸನ್ ಮಾರುಕಟ್ಟೆ ಮಸೀದಿ ಕಾಂಪೌಂಡ್ ವಿವಾದಕ್ಕೆ ಸಿಕ್ತು ಪರಿಹಾರ

    ಬೆಂಗಳೂರು ಜಾನ್ಸನ್ ಮಾರುಕಟ್ಟೆ ಮಸೀದಿ ಕಾಂಪೌಂಡ್ ವಿವಾದಕ್ಕೆ ಸಿಕ್ತು ಪರಿಹಾರ

    ಬೆಂಗಳೂರು: ನಗರದ ಪ್ರಮುಖ ಕೇಂದ್ರವಾಗಿರುವ ಜಾನ್ಸನ್ ಮಾರುಕಟ್ಟೆ ಬಳಿಯ ಮಸೀದಿ ವಿವಾದಕ್ಕೆ ಶಾಂತಿಯುತ ಪರಿಹಾರ ಸಿಕ್ಕದೆ.

    ಪ್ರಮುಖವಾಗಿ ಹೊಸೂರು ರಸ್ತೆ ಅಗಲೀಕರಣ ಕಾಮಗಾರಿಯನ್ನು ಆರಂಭಿಸಿದ್ದ ಸರ್ಕಾರ ರಸ್ತೆ ನಿರ್ಮಾಣಕ್ಕೆ ಅಡ್ಡವಾಗಿ ನಿರ್ಮಿಸಿದ್ದ ಮಸೀದಿಯ ಕಾಂಪೌಂಡ್ ತೆರವುಗೊಳಿಸಲು ಮುಂದಾಗಿತ್ತು. ಆದರೆ ಈ ಕ್ರಮಕ್ಕೆ ಮಸೀದಿಯ ಆಸ್ಕರ್ ಕಮಿಟಿ ಭಾರೀ ವಿರೋಧ ವ್ಯಕ್ತ ಪಡಿಸಿತ್ತು. ರಸ್ತೆಯ ತುದಿಗೂ ಮಸೀದಿಯ ಕಾಂಪೌಂಡ್ ನಿರ್ಮಾಣ ಮಾಡಿದ್ದರಿಂದ ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು.

    ಈ ನಡುವೆ ಸಮಸ್ಯೆಯನ್ನು ಬಗೆಹರಿಸಲು ಮಸೀದಿಯ ಆಸ್ಕರ್ ಕಮಿಟಿ ಯೊಂದಿಗೆ ಚರ್ಚೆ ನಡೆಸಿದ ಬಿಬಿಎಂಪಿ ಅವರ ಮನವೊಲಿಸಲು ಯಶಸ್ವಿಯಾಗಿತ್ತು. ಹಿನ್ನಲೆಯ ಶಾಸಕ ಹ್ಯಾರಿಸ್ ಮತ್ತು ಮೇಯರ್ ಸಂಪತ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸರ್ಕಾರದ ವತಿಯಿಂದ ಕಾಂಪೌಂಡ್ ತೆರವು ಕಾರ್ಯಾಚರಣೆ ನಡೆಸಲಾಯಿತು.

    ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮೇಯರ್ ಸಂಪತ್ ರಾಜ್ ನಗರದಲ್ಲಿ ನಡೆಯುತ್ತಿರುವ ಗುಂಡಿ ಮುಚ್ಚುವ ಕಾರ್ಯಾಚರಣೆಯಲ್ಲಿ ಕೆಲವು ಸ್ಥಳಗಳಲ್ಲಿ ಕಳಪೆ ಕಾಮಗಾರಿ ನಡೆದಿರುವ ಮಾಹಿತಿ ಇದ್ದು, ಮತ್ತೆ ಅದೇ ಗುತ್ತಿಗೆದಾರರಿಗೆ ಸರಿಪಡಿಸಲು ಸೂಚಿಸಲಾಗಿದೆ. ಸಿಎಂ ಸಿದ್ದರಾಮಯ್ಯನವರು ನೀಡಿರುವ ಗಡುವಿನ ವೇಳೆಗೆ ಗುಂಡಿಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದರು.