Tag: MLA K Sudhakar

  • ನನ್ನ ಅಸಮಾಧಾನ ಭಿನ್ನಾಭಿಪ್ರಾಯ ಮುಗಿದುಹೋದ ಅಧ್ಯಾಯ: ಸುಧಾಕರ್

    ನನ್ನ ಅಸಮಾಧಾನ ಭಿನ್ನಾಭಿಪ್ರಾಯ ಮುಗಿದುಹೋದ ಅಧ್ಯಾಯ: ಸುಧಾಕರ್

    – ಮೈತ್ರಿ ಪರ ಸಾಫ್ಟ್ ಕಾರ್ನರ್ ತೋರಿದ ಶಾಸಕರ
    – ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ

    ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರದ ನಡೆ ಹಾಗೂ ಸಿಎಂ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಮಾತುಗಳನ್ನಾಡುತ್ತಿದ್ದ ಶಾಸಕ ಡಾ. ಕೆ.ಸುಧಾಕರ್ ಅವರು ಈಗ ದೋಸ್ತಿಗಳ ಪರ ಸಾಫ್ಟ್ ಕಾರ್ನರ್ ತೋರಿದ್ದಾರೆ.

    ನಗರದಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು, ಮುಂದಿನ ಚುನಾವಣೆಗಳಿಗೆ ತಳಮಟ್ಟದಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಒಂದಾಗಲೇಬೇಕು. ಈ ಅನಿವಾರ್ಯತೆಯನ್ನು ಲೋಕಸಭಾ ಚುನಾವಣೆಯ ಫಲಿತಾಂಶ ತೋರಿಸಿಕೊಟ್ಟಿದೆ. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೇರಿದಂತೆ ಎಲ್ಲಾ ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಫಲಿತಾಂಶ ಎಚ್ಚರಿಕೆಯ ಘಂಟೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಎಸ್‍ಎಂ ಕೃಷ್ಣ ಭೇಟಿ ವೇಳೆ ಬಿಎಸ್‍ವೈ ಆಗಮನ ಕಾಕತಾಳೀಯವಷ್ಟೇ – ರಮೇಶ್, ಸುಧಾಕರ್ ಸ್ಪಷ್ಟನೆ

    ರಾಜಕೀಯವಾಗಿ ನಮ್ಮ ಬೇರುಗಳನ್ನು ಗಟ್ಟಿ ಮಾಡಿಕೊಳ್ಳುವ ಅವಶ್ಯಕತೆ ಇದೆ. ಫಲಿತಾಂಶದ ನಂತರ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವ ಮುಖಾಂತರ ಅಭಿವೃದ್ಧಿ ಮಾಡಲು ನಾವೆಲ್ಲಾ ತೀರ್ಮಾನಿಸಿದ್ದೇವೆ. ಚುನಾವಣೆಯ ಹಿಂದೆ ಇದ್ದಂತಹ ನಂಬಿಕೆ ವಿಶ್ವಾಸದ ಕೊರತೆಗಳು ಈಗ ಮುಗಿದ ಅಧ್ಯಾಯ. ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ನಾಯಕರು ಎಲ್ಲವನ್ನೂ ಕೂಲಂಕಷವಾಗಿ ವಿಚಾರ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಅವರನ್ನು ನಾವು ನಂಬಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಹೊಸ ಅಧ್ಯಾಯ ಶುರುವಾಗಿದೆ ಎಂದರು.

    ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಯಾವ ಸ್ಥಾನಕ್ಕಾಗಿಯೂ ನಾನು ಮನವಿ, ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಮೂಲಕ ಇಷ್ಟು ದಿನ ಆಪರೇಷನ್ ಕಮಲ ಅಂತ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಶಾಸಕರು ಈಗ ಯೂ ಟರ್ನ್ ಹೊಡೆದರಾ ಎನ್ನುವ ಪ್ರಶ್ನೆ ಎದುರಾಗಿದೆ.

  • ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

    ಶಾಸಕ ಡಾ.ಸುಧಾಕರ್‌ಗೆ ಮಣಿದ ಕಾಂಗ್ರೆಸ್!?

    ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ.ಕೆ ಸುಧಾಕರ್ ಅವರ ಬೆಂಬಲಿಗರನ್ನು ಅಮಾನತ್ತು ಮಾಡಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತನ್ನ ಆದೇಶವನ್ನು ಹಿಂಪಡೆದಿದೆ.

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜನವರಿ 8 ರಂದು ಶಾಸಕ ಸುಧಾಕರ್ ಬೆಂಬಲಿಗರನ್ನ ಅಮಾನತು ಮಾಡಿದ್ದ ಕೆಪಿಸಿಸಿ ಒಂದು ವಾರದಲ್ಲೇ ಅಮಾನತು ಆದೇಶ ರದ್ದುಪಡಿಸಿದೆ. ಇದರೊಂದಿಗೆ ಡಾ. ಸುಧಾಕರ್ ಅವರ ಒತ್ತಡಕ್ಕೆ ಮಣಿದಿದೆ ಎಂಬ ಅನುಮಾನ ಮೂಡಿದೆ.

    ಶಾಸಕ ಸುಧಾಕರ್ ಅವರಿಗೆ ಪಿಸಿಬಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಕೆಪಿಸಿಸಿ ಕಚೇರಿ ಎದುರು ಜನವರಿ 8 ರಂದು ಪ್ರತಿಭಟನೆ ನಡೆಸಿದ್ದರು.  ತಮ್ಮ ಪ್ರತಿಭಟನೆಗೆ ಪಕ್ಷದ ನಾಯಕರು ಬೆಲೆ ನೀಡದ ಪರಿಣಾಮ ಅಸಮಾಧಾನಗೊಂಡ ಶಾಸಕರ ಬೆಂಬಲಿಗರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಕಾರ್ಯಕಾರಿಣಿ ಸಭೆ ಬಳಿಯೂ ಪ್ರತಿಭಟನೆ ನಡೆಸಿದ್ದರು.

     

    ಪಕ್ಷದ ಕಾರ್ಯಕರ್ತರ ಪ್ರತಿಭಟನೆಗೆ ಕೆರಳಿದ್ದ ವೇಣುಗೋಪಾಲ್ ಅವರು ಸುಧಾಕರ್ ಅವರ ಬೆಂಬಲಿಗರನ್ನು ಅಮಾನತು ಮಾಡುವಂತೆ ಸೂಚಿಸಿದ್ದರು. ಇದರ ಅನ್ವಯ ಕೆಪಿಸಿಸಿ ಕಾರ್ಯರ್ಶಿ ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ. ರಫೀಕ್ ಹಾಗೂ ಮಂಚೇನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಅವರನ್ನು ಅಮಾನತು ಮಾಡಲಾಗಿತ್ತು. ಸದ್ಯ ಈ ಅಮಾನತು ರದ್ದಾಗಿದೆ.

    ಆಪರೇಷನ್ ಕಮಲ ಪ್ಲಾಪ್ ಆದ ಸಮಯದಲ್ಲೇ ವೇಣುಗೋಪಾಲ್ ಜೊತೆ ಸಾಕಷ್ಟು ಓಡಾಟ ನಡೆಸಿದ್ದ ಶಾಸಕ ಸುಧಾಕರ್ ತಮ್ಮ ಬೆಂಬಲಿಗರ ಅಮಾನತು ಆದೇಶವನ್ನ ರದ್ದುಪಡಿಸಲು ಈ ಮೂಲಕ ಯಶಸ್ವಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಸ್ಥಾನಕ್ಕಾಗಿ ಶಕ್ತಿ ಪ್ರದರ್ಶನ – ಡಾ ಕೆ ಸುಧಾಕರ್ ಬೆಂಬಲಿಗರ ಬೃಹತ್ ಪ್ರತಿಭಟನೆ

    ಸಚಿವ ಸ್ಥಾನಕ್ಕಾಗಿ ಶಕ್ತಿ ಪ್ರದರ್ಶನ – ಡಾ ಕೆ ಸುಧಾಕರ್ ಬೆಂಬಲಿಗರ ಬೃಹತ್ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ, ಶಾಸಕರ ಬೆಂಬಲಿಗರು ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ಪಿಎಲ್‍ಡಿ ಬ್ಯಾಂಕ್ ಆವರಣದಿಂದ ಬಿಬಿ ರಸ್ತೆ ಮೂಲಕ ಬಲಮುರಿ ವೃತ್ತದವರೆಗೂ ಸಾಗಿ ಬಳಿಕ ಬಿಬಿ ರಸ್ತೆಯ ಮೂಲಕವೇ ಶಿಡ್ಲಘಟ್ಟ ವೃತ್ತದವರೆಗೂ ಮೆರವಣಿಗೆ ನಡೆಸಿದರು. ಈ ವೇಳೆ ಬೃಹತ್ ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಈ ವೇಳೆ ಶಾಸಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಕೊಡುವಂತೆ ಆಗ್ರಹಿಸಿದ ಅವರು ನಗರದಲ್ಲಿ ಶಕ್ತಿ ಪ್ರದರ್ಶನ ನಡೆಸಿದರು. ಮೊದಲು ಶಾಸಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಸಿಗುವ ನೀರಿಕ್ಷೆಯಿತ್ತು. ಆದರೆ ಕೆಲವರ ಪಿತೂರಿಯಿಂದ ಈಗ ಸಚಿವ ಸ್ಥಾನ ಕೈ ತಪ್ಪಿದೆ. ಹೀಗಾಗಿ ಸದ್ಯ ಜಿಲ್ಲೆಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶಾಸಕ ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕರ ಬೆಂಬಲಿಗರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.