Tag: MLA Lakshmi Hebbalkar

  • ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ: ಸಚಿವ ರಮೇಶ್ ಜಾರಕಿಹೊಳಿ

    ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ: ಸಚಿವ ರಮೇಶ್ ಜಾರಕಿಹೊಳಿ

    – ‘ನಾನು ಹೆದರಿಕೊಳ್ಳುವ ಮಗಳಲ್ಲ’- ಹೆಬ್ಬಾಳ್ಕರ್ ತಿರುಗೇಟು

    ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ರಮೇಶ್ ಜಾರಕಿಹೊಳಿ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಂಚಿದ್ದ ಕುಕ್ಕರ್ ಕೊಟ್ಟಿದ್ದು ನಾನೇ, ಕುಕ್ಕರ್ ಹಂಚಿದ್ದು ನನ್ನ ದುಡ್ಡಲ್ಲಿ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರ ಬೆಳಗಾವಿ ಗ್ರಾಮೀಣದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಸಚಿವರು, ತಮ್ಮ ಭಾಷಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗ..ಡ್ ಬಹಳ ಇದೆ. ನಾವು ಹಣದ ಗ..ಡ್‍ನ್ನು ನಾವು ತೋರಿಸಲು ಸಿದ್ಧರಿದ್ದೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಸ್ಟಾರ್ಟ್ ಇದೆಯೋ ಬಂದ್ ಇದೆಯೋ? ಎಂದು ವ್ಯಂಗ್ಯವಾಡಿದರು.

    ದುಡ್ಡಿನ ಆಮಿಷಕ್ಕೆ ಬಲಿಯಾಗಬೇಡಿ ನಾನು ನಿಮ್ಮ ಜೊತೆಗಿರುತ್ತೇನೆ. 2023ರ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕು. ಮುಂಬರುವ ಡಿಸಿಸಿ ಬ್ಯಾಂಕ್, ಜಿ.ಪಂ., ಗ್ರಾ.ಪಂ. ಎಲೆಕ್ಷನ್‍ಗೆ ಗಟ್ಟಿಯಾಗಿ ನಿಲ್ಲಬೇಕು. ಈಗಾಗಲೇ ಡಿಸಿಸಿ ಬ್ಯಾಂಕ್ ಚುನಾವಣೆಗೆ ಕಾರ್ಯಕರ್ತರು ತಮ್ಮ ಅಭ್ಯರ್ಥಿಗಳ ಪರ ದುಡ್ಡು ಹಂಚುತ್ತಿದ್ದಾರೆಂಬ ಮಾಹಿತಿ ಇದೆ. ಅವರು ಎಷ್ಟು ಕೊಡ್ತಾರೋ ಅದಕ್ಕೆ ಡಬಲ್ ದುಡ್ಡು ಕೊಡಲು ಸಿದ್ಧರಿದ್ದೇವೆ. ಸಾಲ ಮಾಡಿ ಆದರೂ ದುಡ್ಡು ಕೊಡ್ತೀವಿ. ಉತ್ತರ ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸುತ್ತೇವೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಸಭೆ ಮಾಡೋಣ ಬಹಳ ಮಾತನಾಡೋದಿದೆ ಎಂದರು.

    ಇತ್ತ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸರ್ಕಾರದ ಸಚಿವ ಸ್ಥಾನದಲ್ಲಿದ್ದುಕೊಂಡು ಈ ರೀತಿ ಮಾತನಾಡುವುದು ಸರಿಯಲ್ಲ. ಕುಕ್ಕರ್ ವಿಚಾರ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಮಾತನಾಡಿದರೇ ನ್ಯಾಯಾಂಗ ನಿಂದನೆ ಆಗುತ್ತೆ. ಆದರೆ ಕ್ಷೇತ್ರದಲ್ಲಿ ಹರ್ಷ ಶುಗರ್ ಕಾರ್ಖಾನೆ ಇದೆ ಎಂಬ ಕಾರಣಕ್ಕೆ ಕಾರ್ಯಕ್ರಮ ಮಾಡಿ ಕುಕ್ಕರ್ ನೀಡಿದ್ದೆವು. ಸಚಿವರ ಬಳಿ ಈ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಕ್ಯಾಬಿನೆಟ್ ಸಚಿವರು ಸೋಕ್ಕಿನಿಂದ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಕಾನೂನಿನ ಹೋರಾಟ ನಡೆಸಲು ವಕೀಲರ ಬಳಿ ಮಾತುಕತೆ ನಡೆಸುತ್ತಿದ್ದೇನೆ ಎಂದರು.

    ಚುನಾವಣೆ ಸಂಬಂಧ ಹಣ ಹಂಚಿಕೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಶುಗರ್ ಫ್ಯಾಕ್ಟರಿಗೆ ಕಬ್ಬು ನೀಡಿದ್ದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು. ಅವರಿಗೆ ಸಚಿವರು ಮೊದಲು ಹಣ ಬಿಡುಗಡೆ ಮಾಡಲಿ. ನಾನು ನಿಮ್ಮ ಭಾಷಣಕ್ಕೆ ಹೆದರಿಕೊಳ್ಳುವ ಮಗಳಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಉತ್ತಮ ಕೆಲಸ ಮಾಡಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಿಗೆ ಸಲಹೆ ನೀಡಿದರು.

  • ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ ಲಕ್ಷ್ಮಿ ಹೆಬ್ಬಾಳ್ಕರ್

    ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ನಗರವನ್ನು ಬಹುತೇಕ ಮಳೆ ಪ್ರವಾಹದಲ್ಲಿ ಮುಳಿಗಿಸಿದ್ದು, ಜನರ ಜೀವನ ಅಪಾಯದಲ್ಲಿ ಸಿಲುಕಿದೆ. ಪ್ರವಾಹದಲ್ಲಿ ಸಿಲುಕಿರುವ ನೆರವಿಗೆ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತಿದೆ. ಇತ್ತ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಪ್ರವಾಹ ಉಂಟಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ.

    ಬೆಳಗಾವಿಯ ಚಂದನಹೊಸೂರ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕಿ, ಗ್ರಾಮದ ಮಹಿಳೆಯೊಬ್ಬರಿಗೆ ಸಾಂತ್ವನ ಹೇಳಿರುವ ಫೋಟೋಗಳನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಗ್ರಾಮದ ಮಹಿಳೆಯ 30 ವರ್ಷದ ಅಳಿಯ ತೀರಿಕೊಂಡಿದ್ದು, ತನ್ನ 25 ವರ್ಷದ ಮಗಳು, ಮೊಮ್ಮಕ್ಕಳೊಂದಿಗೆ ಜೀವನ ನಡೆಸುತ್ತಾರೆ. ಪ್ರಕೃತಿ ವಿಕೋಪಕ್ಕೆ ಇರುವ ಮನೆಯನ್ನು ಕಳೆದುಕೊಂಡಿದ್ದಾರೆ. ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ನಿಮ್ಮೊಂದಿಗೆ ನಾವಿದ್ದೇವೆ, ಧೈರ್ಯ ಕಳೆದುಕೊಳ್ಳಬೇಡಿ. ಬೇರೆಯವರ ಮೇಲೆ ಆರೋಪ ಮಾಡುವ ಬದಲು ಎಲ್ಲರೂ ಒಟ್ಟಿಗೆ ಕೂಡಿ ಜನರ ನೆರವಿಗೆ ಬರಬೇಕಿದೆ. ಸೇತುವೆಗಳ ಬಳಿ ತೆರಳಿದ ಸಂದರ್ಭದಲ್ಲಿ ಹಾಗೂ ಹೆಚ್ಚು ನೀರು ಹರಿಯುತ್ತಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇದ್ದು, ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯಿರಿ. ಜಿಲ್ಲಾಡಳಿತ, ಸರ್ಕಾರ ನಿಮ್ಮ ನೆರವಿಗೆ ಬರಲಿದೆ ಎಂದು ಮನವಿ ಮಾಡಿದ್ದಾರೆ.

  • ಕೋಣ ಗಬ್ಬಾಗಿದೆ ಅಂದ್ರೆ ಹುಃ ಅನ್ನೋ ಪರಿಸ್ಥಿತಿ ನಮ್ಮದಾಗಿದೆ: ಬಿಜೆಪಿ ವಿರುದ್ಧ ಹೆಬ್ಬಾಳ್ಕರ್ ಕಿಡಿ

    ಕೋಣ ಗಬ್ಬಾಗಿದೆ ಅಂದ್ರೆ ಹುಃ ಅನ್ನೋ ಪರಿಸ್ಥಿತಿ ನಮ್ಮದಾಗಿದೆ: ಬಿಜೆಪಿ ವಿರುದ್ಧ ಹೆಬ್ಬಾಳ್ಕರ್ ಕಿಡಿ

    ಬೆಂಗಳೂರು: ಕೋಣ ಗಬ್ಬಾಗಿದೆ ಅಂದರೆ ಹುಃ ಅನ್ನೋ ಪರಿಸ್ಥಿತಿ ನಮ್ಮದಾಗಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

    ವಿಶ್ವಾಸ ಮತಯಾಚನೆ ಚರ್ಚೆ ವೇಳೆ ಮಾತನಾಡಿದ ಅವರು, ಇಂದಿನ ರಾಜಕೀಯ ಪರಿಸ್ಥಿಯ ಬಗ್ಗೆ ಕೇಳಿಲ್ಲ ನೋಡಿಲ್ಲ. ಇಂತಹ ಪ್ರಹಸನಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎನ್ನುವುದು ದುರಂತ. ಪಂಚಾಯಿತಿ ಸದಸ್ಯರಿಗೆ ಇರುವ ಗೌರವ ಶಾಸಕರಿಗೆ ಇಲ್ಲದಂತಾಗಿದೆ. ಬೇರೆಯವರಿಂದ ಅಸಹ್ಯದ ಮಾತು ಕೇಳಿ, ಶ್ರಮಪಟ್ಟು, ಕೇಳಬಾರದ ಮಾತುಕೇಳಿ ಶಾಸಕಿಯಾಗಿದ್ದೇನೆ. ಬೆಳಗಾವಿಯಂತ ಗಡಿ ಪ್ರದೇಶದಲ್ಲಿ ಗೆಲವು ಸಾಧಿಸಿದ್ದಕ್ಕೆ ಖುಷಿಪಟ್ಟಿದ್ದೆ. ಆದರೆ ಇಂದು ಈಗಿನ ಪರಿಸ್ಥಿತಿಯನ್ನು ಎಲ್ಲರೂ ಲೇವಡಿ ಮಾಡುತ್ತಿದ್ದಾರೆ ಎಂದು ಹೇಳಿದರು.

    ಕೆಲ ಶಾಸಕರಿಗೆ ವೈಯಕ್ತಿಕ ಕಾರಣವಿರಬಹುದು, ಮನಸ್ತಾಪ ಇರಬಹುದು ಇದನ್ನೆಲ್ಲ ಹೇಳುವುದಕ್ಕೆ ನಾನು ವಯಸ್ಸಿನಲ್ಲೂ, ಅನುಭವದಲ್ಲೂ ಸಣ್ಣವಳು. ಆದರೆ ಇವತ್ತು ಪಕ್ಷ ಅಂದರೆ ತಂದೆ ತಾಯಿ ಇದ್ದಂತೆ. ಅಂತಹ ಪಕ್ಷಕ್ಕೆ ಚಾಕು ಹಾಕಿ ಹೋದವರು ನಿಮ್ಮ ಜೊತೆ ಹೇಗಿರುತ್ತಾರೆ. ಬಿ.ಎಸ್.ಯಡಿಯೂರಪ್ಪನವರೇ ಅವತ್ತು ನಿಮ್ಮನ್ನು ಸಿಎಂ ಸೀಟಿನಿಂದ ಇಳಿಸಿದ್ದು ಕಾಂಗ್ರೆಸ್‍ನವರಲ್ಲ ನಿಮ್ಮವರೇ ಎಂದು ಕುಟುಕಿದರು.

    ಪಶ್ಚಿಮ ಬಂಗಾಳ ತೃಣಮೂಲ ಕಾಂಗ್ರೆಸ್‍ನ (ಟಿಎಂಸಿ) ಶಾಸಕರು ಬಿಜೆಪಿಗೆ ಸೇರುತ್ತಾರೆ ಅಂತ ಪಕ್ಷದ ಬಿಜೆಪಿಯವರು ಬಹಿರಂಗವಾಗಿ ಹೇಳಿಕೆ ನೀಡುತ್ತಾರೆ. ಭಾರತ ಅಷ್ಟೇ ಅಲ್ಲ ಅಮೆರಿಕಾದಲ್ಲೂ ಕಮಲವನ್ನು ಅರಳಿಸುತ್ತೇವೆ ಎನ್ನುವ ಭಂಡತನ ಬಿಜೆಪಿಗೆ ಇದೆ. ಪಕ್ಷಕ್ಕಾಗಿ ದುಡಿದವರನ್ನು ಬಿಟ್ಟು ಈಗ ಪಕ್ಷಕ್ಕೆ ಬರುವವವರಿಗೆ ಮಂತ್ರಿ ಸ್ಥಾನ ನೀಡಲು ಮುಂದಾಗಿದ್ದೀರಿ ಇದು ಎಷ್ಟು ಸರಿ ಎಂದು ಪ್ರಶ್ನಿಸಿ ಕಿಡಿಕಾರಿದರು.

    ಪಕ್ಷದಿಂದ ಹೋದವರಿಗೆ ಒಳ್ಳೆ ಬುದ್ಧಿ ಕೊಡಲಿ. ವಾಪಸ್ ಬನ್ನಿ, ಸರ್ಕಾರವನ್ನು ಸುಭದ್ರವಾಗಿ ನಡೆಸಿಕೊಡುವಂತೆ ನಾನು ಮನವಿ ಮಾಡುತ್ತೇನೆ. ವೈಯಕ್ತಿಕ ಸ್ವಾರ್ಥ ಬಿಟ್ಟುಬಿಡಿ. ಸಣ್ಣ ಕೆಲಸ ಇರಲಿ ದೊಡ್ಡ ಕೆಲಸ ಇರಲಿ ಕೇಳಿದಾಗ ಎಂದೂ ಸಿಎಂ ನಿರ್ಲಕ್ಷ್ಯ ವಹಿಸಿದವರಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಅಷ್ಟೇ ಸ್ಪಂದನೆ ಕೊಡುತ್ತಿದ್ದಾರೆ ಎಂದು ಹೇಳಿದರು.

  • ರೈತರಿಗೆ ಅನ್ಯಾಯ ಆಗೋಕೆ ಬಿಡಲ್ಲ – ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್

    ರೈತರಿಗೆ ಅನ್ಯಾಯ ಆಗೋಕೆ ಬಿಡಲ್ಲ – ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್

    ಬೆಳಗಾವಿ: ಸರ್ಕಾರದ ಯೋಜನೆಯಿಂದ ಅನ್ಯಾಯ ಆದರೆ ಆಗಲಿ, ತೊಂದರೆ ಆಗಿದ್ದರೆ ಸಹಿಸಿಕೊಳ್ಳಬೇಕೇ ವಿನಃ ಪರ್ಯಾಯ ಮಾರ್ಗವಿಲ್ಲ ಎಂದಿದ್ದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ರೈತರ ವಿರುದ್ಧವಾಗಿದ್ದರೆ ನಾನು ನನ್ನ ರೈತರ ಪರ ನಿಲ್ಲುತ್ತೇನೆ. ಏಕಾಏಕಿ ರೈತರ ಅನುಮತಿ ಇಲ್ಲದೇ ಯಾವುದೇ ಯೋಜನೆ ಕೈಗೊಳ್ಳಲು ಆಗಲ್ಲ. ಆದ್ದರಿಂದ ಈ ಬಗ್ಗೆ ಕೂಗು ಎದ್ದಿದೆ ಎಂದರು.

    ರೈತರ ಜಮೀನಿಗೆ ಕೇವಲ 3 ಲಕ್ಷ ರೂ. ಮಾತ್ರ ಮಾಡಿದ್ದು, 2009 ರಲ್ಲಿಯೇ ಇದರ ಅನುಮತಿ ಲಭಿಸಿದೆ. ಆದರೆ ಇಷ್ಟು ಕಡಿಮೆ ಹಣ ನೀಡಿ ರೈತನಿಗೆ ಮೋಸ ಮಾಡಲಾಗುತ್ತಿದೆ. ನಾನು ರೈತರ ಪರ ನಿಲ್ಲುತ್ತಿದ್ದು, ಇದುವರೆಗೂ ಸರ್ಕಾರದ ಕಡೆಯಿಂದ ರೈತರ ಒಂದು ಸಭೆಯನ್ನ ನಡೆಸಿಲ್ಲ. ನಾನು ಈ ಬಗ್ಗೆ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದ್ದು, ಈಗ ರೈತರ ಪರಿಹಾರ ಹಣ ಹೆಚ್ಚಿಸುವ ಹಾಗೂ ಬೇರೆ ಜಮೀನು ನೀಡುವ ಆಶ್ವಾಸನೆ ನೀಡಿದ್ದಾರೆ ಎಂದರು.

    ನಾನು ರೈತರ ಪರ ನಿಂತಿತ್ತು, ಜಮೀನು ಈಗಾಗಲೆ ಸರ್ಕಾರದ ಕೈ ಸೇರಿದೆ. ರೈತರಿಗೆ ಕಾನೂನು ಪ್ರಜ್ಞೆ ಕಡಿಮೆ ಇರುವುದರಿಂದ ಈ ಸಮಸ್ಯೆ ಆಗಿದೆ. ಕಡಿಮೆ ಪರಿಹಾರ ನೀಡಿ ಅವರ ಜೀವನಕ್ಕೆ ಆಧಾರವಾಗಿದ್ದ ನೆಲೆಯನ್ನು ತೆಗೆದುಕೊಂಡಿದ್ದಾರೆ. ಸಚಿವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ಆದರೆ ರೈತರಿಗೆ ಅನ್ಯಾಯವಾದರೆ ರಾಜ್ಯ ಸರ್ಕಾರ, ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕಿಯಾಗಿ ನಾವೇ ಹೊಣೆ ತೆಗೆದುಕೊಳ್ಳಬೇಕಾಗುತ್ತದೆ. ರೈತರು ಯಾವುದೇ ಕಠಿಣ ಕ್ರಮಕ್ಕೆ ಮುಂದಾದರೆ ಅದಕ್ಕೆ ಸರ್ಕಾರವೇ ಹೊಣೆ. ಜಿಲ್ಲೆಯ ಅಭಿವೃದ್ಧಿಯೊಂದಿಗೆ ನನಗೆ ರೈತರ ಕ್ಷೇಮವೂ ಮುಖ್ಯ ಎಂದು ಸ್ಪಷ್ಟಪಡಿಸಿದರು. ಇದನ್ನು ಓದಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸತೀಶ್ ಜಾರಕಿಹೊಳಿ ಕಿಡಿ

  • ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸತೀಶ್ ಜಾರಕಿಹೊಳಿ ಕಿಡಿ

    ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸತೀಶ್ ಜಾರಕಿಹೊಳಿ ಕಿಡಿ

    ಬೆಳಗಾವಿ: ನಗರ ನೀರು ಶುದ್ಧೀಕರಣ ಯೋಜನೆಗೆ ರೈತರು ವಿರೋಧ ವ್ಯಕ್ತಿಪಡಿಸಿ ಕುರ್ಚಿ ಮುರಿದು ಗಲಾಟೆ ವಿಚಾರಕ್ಕೆ ಸಂಬಂಧಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಾಮಾಧಾನ ವ್ಯಕ್ತಪಡಿಸಿ ಕಿಡಿಕಾರಿದ್ದಾರೆ.

    ಯೋಜನೆಗೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈ ಹಿಂದೆಯೇ ಯೋಜನೆಗೆ ಬೇಕಾದ ಭೂಮಿಯನ್ನ ಸರ್ಕಾರ ವಶಕ್ಕೆ ಪಡೆದಿದ್ದು, ಕಾನೂನು ಪ್ರಕ್ರಿಯೆ ಸಂರ್ಪೂಣವಾಗಿ ಆಗಿದೆ. ಆದ್ದರಿಂದ ಈಗ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಯಾವುದೇ ಪ್ರಯೋಜನ ಆಗೋದಿಲ್ಲ. ಸದ್ಯ ರೈತರಿಗೆ ನಷ್ಟ ಆಗದಂತೆ ಮಾತ್ರ ಕ್ರಮಕೈಗೊಳ್ಳಲು ಸಾಧ್ಯ. ಈ ಜವಾಬ್ದಾರಿಯನ್ನ ತಾವೇ ನಿರ್ವಹಿಸುತ್ತೇವೆ ಎಂದರು.

    ಈಗಾಗಲೇ ನಾನು ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿದ್ದೇನೆ. 2 ವರ್ಷಗಳ ಹಿಂದೆಯೇ ಯೋಜನೆ ಕಾರ್ಯ ರೂಪಕ್ಕೆ ಬಂದಿದ್ದು, ಬೆಳಗಾವಿ ನಗರಕ್ಕೆ ಈ ಯೋಜನೆ ಅನಿವಾರ್ಯ ಆಗಿದೆ. ರೈತರಿಗೆ ನಷ್ಟ ಆಗದಂತೆ ಈ ಯೋಜನೆಯನ್ನು ಜಾರಿ ಮಾಡಿ, ವಿಶೇಷ ಪ್ರಕರಣದ ಅಡಿಯಲ್ಲಿ ರೈತರಿಗೆ 30 ಲಕ್ಷ ರೂ. ಕೊಡಿಸುವ ಬಗ್ಗೆ ಪ್ರಸ್ತಾವನೆ ಇದೆ. ಈಗಾಗಲೇ ಸರ್ಕಾರದ ಹಣ ಬಿಡುಗಡೆಯಾಗಿ ಮತ್ತೆ ವಾಪಸ್ ಹೋಗಿದ್ದು, 2ನೇ ಬಾರಿಗೆ ಹಣ ವಾಪಸ್ ಹೋದರೆ ಮತ್ತೆ ರೈತರಿಗೆ ಪರಿಹಾರ ನೀಡುವುದು ಕಷ್ಟಸಾಧ್ಯವಾಗಲಿದೆ. ಇದನ್ನ ಸ್ಥಳೀಯ ಶಾಸಕರು ಆರ್ಥೈಸಿಕೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿಗಳು ಬದಲಾವಣೆ ಆದರೆ ರೈತರಿಗೆ ನ್ಯಾಯ ನೀಡುತ್ತೇನೆ ಎಂಬ ಹೆಬ್ಬಾಳ್ಕರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಳೆ ಜಿಲ್ಲಾಧಿಕಾರಿಗಳಿದ್ರು, ಯಾವ ಡಿಸಿ ಬಂದರೂ ಏನು ಮಾಡಲು ಆಗಲ್ಲ. ಈ ವಿಚಾರದಲ್ಲಿ ಡಿಸಿ ಹೆಲ್ಪ್ ಲೆಸ್. ಜಿಲ್ಲಾಧಿಕಾರಿಗಳು ಯಾರೇ ಇರಲಿ, ಯೋಜನೆಗೆ ಜಮೀನು ಕೊಡಿಸುವುದು ಅವರ ಜವಾಬ್ದಾರಿ. ಈ ಬಗ್ಗೆ ನ್ಯಾಯಾಲಯದ ನಿರ್ದೇಶನವೂ ಇದೆ ಎಂದರು.

    ಬೆಳಗಾವಿ ಉಸ್ತುವಾರಿ ಸಚಿವನಾಗಿ ಯೋಜನೆ ಬಗ್ಗೆ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಶ್ನೆಯೆ ಇಲ್ಲ. ರೈತರಿಗೆ ಸುಳ್ಳು ಭರವಸೆ ನೀಡಲು ಆಗುವುದಿಲ್ಲ, ಇದನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಥ ಮಾಡಿಕೊಳ್ಳಬೇಕು. ಅವರಿಗೆ ಅನ್ಯಾಯ, ತೊಂದರೆ ಆಗಿದ್ದರೆ ಸಹಿಸಿಕೊಳ್ಳಬೇಕೇ ವಿನಃ ಪರ್ಯಾಯ ಮಾರ್ಗವಿಲ್ಲ. ಶಾಸಕರು ಸರ್ಕಾರದ ಒಂದು ಭಾಗ, ರೈತರಿಗೆ ತಿಳಿ ಹೇಳುವುದು ಅವರ ಕರ್ತವ್ಯ. ಯೋಜನೆಯ ಬಗ್ಗೆ ಇಬ್ಬರ ನಡುವೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ತಿಳಿಸಿದರು.

    ಕೊಳಚೆ ನೀರು ಶುದ್ಧೀಕರಣ ಯೋಜನೆಗೆ ವಿರೋಧ ವ್ಯಕ್ತಡಿಸಿ ನಿನ್ನೆಯಷ್ಟೇ ಆ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಎದುರೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಅಧಿಕಾರಿಗಳಿಗೆ ತಂದಿದ್ದ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದ್ದರು.

    https://www.youtube.com/watch?v=0YMqp89UWas

  • ಕುರ್ಚಿಗಳು ಒಡೆದು ಹಾಕಿ ಹೆಬ್ಬಾಳ್ಕರ್ ಎದುರೇ ಅಧಿಕಾರಿಗಳ ವಿರುದ್ಧ ಕಿಡಿಕಾರಿದ ರೈತರು

    ಕುರ್ಚಿಗಳು ಒಡೆದು ಹಾಕಿ ಹೆಬ್ಬಾಳ್ಕರ್ ಎದುರೇ ಅಧಿಕಾರಿಗಳ ವಿರುದ್ಧ ಕಿಡಿಕಾರಿದ ರೈತರು

    ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಎದುರೇ ಜಿಲ್ಲೆಯ ಹಲಗಾ ಗ್ರಾಮದ ರೈತರು ಅಧಿಕಾರಿಗಳ ವಿರುದ್ಧ ಕಿಡಿಕಾರಿ, ಕುರ್ಚಿಗಳನ್ನು ಎಸೆದು ಒಡೆದು ಹಾಕಿದ್ದಾರೆ.

    ಹಲಗಾ ಗ್ರಾಮದ ರೈತರ ವಿರೋಧದ ನಡುವೆಯೂ ಜಿಲ್ಲಾಡಳಿತದಿಂದ ಒಳಚರಂಡಿ ನೀರು ಶುದ್ಧೀಕರಣ ಘಟಕ ಕಾಮಗಾರಿ ನಡೆಸಲಾಗುತ್ತಿದೆ. ಹೀಗಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಗ್ರಾಮಸ್ಥರು, ಕಾಮಗಾರಿಯನ್ನು ಕೈ ಬಿಡುವಂತೆ ಮನವಿ ಮಾಡಿಕೊಂಡು, ಕಣ್ಣೀರಿಟ್ಟರು. ಆದರೆ ಶಾಸಕರು ಬಂದು ಅರ್ಧ ಗಂಟೆ ಕಳೆದರೂ ಅಧಿಕಾರಿಗಳು ಸ್ಥಳಕ್ಕೆ ಬರಲೇ ಇಲ್ಲ. ಇದು ಗ್ರಾಮಸ್ಥರ ಕೋಪಕ್ಕೆ ಕಾರಣವಾಯಿತು.

    ನಮ್ಮ ಜಮೀನು ನೀಡುವುದಿಲ್ಲ ಎಂದು ಜಿಲ್ಲಾಡಳಿತಕ್ಕೆ ತಿಳಿಸಿದ್ದೇವು. ಆದರೆ ಇದನ್ನು ಪರಿಗಣಿಸದ ಜಿಲ್ಲಾಡಳಿತವು ಕಾಮಗಾರಿಗೆ ಮುಂದಾಗಿತ್ತು. ಹೀಗಾಗಿ ಕಳೆದ 6 ದಿನಗಳಿಂದ ಅಧಿಕಾರಿಗಳ ಜೊತೆಗೆ ಸಂಘರ್ಷ ಏರ್ಪಟ್ಟಿತ್ತು. ನಮ್ಮ ಹೋರಾಟಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಸಾಥ್ ನೀಡಿದ್ದರು. ಆದರೆ ಅವರನ್ನು ವಶಕ್ಕೆ ಪಡೆದ ಪೊಲೀಸರು, ಒಂದು ದಿನ ಠಾಣೆಯಲ್ಲಿ ಇರಿಸಿಕೊಂಡಿದ್ದರು ಎಂದು ಹಲಗಾ ಗ್ರಾಮದ ರೈತರು ದೂರಿದ್ದಾರೆ.

    ನಮ್ಮ ಜೀವನೋಪಾಯಕ್ಕೆ ಇರುವುದು ಈ ಜಮೀನು ಅಷ್ಟೇ. ಇದನ್ನು ನೀವು ಕಿತ್ತುಕೊಂಡರೆ ನಮ್ಮ ಬದುಕು ಕಷ್ಟವಾಗುತ್ತದೆ. ಬೇರೆ ಎಲ್ಲಿಯಾದರೂ ಒಳಚರಂಡಿ ನೀರು ಶುದ್ಧೀಕರಣ ಘಟಕ ನಿರ್ಮಿಸಿ ದಯವಿಟ್ಟು ಫಲವತ್ತಾದ ಭೂಮಿಯನ್ನು ಬಿಟ್ಟು ಬಿಡಿ ಎಂದು ರೈತರು ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

    ಕಾಮಗಾರಿಯ ಕುರಿತು ನಮಗೆ ಯಾವುದೇ ಮಾಹಿತಿ ನೀಡಿಲ್ಲ. ಏಕಾಏಕಿ ಕಾಮಗಾರಿ ಆರಂಭಿಸಿದ್ದಾರೆ. ಇದರಿಂದಾಗಿ ನಮ್ಮ ಬೆಳೆ ನಾಶವಾಗುತ್ತಿದೆ. ಇದನ್ನು ಪ್ರಶ್ನಿಸಿದರೆ ಅಧಿಕಾರಿಗಳು ನಮ್ಮ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ರೈತರು ಆರೋಪಿಸಿದ್ದಾರೆ.

    ಈ ಎಲ್ಲಾ ಬೆಳವಣಿಗೆಯಿಂದಾಗಿ ಎಚ್ಚೆತ್ತುಕೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಕಾಮಗಾರಿ ನಿಲ್ಲಿಸಲು ಮುಂದಾಗಿದ್ದರು. ಆದರೆ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಬರದೇ ಬೇಜವಾಬ್ದಾರಿ ತೋರಿದ್ದು ರೈತರ ಆಕ್ರೋಶಕ್ಕೆ ಕಾರಣವಾಯಿತು. ಇದರಿಂದಾಗಿ ಕುರ್ಚಿಗಳನ್ನು ಮುರಿದು ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ರೈತರನ್ನು ಸಮಾಧಾನ ಪಡಿಸುತ್ತಿದ್ದಾರೆ.

  • ಅಮ್ಮನ ಕ್ಷೇತ್ರದಲ್ಲಿ ಪುತ್ರನ ದರ್ಬಾರ್ – ಲಕ್ಷ್ಮೀ ಹೆಬ್ಬಾಳ್ಕರ್ ಗೈರಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಮನ್ರಾಲ್

    ಅಮ್ಮನ ಕ್ಷೇತ್ರದಲ್ಲಿ ಪುತ್ರನ ದರ್ಬಾರ್ – ಲಕ್ಷ್ಮೀ ಹೆಬ್ಬಾಳ್ಕರ್ ಗೈರಲ್ಲಿ ಗುದ್ದಲಿ ಪೂಜೆ ನೆರವೇರಿಸಿದ ಮನ್ರಾಲ್

    ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡಬೇಕಿದ್ದ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆಯನ್ನು ಅವರ ಗೈರು ಹಾಜರಿಯಲ್ಲಿ ಪುತ್ರ ನೆರವೇರಿಸಿದ್ದು, ಈ ಮೂಲಕ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.

    ಇಂದು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುತಗಾ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಕಾರ್ಯ ಏರ್ಪಡಿಸಲಾಗಿತ್ತು. ಆದರೆ ಈ ವೇಳೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೈರು ಹಾಜರಿ ಆಗಿದ್ದರು. ಪರಿಣಾಮ ಜನಪ್ರತಿನಿಧಿಗಳು ಮಾಡಬೇಕಿದ್ದ ಕಾರ್ಯವನ್ನು ಶಾಸಕಿ ಪುತ್ರ  ಮನ್ರಾಲ್ ಮಾಡಿದ್ದು, ಕ್ಷೇತ್ರದಲ್ಲಿ ತಮ್ಮ ದರ್ಬಾರ್ ನಡೆಸಿದ್ದಾರೆ.

    ಶಿಷ್ಟಾಚಾರ ಪ್ರಕಾರ ಕ್ಷೇತ್ರದ ಶಾಸಕರು ಗೈರು ಹಾಜರಿ ಇರುವ ವೇಳೆ ಆ ಕ್ಷೇತ್ರದ ಇತರೇ ಜನ ಪ್ರತಿನಿಧಿಗಳಾದ ಗ್ರಾಮ ಪಂಚಾಯತ್ ಅಧ್ಯಕ್ಷ ಅಥವಾ ತಾಲೂಕು ಪಂಚಾಯತ್ ಅಧ್ಯಕ್ಷರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾರೆ. ಇಲ್ಲವಾದರೆ ಇಲಾಖೆಗೆ ಸಂಬಂಧಿಸಿದ ಉನ್ನತ ಅಧಿಕಾರಿಗಳು ಈ ಕಾರ್ಯವನ್ನು ನಡೆಸುತ್ತಾರೆ. ಆದರೆ ಇಲ್ಲಿ ಮಾತ್ರ ಶಾಸಕರ ಪುತ್ರ ಚಾಲನೆ ನೀಡಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಈ ಕುರಿತು ಸ್ಥಳೀಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ವಿರೋಧದ ನಡುವೆಯೇ ಕಾರ್ಯಕ್ರಮ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಾಜಕೀಯದಲ್ಲಿ ಕಣ್ಣು ಬಿಡುವ ಮುನ್ನವೇ ಐಟಿ ರೇಡ್ ಆಗಿತ್ತು : ಲಕ್ಷ್ಮೀ ಹೆಬ್ಬಾಳ್ಕರ್

    ರಾಜಕೀಯದಲ್ಲಿ ಕಣ್ಣು ಬಿಡುವ ಮುನ್ನವೇ ಐಟಿ ರೇಡ್ ಆಗಿತ್ತು : ಲಕ್ಷ್ಮೀ ಹೆಬ್ಬಾಳ್ಕರ್

    ಬೆಂಗಳೂರು: ನಾನು ಎರಡು ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ವೇಳೆ ನನ್ನ ಮೇಲೆ ಐಟಿ ರೇಡ್ ಆಗಿತ್ತು. ಅದು ಕೇವಲ ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗದ ಹೋರಾಟ ಮುಂದುವರಿಸುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

    ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಅಧ್ಯಕ್ಷೆಯಾಗಿ ಇಂದು ನಗರದ ಶಾಂತಿನಗರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಪಕ್ಷದ ನಾಯಕರು ನನಗೆ ಜವಾಬ್ದಾರಿಯನ್ನು ನೀಡಿದ್ದು, ಸಿಎಂ ಕುಮಾರಸ್ವಾಮಿ ಸೇರಿದಂತೆ ಎಲ್ಲಾ ನಾಯಕರಿಗೂ ಕೃತಜ್ಞತೆ ತಿಳಿಸುತ್ತೇನೆ ಎಂದರು.

    ಇದೇ ವೇಳೆ ಐಟಿ ದಾಳಿಗೆ ಸಂಬಂಧಿಸಿದಂತೆ ಬೇನಾಮಿ ಆಸ್ತಿ ಕುರಿತ ಪ್ರಶ್ನೆಗೆ ಉತ್ತರಿಸಿ, ನಾನು ಯಾವುದೇ ಬೇನಾಮಿ ಆಸ್ತಿ ಕೂಡ ಮಾಡಿಲ್ಲ. ಎರಡು ಬಾರಿ ಚುನಾವಣೆಯಲ್ಲಿ ಸೋತು ಸುಣ್ಣವಾಗಿ, ಇನ್ನೂ ಶಾಸಕಿಯಾಗಿ ಕಣ್ಣು ಬಿಟ್ಟಿರಲಿಲ್ಲ. ಆಗ ನನ್ನ ಮೇಲೆ ರಾಜಕೀಯವಾಗಿ ರೇಡ್ ಆಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದನ್ನು ವಕೀಲರು ಹಾಗೂ ನನ್ನ ಸಹೋದರ ನೋಡಿಕೊಳುತ್ತಾರೆ. ಉಳಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಡಿಕೆ ಶಿವಕುಮಾರ್ ಹಾಗೂ ತಮ್ಮ ಯಾವುದೇ ಬೇನಾಮಿ ಆಸ್ತಿಯ ವಿಷಯವು ನನಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಲೋಕಸಭೆಗೆ ಸ್ಪರ್ಧಿಸುವ ಆಸೆ ಇಲ್ಲ: ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧಿಸುತ್ತರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಅಂತಹ ಯಾವುದೇ ಆಸೆ ಇಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನ ನನಗೆ ಉತ್ತಮ ಅವಕಾಶ ನೀಡಿದ್ದಾರೆ. ಈ ಕರ್ತವ್ಯವನ್ನು ನಿರ್ವಹಿಸುತ್ತೇನೆ ಅಷ್ಟೇ. ಹೈಕಮಾಂಡ್ ಯಾವುದೇ ಹಂತದಲ್ಲಿ ನಿರ್ಧಾರ ಕೈಗೊಂಡರೂ ನಾನು ಬದ್ಧನಾಗಿರುತ್ತೇನೆ ಎಂದರು.

    ಬೆಳಗಾವಿ ರಾಜಕೀಯ ಅಸಮಾಧಾನವೂ ಸಣ್ಣ ಪ್ರಮಾಣದಲ್ಲಿ ಇದ್ದು, ಪಕ್ಷದ ಮುಖಂಡರು ಈ ಕುರಿತು ಸೂಕ್ತ ಕ್ರಮಕೈಗೊಳ್ಳುತ್ತಾರೆ. ಆದರೆ ಪಕ್ಷದ ವಿಚಾರಕ್ಕೆ ಬಂದಾಗ ನಾವೆಲ್ಲರು ಒಂದೇ. ಒಂದೇ ತಾಯಿ ಹೊಟ್ಟೆಯಲ್ಲಿ ಹುಟ್ಟಿದ ನಾಲ್ವರು ಮಕ್ಕಳಲ್ಲೇ ಹೊಂದಾಣಿಕೆ ಆಗುವುದಿಲ್ಲ. ಆದೇ ರೀತಿ ನಮ್ಮಲ್ಲೂ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಸಾಮಾನ್ಯ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟ್ ಬೀಸಿದ ಸಚಿವೆ ಜಯಮಾಲಾ

    ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟ್ ಬೀಸಿದ ಸಚಿವೆ ಜಯಮಾಲಾ

    ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ನನ್ನ ನಡುವೆಯೂ ಯಾವುದೇ ಜಟಾಪಟಿ ಇಲ್ಲ ಎಂದು ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಹೇಳಿದ್ದಾರೆ.

    ಬೆಳಗಾವಿ ಸುವರ್ಣ ಗಾರ್ಡನ್ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವ ಜಟಾಪಟಿ ಇಲ್ಲ. ನನ್ನ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆಯೂ ಯಾವುದೇ ಅಸಮಾಧಾನವಿಲ್ಲ. ಎಲ್ಲದಕ್ಕೂ ಆ ಹೆಣ್ಣು ಮಗಳನ್ನು ಯಾಕೆ ಎಳೆದು ತರುತ್ತೀರಾ ಎಂದು ಹೇಳುವ ಮೂಲಕ ಹೆಬ್ಬಾಳ್ಕರ್ ಪರ ಬ್ಯಾಟ್ ಬೀಸಿದರು.

    ಇದೇ ವೇಳೆ ಕರಾವಳಿ ಭಾಗಕ್ಕೆ ಸಭಾಪತಿ ಆಯ್ಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಸಭಾಪತಿ ಆಯ್ಕೆ ವಿಚಾರದಲ್ಲಿ ಯಾವುದೇ ರಾಜಕಾರಣ ಇಲ್ಲ. ಎಸ್.ಆರ್ ಪಾಟೀಲ ಅವರು ಪಕ್ಷದ ಹಿರಿಯರು ಹಾಗೂ ಏಳು ಬಾರಿ ಆಯ್ಕೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಸ್ಥಾನ ಸಿಗಬಹುದು. ಉತ್ತರ ಕರ್ನಾಟಕ ರಾಜ್ಯದ ಹೃದಯ ಭಾಗ, ಉತ್ತರ ಯಾವತ್ತು ಮೇಲ್ಬಾಗದಲ್ಲಿರುತ್ತೆ. ಆ ಹೃದಯ ಭಾಗಕ್ಕೆ ತೊಂದರೆಯಾದರೆ ನಮ್ಮ ಬದುಕೇ ನಿಂತು ಹೋಗುತ್ತದೆ. ರಾಜ್ಯ ಸರ್ಕಾರ ರೈತರ ಬಹುದೊಡ್ಡ ಸಾಲಮನ್ನಾ ಮಾಡಿದ್ದು, ಇಲ್ಲಿ ಯಾವುದೇ ತಾರತಮ್ಯ ಇಲ್ಲ ಎಂದರು. ಇದನ್ನು ಓದಿ: ಜಗತ್ತಲ್ಲಿ ಎಲ್ಲದಕ್ಕೂ ಔಷಧವಿದೆ, ಆದರೆ ಹೊಟ್ಟೆಕಿಚ್ಚಿಗಿಲ್ಲ: ಹೆಬ್ಬಾಳ್ಕರ್ ಗೆ ಜಯಮಾಲಾ ಟಾಂಗ್

    ಪ್ರತಿಭಟನಾಕಾರರ ಮನವಿ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಗಮನಕ್ಕೆ ಹೋರಾಟಗಾರರ ಬೇಡಿಕೆಯನ್ನು ತಲುಪಿಸುತ್ತೇನೆ. ಇವರ ಬೇಡಿಕೆ ಈಡೇರಿಸಲು ಸರ್ಕಾರದ ಪರ ಬದ್ಧರಾಗಿದ್ದು, ಖಾಯಂ ಮಾಡಬೇಕು ಎಂಬ ಬೇಡಿಕೆಯೂ ಇದೆ. ಈ ಕುರಿತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಿಎಂ ಗಮನಕ್ಕೂ ತರುತ್ತೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    ಹೈಕಮಾಂಡ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ತಲೆದಂಡ!

    – ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿ ಪುಷ್ಪಾ ಅಮರನಾಥ್ ನೇಮಕ

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಸ್ಥಾನದಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೆಳಗಿಳಿಸಿ, ಪುಷ್ಪಾ ಅಮರನಾಥ್ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.

    ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತವಾಗಿ ತೆರೆ ಬಿದ್ದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಧ್ಯಕ್ಷ ಪಟ್ಟದಿಂದ ಕೆಳಗಿಳಿಸುವಂತೆ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಸಹೋದರರು ಬೇಡಿಕೆ ಇಟ್ಟಿದ್ದರು. ಈಗ ಹೈ ಕಮಾಂಡ್ ಈ ಬೇಡಿಕೆಗೆ ಅಸ್ತು ಅಂದಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಳಗಡೆ ಇಳಿಸುವ ವಿಚಾರ ಚರ್ಚೆ ಆಗುತ್ತಿದ್ದಂತೆ ಅಧ್ಯಕ್ಷೆ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ ಜೋರಾಗಿತ್ತು. ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದರು. ಇದಾದ ಕೆಲವೇ ದಿನಗಳ ನಂತರ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನು ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದರು. ಈ ಎಲ್ಲ ಪ್ರಕ್ರಿಯೆ ಮೂಲಕ ಪುಷ್ಪಾ ಅಮರನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv