Tag: MLA NA Haris

  • ಇದು ಉದ್ದೇಶಪೂರ್ವಕ ಕೃತ್ಯ: ಹ್ಯಾರಿಸ್ ಪುತ್ರ ನಲಪಾಡ್ ಆರೋಪ

    ಇದು ಉದ್ದೇಶಪೂರ್ವಕ ಕೃತ್ಯ: ಹ್ಯಾರಿಸ್ ಪುತ್ರ ನಲಪಾಡ್ ಆರೋಪ

    ಬೆಂಗಳೂರು: ನಮ್ಮ ತಂದೆಯ ಮೇಲೆ ನಡೆದ ದಾಳಿ ಉದ್ದೇಶಪೂರ್ವಕ ಕೃತ್ಯ ಎಂದು ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ನಲಪಾಡ್, ಪ್ರತಿ ವರ್ಷದಂತೆ ನಮ್ಮ ತಂದೆಯ ಹುಟ್ಟುಹಬ್ಬದ ನಿಮಿತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಮೇಲಿದ್ದ ವಿಶೇಷ ಚೇರ್ ಮೇಲೆ ಕುಳಿತುಕೊಳ್ಳಲು ತಂದೆ ನಿರಾಕರಿಸಿದರು. ಹೀಗಾಗಿ ಸಾಮಾನ್ಯರಂತೆ ಪಕ್ಕದ ಚೇರ್ ಮೇಲೆ ಕುಳಿತಿದ್ದಾಗ ಯಾರೋ ವೇದಿಕೆಯ ಕಡೆಗೆ ಗ್ರೀನ್ ಕಲರ್ ಪ್ಲ್ಯಾಸ್ಟಿಕ್ ವಸ್ತು ಎಸೆದರು. ಅದು ತಂದೆಯ ಭುಜಕ್ಕೆ ಬಡಿದು ಕೆಳಗೆ ಬಿದ್ದು ಸ್ಫೋಟಗೊಂಡಿದೆ. ಹೀಗಾಗಿ ಕಾಲಿಗೆ ಗಾಯವಾಗಿದೆ ಎಂದರು.

    ಘಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಮೋಹನ್, ಚಿಟ್ಟಿಬಾಬು ಹಾಗೂ ಸಂಪತ್ ಗಾಯಗೊಂಡಿದ್ದಾರೆ. ಪಕ್ಕದ ಚೇರ್ ಮೇಲೆ ಕುಳಿದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಒಂದು ವೇಳೆ ತಂದೆ ಹ್ಯಾರಿಸ್ ಅವರ ಮೇಲೆ ಬಿದ್ದ ತಕ್ಷಣವೇ ಸ್ಫೋಟಕ ಸ್ಫೋಟಗೊಂಡಿದ್ದರೆ ಘಟನೆ ತೀವ್ರವಾಗಿರುತ್ತಿತ್ತು. ಬ್ಲಾಸ್ಟ್ ತೀವ್ರತೆಯಿಂದ ತಂದೆಯ ಕಿವಿಯಲ್ಲಿ ಗುಂಯ್ ಎನ್ನುವ ಶಬ್ದ ಕೇಳುತ್ತಿದೆಯಂತೆ ಎಂದು ಹೇಳಿದರು.

    ಕ್ಷೇತ್ರದಲ್ಲಿ ನಮಗೆ ಯಾವುದೇ ವೈರಿಗಳಿಲ್ಲ. ನಮ್ಮ ತಂದೆ ಎಲ್ಲರ ಜೊತೆಗೆ ಸೇರಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆದರೆ ಇದು ಉದ್ದೇಶಪೂರ್ವಕ ಕೃತ್ಯವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

  • ಬೆಂಗ್ಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ- ಶಾಸಕ ಹ್ಯಾರಿಸ್ ಕಾಲಿಗೆ ಗಾಯ

    ಬೆಂಗ್ಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ- ಶಾಸಕ ಹ್ಯಾರಿಸ್ ಕಾಲಿಗೆ ಗಾಯ

    ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣ ಇಡೀ ರಾಜ್ಯ ಹಾಗೂ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಸೇರಿ ನಾಲ್ವರು ಗಾಯಗೊಂಡಿದ್ದಾರೆ.

    ಬೆಂಗಳೂರಿನ ವಿವೇಕನಗರದಲ್ಲಿ ಇಂದು ರಾತ್ರಿ 9:30ಕ್ಕೆ ಘಟನೆ ನಡೆದಿದ್ದು, ಹ್ಯಾರಿಸ್ ಅವರ ಕಾಲಿಗೆ ಗಾಯವಾಗಿದೆ. ಅವರನ್ನು ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ವಿವೇಕನಗರದ ವನಾರ್ ಪೇಟೆ ದೇವರ ಕಾರ್ಯಕ್ರಮದಲ್ಲಿ ಶಾಸಕ ಹ್ಯಾರಿಸ್ ಭಾಗಿಯಾಗಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸೆಂಟ್ ಫಿಲೋಮಿನಾ  ಆಸ್ಪತ್ರೆಯ ಮುಂದೆ ಶಾಸಕ ಹ್ಯಾರಿಸ್ ಬೆಂಬಲಿಗರು ಜಮಾಯಿಸಿದ್ದಾರೆ.