Tag: MLA Rajegowda

  • ಜಾಲತಾಣದಲ್ಲಿ ಪೋಸ್ಟ್ ಮಾಡಿದವರು, ಗಲಭೆಕೋರರು, ಇಬ್ಬರ ಮೇಲೂ ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ರಾಜೇಗೌಡ

    ಜಾಲತಾಣದಲ್ಲಿ ಪೋಸ್ಟ್ ಮಾಡಿದವರು, ಗಲಭೆಕೋರರು, ಇಬ್ಬರ ಮೇಲೂ ಕ್ರಮ ಕೈಗೊಳ್ಳಿ: ಕಾಂಗ್ರೆಸ್ ಶಾಸಕ ರಾಜೇಗೌಡ

    ಚಿಕ್ಕಮಗಳೂರು: ಗಲಭೆಯನ್ನು ಸಹಿಸುವುದಿಲ್ಲ ಬೆಂಗಳೂರು ಗಲಭೆಗೆ ಯಾರೇ ಕಾರಣಕರ್ತರಾದರೂ ಸೂಕ್ತ ಕ್ರಮಕೈಗೊಳ್ಳಬೇಕು. ಸರ್ಕಾರಕ್ಕೆ ನಮ್ಮ ಬೆಂಬಲವಿದೆ ಎಂದು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಆಗ್ರಹಿಸಿದ್ದಾರೆ.

    ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಅತ್ಯಂತ ಕಠಿಣ ಹಾಗೂ ತೀವ್ರ ಪದಗಳಿಂದ ಖಂಡಿಸುತ್ತೇನೆ. ಯಾವುದೇ ಜಾತಿ-ಧರ್ಮ ಇರುಬಹುದು. ಯಾವುದೇ ಧಾರ್ಮಿಕ ನಂಬಿಕೆ ಹಾಗೂ ಗುರುಗಳ ಮೇಲೆ ಹಗುರುವಾದ ಹೇಳಿಕೆಗಳನ್ನ ಕೊಡುವುದನ್ನ ಮೊದಲು ಎಲ್ಲ ಸಮುದಾಯದವರು ನಿಲ್ಲಿಸಬೇಕು. ಆಗ ಮಾತ್ರ ಈ ರೀತಿಯ ಭಾವನಾತ್ಮಕ ಘಟನೆಗಳು ನಡೆಯುವುದಿಲ್ಲ ಎಂದರು.

    ಈ ಘಟನೆ ತಪ್ಪು. ನ್ಯಾಯ ಕೇಳಲು ಕೋರ್ಟ್, ಕಾನೂನು, ಪೊಲೀಸ್ ವ್ಯವಸ್ಥೆ ಇದೆ. ದೂರು ನೀಡಿ ನ್ಯಾಯ ಕೇಳಬೇಕು. ಈ ರೀತಿ ದೌರ್ಜನ್ಯ, ಗಲಭೆ ಒಳ್ಳೆಯದಲ್ಲ ಇದನ್ನ ಯಾರೂ ಸಹಿಸಲ್ಲ. ಇದನ್ನು ಯಾರೂ ಒಪ್ಪುವುದಿಲ್ಲ. ಯಾರೋ ಶಾಸಕರ ಸಂಬಂಧಿ ಏನೋ ಹೇಳಿಕೆ ಕೊಟ್ಟನೆಂದು ದಾಂದಲೆ ತರವಲ್ಲ ಎಂದು ಗಲಭೆಕೋರರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಘಟನೆ ಕುರಿತು ಸರ್ಕಾರ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಅದೇ ರೀತಿ ಹೇಳಿಕೆ ಕೊಟ್ಟವನ ಮೇಲೂ ಕ್ರಮವಾಗಬೇಕು ಎಂದಿದ್ದಾರೆ. ಇಂತಹ ಘಟನೆಯಲ್ಲಿ ಅಮಾಯಕರಿಗೆ ಹೊಡೆತ ಬೀಳುತ್ತೆ. ಆದ್ದರಿಂದ ಗಲಭೆಗೆ ಕಾರಣಕರ್ತರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

  • ಐಟಿ ದಾಳಿಯಿಂದ ಸಿದ್ಧಾರ್ಥ್ ಕುಗ್ಗಿ ಹೋಗಿದ್ರು: ರಾಜೇಗೌಡ ಕಣ್ಣೀರು

    ಐಟಿ ದಾಳಿಯಿಂದ ಸಿದ್ಧಾರ್ಥ್ ಕುಗ್ಗಿ ಹೋಗಿದ್ರು: ರಾಜೇಗೌಡ ಕಣ್ಣೀರು

    ಮಂಗಳೂರು: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ.

    ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು ಹಾಕಿದರು.

    ದೇಶಕ್ಕಾಗಿ ದುಡಿದು, ತೆರಿಗೆ ಕಟ್ಟಿದರೂ ಬೆಲೆ ಇಲ್ಲ ಎಂಬುದು ಅವರ ಮನಸ್ಸಿಗೆ ಬಂದಿತ್ತು. ಸಿದ್ಧಾರ್ಥ್ ಶಿಸ್ತು ಸಂಯಮದ ವ್ಯಕ್ತಿ. ಬಹಳ ತಾಳ್ಮೆಯಿಂದ ವರ್ತಿಸುತ್ತಿದ್ದರು. ಗ್ರಾಮೀಣ ಮತ್ತು ಗುಡ್ಡಗಾಡು ಜನಕ್ಕೆ ಉದ್ಯೋಗ ಕೊಟ್ಟ ಮಹಾನೀಯ. ಐಟಿ ದಾಳಿಯ ನಂತರ ಸಿದ್ಧಾರ್ಥ ಕುಗ್ಗಿದ್ದರು. ಮನಸ್ಸಿಗೆ ಬಹಳ ನೋವು ಮಾಡಿಕೊಂಡಿದ್ದರು. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಆಘಾತ ತಂದಿದೆ ಎಂದು ಶಾಸಕರು ತಿಳಿಸಿದರು.

    ಸಿದ್ಧಾರ್ಥ್ ಅವರು ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದು, ಇದೀಗ ಅವರ ಹುಡುಕಾಟ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ರಾಜಕೀಯ ನಾಯಕರು, ಸಾರ್ವಜನಿಕರು, ಮುಳುಗುತ್ಞರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿದ್ಧಾರ್ಥ್ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಕೂಡ ಬರುವ ಸಾಧ್ಯತೆಗಳಿವೆ.