Tag: MLA Sowmya Reddy

  • ನನ್ನ ಸ್ನೇಹಿತೆ ತಂದೆಗೆ ಬೆಡ್ ಸಿಗದೆ ಸತ್ತೇ ಹೋದ್ರು: ಸೌಮ್ಯ ರೆಡ್ಡಿ

    ನನ್ನ ಸ್ನೇಹಿತೆ ತಂದೆಗೆ ಬೆಡ್ ಸಿಗದೆ ಸತ್ತೇ ಹೋದ್ರು: ಸೌಮ್ಯ ರೆಡ್ಡಿ

    ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಜನ ಇವತ್ತು ಬೆಡ್, ಆಕ್ಸಿಜನ್ ಇಲ್ಲದೆ ಸಾಯುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಸರ್ಕಾರದ ಕಿಡಿಕಾರಿದರು.

    ಆಸ್ಪತ್ರೆಗಳಲ್ಲಿ ಇಂದಿಗೂ ಬೆಡ್ ಸಿಗುತ್ತಿಲ್ಲ. ನಾನೇ ಎಷ್ಟೇ ಬಾರಿ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ. ಇದುವರೆಗೂ ನಮ್ಮ ಯಾವುದೇ ಸಲಹೆಯನ್ನು ಸರ್ಕಾರ ಸ್ವೀಕರಿಸಿಲ್ಲ. ಕೇವಲ ನಮ್ಮನ್ನು ಕರೆದು ಕುರಿಸಿ ಕಳುಹಿಸಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

    ನನ್ನ ಸ್ನೇಹಿತೆ ತಂದೆಗೆ ಬೆಡ್ ಸಿಗದೆ ಸತ್ತೇ ಹೋದರು. ನಾನೇ ಅಲ್ಲಿಗೆ ಹಲವು ಆಸ್ಪತ್ರೆಗಳಿಗೆ ಭೇಟಿ ನೀಡಿ ನೋಡಿದ್ದೇನೆ. ಬಿಬಿಎಂಪಿ ದೃಢಿಕರಿಸಿದ ಬಳಿಕವೂ 2 ಗಂಟೆಯಾದರೂ ಆಕ್ಸಿಜನ್ ನೀಡಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಜನರನ್ನು ಸುಲಿಗೆ ಮಾಡುತ್ತಿದ್ದಾರೆ. ಸರಿ ಸುಮಾರು 16 ಲಕ್ಷದ ವರೆಗೂ ಹಣ ಲೂಟಿ ಮಾಡುತ್ತಿದ್ದಾರೆ. ಕೊರೊನಾ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು 3 ರಿಂದ 4 ಲಕ್ಷ ರೂ. ಪ್ಯಾಕೇಜ್ ಮಾಡುತ್ತಿವೆ. ಖಾಸಗಿ ಆಸ್ಪತ್ರೆ ನಿಯಂತ್ರಿಸುವ ಕೆಲಸ ಮಾಡುತ್ತಿಲ್ಲ. ಈ ಬಗ್ಗೆ ಸರ್ಕಾರ ಏನು ಉತ್ತರ ನೀಡುತ್ತೆ ಉತ್ತರಿಸಲಿ ಎಂದು ಪ್ರಶ್ನಿಸಿದರು.

  • ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ, ನಾಳೆ ಹಾಜರಾಗುತ್ತೇನೆ: ಶಾಸಕಿ ಸೌಮ್ಯಾ ರೆಡ್ಡಿ

    ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ, ನಾಳೆ ಹಾಜರಾಗುತ್ತೇನೆ: ಶಾಸಕಿ ಸೌಮ್ಯಾ ರೆಡ್ಡಿ

    ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮೊದಲ ದಿನ ಬಜೆಟ್ ಅಧಿವೇಶನಕ್ಕೆ ಗೈರಾಗಿದ್ದೇನೆ ಎಂದು ಜಯನಗರದ ಶಾಸಕಿ ಸೌಮ್ಯಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

    ಗೈರು ಹಾಜರಿ ಬಗ್ಗೆ ಪಬ್ಲಿಕ್ ಟಿವಿಗೆ ದೂರವಾಣಿ ಮೂಲಕ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ ಅವರು, ಪಕ್ಷದಿಂದ ಸದನಕ್ಕೆ ಹಾಜರು ಆಗವಂತೆ ವಿಪ್ ಜಾರಿ ಮಾಡಿದ್ದಾರೆ. ಆದರೆ ಈ ಬಗ್ಗೆ ನಾನು ಪಕ್ಷದ ಮುಖಂಡರಿಗೆ ಮಾಹಿತಿ ನೀಡಿ ಗೈರಾಗುವ ಬಗ್ಗೆ ಪೂರ್ವಾನುಮತಿ ಪಡೆದಿದ್ದೇನೆ ಎಂದು ತಿಳಿಸಿದರು.

    ಸದನದ ಮೊದಲ ದಿನವಾಗಿದ್ದು, ನನಗೆ ಅನಾರೋಗ್ಯದ ಸಮಸ್ಯೆ ಇದೆ. ಒಂದು ದಿನ ಬರಲಿಲ್ಲ ಎಂದರೆ ಅಸಮಾಧಾನ ಎಂದು ಪರಿಗಣಿಸಬಾರದು, ಆದರೆ ಪಕ್ಷದ ವಲಯದಲ್ಲಿ ಈ ಬಗ್ಗೆ ನಾಯಕರಿಗೆ ಸ್ಪಷ್ಟವಾಗಿ ಮಾಹಿತಿ ನೀಡಿದ್ದೇನೆ. ನಾಳೆ ಸದನಕ್ಕೆ ಆಗಮಿಸುತ್ತೇನೆ ಎಂದರು. ಇದೇ ವೇಳೆ ಅಸಮಾಧಾನದ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಮೊದಲು ಸಚಿವ ಸ್ಥಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಆದರೆ ಒಂದು ಕುಟುಂಬ ಎಂದರೆ ಇದೆಲ್ಲ ಸಾಮಾನ್ಯ. ಸದ್ಯ ಅಂತಹ ಯಾವುದೇ ಅಸಮಾಧಾನ ಇಲ್ಲ, ಎಲ್ಲರೂ ಒಟ್ಟಾಗಿ ನಡೆಯುತ್ತೇವೆ ಎಂದರು.

    ಇತ್ತ ಸದನಕ್ಕೆ ಎರಡು ಗಂಟೆ ತಡವಾಗಿ ಆಗಮಿಸಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಪಕ್ಷದ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ಸದನಕ್ಕೆ ಬರುವುದು ಸ್ವಲ್ಪ ತಡ ಆಯಿತು ಅಷ್ಟೇ. ಆದರೆ ಬಿಜೆಪಿ ಶಾಸಕರು ಸದನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸಿದ್ದು ಸರಿ ಅಲ್ಲ. ಅವರ ಭಾಷಣ ಮುಗಿದ ಮೇಲೆ ಮಾತನಾಡಲು ವಿಪಕ್ಷಕ್ಕೆ ಅವಕಾಶ ಇರುತ್ತದೆ. ನಾವು ವಿರೋಧ ಪಕ್ಷದಲ್ಲಿ ಇದ್ದ ವೇಳೆ ಇಂತಹ ವರ್ತನೆ ತೋರಿರಲಿಲ್ಲ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೊದಲ ದಿನದ ಅಧಿವೇಶನಕ್ಕೆ ತಂದೆ, ಮಗಳು ಚಕ್ಕರ್!

    ಮೊದಲ ದಿನದ ಅಧಿವೇಶನಕ್ಕೆ ತಂದೆ, ಮಗಳು ಚಕ್ಕರ್!

    ಬೆಂಗಳೂರು: ಐವರು ಅತೃಪ್ತ ಶಾಸಕರು ಸದನಕ್ಕೆ ಗೈರು ಹಾಜರಿ ಹಾಕುವ ಜೊತೆಯಲ್ಲಿ ಈಗ ತಂದೆ ಮತ್ತು ಮಗಳು ಗೈರಾಗಿದ್ದು ಕಾಂಗ್ರೆಸ್ ನಾಯಕರು ಆತಂಕಕ್ಕೆ ಕಾರಣವಾಗಿದೆ. ಬಿಟಿಎಂ ಶಾಸಕ, ಹಿರಿಯ ಕೈ ನಾಯಕ ರಾಮಲಿಂಗಾ ರೆಡ್ಡಿ ಜೊತೆಗೆ ಅವರ ಪುತ್ರಿ ಜಯನಗರಾದ ಶಾಸಕಿ ಸೌಮ್ಯಾ ರೆಡ್ಡಿ ಮೊದಲ ದಿನವೇ ಅಧಿವೇಶನಕ್ಕೆ ಚಕ್ಕರ್ ಹಾಕಿದ್ದಾರೆ.

    ಬೆಂಗಳೂರಿನಲ್ಲೇ ತಂದೆ, ಮಗಳು ಇದ್ದರು ಕೂಡ ಸದನಕ್ಕೆ ಗೈರಾಗಲು ಕಾರಣವೇನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಸದನಕ್ಕೆ ಗೈರಾಗುವ ಮೂಲಕ ಪಕ್ಷದ ನಾಯಕರ ವಿರುದ್ಧ ಇವರಿಬ್ಬರು ನೇರವಾಗಿಯೇ ಅಸಮಾಧಾನ ಹೊರ ಹಾಕಿದ್ದರಾ ಎನ್ನುವ ಪ್ರಶ್ನೆ ಎದ್ದಿದೆ.

    ಸಮ್ಮಿಶ್ರ ಸರ್ಕಾರದ ರಚನೆ ವೇಳೆ ಅನುಭವಿ ಹಾಗೂ ಹಿರಿಯ ನಾಯಕರಾಗಿದ್ದ ರಾಮಲಿಂಗಾ ರೆಡ್ಡಿ ಅವರನ್ನು ದೂರವಿಟ್ಟಿದ್ದರು. ಈ ಕುರಿತು ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆ ಆಗಿದ್ದ ಸೌಮ್ಯ ರೆಡ್ಡಿ ಅವರು ನಾಯಕರ ವಿರುದ್ಧ ಬಹಿರಂಗವಾಗಿಯೇ ಆಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಇಬ್ಬರನ್ನು ಅಸಮಾಧಾನ ಪಡಿಸಲು ಮುಂದಾಗಿದ್ದ ಹೈಕಮಾಂಡ್ ಸೌಮ್ಯ ರೆಡ್ಡಿ ಅವರಿಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿತ್ತು. ಇದಕ್ಕೂ ಮುನ್ನ ಅಂದರೆ ಸಂಪುಟ ವಿಸ್ತರಣೆ ವೇಳೆ ಸಂಸದೀಯ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿತ್ತು. ಆದರೆ ಇದನ್ನು ಸೌಮ್ಯ ರೆಡ್ಡಿ ಅವರು ತಿರಸ್ಕರಿಸಿದ್ದರು.

    ನನಗೆ ನನ್ನ ಕ್ಷೇತ್ರದ ಜನರಿಗೆ ಕೆಲ್ಸ ಮಾಡಿ ಅವರ ಋಣವನ್ನು ತೀರಿಸಬೇಕಾಗಿದೆ. ನನ್ನ ತಂದೆ 2 ಬಾರಿ ಡಿಸಿಸಿ ಅಧ್ಯಕ್ಷರಾಗಿ ಹಾಗೂ 7 ಬಾರಿ ಶಾಸಕರಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹಳ ದುಡಿದಿದ್ದಾರೆ. ಆದ್ರೂ ನನ್ನ ತಂದೆಯವರಿಗೆ ಸಚಿವ ಸ್ಥಾನ ಸಿಗದಿರುವುದು ಬೆಸರದ ಸಂಗತಿ. ಕೇವಲ ಒಂದು ಶಾಸಕರಿಂದಾಗಿ ಈಗ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ಶಾಸಕರಿದ್ದಾರೆ. ನಾನು ಅವರನ್ನು ಮಂತ್ರಿಯಾಗಿ ನೋಡಲು ಇಷ್ಟಪಡುತ್ತೇನೆ. ಬೆಂಗಳೂರಿನಲ್ಲಿ ಎಲ್ಲ 28 ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಗೆಲ್ಲಲು ಶ್ರಮಿಸಬೇಕಾದ ಅಗತ್ಯ ಇದೆ ಅಂತ ಬರೆದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv