Tag: MLA Sreeramulu

  • ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟವನ್ನು ನಮ್ಮ ಮೇಲೆ ಕೂರಿಸ್ತಿದ್ದಾರೆ – ಶ್ರೀರಾಮುಲು

    ಸಿದ್ದರಾಮಯ್ಯ, ಡಿಕೆಶಿ ಕಚ್ಚಾಟವನ್ನು ನಮ್ಮ ಮೇಲೆ ಕೂರಿಸ್ತಿದ್ದಾರೆ – ಶ್ರೀರಾಮುಲು

    ಬಳ್ಳಾರಿ: ರಾಜ್ಯ ಸಮ್ಮಿಶ್ರ ಸರ್ಕಾರ ಬಿಳಿಸುವ ಬಗ್ಗೆ ಯಾರು ಮಾತನಾಡಬಾರದೆಂದು ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಹೀಗಾಗಿ ಆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.

    ಬಳ್ಳಾರಿ ನೂತನ ಸಂಸದ ದೇವೇಂದ್ರಪ್ಪ ಅವರ ಕಚೇರಿ ಉದ್ಘಾಟನೆ ಮಾಡಿ ಮಾತನಾಡಿದ ಶ್ರೀರಾಮುಲು, ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ಸಂಪರ್ಕ ಇದೆ ಎಂದು ಹೇಳುತ್ತಿದ್ದಾರೆ. ಧಮ್ ಇದ್ದರೆ ಬಿಜೆಪಿಯ ಯಾವ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆಂದು ಬಹಿರಂಗಪಡಿಸಲಿ ಎಂದು ಅವರು ಸವಾಲು ಎಸೆದರು.

    ದೇಶದಲ್ಲಿ ಎಲ್ಲಿಯೂ ಕಾಂಗ್ರೆಸ್ ಇಲ್ಲ. ರಾಜ್ಯದಲ್ಲೂ ಸಹ ಸಮ್ಮಿಶ್ರ ಸರ್ಕಾರವಿದೆ. ಇದೊಂದು ಘಠಬಂಧನವಾದರೂ ಗಟ್ಟಿಯಾಗಿರಲಿ ಇರಲಿ ಎಂದು ವ್ಯಂಗವಾಡಿದರು. ಅಲ್ಲದೇ ನಾವೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿಲ್ಲ. ಬದಲಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಚ್ಚಾಟವನ್ನು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ನಾವೂ ಯಾವ ಶಾಸಕರನ್ನ ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ ಎಂದರು.

    ಇದೇ ವೇಳೆ ಸಿಎಂ ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗ್ರಾಮ ವ್ಯಾಸ್ತವ್ಯ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ. ಗ್ರಾಮ ವ್ಯಾಸ್ತವ್ಯದೊಂದಿಗೆ ಸಿಎಂ ಅವರ ಆರೋಗ್ಯವನ್ನು ಸಹ ಕಾಯ್ದುಕೊಳ್ಳಲಿ ಎಂದರು.

    ಸಂಸದ ದೇವೇಂದ್ರಪ್ಪ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಚಾಲನೆ ನೀಡುತ್ತೇವೆ. ಜೊತೆಗೆ ಬಿಜೆಪಿ ರಾಜಾಧ್ಯಕ್ಷ ಬಿಎಸ್ ವೈ ಮುಖ್ಯಮಂತ್ರಿಯಾಗಲಿ ಎಂದು ಎಲ್ಲಾ ದೇವರಲ್ಲಿ ಹರಿಕೆ ಹೊರುವೆ ಎಂದರು.

  • ಉಪಚುನಾವಣೆ ಕದನದ ಬಳಿಕವೂ ನಿಂತಿಲ್ಲ ಡಿಕೆಶಿ-ರಾಮುಲು ಶೀತಲ ಸಮರ

    ಉಪಚುನಾವಣೆ ಕದನದ ಬಳಿಕವೂ ನಿಂತಿಲ್ಲ ಡಿಕೆಶಿ-ರಾಮುಲು ಶೀತಲ ಸಮರ

    ಬೆಂಗಳೂರು: ಬಳ್ಳಾರಿ ಹಂಪಿ ಉತ್ಸವವನ್ನು ಆಚರಣೆ ಮಾಡದಿರಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ಬಗ್ಗೆ ಶಾಸಕ ಶ್ರೀರಾಮುಲು ಕಿಡಿಕಾರಿದ್ದು, ಕಾಂಗ್ರೆಸ್ ಪಕ್ಷದ ಕೃತಜ್ಞತಾ ಸಮಾವೇಶ ಮಾಡಿದಾಗ ಬರದ ಬರಗಾಲ ಹಂಪಿ ಉತ್ಸವ ಆಚರಿಸಲು ಬಂತೆ ಎಂದು ಪ್ರಶ್ನೆ ಮಾಡಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಶ್ರೀರಾಮುಲು ಅವರು, ದುಂದು ವೆಚ್ಚ ಮಾಡಿ ಬಳ್ಳಾರಿಯಲ್ಲಿ ಕೃತಜ್ಞತಾ ಸಮಾವೇಶ ಮಾಡಿದಾಗ ಅಡ್ಡ ಬರದ ಬರಗಾಲ ಹಂಪಿ ಉತ್ಸವ ಆಚರಿಸಲು ಬಂತೆ? ನಿಮ್ಮ ರೈತಪರ ಕಾಳಜಿಯನ್ನು ರೈತರ ಸಾಲಮನ್ನಾ ಮಾಡುವ ಮೂಲಕ ತೋರಿಸಿ. ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಹಕಾರ ನೀಡುವ ಮೂಲಕ ಕೆಲಸ ಮಾಡಿ ಎಂದು ಬರೆದು ಸಚಿವ ಡಿಕೆ ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

    ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿ, ರಾಜ್ಯದ ನೂರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷ ವಿಜೃಂಭನೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv