Tag: MLA Srivatsa

  • ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾನೇ RSS ಬ್ಯಾನ್ ಮಾಡೋದು – ಪ್ರಿಯಾಂಕ್ ಖರ್ಗೆಗೆ ಶಾಸಕ ಶ್ರೀವತ್ಸ ತಿರುಗೇಟು

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾನೇ RSS ಬ್ಯಾನ್ ಮಾಡೋದು – ಪ್ರಿಯಾಂಕ್ ಖರ್ಗೆಗೆ ಶಾಸಕ ಶ್ರೀವತ್ಸ ತಿರುಗೇಟು

    ಮೈಸೂರು: ಕೇಂದ್ರದಲ್ಲಿ ಕಾಂಗ್ರೆಸ್  (Congress) ಅಧಿಕಾರಕ್ಕೆ ಬಂದ್ರೆ ಆರ್‌ಎಸ್‌ಎಸ್‌ (RSS) ಬ್ಯಾನ್ ಮಾಡ್ತೇವೆ ಎಂದಿದ್ದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)  ಹೇಳಿಕೆಗೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

    ಮೈಸೂರಿನಲ್ಲಿ‌ (Mysuru) ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ತಾನೇ ಆರ್‌ಎಸ್‌ಎಸ್ ಬ್ಯಾನ್ ಮಾಡೋದು. ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಹುಭಾಷಾ ನಟ ಪ್ರಕಾಶ್ ರಾಜ್ ಗುಜರಾತ್‌ನಲ್ಲೂ ಹೋರಾಟ ಮಾಡಲಿ – ಎಂಬಿಪಿ ತಿರುಗೇಟು

    ಪ್ರಿಯಾಂಕ್ ಖರ್ಗೆ ಒಂದು ಗಂಟೆ ಆರ್‍ಎಸ್‍ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ. ಆರ್‍ಎಸ್‍ಎಸ್ ಹೇಗೆ ದೇಶದ್ರೋಹಿ ಸಂಘಟನೆ? ಅವರಿಗೆ ತಿಳುವಳಿಕೆ ಇಲ್ಲದೆ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಅವರಿಗೆ ಏನು ಗೊತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಹಿಂದೆ ಇದೆ ಕಾಂಗ್ರೆಸ್ ಆರ್‍ಎಸ್‍ಎಸ್ ಬ್ಯಾನ್ ಮಾಡಿ, ಅದನ್ನು ಮತ್ತೆ ವಾಪಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ್ ಖರ್ಗೆ ರಾಜಕಾರಣದಲ್ಲೇ ಇರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ್ ಖರ್ಗೆ ಮಾತು ನಿಜವಾಗೋದು. ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್‍ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಅವರು ಸುಮ್ಮನೆ ಕನಸು ಕಾಣಲಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ: ರೇಣುಕಾಚಾರ್ಯ

  • ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶವೇ ಸರ್ಕಾರಕ್ಕೆ ಸುಸೈಡ್ ನೋಟ್: ಶಾಸಕ ಶ್ರೀವತ್ಸ

    ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶವೇ ಸರ್ಕಾರಕ್ಕೆ ಸುಸೈಡ್ ನೋಟ್: ಶಾಸಕ ಶ್ರೀವತ್ಸ

    ಮೈಸೂರು: ಮುಡಾದ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅಮಾನತು ಆದೇಶವೇ ಈ ಸರ್ಕಾರಕ್ಕೆ ಸುಸೈಡ್ ನೋಟ್ ಆಗಲಿದೆ ಎಂದು ಶಾಸಕ ಶ್ರೀವತ್ಸ (MLA Srivatsa) ಹೇಳಿದ್ದಾರೆ.

    ಮೈಸೂರಿನಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಸರ್ಕಾರದ ಆದೇಶದಲ್ಲೇ ಸಿಎಂ ಪತ್ನಿಗೆ ಕೊಟ್ಟಿರುವ ಸೈಟ್ ಆಕ್ರಮ ಎಂದು ಹೇಳಲಾಗಿದೆ. ಅಧಿಕಾರಿ ಅಮಾನತು ಆದೇಶವನ್ನೆ ಕೋರ್ಟ್‍ಗೆ ಕೊಡ್ತೀವಿ ಎಂದು ಹೇಳಿದ್ದಾರೆ.

    ಅಧಿಕಾರಿ ಅಮಾನತು ಮಾತ್ರವಲ್ಲದೇ ಬಂಧನ ಕೂಡ ಆಗಬೇಕಿದೆ ಎಂದು ಅವರು ಈ ವೇಳೆ ಒತ್ತಾಯಿಸಿದ್ದಾರೆ.

    ಮುಡಾ ಹಗರಣ (MUDA Case) ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಆಯುಕ್ತ ಜಿ.ಟಿ ದಿನೇಶ್‍ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

    ಅವರ ವಿರುದ್ಧ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಸದರಿ ಅವರು ಅಧಿಕಾರದಲ್ಲಿ ಮುಂದುವರೆದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖೆಯ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.