Tag: MLC

  • ಜೆಡಿಎಸ್ ಬಿಡಲು ತೀರ್ಮಾನಿಸಿದ್ದೇನೆ, ಬಹುತೇಕ ಎಂಎಲ್‍ಸಿಗಳು ಸಹ ತೊರೆಯಲು ಚಿಂತಿಸಿದ್ದಾರೆ- ಪುಟ್ಟಣ್ಣ

    ಜೆಡಿಎಸ್ ಬಿಡಲು ತೀರ್ಮಾನಿಸಿದ್ದೇನೆ, ಬಹುತೇಕ ಎಂಎಲ್‍ಸಿಗಳು ಸಹ ತೊರೆಯಲು ಚಿಂತಿಸಿದ್ದಾರೆ- ಪುಟ್ಟಣ್ಣ

    ರಾಮನಗರ: ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ. ಎಲ್ಲ ವಿಧಾನ ಪರಿಷತ್ ಸದಸ್ಯರೂ ಈ ಕುರಿತು ಆಲೋಚನೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಜೆಡಿಎಸ್ ಪಕ್ಷ ಬಿಡಲು ತೀರ್ಮಾನ ಮಾಡಿದ್ದೇನೆ. ಆದರೆ ಮುಂದಿನ ನಡೆ ಗೊತ್ತಿಲ್ಲ. 2-3 ಜನ ಹೊರತುಪಡಿಸಿದರೆ ಉಳಿದೆಲ್ಲ ಪರಿಷತ್ ಸದಸ್ಯರು ಈ ನಿಟ್ಟಿನಲ್ಲಿ ಆಲೋಚನೆ ಮಾಡುತ್ತಿದ್ದಾರೆ. ಎಲ್ಲರೂ ಸೇರಿ ತೀರ್ಮಾನ ತೆಗೆದುಕೊಳ್ಳಬೇಕೆಂದು ನಿರ್ಧರಿಸಿದ್ದೇವೆ. ಜೆಡಿಎಸ್ ಬಿಡಲು ಕಾರಣ ಮುಂದಿನ ದಿನಗಳಲ್ಲಿ ಹೇಳುತ್ತೇವೆ. ಅದಕ್ಕೂ ಸಮಯ ಬರುತ್ತದೆ ಎಂದರು.

    ನನ್ನ ಬೆನ್ನ ಹಿಂದೆ, ಶ್ರೇಯಸ್ಸಿನ ಹಿಂದೆ ನಿಂತಿರುವವರು ಶಿಕ್ಷಕರು, ಸ್ನೇಹಿತರು. ಅವರ ಜೊತೆಗೆ ಚರ್ಚೆ ಮಾಡಿ ನಾನು ನಿರ್ಧಾರ ಹೇಳುತ್ತೇನೆ. ನಿರ್ಧಾರ ನನ್ನದಾದರೂ ಶಿಕ್ಷಕರು ಸ್ನೇಹಿತರ ಜೊತೆ ಚರ್ಚೆ ಮಾಡಬೇಕು. ಹೀಗಾಗಿ ಮುಂದಿನ ದಿನಗಳಲ್ಲಿ ಕಾರಣ ತಿಳಿಸುತ್ತೇನೆ ಎಂದು ಹೇಳಿದರು.

    ದೇವೇಗೌಡರು ಹಿರಿಯರು ಅವರ ಬಗ್ಗೆ ಗೌರವವಿದೆ. ಚಲುವರಾಯಸ್ವಾಮಿ ತೀರ್ಮಾನ ತೆಗೆದುಕೊಂಡು ಕಾಂಗ್ರೆಸ್ ಸೇರಿದ್ದಾರೆ. ಅಧಿಕಾರಾವಧಿ ಇರುವುದರಿಂದ ನಾವು ತೀರ್ಮಾನ ತೆಗೆದುಕೊಳ್ಳಲು 2020ರ ವರೆಗೆ ಸಮಯವಿದೆ. ಆದರೆ ಈಗ ಎಲ್ಲರೂ ಸೇರಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆವು. ಹೀಗಾಗಿ ಈಗಲೇ ಬಹುತೇಕ ಎಲ್ಲ ಎಂಎಲ್‍ಸಿಗಳೂ ಸೇರಿ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುತ್ತಿದ್ದಾರೆ. ಈ ಕುರಿತು ಹೊರಟ್ಟಿಯವರು ಮಾತನಾಡಿದ್ದಾರೆ. ಇಂದು ಚರ್ಚೆ ಮಾಡೋಣ ಎಂದಿದ್ದರು. ನೀವು ತೀರ್ಮಾನ ಮಾಡಿ ನಾನು ಅದಕ್ಕೆ ಬದ್ಧ ಎಂದು ಹೇಳಿದ್ದೇನೆ ಎಂದರು.

    ಹಾಲಿ ಎಂಎಲ್‍ಸಿಗಳು ಒಮ್ಮೆ ತೀರ್ಮಾನ ಮಾಡಿದ್ದಾರೆ ಮತ್ತೊಮ್ಮೆ ಸೇರಲು ನಿರ್ಧರಿಸಿದ್ದಾರೆ. ಕೆಲವರಿಗೆ ಯಾರಿಗೆ ನೋವಾದರೂ, ಯಾರು ಸತ್ತರೂ ಏನು ಅನಿಸುವುದಿಲ್ಲ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೆಸರನ್ನು ಹೇಳದೆ ಟಾಂಗ್ ನೀಡಿದರು.

  • ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಜೆಡಿಎಸ್ ಎಂಎಲ್‍ಸಿಗಳ ಕೋಪ ತಾಪ

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಜೆಡಿಎಸ್ ಎಂಎಲ್‍ಸಿಗಳ ಕೋಪ ತಾಪ

    ಮೈಸೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಹೋದ ಪ್ರಸಂಗ ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ನಡೆದಿದೆ.

    ಹೌಸಿಂಗ್ ಸೊಸೈಟಿಗಳಿಗೆ ಎನ್‍ಓಸಿ ಕೊಡುವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಮತ್ತು ಸಂದೇಶ್ ನಾಗರಾಜ್ ಅವರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಪರಸ್ಪರ ಏಕವಚನದಲ್ಲೇ ನಿಂದಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಮೂಡಾ ಅಧಿಕಾರಿಗಳ ಮುಂದೆ ಹೀನಾಮಾನವಾಗಿ ಬೈಯ್ದಾಡಿಕೊಂಡಿದ್ದಾರೆ.

    ಆಗಿದ್ದೇನು?:
    ಸರ್ಕಾರದ ಆದೇಶದಂತೆ ಎನ್‍ಓಸಿ ಇವತ್ತೇ ಕೊಡಿ ಎಂದು ಮರಿತಿಬ್ಬೇಗೌಡ ಪಟ್ಟು ಹಿಡಿದಿದ್ದರು. ಆದರೆ ಇದಕ್ಕೆ ಸಂದೇಶ್ ನಾಗರಾಜ್ ಸೇರಿದಂತೆ ಹಲವು ಶಾಸಕರ ವಿರೋಧ ವ್ಯಕ್ತಪಡಿಸಿದರು. ಈ ನಡುವೆ ಇದ್ದಕ್ಕಿಂದಂತೆ ಸಂದೇಶ್ ನಾಗರಾಜ್ ಮತ್ತು ಮರಿತಿಬ್ಬೇಗೌಡ ನಡುವೆ ಜಗಳ ಶುರುವಾಯಿತು. ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿದರು. ಅಷ್ಟೇ ಅಲ್ಲದೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು.

    ವಿಧಾನ ಪರಿಷತ್ ಸದಸ್ಯರ ಮಧ್ಯೆ ಜಗಳ ತಾರಕಕ್ಕೆ ಏರುತ್ತಿದ್ದಂತೆ ಮೂಡಾ ಅಧ್ಯಕ್ಷರು ಸಭೆಯನ್ನು ಮುಂದೂಡಿದ್ದಾರೆ. ವಿಧಾನ ಪರಿಷತ್ ಸದಸ್ಯರ ನಡೆ ಹಾಗೂ ವರ್ತನೆಯ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ರಾಜಕಾರಣಿಗಳ ಮಕ್ಕಳ ಮದ್ವೆಗೆ ವೇದಿಕೆಯಾಗ್ತಿದೆ ಕೃಷಿ ವಿವಿ- ಸಾರ್ವಜನಿಕರು ಆಕ್ರೋಶ

    ರಾಜಕಾರಣಿಗಳ ಮಕ್ಕಳ ಮದ್ವೆಗೆ ವೇದಿಕೆಯಾಗ್ತಿದೆ ಕೃಷಿ ವಿವಿ- ಸಾರ್ವಜನಿಕರು ಆಕ್ರೋಶ

    ರಾಯಚೂರು: ಕೃಷಿ ಸಂಬಂಧಿ ಕಾರ್ಯಕ್ರಮಗಳು ನಡೆಯಬೇಕಾದ ವಿವಿ ಸ್ಥಳವನ್ನ ಖಾಸಗಿ ಸಮಾರಂಭಗಳಿಗೆ ಬಾಡಿಗೆ ನೀಡಿದ್ದು, ಎಂಎಲ್‍ಸಿ ಹಾಗೂ ಎಂಎಲ್‍ಎ ಮಕ್ಕಳ ಕಾರ್ಯಕ್ರಮಕ್ಕೆ ಕೃಷಿ ವಿವಿಯನ್ನ ಬಳಸಿಕೊಳ್ಳಲಾಗುತ್ತಿದೆ.

    ಜಿಲ್ಲೆಯಲ್ಲಿ ಈ ಬಾರಿ ಭೀಕರ ಬರಗಾಲ ಇರುವುದರಿಂದ ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಈ ವರ್ಷ ಕೃಷಿ ಮೇಳದ ಆಯೋಜನೆಯನ್ನ ಕೈಬಿಟ್ಟಿದೆ. ಆದ್ದರಿಂದ ವಿವಿ ಆವರಣ ಸದ್ಯ ಮದುವೆ ಕಾರ್ಯಕ್ರಮ ಮಾಡುವ ವೇದಿಕೆಯಾಗಿದೆ. ವಿವಿ ಆವರಣದಲ್ಲಿ ದೊಡ್ಡದಾದ ಪೆಂಡಾಲ್, ವೇದಿಕೆ ಸಿದ್ಧಮಾಡಿ ಫೆಬ್ರವರಿ 1 ರಂದು ನಡೆಯಲಿರುವ ರಾಯಚೂರು ವಿಧಾನ ಪರಿಷತ್ ಸದಸ್ಯ ಬಸವರಾಜ್ ಪಾಟೀಲ್ ಇಟಗಿ ಪುತ್ರ ಸುಮನ್ ಹಾಗೂ ಶಹಾಪುರ ಶಾಸಕ ಶರಣಬಸಪ್ಪಾ ದರ್ಶನಾಪೂರ ಪುತ್ರಿ ಸೌಜನ್ಯ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ತಯಾರಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರು, ಮಾಜಿ ಸಿಎಂಗಳು ಸೇರಿ ನೂರಾರು ಜನ ಗಣ್ಯರು ಹಾಗೂ 20 ಸಾವಿರಕ್ಕೂ ಅಧಿಕ ಅತಿಥಿಗಳು ಬರುವ ನಿರೀಕ್ಷೆಯಿದೆ. ಆದ್ರೆ ವಿವಿ ದುರ್ಬಳಕೆಗೆ ಸಾರ್ವಜನಿಕರು ಹಾಗೂ ಕೃಷಿಕರಿಂದ ತೀವ್ರ ಆಕ್ರೋಶವ್ಯಕ್ತವಾಗಿದೆ.

    ಕೃಷಿ ಕಾರ್ಯಕ್ರಮಗಳು, ಕೃಷಿ ಚಟುವಟಿಕೆಗಳಿಗೆ ಮೀಸಲಾದ ರಾಯಚೂರು ವಿವಿ ಕ್ಯಾಂಪಸ್‍ನಲ್ಲಿ ಎಂಎಲ್‍ಸಿ ಹಾಗೂ ಎಂಎಲ್‍ಎ ಮಕ್ಕಳ ಮದುವೆ ನಡೆಯುತ್ತಿದೆ. ಈ ಕುರಿತು ಹೊಸದಾಗಿ ಬಂದಿರುವ ವಿವಿ ಕುಲಪತಿಗಳಿಗೆ ಕೇಳಿದರೇ ಈ ವಿಚಾರದ ಬಗ್ಗೆ ಮೊದಲೇ ಆಡಳಿತ ಮಂಡಳಿ ನಿರ್ಧಾರ ಮಾಡಿತ್ತು, ನನಗೇನು ಗೊತ್ತಿಲ್ಲ ಅಂತಿದ್ದಾರೆ. ಆದ್ರೆ ಸಾರ್ವಜನಿಕರು ಮಾತ್ರ ಕೃಷಿ ವಿವಿ ದುರ್ಬಳಕೆಯಾಗುತ್ತಿದೆ ಅಂತ ಕಿಡಿಕಾರಿದ್ದಾರೆ.

    ಈ ಕುರಿತು ಬಸವರಾಜ್ ಪಾಟೀಲ್ ಇಟಗಿ ಅವರನ್ನ ಪ್ರಶ್ನಿಸಿದರೆ, ವಿವಿ ಆವರಣದಲ್ಲಿ ಇದೇ ಮೊದಲ ಮದುವೆ ಸಮಾರಂಭವಲ್ಲ ಈ ಹಿಂದೆಯೂ ಅನೇಕ ಕಾರ್ಯಕ್ರಮ ನಡೆದಿವೆ. ನಾನು ಇದೇ ಕೃಷಿ ವಿವಿಯಲ್ಲಿ ಓದಿದ್ದೇನೆ, ಮೂರು ವರ್ಷ ಉಪನ್ಯಾಸಕನಾಗಿ ಕೆಲಸ ಮಾಡಿದ್ದೇನೆ ಅಲ್ಲದೆ 1 ಲಕ್ಷ ರೂಪಾಯಿ ಬಾಡಿಗೆ ನೀಡಿ ಮದುವೆ ಕಾರ್ಯಕ್ರಮ ಮಾಡುತ್ತಿದ್ದೇನೆ ಅಂತ ಬಸವರಾಜ್ ಪಾಟೀಲ್ ಇಟಗಿ ಹೇಳಿದ್ದಾರೆ.

    ಈ ಹಿಂದೆ ಭದ್ರತಾ ದೃಷಿಯಿಂದ ರಾಹುಲ್ ಗಾಂಧಿ, ನರೇಂದ್ರ ಮೋದಿ ಕಾರ್ಯಕ್ರಮಗಳನ್ನೂ ಇದೇ ಸ್ಥಳದಲ್ಲಿ ಮಾಡಲಾಗಿತ್ತು. ಆದ್ರೆ ಈಗ ಸಂಪೂರ್ಣ ಖಾಸಗಿ ಕಾರ್ಯಕ್ರಮಕ್ಕೆ ಕೃಷಿ ವಿ.ವಿ. ಬಳಕೆಯಾಗುತ್ತಿರುವುದಕ್ಕೆ ಸ್ಥಳೀಯರು ಹಾಗೂ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

  • ಅಪ್ಪಾಜಿ ಕ್ಯಾಂಟೀನ್ ದಿಢೀರ್ ಕ್ಲೋಸ್ – ಶರವಣ ಹೇಳಿದ್ದು ಏನು?

    ಅಪ್ಪಾಜಿ ಕ್ಯಾಂಟೀನ್ ದಿಢೀರ್ ಕ್ಲೋಸ್ – ಶರವಣ ಹೇಳಿದ್ದು ಏನು?

    ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ದೇವೇಗೌಡ ಅವರ ಹೆಸರಿನಲ್ಲಿ ನಗರದ ಜೆಪಿ ಭವನದಲ್ಲಿ ಆರಂಭವಾಗಿದ್ದ ಅಪ್ಪಾಜಿ ಕ್ಯಾಂಟೀನ್ ಕ್ಲೋಸ್ ಆಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಂಟೀನಿಗೆ ಆಗಮಿಸದೆ ಇರುವುದೇ ಮುಚ್ಚಲು ಕಾರಣ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಶರವಣ ತಿಳಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಶರವಣ ಅವರು, ಜೆಡಿಎಸ್ ಕಚೇರಿಯ ಆವರಣದಲ್ಲಿ ಆರಂಭವಾಗಿದ್ದ ಕ್ಯಾಂಟೀನ್ ಬರೋಬ್ಬರಿ 1 ವರ್ಷ ನಡೆದಿದ್ದು, ಆದರೆ ಕ್ಯಾಂಟೀನ್‍ಗೆ ಹೆಚ್ಚಿನ ಜನರು ಬಾರದ ಕಾರಣ ಆಹಾರ ವ್ಯರ್ಥವಾಗುತ್ತಿದೆ. ದಿನಕ್ಕೆ ಕೇವಲ 50 ರಿಂದ 100 ಜನರು ಮಾತ್ರ ಬರುತ್ತಿದ್ದರು. ಆದ್ದರಿಂದ 20 ದಿನಗಳ ಹಿಂದೆಯೇ ಕ್ಯಾಂಟೀನ್ ಮುಚ್ಚುವ ತೀರ್ಮಾನ ಮಾಡಲಾಗಿತ್ತು ಎಂದರು.

    ಇದೇ ವೇಳೆ ಕ್ಯಾಂಟೀನ್ ಮುಚ್ಚಲು ದೇವೇಗೌಡ ಅವರೊಂದಿನ ಅಸಮಾಧಾನ ಕಾರಣ ಎಂಬುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಿರಿಯರಾಗಿದ್ದು, ಅವರೊಂದಿಗೆ ಯಾವುದೇ ಅಸಮಾಧಾನ ಇಲ್ಲ. ಈ ಬಗ್ಗೆ ರೇವಣ್ಣ ಅವರಿಗೆ ತಿಳಿಸಿಯೇ ತೀರ್ಮಾನ ಕೈಗೊಂಡಿದ್ದೇನೆ. ಆದರೆ ನಗರದ ಬೇರೆ ಕಡೆ ಮಾಡಲು ಚಿಂತನೆ ಇದೆ. ಊಟ ವ್ಯರ್ಥವಾಗುತ್ತಿದ್ದ ಕಾರಣವಾಗಿ ಕ್ಲೋಸ್ ಮಾಡಿದ್ದೇನೆ. ಬಸವನಗುಡಿಯಲ್ಲಿ ಇರುವ ಕ್ಯಾಂಟೀನ್‍ನಲ್ಲಿ ಪ್ರತಿ ದಿನ 3,500 ಮಂದಿ ಊಟ ಸೇವಿಸುತ್ತಾರೆ. ದಿನಕ್ಕೆ 100 ಜನರು ಹೆಚ್ಚಾಗುತ್ತಿದ್ದಾರೆ. ಅದ್ದರಿಂದ ಹಸಿದವರಿಗೆ ಊಟ ನೀಡುವ ನನ್ನ ಉದ್ದೇಶ ಮುಂದುವರೆಯುತ್ತದೆ ಎಂದರು.

    ಸಚಿವ ಸ್ಥಾನದ ಆಕಾಂಕ್ಷೀಯಾಗಿದ್ದೆ. ಆದರೆ ಈ ಹಂತದಲ್ಲಿ ನನಗೆ ಅವಕಾಶ ನೀಡಲು ಸಾಧ್ಯವಾಗಿಲ್ಲ. ಈ ಬಗ್ಗೆ ನನ್ನ ಸಮಾಜದ ಹಲವರು ಪ್ರಶ್ನೆ ಮಾಡುತ್ತಾರೆ. ಇತ್ತ ಸಿಎಂ ಕುಮಾರಸ್ವಾಮಿ ಅವರಿಗೆ ಸರ್ಕಾರ ನಡೆಸೋದು ಕಷ್ಟ ಆಗುತ್ತಿದೆ. ಸಚಿವ ಸ್ಥಾನ ಬಗ್ಗೆ ದೇವೇಗೌಡರಿಗೂ ತಿಳಿದಿದೆ. ಆದರೆ ಅವರಿಗೂ ಸಮ್ಮಿಶ್ರ ಸರ್ಕಾರದಲ್ಲಿ ಹೆಚ್ಚಿನ ಒತ್ತಡ ಇದೆ. ಪಕ್ಷದ ವಿಚಾರದಲ್ಲಿ ಈ ಕುರಿತು ಚರ್ಚೆ ನಡೆಸಿ ಮುಂದಿನ ಹಂತದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಆದರೆ ನಮ್ಮ ಸಮುದಾಯದ ಜನರು ಈ ಬಗ್ಗೆ ಪ್ರಶ್ನೆ ಮಾಡಿದ ವೇಳೆ ನೋವಾಗುತ್ತದೆ. ಆದರೆ ಕಿತ್ತಾಟ ನಡೆಸಿ ಸಚಿವ ಸ್ಥಾನ ಪಡೆಯುವುದು ಜೆಡಿಎಸ್ ಪಕ್ಷದಲ್ಲಿ ಇಲ್ಲ. ಅದ್ದರಿಂದ ಮುಂದೇ ಸೂಕ್ತ ಸ್ಥಾನಮಾನ ಸಿಗುವ ಬಗ್ಗೆ ವಿಶ್ವಾಸ ಇದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಲು ಕುಡಿದವರೇ ಬದುಕಲ್ಲ, ಎಣ್ಣೆ ಕುಡಿದವ್ರು ಬದುಕ್ತಾರಾ: ಬಿಜೆಪಿಗೆ ಮಾತಿನಲ್ಲೇ ಕುಕ್ಕಿದ ಭೋಜೇಗೌಡ

    ಹಾಲು ಕುಡಿದವರೇ ಬದುಕಲ್ಲ, ಎಣ್ಣೆ ಕುಡಿದವ್ರು ಬದುಕ್ತಾರಾ: ಬಿಜೆಪಿಗೆ ಮಾತಿನಲ್ಲೇ ಕುಕ್ಕಿದ ಭೋಜೇಗೌಡ

    ಉಡುಪಿ: ರಾಮನಗರ ಬೆಳವಣಿಗೆ ಬಿಜೆಪಿಗೆ ನಮ್ಮ ಸಮ್ಮಿಶ್ರ ಸರ್ಕಾರದ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿಯ ಕೊಡುಗೆ ಅಂತ ವಿಧಾನಪರಿಷತ್ ಸದಸ್ಯ ಭೋಜೇಗೌಡ ವ್ಯಂಗ್ಯವಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮನಗರ ಬಿಜೆಪಿ ಅಭ್ಯರ್ಥಿ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಗೆ 63ನೇ ರಾಜ್ಯೋತ್ಸವ ಕೊಡುಗೆ ಇದು. ದೀಪಾವಳಿ ಹಬ್ಬದ ಉಡುಗೊರೆಯನ್ನು ಫಲಿತಾಂಶದ ದಿನ ಸಮ್ಮಿಶ್ರ ಸರಕಾರ ಕೊಡುತ್ತದೆ. ಹಾಲು ಕುಡಿದವರೇ ಬದುಕಲ್ಲ, ವಿಷ ಕುಡಿದವರೇ ಬದುಕ್ತಾರೇನ್ರೀ? 1 ಲಕ್ಷ ಮತಗಳ ಅಂತರದಲ್ಲಿ ರಾಮನಗರದಲ್ಲಿ ಗೆಲ್ಲುತ್ತೇವೆ. ರಾಮನಗರದ ಬೆಳವಣಿಗೆಗೆ ಅಭ್ಯರ್ಥಿಯೇ ಮಾಸ್ಟರ್ ಮೈಂಡ್ ಎಂದು ಬಿಜೆಪಿಯವರಿಗೆ ಮಾತಿನಲ್ಲೇ ಕುಕ್ಕಿದರು.

    ಇದೇ ವೇಳೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಡಿಯೂರಪ್ಪ ಮಾತಿನ ಮೇಲೆ ನಿಗಾ ಇರಿಸಲಿ. ನಮ್ಮ ಅಭ್ಯರ್ಥಿಯನ್ನು ಕಂಡವರ ಮಕ್ಕಳೆಂದು ಹೇಳುತ್ತಾರೆ. ಮಧು ಬಂಗಾರಪ್ಪ ಕಂಡವರ ಮಕ್ಕಳಾ? ರಾಮನಗರದಲ್ಲಿ ಯಾರು ಯಾರ ಮಕ್ಕಳನ್ನು ತಂದು ನೀವು ನಿಲ್ಲಿಸಿದ್ರಿ? ಹುಟ್ಟಿಸಿ, ಬೆಳೆಸಿದ ವ್ಯಕ್ತಿಗೆ ನಾಮಕರಣ ಮಾಡಿದರೆ, ನಿಮ್ಮ ಮಕ್ಕಳಗಲ್ಲ ಸ್ವಾಮಿ ಅಂತ ದೂರಿದರು.

    ಬಿಜೆಪಿ ತಟ್ಟೆಯಲ್ಲಿ ಹೆಗ್ಗಣ ಸತ್ತಿದೆ. ಪಕ್ಕದ ತಟ್ಟೆಯ ನೋಣವನ್ನು ಕಂಡು ಹೀಯಾಳಿಸಬೇಡಿ. ಯಡಿಯೂರಪ್ಪ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು. ರಾಮನಗರ ಬೆಳವಣಿಗೆ ರಾಷ್ಟ್ರೀಯ ಪಕ್ಷಕ್ಕೆ ಬಹಳ ಆಘಾತ ಆಗಿದೆ. ಪ್ರಜಾಪ್ರಭುತ್ವ ಮಾರಕ ಅಂತ ನೀವು ಹೇಳ್ತೀರಿ, ಆದರೆ ಆಪರೇಷನ್ ಕಮಲ ಮಾರಕ ಅಲ್ವಾ? ಗೆದ್ದ ಶಾಸಕರನ್ನೇ ಖರೀದಿ ಮಾಡಿದ್ದು ಮರೆತು ಹೋಯ್ತೇ ನಿಮಗೆ ಎಂದು ಸವಾಲು ಹಾಕಿದರು.

    ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ರಾಜಕೀಯವನ್ನು ರಾಜಕೀಯವಾಗಿ ಎದುರಿಸಿದ್ದಾರೆ. ಡಿಕೆಶಿಯವರು ರೆಡ್ಡಿಯಂತೆ ಹೇಡಿಯ ರಾಜಕೀಯ ಮಾಡಿಲ್ಲ. ರೆಡ್ಡಿ ಬ್ರದರ್ಸ್ ಭೂಗತವಾಗಿ ಕೆಲಸ ಮಾಡುವವರು. ರೆಡ್ಡಿ ಅಂಡರ್ ಗ್ರೌಂಡ್ ವ್ಯಾಪಾರದವರು. ಜನಾರ್ದನ ರೆಡ್ಡಿ ಸಮಾಜಘಾತುಕ ಶಕ್ತಿ. ಅವರು ಮತ್ತೆ ಭೂಗತ ಲೋಕಕ್ಕೆ ಹೋಗೋದು ಸೂಕ್ತ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೀಟೂ ಆರೋಪ ಇದ್ರೆ ನೊಂದವರು ಹೇಳ್ತಾರೆ, ನಿಮಗ್ಯಾಕೆ ಉಸಾಬರಿ: ಕುಮಾರ್ ಬಂಗಾರಪ್ಪಗೆ ಭೋಜೇಗೌಡ ಪ್ರಶ್ನೆ

    ಮೀಟೂ ಆರೋಪ ಇದ್ರೆ ನೊಂದವರು ಹೇಳ್ತಾರೆ, ನಿಮಗ್ಯಾಕೆ ಉಸಾಬರಿ: ಕುಮಾರ್ ಬಂಗಾರಪ್ಪಗೆ ಭೋಜೇಗೌಡ ಪ್ರಶ್ನೆ

    ಉಡುಪಿ: ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದು, ನಾವು ಸಹ ಅವರ ಡಬ್ಬಲ್ ಸಣ್ಣತನವನ್ನು ತೋರಿಸಲಾ ಎಂದು ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

    ಸಿಎಂ ಕುಮಾರಸ್ವಾಮಿ ವಿರುದ್ಧ ಮೀಟೂ ಆರೋಪ ಮಾಡಿದ್ದರ ಕುರಿತು ಮಾತನಾಡಿದ ಅವರು, ಕುಮಾರ ಬಂಗಾರಪ್ಪ ಮುಖ್ಯಮಂತ್ರಿ ಎಚ್‍ಡಿಕೆ ಮೇಲೆ ಮೀಟೂ ಆರೋಪ ಮಾಡುವ ಮೂಲಕ ತಮ್ಮ ಸಣ್ಣತನವನ್ನು ತೋರಿಸಿದ್ದಾರೆ. ಅವರು ಜವಾಬ್ದಾರಿ ಇರುವ ಮನುಷ್ಯ. ಅಲ್ಲದೇ ಮಾಜಿ ಸಿಎಂ ಬಂಗಾರಪ್ಪನವರ ಮಗನಾಗಿ ಹೀಗೆ ಮಾತನಾಡಬಾರದು. ನಿಮ್ಮ ಸಣ್ಣತನವನ್ನು ತೋರಿಸಿದ ನಿಮಗೆ ನಾವು ನಿಮ್ಮ ಡಬ್ಬಲ್ ಸಣ್ಣತನವನ್ನು ತೋರಿಸಲಾ ಎಂದು ಬಹಿರಂಗವಾಗಿ ಸವಾಲು ಹಾಕಿದರು. ಇದನ್ನೂ ಓದಿ: ಈಗ ಸಿಎಂ ಎಚ್‍ಡಿಕೆ ವಿರುದ್ಧ #MeToo ಆರೋಪ!

    ಸಿಎಂ ಕುಮಾರಸ್ವಾಮಿ ವೈಯಕ್ತಿಕ ವಿಚಾರ ಪ್ರಸ್ತಾಪ ಮಾಡಿದರೆ ಹುಷಾರ್, ನಾವೂ ಸಹ ನಿಮ್ಮ ವೈಯಕ್ತಿಕ ವಿಚಾರವನ್ನು ತೆಗೆಯಬೇಕಾಗುತ್ತದೆ. ಆದರೆ ನಾವು ನಿಮ್ಮಂತೆ ಕೀಳುಮಟ್ಟದ ರಾಜಕೀಯ ಮಾಡಲ್ಲ. ಒಂದು ವೇಳೆ ಆ ರೀತಿಯ ಮೀಟೂ ಆರೋಪ ಇದ್ದರೆ, ನೊಂದವರು ಬಂದು ಹೇಳಿಕೊಳ್ಳುತ್ತಾರೆ. ನಿಮಗ್ಯಾಕೆ ಈ ಉಸಾಬರಿ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನನ್ನ ಪರ್ಸನಲ್ ವಿಚಾರ ನಿಮಗ್ಯಾಕ್ರಿ – ಕುಮಾರ್ ಬಂಗಾರಪ್ಪ ಮೀಟೂ ಆರೋಪಕ್ಕೆ ಸಿಎಂ ಕಿಡಿ

    ನಿಮಗಿಂತ ಸಣ್ಣತನ ತೋರುವ ಶಕ್ತಿ ನನಗೂ ಇದೆ. ನಿಮ್ಮ ಬಳಿ ಆ ಬಗ್ಗೆ ದಾಖಲೆ ಇದ್ದರೆ, ಅದಕ್ಕೆ ನ್ಯಾಯಾಲಯ ಇದೆ. ವೈಯಕ್ತಿಕ ವಿಚಾರ ಚುನಾವಣೆಯಲ್ಲಿ ಬಳಸುವುದು ಅಕ್ಷಮ್ಯ ಅಪರಾಧ. ಈ ಮೊದಲು ಬಂಗಾರಪ್ಪನವರೂ ನಮ್ಮ ಪಕ್ಷದಲ್ಲಿಯೂ ಇದ್ದರು. ಅವರ ಬಗ್ಗೆ ಸಿಎಂ ಕುಮಾರಸ್ವಾಮಿ ಮಾತನಾಡಿದರೇ? ಮಾಜಿ ಸಿಎಂ ಬಂಗಾರಪ್ಪನವರ ಬಗ್ಗೆ ಮಾತನಾಡುವ ಹಕ್ಕು ಕುಮಾರಸ್ವಾಮಿಗೆ ಇದೆ ಎಂದು ಕುಮಾರ್ ಬಂಗಾರಪ್ಪನವರಿಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೋದಿ ಹೆಸರನ್ನು ಎತ್ತಿದ್ದಕ್ಕೆ ಬಿಎಸ್‍ವೈಗೆ ಲೆಹರ್ ಸಿಂಗ್ ಟಾಂಗ್

    ಮೋದಿ ಹೆಸರನ್ನು ಎತ್ತಿದ್ದಕ್ಕೆ ಬಿಎಸ್‍ವೈಗೆ ಲೆಹರ್ ಸಿಂಗ್ ಟಾಂಗ್

    ಬೆಂಗಳೂರು: ಪ್ರತಿಪಕ್ಷಗಳನ್ನು ಹೆದರಿಸಲು ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಹೆಸರು ಬಳಕೆ ಮಾಡುವಂತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಲೆಹರ್ ಸಿಂಗ್ ಸಿರೋಯಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳಿಗೆ ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಪ್ರತಿ ವಿಷಯಕ್ಕೂ ಪ್ರಧಾನಿ ಮೋದಿ ಅಥವಾ ಕೇಂದ್ರೀಯ ಸಂಸ್ಥೆಗಳ ಹೆಸರನ್ನು ಎಳೆದು ತರುವ ಅಧಿಕಾರ ಪಕ್ಷದ ಯಾರೊಬ್ಬರಿಗೂ ಇಲ್ಲ ಎಂದಿದ್ದಾರೆ.

    ಬಿಎಸ್‍ವೈ ಹೇಳಿದ್ದು ಏನು?
    ಶಿವರಾಮ ಕಾರಂತ ಬಡಾವಣೆ ಬಗ್ಗೆ ತನಿಖೆ ಮಾಡಿ, ಸತ್ಯ ಜನತೆಗೆ ಗೊತ್ತಾಗಲಿ. ಅದನ್ನು ಬಿಟ್ಟು ಧಮಕಿ ಹಾಕಿದರೆ ಏನು ನಡೆಯಲ್ಲ. ದೇವೇಗೌಡರು ಹಾಗೂ ಕುಮಾರಸ್ವಾಮಿ ಕುಟುಂಬ ಮೈಸೂರಿನಲ್ಲಿ ಎಷ್ಟು ಸೈಟ್ ಮಾಡಿಕೊಂಡಿದೆ ಎಂಬುದು ಚೆನ್ನಾಗಿ ಗೊತ್ತಿದೆ. ಎಲ್ಲವನ್ನೂ ದಾಖಲೆ ಸಮೇತ ಹೊರಕ್ಕೆ ಇಡುತ್ತೇನೆ. ಇಲ್ಲಿ ನಿಮ್ಮ ಅಧಿಕಾರವಿರಬಹುದು ಆದರೆ ಕೇಂದ್ರದಲ್ಲಿ ನಮ್ಮ ಅಧಿಕಾರ ಇದೆ. ಯಾವಾಗ ಏನು ಮಾಡುಬೇಕು ಎಂಬುದು ನಿಮಗಿಂತ ಚೆನ್ನಾಗಿ ನಮಗೆ ಗೊತ್ತು ಎಂದು ಕುಮಾರಸ್ವಾಮಿ ವಿರುದ್ಧ ಗುಡುಗಿದ್ದರು. ಇದನ್ನು ಓದಿ: ಸಿಎಂ ಎಚ್‍ಡಿಕೆ ವಿರುದ್ಧ ಬಿಜೆಪಿಯ ತಾಜ್ ಮೇಲಿನ ದಂಗೆಯ ಇನ್ ಸೈಡ್ ಸ್ಟೋರಿ ಇಲ್ಲಿದೆ

    ಲೆಹರ್ ಸಿಂಗ್ ಹೇಳಿಕೆಯಲ್ಲಿ ಏನಿದೆ?
    ನರೇಂದ್ರ ಮೋದಿ ಅವರು ಎರಡನೇ ಬಾರಿ ಮತ್ತೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವುದನ್ನು ನಾವು ಖಚಿತಪಡಿಸಿಕೊಳ್ಳಲೇಬೇಕು. ಇದಕ್ಕಾಗಿ 2014ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನಗಳನ್ನು ಗಳಿಸಿ, ಬಹುಮತ ಪಡೆಯಲೇ ಬೇಕು. ದಕ್ಷಿಣ ಭಾರತದಲ್ಲಿ ಬಿಜೆಪಿ ಬಲಿಷ್ಟವಾಗಿರುವುದು ಕರ್ನಾಟಕದಲ್ಲಿ. ಹೀಗಾಗಿ ನನಗೆ ಪ್ರತಿಯೊಂದು ಲೋಕಸಭಾ ಕ್ಷೇತ್ರವೂ ಮಹತ್ವದ್ದಾಗಿದೆ.

    ಲೋಕಸಭಾ ಚುನಾವಣೆ ಸಿದ್ಧತೆಯಲ್ಲಿರುವ ಪಕ್ಷದ ಕೇಂದ್ರಿಯ ನಾಯಕತ್ವದ ಗಮನವೆಲ್ಲವೂ ಚುನಾವಣಾ ಕಾರ್ಯತಂತ್ರ, ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮತ್ತು ಈ ಸಮರಕ್ಕೆ ಕಾರ್ಯಕರ್ತರನ್ನು ಸಿದ್ಧಗೊಳಿಸುವಲ್ಲಿ ನಿರತರಾಗಿದ್ದಾರೆ. ಇತ್ತ ಕರ್ನಾಟಕದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಅವರ ಗಮನ ವಿಚಲಿತಗೊಳ್ಳದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಗೋವಾ ರಾಜ್ಯದಲ್ಲಿ ರಾಜಕೀಯ ಸವಾಲುಗಳನ್ನು ಎದುರಿಸಬೇಕಿದೆ. ಜೊತೆಗೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ್ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಸಿದ್ಧತೆ ನಾಯಕರು ತೊಡಗಿಕೊಂಡಿದ್ದಾರೆ. ಇದನ್ನು ಓದಿ: `ಆ ದಿನ’ ನೀವು ಬೆಂಗಳೂರಿನಲ್ಲೇ ಇರಿ, ಯಾವುದೇ ಕಾರಣಕ್ಕೂ ಮಿಸ್ ಆಗಬಾರದು- ಬಿಎಸ್‍ವೈ

    ರಾಜ್ಯದಲ್ಲಿ ನಾವು ಪ್ರತಿಪಕ್ಷಗಳನ್ನು ಎದುರಿಸುವಾಗ, ಎಲ್ಲದಕ್ಕೂ ಪ್ರಧಾನ ಮಂತ್ರಿಗಳ ಹಾಗೂ ಕೇಂದ್ರ ಸರ್ಕಾರದ ಹೆಸರನ್ನು ಎಳೆದು ತರಲಾಗದು. ನಮ್ಮ ಸಣ್ಣ ಉದ್ದೇಶಗಳಿಗಾಗಿ ಪ್ರಧಾನಿ ಹೆಸರನ್ನು ಬಳಸಿ, ಅವರ ಘನತೆಯನ್ನು ಕಡಿಮೆ ಮಾಡುವುದಾಗಲಿ, ಕೇಂದ್ರ ಸರ್ಕಾರ ಮುಯ್ಯಿ ತೀರಿಸಲಿದೆ ಎನ್ನುವಂತೆ ಬಿಂಬಿಸುವುದಾಗಲಿ ಮಾಡಬಾರದು. ಅಲ್ಲದೆ ಹೀಗೆ ಮಾಡುವ ಅಧಿಕಾರ ಪಕ್ಷದ ಯಾರಿಗೂ ನೀಡಿಲ್ಲ ಎನ್ನುವುದು ನನ್ನ ಭಾವನೆಯಾಗಿದೆ. ಕಾನೂನನ್ನು ಅತಿಕ್ರಮಿಸಿದರು ಯಾರೇ ಇರಲಿ, ಈ ದೇಶದ ಕಾನೂನಿನ ಅನ್ವಯವೇ ಪರಿಣಾಮವನ್ನೂ ಎದುರಿಸಬೇಕಾಗುತ್ತದೆ. ಹೊರತು ಯಾರೋ ವ್ಯಕ್ತಿಗಳ ಅಭಿಲಾಷೆ ಅಥವಾ ಬಯಕೆಗಳಿಗೆ ತಕ್ಕಂತೆ ಅಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಂಎಲ್‍ಸಿ ಉಪ ಚುನಾವಣೆ: ಎಂಬಿಪಿ ಸಹೋದರ ಕಣಕ್ಕೆ

    ಎಂಎಲ್‍ಸಿ ಉಪ ಚುನಾವಣೆ: ಎಂಬಿಪಿ ಸಹೋದರ ಕಣಕ್ಕೆ

    ವಿಜಯಪುರ: ಬಸನಗೌಡ ಪಾಟೀಲ್ ಯತ್ನಾಳ್‍ರಿಂದ ತೆರವಾದ ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ.

    ಸುನೀಲಗೌಡ ಪಾಟೀಲ್ ಅವರು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಎಂಬಿ ಪಾಟೀಲ್, ನನ್ನ ಸಹೋದರ ಸುನೀಲಗೌಡ ಪಾಟೀಲ್ ನನ್ನು ಪರಿಷತ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಜೆಡಿಎಸ್ ನಿರ್ಧಾರ ತೆಗೆದುಕೊಂಡಿದೆ ತಿಳಿಸಿದರು.

    ಎಂಎಲ್ ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಾಖಲೆ ಮತಗಳಿಂದ ಗೆಲುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಎಂಎಲ್‍ಸಿ ಚುನಾವಣಾ ಫಲಿತಾಂಶ ಬಂದ ಮೇಲೆ ಯಾರ ಸೋಲು, ಯಾರು ಗೆಲುವು ಗೊತ್ತಾಗುತ್ತದೆ ಎಂದು ಹೇಳಿ ತಿರುಗೇಟು ನೀಡಿದರು.

    ನಾವು ಮತದಾರರ ಮೇಲೆ ವಿಶ್ವಾಸ ಹೊಂದಿದ್ದೇವೆ. ಆದರೆ ಯತ್ನಾಳ್ ಹಾಗೆ ಸ್ವಯಂ ಘೋಷಿತ ಮಾಡಿಕೊಳ್ಳಲು ತಯಾರಿಲ್ಲ. ಮತದಾರರ ಆರ್ಶೀವಾದದಿಂದ ನಮ್ಮ ಗೆಲುವು ಆಗಲಿದೆ ಎಂದು ಎಂಪಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

    ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ನ ಮುಖಂಡರಾದ ಎಸ್ ಆರ್ ಪಾಟೀಲ್, ಉಮಾಶ್ರೀ, ಎಚ್ ವೈ ಮೇಟಿ, ಸಿಎಸ್ ನಾಡಗೌಡ ಮತ್ತು ಜೆಡಿಎಸ್ ಸಚಿವ ಎಂ ಸಿ ಮನಗೂಳಿ, ಶಾಸಕ ದೇವಾನಂದ ಚವ್ಹಾಣ ಕೂಡ ಸಾಥ್ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಭೆ ವೇಳೆ ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾದ ಅಧಿಕಾರಿ

    ಸಭೆ ವೇಳೆ ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾದ ಅಧಿಕಾರಿ

    ಚಿತ್ರದುರ್ಗ: ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಯು ದುರ್ವತನೆ ತೋರಿದ್ದು, ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಅಧಿಕಾರಿ ಬ್ಯುಸಿಯಾಗಿದ್ದ ಘಟನೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಿಗಧಿ ಮಾಡಲಾಗಿತ್ತು. ಆದರೆ ಈ ವೇಳೆ ಚಿತ್ರದುರ್ಗ ಜಿಲ್ಲಾ ಪಶು ಸಂಗೋಪನಾ ಇಲಾಖೆ ಅಧಿಕಾರಿ ರಾಜಪ್ಪ ಈ ರೀತಿ ದುರ್ವತನೆ ತೋರಿದ್ದಾರೆ. ಸಭೆಯಲ್ಲಿ ಅಧಿಕಾರಿಗಳು ಅಭಿವೃದ್ಧಿ ಪರಿಶೀಲನೆಯಲ್ಲಿ ತೊಡಗಿದ್ದರೆ ರಾಜಪ್ಪ ಅವರು ಫೇಸ್ ಬುಕ್ ನಲ್ಲಿ ಯುವತಿಯರ ಚಿತ್ರ ವೀಕ್ಷಿಸುವಲ್ಲಿ ಬ್ಯುಸಿಯಾಗಿದ್ದರು.

    ಶಾಸಕ ಗೈರು: ಪ್ರಮುಖವಾಗಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಪರಿಶೀಲನೆ ಸಭೆಯನ್ನು ಸಂಸದ ಬಿ.ಎನ್.ಚಂದ್ರಪ್ಪ ನೇತೃತ್ವದಲ್ಲಿ ಕರೆಯಲಾಗಿತ್ತು. ಈ ಸಭೆ ಜಿಲ್ಲೆಯ ಎಲ್ಲಾ ಶಾಸಕರು ಆಗಮಿಸುವುದು ಕಡ್ಡಾಯವಾಗಿದ್ದರು. ಈ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಮೊಳಕಲ್ಮೂರು ಶಾಸಕ ಶ್ರೀರಾಮುಲು, ಹೊಸದುರ್ಗ ಶಾಸಕ ಶೇಖರ್ ಸಭೆಗೆ ಗೈರು ಹಾಜರಾಗಿದ್ದರು. ಅಲ್ಲದೇ ಎಂಎಲ್‍ಸಿ ಗಳಾದ ರಘು ಆಚಾರ್, ವೈ ಎ ನಾರಾಯಣ ಸ್ವಾಮಿ ಸಭೆ ಹಾಜರಾಗದೇ ನಿರ್ಲಕ್ಷ್ಯ ಮೆರೆದಿದ್ದಾರೆ.

    https://www.youtube.com/watch?v=vZX67yMNpv4

  • ಕಾಂಗ್ರೆಸ್ ಟಾರ್ಚರ್ ಮುಂದುವರಿದರೆ ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸಲ್ಲ: ಹೊರಟ್ಟಿ

    ಕಾಂಗ್ರೆಸ್ ಟಾರ್ಚರ್ ಮುಂದುವರಿದರೆ ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸಲ್ಲ: ಹೊರಟ್ಟಿ

    ಧಾರವಾಡ: ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಐದು ವರ್ಷ ಸರ್ಕಾರ ನಡೆಯಬೇಕಾದರೆ, ಮಿತ್ರ ಪಕ್ಷ ಕಾಂಗ್ರೆಸ್ ಹೊಂದಾಣಿಕೆ ಹಾಗೂ ತ್ಯಾಗ ಮಾಡಬೇಕು. ಇಲ್ಲವಾದಲ್ಲಿ ಸರ್ಕಾರ ನಡೆಸುವುದು ಕಷ್ಟವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಎಚ್ಚರಿಕೆಯ ಮಾತನ್ನು ಆಡಿದ್ದಾರೆ.

    ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ನನ್ನದೊಂದು ಕಿವಿ ಮಾತು. ಸಿಎಂ ಕುಮಾರಸ್ವಾಮಿ ಮುಂದೆ ದಿನಕ್ಕೊಂದು ಬೇಡಿಕೆ ಇಡುವುದು ಸರಿಯಲ್ಲ. ದಿನಕ್ಕೊಂದು ಕಾನೂನು ಮಾಡುವುದು ಸರಿಯಲ್ಲ. ಕಾಂಗ್ರೆಸ್ ನವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ಉತ್ತಮ. ಮುಖ್ಯಮಂತ್ರಿ ರಾಜ್ಯದ ರಾಜ್ಯಭಾರ ಮಾಡಬೇಕು. ಆದರೆ ಪ್ರತಿದಿನ ತೇಪೆ ಹಚ್ಚುವ ಕೆಲಸ ಆಗುತ್ತಿದೆ. ಪ್ರತಿ ದಿನ ಹೀಗೆ ಆದ್ರೆ ರಾಜ್ಯದ ಮುಖ್ಯಮಂತ್ರಿ ಕೆಲಸ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದರು.

    ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತದೆ ಎನ್ನುವ ಹೆದರಿಕೆಯಿಂದ ಕೈ ನಾಯಕರು ಜೆಡಿಎಸ್ ಜೊತೆ ಬೇಷರತ್ ಮೈತ್ರಿ ಮಾಡಿಕೊಂಡಿದ್ದಾರೆ. ಹೀಗಾಗಿ ಮೈತ್ರಿ ಒಪ್ಪದಂತೆ ನಡೆದುಕೊಳ್ಳುವುದು ಸೂಕ್ತ. ಒಂದು ವೇಳೆ ಆ ರೀತಿ ನಡೆದುಕೊಳ್ಳದೆ ಇದ್ದರೆ ಐದು ವರ್ಷ ಸರ್ಕಾರ ನಡೆಸುವುದು ಕಷ್ಟ. ಕಾಂಗ್ರೆಸ್ ನವರ ಟಾರ್ಚರ್ ನಿಂದಲೇ ನಿನ್ನೆ ಸಿಎಂ ಒಂದು ವರ್ಷ ನನ್ನನ್ನು ಯಾರು ಟಚ್ ಮಾಡುವ ಹಾಗಿಲ್ಲ ಎಂದಿದ್ದಾರೆ. ಕಾಂಗ್ರೆಸ್ ನವರ ಕಿರುಕುಳ ಮುಂದುವರೆದರೆ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದಿಲ್ಲ. ಲಿಂಗಾಯತ ಶಾಸಕರಿಗೆ ಕಾಂಗ್ರೆಸ್ ಸಚಿವ ಸ್ಥಾನ ನೀಡದೇ ನಿರ್ಲಕ್ಷ್ಯ ತೋರಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಕುಮಾರಸ್ವಾಮಿ ಆಸಕ್ತರಾಗಿದ್ದಾರೆ. ಆದರೆ ಕಾಂಗ್ರೆಸ್ ಒತ್ತಡದಿಂದಾಗಿ ಶಾಸಕರಿಗೆ ಸಚಿವ ಸ್ಥಾನ ಕೈ ತಪ್ಪಿದೆ ಎಂದು ಆರೋಪಿಸಿದರು.