Tag: MM Naravane

  • ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ

    ಭಾರತೀಯ ಸೇನಾ ಮುಖ್ಯಸ್ಥರಾಗಿ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕಾರ

    ನವದೆಹಲಿ: ಭಾರತೀಯ ಸೇನೆಯ 29ನೇ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅಧಿಕಾರ ಸ್ವೀಕರಿಸಿದ್ದಾರೆ.

    ಭಾರತೀಯ ಸೇನೆಯ ಮುಖ್ಯಸ್ಥರಾಗಿದ್ದ ಜನರಲ್ ಮನೋಜ್ ಮುಕುಂದ್ ನರವಾಣೆ ಇಂದು ನಿವೃತ್ತರಾದ ಬಳಿಕ ಮನೋಜ್ ಪಾಂಡೆ ಅಧಿಕಾರ ಸ್ವೀಕರಿಸಿದರು. ಈ ಮೊದಲು ಸೇನಾಪಡೆಯ ಉಪ ಮುಖ್ಯಸ್ಥರಾಗಿದ್ದ ಜನರಲ್ ಪಾಂಡೆಗೆ ನಿವೃತ್ತ ಜನರಲ್ ನರವಾಣೆ ಅಧಿಕಾರ ಹಸ್ತಾಂತರಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ 45 ಸಾವಿರ ಲೌಡ್‌ ಸ್ಪೀಕರ್‌ ತೆರವು

    1962ರ ಮೇ 6ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ 1982 ಡಿಸೆಂಬರ್ 24 ರಂದು ಭಾರತೀಯ ಸೇನೆಯ ಕಾರ್ಪ್ಸ್‌ ಆಫ್ ಇಂಜಿನಿಯರ್ ಆಗಿ ನೇಮಕಗೊಂಡರು. ಸೇನಾಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಜನರಲ್ ಪಾಂಡೆ ಅವರು ಸೇನಾಪಡೆಯ ಇಂಜಿನಿಯರ್ ಕಾಪ್ರ್ಸ್‍ನಿಂದ ಸೇನಾ ಮುಖ್ಯಸ್ಥರಾದ ಮೊದಲ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಶತಾಯ ಗತಾಯ ಕಮಲ ಅರಳಿಸಲು ಬಿಜೆಪಿ ಪ್ಲಾನ್ – ಲಕ್ಷ್ಮೀ ಅಶ್ವಿನ್ ಗೌಡಗೆ ಗಾಳ

    ಈ ಹಿಂದೆ ಪೂರ್ವ ಸೇನಾ ಕಮಾಂಡ್ ಮುಖ್ಯಸ್ಥರಾಗಿ ಚೀನಾ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ಗಡಿಯನ್ನು ನಿಭಾಯಿಸುತ್ತಿದ್ದರು. ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿರುವ ಪಾಂಡೆ 1982ರಲ್ಲಿ ಇಂಜಿನಿಯರ್ ಕಾಪ್ರ್ಸ್‍ಗೆ ನಿಯೋಜಿಸಲ್ಪಟ್ಟರು. ಆಪರೇಷನ್ ಪರಾಕ್ರಮ್ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಲ್ಲನ್ವಾಲಾ ಸೆಕ್ಟರ್‌ನಲ್ಲಿ 117 ಇಂಜಿನಿಯರ್ ರೆಜಿಮೆಂಟ್‍ಗೆ ಕಮಾಂಡ್ ಆಗಿ ಸೇವೆ ಸಲ್ಲಿಸಿದ್ದರು.

  • ಬಿಪಿನ್ ಸ್ಥಾನ ತುಂಬುವವರೆಗೆ ನರಾವಣೆ ಚೀಫ್ ಆಫ್ ಸ್ಟಾಫ್ ಅಧ್ಯಕ್ಷ

    ನವದೆಹಲಿ: ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ನಿಧನದ ನಂತರ ಹೊಸ ಸಿಡಿಎಸ್ ನೇಮಕಗೊಳ್ಳ ಬೇಕಿದೆ. ಈಗಿರುವ ಮೂರು ಸೇನಾ ಮುಖ್ಯಸ್ಥರಲ್ಲಿ ಜನರಲ್ ಎಂಎಂ ನರಾವಣೆ ಅವರು ಚೀಫ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅವರು ಹಿರಿಯ ಅಧಿಕಾರಿಯಾಗಿದ್ದು, ಸಿಡಿಎಸ್ ಕಚೇರಿ ಅಸ್ತಿತ್ವಕ್ಕೆ ಬರುವ ಮೊದಲು ಇದ್ದ ಸ್ಥಿತಿಯಂತೆ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹೊಸ ಸಿಡಿಎಸ್ ನೇಮಕಗೊಳ್ಳುವವರೆಗೆ ಅಥವಾ ಸಿಡಿಎಸ್ ಅನುಪಸ್ಥಿತಿಯಲ್ಲಿ ಅತ್ಯಂತ ಹಿರಿಯ ಮುಖ್ಯಸ್ಥರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದು ಕಾರ್ಯ ವಿಧಾನದ ಹಂತವಾಗಿದೆ. ಇದನ್ನೂ ಓದಿ: ಸಿಎಂ ರ‍್ಯಾಲಿ ವೇಳೆ ನಿರುದ್ಯೋಗಿ ಶಿಕ್ಷಕರ ಮೇಲೆ ಪೊಲೀಸರ ದಬ್ಬಾಳಿಕೆ – ವೀಡಿಯೋ ವೈರಲ್

    ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಫ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ರಕ್ಷಣಾ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ ಮತ್ತು ಇತರ 10 ಮಂದಿ ಸಾವನ್ನಪ್ಪಿದ್ದರು. ಇದರ ಹಿನ್ನೆಲೆಯಲ್ಲಿ ಬದಲಾವಣೆಯನ್ನು ತರಲಾಗಿದೆ. ಇದನ್ನೂ ಓದಿ: ಬಿಪಿನ್ ರಾವತ್ ಬಳಿಕ ಭಾರತದ ಮುಂದಿನ CDS ಯಾರು?

    ಈ ಹಿಂದೆಯೂ ಸಿಡಿಎಸ್ ನೇಮಕಕ್ಕೂ ಮುನ್ನ ಇದೇ ವ್ಯವಸ್ಥೆ ಅನುಸರಿಸಲಾಗುತ್ತಿತ್ತು.

  • ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ: ಎಂ.ಎಂ ನರವಾಣೆ

    ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ: ಎಂ.ಎಂ ನರವಾಣೆ

    ಲೇಹ್: ಭಾರತ ಮತ್ತು ಚೀನಾ ಗಡಿ ಹಂಚಿಕೊಂಡಿರುವ ಪೂರ್ವ ಲಡಾಕ್‍ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಭೂ ಸೇನಾ ಮುಖ್ಯ ಎಂ.ಎಂ ನರವಾಣೆ ಪ್ರತಿಕ್ರಿಯಿಸಿದ್ದಾರೆ.

    ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಅವರು ಎರಡು ದಿನಗಳ ಕಾಲ ಲೇಹ್ ಮತ್ತು ಲಡಾಕ್ ಗೆ ಭೇಟಿ ನೀಡಿದ್ದಾರೆ. ಭೇಟಿ ವೇಳೆ ಸ್ಥಳೀಯ ಅಧಿಕಾರಿಗಳು ಮತ್ತು ಸೈನಿಕರನ್ನು ಭೇಟಿ ಮಾಡಿ ಪರಿಸ್ಥಿತಿ ಅವಲೋಕನ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

    ಗಡಿಯಲ್ಲಿ ಸೈನಿಕರ ಆತ್ಮಸೈರ್ಯ ಹೆಚ್ಚಾಗಿದೆ. ಯಾವುದೇ ಸವಾಲುಗಳನ್ನು ಎದರಿಸಲು ಸಿದ್ಧರಾಗಿದ್ದಾರೆ. ಗಡಿಯಲ್ಲಿ ಗಂಭೀರ ಪರಿಸ್ಥಿತಿ ಇದ್ದು ನಾವು ಇದನ್ನು ನಾಜೂಕಾಗಿ ನಿಭಾಯಿಸಬೇಕು. ಇದಕ್ಕಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಸುರಕ್ಷತೆಯನ್ನು ಹೆಚ್ಚು ಮಾಡಿದೆ. ಎಲ್ಲ ಪರಿಸ್ಥಿತಿಗೂ ಸೂಕ್ತ ಉತ್ತರ ಕೊಡುವ ಭರವಸೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

    ಅಗಸ್ಟ್ 29 ರಿಂದ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ಬಾರಿ ಚೀನಾ ಭಾರತದ ಭೂ ಪ್ರದೇಶವನ್ನು ಅತಿಕ್ರಮಿಸಿಲು ಪ್ರಯತ್ನಿಸಿ ವಿಫಲವಾಗಿದೆ. ಈ ಸಂಬಂಧ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆಗಳು ನಡೆಯುತ್ತಿದ್ದು ಸಭೆ ಯಶಸ್ವಿಯಾಗಿಲ್ಲ. ಈ ಹಿನ್ನೆಲೆ ಗಡಿಗೆ ಭೇಟಿ ಕೊಟ್ಟ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಪರಿಸ್ಥಿತಿ ಪರಿಶೀಲಿಸಿದರು.

  • ಭಾರತದಿಂದ ವಿಶ್ವಕ್ಕೆ ಔಷಧಿ ಪೂರೈಕೆ, ಪಾಕ್‍ನಿಂದ ಭಯೋತ್ಪಾದನೆ ರಫ್ತು: ಆರ್ಮಿ ಮುಖ್ಯಸ್ಥ ಗರಂ

    ಭಾರತದಿಂದ ವಿಶ್ವಕ್ಕೆ ಔಷಧಿ ಪೂರೈಕೆ, ಪಾಕ್‍ನಿಂದ ಭಯೋತ್ಪಾದನೆ ರಫ್ತು: ಆರ್ಮಿ ಮುಖ್ಯಸ್ಥ ಗರಂ

    – ಪುಂಡಾಟ ಮುಂದುವರಿಸಿದ ಪಾಕ್

    ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧ ಭಾರತ ಹೋರಾಡುತ್ತಿದೆ. ಅಷ್ಟೇ ಅಲ್ಲದೆ ವಿವಿಧ ದೇಶಗಳಿಗ ಸಹಾಯ ಮಾಡುತ್ತಿದೆ. ಇಂತಹ ಪರಿಸ್ಥಿತಿ ಪಾಕಿಸ್ತಾನ ತನ್ನ ಪುಂಡಾಟವನ್ನು ಮುಂದುವರಿಸಿದೆ ಎಂದು ಆರ್ಮಿ ಮುಖ್ಯಸ್ಥ ಜನರಲ್‌ ಮನೋಜ್ ಮುಕುಂದ್ ನರವಾಣೆ ಗುಡುಗಿದ್ದಾರೆ.

    ಆರ್ಮಿ ಮುಖ್ಯಸ್ಥ ಜನರಲ್‌ ನರವಾಣೆ ಅವರ ಹೇಳಿಕೆಯ ಕೆಲವೇ ಗಂಟೆಗಳ ಮುನ್ನ ಪಾಕಿಸ್ತಾನ ಸೇನೆಯು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (ಎಲ್‍ಒಸಿ) ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಯತ್ನಿಸಿತ್ತು. ಅಷ್ಟೇ ಅಲ್ಲದೆ ಕಸ್ಬಾ ಮತ್ತು ಕಿರ್ನಿ ವಲಯಗಳಲ್ಲಿನ ಎಲ್‍ಒಸಿ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿತ್ತು.

    ಕುಪ್ವಾರಾದಲ್ಲಿ ಮಾತನಾಡಿದ ಆರ್ಮಿ ಮುಖ್ಯಸ್ಥ ಜನರಲ್‌ ನರವಾಣೆ ಅವರು, ”ನಾವು ನಮ್ಮ ನಾಗರಿಕರಿಗೆ ಮಾತ್ರವಲ್ಲದೆ ವಿಶ್ವದ ಇತರ ಭಾಗಗಳಿಗೆ ವೈದ್ಯಕೀಯ ತಂಡ, ಔಷಧಿಗಳನ್ನು ರಫ್ತು ಮಾಡಿ ಕೊರೊನಾ ವಿರುದ್ಧ ಹೋರಾಡುತ್ತಿದ್ದೇವೆ. ಆದರೆ ಮತ್ತೊಂದೆಡೆ ಪಾಕಿಸ್ತಾನ ಭಯೋತ್ಪಾದನೆಯನ್ನು ಮಾತ್ರ ರಫ್ತು ಮಾಡುತ್ತಿದೆ. ಇದು ಉತ್ತಮ ಬೆಳವಣಿಗೆಯಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

    ಇಲ್ಲಿಯವರೆಗೆ ಭಾರತೀಯ ಸೈನ್ಯದಲ್ಲಿ ಕೇವಲ 8 ಜನರಿಗೆ ಕೊರೊನಾ ಸೋಂಕು ತಗುಲಿದೆ. ಅವರಲ್ಲಿ 2 ವೈದ್ಯರು ಮತ್ತು 1 ನರ್ಸಿಂಗ್ ಸಹಾಯಕ, 4 ಜನರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಲಡಾಖ್‍ನಲ್ಲಿ ಒಬ್ಬರಿಗೆ ಸೋಂಕು ತಗುಲಿತ್ತು ಅವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಮತ್ತು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ತಿಳಿಸಿದರು.

    ಯಾವುದೇ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿರದ ಯೋಧರನ್ನು ಮತ್ತೆ ಘಟಕಗಳಿಗೆ ಸ್ಥಳಾಂತರಿಸಲಾಗುತ್ತಿದೆ. ನಾವು ಈಗಾಗಲೇ ಎರಡು ವಿಶೇಷ ರೈಲುಗಳನ್ನು ಒದಗಿಸಿದ್ದೇವೆ. ಬೆಂಗಳೂರಿನಿಂದ ಜಮ್ಮು ಮತ್ತು ಬೆಂಗಳೂರಿನಿಂದ ಗುವಾಹಟಿಗೆ ರೈಲು ಸೇವೆ ಕಲ್ಪಿಸಲಾಗಿದ್ದು, ಅಲ್ಲಿಂದ ಯೋಧರನ್ನು ಕರೆತರಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ದೇವೇಂದರ್ ಆನಂದ್ ಅವರು, ”ಇಂದು ಬೆಳಗ್ಗೆ 11 ಗಂಟೆಗೆ ಪಾಕಿಸ್ತಾನವು ಕಸ್ಬಾ ಮತ್ತು ಕಿರ್ನಿ ವಲಯಗಳಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರ ಮತ್ತು ಗಾರೆಗಳಿಂದ ಗುಂಡು ಹಾರಿಸುವ ಮೂಲಕ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಮಾಡಿದೆ. ಇದಕ್ಕೆ ಭಾರತೀಯ ಸೇನೆಯು ಸೂಕ್ತವಾಗಿ ಪ್ರತೀಕಾರ ತೀರಿಸುತ್ತಿದೆ” ಎಂದು ತಿಳಿಸಿದ್ದಾರೆ.

    ಪಾಕಿಸ್ತಾನದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 6000ಕ್ಕೆ ತಲುಪಿದ್ದರೆ, ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 117ಕ್ಕೆ ತಲುಪಿದೆ. ವಿಶ್ವಾದ್ಯಂತ 1.3 ಲಕ್ಷಕ್ಕೂ ಹೆಚ್ಚು ಜನರು ಕೊರೊನಾಗೆ ಬಲಿಯಾಗಿದ್ದಾರೆ.