Tag: Mobile phones

  • ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ನವದೆಹಲಿ: ಹೊಸ ಮದ್ಯನೀತಿಯಲ್ಲಿ (Delhi excise policy) ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ವಿಚಾರಣೆಗೆ ಹಾಜರಾದ ತೆಲಂಗಾಣ ಪರಿಷತ್ ಸದಸ್ಯೆ, ಮುಖ್ಯಮಂತ್ರಿ ಕೆ.ಸಿ ಆರ್ ಚಂದ್ರಶೇಖರ್ ರಾವ್ (KC Chandrasekhar Rao) ಪುತ್ರಿ ಕೆ. ಕವಿತಾ (K Kavitha) ಅವರ ಮೊಬೈಲ್ ಫೋನ್‌ಗಳನ್ನು (Mobile Phones) ಇಡಿ (ED) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಇಂದು ನಡೆದ ವಿಚಾರಣೆ ವೇಳೆ ಒಟ್ಟು ಮೂರು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ. ಮೊಬೈಲ್ ಫೋನ್ ಜೊತೆಗೆ ಪತ್ರವನ್ನು ನೀಡಿರುವ ಕೆ. ಕವಿತಾ ಗೌಪ್ಯತೆ ಧಕ್ಕೆಯಾಗುವ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

    ವಿಚಾರಣೆಗೆ ತೆರಳುವ ಮುನ್ನ ಮಾತನಾಡಿದ ಅವರು, ದಾಖಲೆಗಾಗಿ ಏಜೆನ್ಸಿಯಿಂದ ನನ್ನನ್ನು ಮೊದಲ ಬಾರಿಗೆ ವಿಚಾರಣೆಗೆ ಕರೆಯಲಾಯಿತು. 2022ರ ನವೆಂಬರ್‌ನಲ್ಲಿ ನನ್ನ ವಿರುದ್ಧ ಮಾಡಿದ ಆರೋಪವು ದುರುದ್ದೇಶಪೂರಿತವಾಗಿದೆ, ತಪ್ಪಾಗಿ ಗ್ರಹಿಸಲ್ಪಟ್ಟಿದೆ. ತಮ್ಮ ವಿರುದ್ಧದ ‘ಸುಳ್ಳು’ ಆರೋಪ ಮಾಡಲಾಗುತ್ತಿದೆ ಎಂದು ಆರೋಪಿಸಿದರು‌. ಇದನ್ನೂ ಓದಿ: ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

    ಮಾರ್ಚ್ 11 ಮತ್ತು ಮಾರ್ಚ್ 20ರಂದು ಎರಡು ಬಾರಿ ಈ ಹಿಂದೆ ಇಡಿ ಅಧಿಕಾರಿಗಳು 18-19 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು‌. ಸೋಮವಾರ ಸುಮಾರು ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಮಂಗಳವಾರದ ನಾಲ್ಕನೇ ದಿನದ ವಿಚಾರಣೆ ವೇಳೆ ಅವರ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮುಂದುವರಿಸಲಾಗುತ್ತಿದೆ. ಇದನ್ನೂ ಓದಿ: ಮರಣದಂಡನೆಗೆ ಯಾವ ವಿಧಾನ ಸೂಕ್ತ?- ತಜ್ಞರ ವರದಿ ಕೇಳಿದ ಸುಪ್ರೀಂಕೋರ್ಟ್

  • ಬ್ಲ್ಯಾಕ್‌ಬೆರಿ ಫೋನ್‌ಗಳು ಇಂದಿನಿಂದ ನಿಷ್ಕ್ರಿಯ

    ಒಟ್ಟಾವಾ: ನಿಮ್ಮ ಬಳಿ ಬ್ಲ್ಯಾಕ್‌ಬೆರಿ ಕಂಪನಿಯ ಫೋನ್ ಇದೆಯೇ? ಹಾಗಿದ್ದರೆ ಇಂದಿನಿಂದ ಅವುಗಳು ನಿಮ್ಮ ಡ್ರಾಯರ್ ಇಲ್ಲವೇ ಶೋಕೇಸ್ ಸೇರಲಿದೆ. ಏಕೆಂದರೆ ಈ ಫೋನ್‌ಗಳು ಇಂದಿನಿಂದ ಕಾರ್ಯ ನಿರ್ವಹಿಸುವುದಿಲ್ಲ.

    ಕ್ವಾರ್ಟಿ ಕೀಪ್ಯಾಡ್ ಜನಪ್ರಿಯಗೊಳಿಸಿದ ಬ್ಲ್ಯಾಕ್‌ಬೆರಿ ಫೋನ್‌ಗಳು ಇಂದಿನಿಂದ ಕಾರ್ಯ ನಿರ್ವಹಿಸುವುದಿಲ್ಲ. ನೀವು ಈ ಫೋನ್‌ಗಳಿಂದ ಕರೆ ಮಾಡಲು, ಸಂದೇಶ ಕಳುಹಿಸಲು, ಇಂಟರ್‌ನೆಟ್, ವೈಫೈಗಳಂತಹ ಸೇವೆಗಳನ್ನು ಬಳಸಲು ಸಾಧ್ಯವಾಗುವುದಿಲ್ಲ ಎಂದು ಕಂಪನಿ ತನ್ನ ಅಧಿಕೃತ ಮಾಹಿತಿಯಲ್ಲಿ ತಿಳಿಸಿದೆ.

    ಬ್ಲ್ಯಾಕ್‌ಬೆರಿ 7.1 ಒಎಸ್, ಬ್ಲ್ಯಾಕ್‌ಬೆರಿ 10 ಸಾಫ್ಟ್ವೇರ್, ಬ್ಲ್ಯಾಕ್‌ಬೆರಿ ಪ್ಲೇಬುಕ್2.1 ಹಾಗೂ ಇದರ ಹಿಂದಿನ ಆವೃತ್ತಿಗಳು ಲೆಗೆಸಿ ಸೇವೆಗಳು 4 ಜನವರಿ 2022ರಿಂದ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ ಎಂದು ಕಂಪನಿ ತಿಳಿಸಿತ್ತು. ಇದನ್ನೂ ಓದಿ: Whatsapp – ಒಂದೇ ತಿಂಗಳಲ್ಲಿ ಭಾರತೀಯರ 17 ಲಕ್ಷ ಖಾತೆಗಳು ಬ್ಯಾನ್‌

    ಫೋನ್‌ಗಳು ಕಾರ್ಯನಿರ್ವಹಿಸದೇ ಇರುವ ಫೋನ್‌ಗಳು ಕೇವಲ ಹಳೆಯ ಆವೃತ್ತಿಯಾಗಿದೆ. ಆಂಡ್ರಾಯ್ಡ್ ಓಎಸ್ ಹೊಂದಿರುವ ಬ್ಲ್ಯಾಕ್‌ಬೆರಿ ಮೊಬೈಲ್‌ಗಳನ್ನು ಬಳಸುವವರು ಚಿಂತೆ ಪಡುವ ಅಗತ್ಯ ಇಲ್ಲ. ಈ ಸಾಧನಗಳು ಮುಂದೆಯೂ ಕಾರ್ಯನಿರ್ವಹಿಸಲಿದೆ.

    ಬ್ಲ್ಯಾಕ್‌ಬೆರಿ ಕಂಪನಿ ಸಿಇಒ ಜಾನ್ ಚೆನ್ 2020ರಲ್ಲಿ ಕಂಪನಿ ಸಾಫ್ಟ್‌ವೇರ್ ಕಂಪನಿಯಾಗಿ ಪರಿವರ್ತನೆಯಾಗಿದೆ ಎಂದು ಘೋಷಿಸಿದ್ದರು. ಬ್ಲ್ಯಾಕ್‌ಬೆರಿ ಲಿಂಕ್, ಬ್ಲ್ಯಾಕ್‌ಬೆರಿ ಡೆಸ್ಕ್ ಟಾಪ್ ಮ್ಯಾನೇಜರ್, ಬ್ಲ್ಯಾಕ್‌ಬೆರಿ ಬ್ಲೆಂಡ್, ಬ್ಲ್ಯಾಕ್‌ಬೆರಿ ಪ್ರೊಟೆಕ್ಟ್‌ಗಳ ಮೇಲೂ ಈ ಮುಕ್ತಾಯದ ಪ್ರಭಾವ ಬೀರಲಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: 35 ರೂ. ಬೆಲೆ ಬಾಳುವ ಕೋವಿಡ್ ಆಂಟಿವೈರಲ್ ಡ್ರಗ್ ಮುಂದಿನ ವಾರ ಮಾರುಕಟ್ಟೆಗೆ

    ನಿಮ್ಮ ಬ್ಲ್ಯಾಕ್‌ಬೆರಿ ಫೋನ್‌ನಲ್ಲಿ ಸಂಗ್ರಹವಾಗಿರುವ ಡೇಟಾದ ಬಗ್ಗೆ ನೀವು ಚಿಂತಿಸುತ್ತಿದ್ದರೆ, ಇದಕ್ಕೂ ಬ್ಲ್ಯಾಕ್‌ಬೆರಿ ಪರಿಹಾರ ಹುಡುಕಿದೆ. ಇದಕ್ಕಾಗಿ ಕಂಪನಿ ಬಳಕೆದಾರರ ಕೆಲವು ವೈಯಕ್ತಿಕ ಮಾಹಿತಿಗಳನ್ನು ಕೆಲವು ಸಮಯಗಳ ವರೆಗೆ ಉಳಿಸಿಕೊಳ್ಳುತ್ತದೆ ಹಾಗೂ ಬಳಕೆದಾರರಿಗೆ ಆ ಮಾಹಿತಿಗಳ ಅಗತ್ಯ ಇಲ್ಲವಾದಲ್ಲಿ ಅಳಿಸಿ ಹಾಕುತ್ತದೆ ಎಂದು ಕಂಪನಿ ತಿಳಿಸಿದೆ.

  • ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಮೊಬೈಲ್ ಜಪ್ತಿ – ಫೋನ್ ನೋಡಿ ಪೋಷಕರು ಶಾಕ್

    ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಮೊಬೈಲ್ ಜಪ್ತಿ – ಫೋನ್ ನೋಡಿ ಪೋಷಕರು ಶಾಕ್

    ಕಾರವಾರ: ಕೊರೊನಾ ಬಂದ ನಂತರ ಆನ್‍ಲೈನ್ ಕ್ಲಾಸ್‍ಗಳಿಗೆ ಮಕ್ಕಳ ಕೈಗಳಲ್ಲಿ ಮೊಬೈಲ್‍ಗಳು ಬಂದು ಕುಳಿತಿವೆ. ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ತೊಡಕಾಗಬಾರದು ಎಂದು ಹಲವು ಪೋಷಕರು, ಮಕ್ಕಳಿಗೆ ತಮ್ಮ ಕಷ್ಟಗಳನ್ನು ಬದಿಗೊತ್ತಿ ಮೊಬೈಲ್ ಖರೀದಿ ಮಾಡಿಕೊಟ್ಟಿದ್ದರು. ಇದೀಗ ಭೌತಿಕ ತರಗತಿ (ಆಫ್‍ಲೈನ್ ಕ್ಲಾಸ್)ಗಳು ಪ್ರಾರಂಭವಾಗಿದೆ. ಆದ್ರೆ ಈ ಮೊಬೈಲ್ ವ್ಯಾಮೋಹ ಮಾತ್ರ ಮಕ್ಕಳನ್ನು ಬಿಟ್ಟು ಹೋಗುತ್ತಿಲ್ಲ.

    ಆನ್‍ಲೈನ್ ತರಗತಿಗೆ ಮಾತ್ರ ಸೀಮಿತವಾಗಿದ್ದ ಮೊಬೈಲ್ ವಿದ್ಯಾರ್ಥಿಗಳ ಕೈಯಲ್ಲಿ ಚಾಟಿಂಗ್, ಗೇಮಿಂಗ್, ಅಶ್ಲೀಲ ವೀಡಿಯೋ ವೀಕ್ಷಣೆಗೆ ಬಳಕೆಯಾಗುತ್ತಿದೆ. ಹೌದು ಇದಕ್ಕೆ ನಿದರ್ಶನ ಎನ್ನುವಂತೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸರ್ಕಾರಿ ಪಿ.ಯು ಕಾಲೇಜಿನಲ್ಲಿ ಇಂದು ಕಾಲೇಜಿನ ಪ್ರಾಚಾರ್ಯರು ತರಗತಿ ಸಮಯದಲ್ಲಿ ವಿದ್ಯಾರ್ಥಿಗಳು ಬಳಸುತಿದ್ದ 250 ವಿವಿಧ ಕಂಪನಿಯ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿದಾಗ ಹಲವು ಪೋಷಕರಿಗೆ ತಮ್ಮ ಮಕ್ಕಳ ಬಳಿ ಮೊಬೈಲ್ ಇರುವುದೇ ತಿಳಿದಿರಲಿಲ್ಲ. ಹಲವು ವಿದ್ಯಾರ್ಥಿಗಳ ಮೊಬೈಲ್‍ನಲ್ಲಿ ಗೂಗಲ್ ಹಿಸ್ಟರಿ ತೆಗೆದು ನೋಡಿದಾಗ ಅಶ್ಲೀಲ ವೀಡಿಯೋ ಸೇರಿದಂತೆ ಇತರೆ ವೀಡಿಯೋ ನೋಡಿರುವುದು ಗಮನಕ್ಕೆ ಬಂದಿದೆ. ಇನ್ನೂ ಕೆಲವರು ಮೊಬೈಲ್ ಮರಳಿ ಪಡೆಯಲು ತಮ್ಮ ಪೋಷಕರು ಎಂದು ಇತರೆ ವ್ಯಕ್ತಿಗಳನ್ನು ಕರೆತಂದು ಪ್ರಾಚಾರ್ಯರ ಕೈಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇದನ್ನೂ ಓದಿ: ನಾನು ಮಂತ್ರಿ ಆಗಿರುವವರೆಗೆ ನನ್ನ ಮಗ MLA,MLC ಆಗುವುದು ಬೇಡ: ಈಶ್ವರಪ್ಪ

    ಕಾಲೇಜು ಪ್ರಾರಂಭವಾದಾಗ ಮಕ್ಕಳು ಅಧ್ಯಯನದ ಕಡೆ ಗಮನ ನೀಡದಿರುವುದು ಗಮನಕ್ಕೆ ಬಂತು. ಇತರೆ ಚಟುವಟಿಕೆಯಲ್ಲಿ ಸಹ ವಿದ್ಯಾರ್ಥಿಗಳು ಹಿಂದೆ ಬಿದ್ದಿದ್ದರು, ಸದಾ ಮೊಬೈಲ್‍ನಲ್ಲಿ ಮಕ್ಕಳು ಕಾಲ ಕಳೆಯುವುದನ್ನು ನೋಡಿ ಅನಿವಾರ್ಯವಾಗಿ ಕಾಲೇಜಿನಲ್ಲಿ ಮಕ್ಕಳ ಮೊಬೈಲ್ ಅನ್ನು ಜಪ್ತಿ ಮಾಡಲಾಯಿತು ಎಂದು ಕಾಲೇಜಿನ ಪ್ರಾಂಶುಪಾಲ ಸತೀಶ್ ನಾಯ್ಕ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲ್ಯೂಷನ್ ಲಾಕ್‍ಡೌನ್ – 1 ವಾರ ಆನ್‌ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂ

    ಸದ್ಯ ಮಕ್ಕಳಿಗೆ ಎಚ್ಚರಿಕೆ ನೀಡಿ ಮೊಬೈಲ್ ಅನ್ನು ಮರಳಿ ನೀಡಲಾಗಿದೆ. ಆದರೇ ಮಕ್ಕಳು ಮೊಬೈಲ್‍ಗಳನ್ನು ಅಧ್ಯಯನ ವಿಷಯಕ್ಕೆ ಹೊರತುಪಡಿಸಿ, ಇತರೆ ವಿಷಯಗಳಿಗೆ ಬಳಸುತ್ತಿರುವುದು ಮಾತ್ರ ಆತಂಕ ತರುವಂತೆ ಮಾಡಿದೆ.

  • ಸಭೆಯಲ್ಲಿ ಮೊಬೈಲ್ ಬಳಸ್ಬೇಡಿ: ಸಚಿವರಿಗೆ ಯೋಗಿ ಸೂಚನೆ

    ಸಭೆಯಲ್ಲಿ ಮೊಬೈಲ್ ಬಳಸ್ಬೇಡಿ: ಸಚಿವರಿಗೆ ಯೋಗಿ ಸೂಚನೆ

    – ಕ್ಯಾಬಿನೆಟ್ ಸಭೆಗೂ ಸೂಚನೆ ಅನ್ವಯ

    ಲಕ್ನೋ: ಅಧಿಕೃತ ಸಭೆಯಲ್ಲಿ ಮೊಬೈಲ್ ಫೋನ್ ಬಳಸದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಚಿವರಿಗೆ ಸೂಚನೆ ನೀಡಿದ್ದಾರೆ.

    ಚರ್ಚೆಯಲ್ಲಿ ಸಚಿವರು ಭಾಗಿಯಾಗುತ್ತಿದ್ದಾರೆ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಮೊಬೈಲ್‍ನಿಂದ ಉಂಟಾಗುವ ಅಡಚಣೆ ತಡೆಯುವ ನಿಟ್ಟಿಯಲ್ಲಿ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಆದೇಶವು ಕ್ಯಾಬಿನೆಟ್ ಸಭೆಗೂ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿಗಳ ಹಿರಿಯ ಕಾರ್ಯದರ್ಶಿಯೊಬ್ಬರು ತಿಳಿಸಿದ್ದಾರೆ.

    ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರ ಎದುರಿಸುತ್ತಿರುವ ಸವಾಲುಗಳ ಕುರಿತಾದ ಚರ್ಚೆಯಲ್ಲಿ ಸಚಿವರು ಗಮನ ಕೇಂದ್ರಿಕರಿಸಬೇಕು. ಸಭೆ ನಡೆದಾಗ ಮೊಬೈಲ್‍ನಿಂದ ಅಡಚಣೆ ಉಂಟಾಗುತ್ತಿದೆ. ಅಷ್ಟೇ ಅಲ್ಲದೆ ಕೆಲವು ಸಚಿವರು ಸಭೆಯಲ್ಲಿಯೂ ಮೊಬೈಲ್ ಹಿಡಿದುಕೊಂಡು ವಾಟ್ಸಪ್ ಮೆಸೇಜ್ ಮಾಡುವುದರಲ್ಲಿ ನಿರತರಾಗಿರುತ್ತಾರೆ. ಈ ಎಲ್ಲ ಕಾರಣಗಳಿಂದಾಗಿ ಅಧಿಕೃತ ಸಭೆಯಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಮೊಬೈಲ್ ಫೋನ್ ಹ್ಯಾಕ್ ಮಾಡುವ ಮೂಲಕ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಬಹಿರಂಗವಾಗುತ್ತವೆ ಎಂಬ ಕಾರಣಕ್ಕೂ ಯೋಗಿ ಆದಿತ್ಯನಾಥ್ ಇಂತಹ ನಿರ್ಧಾರ ಕೈಗೊಂಡಿದ್ದಾರೆ ಎಂದು ಕೇಳಿ ಬಂದಿದೆ.

    ಈ ಹಿಂದೆ ಸಭೆಗೆ ಮೊಬೈಲ್ ಫೋನ್ ತರಲು ಮಂತ್ರಿಗಳಿಗೆ ಅವಕಾಶವಿತ್ತು. ಆದರೆ ಸೈಲೆಂಟ್ ಮೂಡ್‍ನಲ್ಲಿ ಇಡಬೇಕು, ಇಲ್ಲವೆ ಸ್ವಿಚ್‍ಆಫ್ ಮಾಡಬೇಕು ಎಂದು ಸೂಚನೆ ನೀಡಲಾಗಿತ್ತು. ಆದರೆ ಈಗ ಸಭೆಗೂ ಮುನ್ನ ಕೌಂಟರ್ ನಲ್ಲಿ ಮೊಬೈಲ್ ಇಟ್ಟು ಟೋಕನ್ ಪಡೆಯಬೇಕು. ಸಭೆಯ ಬಳಿಕ ಟೋಕನ್ ನೀಡಿ ತಮ್ಮ ತಮ್ಮ ಮೊಬೈಲ್ ಪಡೆಬೇಕು ಎನ್ನುವ ಸೂಚನೆಯನ್ನು ಯೋಗಿ ಆದಿತ್ಯನಾಥ್ ನೀಡಿದ್ದಾರೆ ಎನ್ನಲಾಗಿದೆ.

    ಈ ಸೂಚನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವರಿಗೆ ನೀಡಿದ್ದರು.