Tag: Modi Guarantee

  • ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಪ್ರಧಾನಿ

    ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಪ್ರಧಾನಿ

    ಲಕ್ನೋ: ಮೋದಿ ಗ್ಯಾರಂಟಿಗೆ (Modi Guarantee) ತಾಜಾ ಉದಾಹರಣೆ ಸಿಎಎ. ಸಿಎಎ (CAA) ಅಡಿಯಲ್ಲಿ ಪೌರತ್ವ ಪ್ರಮಾಣ ಪತ್ರ ನೀಡಲು ಆರಂಭಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    ಉತ್ತರ ಪ್ರದೇಶದ (Uttar Pradesh) ಲಾಲ್‌ಗಂಜ್‌ನಲ್ಲಿ (Lalganj) ಮಾತನಾಡಿದ ಅವರು, ವಿದೇಶಗಳಿಂದ ಬಂದಿರುವ ಅಲ್ಪಸಂಖ್ಯಾತರು ನಮ್ಮ ದೇಶದಲ್ಲಿದ್ದಾರೆ. ಧರ್ಮದ ಆಧಾರದ ಮೇಲೆ ದೇಶ ಹಂಚಿಕೆಯಾದಾಗ ಬಲಿಯಾದವರು ಇವರು. ಅವರು ಯಾವಾಗ ಬೇಕಾದರೂ ಬರಬಹುದು ಎಂದು ಗಾಂಧೀಜಿ ಹೇಳಿದ್ದರು. ಆದರೆ ಕಾಂಗ್ರೆಸ್ ಈ ಜನರ ಬಗ್ಗೆ ಗಮನಿಸಿಲ್ಲ. ಇಲ್ಲಿನ ಮತಬ್ಯಾಂಕ್‌ಗಾಗಿ ಗಮನಿಸಿಲ್ಲ. ದಲಿತ, ಓಬಿಸಿ ಸಮುದಾಯದ ಜನರು ಕಷ್ಟದಲ್ಲಿದ್ದರು. ಅವರನ್ನು ಕರೆತರುವ ಕೆಲಸ ನಾವು ಮಾಡಿದ್ದೇವೆ ಎಂದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಪರ ಡಿಕೆಶಿ ಪ್ರಚಾರ – ಮೋದಿಗೆ ಸಾಲು ಸಾಲು ಪ್ರಶ್ನೆ

    ಹತ್ತು ವರ್ಷಗಳ ಹಿಂದೆ ಜನರು ದೇವರ ಭರವಸೆಯಲ್ಲಿ ಬದುಕುತ್ತಿದ್ದರು. ಕೆಲವು ಕಡೆ ಬಾಂಬ್ ದಾಳಿ, ಕೆಲವು ಕಡೆ ಸ್ಲೀಪರ್ ಸೆಲ್, ಕೆಲವು ಕಡೆ ಕೋಮು ಘರ್ಷಣೆ, ಇನ್ನೂ ಕೆಲವು ಕಡೆ ಭಯೋತ್ಪಾದನೆಯಿಂದ ಸಂಕಷ್ಟ ಪರಿಸ್ಥಿತಿ ಇತ್ತು. ಸಾವಿರಾರು ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡರು. ಈ ಹಿಂದಿನ ಸರ್ಕಾರಗಳು ಇಂತಹ ಜನರಿಗೆ ಸಹಕಾರ ನೀಡುತ್ತಿದ್ದವು. ಈಗಲೂ ನಿಮ್ಮ ಮೀಸಲಾತಿಯನ್ನು ಕಿತ್ತು ಸಮುದಾಯವೊಂದಕ್ಕೆ ನೀಡಲು ಚಿಂತಿಸಿವೆ. ಬಜೆಟ್ 15% ಅಲ್ಪಸಂಖ್ಯಾತರ ಹೆಸರಿನಲ್ಲಿ ಹೋಗುತ್ತಿದೆ. 70 ವರ್ಷಗಳಿಂದ ಹಿಂದೂ-ಮುಸ್ಲಿಂ ರಾಜಕೀಯ ಮಾಡಿವೆ. ನಾವು ಒಂದಾಗಿ ಹೋಗಬೇಕು. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ

  • ದೇವೇಗೌಡರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ – ಮೋದಿ ಗುಣಗಾನ

    ದೇವೇಗೌಡರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ – ಮೋದಿ ಗುಣಗಾನ

    – ನನ್ನ ಪ್ರತಿ ಕಣಕಣದಲ್ಲೂ ದೇಶ, ದೇಶದ ಜನರೇ ಇದ್ದಾರೆ ಎಂದ ಪ್ರಧಾನಿ
    – 24 ಗಂಟೆಯೂ ನಿಮಗಾಗಿ ದುಡಿಯುತ್ತೇನೆಂದ ಮೋದಿ

    ಚಿಕ್ಕಬಳ್ಳಾಪುರ: ದೇಶದಲ್ಲಿ ಜನರ ಉತ್ಸಾಹ ಹೆಚ್ಚಾಗಿದೆ. ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು ಅಂತಾ ಜನ ಭಾವಿಸಿದ್ದಾರೆ. ಆ ಉತ್ಸಾಹ ನನಗೆ ಕಾಣಿಸುತ್ತಿದೆ. ಅಲ್ಲದೇ ದೇವೇಗೌಡರು (HD Deve Gowda) ಐ.ಎನ್.ಡಿ.ಐ.ಎ ಒಕ್ಕೂಟದ ಒಬ್ಬೊಬ್ಬರ ಬಗ್ಗೆಯೂ ಹೇಳಿದ್ದಾರೆ. ಅವರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ ಎಂದು ಪ್ರಧಾನಿ ಮೋದಿ (Narendra Modi) ಶ್ಲಾಘಿಸಿದ್ದಾರೆ.

    ಚಿಕ್ಕಬಳ್ಳಾಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಪಕ್ಷದ ಜಯಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇವೇಗೌಡರನ್ನು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಬರಿದಾದ ಚೊಂಬನ್ನು ಅಕ್ಷಯ ಪಾತ್ರೆಯನ್ನಾಗಿ ಮಾಡ್ತೀವಿ- ಬಿಜೆಪಿ ಸಮಾವೇಶದಲ್ಲಿ ಅಬ್ಬರಿಸಿದ ಹೆಚ್‍ಡಿಡಿ

    `ಚಿಕ್ಕಬಳ್ಳಾಪುರದ (Chikkaballapur) ಸಹೋದರ ಸಹೋದರಿಯರಿಗೆ ನಮಸ್ಕಾರಗಳು’ ಅಂತ ಕನ್ನಡದಲ್ಲೇ ಭಾಷಣ ಶುರು ಮಾಡಿದ ಮೋದಿ, ಕೈವಾರ ತಾತಯ್ಯ, ವಿಶ್ವೇಶ್ವರಯ್ಯ ಮಣ್ಣಿನ ಜನರ ದರ್ಶನ ಪಡೆದದ್ದು ನನ್ನ ಸೌಭಾಗ್ಯ. ದೇಶದಲ್ಲಿ ಜನರ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣ್ತಿದೆ. ಈ ವಯಸ್ಸಿನಲ್ಲಿ ದೇವೇಗೌಡ ಉತ್ಸಾಹ ನಮಗೆ ಪ್ರೇರಣೆ ಮತ್ತು ಮಾರ್ಗದರ್ಶನವಾಗಿದೆ. ಗೌಡರ ಆಶೀರ್ವಾದವೂ ನಮಗೆ ಸಿಕ್ಕಿದೆ. ಅವರ ಮಾತಿನಿಂದ ಪ್ರೇರಣೆ ಸಿಕ್ಕಿದೆ. ಅವರು ಈ ದೇಶದ ಹಿರಿಯ ರಾಜಕಾರಣಿ ಅವರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡ್ತೀವಿ ಎಂದು ಗುಣಗಾನ ಮಾಡಿದ್ದಾರೆ.

    ದೇವೇಗೌಡರು ಐ.ಎನ್.ಡಿ.ಐ.ಎ (I.N.D.I.A) ಒಕ್ಕೂಟದ ಒಬ್ಬೊಬ್ಬರ ಬಗ್ಗೆಯೂ ಹೇಳಿದ್ದಾರೆ. ಆ ಒಕ್ಕೂಟದ ಅಕ್ರಮಗಳ ಬಗ್ಗೆ ಹೇಳಿದ್ದಾರೆ. ಆ ಒಕ್ಕೂಟದಲ್ಲಿ ಹೇಳಿಕೊಳ್ಳುವ ನಾಯಕರು ಯಾರೂ ಇಲ್ಲ, ನಿರ್ದಿಷ್ಟ ಗುರಿಯೂ ಇಲ್ಲ. ಕೋಲಾರ, ಚಿಕ್ಕಬಳ್ಳಾಪುರದ ಜನ ಹೇಳ್ತಿದ್ದಾರೆ. ಮತ್ತೊಮ್ಮೆ ಮೋದಿ ಸರ್ಕಾರ ಅಂತ. ನನ್ನ ರಿಪೋರ್ಟ್ ಕಾರ್ಡ್ ಹಿಡಿದುಕೊಂಡು ಬಂದು ನಿಮ್ಮ ಆಶೀರ್ವಾದ ಕೇಳುತ್ತಿದ್ದೇನೆ. ನಿಮ್ಮನ್ನ ನನ್ನ ಪರಿವಾರ ಅಂತ ಭಾವಿಸಿದ್ದೇನೆ. ದಿನದ 24 ಗಂಟೆಯೂ ನಿಮಗಾಗಿ ದುಡಿಯುತ್ತೇನೆ. ನನ್ನ ಪ್ರತಿ ಕಣಕಣದಲ್ಲಿ ದೇಶ, ದೇಶದ ಜನರು ಇದ್ದಾರೆ. ನಾನು ಉತ್ತಮ ಗ್ಯಾರಂಟಿಗಳ ಜೊತೆ ಬಂದಿದ್ದೇನೆ ಎಂದು ಹೇಳಿದ್ದಾರೆ.

    ಜನರು ಉಚಿತ ರೇಷನ್ ಸಿಗುತ್ತೆ ಅಂತ ಯೋಚನೆ ಮಾಡಿರಲಿಲ್ಲ. ಆದ್ರೆ ಮೋದಿ ಇವತ್ತು ಉಚಿತ ರೇಷನ್ ಕೊಡ್ತಿದ್ದಾರೆ. ಮುಂದಿನ 5 ವರ್ಷವೂ ಉಚಿತ ಪಡಿತರ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ಸಾಲಮನ್ನಾ: ಸಿಎಂ ಘೋಷಣೆ

    ಮೋದಿ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯಗಳ ಪರ ಇದೆ:
    ಕರ್ನಾಟದ ಜನರಿಗೆ ಆಯುಷ್ಮಾನ್ ಭಾರತ್ ಮೂಲಕ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಈಗ 70 ವರ್ಷ ಮೀರಿದ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಗ್ಯಾರಂಟಿ ನೀಡುತ್ತಿದ್ದೇನೆ. ಮೋದಿ ಸರ್ಕಾರ ಎಸ್ಸಿ-ಎಸ್ಟಿ-ಒಬಿಸಿ ಸಮುದಾಯಗಳ ಪರವಾಗಿದೆ. ಈ ಹಿಂದೆ ಬಹಳಷ್ಟು ಎಸ್ಸಿ-ಎಸ್ಟಿ ಕುಟುಂಬಗಳಿಗೆ ಮೂಲ ಸೌಕರ್ಯ ಇರಲಿಲ್ಲ. ಅದೆಲ್ಲವನ್ನೂ ಮೋದಿ ಸರ್ಕಾರ ಮಾಡಿದೆ. 25 ಕೋಟಿ ಜನರನ್ನ ಬಡತನ ರೇಖೆಗಿಂತ ಮೇಲೆಕ್ಕೆ ತರುವ ಕೆಲಸವನ್ನು ಮೋದಿ ಸರ್ಕಾರ ಮಾಡಿದೆ. ಅಷ್ಟೇ ಅಲ್ಲ ಚಿಕ್ಕಬಳ್ಳಾಪುರದಲ್ಲಿ 14 ಸಾವಿರ, ಕೋಲಾರದಲ್ಲಿ 13 ಸಾವಿರ ಮನೆ ನಿರ್ಮಾಣ ಮಾಡಿಕೊಡುವ ಕೆಲಸ ಮೋದಿ ಮಾಡಿದ್ದಾರೆ. ಮುಂದೆ ಬಡವರಿಗಾಗಿ ದೇಶಾದ್ಯಂತ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಕೆಲಸವನ್ನೂ ಮೋದಿ ಮಾಡ್ತಾರೆ ಎಂದು ಗ್ಯಾರಂಟಿಗಳನ್ನು ಪ್ರಸ್ತಾಪಿಸಿದ್ದಾರೆ.

  • Exclusive: ಮೋದಿ ಗ್ಯಾರಂಟಿಯಲ್ಲಿ ರಸವೇ ಇಲ್ಲ: ಡಿ.ಕೆ.ಶಿವಕುಮಾರ್‌ ವ್ಯಂಗ್ಯ

    Exclusive: ಮೋದಿ ಗ್ಯಾರಂಟಿಯಲ್ಲಿ ರಸವೇ ಇಲ್ಲ: ಡಿ.ಕೆ.ಶಿವಕುಮಾರ್‌ ವ್ಯಂಗ್ಯ

    ಬೆಂಗಳೂರು: ಮೋದಿ ಗ್ಯಾರಂಟಿಯಲ್ಲಿ ರಸವೇ ಇಲ್ಲ. ನಾವು ಗ್ಯಾರಂಟಿಗಳನ್ನು ಕೊಟ್ಟೆವು. ಕೊಟ್ಟ ಮಾತನ್ನು ಉಳಿಸಿಕೊಂಡೆವು. ಅವರು ಮಾತು ಕೊಟ್ಟಿದ್ದನ್ನು ಉಳಿಸಿಕೊಳ್ಳಲಿಲ್ಲ ಎಂದು ಬಿಜೆಪಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಟಾಂಗ್‌ ಕೊಟ್ಟರು.

    ಲೋಕಸಭಾ ಚುನಾವಣೆ ಹಿನ್ನೆಲೆ ‘ಪಬ್ಲಿಕ್‌ ಟಿವಿ’ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮೋದಿ ಗ್ಯಾರಂಟಿಯಲ್ಲಿ ರಸವೇ ಇಲ್ಲ. ನಾವು ಗ್ಯಾರಂಟಿಗಳನ್ನು ಕೊಟ್ಟೆವು. ಈಗ ನಮ್ಮದು ಗೃಹಲಕ್ಷ್ಮಿ ಇದೆ. ಎಐಸಿಸಿ ‘ಮಹಾಲಕ್ಷ್ಮಿ’ ಯೋಜನೆ ಕೊಡುತ್ತೇವೆ ಎಂದಿದ್ದಾರೆ. ಯುವಕರ ಬದುಕಿಗೂ ಹಣ ಕೊಡುತ್ತಿದ್ದೇವೆ. ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಅವರು ಮಾತು ಕೊಟ್ಟಿದ್ದನ್ನು ಉಳಿಸಿಕೊಳ್ಳಲಿಲ್ಲ. ತೆಗೆಯಿರಿ ಅವರ ಪ್ರಣಾಳಿಕೆಯನ್ನು ಎಂದು ಟಾಂಗ್‌ ಕೊಟ್ಟರು. ಇದನ್ನೂ ಓದಿ: ಮೈತ್ರಿ ಮುನಿಸು – ಭಾನುವಾರ ಮೈಸೂರಿನಲ್ಲಿ ಪ್ರಜ್ವಲ್ ರೇವಣ್ಣ, ಪ್ರೀತಂಗೌಡ ಮುಖಾಮುಖಿ

    ಈಗ ಜನ ಬಹಳ ವಿದ್ಯಾವಂತರು, ಬುದ್ದಿವಂತರಿದ್ದಾರೆ. ನಮ್ಮ ಪ್ರತಿಯೊಂದು ನಡೆಯನ್ನೂ ಗಮನಿಸುತ್ತಾರೆ. ಒಬ್ಬ ವ್ಯಕ್ತಿ, ಪಕ್ಷವನ್ನು ಬೆಂಬಲಿಸಿದರೆ ನನಗೇನು ಲಾಭ ಅಂತ ನೋಡ್ತಾರೆ. ಭಾವನೆ ಮೇಲಲ್ಲ, ಬದುಕಿನ ಮೇಲೆ ಪ್ರಯೋಜನ ಎಂಬುದು ಪ್ರತಿಯೊಬ್ಬರಿಗೂ ಅರ್ಥ ಆಗಿದೆ. ಇದು ಈ ತಲೆಮಾರಿನ ಒಂದು ಅಭಿಪ್ರಾಯ ಎಂದು ತಿಳಿಸಿದರು.

    2023 ರ ವಿಧಾನಸಭಾ ಚುನಾವಣೆಯಲ್ಲಿ ಜನ ಡಬಲ್‌ ಎಂಜಿನ್‌ ಸರ್ಕಾರವನ್ನು ನಂಬಲಿಲ್ಲ. ಸಿದ್ದರಾಮಯ್ಯ ಮತ್ತು ನನ್ನನ್ನು ನಂಬಿದರು. 136 ಸೀಟ್‌ ಕೊಟ್ಟರು. ಇದರ ಮಧ್ಯದಲ್ಲಿ ನಾವು ಜನರ ನೋವನ್ನು ಅರ್ಥ ಮಾಡಿಕೊಂಡಿದ್ದೇವೆ. ಭಾರತ್‌ ಜೋಡೊ ಯಾತ್ರೆಯಲ್ಲಿ ಜನ ಅನೇಕ ಕಷ್ಟಗಳನ್ನು ಹೇಳಿಕೊಂಡಿದ್ದರು. ಜನರಿಗೆ ಹೊಟ್ಟೆ ಪಾಡಿಗೆ ಸಹಾಯ ಮಾಡಬೇಕು. ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆ ಆಗಿದೆ. ಆದಾಯ ಡಬಲ್‌ ಮಾಡ್ತೀವಿ ಅಂತ ಮೋದಿ ಸಾಹೇಬ್ರು ಹೇಳಿದ್ದರು. 15 ಲಕ್ಷ ಕೊಡ್ತೀವಿ, ರೈತರಿಗೆ ಡಬಲ್‌ ಆದಾಯ ಅಂತ ಹೇಳಿ ಅದನ್ನೂ ಮಾಡಲಿಲ್ಲ. ಆದರೆ ನಾವು ಐದು ಗ್ಯಾರಂಟಿ ಕೊಟ್ಟೆವು. ಐದು ಗ್ಯಾರಂಟಿ ಸೇರಿ ‘ಕೈ’ ಗಟ್ಟಿಯಾಯಿತು. ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಎಲ್ಲಾ ಗ್ಯಾರಂಟಿ ಜನರಿಗೆ ತಲುಪುವಂತೆ ಮಾಡಿದ್ದೇವೆ. ಇದಕ್ಕಿಂತ ಸಂತೃಪ್ತಿ ಇನ್ನೇನು ಬೇಕು ಎಂದು ಕೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರ ಹಿಡಿಯುವುದು ಅಸಾಧ್ಯ: ಹೆಚ್‌.ಡಿ.ದೇವೇಗೌಡ

    ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ 135 ಸೀಟ್‌ ಬರುತ್ತೆ ಎಂದಿದ್ದಿರಿ.. ಈಗ ಎಷ್ಟು ಸೀಟು ಬರುತ್ತೆ?
    ಈಗ ಒಂದು ರೌಂಡ್‌ ನಾಮಪತ್ರ ಸಲ್ಲಿಕೆ ಆಗಿದೆ. ಎರಡನೇ ರೌಂಡ್‌ ಆಗಿ, ಪ್ರಚಾರ ಶುರುವಾಗಲಿ. ಆಮೇಲೆ ಹೇಳುತ್ತೇನೆ. ಮೋದಿ ಗಾಳಿ, ರಾಮಮಂದಿರ ಗಾಳಿ ಅಂತ ಮಾತನಾಡಿಕೊಳ್ಳುತ್ತಿದ್ದರು. ಅಕ್ಕಿ ಒಂದು ಕಡೆ ಅರಿಶಿನ ಒಂದು ಕಡೆ ಇತ್ತು. ಅವೆರಡು ಸೇರಿ ಆದ ಮಂತ್ರಾಕ್ಷತೆ ತಲುಪಲೇ ಇಲ್ಲ. ಗಂಡು ಹೆಣ್ಣಿಗೆ ತಾಳಿ ಕಟ್ಟುವಾಗ ಮಂತ್ರಾಕ್ಷತೆ ಹಾಕ್ತಾರೆ. ಆದರೆ ಇವರು ಮೂರು ತಿಂಗಳ ಮುಂಚಿತವಾಗಿ ಅನ್ನಭಾಗ್ಯದಿಂದ ಕೊಟ್ಟ ಅಕ್ಕಿಗೆ ಅರಿಶಿನ ಹಾಕಿ ಮಂತ್ರಾಕ್ಷತೆ ಅಂದರು. ಅದು ಮುಟ್ಟಲಿಲ್ಲ. ಎಲ್ಲಿಯೂ ಆ ದೇವಸ್ಥಾನದ (ರಾಮಮಂದಿರ) ಗಾಳಿ ಕಾಣುತ್ತಿಲ್ಲ ಎಂದು ಬಿಜೆಪಿಗೆ ಟಾಂಗ್‌ ಕೊಟ್ಟರು.

  • ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ: ಟಿಎಂಸಿ ನಾಯಕ ಟೀಕೆ

    ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ: ಟಿಎಂಸಿ ನಾಯಕ ಟೀಕೆ

    ಕೋಲ್ಕತ್ತಾ: ಮೋದಿ ಗ್ಯಾರಂಟಿಗೆ (Modi Guarantee) ವಾರಂಟಿ ಇಲ್ಲ. ಬಿಜೆಪಿ (BJP) ನಾಯಕರು ಬಂಗಾಳ ವಿರೋಧಿಗಳು ಎಂದು ಟಿಎಂಸಿ ನಾಯಕ ಅಭಿಷೇಕ್‌ ಬ್ಯಾನರ್ಜಿ (Abhishek Banerjee) ಟೀಕಿಸಿದ್ದಾರೆ.

    ತೃಣಮೂಲ ಕಾಂಗ್ರೆಸ್‌ (TMC) ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಹೊರಗಿನವರು. ಅವರು ಬಂಗಾಳ ವಿರೋಧಿಗಳು. ಚುನಾವಣಾ ಸಮಯದಲ್ಲಿ ಮಾತ್ರ ರಾಜ್ಯಕ್ಕೆ ಭೇಟಿ ನೀಡುತ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್‌ನ 42 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ ಕ್ರಿಕೆಟಿಗ ಯುಸೂಫ್‌ ಪಠಾಣ್‌ ಕಣಕ್ಕೆ

    ರಾಜ್ಯದ ಹಣವನ್ನು ತಡೆಹಿಡಿಯುವ ಕೇಸರಿ ಪಾಳಯಕ್ಕೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ. ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಮಾತ್ರ ಭರವಸೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದ್ದಾರೆ.

    ಬಿಜೆಪಿ ಮತ್ತು ಅದರ ನಾಯಕರು ಹೊರಗಿನವರು. ಬಂಗಾಳ ವಿರೋಧಿಗಳು. ಅವರು ರಾಜ್ಯಕ್ಕೆ ನೀಡಬೇಕಾದ ಹಣವನ್ನು ಏಕೆ ತಡೆಹಿಡಿದಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ತನ್ನ ಲೋಕಸಭಾ ಚುನಾವಣಾ ಪ್ರಚಾರವನ್ನು ಭಾನುವಾರದ ಮಹಾ ರ‍್ಯಾಲಿಯೊಂದಿಗೆ ಪ್ರಾರಂಭಿಸಿತು. ಇದನ್ನೂ ಓದಿ: ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

  • ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತೆ, ಅಲ್ಲಿಂದ ಮೋದಿ ಗ್ಯಾರಂಟಿ ಆರಂಭವಾಗುತ್ತೆ: ಪ್ರಧಾನಿ ಅಭಯ

    ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತೆ, ಅಲ್ಲಿಂದ ಮೋದಿ ಗ್ಯಾರಂಟಿ ಆರಂಭವಾಗುತ್ತೆ: ಪ್ರಧಾನಿ ಅಭಯ

    ಗಾಂಧಿನಗರ: ಇತರರ ಗ್ಯಾರಂಟಿಗಳು ಎಲ್ಲಿ ಕೊನೆಗೊಳ್ಳುತ್ತವೆಯೋ, ಅಲ್ಲಿಂದ ಮೋದಿ ಗ್ಯಾರಂಟಿ (Modi Guarantee) ಪ್ರಾರಂಭವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಯ ನೀಡಿದರು.

    ಗುಜರಾತ್‌ (Gujarat) ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಅವರಿಂದು ರಾಜ್‌ಕೋಟ್‌, ಪಂಜಾಬ್‌ನ ಬಟಿಂಡಾ, ಉತ್ತರ ಪ್ರದೇಶದ ರಾಯ್‌ಬರೇಲಿ, ಪಶ್ಚಿಮ ಬಂಗಾಳದ ಕಲ್ಯಾಣಿ ಮತ್ತು ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದರು. 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 11,500 ಕೋಟಿ ರೂ. ವೆಚ್ಚದ 200ಕ್ಕೂ ಹೆಚ್ಚು ಆರೋಗ್ಯ ರಕ್ಷಣೆ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದರು. ಅಲ್ಲದೇ 48,000 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ದೇಶಕ್ಕೆ ಸಮರ್ಪಿಸಿದರು. ಬಳಿಕ ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು.

    ಕಳೆದ 6-7 ದಶಕಗಳಲ್ಲಿ ನಡೆದಿದ್ದಕ್ಕಿಂತ ಹಲವು ಪಟ್ಟು ವೇಗವಾಗಿ ನಮ್ಮ ಸರ್ಕಾರದ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಎಲ್ಲಿ ಇತರರ ಗ್ಯಾರಂಟಿಗಳು ಕೊನೆಗೊಳ್ಳುತ್ತವೆಯೋ ಅಲ್ಲಿಂದ ಮೋದಿ ಗ್ಯಾರಂಟಿ ಪ್ರಾರಂಭವಾಗುತ್ತದೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಈಗ ನಡೆಯುವುದು ಗ್ಯಾರಂಟಿ ಬೇಕಾ? ಬೇಡವಾ? ಎನ್ನುವ ಚುನಾವಣೆ: ಹೆಚ್.ಸಿ.ಬಾಲಕೃಷ್ಣ

    ಸ್ವಾತಂತ್ರ್ಯಾ ನಂತರ 50 ವರ್ಷಗಳ ವರೆಗೆ ದೇಶದಲ್ಲಿ ಒಂದೇ ಒಂದು AIIMS ಆಸ್ಪತ್ರೆ ಇತ್ತು. ಸ್ವಾತಂತ್ರ್ಯಾ ನಂತರ 7 ದಶಕಗಳಲ್ಲಿ 7 ಏಮ್ಸ್‌ ಆಸ್ಪತ್ರೆಗಳಿಗೆ ಅನುಮೋದನೆ ನೀಡಿದ್ದರೂ ಹಿಂದಿನ ಸರ್ಕಾರಗಳು ಅವುಗಳನ್ನು ಪೂರ್ಣಗೊಳಿಸಿಲ್ಲ. ಕೆಲವರಂತೂ ತಮ್ಮ ರಾಜ್ಯಗಳಿಗೆ ಏಮ್ಸ್‌ ಆಸ್ಪತ್ರೆ ಪಡೆಯುವಷ್ಟರಲ್ಲಿ ಸುಸ್ತಾಗುತ್ತಿದ್ದರು. ಆದ್ರೆ ‌ನಮ್ಮ ಸರ್ಕಾರ ಕಳೆದ 10 ವರ್ಷಗಳಲ್ಲಿ 10 ಏಮ್ಸ್‌ ಆಸ್ಪತ್ರೆಗಳ ಸ್ಥಾಪನೆಗೆ ಕ್ರಮ ಕೈಗೊಂಡಿದೆ. ಈ ಅವಧಿಯಲ್ಲಿ ಏಮ್ಸ್‌ ಹೊರತುಪಡಿಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳೂ ಒಂದರ ಹಿಂದೆ ಒಂದರಂತೆ ತಲೆ ಎತ್ತುತ್ತಿವೆ ಎಂದು ತಮ್ಮ ಸರ್ಕಾರದ ಸಾಧನೆಯನ್ನು ಶ್ಲಾಘಿಸಿದರು.

    ಇನ್ನೂ ಕಾಂಗ್ರೆಸ್‌ ರಾಜಮನೆತನವು ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಅಧಿಕಾರ ಹಿಡಿದಿದೆ. ಆದ್ರೆ ಆ ಕ್ಷೇತ್ರದ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ. ರಾಯ್‌ಬರೇಲಿಯಲ್ಲೂ ಏಮ್ಸ್‌ ಸ್ಥಾಪಿಸುವ ಭರವಸೆ ನೀಡಿದ್ದೇನೆ. ಕೊಟ್ಟ ಭರವಸೆಯನ್ನು ಈಡೇರಿಸುತ್ತೇನೆ ಎಂದು ನುಡಿದರು. ಇದನ್ನೂ ಓದಿ: ರಾಜ್ಯಕ್ಕೆ ಆದ ಅನ್ಯಾಯ ಕೇಳಿದ್ರೆ ಗುಂಡಿಕ್ಕಿ ಅಂತಾರೆ, ನಾಡಿಗೋಸ್ಕರ ನನ್ನ ದೇಹ ಕೊಡಲು ಸಿದ್ಧ: ಡಿ.ಕೆ.ಸುರೇಶ್

    ಆರೋಗ್ಯ ಸಂಪದ್ಭರಿತ ದೇಶವಾಗಬೇಕು: ಭಾರತ ಬೆಳೆಯುತ್ತಿರುವ ಆರ್ಥಿಕತೆಯೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಿದ ಟಾಪ್‌-5 ದೇಶಗಳಲ್ಲಿಯೂ ಒಂದಾಗಬೇಕು. ಅಭಿವೃದ್ಧಿ ಹೊಂದಿದ ಭಾರತದಲ್ಲಿ ಆರೋಗ್ಯ ಸೌಲಭ್ಯಗಳ ಮಟ್ಟ ಹೇಗಿರುತ್ತದೆ ಎಂಬುದನ್ನು ನಾವು ಈಗ ನೋಡುತ್ತಿದ್ದೇವೆ. ಅದಕ್ಕಾಗಿ ಗ್ರಾಮೀಣ ಪ್ರದೇಶಗಳಿಗೂ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ಗಳನ್ನು ವಿಸ್ತರಿಸಿದ್ದೇವೆ. ಹಿಂದೆ ಇದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು 309 ರಿಂದ 706ಕ್ಕೆ ಕೊಂಡೊಯ್ಯಲಾಗಿದೆ. ಎಂಬಿಬಿಎಸ್ ಮತ್ತು ಮೆಡಿಕಲ್ ಪಿಜಿ ಸೀಟುಗಳ ಸಂಖ್ಯೆ 50,000 ದಿಂದ 1 ಲಕ್ಷಕ್ಕೆ ಹೆಚ್ಚಿದೆ ಎಂದು ಶ್ಲಾಘಿಸಿದರು.

  • ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್‌ ಟ್ರೆಂಡ್‌

    ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್‌ ಟ್ರೆಂಡ್‌

    ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಚುನಾವಣೆಯಲ್ಲಿ ಜಯಗಳಿಸುತ್ತಿದ್ದಂತೆ ಬಿಜೆಪಿಯಲ್ಲಿ (BJP) ಸಂಭ್ರಮ ಮುಗಿಲುಮುಟ್ಟಿದ್ದು, ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ (ModiKiGuarantee) ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ.

    ಕರ್ನಾಟಕ (Karnataka) ಚುನಾವಣೆಯಲ್ಲಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ (Congress) ಈಗ ನಡೆಯುತ್ತಿರುವ ಚುನಾವಣಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಆರಂಭಿಸಿತ್ತು. ದೇಶಾದ್ಯಂತ ನಮ್ಮ ಗ್ಯಾರಂಟಿ (Congress Guarantee) ಕೆಲಸ ಮಾಡುತ್ತದೆ ಎಂದು ವಿಶ್ವಾಸ ಇಟ್ಟುಕೊಂಡಿದ್ದರು.  ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಕೈ ಹಿಡಿದ ಮಹಿಳೆಯರು

     

    ಕಾಂಗ್ರೆಸ್‌ ಪ್ರಚಾರಕ್ಕೆ ಪರ್ಯಾಯವಾಗಿ ಬಿಜೆಪಿ ನರೇಂದ್ರ ಮೋದಿ (Narendra Modi) ಅವರನ್ನೇ ಹೆಚ್ಚು ಬಿಂಬಿಸಿತ್ತು. ಅಷ್ಟೇ ಅಲ್ಲದೇ ಮೋದಿ ಗ್ಯಾರಂಟಿಗಳ ಮುಂದೆ ಕಾಂಗ್ರೆಸ್‌ನ ಹುಸಿ ಭರವಸೆಗಳು ಕೆಲಸ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳುತ್ತಿದ್ದರು. ನನ್ನ ಮೂರನೇ ಅವಧಿಯಲ್ಲಿ ವಿಶ್ವದ ಅತೀ ದೊಡ್ಡ ಮೂರು ಆರ್ಥಿಕತೆಯಲ್ಲಿ (Economy) ಭಾರತದ (India) ಹೆಸರು ಇರಲಿದೆ. ಇದು ಮೋದಿ ನೀಡುವ ಗ್ಯಾರಂಟಿ ಎಂದು ಭಾಷಣ ಮಾಡಿದ್ದರು.

    ಲೋಕಸಭಾ ಚುನಾವಣೆ ನಡೆಯುವ ಮುನ್ನ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಹಿಂದಿ ಬೆಲ್ಟ್‌ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ #ModiKiGuarantee ಟ್ರೆಂಡ್‌ ಆಗಿದೆ. ದೇಶಕ್ಕೆ “ನಮೋ‌” ಗ್ಯಾರಂಟಿ. ಪ್ರಧಾನಿ ಶ್ರೀ ನರೇಂದ್ರ ಮೋದಿ ಇದ್ದರೆ ಇದ್ದರೆ ಎಲ್ಲವೂ ಸಾಧ್ಯ ಎಂದು ಕರ್ನಾಟಕ ಬಿಜೆಪಿ ಪೋಸ್ಟ್‌ ಮಾಡಿದೆ.