Tag: Mohali

  • ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ; ನೆರೆಮನೆಯವನಿಂದ ಹಲ್ಲೆಗೆ ಒಳಗಾಗಿದ್ದ ವಿಜ್ಞಾನಿ ಸಾವು

    ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ; ನೆರೆಮನೆಯವನಿಂದ ಹಲ್ಲೆಗೆ ಒಳಗಾಗಿದ್ದ ವಿಜ್ಞಾನಿ ಸಾವು

    – ವಿದೇಶಗಳಲ್ಲಿ ಖ್ಯಾತಿ ಗಳಿಸಿದ್ದ ವಿಜ್ಞಾನಿ ದುರಂತ ಅಂತ್ಯ
    – ಸಹೋದರನಿಂದ ಮೂತ್ರಪಿಂಡ ದಾನ ಪಡೆದಿದ್ದ ಡಾ.ಸ್ವರ್ಣಕರ್‌

    ಚಂಡೀಗಢ: ಬಾಡಿಗೆ ಮನೆಯ ಬಳಿ ಪಾರ್ಕಿಂಗ್‌ ವಿಚಾರಕ್ಕೆ ಆಗ ಗಲಾಟೆಯಲ್ಲಿ ನೆರೆ ಮನೆಯವನಿಂದ ಹಲ್ಲೆಗೊಳಗಾಗಿದ್ದ ವಿಜ್ಞಾನಿಯೊಬ್ಬರು ಸಾವಿಗೀಡಾಗಿರುವ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ.

    ಮೊಹಾಲಿಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (IISER) ಕೆಲಸ ಮಾಡುತ್ತಿದ್ದ ವಿಜ್ಞಾನಿ ಡಾ. ಅಭಿಷೇಕ್ ಸ್ವರ್ಣಕರ್ (39) ಮೃತಪಟ್ಟಿದ್ದಾರೆ. ಇವರು ಸೆಕ್ಟರ್ 67 ರಲ್ಲಿರುವ ಮನೆಯಲ್ಲಿ ಬಾಡಿಗೆಗೆ ಇದ್ದರು. ಮಂಗಳವಾರ ರಾತ್ರಿ ಪಾರ್ಕಿಂಗ್‌ ವಿಚಾರಕ್ಕೆ ನೆರೆಮನೆಯ ಮಾಂಟಿ ಎಂಬಾತನೊಂದಿಗೆ ಗಲಾಟೆ ನಡೆದು ಹಲ್ಲೆಗೊಳಗಾಗಿದ್ದರು.

    ಮೂಲತಃ ಜಾರ್ಖಂಡ್‌ನ ಧನ್ಬಾದ್‌ನವರಾದ ಡಾ. ಸ್ವರ್ಣಕರ್ ಒಬ್ಬ ವಿಶಿಷ್ಟ ವಿಜ್ಞಾನಿಯಾಗಿದ್ದರು. ಅವರ ಕೆಲಸದ ಬಗ್ಗೆ ಅಂತರರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ವರದಿಗಳು ಪ್ರಕಟವಾಗಿದ್ದರು. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಭಾರತಕ್ಕೆ ಮರಳಿದ್ದರು. IISER ನಲ್ಲಿ ಯೋಜನಾ ವಿಜ್ಞಾನಿಯಾಗಿ ಸೇರಿಕೊಂಡಿದ್ದರು. ವಿಜ್ಞಾನಿಗೆ ಇತ್ತೀಚೆಗೆ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಅವರ ಸಹೋದರಿ ತನ್ನ ಮೂತ್ರಪಿಂಡಗಳಲ್ಲಿ ಒಂದನ್ನು ದಾನ ಮಾಡಿದ್ದರು. ಸ್ವರ್ಣಕರ್‌ ಡಯಾಲಿಸಿಸ್‌ನಲ್ಲಿದ್ದರು. ಹಲ್ಲೆಯ ನಂತರ, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು.

    ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿಜ್ಞಾನಿಯ ಕುಟುಂಬ ಒತ್ತಾಯಿಸಿದೆ. ಮುಂದಿನ ಕ್ರಮ ಕೈಗೊಳ್ಳಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 – ಭಾರತಕ್ಕೆ ಗೆಲುವು!

    ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 – ಭಾರತಕ್ಕೆ ಗೆಲುವು!

    ಮೊಹಾಲಿ: ಅಫ್ಘಾನಿಸ್ತಾನ (Afghanistan) ವಿರುದ್ಧದ ಟಿ20 (T20) ಸರಣಿಯ ಮೊದಲ ಪಂದ್ಯದಲ್ಲಿ ಭಾರತ (India) 6 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ಭಾರತ ಅಫ್ಘಾನಿಸ್ತಾನ ವಿರುದ್ಧದ ಅಜೇಯ ಗೆಲುವಿನ ಸಾಧನೆ ಮುಂದುವರಿದಿದೆ. ಅಫ್ಘಾನಿಸ್ತಾನ ವಿರುದ್ಧ ಇದು ಭಾರತದ ಐದನೇ ಗೆಲುವು.

    ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಸರಣಿಯ ಎರಡನೇ ಪಂದ್ಯ ಜನವರಿ 14ರಂದು ಇಂದೋರ್‌ನಲ್ಲಿ ನಡೆಯಲಿದೆ.

    ಮೊಹಾಲಿಯಲ್ಲಿ ಕೊರೆಯುವ ಚಳಿ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಇದು ಭಾರತದ ವಿರುದ್ಧ ಅಫ್ಘಾನಿಸ್ತಾನ ಅತ್ಯಧಿಕ ಮೊತ್ತವಾಗಿದೆ. 159 ರನ್ ಟಾರ್ಗೆಟ್ ಬೆನ್ನತ್ತಿದ ಭಾರತ 17.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಗೆಲುವು ಸಾಧಿಸಿತು.

    ಮೊದಲು ಬ್ಯಾಟ್ ಮಾಡಿದ ಆಫ್ಘನ್ ತಂಡಕ್ಕೆ ಮೊಹಮ್ಮದ್ ನಬಿ 27 ಬಾಲ್‌ನಲ್ಲಿ 42 ರನ್ ಗಳಿಸಿ, ಟಾಪ್ ಸ್ಕೋರರ್ ಆದರು. ಅಜ್ಮತ್ ಉಲ್ಲ ಒಮರ್ ಝೈ 29 ರನ್ ಗಳಿಸಿದರು. ಭಾರತ ತಂಡದ ಪರವಾಗಿ ಅಕ್ಷರ್ ಪಟೇಲ್ ಹಾಗೂ ಮುಕೇಶ್ ಕುಮಾರ್ 2 ವಿಕೆಟ್ ಗಳಿಸಿದರು.

    ಟೀ ಇಂಡಿಯಾ ಪರವಾಗಿ ಶಿವಂ ದುಬೆ ಅಜೇಯ 60 ರನ್ ಗಳಿಸಿ ಗೆಲುವಿನ ರೂವಾರಿಯಾದರು. 40 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 5 ಬೌಂಡರಿ ಬಾರಿಸಿದರು. ಜಿತೇಶ್ ಶರ್ಮಾ 31, ತಿಲಕ್ ವರ್ಮಾ 26, ಶುಭ್‌ಮನ್ ಗಿಲ್ 23, ರಿಂಕು ಸಿಂಗ್ ಅಜೇಯ 16 ರನ್ ಗಳಿಸಿದರು.

    ಆಫ್ಘನ್ ತಂಡದ ಪರವಾಗಿ ಮುಜೀಬ್ ಉರ್ ರಹ್ಮಾನ್ 2 ವಿಕೆಟ್ ಗಳಿಸಿದರೆ, ಒಮರ್‌ಝೈ 1 ವಿಕೆಟ್ ಪಡೆದರು. ಶಿವಂ ದುಬೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

  • ಕೊಟ್ಟ ಮಾತಿಗೆ ತಪ್ಪಿದ ಪಂಜಾಬ್ ಸರ್ಕಾರ – ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾದ ಶಿಕ್ಷಕಿಯರು

    ಕೊಟ್ಟ ಮಾತಿಗೆ ತಪ್ಪಿದ ಪಂಜಾಬ್ ಸರ್ಕಾರ – ಪೆಟ್ರೋಲ್ ಹಿಡಿದು ನೀರಿನ ಟ್ಯಾಂಕ್ ಏರಿ ಪ್ರತಿಭಟನೆಗೆ ಮುಂದಾದ ಶಿಕ್ಷಕಿಯರು

    ಚಂಡೀಗಢ:  ಪಂಚಾಬ್‍ನಲ್ಲಿ ಎಎಪಿ (AAP) ಸರ್ಕಾರ ಅಧಿಕಾರಕ್ಕೆ ಬಂದರೆ ದೈಹಿಕ ಶಿಕ್ಷಣ ಶಿಕ್ಷಕರಿಗೆ (Physical Training Teachers) ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ಭಗವಂತ್ ಮಾನ್ (Bhagwant Mann) ಸರ್ಕಾರ ಇದೀಗ ಉದ್ಯೋಗ ನೀಡಲು ವಿಫಲವಾಗಿದೆ. ಇದರಿಂದ ರೊಚ್ಚಿಗೆದ್ದಿರುವ ದೈಹಿಕ ಶಿಕ್ಷಕಿಯರಿಬ್ಬರು ಪಂಜಾಬ್‍ನ ಮೋಹಾಲಿಯಲ್ಲಿ ನೀರಿನ ಟ್ಯಾಂಕ್ (Water Tank) ಮೇಲೆರಿ ಪ್ರತಿಭಟನೆಗೆ ಮುಂದಾಗಿದ್ದಾರೆ.

    ಪಂಜಾಬ್‍ನಲ್ಲಿ ದೈಹಿಕ ಬೋಧಕ (PTI) ತರಬೇತಿ ಪಡೆದ ಶಿಕ್ಷಕರನ್ನು ಸರ್ಕಾರಿ ಶಾಲೆಗಳಿಗೆ ನೇಮಕ ಮಾಡುವಂತೆ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದೆ. ಈ ಹಿಂದೆ ಎಎಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಪ್ರತಿಭಟನೆ ನಡೆಸುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕರಿಗೆ ನಾವು ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ನೀಡುವುದಾಗಿ ಎಎಪಿ ಭರವಸೆ ನೀಡಿತ್ತು. ಇದನ್ನೂ ಓದಿ: ಪವನ್ ಕಲ್ಯಾಣ್‍ಗಾಗಿ ಸಕ್ರಿಯ ರಾಜಕೀಯಕ್ಕೆ ಮೆಗಾಸ್ಟಾರ್ ಚಿರಂಜೀವಿ ಗುಡ್‍ಬೈ

    ಆದರೆ ಇದೀಗ ಎಎಪಿ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರು, ಈ ಭರವಸೆ ಈಡೇರಿಲ್ಲ. ಹಾಗಾಗಿ ಇಂದು ಇಬ್ಬರು ಪಿಟಿಐ ಶಿಕ್ಷಕರು ಮೊಹಾಲಿಯಲ್ಲಿ ನೀರಿನ ಟ್ಯಾಂಕ್‍ಗೆ ಪೆಟ್ರೋಲ್ ತುಂಬಿದ ಬಾಟಲಿಯೊಂದಿಗೆ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ವೀಡಿಯೋ ಬಿಡುಗಡೆ ಮಾಡಿರುವ ಪ್ರತಿಭಟನಾನಿರತ ಆನಂದಪುರ ಸಾಹಿಬ್ ನಿವಾಸಿ ಸಿಪ್ಪಿ ಶರ್ಮಾ, ನಮಗೆ ಈ ಹಿಂದಿನ ಪಂಜಾಬ್ ಸರ್ಕಾರ ಉದ್ಯೋಗದ ಭರವಸೆ ನೀಡಿತ್ತು. ಆದರೆ ಕೊಟ್ಟಿರಲಿಲ್ಲ. ಈ ವೇಳೆ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಉದ್ಯೋಗ ನೀಡುವುದಾಗಿ ತಿಳಿಸಿತ್ತು. ಇದೀಗ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದಿದೆ. ಇನ್ನೂ ಕೂಡ ನಮಗೆ ಉದ್ಯೋಗ ನೀಡಿಲ್ಲ. ಸರ್ಕಾರ ನಮಗೆ ಸುಳ್ಳು ಭರವಸೆ ನೀಡಿದೆ. ಹಾಗಾಗಿ ನಾವು ಪ್ರತಿಭಟನೆಗೆ ಮುಂದಾಗಿದ್ದೇವೆ. ಸರ್ಕಾರ ನಮ್ಮ ಭರವಸೆ ಈಡೇರಿಸದಿದ್ದರೆ ನಾವು ಇಲ್ಲಿಂದ ಬರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಸೇನೆಯ ಚೀತಾ ಹೆಲಿಕಾಪ್ಟರ್ ಪತನ- ಪೈಲಟ್ ಹುತಾತ್ಮ

    Live Tv
    [brid partner=56869869 player=32851 video=960834 autoplay=true]

  • ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ

    ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ

    ಚಂಡೀಗಢ: 82 ವರ್ಷದ ವೃದ್ಧನೊಬ್ಬ ತನ್ನ ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದಿರುವ ಹೃದಯವಿದ್ರಾವಕ ಘಟನೆ ಪಂಜಾಬ್‌ನ ಮೊಹಾಲಿಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ, ಬಲ್ವಂತ್ ಸಿಂಗ್ ತನ್ನ ದತ್ತು ಪುತ್ರ ಸುಖ್ವಿಂದರ್ ಸಿಂಗ್ ಜೊತೆ ವಾಸವಿದ್ದರು. ವೃದ್ಧ ವಯೋಸಹಜವಾಗಿ ಹೆಚ್ಚೇನೂ ಮಾತನಾಡದೇ ಇರುತ್ತಿದ್ದು, ತನ್ನ ಮಗ ಮೃತಪಟ್ಟಿರುವ ಬಗ್ಗೆ ತಿಳಿಯದೇ ಹೋಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

    ಬಲ್ವಂತ್ ಸಿಂಗ್ ಇದ್ದ ಮನೆಯಿಂದ ದುರ್ನಾತ ಬರುತ್ತಿದ್ದುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಮೊದಲಿಗೆ ಪೊಲೀಸರು ಮನೆಯೊಳಗಿರುವವರನ್ನು ಹೊರಗೆ ಕರೆಯಲು ಪ್ರಯತ್ನಿಸಿದ್ದರು. ಆದರೆ ಯಾರೂ ಉತ್ತರಿಸದ ಕಾರಣ ತಾವೇ ಬಾಗಿಲು ಮುರಿದು ಒಳ ಹೊಕ್ಕಿದ್ದಾರೆ. ಇದನ್ನೂ ಓದಿ: ಶೀತಲ ಸಮರವನ್ನು ಕೊನೆಗೊಳಿಸಿದ್ದ ಸೋವಿಯತ್ ನಾಯಕ ಮಿಖಾಯಿಲ್ ಗೋರ್ಬಚೇವ್ ನಿಧನ

    ಪೊಲೀಸರು ಮನೆ ಒಳಗೆ ಹೊಕ್ಕಾಗ ವೃದ್ಧ ತನ್ನ ಮಗನ ಶವದ ಪಕ್ಕದಲ್ಲಿ ಕುಳಿತಿದ್ದಿದ್ದು ಕಂಡುಬಂದಿದೆ. ಅಸ್ವಸ್ಥನಾಗಿ, ಅರೆಪ್ರಜ್ಞಾವಸ್ಥೆಯಲ್ಲಿದ್ದ ವೃದ್ಧನನ್ನು ಬಳಿಕ ಪೊಲೀಸರು ಹಿರಿಯ ನಾಗರಿಕ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದಾರೆ.

    ಮೆನೆಯಲ್ಲಿ ಪತ್ತೆಯಾದ ಶವ ಬಲ್ವಂತ್ ಸಿಂಗ್‌ನ ದತ್ತು ಪುತ್ರ. ಅವರಿಗೆ ಸ್ವಂತ ಮಕ್ಕಳಿಲ್ಲ. ಅವರನ್ನು ಯಾರೂ ಕೂಡಾ ಭೇಟಿಯೂ ಆಗುತ್ತಿರಲಿಲ್ಲ. ಕಳೆದ 1 ತಿಂಗಳಿನಿಂದ ವೃದ್ಧ ಮನೆಯ ಒಳಗೆಯೇ ಇದ್ದರು. ಅವರು ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಮನೆಯಿಂದ ದುರ್ವಾಸನೆ ಬರುತ್ತಿರುವುದು ನಮ್ಮ ಗಮನಕ್ಕೆ ಬಂದ ಬಳಿಕ ಅನುಮಾನಗೊಂಡ ನಾವು ಪೊಲೀಸರಿಗೆ ಕರೆ ಮಾಡಿದೆವು ಎಂದು ನೆರೆಹೊರೆಯವರು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನು ಜೀವದ ಹಂಗು ತೊರೆದು ಜಪ್ತಿ ಮಾಡಿದ ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್‌ನಲ್ಲಿ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ಗ್ರೆನೇಡ್ ದಾಳಿ

    ಪಂಜಾಬ್‌ನಲ್ಲಿ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ಗ್ರೆನೇಡ್ ದಾಳಿ

    ಚಂಡೀಗಢ: ಪೊಲೀಸ್‍ನ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ರಾಕೆಟ್ ಲಾಂಚರ್ ಬಳಸಿ ಗ್ರೆನೇಡ್ ದಾಳಿ ನಡೆಸಿದ ಘಟನೆ ಪಂಜಾಬ್‍ನ ಮೊಹಾಲಿಯಲ್ಲಿ ನಡೆದಿದೆ.

    ಎಸ್‍ಎಎಸ್ ನಗರದದಲ್ಲಿರುವ ಪೊಲೀಸ್ ಇಂಟಲಿಜೆನ್ಸ್ ಹೆಡ್ ಕ್ವಾರ್ಟರ್ಸ್‍ನಲ್ಲಿ ಸಣ್ಣ ಸ್ಫೋಟ ಸಂಭವಿಸಿದೆ. ಗ್ರೆನೇಟ್ ಸ್ಫೋಟವು ಚಿಕ್ಕ ಪ್ರಮಾಣದಲ್ಲಿ ಆಗಿದ್ದು, ಸಂಪೂರ್ಣವಾಗಿ ಕಚೇರಿಯ ಗಾಜುಗಳು ಒಡೆದು ಹೋಗಿದೆ. ಘಟನೆಯಲ್ಲಿ ಯಾವುದೇ ಭಯೋತ್ಪಾದಕ ಕೃತ್ಯಗಳು ನಡೆದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಇದನ್ನು ಆರ್‌ಪಿಜಿ ದಾಳಿ ಶಂಕಿಸಿದ್ದಾರೆ.

    ಸ್ಫೋಟದಿಂದಾಗಿ ಯಾವುದೇ ಹಾನಿ ಆಗಿಲಿಲ್ಲ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ. ಫೋರೆನ್ಸಿಕ್ ತಂಡಗಳನ್ನು ಕರೆಸಲಾಗಿದೆ ಘಟನೆ ನಡೆದ ಪ್ರದೇಶದಲ್ಲಿ ಪೊಲೀಸರು ಸುತ್ತುವರಿದಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳದಲ್ಲಿದೆ. ಎಂದು ಮೊಹಾಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

    ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದು, ಮೊಹಾಲಿಯಲ್ಲಿರುವ ಪಂಜಾಬ್ ಪೆÇಲೀಸ್‍ನ ಇಂಟೆಲಿಜೆನ್ಸ್ ವಿಂಗ್ ಪ್ರಧಾನ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಪಂಜಾಬ್‍ನ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಿದವರನ್ನು ಬಿಡಲಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರು ರಾತ್ರಿ ಮೊಬೈಲ್‍ನಲ್ಲಿ ಗಟ್ಟಿಯಾಗಿ ಮಾತನಾಡುವಂತಿಲ್ಲ: ಭಾರತೀಯ ರೈಲ್ವೆ

  • ಕೊಹ್ಲಿಯ 100ನೇ ಟೆಸ್ಟ್ ಪಂದ್ಯಕ್ಕಿಲ್ಲ ಪ್ರೇಕ್ಷಕರಿಗೆ ಎಂಟ್ರಿ

    ಕೊಹ್ಲಿಯ 100ನೇ ಟೆಸ್ಟ್ ಪಂದ್ಯಕ್ಕಿಲ್ಲ ಪ್ರೇಕ್ಷಕರಿಗೆ ಎಂಟ್ರಿ

    ಚಂಡೀಗಢ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತನ್ನ 100ನೇ ಟೆಸ್ಟ್ ಪಂದ್ಯವನ್ನು ಮೊಹಾಲಿಯಲ್ಲಿ ಆಡುತ್ತಿದ್ದಾರೆ. ಆದರೆ ಈ ಪಂದ್ಯ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ನಿರಾಕರಿಸಲಾಗಿದೆ.

    ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಮಾರ್ಚ್ 4 ರಿಂದ ಆರಂಭವಾಗಲಿದೆ. ಪಂಜಾಬ್‍ನ ಮೊಹಾಲಿಯಲ್ಲಿ ನಡೆಯುವ ಈ ಪಂದ್ಯ ವಿರಾಟ್ ಕೊಹ್ಲಿಗೆ ಐತಿಹಾಸಿಕ ಪಂದ್ಯವಾಗಿದ್ದು, ತಮ್ಮ ವೃತ್ತಿಜೀವನದ 100 ಟೆಸ್ಟ್ ಪಂದ್ಯವಾಗಿರಲಿದೆ. ಆದರೆ ಈ ಪಂದ್ಯದ ವೀಕ್ಷಣೆಗೆ ಪ್ರೇಕ್ಷಕರಿಗೆ ಅವಕಾಶ ಇಲ್ಲ. ಇದರಿಂದ ಕೊಹ್ಲಿ ಫ್ಯಾನ್ಸ್‌ಗೆ ನಿರಾಸೆಯಾಗಿದೆ. ಇದನ್ನೂ ಓದಿ: ಟಿ20 ಸರಣಿಯಿಂದ ಗಾಯಕ್ವಡ್ ಔಟ್ – ಕನ್ನಡಿಗನಿಗೆ ಒಲಿದ ಅದೃಷ್ಟ

    ಈ ಬಗ್ಗೆ ಪಂಜಾಬ್ ಕ್ರಿಕೆಟ್ ಅಕಾಡೆಮಿಯ ಸಿಇಒ ದೀಪಕ್ ಶರ್ಮಾ ಮಾಹಿತಿ ಹಂಚಿಕೊಂಡಿದ್ದು, ಬಯೋ ಬಬಲ್‍ನಲ್ಲಿ ಪಂದ್ಯ ನಡೆಯುವುದರಿಂದಾಗಿ ಮೊಹಾಲಿಯಲ್ಲಿ ನಡೆಯುವ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಾರ್ಚ್ 26ಕ್ಕೆ ಐಪಿಎಲ್ ಆರಂಭ ಮೇ 29ಕ್ಕೆ ಫೈನಲ್ – 2 ನಗರಗಳಲ್ಲಿ 70 ಪಂದ್ಯ

    ಭಾರತ ಶ್ರೀಲಂಕಾ ವಿರುದ್ಧ 2 ಟೆಸ್ಟ್ ಪಂದ್ಯಗಳ ಸರಣಿ ಆಡಲಿದ್ದು, ಮೊದಲ ಪಂದ್ಯ ಮೊಹಾಲಿ ಮತ್ತು ಎರಡನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ಟೀಂ ಇಂಡಿಯಾದ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.

  • ದ.ಆಫ್ರಿಕಾ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾ- ವಿರಾಟ್ ಸ್ಫೋಟಕ ಬ್ಯಾಟಿಂಗ್, ಎಡವಿದ ಪಂತ್

    ದ.ಆಫ್ರಿಕಾ ವಿರುದ್ಧ ಅಬ್ಬರಿಸಿದ ಟೀಂ ಇಂಡಿಯಾ- ವಿರಾಟ್ ಸ್ಫೋಟಕ ಬ್ಯಾಟಿಂಗ್, ಎಡವಿದ ಪಂತ್

    ಮೊಹಾಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಫೋಟಕ ಅರ್ಧ ಶತಕ ಹಾಗೂ ಶಿಖರ್ ಧವನ್ ತಾಳ್ಮೆಯ ಆಟದಿಂದ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

    ಮೊಹಾಲಿಯ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರು ಟಿ-20 ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಈ ಮೂಲಕ ಸರಣಿಯಲ್ಲಿ 1-0 ಇಂದ ಕೊಹ್ಲಿ ಪಡೆ ಮುನ್ನಡೆ ಪಡೆದಿದೆ.

    ಹರಿಣರು ನೀಡಿದ್ದ 150 ರನ್‍ಗಳ ಮೊತ್ತವನ್ನು ಬೆನ್ನುಹತ್ತಿದ ಟೀಂ ಇಂಡಿಯಾ ಒಂದು ಓವರ್ ಬಾಕಿ ಇರುವಾಗಲೇ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ.

    ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಕೇವಲ 12 ರನ್ ಗಳಿಸಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ತೆರಳಿದರು. ಶಿಖರ್ ಧವನ್‍ಗೆ ಸಾಥ್ ನೀಡುತ್ತ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. 31 ಎಸೆತಗಳನ್ನು ಎದುರಿಸಿದ ಶಿಖರ್ ಧವನ್ 1 ಸಿಕ್ಸ್, 4 ಬೌಂಡರಿ ಸೇರಿ 40 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಒಳಿಕ ಬಂದ ರಿಷಭ್ ಪಂತ್ ಕೇವಲ 4 ಗಳಿಸಲು ಶಕ್ತರಾದರು.

    ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿಗೆ ಕಾರಣವಾದ ವಿರಾಟ್ ಕೊಹ್ಲಿ ಔಟಾಗದೆ 52 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸೇರಿ 72 ರನ್ ಸಿಡಿಸಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್ ಮನ್ ರೀಝಾ ಹೆಂಡ್ರಿಕ್ಸ್ ಕೇವಲ 6 ರನ್‍ಗಳಿಗೆ ವಿಕೆಟ್ ಒಪ್ಪಿಸಿದರು. ಇತ್ತ ಕ್ವಿಂಟನ್ ಡಿಕಾಕ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಕ್ವಿಂಟನ್ ಡಿಕಾಕ್ 37 ಎಸೆತಗಳಲ್ಲಿ 8 ಬೌಂಡರಿ ಸೇರಿದಂತೆ 52 ರನ್ ಕಲೆಹಾಕಿದರು. ಡಿಕಾಕ್‍ಗೆ ಸಾಥ್ ನೀಡಿದ ತೆಂಬಾ ಬವೂಮಾ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದರು. ದುರಾದೃಷ್ಟವಶಾತ್ 50 ರನ್‍ಗಳಿಗೆ ಒಂದು ರನ್ ಬಾಕಿ ಇರುವಂತೆ ವಿಕೆಟ್ ಒಪ್ಪಿಸಿ ಅರ್ಧ ಶತಕ ವಂಚಿತರಾದರು. 43 ಎಸೆತಗಳನ್ನು ಎದುರಿಸಿದ ತೆಂಬಾ ಬವೂಮಾ 1 ಸಿಕ್ಸ್, 3 ಬೌಂಡರಿ ಸೇರಿದಂತೆ 49 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಈ ಮೂಲಕ ದಕ್ಷಿಣ ಆಫ್ರಿಕಾ ತಂಡವು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 149 ಕಲೆ ಹಾಕಿತ್ತು.

    ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

  • ಕೊನೆಗೂ ಗೆಲುವಿನ ಖಾತೆ ತೆರೆದ ಆರ್‌ಸಿಬಿ – ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಜಯ

    ಕೊನೆಗೂ ಗೆಲುವಿನ ಖಾತೆ ತೆರೆದ ಆರ್‌ಸಿಬಿ – ಪಂಜಾಬ್ ವಿರುದ್ಧ 8 ವಿಕೆಟ್‍ಗಳ ಜಯ

    ಮೋಹಾಲಿ: ಐಪಿಎಲ್ 2019ನೇ ಆವೃತ್ತಿಯಲ್ಲಿ ಸತತ ಆರು ಸೋಲುಗಳಿಗೆ ಗುರಿಯಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಮೊದಲ ಗೆಲುವನ್ನು ದಾಖಲಿಸಿದೆ.

    ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತ್ತು. ಈ ಪಂದ್ಯದಲ್ಲಿ ಕ್ರಿಸ್ ಗೇಲ್ 99 ರನ್ ಸಿಡಿಸಿ ಆರ್‌ಸಿಬಿಗೆ 174 ರನ್‍ಗಳ ಗುರಿ ನೀಡಿತ್ತು. ಮೊದಲು ಬ್ಯಾಟಿಂಗ್ ಮಾಡಲು ಬಂದ ಪಾರ್ಥಿವ್ ಪಟೇಲ್ 19 ರನ್ ತೆಗೆದುಕೊಂಡು ಔಟ್ ಆದರು.

    ನಾಯಕ ವಿರಾಟ್ ಕೊಹ್ಲಿ 67 ರನ್ ಸಿಡಿಸಿ ಉತ್ತಮವಾಗಿ ಪ್ರದರ್ಶನ ನೀಡಿದರು. ಅಲ್ಲದೆ ಎಬಿಡಿ ವಿಲಿಯರ್ಸ್ ಕೂಡ 59 ರನ್ ಸಿಡಿಸುವ ಮೂಲಕ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು. ವಿರಾಟ್ ಹಾಗೂ ಎಬಿಡಿ ವಿಲಿಯರ್ಸ್ ಅರ್ಧಶತಕಗಳ ನೆರವಿನಿಂದ ಆರ್‌ಸಿಬಿ 8 ವಿಕೆಟ್ ಅಂತರದ ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಪಂದ್ಯದಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ.

  • ಐಪಿಎಲ್ ಟೂರ್ನಿಯಲ್ಲಿ ಹೊಸ ದಾಖಲೆ ನಿರ್ಮಿಸಿದ ಗೇಲ್

    ಐಪಿಎಲ್ ಟೂರ್ನಿಯಲ್ಲಿ ಹೊಸ ದಾಖಲೆ ನಿರ್ಮಿಸಿದ ಗೇಲ್

    ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಹೊಸ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‍ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಹೆಗ್ಗಳಿಕೆಯನ್ನು ಪಡೆದಿದ್ದಾರೆ.

    ಐಪಿಎಲ್ ಲೀಗ್‍ನಲ್ಲಿ ಗೇಲ್ ಇದುವರೆಗೂ 302 ಸಿಕ್ಸರ್ ಗಳನ್ನು ಸಿಡಿಸಿದ್ದು, ಈ ಸಾಧನೆ ಮಾಡಿದ ಮೊದಲ ಆಟಗಾರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಪಂದ್ಯದಲ್ಲಿ 4 ಸಿಕ್ಸರ್ ಸಿಡಿಸಿ ಸಂಖ್ಯೆಯನ್ನು 302ಕ್ಕೆ ಹೆಚ್ಚಳ ಮಾಡಿದರು.

    ಈ ಪಟ್ಟಿಯಲ್ಲಿ ಬೇರೆ ಯಾವುದೇ ಆಟಗಾರ ಸಮೀಪದ ಸಾಧನೆಯನ್ನು ಮಾಡಲು ಸಾಧ್ಯವಾಗಿಲ್ಲ. 2ನೇ ಸ್ಥಾನದಲ್ಲಿರುವ ಎಬಿಡಿ ವಿಲಿಯರ್ಸ್ 192 ಸಿಕ್ಸರ್, 187 ಸಿಕ್ಸರ್ ಗಳೊಂದಿಗೆ ಧೋನಿ 3ನೇ ಸ್ಥಾನ ಪಡೆದಿದ್ದಾರೆ. 4ನೇ ಸ್ಥಾನದಲ್ಲಿ 186 ಸಿಕ್ಸರ್ ಗಳೊಂದಿಗೆ ಸುರೇಶ್ ರೈನಾ ಇದ್ದಾರೆ.

    ಗೇಲ್ ತಮ್ಮ ಮೊದಲ ಸಿಕ್ಸರ್ ಗಳ ಶತಕವನ್ನು 37 ಇನ್ನಿಂಗ್ಸ್ ಗಳಲ್ಲಿ ಪೂರೈಸಿದ್ದರು. ಆ ಬಳಿಕ 69ನೇ ಇನ್ನಿಂಗ್ಸ್ ವೇಳೆ ಸಿಕ್ಸರ್ ದ್ವಿಶತಕದ ಹಾಗೂ 144 ಇನ್ನಿಂಗ್ಸ್ ವೇಳೆಗೆ ಸಿಕ್ಸರ್ ಗಳ ತ್ರಿಶತಕ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಗೇಲ್ 24 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ 40 ರನ್ ಗಳಿಸಿ ಔಟಾದರು.

    ಕೆಎಲ್ ರಾಹುಲ್ ಅರ್ಧ ಶತಕ: ಮುಂಬೈ ಇಂಡಿಯನ್ಸ್ ನೀಡಿದ 177 ರನ್ ಗಳ ಸವಾಲಿನ ಗುರಿಯನ್ನು ಪಂಜಾಬ್ ಸುಲಭವಾಗಿ ಬೆನ್ನತ್ತಿ 18.4 ಓವರ್ ಗಳಲ್ಲಿ ಗೆಲುವು ಪಡೆಯಿತು. ಪಂಜಾಬ್ ಪರ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೆಎಲ್ ರಾಹುಲ್ 6ಬೌಂಡರಿ, ಸಿಕ್ಸರ್ ನೆರವಿನಿಂದ ಅಜೇಯ 71 ರನ್ ಸಿಡಿಸಿದರು. ಇತ್ತ ಮಯಾಂಕ್ ಕೂಡ 43 ರನ್ ಗಳಿಸಿ ಗಮನ ಸೆಳೆದರು.

  • ಐಪಿಎಲ್ 2019: ಅಂಪೈರ್ ಮತ್ತೊಂದು ಎಡವಟ್ಟು!

    ಐಪಿಎಲ್ 2019: ಅಂಪೈರ್ ಮತ್ತೊಂದು ಎಡವಟ್ಟು!

    ಮೊಹಾಲಿ: 2019ರ ಐಪಿಎಲ್ ಆವೃತ್ತಿಯಲ್ಲಿ ಅಂಪೈರ್ ಗಳು ಮಾಡುವ ತಪ್ಪುಗಳು ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಗುರುವಾರ ಮುಂಬೈ ಇಂಡಿಯನ್ಸ್, ಆರ್ ಸಿಬಿ ಪಂದ್ಯದ ಅಂತಿಮ ಓವರಿನ ಕೊನೆ ಎಸೆತವನ್ನು ಅಂಪೈರ್ ನೋಬಾಲ್ ಎಂದು ಗುರುತಿಸಲು ವಿಫಲರಾಗಿದ್ದ ಘಟನೆ ಮಾಸುವ ಮುನ್ನವೇ ಅಂಪೈರ್ ಮತ್ತೊಂದು ಎಡವಟ್ಟು ಮಾಡಿರುವ ಘಟನೆ ನಡೆದಿದೆ.

    ಸದ್ಯ ಮುಂಬೈ ಇಂಡಿಯನ್ಸ್ ಹಾಗೂ ಕಿಂಗ್ಸ್ ಇಲೆವೆನ್ ತಂಡ ನಡುವೆ ಪಂದ್ಯ ನಡೆಯುತ್ತಿದ್ದು, ಅಶ್ವಿನ್ ತಮ್ಮ ಮೊದಲ ಓವರಿನಲ್ಲಿ 7 ಬೌಲ್ ಮಾಡಿದ್ದಾರೆ. ಹೌದು, ಅಶ್ವಿನ್ ತಮ್ಮ ಮೊದಲ ಓವರಿನ 6 ಎಸೆತಗಳಲ್ಲಿ ಕೇವಲ ಮೂರು ರನ್ ಗಳನ್ನು ಮಾತ್ರ ನೀಡಿದ್ದರು. ಆದರೆ ನಾನ್ ಸ್ಟ್ರೈಕರ್ ಬದಿಯಲ್ಲಿದ್ದ ಅಂಪೈರ್ ಅಶ್ವಿನ್ 6 ಎಸೆತಗಳು ಪೂರ್ಣಗೊಂಡಿದೆ ಎಂಬುವುದನ್ನು ಮರೆತ ಪರಿಣಾಮ 7ನೇ ಎಸೆತ ಬೌಲ್ ಮಾಡಿದರು. ಈ ಎಸೆತದಲ್ಲಿ ಡಿಕಾಕ್ ಬೌಂಡರಿ ಸಿಡಿಸಿದರು. ಪರಿಣಾಮ 7 ಎಸೆತಗಳ ಓವರಿನಲ್ಲಿ 7 ರನ್ ಮುಂಬೈ ತಂಡ ಗಳಿಸಿತು. ಪಂದ್ಯ ಪ್ರಗತಿಯಲ್ಲಿ ಇರುವ ಪರಿಣಾಮ ಅಂಪೈರ್ ಎಡವಟ್ಟು ಪಂಜಾಬ್ ತಂಡದ ಮೇಲೆ ಹೇಗೆ ಪರಿಣಾಮ ಉಂಟು ಮಾಡಲಿದೆ ಎಂಬುವುದನ್ನು ಕಾದು ನೋಡಬೇಕಿದೆ.

    ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಾಯಕರಾಗಿರುವ ಆರ್ ಅಶ್ವಿನ್ ಟೂರ್ನಿಯ ಮೊದಲ ಪಂದ್ಯದಲ್ಲಿ ಮಂಕಡ್ ರನೌಟ್ ಮಾಡಿ ಸುದ್ದಿಯಾಗಿದ್ದರು. 2ನೇ ಪಂದ್ಯದಲ್ಲಿ ಫೀಲ್ಡಿಂಗ್ ಎಡವಟ್ಟು ಮಾಡಿ ಮತ್ತೊಮ್ಮೆ ಸುದ್ದಿಯಾಗಿದ್ದು, ಸದ್ಯ ಓವರಿನಲ್ಲಿ 7  ಎಸೆತ ಎಸೆದಿದ್ದಾರೆ.

    https://twitter.com/paapabutterfly/status/1111962267610832898