Tag: Mohamed Nalapad

  • ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ – ಬಿಜೆಪಿ ನಾಯಕರ ವಿರುದ್ಧ ನಲಪಾಡ್ ದೂರು

    ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ – ಬಿಜೆಪಿ ನಾಯಕರ ವಿರುದ್ಧ ನಲಪಾಡ್ ದೂರು

    ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ (Pakistan) ಪರ ಘೋಷಣೆ ಆರೋಪ ಹೊರಿಸಿದ ಹಿನ್ನೆಲೆ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ (Congress) ಯುವ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Haris Nalapad) ದೂರು ನೀಡಿದ್ದಾರೆ.

    ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಸಮಾಜ ಒಡೆಯಲು ಯತ್ನಿಸುತ್ತಿರುವ ಬಿಜೆಪಿ (BJP) ನಾಯಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ನಲಪಾಡ್ ಕಮೀಷನರ್ ಕಚೇರಿಯಲ್ಲಿ ದೂರು ನೀಡಿದ್ದಾರೆ. ವಕೀಲ ಶತಬೀಷ್ ಶಿವಣ್ಣ ಜೊತೆ ಆಗಮಿಸಿ ಸತ್ಯಾಂಶ ಹೊರಬರುವ ಮುನ್ನವೇ ಸುಳ್ಳು ಹಬ್ಬಿಸಿದ್ದಾರೆ ಎಂದು ನಲಪಾಡ್ ದೂರು ಕೊಟ್ಟಿದ್ದಾರೆ. ಇದನ್ನೂ ಓದಿ:  ರೈತನಿಗೆ ಅವಮಾನ – ಕ್ಷಮೆಯಾಚಿಸಿ ಉಲ್ಟಾ ಹೊಡೆದ ಬಿಎಂಆರ್‌ಸಿಎಲ್

    ಆರ್ ಅಶೋಕ್, ಅಶ್ವಥ್ ನಾರಾಯಣ್, ವಿಜಯೇಂದ್ರ, ಯಡಿಯೂರಪ್ಪ ವಿರುದ್ಧ ದೂರು ಕೊಡಲು ಬಂದಿದ್ದೇವೆ. ನಾಸೀರ್ ಹುಸೇನ್ ಜಿಂದಾಬಾದ್ ಎಂಬುದನ್ನು ತಿರುಚಿ ಹೇಳಲಾಗುತ್ತಿದೆ. ಅದನ್ನು ಪಾಕಿಸ್ತಾನ ಜಿಂದಾಬಾದ್ ಎಂದು ತಿರುಚಿ ಹೇಳಿ ಸಮಾಜ ಒಡೆದುಹಾಕುವ ಹೇಳಿಕೆ ನೀಡಿದ್ದಾರೆ. ಕಮ್ಯೂನಲ್ ವಿಚಾರದ ಬಗ್ಗೆ ದಂಗೆ ಹಚ್ಚಲು ಈ ರೀತಿ ಮಾಡಲಾಗುತ್ತಿದೆ. ರಾಜಕೀಯ ಮಾಡಿ ಈ ರೀತಿ ಹಬ್ಬಿಸಲಾಗುತ್ತಿದೆ. ಒಂದೇ ಒಂದು ಸಮಾಜವನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಜಿಂದಾಬಾದ್‌ ಘೋಷಣೆ – ಎಡಿಟ್‌ ಮಾಡದ ಮೂಲ ವಿಡಿಯೋ ನೀಡಿದ ಪಬ್ಲಿಕ್‌ ಟಿವಿ

    ನಾವೆಲ್ಲಾ ಭಾರತೀಯರು, ಕನ್ನಡಿಗರು. ಒಂದು ಸಮಾಜವನ್ನು ಟಾರ್ಗೆಟ್ ಮಾಡಿ ಅವನನ್ನು ಜೀವನ ಮಾಡಲು ಬಿಡುತ್ತಿಲ್ಲ. ಒಬ್ಬ ಸಂಸದ ಗೆದ್ದಾಗ ಜಿಂದಾಬಾದ್ ಹಾಕೋಕು ಬಿಟ್ಟಿಲ್ಲ. ಪ್ರಚೋದನಕಾರಿ ಹೇಳಿಕೆ ಕೊಟ್ಟವರ ವಿರುದ್ಧ ಎಫ್‌ಐಆರ್ ದಾಖಲಿಸಲು ಮನವಿ ಮಾಡಿದ್ದೇವೆ. ಮೂರು ಸೀಟ್ ಗೆದ್ದಿರುವುದನ್ನು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕೆ ಉರ್ಕೊಂಡು ಈ ರೀತಿ ಮಾಡುತ್ತಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡೋಕೆ ಆಗಲ್ಲ. ಸಿದ್ದರಾಮಯ್ಯ, ಡಿಕೆಶಿ ಇರೋವರೆಗೂ ನಮ್ಮ ಶಾಸಕರನ್ನು ಖರೀದಿ ಮಾಡಲು ಆಗಲ್ಲ. ಎಷ್ಟೇ ಕೋಟಿ ಕೊಡುತ್ತೇನೆ ಅಂದರೂ ನಮ್ಮ ಶಾಸಕರು ಸೋತಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳಿಗೆ ನೀರಿನ ಕೊರತೆ – ಲೋಡ್ ಶೆ‌ಡ್ಡಿಂಗ್ ಭೀತಿ

  • ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್

    ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್

    ಬೆಂಗಳೂರು: ಬಿಜೆಪಿ ಪಕ್ಷದವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಅದಕ್ಕಾಗಿ ಬಾಯಿಂಗೆ ಬಂದ ಹಾಗೆ ಮಾತಾನಾಡುತ್ತಾರೆ. ಯತ್ನಾಳ್ ಈಗಾಗಲೇ ಸತ್ತಿದ್ದು ಅವರ ಶವಯಾತ್ರೆಯನ್ನು ಯುತ್ ಕಾಂಗ್ರೆಸ್ ಮಾಡಿದೆ ಎಂದು ಯುತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹೇಳಿದ್ದಾರೆ.

    ಇಂದು ಮೌರ್ಯ ಸರ್ಕಲ್‍ನಲ್ಲಿ ಯುತ್ ಕಾಂಗ್ರೆಸ್ ವತಿಯಿಂದ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಪ್ರತಿಭಟನೆ ಮಾಡಿದರು. ನಿನ್ನೆ ಯತ್ನಾಳ್ ಅವರು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಪಾಕಿಸ್ತಾನದ ಎಜೆಂಟ್ ಅಂತ ಕರೆದಿದ್ದಾರೆ. ಯಾವ ಆಧಾರದ ಮೇಲೆ ಅವರು ಹೀಗೆ ಕರೆಯುತ್ತಾರೆ. ಅವರಿಗೆ ನೈತಿಕತೆ ಇಲ್ಲ. ಯತ್ನಾಳ್ ಅಫ್ಘಾನಿಸ್ತಾನದ ಎಜೆಂಟ್ ಅಂತ ನಾನು ಹೇಳುತ್ತೇನೆ. ಅವರು ಈಗಾಗಲೇ ಸತ್ತಿದ್ದಾರೆ. ಅದಕ್ಕಾಗಿ ನಾವೂ ಶವಯಾತ್ರೆ ಮಾಡುತ್ತಿದ್ದೇವೆ. ಇದು ಕೊಳಕು ಬಿಜೆಪಿ ಪಕ್ಷ ಜನ ಇದನ್ನು ಕಿತ್ತು ಹಾಕಬೇಕು ಎಂದಿದ್ದಾರೆ. ಇದನ್ನೂ ಓದಿ: ಸೈನ್ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ರಚಿಸಿದ 20 ವರ್ಷದ ಯುವತಿ

    nalapad

    ಬಿಜೆಪಿಗೆ ಧಿಕ್ಕಾರ ಕೂಗಿ ಶವಯಾತ್ರೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು ಯತ್ನಾಳ್ ಭಾವಚಿತ್ರವನ್ನು ಚಟ್ಟದ ಮೇಲೆ ಹಾಕಿ ಶವಯಾತ್ರೆ ಮಾಡಿ ಚಿತೆಗೆ ಬೆಂಕಿ ಹಚ್ಚಿ ಸಂಸ್ಕಾರ ಮಾಡಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಯತ್ನಾಳ್ ದೇಶದ್ರೋಹಿ ಕೋಮುವಾದಿ ಅಂತ ಕೂಗಿ ಬಾಯಿ ಬಡೆದುಕೊಂಡು ಅಂತ್ಯಸಂಸ್ಕಾರ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ