Tag: Mohammad Hafeez

  • ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ (Cricket) ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಭಾರತೀಯ ಕ್ರಿಕೆಟ್ ತಂಡದೊಂದಿಗೆ ವಿವಾದಗಳ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಗೌತಮ್ ಗಂಭೀರ್ ಮತ್ತು ಇತರ ಭಾರತೀಯ ಕ್ರಿಕೆಟಿಗರೊಂದಿಗೆ ಅನೇಕ ಬಾರಿ ಮುಖಾಮುಖಿಯಾಗಿದ್ದಾರೆ. ಆದರೆ ಅವರು ಮಾಧ್ಯಮದಲ್ಲಿ ನೀಡಿದ ಹೇಳಿಕೆಯೊಂದು ಭಾರತೀಯ ಕ್ರಿಕೆಟಿಗರಿಗೆ (Team India) ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

    ಏಷ್ಯಾಕಪ್ ಟಿ20 (Aisa Cup T20) ಟೂರ್ನಿಯ ಕುರಿತು ಮಾತನಾಡಿರುವ ಅಫ್ರಿದಿ, ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಏಷ್ಯಾ ಕಪ್ 2022ರ ಪಂದ್ಯದ ವೇಳೆ ನನ್ನ ಮಗಳು ಪಾಕಿಸ್ತಾನ ಧ್ವಜಕ್ಕಿಂತ ಭಾರತ ಧ್ವಜವನ್ನೇ ಹಿಡಿದು ಬೀಸುತ್ತಿದ್ದಳು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

    ಸ್ಟೇಡಿಯಂನಲ್ಲಿ ಕೇವಲ ಪಾಕಿಸ್ತಾನಿ ಅಭಿಮಾನಿಗಳು ಶೇ.10 ರಷ್ಟು ಇದ್ದರೆ, ಶೇ.90 ರಷ್ಟು ಭಾರತದ ಅಭಿಮಾನಿಗಳೇ ತುಂಬಿದ್ದರು. ಭಾರತೀಯ ಅಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ವಿಷಯವನ್ನು ನನ್ನ ಹೆಂಡತಿ ನನಗೆ ಹೇಳಿದಳು ಎಂದು ಹೇಳಿಕೊಂಡಿದ್ದಾರೆ.

    ಪಾಕಿಸ್ತಾನದ ಧ್ವಜಗಳು ಅಲ್ಲಿ ಲಭ್ಯವಿರಲಿಲ್ಲ. ಆದ್ದರಿಂದ ನನ್ನ ಕಿರಿಯ ಮಗಳು ಭಾರತದ ಧ್ವಜವನ್ನು ಹಿಡಿದು ಬೀಸುತ್ತಿದ್ದಳು. ನಾನು ವೀಡಿಯೊವನ್ನು ಸ್ವೀಕರಿಸಿದ್ದೇನೆ. ಆದರೆ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳಲು ಆಗಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

    ಮೊದಲ ಪಂದ್ಯದಲ್ಲಿ 147 ರನ್‌ಗಳಿಸಿ ಭಾರತದ ಎದುರು ಸೋತ ಪಾಕಿಸ್ತಾನ, ಸೂಪರ್ ಫೋರ್ ಲೀಗ್‌ನಲ್ಲಿ 182 ರನ್‌ಗಳಿಸಿ ಭಾರತದ ವಿರುದ್ಧ ಗೆಲುವು ದಾಖಲಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಅರ್ಶ್‌ದೀಪ್‌ ಸಿಂಗ್ ಬೆಂಬಲಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

    ಅರ್ಶ್‌ದೀಪ್‌ ಸಿಂಗ್ ಬೆಂಬಲಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

    ದುಬೈ: ಟೀಂ ಇಂಡಿಯಾ ಆಟಗಾರ ಅರ್ಶ್‌ದೀಪ್‌ ಸಿಂಗ್ ಅವರನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಬೆಂಬಲಿಸಿದ್ದಾರೆ.

    ಏಷ್ಯಾಕಪ್‌ನ ಸೂಪರ್ ಫೋರ್ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಭಾನುವಾರ ಹಣಾಹಣಿ ನಡೆಯಿತು. ಈ ಪಂದ್ಯದ 18ನೇ ಓವರ್‌ನಲ್ಲಿ ಎಡಗೈ ವೇಗಿ ಬೌಲರ್ ಅರ್ಶ್‌ದೀಪ್‌ ಸಿಂಗ್ ಒತ್ತಡದ ಸಮಯದಲ್ಲಿ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರು.

    ಇದರಿಂದ ಭಾರೀ ಟಿಕೆಗಳು ವ್ಯಕ್ತವಾಯಿತು. ಅಲ್ಲದೇ ಅರ್ಶ್‌ದೀಪ್‌ ಅವರ ಪುಟದಲ್ಲಿ ಖಲಿಸ್ತಾನ ಆಟಗಾರ ಎಂದು ಎಡಿಟ್ ಮಾಡಲಾಗಿತ್ತು. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಸಚಿವಾಲಯ ವಿಕಿಪೀಡಿಯಾದ ಭಾರತದ ಪ್ರತಿನಿಧಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನೂ ಓದಿ: ಸುಷ್ಮಿತಾ ಸೇನ್ ಜೊತೆ ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ

    ಅನೇಕ ಕಡೆ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಭಾರತೀಯ ಹಿರಿಯ ಹಾಗೂ ಮಾಜಿ ಕ್ರಿಕೆಟಿಗರು ಅರ್ಶ್‌ದೀಪ್‌ ಸಿಂಗ್ ಬೆಂಬಲಕ್ಕೆ ನಿಂತರು. ಈ ಬೆನ್ನಲ್ಲೇ ಇಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಸಹ ಅರ್ಶ್‌ದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರನ್ನು ಅವಮಾನಿಸದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ಈ ಕುರಿತು ಟ್ವೀಟ್ ಮಾಡಿರುವ ಮೊಹಮ್ಮದ್ ಹಫೀಜ್, ಎಲ್ಲಾ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ನನ್ನ ವಿನಂತಿ ಏನೆಂದರೆ ನಾವು ಕ್ರೀಡೆಯಲ್ಲಿ ಮನುಷ್ಯರಾಗಿ ಸಹಜ ತಪ್ಪುಗಳನ್ನು ಮಾಡುತ್ತೇವೆ. ಆದರೆ ದಯವಿಟ್ಟು ಈ ತಪ್ಪುಗಳಿಂದ ಯಾರನ್ನೂ ಅವಮಾನಿಸಬೇಡಿ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪೆಟ್ರೋಲ್ ಸಿಗುತ್ತಿಲ್ಲ, ಎಟಿಎಮ್‍ನಲ್ಲಿ ಹಣವಿಲ್ಲ – ಪಾಕ್ ದುಸ್ಥಿತಿ ಬಿಚ್ಚಿಟ್ಟ ಹಫೀಜ್

    ಪೆಟ್ರೋಲ್ ಸಿಗುತ್ತಿಲ್ಲ, ಎಟಿಎಮ್‍ನಲ್ಲಿ ಹಣವಿಲ್ಲ – ಪಾಕ್ ದುಸ್ಥಿತಿ ಬಿಚ್ಚಿಟ್ಟ ಹಫೀಜ್

    ಇಸ್ಲಾಮಾಬಾದ್: ಲಾಹೋರ್‌ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಮ್‍ನಲ್ಲಿ ಹಣವಿಲ್ಲ ಎಂದು ಪಾಕಿಸ್ತಾನದಲ್ಲಿರುವ ಸ್ಥಿತಿಗತಿಗಳ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಟ್ವಿಟ್ಟರ್ ಮೂಲಕ ಕಿಡಿಕಾರಿದ್ದಾರೆ.

    PAK

    ಲಾಹೋರ್‌ನ ಯಾವುದೇ ಪೆಟ್ರೋಲ್ ಬಂಕ್‍ನಲ್ಲಿ ಪೆಟ್ರೋಲ್ ಲಭ್ಯವಿಲ್ಲವೇ? ಎಟಿಎಂ ಯಂತ್ರಗಳಲ್ಲಿ ನಗದು ಲಭ್ಯವಿಲ್ಲವೇ? ರಾಜಕೀಯ ಬಿಕ್ಕಟ್ಟಿನಿಂದಾಗಿ ಜನಸಾಮಾನ್ಯರೇಕೆ ನರಳಬೇಕು ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಪ್ರಸ್ತುತ ಪ್ರಧಾನಿ ಶಹಾಬಾಜ್‌ ಷರೀಫ್ ಸೇರಿದಂತೆ ಕೆಲ ರಾಜಕೀಯ ನಾಯಕರಿಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ನ್ನು ಫೈನಲ್‍ಗೇರಿಸಿ ರಾಜಸ್ಥಾನ್ ಫ್ರಾಂಚೈಸ್‍ಗೆ Sorry ಕೇಳಿದ ಮಿಲ್ಲರ್

    ಹಫೀಜ್ ಈ ಹಿಂದೆ ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿಯ ನಿರ್ಧಾರಗಳ ಬಗ್ಗೆ ಕೂಡ ಚಕಾರ ಎತ್ತಿದ್ದರು. ಇದೀಗ ಸರ್ಕಾರದಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಏಕೆ ಕಪ್ ಗೆದ್ದಿಲ್ಲ? – ಕೊಹ್ಲಿ ವಿರುದ್ಧ ಸೆಹ್ವಾಗ್ ಮಹತ್ವದ ಹೇಳಿಕೆ

    ಹಫೀಜ್ 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. ಮೂರು ಮಾದರಿ ಕ್ರಿಕೆಟ್‍ನಲ್ಲಿ ಹಫೀಜ್, ಪಾಕ್ ಪರ 12,000ಕ್ಕೂ ಅಧಿಕ ರನ್ ಮತ್ತು 250ಕ್ಕೂ ಹೆಚ್ಚು ವಿಕೆಟ್ ಪಡೆದು ಯಶಸ್ವಿ ಆಲ್‍ರೌಂಡರ್ ಎನಿಸಿಕೊಂಡಿದ್ದರು.

  • ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಉಳಿದವರ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳಲ್ಲ: ಹಫೀಜ್

    ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಉಳಿದವರ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳಲ್ಲ: ಹಫೀಜ್

    ಇಸ್ಲಾಮಾಬಾದ್: 2022ರ ಟಿ20 ವಿಶ್ವಕಪ್‍ನಲ್ಲಿ ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಎದುರುಬದುರಾಗಲಿದೆ. ಇದೀಗ ಈ ಬಗ್ಗೆ ಮಾಜಿ ಕ್ರಿಕೆಟಿಗರು ಮಾತನಾಡಲಾರಂಭಿಸಿದ್ದಾರೆ.  ಪಾಕಿಸ್ತಾನ ತಂಡ ಭಾರತದ ಆ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಇತರ ಆಟಗಾರರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದು ಪಾಕಿಸ್ತಾನದ ಮಾಜಿ ಆಟಗಾರ ಮೊಹಮ್ಮದ್ ಹಫೀಜ್ ಹೇಳಿಕೆ ನೀಡಿದ್ದಾರೆ.

    ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022ರ ಟಿ20 ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಾಟದ ವೇಳಾ ಪಟ್ಟಿಬಿಡುಗಡೆಯಾಗಿದೆ. ಈ ಬಗ್ಗೆ ಮಾಧ್ಯಮವೊಂದರ ಪ್ರಶ್ನೆಗೆ ಉತ್ತರಿಸಿದ ಹಫೀಜ್, ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾಟದಲ್ಲಿ ಭಾರತದ ತಂಡದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ಹೊರತು ಪಡಿಸಿದರೆ ಭಾರತ ತಂಡದಲ್ಲಿರುವ ಇತರ ಆಟಗಾರರು ಆ ಒತ್ತಡವನ್ನು ನಿಭಾಯಿಸುತ್ತಾರೆ ಎಂಬ ನಂಬಿಕೆ ಇಲ್ಲ. ಆದರೆ ಇವರಿಬ್ಬರು ಮಾತ್ರ ಅಪಾಯಕಾರಿ ಆಟಗಾರರು ಹಾಗಾಗಿ ಪಾಕಿಸ್ತಾನ ಈ ಇಬ್ಬರ ಬಗ್ಗೆ ಎಚ್ಚರಿಕೆಯ ನಡೆ ಇಡಬೇಕು ಎಂದಿದ್ದಾರೆ. ಇದನ್ನೂ ಓದಿ: 2022ರ ಟಿ20 ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ – ಭಾರತಕ್ಕೆ ಮೊದಲ ಎದುರಾಳಿ ಪಾಕ್

    ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಪಂದ್ಯ ನಡೆದಾಗ ಹೆಚ್ಚಿನ ಒತ್ತಡ ಇರುತ್ತದೆ. ನಾನು ಸಾಕಷ್ಟು ಬಾರಿ ಆಡಿದ್ದೇನೆ ದುಬೈನಲ್ಲಿ 2021ರ ಟಿ20 ವಿಶ್ವಕಪ್‍ನಲ್ಲಿ ನಮ್ಮ ತಂಡ 10 ವಿಕೆಟ್‍ಗಳಿಂದ ಗೆದ್ದಿರುವುದು ಅವಿಸ್ಮರಣೀಯ. ಭಾರತ ಸೂಪರ್‌-12 ಹಂತದಲ್ಲಿ ಸೋತರ, ನಾವು ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತೆವು ಎಂದರು. ಇದನ್ನೂ ಓದಿ: ಅಮೆರಿಕದ ನ್ಯಾಷನಲ್ ಕ್ರಿಕೆಟ್ ಟೀಂನಲ್ಲಿ ಕಾಫಿನಾಡ ಪ್ರತಿಭೆ ನಾಸ್ತೋಶ್ ಕೆಂಜಿಗೆ