Tag: mohammad nalpad

  • ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಪ್ರಶ್ನಿಸಿದ್ದಕ್ಕೆ ತಮ್ಮ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ಗೆ ಟ್ವೀಟ್‌ ಮೂಲಕ ಕಾಂಗ್ರೆಸ್‌ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ.

    ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಮೊಹಮ್ಮದ್‌ ನಲಪಾಡ್‌ ಮೇಲಿರುವ ಆರೋಪದ ಸುದ್ದಿಗಳ ಫೋಟೋಗಳನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿರುವ ರಮ್ಯಾ, ನಲಪಾಡ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ಕುರ್ಚಿಗೆ ಟವಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ

    ಈತ ಮೊಹಮ್ಮದ್‌ ನಲಪಾಡ್‌. ಗೌರವಾನ್ವಿತ ಶಾಸಕ ಹ್ಯಾರಿಸ್‌ ಅವರ ಪುತ್ರ. ಯುವ ಕಾಂಗ್ರೆಸ್ ಅಧ್ಯಕ್ಷರೂ ಕೂಡ. ಬೇಲ್‌ ಮೇಲೆ ಹೊರಗಿರುವ ನಲಪಾಡ್‌ ನನ್ನ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ಟ್ವೀಟ್‌ ಮಾಡಿ ಕುಟುಕಿದ್ದಾರೆ.

    ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ ಅವರನ್ನು ಶಾಸಕ ಎಂ.ಬಿ.ಪಾಟೀಲ್‌ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಇದಕ್ಕೆ ರಮ್ಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಭೇಟಿಯಲ್ಲಿ ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ರಮ್ಯಾ ವಿರುದ್ಧ ನಲಪಾಡ್‌ ಹರಿಹಾಯ್ದಿದ್ದರು. ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ನಲಪಾಡ್ ಉಡುಪಿಯಲ್ಲಿ ಟಾಂಗ್‌ ಕೊಟ್ಟಿದ್ದರು. ಇದನ್ನೂ ಓದಿ: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

  • ಗೆದ್ದು ಸೋತ ನಲಪಾಡ್ ಪಟ್ಟಾಭಿಷೇಕಕ್ಕೆ ಡಿಕೆ ಸಹೋದರರಿಂದ ತೆರೆಮರೆಯ ಪ್ರಯತ್ನ?

    ಗೆದ್ದು ಸೋತ ನಲಪಾಡ್ ಪಟ್ಟಾಭಿಷೇಕಕ್ಕೆ ಡಿಕೆ ಸಹೋದರರಿಂದ ತೆರೆಮರೆಯ ಪ್ರಯತ್ನ?

    ಬೆಂಗಳೂರು: ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದು ಸೋತ ಮೊಹಮ್ಮದ್ ನಲಪಾಡ್‍ಗೆ ಪಟ್ಟಾಭಿಷೇಕ ಕಟ್ಟಲು ತೆರೆಮರೆಯ ಪ್ರಯತ್ನ ನಡೆಯುತ್ತಿದೆಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ.

    ರಾಜ್ಯ ಯುವ ಕಾಂಗ್ರೆಸ್ ಪಟ್ಟ ಕಳೆದುಕೊಂಡ ನಲಪಾಡ್ ಬೆನ್ನಿಗೆ ಡಿಕೆ ಸಹೋದರರು ನಿಂತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಅವಕಾಶ ಕಳೆದುಕೊಂಡ ನಲಪಾಡ್ ಪರವಾಗಿ ದೆಹಲಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಚುನಾವಣೆಯಲ್ಲಿ ಗೆದ್ದರೂ ಕ್ರಿಮಿನಲ್ ಹಿನ್ನೆಲೆಯ ಕಾರಣಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಮೊಹಮ್ಮದ್ ನಲಪಾಡ್ ಕಳೆದುಕೊಂಡಿದ್ದಾರೆ. ಆದರೆ ನಲಪಾಡ್‍ಗಾಗಿ ಹೊಸ ಹುದ್ದೆ ಸೃಷ್ಟಿಗೆ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಕಸರತ್ತು ನಡೆಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷನಾಗಿ ನಲಪಾಡ್ ನೇಮಕಕ್ಕೆ ಡಿಕೆ ಸಹೋದರರು ಯತ್ನ ನಡೆಸಿದ್ದಾರೆ.

    ಚುನಾವಣೆಯಲ್ಲಿ ಗೆದ್ದರೂ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಂಚಿತನಾಗಿರುವುದರಿಂದ ನಲಪಾಡ್‍ಗೆ ಕಾರ್ಯಾಧ್ಯಕ್ಷ ಸ್ಥಾನ ಸೃಷ್ಟಿ ಆಗಲೇಬೇಕು ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆ. ನಲಪಾಡ್‍ಗಾಗಿ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸ್ಥಾನ ಸೃಷ್ಟಿ ಆಗುತ್ತಾ? ಡಿಕೆ ಸಹೋದರರ ಬೇಡಿಕೆಯನ್ನು ಹೈಕಮಾಂಡ್ ಒಪ್ಪುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಈ ಚುನಾವಣೆಯಲ್ಲಿ ನಲಪಾಡ್ 64,203 ಮತ ಪಡೆದಿದ್ದರೆ ರಕ್ಷಾ ರಾಮಯ್ಯ 57,271 ಮತ ಪಡೆದು ಎರಡನೇ ಸ್ಥಾನ ಪಡೆದುಕೊಂಡಿದ್ದರು. ಆದರೆ ರಕ್ಷಾ ರಾಮಯ್ಯ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಎಐಸಿಸಿಯಿಂದ ನಲಪಾಡ್ ಸ್ಪರ್ಧೆಯನ್ನೇ ಅನುರ್ಜಿತ ಎಂದು ಘೋಷಣೆ ಮಾಡಲಾಗಿದೆ. ಎಐಸಿಸಿ ಚುನಾವಣಾ ಸಮಿತಿ ಹಾಗೂ ಶಿಸ್ತುಪಾಲನ ಸಮಿತಿ ನಲಪಾಡ್ ಹಿನ್ನೆಲೆಯನ್ನು ಗಮನಿಸಿ ಸ್ಪರ್ಧೆಯನ್ನೇ ಅಸಿಂಧುಗೊಳಿಸುವ ತೀರ್ಮಾನ ಮಾಡಿದೆ.

    ನಲಪಾಡ್ ಸ್ಪರ್ಧೆಯನ್ನು ಅಸಿಂಧುಗೊಳಿಸಿದ ಕಾರಣ ಮಾಜಿ ಸಚಿವ ಸೀತಾರಾಂ ಪುತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಪಟ್ಟ ಸಿಕ್ಕರೆ ಮೂರನೇ ಸ್ಥಾನ ಪಡೆದ ಮಂಜುನಾಥ್ ಉಪಾಧ್ಯಕ್ಷರಾಗಿ ಆಯ್ಕೆ ಆಗಲಿದ್ದಾರೆ. ಯೂತ್ ಕಾಂಗ್ರೆಸ್ ಚುನಾವಣೆ ಜ.10 ರಿಂದ ಜ.12ರವರೆಗೆ ನಡೆದಿತ್ತು.

  • ಶಾಸಕನ ಮಗನ ಬರ್ತ್‍ಡೇಗೆ ಹೆಲಿಕಾಪ್ಟರ್ ತರಿಸ್ತಾರಂತೆ!

    ಶಾಸಕನ ಮಗನ ಬರ್ತ್‍ಡೇಗೆ ಹೆಲಿಕಾಪ್ಟರ್ ತರಿಸ್ತಾರಂತೆ!

    – ಇದು ಚರಿತ್ರೆ ಸೃಷ್ಟಿಸುವ ಹುಟ್ದಬ್ಬ

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಮಗನ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯಲಿದ್ದು, ಮೊಹಮದ್ ನಲಪಾಡ್ ಬರ್ತ್ ಡೇಗೆ ಹೆಲಿಕಾಪ್ಟರ್ ತರಲಾಗುತ್ತಿದೆ.

    ಹೌದು, ಆಗಸದಲ್ಲಿ ಹೆಲಿಕಾಪ್ಟರ್ ನಲ್ಲಿ ಹಂಗೆ ಹೂವಿನ ಮಳೆ ಬರುತ್ತಿರಬೇಕು. ಹಾಗೆಯೇ ನಮ್ಮಣ್ಣ ಕೇಕ್ ಕಟ್ ಮಾಡಬೇಕು ಅನ್ನೋ ಶ್ರೀಮನ್ನಾರಾಯಣ ಸಿನಿಮಾದಲ್ಲಿ ಇದು ಚರಿತ್ರೆ ಸೃಷ್ಟಿಸೋ ಅವತಾರ ಎಂದು ಬರುತ್ತದೆ. ಹಾಗೆಯೇ ಇದು ಚರಿತ್ರೆ ಸೃಷ್ಟಿಸೋ ಹುಟ್ದಬ್ಬ ಆಗಬೇಕು ಅಂತ ಶಾಸಕರ ಪುತ್ರನ ಗೆಳೆಯರೆಲ್ಲ ಸೇರಿ ತೀರ್ಮಾನ ಮಾಡಿದ್ದಾರೆ.

    ನಲಪಾಡ್ ಹುಟ್ಟುಹಬ್ಬ ಆಚರಣೆಗೆ ಈ ರೀತಿ ಅದ್ಧೂರಿಯಾಗಿ ಪ್ಲಾನ್ ಮಾಡಲಾಗಿದೆ. ಜನವರಿ 31ರಂದು ಮೋಟಪ್ಪನ ಪಾಳ್ಯದಲ್ಲಿ ಹಿಂಗೆ ಹೆಲಿಕಾಪ್ಟರ್‍ನಲ್ಲಿ ಹೂವಿನ ಮಳೆಗೈದು, ಹುಟ್ಟುಹಬ್ಬ ಆಚರಣೆಗೆ ಸಜ್ಜಾಗಿದ್ದಾರೆ. ಇದಕ್ಕಾಗಿ ಆಮಂತ್ರಣ ಪತ್ರಿಕೆ ಕೂಡ ರೆಡಿ ಮಾಡಿದ್ದು ಇದನ್ನು ಆಯೋಜನೆ ಮಾಡಿದ್ದಾರೆ.

  • ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಮೊಹಮ್ಮದ್ ನಲಪಾಡ್ ಸೆರೆವಾಸ ಅಂತ್ಯ – ವಕೀಲ ಶ್ಯಾಮ್ ಸುಂದರ್ ಹೇಳಿದ್ದು ಹೀಗೆ

    ಬೆಂಗಳೂರು: ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಇಂದು ಮೊಹಮ್ಮದ್ ನಲಪಾಡ್ ಅವರಿಗೆ ಜಾಮೀನು ನೀಡಿ ಹೈಕೋರ್ಟ್ ಆದೇಶ ಮಾಡಿದೆ. ಹೀಗಾಗಿ ನ್ಯಾಯಾಲಯದ ಆದೇಶವನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇನೆ ಅಂತ ಪಬ್ಲಿಕ್ ಪ್ರಾಸಿಕ್ಯೂಟರ್ ಶ್ಯಾಮ್ ಸುಂದರ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಮೀನಿನ ಬಳಿಕ ನಲಪಾಡ್ ಗೆ ಹೈಕೋರ್ಟ್ ಕೆಲವೊಂದು ಷರತ್ತುಗಳನ್ನು ಹಾಕಿದೆ. ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆಗೆ ಸಹಕರಿಸಬೇಕು. ಅಲ್ಲದೇ ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು. ಅಧೀನ ನ್ಯಾಯಾಲಯ ನೀಡುವ ಷರತ್ತಿಗೂ ಬದ್ಧವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ಆದೇಶ ನೀಡಿದ್ದಾರೆ ಅಂದ್ರು.

    ಹಿರಿಯ ವಕೀಲ ಬಿವಿ ಆಚಾರ್ಯ ಅವರು ವಾದ ಮಂಡಿಸಿದ್ದಾರೆ. ಈಗಾಗಲೇ ಜಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸರಿ ಸುಮಾರು 3 ತಿಂಗಳಿನಿಂದ ನಲಪಾಡ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಜಾರ್ಜ್ ಶೀಟ್ ಸಲ್ಲಿಕೆಯಾಗಿರೋದ್ರಿಂದ ಇದೊಂದು ಬದಲಾಯಿತ ಸಂದರ್ಭ ಅಂತ ಪರಿಗಣಿಸಬಹುದು ಅಂತ ತಿಳಿಸಿದ್ರು.

    ಒಟ್ಟಿನಲ್ಲಿ ಜಾರ್ಜ್ ಶೀಟ್ ಸಲ್ಲಿಕೆಯಾಗಿರೋದ್ರಿಂದ ಇನ್ನು ಅವರನ್ನು ಜೈಲಿನಲ್ಲಿರಿಸಿ ಶಿಕ್ಷೆಯ ರೂಪದಲ್ಲಿ ನ್ಯಾಯಾಂಗ ಬಂಧನ ಆಗಬಾರದು ಎನ್ನುವ ರೀತಿಯಲ್ಲಿ ವಾದಮಂಡಿಸಿ ಕೆಲ ಷರತ್ತುಗಳನ್ನು ವಿಧಿಸಿ ಅವರಿಗೆ ಜಾಮೀನು ನೀಡಿ ಅನ್ನೋ ವಾದವನ್ನು ಮುಂದಿಟ್ಟಿದ್ದರು ಎಂದು ವಿವರಿಸಿದರು.

    ನಾವು ಕೂಡ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ, ಈ ಹಿಂದೆ ನಿಕಟ ಪೂರ್ವದಲ್ಲಿ ಮೂರು ಬಾರಿ ಅವರು ಜಾಮೀನು ಅರ್ಜಿ ತಿರಸ್ಕೃತವಾಗುವುದಕ್ಕೆ ಬಹಳ ವಿದ್ಯುಕ್ತವಾದ ಕಾರಣಗಳಿವೆ. ಜಾರ್ಜ್ ಶೀಟ್ ನಲ್ಲಿ ಕೂಡ ಅವರ ವಿರುದ್ಧದ ಕೇಸ್ ಬಲಗೊಂಡಿದೆ. ಹಾಗಾಗಿ ಇವರು ಸಾಕ್ಷಿ ನಾಶ ಮಾಡ್ತಾರೆಂಬ ಭಯ ಹಾಗೂ ಹಲವಾರು ಪ್ರತ್ಯಕ್ಷದರ್ಶಿ ಸಾಕ್ಷಿಗಳಿರುವುದರಿಂದ ಜಾಮೀನನ್ನು ಮತ್ತೆ ತಿರಸ್ಕೃತಗೊಳಿಸಿ ಅಂತ ವಿನಂತಿಸಿಕೊಳ್ಳುವುದಾಗಿ ಅವರು ಹೇಳಿದ್ರು.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿತ್ತು?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.