Tag: mohammad paigambar

  • ಶಾಸಕ ಯತ್ನಾಳ್‌ ಕೊಲೆಗೆ ಸಂಚು? – ಅನ್ಯಕೋಮಿನ ಯುವಕನ ಸ್ಫೋಟಕ ಆಡಿಯೋ ವೈರಲ್‌

    ಶಾಸಕ ಯತ್ನಾಳ್‌ ಕೊಲೆಗೆ ಸಂಚು? – ಅನ್ಯಕೋಮಿನ ಯುವಕನ ಸ್ಫೋಟಕ ಆಡಿಯೋ ವೈರಲ್‌

    ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪ್ರವಾದಿ ಮಹಮ್ಮದ್ ಪೈಗಂಬರ್ (Mohammad Paigambar) ಕುರಿತು ಅವಹೇಳನ ಕಾರಿ ಹೇಳಿಕೆ ನೀಡಿದ ಹಿನ್ನೆಲೆ, ಶಾಸಕನ ಹತ್ಯೆಗೆ ಸಂಚು ನಡೆದಿತ್ತು ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಯುವಕನ ಆಡಿಯೋದಲ್ಲಿ ನಡೆದ ಸಂಭಾಷಣೆ ಪುಷ್ಟಿ ನೀಡಿದೆ.

    ಹೌದು. ಏ.7 ರಂದು ಹುಬ್ಬಳ್ಳಿಯ (Hubballi) ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತನಾಡುತ್ತಾ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಯತ್ನಾಳ್‌ ವಿರುದ್ಧ ಪ್ರತಿಭಟನೆ ನಡೆಸಲು ಒಟ್ಟಾಗಿ ಎಂದು ಕರೆ ನೀಡಿರುವ ಮುಸ್ಲಿಂ ಯುವಕನ (Muslim Boy) ಸ್ಫೋಟಕ ಆಡಿಯೋ ವೈರಲ್‌ ಆಗಿದೆ. ಇದು ವಿಜಯಪುರದಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಇದನ್ನೂ ಓದಿ: ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್

    ಆಡಿಯೋ ಸಂಭಾಷಣೆಯಲ್ಲಿ ಏನಿದೆ?
    ಗೆಳೆಯರೇ.. ನಮಸ್ಕಾರ ಎಲ್ಲ ಸಹೋದರ, ಸಹೋದರಿಯರಿಗೆ ನಮಸ್ಕಾರ. ವಿಜಯಪುರದಲ್ಲಿಂದ ದೊಡ್ಡ ಮೀಟಿಂಗ್‌ ಕರೆಯಲಾಗಿತ್ತು. ನಗರದ ಆಲಂಗೀರ್ ಹಾಲ್‌ನಲ್ಲಿ ಎಂಎಂಸಿ ಮೀಟಿಂಗ್‌ನಲ್ಲಿ ವಿಜಯಪುರದ ಎಲ್ಲ ದಿಗ್ಗಜ ಸದಸ್ಯರು, ಉಲ್ಮಾಗಳು ಅಲ್ಲಿ ಇದ್ರೂ. ಅಲ್ಲಿ ಇದೇ ತಿಂಗಳ ಏ.15 ರಂದು ವಿಜಯಪುರ ಬಂದ್ ಮಾಡಲು ನಿರ್ಧಾರ ಆಗಿದೆ. ಇನ್ನು ಯತ್ನಾಳ್‌ಗೆ ಅದು ಫೈನಲ್ ದಿನ. ಮಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಯತ್ನಾಳ್. ಇದನ್ನ ವಿರೋಧಿಸಿ 1 ಲಕ್ಷ ಜನರು ರ‍್ಯಾಲಿಯಲ್ಲಿ ಸೇರುತ್ತಿದ್ದಾರೆ. ಈ ಬಾರಿ ಎಲ್ಲರು ನಿರ್ಧರಿಸಿದ್ದಾರೆ ಅವನದ್ದು ಕೊನೆಯ ದಿನ ಅಂತಾ. ಅವನು ಅರೆಸ್ಟ್ ಆಗಬೇಕು ಇಲ್ಲ, ರ‍್ಯಾಲಿ ಅವನ ಮನೆಗೆ ತೆರಳಬೇಕು, ರ‍್ಯಾಲಿ ಅಲ್ಲಿಂದ ಅವನ ಮನೆಗೆ ನೇರವಾಗಿ ಹೋಗುತ್ತೆ. ಆದ್ದರಿಂದ ಎಲ್ಲ ಸಹೋದರ, ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಬೇಕು. ಏ.15ರಂದು ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿ ಸೇರಬೇಕು, ನಿಮ್ಮ ಅಕ್ಕ-ಪಕ್ಕದ ಊರುಗಳಲ್ಲಿರುವ ಎಲ್ಲ ಸ್ನೇಹಿತರು, ಅಣ್ಣ-ತಮ್ಮಂದಿರಿಗೆ ವಿಷಯ ಹೇಳಿ.

    ಈ ಬಾರಿ ಅವನದ್ದು ಫೈನಲ್ ದಿನ ಇದೆ. ಇಲ್ಲಿವರೆಗೂ ಅವನ ವಿರುದ್ಧ ದೂರು ಕೊಡುತ್ತಿದ್ದೆವು. ಆದ್ರೆ ಏನಾಗುತ್ತಿತ್ತು ಅವನು ಬೇಲ್ ಮೇಲೆ ಹೊರಗಡೆ ಬರ್ತಾ ಇದ್ದ. ಈ ಬಾರಿ ಆ ರೀತಿ ಆಗಲ್ಲ. ಈ ಬಾರಿ ಅವನು ಅರೆಸ್ಟ್ ಆಗಬೇಕು, ಇಲ್ಲ ಅವನ ರುಂಡ ದೇಹದಿಂದ ಇಬ್ಭಾಗ ಆಗಬೇಕು. ಮುಸ್ಲಿಂ ಸದಸ್ಯರು ಎಲ್ಲರೂ ಸಿದ್ಧರಾಗಿ ಕುಳಿತಿದ್ದಾರೆ. ಏ.15ರಂದು ಯಾವುದೇ ಕೆಲಸ ಇದ್ದರೂ ರಜೆ ಮಾಡಿ, ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆ ಆಗಿ. ಇನ್ ಷಾ ಅಲ್ಲಾ.. ಎಲ್ಲರು ಅಲ್ಲೇ ಸಿಗೋಣ ಎಂದು ಆಡಿಯೋನಲ್ಲಿ ಹೇಳಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ, ಬೆಳಗಾವಿ ಏರ್‌ಪೋರ್ಟ್‌ನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಾಗಿ ಘೋಷಿಸಲು ಕೇಂದ್ರಕ್ಕೆ ಪತ್ರ

    ಸದ್ಯ ಶಾಸಕನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎನ್ನುವುದಕ್ಕೆ ಪುಷ್ಟಿ ನೀಡುವಂತಿರುವ ಈ ಆಡಿಯೋ ತೀವ್ರ ಸದ್ದು ಮಾಡುತ್ತಿದೆ.

  • ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್

    ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ – ಯತ್ನಾಳ್ ವಿರುದ್ಧ ಎಫ್‍ಐಆರ್

    ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ವಿರುದ್ಧ ಪ್ರವಾದಿ ಮಹಮ್ಮದ್ ಪೈಗಂಬರ್ (Mohammad Paigambar) ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಕೇಳಿ ಬಂದಿದೆ.

    ಏ.7 ರಂದು ಹುಬ್ಬಳ್ಳಿಯ (Hubballi) ಬಾಣಿ ಓಣಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ್ ಮಾತಾಡಿದ್ದರು. ಈ ವೇಳೆ, ಇಸ್ಲಾಂ ಧರ್ಮ ಮತ್ತು ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಪ್ರಚೋದನಕಾರಿ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರ ನಗರದ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್ ಹನ್ನಾನ್ ಎಂಬವರು ದೂರು ದಾಖಲಿಸಿದ್ದರು. ಇದನ್ನೂ ಓದಿ: ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

    ಯತ್ನಾಳ್ ಅವರು `ಭಾಷಣದ ವೇಳೆ, `ದಿ.ಬಾಳಾಸಾಹೇಬ್ ಠಾಕ್ರೆ ಮನೆಯಲ್ಲಿ ಮಹಮ್ಮದ್ ಪೈಗಂಬರ್ ಹುಟ್ಟಿದ್ದಾನೆ’ ಎಂದಿದ್ದರು. ಈ ರೀತಿ ಮಾತನಾಡಿರುವುದು ಅಪಮಾನಕಾರಿ. ಇದು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತ ಉಂಟುಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

    ಯತ್ನಾಳ್ ಹೇಳಿಕೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ವೃತ್ತಿ ಜೀವನದ ಕೊನೆಯ ದಿನ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಮುಖ್ಯಸ್ಥ!

  • 4 ರಾಜ್ಯಗಳಲ್ಲಿ 9 ಎಫ್‌ಐಆರ್ – ಬಿಜೆಪಿ ಮಾಜಿ ವಕ್ತಾರೆ ನೂಪುರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?

    4 ರಾಜ್ಯಗಳಲ್ಲಿ 9 ಎಫ್‌ಐಆರ್ – ಬಿಜೆಪಿ ಮಾಜಿ ವಕ್ತಾರೆ ನೂಪುರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇಕೆ?

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು ದೇಶದ ನಾನಾಕಡೆ ಉದ್ವಿಗ್ನ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ತಮ್ಮ ವಿರುದ್ಧ ದಾಖಲಾಗಿರುವ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ FIR ಗಳನ್ನು ರದ್ದುಗೊಳಿಸುವಂತೆ ಕೋರಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

    court order law

    ಈವರೆಗೆ ದೆಹಲಿಯಲ್ಲಿ 1, ಮಹಾರಾಷ್ಟ್ರದಲ್ಲಿ 5, ಪಶ್ಚಿಮ ಬಂಗಾಳದಲ್ಲಿ 2 ಹಾಗೂ ತೆಲಂಗಾಣದಲ್ಲಿ 1 ಸೇರಿದಂತೆ ಒಟ್ಟು 9 ಎಫ್‌ಐಆರ್‌ಗಳು ದಾಖಲಾಗಿವೆ. ಮಹಾರಾಷ್ಟ್ರದ ಮುಂಬೈನ ಪೈಧೋನಿ ಠಾಣೆಯಲ್ಲಿ ಮೇ 28 ರಂದು, ಥಾಣೆಯ ಮುಂಬ್ರಾ ಠಾಣೆಯಲ್ಲಿ ಮೇ 30 ರಂದು, ಪುಣೆಯ ಕೊಂಧ್ವಾ ಮೇ 31 ರಂದು ಮತ್ತು ಭಿವಂಡಿಯಲ್ಲಿ ಮೇ 30ರಂದು, ಪರ್ಭಾನಿಯ ನಾನಲಪೇಠ್ ಠಾಣೆಯಲ್ಲಿ ಜೂನ್ 13ರಂದು ಎಫ್‌ಐಆರ್‌ಗಳು ದಾಖಲಾಗಿವೆ. ತೆಲಂಗಾಣದ ಹೈದರಾಬಾದ್‌ನ ಸೈಬರ್ ವಿಭಾಗೀಯ ಠಾಣೆಯಲ್ಲಿ ಮೇ 30ರಂದು, ಪಶ್ಚಿಮ ಬಂಗಾಳದ ನರ್ಕೆಲದಂಗ ಠಾಣೆಯಲ್ಲಿ ಜೂನ್ 4ರಂದು ಮತ್ತು ಕೋಲ್ಕತ್ತಾದ ಅಮ್ಹೆರೆಸ್ಟ್ ಠಾಣೆಯಲ್ಲಿ ಹಾಗೂ ದೆಹಲಿಯ ಐಎಫ್‌ಎಸ್‌ಒ ಠಾಣೆಯಲ್ಲಿ ಜೂನ್ 6ರಂದು ಪ್ರಕರಣ ದಾಖಲಾಗಿವೆ ಎಂದು ಹೇಳಲಾಗಿದೆ.

    ಇದಲ್ಲದೆ ಅಸ್ಸಾಂ, ಕರ್ನಾಟಕ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧೆಡೆ ಕೂಡ ಎಫ್‌ಐಆರ್‌ಗಳು ದಾಖಲಾಗಿರುವ ಮಾಹಿತಿಯಿದ್ದು ಅವುಗಳ ವಿವರ ಲಭ್ಯವಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ. ಇದನ್ನೂ ಓದಿ: ಮಸೀದಿಯಲ್ಲಿ ವಿದ್ಯುತ್ ಕಡಿತ- ಗಲಾಟೆಯಲ್ಲಿ ಇಬ್ಬರು ಸಾವು

    ದೇಶದ ವಿವಿಧೆಡೆ ದಾಖಲಾಗಿರುವ ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು. ಒಂದು ವೇಳೆ ಅದು ಸಾಧ್ಯವಾಗದೇ ಇದ್ದಲ್ಲಿ ದೇಶದ ವಿವಿಧೆಡೆ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳೆಲ್ಲವನ್ನೂ ಸೇರಿಸಿ ಒಂದೇ ಎಫ್‌ಐಆರ್ ಮಾಡಿ ದೆಹಲಿ ಪೊಲೀಸರಿಗೆ ತನಿಖೆ ಮಡಲು ಅವಕಾಶ ಮಾಡಿಕೊಡಬೇಕು ಎಂಬುದು ಅವರ ಮನವಿಯಾಗಿತ್ತು.

    SUPREME COURT

    ಆಧಾರ ರಹಿತ ಆರೋಪಗಳನ್ನು ಎಫ್‌ಐಆರ್‌ನಲ್ಲಿ ಮಾಡಲಾಗಿದೆ. ದೇಶಾದ್ಯಂತ ಒಂದರ ಹಿಂದೆ ಒಂದರಂತೆ ಎಫ್‌ಐಆರ್‌ಗಳನ್ನು ದಾಖಲು ಮಾಡಲಾಗಿರುವುದು ಅದರ ಹಿಂದಿನ ಉದ್ದೇಶವನ್ನು ತಿಳಿಸುತ್ತದೆ. ಅರ್ಜಿದಾರರ ವಿರುದ್ಧ ಆರೋಪ ಮಾಡಿರುವ ಯಾವುದೇ ಅಪರಾಧದ ಅಂಶಗಳಿಗೆ ಆಧಾರವಿಲ್ಲ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಇದು ಸೂಕ್ತ ಪ್ರಕರಣವಾಗಿದೆ ಎಂದು ವಿವರಿಸಲಾಗಿದೆ. ಹೀಗಾಗಿ, ಮನವಿಯಲ್ಲಿ ಎಫ್‌ಐಆರ್ ವಜಾ ಮಾಡಬೇಕು ಎಂದು ಕೋರಲಾಗಿದೆ. ಇದನ್ನೂ ಓದಿ: ಟ್ವಿಟ್ಟರ್ ಪ್ರೊಫೈಲ್ ಚೇಂಜ್ ಮಾಡಿದ ಶಿಂಧೆ – ಬಾಳ್ ಠಾಕ್ರೆ ಫೋಟೋ ಜೊತೆಗೆ ಕೊಟ್ಟ ಸಂದೇಶವೇನು?

    ವಿವಿಧ ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಿಸಿರುವುದರಿಂದ ತನಿಖಾ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಲಿದೆ. ಇದರಿಂದ ಅರ್ಜಿದಾರರಿಗೂ ಅನಗತ್ಯ ಕಿರುಕುಳ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಸತೀಂದರ್ ಸಿಂಗ್ ಭಾಸಿನ್ ಮತ್ತು ಟಿ.ಟಿ.ಆಂಟನಿ ಪ್ರಕರಣಗಳನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

    Live Tv

  • ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

    ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

    ವಾಷಿಂಗ್ಟನ್‌: ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಕುರಿತು ಇಬ್ಬರು ಬಿಜೆಪಿ ನಾಯಕರು ನೀಡಿದ ಆಕ್ಷೇಪಾರ್ಹ ಹೇಳಿಕೆ ಖಂಡನೀಯ ಎಂದು ಅಮೆರಿಕ ಪ್ರತಿಕ್ರಿಯಿಸಿದೆ.

    ಬಿಜೆಪಿ ನಾಯಕರ ವಿವಾದಿತ ಹೇಳಿಕೆಯಿಂದ ಭಾರತ ಹಾಗೂ ಮುಸ್ಲಿಂ ರಾಷ್ಟ್ರಗಳಲ್ಲಿ ಕೋಲಾಹಲ ಎದ್ದಿದೆ. ಇದಕ್ಕೆ ಕಾರಣವಾದ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಖಂಡನೀಯವಾಗಿದೆ ಎಂದು ಅಮೆರಿಕ ಹೇಳಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್- ಬೆಂಗಳೂರು ಸೇರಿ 21 ಕಡೆ ದಾಳಿ

    ಇಬ್ಬರು ಬಿಜೆಪಿ ನಾಯಕರು ಮಾಡಿದ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ತನ್ನ ಮುಖಂಡರ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷಗಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ತಿಳಿಸಿದ್ದಾರೆ.

    ನಾವು ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ಕಾಳಜಿಯ ಕುರಿತು ಉನ್ನತ ಮಟ್ಟದಲ್ಲಿ ಭಾರತ ಸರ್ಕಾರದೊಂದಿಗೆ ಚರ್ಚೆ ನಡೆಸಿದ್ದೇವೆ. ಮಾನವ ಹಕ್ಕುಗಳ ಗೌರವವನ್ನು ಉತ್ತೇಜಿಸಲು ನಾವು ಭಾರತವನ್ನು ಪ್ರೋತ್ಸಾಹಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮೋದಿಗೆ ನಾಯಿ ಸಾವು ಬರುತ್ತೆ ಎಂದಿದ್ದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಬಂಧನ

    ಬಿಜೆಪಿ ವಕ್ತಾರರಾಗಿದ್ದ ನೂಪುರ್‌ ಶರ್ಮಾ ಈಚೆಗೆ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಶರ್ಮಾ ಹೇಳಿಕೆಗೆ ಇಸ್ಲಾಮಿಕ್‌ ರಾಷ್ಟ್ರಗಳು ತೀವ್ರ ಖಂಡನೆ ವ್ಯಕ್ತಪಡಿಸಿದವು. ಅಷ್ಟೇ ಅಲ್ಲದೆ ಭಾರತದಲ್ಲೂ ಕೂಡ ಮುಸ್ಲಿಮರು ವ್ಯಾಪಕ ಪ್ರತಿಭಟನೆ ನಡೆಸಿದರು.

    ಬಿಜೆಪಿ ಆಡಳಿತದ ಭಾರತದಲ್ಲಿ ಧಾರ್ಮಿಕ ವಿಚಾರವಾಗಿ ಒಂದಲ್ಲ ಒಂದು ಸಂಘರ್ಷ ಉಂಟಾಗುತ್ತಿದೆ. ಹಿಜಬ್‌ ವಿವಾದದ ಸಂದರ್ಭದಲ್ಲೂ ಭಾರತದ ನಡೆಗೆ ಅಮೆರಿಕ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಟೀಕಿಸಿತ್ತು.

    Live Tv

  • ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಹೇಳಿಕೆಗೆ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಸಾಥ್ ನೀಡಿದ್ದಾರೆ.

    ಈ ಕುರಿತು #LetsTolerateintolerance ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಗಂಭೀರ್, ಕ್ಷಮೆಯಾಚಿಸಿದ ಮಹಿಳೆಯ ವಿರುದ್ಧ ದೇಶಾದ್ಯಂತ ದ್ವೇಷ ಮತ್ತು ಕೊಲೆ ಬೆದರಿಕೆ ಮುಂದುವರಿದಿದ್ದರೂ ಜಾತ್ಯಾತೀತ ಉದಾರವಾದಿಗಳೆಂದು ಕರೆಯಲ್ಪಡುವವರು ಮೌನವಾಗಿರುತ್ತಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಪಕ್ಷಿಗಳಿಗೆ ಆಹಾರವಿಡುವ ಟ್ರೇ ಹೊಂದಿದ್ದಕ್ಕೆ 3 ವಾರದಲ್ಲಿ 3 ಬಾರಿ ವ್ಯಕ್ತಿ ಅರೆಸ್ಟ್

    ಅಲ್ಲದೆ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್ ಸತ್ಯ ಹೇಳುವುದು ಬಂಡಾಯವಾದರೆ, ನಾನು ಕೂಡಾ ಬಂಡಾಯವೇ ಎಂದು ಟ್ವೀಟ್ ಮಾಡುವ ಮೂಲಕ ನೂಪುರ್ ಶರ್ಮಾ ಅವರಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಪ್ರಕರಣ – 11 ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಸುಮಾರು 15 ಇಸ್ಲಾಮಿಕ್ ರಾಷ್ಟ್ರಗಳ ಪ್ರತಿಭಟನೆ ನಡುವೆ ಬಿಜೆಪಿ ಕಳೆದ ವಾರ ನೂಪುರ್ ಶರ್ಮಾ ಅವರನ್ನು ಅಮಾನತುಗೊಳಿಸಿತ್ತು. ಜೊತೆಗೆ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಜಿಂದಾಲ್ ಅವರನ್ನೂ ಪಕ್ಷದಿಂದ ಉಚ್ಛಾಟನೆ ಮಾಡಿತು.

  • ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ

    ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ

    ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್‌ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು ಹಾಕಲಾಗಿತ್ತು. ಕಾಂಪ್ಲೆಕ್ಸ್ ಒಳಗೆ ನುಗ್ಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 9ರ ರಾತ್ರಿ 10.54ಕ್ಕೆ ಕಾಂಪ್ಲೆಕ್ಸ್‌ಗೆ ನುಗ್ಗಿ ಮಧ್ಯರಾತ್ರಿ ವೇಳೆ ಹಗ್ಗ ಕಟ್ಟಿ ಪ್ರತಿಕೃತಿ ನೇತು ಹಾಕಿದ್ದರು. ಕ್ಯಾಮೆರಾದ ದೃಶ್ಯಾವಳಿಗಳು ಹಾಗೂ ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಗೆ ಆಯ್ಕೆ ಹಿನ್ನೆಲೆ ಮಂತ್ರಾಲಯ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ

  • ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್

    ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್

    ನವದೆಹಲಿ: ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ನೀಡಿದ್ದ ವಿವಾದತ್ಮಕ ಹೇಳಿಕೆ ಖಂಡಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ದೇಶದ ವಿವಿಧೆಡೆ ಹೊತ್ತಿ ಉರಿದಿದ್ದ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಬೂದಿ ಮುಚ್ಚಿದ ಕೆಂಡದಂತೆ ಇದೆ.

    ರಾಂಚಿಯಲ್ಲಿ ಹಿಂದೂ ಸಂಘಟನೆಗಳು ಕರೆ ನೀಡಿದ್ದ ಬಂದ್ ಶಾಂತಿಯುತವಾಗಿ ಮುಗಿದಿದೆ. ಮುಂಜಾಗ್ರತಾ ಕ್ರಮವಾಗಿ ಸೋರೆನ್ ಸರ್ಕಾರ ರಾಂಚಿಯಲ್ಲಿ ಕಫ್ರ್ಯೂ ವಿಧಿಸಿ, ಇಂಟರ್‌ನೆಟ್‌ ಸೇವೆ ಬಂದ್ ಮಾಡಿತ್ತು. ಮೊನ್ನೆಯ ಗಲಭೆಯಲ್ಲಿ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದು, 8 ಮಂದಿ ಐಸಿಯುವಿನಲ್ಲಿದ್ದಾರೆ. ಮೃತರ ಸಂಖ್ಯೆ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಗಲಭೆ ಸಂಬಂಧ ಎರಡು ಎಫ್‍ಐಆರ್ ದಾಖಲಿಸಿರುವ ಪೊಲೀಸರು ಈವರೆಗೂ ಒಬ್ಬರನ್ನೂ ಬಂಧಿಸಿಲ್ಲ. ಉತ್ತರ ಪ್ರದೇಶದ ವಿವಿಧೆಡೆ 250ಕ್ಕೂ ಹೆಚ್ಚು ಮಂದಿ ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳುವ ಅಗತ್ಯವಿಲ್ಲ, ನೂಪುರ್ ಶರ್ಮಾರನ್ನು ಕಾನೂನಿನ ಪ್ರಕಾರ ಬಂಧಿಸಿ: ಓವೈಸಿ

    ಉತ್ತರ ಪ್ರದೇಶ, ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಸೇರಿ ಹಲವು ರಾಜ್ಯಗಳಲ್ಲಿ ಗಲಭೆಕೋರರ ವಿರುದ್ಧ ಕಠಿಣ ಸೆಕ್ಷನ್‍ಗಳ ಅನ್ವಯ ಕೇಸ್ ದಾಖಲಿಸಲಾಗಿದೆ. ಉತ್ತರ ಪ್ರದೇಶದ ಕಾನ್ಪುರ ಮತ್ತು ಸಹರಾನ್‍ಪುರದಲ್ಲಿ ಬುಲ್ಡೋಜರ್‌ಗೆ ಯೋಗಿ ಸರ್ಕಾರ ಕೆಲಸ ಕೊಟ್ಟಿದೆ. ಶವಿವಾರ ಕೂಡ ಗಲಭೆಗೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳದ ಹೌರಾದಲ್ಲಿ ನಾಳೆಯವರೆಗೂ ಇಂಟರ್‌ನೆಟ್‌ ಸೇವೆ ಬಂದ್ ಮಾಡಲಾಗಿದೆ. ಜೂನ್ 15ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಿದೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ 

  • ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಹಿಂಸಾಚಾರ ಸ್ಥಳಕ್ಕೆ ಭೇಟಿ ನೀಡಲು ಮುಂದಾದ ಬಿಜೆಪಿ ಮುಖಂಡನ ಬಂಧನ, ಬಿಡುಗಡೆ

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಪಶ್ಚಿಮ ಬಂಗಾಳದಲ್ಲಿ ಹಿಂಸಾತ್ಮಕ ಪ್ರತಿಭಟನೆ ಮುಂದುವರಿದಿದೆ.

    ಇದೇ ವೇಳೆ ಗಲಭೆ ಪೀಡಿತ ಪ್ರದೇಶವಾದ ಹೌರಾ ಜಿಲ್ಲೆಗೆ ಭೇಟಿ ನೀಡಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸುಕಾಂತ ಮಜುಂದಾರ್‌ನನ್ನು ಪೊಲೀಸರು ಬಂಧಿಸಿ, ಸುಮಾರು ನಾಲ್ಕು ಗಂಟೆಗಳ ಬಳಿಕ ಬಿಡುಗಡೆಗೊಳಿಸಿದ್ದಾರೆ. ಹೌರಾ ಜಿಲ್ಲೆಯಲ್ಲಿ ಹಿಂಸಾತ್ಮಕ ಪತ್ರಿಭಟನೆ ನಡೆಯುತ್ತಿದ್ದರಿಂದ ಮಜುಂದಾರ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.  ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ಬಿಡುಗಡೆಯಾದ ಬಳಿಕ ಮಜುಂದಾರ್ ಇತರ ಬಿಜೆಪಿ ನಾಯಕರೊಂದಿಗೆ ಸೇರಿ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಭೇಟಿಯಾಗಿದ್ದಾರೆ. ಹೌರಾ ಮತ್ತು ಮುರ್ಷಿದಾಬಾದ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಬಗ್ಗೆ ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಬಂಗಾಳ ರಾಜ್ಯದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸುವಂತೆ ಕೋರಿದ್ದಾರೆ.

    ಜೆ.ಪಿ.ನಡ್ಡಾ ಖಂಡನೆ: ಮಜುಂದಾರ್ ಬಂಧನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಖಂಡಿಸಿದ್ದಾರೆ. ಬಂಗಾಳ ಸರ್ಕಾರವು ಅಪರಾಧಿಗಳ ಉತ್ಸಾಹವನ್ನು ಹೆಚ್ಚಿಸುತ್ತಿದೆ. ಸಮಾಜ ವಿರೋಧಿಗಳಿಗೆ ಆಶ್ರಯ ನೀಡುತ್ತಿದೆ. ಮತ್ತೊಂದೆಡೆ ಪ್ರಜಾಸತ್ತಾತ್ಮಕ ರೀತಿಯಲ್ಲಿ ಜನರ ಹಕ್ಕುಗಳ ವಿರುದ್ಧ ಹೋರಾಡುವವರ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಹೌರಾ ಜಿಲ್ಲೆಯ ಪಾಂಚ್ಲಾದಲ್ಲಿ ಹಿಂಸಾಚಾರ ನಡೆದಿರುವ ಕುರಿತು ವರದಿಗಳಾಗಿವೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದು, ಕಲ್ಲು ಹಾಗೂ ಇಟ್ಟಿಗೆಗಳನ್ನು ಎಸೆದಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ಪಂಚ್ಲಾ ಮಾರುಕಟ್ಟೆಯ ಸಮೀಪದ ಕೆಲ ಅಂಗಡಿ ಹಾಗೂ ಮನೆಗಳನ್ನು ದರೋಡೆ ಮಾಡಲಾಗಿದೆ. ಅಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

    ನಿನ್ನೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೌರಾ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೆಲ ರಾಜಕೀಯ ಪಕ್ಷಗಳು ಗಲಭೆಗಳನ್ನು ಪ್ರಚೋದಿಸಲು ಯತ್ನಿಸುತ್ತಿವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

  • ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ಪ್ರವಾದಿ ವಿರುದ್ಧ ಅವಹೇಳನ – ಮುಸ್ಲಿಂ ಸಂಘಟನೆಗಳ ಪ್ರತಿಭಟನೆಗೆ ವಿಹೆಚ್‌ಪಿ ತೀವ್ರ ಖಂಡನೆ

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಬಿಜೆಪಿ ಮಾಜಿ ವಕ್ತಾರೆ ನೀಡಿರುವ ಹೇಳಿಕೆ ಖಂಡಿಸಿ ಮುಸ್ಲಿಂ ಸಂಘಟನೆಗಳು ರಾಷ್ಟ್ರವ್ಯಾಪಿ ನಡೆಸುತ್ತಿರುವ ಪ್ರತಿಭಟನೆಯನ್ನು ವಿಶ್ವ ಹಿಂದೂ ಪರಿಷತ್ (VHP) ತೀವ್ರವಾಗಿ ಖಂಡಿಸಿದೆ.

    VHPಯ ಮಾರ್ಗದರ್ಶಕ ಮಂಡಳಿಯು ಇಂದು ಮತ್ತು ನಾಳೆ (ಜೂನ್ 12) ಸಭೆ ನಡೆಸುತ್ತಿದ್ದು, ರಾಷ್ಟ್ರವ್ಯಾಪಿ ಪ್ರತಿಭಟನೆಗಳ ಹೊರತಾಗಿ ಜ್ಞಾನವಾಪಿ ಮಸೀದಿ, ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆಗಳು, ಯುಸಿಸಿ ಮುಂತಾದ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಇದನ್ನೂ ಓದಿ: ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್ 

    ಇಂದು ನಡೆಯುತ್ತಿದ್ದ ಸಭೆಯಲ್ಲಿ ವಿಹೆಚ್‌ಪಿ ಮುಖಂಡರು `ಫ್ರೀ ಹಿಂದೂ ಟೆಂಪಲ್’ (ಹಿಂದೂ ದೇವಸ್ಥಾನಗಳನ್ನು ಮುಕ್ತಗೊಳಿಸಿ) ಎಂದು ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ.

    ಅಲ್ಲದೆ ರಾಜ್ಯದ ಮಠ ಮಂದಿರಗಳಿಂದಲೇ 1.5 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದೆ. ಕಳೆದ ವರ್ಷವೂ 4 ಲಕ್ಷ ಕೋಟಿ ಸಂಗ್ರಹಿಸಲಾಗಿದೆ. ಹಿಂದೂಗಳ ಈ ಹಣವನ್ನು ಹಿಂದೂ ಧರ್ಮಕ್ಕಾಗಿಯೇ ಬಳಸಬೇಕು. ಜೊತೆಗೆ ಸರ್ಕಾರ ಮಠ, ಮಂದಿರ ಮತ್ತು ದೇವಸ್ಥಾನಗಳನ್ನು ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಹೆಚ್‌ಪಿಯ ಕೇಂದ್ರ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಮಾತನಾಡಿ, ಮುಸ್ಲಿಮರಲ್ಲಿನ ಜಿಹಾದಿಗಳು ಸಮುದಾಯವನ್ನು ಹಿಂಸಾಚಾರದ ಹಾದಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದು ಸಮುದಾಯದ ಅಥವಾ ದೇಶದ ಹಿತಾಸಕ್ತಿಯಲ್ಲ. ದೇಶದ ಶಾಂತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿರುವ ಅಂಶಗಳು. ಭಾರತವು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆಯೇ ಹೊರತು ಷರಿಯಾ ಅಪರಾಧದ ಕಾನೂನಿನಿಂದ ಅಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

    ಜೊತೆಗೆ ಗಲಭೆಕೋರರ ವಿರುದ್ಧ ಮೃದು ಸ್ವಭಾವ ತೋರಿಸದೇ ಗಲಭೆಯಿಂದ ಹಾನಿಯಾಗಿರುವ ಆಸ್ತಿಗೆ ಅವರಿಂದಲೇ ವಸೂಲಿ ಮಾಡಬೇಕು. ತ್ವರಿತವಾಗಿ ಈ ಕ್ರಮ ಕೈಗೊಳ್ಳಬೇಕು ಎಂದು ಅಲೋಕ್‌ಕುಮಾರ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ನೀರಿನ ಟ್ಯಾಂಕ್ 25 ವರ್ಷಗಳಿಂದ ಸ್ವಚ್ಛತೆಯನ್ನೇ ಕಂಡಿಲ್ಲ!

    ಮುಸ್ಲಿಂ ಸಮುದಾಯವು ಹಿಂಸಾಚಾರದ ಹಾದಿಯನ್ನು ತ್ಯಜಿಸಬೇಕು. ನ್ಯಾಯಾಲಯದ ತೀರ್ಪಿಗೆ ಕಾಯಬೇಕು. ಏಕೆಂದರೆ ಈ ರೀತಿಯ ಹಿಂಸಾತ್ಮಕ ಘಟನೆಗಳು ಇತರ ಸಮುದಾಯಗಳನ್ನೂ ಪ್ರೇರೇಪಿಸಬಹುದು. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಹಾಗಾಗಿ ಹಿಂಸಾಚಾರದ ಹಾದಿ ತ್ಯಜಿಸಬೇಕು ಎಂದು ಅಲೋಕ್‌ ಕುಮಾರ್ ಮನವಿ ಮಾಡಿದ್ದಾರೆ.

  • ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಕೋಲ್ಕತ್ತಾ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾ ಪೊಲೀಸರು 70 ಜನರನ್ನು ಬಂಧಿಸಿದ್ದಾರೆ.

    ಹಿಂಸಾಚಾರದ ಹಿನ್ನೆಲೆಯಲ್ಲಿ ಹೌರಾ ಜಿಲ್ಲೆಯಲ್ಲಿ ಜೂನ್ 13 ಬೆಳಗ್ಗೆ 6 ಗಂಟೆಯವರಗೆ ಇಂಟರ್‌ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR

    ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಒತ್ತಾಯಿಸಿದೆ. ಬಿಜೆಪಿ ಸಂಸದ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಸೌಮಿತ್ರಾ ಖಾನ್ ಅವರು ಅಮಿತ್ ಶಾ ಅವರಿಗೆ ರಾಜ್ಯದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು

    ಶುಕ್ರವಾರದ ಪ್ರಾರ್ಥನೆಯ ನಂತರ ಜಮ್ಮುಕಾಶ್ಮೀರ, ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ನೂಪುರ್ ಶರ್ಮಾ ಅವರ ಬಂಧನಕ್ಕೆ ಆಗ್ರಹಿಸಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.