Tag: Mohammed Nalapad

  • ಡಿಕೆಶಿಯನ್ನು ಸಿಎಂ ಮಾಡಲು ಸಿದ್ದರಾಮಯ್ಯ ಬಿಡುತ್ತಾರೆಯೇ: ನಲಪಾಡ್‍ಗೆ ಬಿಜೆಪಿ ಗುದ್ದು

    ಡಿಕೆಶಿಯನ್ನು ಸಿಎಂ ಮಾಡಲು ಸಿದ್ದರಾಮಯ್ಯ ಬಿಡುತ್ತಾರೆಯೇ: ನಲಪಾಡ್‍ಗೆ ಬಿಜೆಪಿ ಗುದ್ದು

    ಬೆಂಗಳೂರು: ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷನಾಗಿ ಮೊಹಮ್ಮದ್ ನಲಪಾಡ್ ಅಧಿಕಾರ ಸ್ವೀಕರಿಸಿದ್ದು, ಈ ವೇಳೆ ಅವರು ಪಬ್ಲಿಕ್ ಟಿವಿಯೊಂದಿಗೆ ಮಾತನಾಡುವಾಗ ‘ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ’ ಎಂದಿದ್ದರು. ಈ ಹೇಳಿಕೆಗೆ ವ್ಯಂಗ್ಯವಾಗಿ ಬಿಜೆಪಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದೆ.

    ಪಬ್ಲಿಕ್ ಟಿವಿಗೆ ನಲಪಾಡ್ ಕೊಟ್ಟ ಹೇಳಿಕೆಯನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ಬಿಜೆಪಿ, ಅತ್ತು ಕರೆದು ಔತಣ ಮಾಡಿಸಿಕೊಂಡು ಎಂಥ ಮಾತಾಡಿಬಿಟ್ಟಿರಿ ಮಿಸ್ಟರ್ ನಲಪಾಡ್. ಮೊದಲು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡೋಕೆ ಸಿದ್ದರಾಮಯ್ಯ ಅವರು ಬಿಡುತ್ತಾರೆಯೇ ಎಂಬುದರ ಬಗ್ಗೆ ಮೊದಲು ತಿಳಿದುಕೊಳ್ಳಿ. ಆಮೇಲೆ ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿ ಎಂದು ಟೀಕಿಸಿದೆ. ಇದನ್ನೂ ಓದಿ: ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ: ನಲಪಾಡ್ ಅಧಿಕಾರ ಸ್ವೀಕಾರ

    ಅಧಿಕಾರ ಸ್ವೀಕಾರ ಮಾಡಿದ ದಿನವಾದರೂ ಸ್ವಲ್ಪ ಒಳ್ಳೆಯ ಯೋಚನೆ ಮಾಡಿ. ನೀವು ಪ್ರಸ್ತಾಪ ಮಾಡಿದ ವಿಚಾರ ಕೈ ಗೂಡುವುದಿಲ್ಲ ಎಂದು ಅರ್ಥವಾಗಿ ಎಂತೆಂತವರೋ ಮೂಲೆಗುಂಪಾಗಿದ್ದಾರೆ. ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿಸುವುದು ಮರಳುಗಾಡಿನಲ್ಲಿ ಮರಿಚೀಕೆಯನ್ನು ಹಿಡಿದಂತೆ. ಎಂದಿಗೂ ಕೈಗೂಡದು ಎಂದು ಬರೆದು ಟ್ವೀಟ್ ಮಾಡಿದೆ.

    ನಲಪಾಡ್ ಇಂದು ಅಧಿಕಾರ ಸ್ವೀಕರಿಸಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸಮುದಾಯದ ಗುರುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ ಕಚೇರಿ ಪೂಜೆ ನೆರವೇರಿಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಫೆಬ್ರವರಿ 10 ರಂದು ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡುತ್ತೇನೆ. ಎಲ್ಲ ಯುವಕರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. 2018ರಲ್ಲಿ ಆದ ತಪ್ಪು ಮತ್ತೆ ಆಗುವುದಿಲ್ಲ. ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವುದು ನಮ್ಮ ಗುರಿ ಎಂದು ಹೇಳಿದ್ದರು. ಇದನ್ನೂ ಓದಿ: ನಾನು ಹಿಂದೂತ್ವವಾದಿ, ನನ್ನ ಏಳಿಗೆ ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ: ಶಾಸಕ ಬೆಲ್ಲದ

  • ಕೊನೆಗೂ ಡಿಕೆಶಿ ಹಠಕ್ಕೆ ಮಣೆ ಹಾಕಿದ ಹೈಕಮಾಂಡ್

    ಕೊನೆಗೂ ಡಿಕೆಶಿ ಹಠಕ್ಕೆ ಮಣೆ ಹಾಕಿದ ಹೈಕಮಾಂಡ್

    – ಒಂದು ವರ್ಷ ರಕ್ಷಾ ರಾಮಯ್ಯ
    – 2 ವರ್ಷ ನಲಪಾಡ್‍ಗೆ ಪಟ್ಟ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಠಕ್ಕೆ ಹೈಕಮಾಂಡ್ ಕೊನೆಗೂ ಮಣೆ ಹಾಕಿದೆ. 2022ರ ಜನವರಿ 31 ರವರೆಗೆ ಮಾತ್ರ ರಕ್ಷಾ ರಾಮಯ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. 2022 ರ ಜನವರಿ 31ರಿಂದ ಮೊಹಮ್ಮದ್ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾಗಲಿದ್ದಾರೆ. ರಕ್ಷಾ ರಾಮಯ್ಯಗೆ ಒಟ್ಟು 1 ವರ್ಷ ಅಧಿಕಾರ, ನಲಪಾಡ್ ಅವರಿಗೆ 2 ವರ್ಷ ಅಧ್ಯಕ್ಷ ಸ್ಥಾನ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ರಿಂದ ಅಧಿಕೃತವಾಗಿ ಪ್ರಕಟಣೆ ಹೊರಡಿಸಲಾಗಿದೆ.

    ಈ ಹಿಂದೆ ಸಿದ್ದರಾಮಯ್ಯ ಡಿಕೆಶಿ ಬಣದ ಪ್ರತಿಷ್ಠೆಯ ಕದನದಲ್ಲಿ ಗಲಾಟೆಗೆ ಹೈ ಕಮಾಂಡ್ ಬ್ರೇಕ್ ಹಾಕಿತ್ತು. ನಲಪಾಡ್‍ರನ್ನು ಯುವ ಕಾಂಗ್ರೆಸ್ ಅಧ್ಯಕ್ಷನನ್ನಾಗಿ ಮಾಡಲು ಮುಂದಾಗಿದ್ದ ಡಿಕೆಶಿಗೆ ಹೈಕಮಾಂಡ್ ಸೂಚನೆಯಿಂದ ಹಿನ್ನಡೆಯಾಗಿತ್ತು. ಎಲ್ಲ ತಣ್ಣಗಾಯ್ತು ಎನ್ನುವಷ್ಟರಲ್ಲಿ ಹೈಕಮಾಂಡ್ ಮಟ್ಟದಲ್ಲಿ ಲಾಬಿ ಮಾಡಿ ತಮ್ಮ ಶಿಷ್ಯ ನಲಪಾಡ್‍ಗೆ ಮುಂದಿನ 2 ವರ್ಷದ ಅಧ್ಯಕ್ಷ ಗಾದಿ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ.

    ಹಾಲಿ ಅಧ್ಯಕ್ಷ ರಕ್ಷಾ ರಾಮಯ್ಯಗೆ ಇನ್ನು 7 ತಿಂಗಳುಗಳ ಕಾಲವಷ್ಟೇ ಅಧ್ಯಕ್ಷರಾಗಿ ಅಧಿಕಾರ ಮುಂದುವರಿಯಲಿದ್ದಾರೆ. ಈ ಬೆಳವಣಿಗೆ ನಂತರ ಅಧ್ಯಕ್ಷನಾಗಿ ಮುಂದಿನ 2 ವರ್ಷದ ಅಧಿಕಾರ ಸಿಗುವುದು ಖಚಿತವಾಗಿತ್ತಿದ್ದಂತೆ ಸಿದ್ದರಾಮಯ್ಯ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ ಮಾಡಲು ನಲಪಾಡ್ ತೆರಳಿದರು. ಈ ವೇಳೆ ಹಾರ ತುರಾಯಿ ತಂದ ನಲಪಾಡ್‍ಗೆ ಮುಜುಗರ ಆಗುವಂತ ಪ್ರಸಂಗ ನಡೆಯಿತು. ಹಾರ ಹಾಕಲು ಹೋದ ನಲಪಾಡ್‍ಗೆ ಸಿದ್ದರಾಮಯ್ಯ ಹಾರ ಬೇಡ ಎಂದರು. ಪೇಟ ಹಾಕಲು ಮುಂದಾಗಿತ್ತಿದ್ದಂತೆ ಪೇಟವು ಬೇಡ ಎಂದರು. ಅದೆಲ್ಲ ಬೇಡ ಎಂದು ಶಾಲು ಮಾತ್ರ ಸ್ವೀಕರಿಸಿದರು. ಇದಕ್ಕೂ ಮುನ್ನ ನಾನೇನು ಮಾಡಿದ್ದೆನಪ್ಪ ನಿನಗೆ ಎಂದು ಸಿದ್ದರಾಮಯ್ಯ ಅವರು ನಲಪಡ್‍ಗೆ ಪ್ರಶ್ನಿಸಿದರು. ಆ ಬಳಿಕ ಕ್ಯಾಮೆರಾ ನೋಡಿ ಹಾಗೆ ಸುಮ್ಮನಾದರು. ಇದನ್ನೂ ಓದಿ: ಹಗಲು ಹೊಡೆದು ರಾತ್ರಿ ರಾಜಿ ಮಾಡ್ಕೊಂಡ ನಲಪಾಡ್

    ಅಧಿಕಾರ ಸಿಗುವುದು ಖಚಿತವಾಗುತ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ನಲಪಾಡ್, ಪಕ್ಷ ಯಾವುದೇ ಅಧಿಕಾರ ಕರ್ತವ್ಯ ಕೊಟ್ಟರೂ ನಿರ್ವಹಿಸುತ್ತೇನೆ. ಐವೈಸಿ ನನಗೆ ಈಗ ಅಧಿಕಾರ ನೀಡಿದೆ. ಕಾಂಗ್ರೆಸ್ ನನ್ನ ತಾಯಿ ಇದ್ದಂತೆ. ಕಾಂಗ್ರೆಸ್ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. ಯುವಕರನ್ನು ಕಾಂಗ್ರೆಸ್ ಬಳಿ ಸೇರಿಸಲು ಈ ಯುವ ಕಾಂಗ್ರಸ್ ಹುದ್ದೆ ಬೇಕಿದೆ. ಪಕ್ಷ ನನ್ನ ಕೆಲಸ ನೋಡಿ ಪಕ್ಷ ಕಟ್ಟುವ ಕೆಲಸ ನೀಡಿದೆ. ನಾನು ಇದನ್ನು ನಿಭಾಯಿಸಿಕೊಂಡು ಹೋಗುವೆ. ಈಗ ಅಧ್ಯಕ್ಷ ಸ್ಥಾನ ನೀಡಿರುವುದು ಖುಷಿ ತಂದಿದೆ. ತಂದೆ, ತಾಯಿ, ಡಿಕೆಶಿ, ಸಿದ್ದರಾಮಯ್ಯ ಒಂದು ಅವಕಾಶ ಮಾಡಿಕೊಟ್ಟಿದ್ದಾರೆ. ಅದನ್ನು ನಿಭಾಯಿಸಿಕೊಂಡು ಹೋಗುತ್ತೇನೆ. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಎಲ್ಲರನ್ನೂ ಜೊತೆಗೂಡಿ ಒಟ್ಟಿಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

  • ನಲಪಾಡ್‌ ಆಪ್ತನ ಕಾರಿನಲ್ಲಿ ಸಿಡಿ ಲೇಡಿ ಸಂಚಾರ

    ನಲಪಾಡ್‌ ಆಪ್ತನ ಕಾರಿನಲ್ಲಿ ಸಿಡಿ ಲೇಡಿ ಸಂಚಾರ

    ಬೆಂಗಳೂರು: ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡುತ್ತಿದ್ದ ಸಿಡಿ ಲೇಡಿ ಮಂಗಳವಾರ ಕಾಂಗ್ರೆಸ್‌ ಯುವ ಮುಖಂಡ ಮೊಹಮ್ಮದ್‌ ನಲಪಾಡ್‌ ಸ್ನೇಹಿತರೊಬ್ಬರು ರಕ್ಷಣೆ ನೀಡಿದ್ದಾರೆ.

    ನಲಪಾಡ್‌ ಪ್ರಕರಣದಲ್ಲಿ ಆರೋಪಿಯಾಗಿರುವ ನಫಿ ಮಾಲೀಕತ್ವದ ಕಾರಿನಲ್ಲಿ ಸಿಡಿ ಲೇಡಿ ಸಂಚರಿಸಿದ್ದಾರೆ. ಆಡುಗೋಡಿಯ ಟೆಕ್ನಿಕಲ್‌ ಕೇಂದ್ರದಿಂದ ರಾತ್ರಿ ಅಜ್ಞಾತ ಸ್ಥಳಕ್ಕೆ ಸಿಡಿ ಲೇಡಿ ಸಂಚರಿಸಿದ್ದರು. ಈ ವೇಳೆ ನಫಿ ಮಾಲೀಕತ್ವದ ಟೊಯೊಟಾ ಫಾರ್ಚೂನರ್‌ ಕಾರಿನಲ್ಲಿ ತೆರಳಿದ್ದಾರೆ. ಕೆಎ 04 ಎಂಯು 9232 ಸಂಖ್ಯೆಯ ಫಾರ್ಚೂನರ್‌ ಕಾರು ನಫಿ ಮೊಹಮ್ಮದ್‌ ನಾಸೀರ್‌ ಹೆಸರಿನಲ್ಲಿದೆ. 2018ರ ಜೂನ್‌ 12 ರಂದು ಈ ಕಾರು ನೋಂದಣಿಯಾಗಿದೆ.

    ಈಗಾಗಲೇ ಈ ಪ್ರಕರಣದಲ್ಲಿ ಕಾಂಗ್ರೆಸ್‌ ಕೈವಾಡವಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದು, ಈಗ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ನಿನ್ನೆ ಟ್ವೀಟ್‌ ಮಾಡಿದ್ದ ಬಿಜೆಪಿ ಕರ್ನಾಟಕ ಸಿಡಿ ಪ್ರಕರಣ ಕೆಪಿಸಿಸಿ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು ಸಹಾಯ ಮಾಡುತ್ತಾರೆ ಎಂದರೆ ಏನರ್ಥ?ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ ಎಂದು ಪ್ರಶ್ನಿಸಿತ್ತು.

    ಇನ್ನೊಂದು ಟ್ವೀಟ್‌ ನಲ್ಲಿ ಮಹಾನಾಯಕ, ಮಹಾನಾಯಕಿ, ಮಾಸ್ಟರ್ ಮೈಂಡ್, ಕೆಪಿಸಿಸಿ ಕಾನೂನು ಘಟಕದ ಸದಸ್ಯ. ಜಾಯಿನ್ ದ ಡಾಟ್ಸ್. ಕರ್ನಾಟಕ ಕಾಂಗ್ರೆಸ್‌ ಪಕ್ಷದ ಪ್ರಾಯೋಜಿತವೇ ಎಂದು ಪ್ರಶ್ನಿಸಿತ್ತು.

    https://twitter.com/BJP4Karnataka/status/1376930981110640644

    ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸಮಸ್ಯೆ ಕೇಳಿಕೊಂಡು ಬಂದವರಿಗೆ ನೆರವಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಅವರು ವಿಡಿಯೋ ಮಾಡಿ ಕಷ್ಟವನ್ನು ತೋಡಿಕೊಂಡಿದ್ದರು ಎಂದು ಹೇಳಿದ್ದರು.

  • ಇದು ಉದ್ದೇಶಪೂರ್ವಕ ಕೃತ್ಯ: ಹ್ಯಾರಿಸ್ ಪುತ್ರ ನಲಪಾಡ್ ಆರೋಪ

    ಇದು ಉದ್ದೇಶಪೂರ್ವಕ ಕೃತ್ಯ: ಹ್ಯಾರಿಸ್ ಪುತ್ರ ನಲಪಾಡ್ ಆರೋಪ

    ಬೆಂಗಳೂರು: ನಮ್ಮ ತಂದೆಯ ಮೇಲೆ ನಡೆದ ದಾಳಿ ಉದ್ದೇಶಪೂರ್ವಕ ಕೃತ್ಯ ಎಂದು ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ನಲಪಾಡ್, ಪ್ರತಿ ವರ್ಷದಂತೆ ನಮ್ಮ ತಂದೆಯ ಹುಟ್ಟುಹಬ್ಬದ ನಿಮಿತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆ ಮೇಲಿದ್ದ ವಿಶೇಷ ಚೇರ್ ಮೇಲೆ ಕುಳಿತುಕೊಳ್ಳಲು ತಂದೆ ನಿರಾಕರಿಸಿದರು. ಹೀಗಾಗಿ ಸಾಮಾನ್ಯರಂತೆ ಪಕ್ಕದ ಚೇರ್ ಮೇಲೆ ಕುಳಿತಿದ್ದಾಗ ಯಾರೋ ವೇದಿಕೆಯ ಕಡೆಗೆ ಗ್ರೀನ್ ಕಲರ್ ಪ್ಲ್ಯಾಸ್ಟಿಕ್ ವಸ್ತು ಎಸೆದರು. ಅದು ತಂದೆಯ ಭುಜಕ್ಕೆ ಬಡಿದು ಕೆಳಗೆ ಬಿದ್ದು ಸ್ಫೋಟಗೊಂಡಿದೆ. ಹೀಗಾಗಿ ಕಾಲಿಗೆ ಗಾಯವಾಗಿದೆ ಎಂದರು.

    ಘಟನೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಮೋಹನ್, ಚಿಟ್ಟಿಬಾಬು ಹಾಗೂ ಸಂಪತ್ ಗಾಯಗೊಂಡಿದ್ದಾರೆ. ಪಕ್ಕದ ಚೇರ್ ಮೇಲೆ ಕುಳಿದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಒಂದು ವೇಳೆ ತಂದೆ ಹ್ಯಾರಿಸ್ ಅವರ ಮೇಲೆ ಬಿದ್ದ ತಕ್ಷಣವೇ ಸ್ಫೋಟಕ ಸ್ಫೋಟಗೊಂಡಿದ್ದರೆ ಘಟನೆ ತೀವ್ರವಾಗಿರುತ್ತಿತ್ತು. ಬ್ಲಾಸ್ಟ್ ತೀವ್ರತೆಯಿಂದ ತಂದೆಯ ಕಿವಿಯಲ್ಲಿ ಗುಂಯ್ ಎನ್ನುವ ಶಬ್ದ ಕೇಳುತ್ತಿದೆಯಂತೆ ಎಂದು ಹೇಳಿದರು.

    ಕ್ಷೇತ್ರದಲ್ಲಿ ನಮಗೆ ಯಾವುದೇ ವೈರಿಗಳಿಲ್ಲ. ನಮ್ಮ ತಂದೆ ಎಲ್ಲರ ಜೊತೆಗೆ ಸೇರಿಕೊಂಡು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆದರೆ ಇದು ಉದ್ದೇಶಪೂರ್ವಕ ಕೃತ್ಯವಾಗಿದೆ ಎಂದು ಗಂಭೀರ ಆರೋಪ ಮಾಡಿದರು.

  • ಈ 4 ಕಾರಣಗಳಿಗಾಗಿ ನಲಪಾಡ್ ಜಾಮೀನು ಅರ್ಜಿ ವಜಾ ಆಯ್ತು

    ಈ 4 ಕಾರಣಗಳಿಗಾಗಿ ನಲಪಾಡ್ ಜಾಮೀನು ಅರ್ಜಿ ವಜಾ ಆಯ್ತು

    ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ 63ನೇ ಸಿಸಿಎಚ್ ನ್ಯಾಯಾಲಯ ನಲಪಾಡ್ ಮತ್ತು ತಂಡದ ಜಾಮೀನು ಅರ್ಜಿ ವಜಾ ಮಾಡಿದೆ. ಹೀಗಾಗಿ ನಲಪಾಡ್ ಗಳಗಳನೆ ಅಳಲು ಶುರುಮಾಡಿದ್ದಾನೆ ಎಂದು ತಿಳಿದುಬಂದಿದೆ.

    ಮುಖ್ಯವಾಗಿ ಈ ಕೆಳಗಿನ ನಾಲ್ಕು ಕಾರಣಗಳಿಂದ ಅರ್ಜಿ ವಜಾಗೊಂಡಿದೆ ಅಂತಾ ಹೇಳಲಾಗಿದೆ. ನಲಪಾಡ್ ಜಾಮೀನು ಅರ್ಜಿ ವಜಾಗೊಳ್ಳಲು ಪ್ರಮುಖವಾದ ಅಂಶಗಳು ಈ ಕೆಳಗಿನಂತಿವೆ.

    ಪ್ರಮುಖವಾದ ಅಂಶಗಳು:
    1. ಹಲ್ಲೆಗೊಳಗಾಗಿರುವ ವಿದ್ವತ್ ಇನ್ನೂ ಪೊಲೀಸರ ಮುಂದೆ ಹೇಳಿಕೆ ಕೊಟ್ಟಿಲ್ಲ. ತನಿಖಾಧಿಕಾರಿ ಮುಂದೆ ನಲಪಾಡ್ ನಿಂದ ಆದ ಹಲ್ಲೆ ಬಗ್ಗೆ ವಿವರಿಸುವ ಸ್ಥಿತಿಯಲ್ಲಿ ವಿದ್ವತ್ ಇಲ್ಲ.
    2. ವಿದ್ವತ್ ಇನ್ನೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿಲ್ಲ.

    3. ನಲಪಾಡ್ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
    4. ಶಾಸಕ ಹ್ಯಾರಿಸ್ ಮಗ ನಲಪಾಡ್ ಪ್ರಭಾವಿ, ಜಾಮೀನು ನೀಡಿದ್ರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಗಳಿವೆ.

    ನಲಪಾಡ್ ಮತ್ತು ಗ್ಯಾಂಗ್ ಜೈಲಿನಲ್ಲೇ ಕಾಲ ಕಳೆಯಬೇಕಿದೆ. ಸೋಮವಾರ ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಅಂತಾ ನಲಪಾಡ್ ಪರ ವಕೀಲರಾದ ಟಾಮಿ ಸೆಬಾಸ್ಟಿಯನ್ ಹೇಳಿದ್ದಾರೆ. ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಜೈಲಿನ ಅಧೀಕ್ಷಕರ ಕೊಠಡಿಯಲ್ಲಿ ಟಿವಿ ನೋಡುತ್ತಿದ್ದ ನಲಪಾಡ್ ನನ್ನ ಹಣೆ ಬರಹವೇ ಸರಿ ಇಲ್ಲ ಅಂತಾ ಭಾವುಕನಾಗಿ ಕಣ್ಣೀರು ಹಾಕಿದ್ದಾನೆ ಎಂಬ ಮಾಹಿತಿಗಳು ಲಭ್ಯವಾಗಿವೆ.

  • ಶಾಸಕ ಹ್ಯಾರಿಸ್ ಮಗನಿಂದ ಹಲ್ಲೆ ಪ್ರಕರಣ- ಹಲ್ಲೆಗೊಳಗಾದ ಯುವಕನ ಮೇಲೂ ಎಫ್‍ಐಆರ್

    ಶಾಸಕ ಹ್ಯಾರಿಸ್ ಮಗನಿಂದ ಹಲ್ಲೆ ಪ್ರಕರಣ- ಹಲ್ಲೆಗೊಳಗಾದ ಯುವಕನ ಮೇಲೂ ಎಫ್‍ಐಆರ್

    ಬೆಂಗಳೂರು: ಶಾಂತಿನಗರ ಎಂಎಲ್‍ಎ ಹ್ಯಾರಿಸ್ ಮಗ ಮಹಮ್ಮದ್ ನಲಪಾಡ್ ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆಗೊಳಗಾದ ವಿದ್ವತ್ ಮೇಲೆಯೂ ಪೊಲೀಸರು ಎಫ್‍ಐ ಆರ್ ದಾಖಲಿಸಿದ್ದಾರೆ.

    ಯುವಕನ ಮೇಲೆ ಕಬ್ಬನ್‍ಪಾರ್ಕ್ ಪೊಲೀಸರು ಎಫ್‍ಐಆರ್ ದಾಖಲು ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಫೆ.17ರಂದು ವಿದ್ವತ್ ತನ್ನ ಸ್ನೇಹಿತರೊಂದಿಗೆ ಊಟ ಮಾಡಲು ಬಂದಿದ್ದರು. ಈ ವೇಳೆ ವಿದ್ವತ್ ಕಾಲು ನಾಲಪ್ಪಾಡ್ ಸ್ನೇಹಿತನಿಗೆ ತಗುಲಿದ್ದಕ್ಕೆ ಜಗಳವಾಗಿತ್ತು. ಜಗಳದ ಸಮಯದಲ್ಲಿ ನಾನು ಯಾರು ಗೊತ್ತಾ..? ನನ್ನನ್ನು ಕೇಳಲು ನೀನು ಯಾರು ನನ್ನಪ್ಪ ಯಾರು ಗೊತ್ತಾ ಎಂದು ವಿದ್ವತ್ ಪ್ರಶ್ನಿಸಿದ್ದರು. ಅಲ್ಲದೇ ವಿದ್ವತ್ ಹಾಗೂ ಸ್ನೇಹಿತರು ಏಕಾಏಕಿ ಅರುಣ್ ಬಾಬು ಮೇಲೆ ಹಲ್ಲೆ ಮಾಡಿದ್ದರು. ಅವಾಚ್ಯ ಶಬ್ದಗಳಿಂದ ಕೂಡ ನಿಂದನೆ ಮತ್ತು ಜೀವ ಬೆದರಿಕೆ ಆರೋಪ ಮಾಡಲಾಗಿದೆ.

    ಉದ್ಯಮಿ ಲೋಕಿ ಅಲಿಯಾಸ್ ಲೋಕನಾಥನ್ ಪುತ್ರ ವಿದ್ವತ್, ಅತಿಯಾಗಿ ಕುಡಿದಿದ್ದರಿಂದ ಸ್ವತಃ ಬಿದ್ದು ಮುಖಕ್ಕೆ ಗಾಯವಾಗಿದೆ ಎಂದು ಅರುಣ್ ಬಾಬು ದೂರು ನೀಡಿದ್ದರು. ಆದ್ರೆ ಮಲ್ಯ ಆಸ್ಪತ್ರೆಯಲ್ಲಿ ವಿದ್ವತ್ ವೈದ್ಯಕೀಯ ತಪಾಸಣೆ ನಡೆಸಿರೋ ವೈದ್ಯರು, ವಿದ್ವತ್ ಮದ್ಯ ಸೇವನೆ ಮಾಡಿಲ್ಲ ಎಂದು ಹೇಳಿದ್ದರು.

    ಸದ್ಯ ಪ್ರಕರಣ ಸಂಬಂಧಿಸಿದಂತೆ ಎ1 ಆರೋಪಿ ಮಹಮ್ಮದ್ ನಲಪಾಡ್ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿದ್ದು, ಈತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಎಲ್ಲಿದ್ದ ನಲಪಾಡ್?: ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಸಂಬಂಧ ಕೇಸ್ ದಾಖಲಾಗುತ್ತಿದ್ದಂತೆ ನಲಪಾಡ್ ಎಸ್ಕೇಪ್ ಆಗಿದ್ದು, ಕಬ್ಬನ್‍ಪಾರ್ಕ್ ಠಾಣೆ ಕೂಗಳತೆಯಲ್ಲೇ ಅಡಗಿಕೊಂಡಿದ್ದನು. ಯುಬಿ ಸಿಟಿ ಪಕ್ಕದಲ್ಲಿರುವ ಐಷಾರಾಮಿ 7 ಸ್ಟಾರ್ ಹೋಟೆಲ್‍ನ ರೂಂ ನಂಬರ್ 882 ನಲ್ಲಿ ಯಾವುದೇ ಭಯವಿಲ್ಲದೇ ಪಾರ್ಟಿಯೊಂದಲ್ಲಿ ಪಾಲ್ಗೊಂಡಿದ್ದನು. ಇದೀಗ ಅಪ್ಪ ಮಾಧ್ಯಮದ ಮುಂದೆ ಮಾತನಾಡಿದ ಕೇವಲ ಒಂದು ಗಂಟೆಯಲ್ಲಿಯೇ ಕಬ್ಬನ್ ಪಾರ್ಕ್ ಪೊಲೀಸರಿಗೆ ಶರಣಾಗಿರೋ ನಲಪಾಡ್ ವಿರುದ್ಧ ಸೆಕ್ಷನ್ 307 ಅಡಿ (ಕೊಲೆ ಯತ್ನ) ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಇಂದು ಆರೋಪಿ ನಲಪಾಡ್ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.