Tag: Mohanlal

  • ಕನ್ನಡಿಗ ನಂದಕಿಶೋರ್ ಚಿತ್ರಕ್ಕೆ ಹಾಲಿವುಡ್ ಕಾರ್ಯಕಾರಿ ನಿರ್ಮಾಪಕ

    ಕನ್ನಡಿಗ ನಂದಕಿಶೋರ್ ಚಿತ್ರಕ್ಕೆ ಹಾಲಿವುಡ್ ಕಾರ್ಯಕಾರಿ ನಿರ್ಮಾಪಕ

    ಮೋಹನ್ ಲಾಲ್ (Mohanlal) ಮತ್ತು ರೋಶನ್ ಮೇಕ ಅಭಿನಯದ ‘ವೃಷಭ’ ಚಿತ್ರದ ಚಿತ್ರೀಕರಣ ಕಳೆದ ವಾರವಷ್ಟೇ ಅಧಿಕೃತವಾಗಿ ಪ್ರಾರಂಭವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ನಿಕ್ ತರ್ಲೋ (Nick Tarlo) ಕಾರ್ಯಕಾರಿ ನಿರ್ಮಾಪಕರಾಗಿ ಸೇರ್ಪಡೆಯಾಗಿದ್ದಾರೆ.

    ನಿಕ್ ತರ್ಲೋ ಹಲವು ಹಾಲಿವುಡ್ (Hollywood) ಚಿತ್ರಗಳ ನಿರ್ಮಾಪಕರಾಗಿ ಮತ್ತು ಕಾರ್ಯಕಾರಿ ನಿರ್ಮಾಪಕರಾಗಿ ಗುರುತಿಸಿಕೊಂಡವರು. ಆಸ್ಕರ್ ಪ್ರಶಸ್ತಿ ಚಿತ್ರಗಳಾದ ‘ಮೂನ್ಲೈಟ್’, ‘ಮಿಸೌರಿ’, ‘ಥ್ರೀ ಬಿಲ್ಬೋರ್ಡ್ಸ್ ಔಟ್ಸೈಡ್ ಎಬ್ಬಿಂಗ್’ ಮುಂತಾದ ಚಿತ್ರಗಳಿಗೆ ದುಡಿದವರು. ಈಗ ಅವರು ‘ವೃಷಭ’ ಚಿತ್ರದ ಮೂಲಕ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ.

    ‘ವೃಷಭ’ ಚಿತ್ರವು ಹಾಲಿವುಡ್ ಚಿತ್ರಗಳ ಮಾದರಿಯಲ್ಲಿ ನಿರ್ಮಾಣವಾಗುತ್ತಿದ್ದು, ಇತ್ತೀಚೆಗೆ ಚಿತ್ರತಂಡದವರು ಚಿತ್ರಕ್ಕೆ ಹೇಗೆಲ್ಲ ತಯಾರಿಗಳು ನಡೆಯುತ್ತಿದೆ, ಚಿತ್ರೀಕರಣ ಸಮಯದಲ್ಲಿ ಏನೆಲ್ಲಾ ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸುವ 57 ಸೆಕೆಂಡ್‌ಗಳ ಒಂದು ವೀಡಿಯೋ ಬಿಡುಗಡೆ ಮಾಡಲಾಗಿದೆ. ಹಾಲಿವುಡ್ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಭಾರತದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ವೃಷಭ ಪಾತ್ರವಾಗಿದೆ.

    ಈ ಚಿತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕುರಿತು ಮಾತನಾಡಿರುವ ನಿಕ್ ತರ್ಲೋ, ‘ಇದು ನನ್ನ ಮೊದಲ ಭಾರತೀಯ ಚಿತ್ರ ಮತ್ತು ನಾನು ಇಲ್ಲಿ ಕೆಲಸ ಮಾಡುವುದಕ್ಕೆ ಎದುರು ನೋಡುತ್ತಿದ್ದೇನೆ. ಒಬ್ಬ ಕಾರ್ಯಕಾರಿ ನಿರ್ಮಾಪಕನಾಗಿ, ಚಿತ್ರದ ಸೃಜನಶೀಲ ಚಟುವಟಿಕೆಗಳು ಸೇರಿದಂತೆ ಹಲವು ವಿಭಾಗಗಳ ಕುರಿತು ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ದೇಶದ ಚಿತ್ರಗಳ ಹೊರತಾಗಿ, ನಾನು ಕೆಲಸ ಮಾಡುತ್ತಿರುವ ಬೇರೆ ದೇಶದ ಮೊದಲ ಚಿತ್ರವಿದು. ಅದರಲ್ಲೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರ ನನಗೆ ಒಂದು ಹೊಸ ಅನುಭವ. ಈ ಚಿತ್ರದಿಂದ ನಾನು ಬಹಳಷ್ಟು ಕಲಿಯುವುದಿದೆ ಮತ್ತು ಈ ಅನುಭವ ಅದ್ಭುತವಾಗಿ ಇರುತ್ತದೆ ಎಂದು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

    ಚಿತ್ರತಂಡಕ್ಕೆ ನಿಕ್ ಸೇರ್ಪಡೆಯ ಕುರಿತು ಮಾತನಾಡಿರುವ ನಿರ್ಮಾಪಕ ವಿಶಾಲ್ ಗುರ್ನಾನಿ, ‘ನಿಕ್ ಸೇರ್ಪಡೆಯಿಂದ ನಮ್ಮ ಚಿತ್ರ ಇನ್ನಷ್ಟು ದೊಡ್ಡದಾಗಿದೆ. ಈ ಚಿತ್ರವನ್ನು ನಾವು ಹಾಲಿವುಡ್ ಶೈಲಿಯಲ್ಲಿ ನಿರ್ಮಿಸುತ್ತಿದ್ದು, ನಿಕ್ರಂತಹ ಸಮರ್ಥ ವ್ಯಕ್ತಿ ನಮ್ಮ ಜೊತೆಗೆ ಕೈಜೋಡಿಸಿರುವುದು ತಂಡದ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ತಮಿಳಿನಲ್ಲಿ ಬಂಪರ್ ಆಫರ್‌, ವಿಕ್ರಮ್‌ಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

    ‘ವೃಷಭ’ ಚಿತ್ರವು ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಂದು ಆಕ್ಷನ್-ಸೆಂಟಿಮೆಂಟ್ ಚಿತ್ರವಾಗಿದ್ದು, ಮೋಹನ್ ಲಾಲ್ ಮತ್ತು ರೋಶನ್ ಮೇಕ ಜೊತೆಗೆ ಶನಾಯ ಕಪೂರ್, ಜಹ್ರ ಎಸ್ ಖಾನ್, ಶ್ರೀಕಾಂತ್ ಮೇಕ, ರಾಗಿಣಿ ದ್ವಿವೇದಿ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಾಗಿದ್ದು, ಮುಂದಿನ ವರ್ಷದ ನಿರೀಕ್ಷಿತ ಚಿತ್ರಗಳು ಇದು ಸಹ ಒಂದಾಗಿದೆ.

    ‘ವೃಷಭ’ ಚಿತ್ರವನ್ನು ಬಾಲಿವುಡ್ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಕನ್ನಡದ ನಂದಕಿಶೋರ್ (Nandakishor) ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವು ಮಲಯಾಳಂ, ಕನ್ನಡ, ತೆಲುಗು, ಹಿಂದಿ ಮತ್ತು ತಮಿಳುಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣಗೊಂಡು ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ‘ಜೈಲರ್’ಗೆ ಸೆನ್ಸಾರ್ ಕಟ್, ರಜನಿ-ಶಿವಣ್ಣ ಸೀನ್‌ಗೆ ಬಿತ್ತಾ ಕತ್ತರಿ?

    ಜನಿಕಾಂತ್ ನಟನೆಯ ‘ಜೈಲರ್’ (Jailer) ಸಿನಿಮಾದಲ್ಲಿ ಬಹುಭಾಷಾ ಕಲಾವಿದರ ದಂಡೇ ಇದೆ. ಇದೇ ಆಗಸ್ಟ್ 10ಕ್ಕೆ ತೆರೆಗೆ ಬರೋದಕ್ಕೆ ಸಜ್ಜಾಗಿದೆ. ಹೀಗಿರುವಾಗ ‘ಜೈಲರ್’ ತಂಡಕ್ಕೆ ಸೆನ್ಸಾರ್ ಶಾಕ್ ಕೊಟ್ಟಿದೆ. ರಜನಿ- ಶಿವಣ್ಣ ಸೀನ್‌ಗೆ ಕತ್ತರಿ ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ತಲೈವಾ ನಟನೆಯ ‘ಜೈಲರ್’ ಸಿನಿಮಾ ತೆರೆಗೆ ಬರುವ ಮುನ್ನವೇ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟು ಹಾಕಿದೆ. ಸಿನಿಮಾದ ಫಸ್ಟ್ ಲುಕ್, ಕಾವಾಲಾ (Kaavala) ಸಾಂಗ್ ಸೇರಿದಂತೆ ಜೈಲರ್ ಝಲಕ್ ಫ್ಯಾನ್ಸ್‌ಗೆ ಕಿಕ್ ಕೊಟ್ಟಿದೆ. ಇದೆಲ್ಲದರ ನಡುವೆ ಜೈಲರ್ ದೃಶ್ಯಗಳಿಗೆ ಸೆನ್ಸಾರ್ ಮಂಡಳಿ ಕತ್ತರಿ ಹಾಕಿದೆ.

    ಆ್ಯಕ್ಷನ್ ಎಂಟರ್‌ಟೈನರ್ ‘ಜೈಲರ್’ ಚಿತ್ರಕ್ಕೆ ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳು ಹೆಚ್ಚಿದ್ದು ಅದನ್ನು ಕಮ್ಮಿ ಮಾಡುವಂತೆ ಸೆನ್ಸಾರ್ ಮಂಡಳಿ ಚಿತ್ರತಂಡಕ್ಕೆ ಸೂಚಿಸಿದೆಯಂತೆ. ಒಟ್ಟು 11 ಕಟ್ ಚಿತ್ರದಲ್ಲಿ ಮೋಹನ್ ಲಾಲ್ (Mohanlal) ಮ್ಯಾಥೂ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಒಂದು ಮಲಯಾಳಂ ಪದವನ್ನು ಮ್ಯೂಟ್ ಮಾಡಲು ಸೆನ್ಸಾರ್ ಮಂಡಳಿ ಸೂಚಿಸಿದೆಯಂತೆ. ಇದನ್ನೂ ಓದಿ:ರಜನಿ ‘ಜೈಲರ್’ ಜೊತೆ ಜಗ್ಗೇಶ್ ‘ತೋತಾಪುರಿ 2’ ಸಿನಿಮಾ

    ‘ಜೈಲರ್’ ಚಿತ್ರದಲ್ಲಿ ಮುತ್ತುವೇಲ್ ಪಾಂಡಿಯನ್ ಆಗಿ ರಜನಿಕಾಂತ್(Rajanikanth), ನರಸಿಂಹ ಆಗಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಕ್ಲೈಮ್ಯಾಕ್ಸ್‌ನಲ್ಲಿ ಮುತ್ತುವೇಲ್, ನರಸಿಂಹ ಹಾಗೂ ಮ್ಯಾಥ್ಯೂ ಮೂವರು ಸಿಗರೇಟ್ ಸೇದುವ ಸನ್ನಿವೇಶವೊಂದಿದೆಯಂತೆ. ಆ ದೃಶ್ಯದ ಕ್ಲೋಸ್‌ಅಪ್ ಶಾಟ್ಸ್ ಕತ್ತರಿಸುವಂತೆ ಸೆನ್ಸಾರ್ ಮಂಡಳಿ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಮ್ಯಾಥ್ಯೂ, ವ್ಯಕ್ತಿಯೊಬ್ಬನನ್ನು ಕೊಲ್ಲುವುದು ಸೇರಿದಂತೆ ಹಲವು ಸಣ್ಣ ದೃಶ್ಯಗಳಿಗೆ ಕತ್ತರಿ ಬಿದ್ದಿದೆಯಂತೆ.

    ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸಿನಿಮಾದಲ್ಲಿ ರಜನಿಕಾಂತ್, ಶಿವಣ್ಣ(Shivarajkumar), ಮೋಹನ್‌ಲಾಲ್, ತಮನ್ನಾ, ರಮ್ಯಾ ಕೃಷ್ಣ, ಜಾಕಿ ಶ್ರಾಫ್, ಯೋಗಿ ಬಾಬು ನಟಿಸಿದ್ದಾರೆ. ‘ಜೈಲರ್’ ಸಿನಿಮಾ ಬರೋಬ್ಬರಿ 2 ಗಂಟೆ 49 ನಿಮಿಷ ಕಾಲಾವಧಿಯಲ್ಲಿ ಮೂಡಿ ಬಂದಿದೆ. ಕನ್ನಡದ ಜೊತೆ ಮೂರು ಭಾಷೆಗಳಲ್ಲಿ ಜೈಲರ್ ಸಿನಿಮಾ ರಿಲೀಸ್ ಆಗಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಾಗಿಣಿ

    ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಾಗಿಣಿ

    ಭಾರತದ ಬೃಹತ್ ಸಾಹಸಮಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ (Mohanlal) ಅಭಿನಯದ ‘ವೃಷಭ’ (Vrishabha) ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.

    ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಸಾಹಸ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

    ‘ಕಾಂದಹಾರ್’ ನಂತರ ಇದೇ ಎರಡನೆಯ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ (Ragini Dwivedi) ನಟಿಸುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ನಂದಕಿಶೋರ್ (Nandakishor) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:‘ಸಿಂಗಂ’ ಖ್ಯಾತಿಯ ನಟ ಜಯಂತ್ ಸಾವರ್ಕರ್ ವಿಧಿವಶ

    ಚಿತ್ರ ಪ್ರಾರಂಭವಾದ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡ ನಟ ಮೋಹನ್ ಲಾಲ್, ‘ವೃಷಭ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

     

    ‘ವೃಷಭ’ ಚಿತ್ರವನ್ನು ಬಾಲಿವುಡ್‌ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರವು ಮುಂದಿನ ವರ್ಷ ಜಗತ್ತಿನಾದ್ಯಂತ 4500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋಹನ್ ಲಾಲ್-ನಂದಕಿಶೋರ್ ಚಿತ್ರಕ್ಕೆ ಚಾಲನೆ: ಇದು ಪ್ಯಾನ್ ಇಂಡಿಯಾ ಸಿನಿಮಾ

    ಮೋಹನ್ ಲಾಲ್-ನಂದಕಿಶೋರ್ ಚಿತ್ರಕ್ಕೆ ಚಾಲನೆ: ಇದು ಪ್ಯಾನ್ ಇಂಡಿಯಾ ಸಿನಿಮಾ

    ನ್ನಡದ ಮತ್ತೋರ್ವ ಪ್ರತಿಭಾವಂತ ನಿರ್ದೇಶಕ ಬೇರೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ನಂದಕಿಶೋರ್, ಇದೀಗ ಮಲಯಾಳಂ (Malayalam) ಚಿತ್ರರಂಗಕ್ಕೆ ಹಾರಿದ್ದಾರೆ. ಮಲಯಾಳಂ ಚಿತ್ರರಂಗದ ದಿಗ್ಗಜ ಮೋಹನ್ ಲಾಲ್ (Mohanlal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ನಿನ್ನೆಯಷ್ಟೇ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

    ಈ ಹಿಂದೆ ಮೋಹನ್ ಲಾಲ್ ಜೊತೆಗಿರುವ ನಂದಕಿಶೋರ್ (Nandakishor) ಫೋಟೋ ವೈರಲ್ ಆಗಿತ್ತು. ಅವರೊಂದಿಗೆ ಸಿನಿಮಾ ಮಾಡಲಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದೀಗ ನಿಜವಾಗಿದೆ. ಚಿತ್ರಕ್ಕೆ ವೃಷಭ  (Vrushabha) ಎಂದು ಹೆಸರಿಟ್ಟಿದ್ದು, ಇದೇ ತಿಂಗಳಿನಿಂದಲೇ ಚಿತ್ರೀಕರಣ ಆರಂಭಿಸುವುದಾಗಿ ನಂದಕಿಶೋರ್ ತಿಳಿಸಿದ್ದಾರೆ. ಮೋಹಲ್ ಲಾಲ್ ಜೊತೆ ಸಿನಿಮಾ ಮಾಡುತ್ತಿರುವುದು ತಮ್ಮ ಪುಣ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ. ಸತತ ಎಂಟು ತಿಂಗಳ ಕಾಲ ಸ್ಕ್ರಿಪ್ಟ್ ಮೇಲೆಯೇ ಕೆಲಸ ಮಾಡಿದ್ದಾರಂತೆ ನಂದಕಿಶೋರ್, ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದೆ.

     

    ಮೋಹನ್ ಲಾಲ್ ಜೊತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದ್ದು, ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ನೀಡಲಿದ್ದಾರಂತೆ. ಹಿಂದಿ ಸಿನಿಮಾಗಳಲ್ಲಿ ಪಳಗಿರುವ ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡುತ್ತಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದ ಮಮ್ಮುಟ್ಟಿ: 14 ವರ್ಷಗಳ ಕಾಯುವಿಕೆ ಅಂತ್ಯ

    ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದ ಮಮ್ಮುಟ್ಟಿ: 14 ವರ್ಷಗಳ ಕಾಯುವಿಕೆ ಅಂತ್ಯ

    ಕೇರಳ (Kerala) ಸರ್ಕಾರ ಸಿನಿಮಾ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಮಮ್ಮುಟ್ಟಿ ಅತ್ಯುತ್ತಮ ನಟನಾಗಿ ಹೊರ ಹೊಮ್ಮಿದ್ದಾರೆ. ‘ನನ್ಪಕಲ್ ನೆರತ್ತು ಮಯಕ್ಕಂ’ ಸಿನಿಮಾದ ನಟನೆಗಾಗಿ ಈ ಪ್ರಶಸ್ತಿ ಸಂದಿದೆ. ಅತ್ಯುತ್ತಮ ನಟ (Best Actor) ಪ್ರಶಸ್ತಿ ಪಡೆದ ಗೆಳೆಯ ಮಮ್ಮುಟ್ಟಿಗೆ ಮತ್ತೋರ್ವ ಖ್ಯಾತ ನಟ ಮೋಹನ್ ಲಾಲ್ (Mohanlal) ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂಭ್ರಮವನ್ನು ಅವರು ಹಂಚಿಕೊಂಡಿದ್ದಾರೆ.

    ಮಮ್ಮುಟ್ಟಿಗೆ ಪ್ರಶಸ್ತಿ (Award) ಹೊಸದೇನೂ ಅಲ್ಲ. ಈಗಾಗಲೇ ಆರು ಬಾರಿ ರಾಜ್ಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅನೇಕ ಬಾರಿ ಫಿಲ್ಮ್ ಫೇರ್ ಪ್ರಶಸ್ತಿಗೂ ಅವರು ಭಾಜನರಾಗಿದ್ದಾರೆ. ಆದರೆ, ಕಳೆದ ಹದಿನಾಲ್ಕು ವರ್ಷದಿಂದ ಸರ್ಕಾರದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಅವರು ಪಡೆದುಕೊಂಡಿರಲಿಲ್ಲ. ಈ ಬಾರಿ ರೇಸ್ ನಲ್ಲಿ ಮೋಹನ್ ಲಾಲ್ ಕೂಡ ಇದ್ದರು. ಇದನ್ನೂ ಓದಿ:ಜುಲೈ 23ಕ್ಕೆ ವಿಶ್ವಕುಂದಾಪ್ರ ಕನ್ನಡ ದಿನಕ್ಕೆ ಸಿಎಂ, ರಿಷಬ್ ಶೆಟ್ಟಿ- ಪ್ರಮೋದ್ ಶೆಟ್ಟಿ ಸಾಥ್

    ಸಿನಿಮಾಗಳ ವಿಶೇಷಯದಲ್ಲಿ ಮೋಹನ್ ಲಾಲ್ ಮತ್ತು ಮಮ್ಮುಟ್ಟಿ (Mammootty) ಪಕ್ಕಾ ಸ್ಪರ್ಧಾಳುಗಳು. ಅನೇಕ ಬಾರಿ ಇವರ ಸಿನಿಮಾಗಳು ಪೈಪೋಟಿಗೆ ಇಳಿದಿವೆ. ಆದರೆ, ವೈಯಕ್ತಿಕ ಜೀವನದಲ್ಲಿ ಇಬ್ಬರೂ ಒಳ್ಳೆಯ ಸ್ನೇಹಿತರು. ಈ ಕಾರಣದಿಂದಾಗಿಯೇ ಮಮ್ಮುಟ್ಟಿಗೆ ಮೋಹನ್ ಲಾಲ್ ಅಭಿನಂದಿಸಿದ್ದಾರೆ.

    ಅತ್ಯುತ್ತಮ ನಟ ಮಮ್ಮುಟ್ಟಿಗೆ ಸಿಕ್ಕರೆ, ಅತ್ಯುತ್ತಮ ಸಿನಿಮಾ ‘ನಾನ್ ತಾನ್ ಕೇಸ್ ಕೊಡು’ ಪಡೆದುಕೊಂಡಿದೆ. ಇದೇ ಸಿನಿಮಾದ ನಟ ಕುಂಚಾಕೊ ಬೋಬನ್ ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ರೇಖಾ ಸಿನಿಮಾಗಾಗಿ ವಿನ್ಸಿ ಅಲೋಷಿಯಸ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5ನೇ ಬಾರಿಗೆ ಒಂದಾಯ್ತು ‘ದೃಶ್ಯಂ ಜೋಡಿ’ : ಮೋಹನ್ ಲಾಲ್ ಹಿಂದೆ ಬಿದ್ದ ಜೀತು

    5ನೇ ಬಾರಿಗೆ ಒಂದಾಯ್ತು ‘ದೃಶ್ಯಂ ಜೋಡಿ’ : ಮೋಹನ್ ಲಾಲ್ ಹಿಂದೆ ಬಿದ್ದ ಜೀತು

    ಲಯಾಳಂ (Malayalam) ಸಿನಿಮಾ ರಂಗದ ಹಿಟ್ ಜೋಡಿ ಎಂದೇ ಕರೆಯಲ್ಪಡುವ ನಿರ್ದೇಶಕ ಜೀತು ಜೋಸೆಫ್ (Jeethu Joseph) ಮತ್ತು ನಟ ಮೋಹನ್ ಲಾಲ್ (Mohanlal) ಮತ್ತೊಂದು ಸಿನಿಮಾ ಮಾಡಲು ಸಿದ್ಧರಾಗಿದ್ದಾರೆ. ಅದೂ ಐದನೇ ಬಾರಿಗೆ ಈ ಜೋಡಿ ಒಂದಾಗುತ್ತಿದ್ದು, ಹೊಸ ಸಿನಿಮಾದ *New Movie) ಘೋಷಣೆ ಈಗಷ್ಟೇ ಆಗಿದೆ. ಸದ್ಯ ಪ್ರೊಡಕ್ಷನ್ 33 ಎನ್ನುವ ಹೆಸರಿನಲ್ಲಿ ಕೆಲಸಗಳು ಆರಂಭವಾಗಿವೆ.

    ಮೋಹನ್ ಲಾಲ್ ಅವರಿಗಾಗಿಯೇ ನಿರ್ದೇಶಕ ಜೀತು ‘ದೃಶ್ಯಂ’ ಕಥೆಗಳನ್ನು ಬರೆದರು. ದೃಶ್ಯಂ 1 ಮತ್ತು ದೃಶ್ಯಂ 2 ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದವು. ಕೇವಲ ಮಲಯಾಳಂ ಸಿನಿಮಾ ರಂಗ ಮಾತ್ರವಲ್ಲ ಅನೇಕ ಭಾಷೆಗಳಲ್ಲಿ ಈ ಸಿನಿಮಾ ಡಬ್ ಆಯಿತು. ಕನ್ನಡದಲ್ಲೂ ಈ ಸಿನಿಮಾ ರೀಮೇಕ್ ಆಯಿತು. ಈಗ ಹಿಟ್ ಜೋಡಿಯೇ ಮತ್ತೊಂದು ಸಿನಿಮಾ ಮಾಡಲು ಹೊರಟಿದೆ. ಇದು ದೃಶ್ಯಂ ಭಾಗ 3ನಾ ಅಥವಾ ಬೇರೆ ಸಿನಿಮಾನಾ ಎನ್ನುವುದು ಗೊತ್ತಾಗಬೇಕಿದೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಈ ಹೊಸ ಸಿನಿಮಾಗೆ ದೃಶ್ಯಂ ಚಿತ್ರಗಳನ್ನು ನಿರ್ಮಾಣ ಮಾಡಿದ ಸಂಸ್ಥೆಯೇ ಹಣ ಹೂಡುತ್ತಿದ್ದು, ಇನ್ನಷ್ಟೇ ತಾರಾಗಣ ಮತ್ತು ಇತರ ಸಂಗತಿಗಳು ಹೊರ ಬರಬೇಕಿವೆ. ನಿರ್ಮಾಣ ಸಂಸ್ಥೆಯು ಹೊಸ ಸಿನಿಮಾದ ಪೋಸ್ಟರ್ ಹಂಚಿಕೊಳ್ಳುತ್ತಿದ್ದಂತೆಯೇ ಮೋಹನ್ ಲಾಲ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಮತ್ತೊಂದು ಹಿಟ್ ಸಿನಿಮಾ ಗ್ಯಾರಂಟಿ ಎಂದು ಚೆಪ್ಪಾಳೆ ತಟ್ಟಿದ್ದಾರೆ. ಅಷ್ಟರ ಮಟ್ಟಿಗೆ ಈ ಜೋಡಿ ಮಲಯಾಳಂ ಸಿನಿಮಾ ರಂಗದಲ್ಲಿ ಮೋಡಿ ಮಾಡಿದೆ.

    ಸದ್ಯ ಸಿನಿಮಾದ ಪೋಸ್ಟರ್ ಮಾತ್ರ ರಿಲೀಸ್ ಆಗಿದ್ದು, ಆಗಸ್ಟ್ ನಿಂದ ಚಿತ್ರೀಕರಣ ಪ್ರಾರಂಭಿಸಲಿದೆಯಂತೆ ಚಿತ್ರತಂಡ. ಅದಕ್ಕೂ ಮುನ್ನ ಜೀತು ತಮ್ಮ ಕೈಯಲ್ಲಿನ ಸಿನಿಮಾ ಮುಗಿಸಬೇಕಿದೆ. ಈ ಬಾರಿ ಯಾವ ರೀತಿಯ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳದ ಜೀತು, ಹೊಸ ರೀತಿಯ ಸಿನಿಮಾದ ಭರವಸೆಯನ್ನು ಮಾತ್ರ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರು ಭಾಷೆಗಳಲ್ಲಿ ರಜನಿ-ಶಿವಣ್ಣ ನಟನೆಯ ಜೈಲರ್

    ಮೂರು ಭಾಷೆಗಳಲ್ಲಿ ರಜನಿ-ಶಿವಣ್ಣ ನಟನೆಯ ಜೈಲರ್

    ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

    ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ (Shivaraj Kumar) ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohanlal), ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ. ಇದನ್ನೂ ಓದಿ:ತಮನ್ನಾ ಭಾರತೀಯ ಚಿತ್ರರಂಗದ ಶಕೀರಾ: ಸೆಕ್ಸಿ ಸ್ಟೆಪ್ ಹಾಕಿದ್ದಕ್ಕೆ ಬಿರುದು

    ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

    ಒಟ್ಟು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಮೂರು ಭಾಷೆಯ ಕಲಾವಿದರು ಚಿತ್ರದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡದ ಶಿವರಾಜ್ ಕುಮಾರ್, ತಮಿಳಿನ ಸೂಪರ್ ಸ್ಟಾರ್ ಜೊತೆ ತೆರೆ ಹಂಚಿಕೊಂಡಿರುವುದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲಯಾಳಂ ಚಿತ್ರರಂಗಕ್ಕೆ ಹಾರಿದ ನಂದಕಿಶೋರ್ : ಮೋಹನ್ ಲಾಲ್ ಹೀರೋ

    ಮಲಯಾಳಂ ಚಿತ್ರರಂಗಕ್ಕೆ ಹಾರಿದ ನಂದಕಿಶೋರ್ : ಮೋಹನ್ ಲಾಲ್ ಹೀರೋ

    ನ್ನಡದ ಮತ್ತೋರ್ವ ಪ್ರತಿಭಾವಂತ ನಿರ್ದೇಶಕ ಬೇರೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ನಂದಕಿಶೋರ್, ಇದೀಗ ಮಲಯಾಳಂ (Malayalam) ಚಿತ್ರರಂಗಕ್ಕೆ ಹಾರಿದ್ದಾರೆ. ಮಲಯಾಳಂ ಚಿತ್ರರಂಗದ ದಿಗ್ಗಜ ಮೋಹನ್ ಲಾಲ್ (Mohanlal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ.

    ಈ ಹಿಂದೆ ಮೋಹನ್ ಲಾಲ್ ಜೊತೆಗಿರುವ ನಂದಕಿಶೋರ್ (Nandakishor) ಫೋಟೋ ವೈರಲ್ ಆಗಿತ್ತು. ಅವರೊಂದಿಗೆ ಸಿನಿಮಾ ಮಾಡಲಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದೀಗ ನಿಜವಾಗಿದೆ. ಚಿತ್ರಕ್ಕೆ ವೃಷಭ  (Vrushabha) ಎಂದು ಹೆಸರಿಟ್ಟಿದ್ದು, ಇದೇ ತಿಂಗಳಿನಿಂದಲೇ ಚಿತ್ರೀಕರಣ ಆರಂಭಿಸುವುದಾಗಿ ನಂದಕಿಶೋರ್ ತಿಳಿಸಿದ್ದಾರೆ. ಮೋಹಲ್ ಲಾಲ್ ಜೊತೆ ಸಿನಿಮಾ ಮಾಡುತ್ತಿರುವುದು ತಮ್ಮ ಪುಣ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?

    ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ. ಸತತ ಎಂಟು ತಿಂಗಳ ಕಾಲ ಸ್ಕ್ರಿಪ್ಟ್ ಮೇಲೆಯೇ ಕೆಲಸ ಮಾಡಿದ್ದಾರಂತೆ ನಂದಕಿಶೋರ್, ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಜುಲೈ 22 ರಿಂದ ಶೂಟಿಂಗ್ ಶುರು ಮಾಡುತ್ತಾರಂತೆ.

    ಮೋಹನ್ ಲಾಲ್ ಜೊತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದ್ದು, ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ನೀಡಲಿದ್ದಾರಂತೆ. ಹಿಂದಿ ಸಿನಿಮಾಗಳಲ್ಲಿ ಪಳಗಿರುವ ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡುತ್ತಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಜೊತೆ ಕನ್ನಡಿಗ ಡ್ಯಾನಿಶ್ ನಟನೆ

    ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಜೊತೆ ಕನ್ನಡಿಗ ಡ್ಯಾನಿಶ್ ನಟನೆ

    ಹಂಬಲ್ ಪೊಲಿಟಿಷಿಯನ್ ನೊಗರಾಜ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪರಿಚಿತನಾದ ನಟ ಡ್ಯಾನಿಶ್ ಸೇಠ್ (Danish Sait) ಮೊನ್ನೆಯಷ್ಟೇ ಮತ್ತೊಂದು ಕನ್ನಡ ಚಿತ್ರವನ್ನು ಒಪ್ಪಿಕೊಂಡು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಇದೀಗ ಮತ್ತೊಂದು ಖುಷಿ ಸುದ್ದಿಯನ್ನು ಅವರು ಹಂಚಿಕೊಂಡಿದ್ದಾರೆ. ಮಲಯಾಳಂ (Malayalam) ಖ್ಯಾತ ನಟ ಮೋಹನ್ ಲಾಲ್ (Mohanlal) ಜೊತೆ ಅವರು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರಂತೆ.

    ಸದ್ಯ ಮೋಹನ್ ಲಾಲ್ ಅವರು ಮಲೈಕೋಟಿ ವಾಲಿಬಾನ್ (Malaikoti Valiban) ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಡ್ಯಾನಿಶ್ ಹೊಸ ಬಗೆಯ ಪಾತ್ರವನ್ನು ಮಾಡುತ್ತಿದ್ದಾರೆ. ಇಂಥದ್ದೊಂದು ಪಾತ್ರ ನನಗೆ ಸಿಕ್ಕಿದ್ದು ಅದೃಷ್ಟ ಎಂದು ಅವರು ಹೇಳಿಕೊಂಡಿದ್ದಾರೆ. ತುಂಬಾ ಗೌರವದಿಂದ ಆ ಪಾತ್ರವನ್ನು ನಿರ್ವಹಿಸುತ್ತಿದ್ದೇನೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಅಶು ರೆಡ್ಡಿದು ಒಂದು ಗೋಳಾದರೆ, ನೀನಾದ್ದು ಮತ್ತೊಂದು ಸಂಕಟ

    ಮಲಯಾಳಂನಲ್ಲಿ ಮಾತ್ರವಲ್ಲ ಕನ್ನಡದಲ್ಲೂ ಡ್ಯಾನಿಶ್ ಒಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ಕಿರಿಕ್ et11’ ಎಂದು ಹೆಸರಿಡಲಾಗಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ ಇಂತಹ ಕಥೆಯನ್ನು ಸಿನಿಮಾ ಹೊಂದಿದೆಯಂತೆ.

     

    ಡ್ಯಾನಿಶ್ ಜೊತೆ ನವೀನ್  ಶಂಕರ್ ಕೂಡ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಮನೋಜ್ ಕುಮಾರ್ ಕಾಲಾವನನ್ ಕಥೆ ಹೆಣೆದಿದ್ದರೆ, ಸುಮನ್ ಕುಮಾರ್ ಅವರು ನಿರ್ದೇಶಿಸಲಿದ್ದಾರೆ. ಸುಮನ್ ಕುಮಾರ್ ಅವರು ಈ ಹಿಂದೆ ರಘುತಾತ ಚಿತ್ರವನ್ನು ನಿರ್ದೇಶಿಸಿದ್ದು , ವೆಬ್ ಸೀರಿಸ್ ಲೋಕದಲ್ಲಿ ಬಹಳ ಜನಪ್ರಿಯ ಆಗಿರುವ The Family Man ಮತ್ತು Farzi ಯ ಕಥೆಯನ್ನು ಹೆಣೆದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಮಲೈಕೋಟೈ ವಾಲಿಬನ್’ ಫಸ್ಟ್ ಲುಕ್ ಪೋಸ್ಟರ್ ರಿಲೀಸ್

    ‘ಮಲೈಕೋಟೈ ವಾಲಿಬನ್’ ಫಸ್ಟ್ ಲುಕ್ ಪೋಸ್ಟರ್ ರಿಲೀಸ್

    ನ್ನಡವೂ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿರುವ ’ಮಲೈಕೋಟೈ ವಾಲಿಬನ್’ (Malaikotai Valiban) ಸಿನಿಮಾದ ಫಸ್ಟ್ ಲುಕ್ (First Look) ಪೋಸ್ಟರ್ ರಿಲೀಸ್ ಆಗಿದೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್‌ ಲಾಲ್ (Mohanlal) ನಟನೆ, ಲಿಜೋ ಜೋಸ್‌ ಫೆಲ್ಲಿಸ್ಸರಿ ರಚನೆ ಹಾಗೂ ನಿರ್ದೇಶನದಲ್ಲಿ ಚಿತ್ರ ರೆಡಿಯಾಗಿದೆ.

    ಹಬ್ಬದ ಪ್ರಯುಕ್ತ ತಂಡವು ಸಿನಿಮಾದ ಫಸ್ಟ್ ಲುಕ್‌ ಅನ್ನು ರಿಲೀಸ್ ಮಾಡಿದ್ದು, ಆಂಗ್ರಿಯಂಗ್ ಮ್ಯಾನ್ ಅವತಾರದಲ್ಲಿ ಆವೇಶದಿಂದ ದಪ್ಪದಾದ ಹಗ್ಗವನ್ನು ಎಳೆಯುತ್ತಿರುವ ನಾಯಕನ ಸ್ಟಿಲ್ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಬರುವಂತೆ ಮಾಡಿದೆ. ಜಾನ್ ಮೇರಿ ಕ್ರಿಯೇಟೀವ್ ಬ್ಯಾನರ್ ಅಡಿಯಲ್ಲಿ ಶಿಬುಬೇಬಿ ಜಾನ್ ಬಂಡವಾಳ ಹೂಡುತ್ತಿದ್ದು, ಸೆಂಚೂರಿ ಫಿಲಿಂಸ್‌ನ ಕೋಚುಮನ್ ಮತ್ತು ಮ್ಯಾಕ್ಸ್ ಲ್ಯಾಬ್‌ನ ಅನೂಪ್ ಇವರುಗಳು ನಿರ್ಮಾಣದಲ್ಲಿ ಪಾಲುದಾರರು. ಇದನ್ನೂ ಓದಿ:ರಾಕಿ ಭಾಯ್ ಲೆಜೆಂಡ್ ಎಂದು ಹಾಡಿ ಹೊಗಳಿದ ಪೂಜಾ ಹೆಗ್ಡೆ

    ಕಥೆ ಹಾಗೂ ಹಿನ್ನಲೆ ಕುರಿತಂತೆ ಒಂದಷ್ಟು ವದಂತಿಗಳು ಹಬ್ಬಿದ್ದವು. ಆದರೆ ನಿರ್ಮಾಪಕರು ಮಲೈಕೋಟೈ ವಾಲಿಬನ್ ಅವರದಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ಉಳಿದಂತೆ ತಾರಗಣದ ವಿವರವನ್ನು ಬಿಟ್ಟುಕೊಟ್ಟಿಲ್ಲ. ಆದರೂ ಆಯಾ ಭಾಷೆಯ ಖ್ಯಾತ ಕಲಾವಿದರನ್ನು ಬಳಸಿಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ. ಪ್ರಶಾಂತ್‌ ಪಿಳ್ಳೈ ಸಂಗೀತ, ಪಿ.ಎಸ್.ರಫಿಕ್ಯೂ ಚಿತ್ರಕಥೆ, ’ಅಮೆನ್’ ಖ್ಯಾತಿಯ ಮಂಧು ನೀಲಕಂದನ್ ಛಾಯಾಗ್ರಹಣ, ದೀಪುಜೋಸಫ್ ಸಂಕಲನವಿದೆ. ಜನವರಿ 18 ರಿಂದ ಜೈಸಲ್ಮರ್, ರಾಜಸ್ತಾನ್ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯುತ್ತಿದೆ.