Tag: Mohanlal

  • ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಪ್ರೇಮ್ ಮತ್ತು ಧ್ರುವ ಕಾಂಬಿನೇಷನ್ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಗೆ ಸಂಜಯ್ ದತ್

    ಜೋಗಿ ಪ್ರೇಮ್ (Prem) ಮತ್ತು ಧ್ರುವ ಸರ್ಜಾ (Dhruv Sarja) ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈ ಸಿನಿಮಾದ ಟೈಟಲ್ ಟೀಸರ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯುತ್ತಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಇದಕ್ಕೆ ಸಾಕ್ಷಿ ಆಗಲಿದ್ದಾರೆ. ಇದೇ  ಅಕ್ಟೋಬರ್ 20 ರಂದು ಕಾರ್ಯಕ್ರಮವು ಬೆಂಗಳೂರಿನಲ್ಲೇ ನಡೆಯುತ್ತಿದೆ.


    ಈಗಾಗಲೇ ಈ ಟೀಸರ್ (Title Teaser) ಲಾಂಚ್ ಮಾಡಲು ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಆಗಮಿಸಲಿದ್ದಾರೆ ಎಂದು ಪ್ರೇಮ್ ತಿಳಿಸಿದ್ದರು. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿದ ಫೋಟೋವನ್ನೂ ಅವರು ಹಂಚಿಕೊಂಡಿದ್ದರು. ಇದೀಗ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ತ (Sanjay Dutt) ಕೂಡ ಆಗಮಿಸಲಿದ್ದಾರೆ ಅಂದಿದ್ದಾರೆ. ಇಂದು ಮುಂಬೈನಲ್ಲಿ ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿ ಆಹ್ವಾನಿಸಿದ್ದಾರೆ. ಇದನ್ನೂ ಓದಿ:ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್

    ಭಾರತೀಯ ಸಿನಿಮಾ ರಂಗದ ಮೇರು ನಟರು ಮಾತ್ರವಲ್ಲ, ನಿನ್ನೆಯಷ್ಟೇ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರನ್ನೂ ಪ್ರೇಮ್ ಭೇಟಿ ಮಾಡಿದ್ದರು. ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಮುಖ್ಯಮಂತ್ರಿಗಳು ಕೂಡ ಈ ಕಾರ್ಯಕ್ರಮಕ್ಕೆ ಬರಲು ಒಪ್ಪಿಕೊಂಡಿದ್ದು, ಈ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಅವರೂ ಸಾಕ್ಷಿಯಾಗಲಿದ್ದಾರೆ.

    ಈಗಾಗಲೇ ಸಿನಿಮಾದ ಮುಹೂರ್ತ ಮೈಸೂರಿನಲ್ಲಿ ನಡೆದಿದೆ. ಇನ್ನಷ್ಟೇ ಚಿತ್ರೀಕರಣ ಶುರುವಾಗಬೇಕು. ಅದಕ್ಕಾಗಿ ಎಲ್ಲ ಸಿದ್ಧತೆಯನ್ನೂ ಚಿತ್ರತಂಡ ಮಾಡಿಕೊಂಡಿದೆ. ಅದಕ್ಕೂ ಮುನ್ನ ಟೈಟಲ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇಲ್ಲಿಂದ ಸಿನಿಮಾದ ಇತರ ಕೆಲಸಗಳು ಶುರುವಾಗಲಿವೆಯಂತೆ. ಪ್ರೇಮ್ ಸಿನಿಮಾಗಳು ಅಂದರೆ, ಅಲ್ಲೊಂದು ಅಬ್ಬರ ಇರಲೇಬೇಕು. ಆ ಅಬ್ಬರವೂ ಮೊದಲ ದಿನದಿಂದಲೇ ಶುರುವಾಗಿರುವುದು ಮತ್ತೊಂದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್ (Title Teaser) ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ (Mohanlal) ಬರಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ನಾನಾ ಸಿನಿಮಾ ರಂಗದ ಕಲಾವಿದರು ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

    ಮೋಹನ್ ಲಾಲ್ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪ್ರೇಮ್ (Jogi Prem) ಹಂಚಿಕೊಂಡಿದ್ದು, ಇದೊಂದು ಅಪರೂಪದ ಭೇಟಿ ಆಗಿತ್ತು ಎಂದು ಬರೆದುಕೊಂಡಿದ್ದಾರೆ. ಇಂತಹ ಮಹಾನ್ ಕಲಾವಿದನನ್ನು ಭೇಟಿ ಮಾಡಿದ್ದು ಸಂಭ್ರಮ ತಂದಿದೆ ಎಂದಿರುವ ಪ್ರೇಮ್, ಅಕ್ಟೋಬರ್ 20ರ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದೂ ಅವರು ಕೋರಿದ್ದಾರೆ. ಇದನ್ನೂ ಓದಿ:ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಕೆವಿಎನ್ (KVN) ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಈಗಾಗಲೇ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಮೈಸೂರಿನಲ್ಲಿ ಸಿನಿಮಾದ ಮುಹೂರ್ತವಾಗಿದ್ದು, ಅರ್ಜುನ್ ಜನ್ಯ ಈ ಸಿನಿಮಾಗಾಗಿ ಸಂಗೀತ ಸಂಯೋಜನೆಯ ಕೆಲಸವನ್ನೂ ಆರಂಭಿಸಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಮಾತೂ ಇದೆ.

    Live Tv
    [brid partner=56869869 player=32851 video=960834 autoplay=true]

  • ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಗೆ ಕನ್ನಡದ ನಂದಕಿಶೋರ್ ಆ್ಯಕ್ಷನ್ ಕಟ್

    ಮಲಯಾಳಂ ಖ್ಯಾತ ನಟ ಮೋಹನ್ ಲಾಲ್ ಗೆ ಕನ್ನಡದ ನಂದಕಿಶೋರ್ ಆ್ಯಕ್ಷನ್ ಕಟ್

    ದ್ಯ ರಾಣಾ ಸಿನಿಮಾದಲ್ಲಿ ಬ್ಯುಸಿ ಆಗಿರುವ ನಿರ್ದೇಶಕ ನಂದ ಕಿಶೋರ್ ಸದ್ಯದಲ್ಲೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಿನಿಮಾ ಮಾಡಲಿದ್ದಾರೆ. ಹಾಗಂತ ಸ್ವತಃ ಮೋಹನ್ ಲಾಲ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದಾರೆ. ನಂದಕಿಶೋರ್ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ಎಕ್ಸೈಟ್ ಆಗಿದ್ದೇನೆ ಎಂದು ಹೇಳಿದ್ದಾರೆ.

    ಈ ಚಿತ್ರಕ್ಕೆ ವೃಷಭ ಎಂದು ಹೆಸರಿಡಲಾಗಿದ್ದು, ಎವಿಎಸ್ ಸ್ಟುಡಿಯೋ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಅಭಿಷೇಕ್ ‍ವ್ಯಾಸ್, ಪ್ರವೀಣ್ ಸಿಂಗ್ ಮತ್ತು ಶ್ಯಾಂಸ್ ಸುಂದರ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಎವಿಎಸ್ ಸ್ಟುಡಿಯೋ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ.  ಹಾಗಾಗಿ ಇಂತಹ ಸಿನಿಮಾಗೆ ನಿಮ್ಮ ಬೆಂಬಲವಿರಲಿ ಎಂದೂ ಮೋಹನ್ ಲಾಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದುಬಾರಿ ಸಂಭಾವನೆ ಕೇಳಿ, ಅವಕಾಶ ಕಳೆದುಕೊಂಡ `ವಜ್ರಕಾಯ’ ನಟಿ ನಭಾ ನಟೇಶ್

    ಇದೊಂದು ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾವಾಗಿದ್ದು, ಕಥಾ ನಾಯಕ ಹಲವು ಆಯಾಮಗಳಲ್ಲಿ ತೆರೆದುಕೊಳ್ಳುವಂತಹ ಪಾತ್ರವಾಗಿದೆ ಎಂದು ನಂದಕಿಶೋರ್ ಮಾತನಾಡಿದ್ದಾರೆ. ಜುಲೈ 2023 ರಿಂದ ಈ ಸಿನಿಮಾ ಶುರುವಾಗಲಿದ್ದು, ತೆಲುಗಿನ ಸ್ಟಾರ್ ನಟರೊಬ್ಬರು ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಜೀವನ ನಿರ್ವಹಣೆಗೆ ಸಾಬೂನು ಮಾರಾಟಕ್ಕಿಳಿದ ಮೋಹನ್‌ಲಾಲ್ ಸಹನಟಿ

    ಜೀವನ ನಿರ್ವಹಣೆಗೆ ಸಾಬೂನು ಮಾರಾಟಕ್ಕಿಳಿದ ಮೋಹನ್‌ಲಾಲ್ ಸಹನಟಿ

    ಚಿತ್ರರಂಗದಲ್ಲಿ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ ನಟಿ ಐಶ್ವರ್ಯ ಭಾಸ್ಕರನ್ ಹೊಸ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸೌತ್ ಸಿನಿಮಾಗಳಲ್ಲಿ ನಟಿಯಾಗಿ ಗಮನ ಸೆಳೆದಿದ್ದ ಐಶ್ವರ್ಯ ತಮ್ಮ ಜೀವನ ನಿರ್ವಹಣೆಗೆ ಸಾಬೂನುಗಳನ್ನು ಮಾರಾಟ ಮಾಡ್ತಿದ್ದಾರೆ.

    ನರಸಿಂಹಂ, ಸತ್ಯಮೇವ ಜಯತೇ, ಪ್ರಜಾ, ದಿ ಫೈರ್, ನೋಟ್ ಬುಕ್‌ನಂತಹ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ನಟಿ ಐಶ್ವರ್ಯ ಹೊಟ್ಟೆಪಾಡಿಗಾಗಿ ಸಾಬೂನು ಮಾರಾಟ ಮಾಡುತ್ತಿದ್ದಾರೆ. ಅವಕಾಶಗಳ ಕೊರತೆಯಿಂದ ಜೀವನ ನಿರ್ವಹಣೆಗೆ ಸಾಬೂನು ಮಾರಾಟಕ್ಕಿಳಿದಿದ್ದಾರೆ. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

    ಇತ್ತೀಚೆಗಷ್ಟೇ ನೀಡಿದ ಸಂದರ್ಶನವೊಂದರಲ್ಲಿ ಐಶ್ವರ್ಯ ತಮ್ಮ ಖಾಸಗಿ ಜೀವನದ ನಿರ್ವಹಣೆಯ ಕುರಿತು ಮಾತನಾಡಿದ್ದಾರೆ. ನನಗೆ ಈಗ ಕೆಲಸವಿಲ್ಲ ಜತೆಗೆ ಜೀವನ ನಿರ್ವಹಣೆಗೆ ಹಣವಿಲ್ಲ ಮತ್ತು ಸಾಬೂನು ಮಾರುತ್ತಾ ಬೀದಿಗಳಲ್ಲಿ ವಾಸಿಸುತ್ತಿದ್ದೇನೆ. ನನಗೆ ಸಿನಿಮಾ ಮಾಡಲು ಆಸಕ್ತಿಯಿದೆ ಯಾರಾದರೂ ಸಿನಿಮಾಗಾಗಿ ಕರೆ ಮಾಡುತ್ತಾರೆ ಎಂಬ ಭರವಸೆಯಿದೆ ಎಂದು ನಟಿ ಐಶ್ವರ್ಯ ಮುಕ್ತವಾಗಿ ಮಾತನಾಡಿದ್ದಾರೆ. ಒಟ್ನಲ್ಲಿ ಎಷ್ಟೇ ಇದ್ರೂ ಮಾದರಿಯಾಗಿ ಬದುಕುತ್ತಿರುವ ನಟಿ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

    Live Tv

  • ಆನೆದಂತ ದಾಸ್ತಾನು ಕೇಸ್ : ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಸಂಕಷ್ಟ

    ಆನೆದಂತ ದಾಸ್ತಾನು ಕೇಸ್ : ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಗೆ ಸಂಕಷ್ಟ

    ಹಿಂದೆ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿದಾಗ ಅವರ ಮನೆಯಲ್ಲಿ ಎರಡು ಜೊತೆ ಆನೆದಂತ ಮತ್ತು ಆನೆದಂತದಿಂದ ಮಾಡಿದ ವಸ್ತುಗಳು ಪತ್ತೆ ಆಗಿದ್ದವು. ಹಾಗಾಗಿ ಅರಣ್ಯ ಇಲಾಖೆಯು ಮೋಹನ್ ಲಾಲ್ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಲಾಲ್ ಅವರಿಗೆ ಇಲಾಖೆಯು ಮಾಲೀಕತ್ವ ದಾಖಲೆ ನೀಡಿದ್ದರಿಂದ ಪ್ರಕರಣ ಕೈ ಬಿಡಬೇಕೆಂದು ಸರಕಾರವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

    ಆನೆ ದಂತಗಳಿಗೆ ನೀಡಿರುವ ಮಾಲೀಕತ್ವ ಪ್ರಮಾಣ ಪತ್ರಕ್ಕೆ ಮಾನ್ಯತೆ ಇಲ್ಲ ಎಂದು ವಾದಿಸಿದ ಅರ್ಜಿ ವಿರುದ್ಧದ ವಕೀಲರು, ಎರಡು ಆನೆದಂತ ಮತ್ತು ಆನೆದಂತದಿಂದ ಮಾಡಿದ 13 ಕಲಾಕೃತಿಗಳ ಕುರಿತು ಯಾವುದೇ ಕ್ರಮ ತಗೆದುಕೊಂಡಿಲ್ಲವೆಂದು ವಾದಿಸಿತು. ಹಾಗಾಗಿ ರಾಜ್ಯ ಸರಕಾರ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಮೋಹನ್ ಲಾಲ್ ವಿರುದ್ಧದ ಪ್ರಕರಣ ಈ ಮೂಲಕ ಮುಂದುವರೆದಿದೆ. ಇದನ್ನೂ ಓದಿ: ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ

    ಕೇಸು ಮುಂದುವರೆದು, ಒಂದು ವೇಳೆ ಆರೋಪ ಸಾಬೀತಾದರೆ, ಅರಣ್ಯ ಕಾಯ್ದೆಯಡಿ ಏಳು ವರ್ಷಗಳು ಮೀರದಂತೆ ಜೈಲು ಶಿಕ್ಷೆಯಿದೆ. ಹಾಗಾಗಿ ಮೋಹನ್ ಲಾಲ್ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನ್ಯಾಯಾಲಯದ ಆದೇಶದಂತೆ ಅವರು ಈ ಪ್ರಕರಣವನ್ನು ಎದುರಿಸಲೇಬೇಕಾಗಿದೆ. ಮತ್ತೆ ಮೋಹನ್ ಲಾಲ್ ವಿಚಾರಣೆಗೆ ಸಹಕರಿಸಬೇಕಾಗಿದೆ. ಸಿನಿಮಾ ಮತ್ತು ಉದ್ಯಮ ಎರಡೂ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿರುವ ಮೋಹನ್ ಲಾಲ್ ಈ ವಿಷಯದಲ್ಲಿ ಗೆಲ್ಲಲಿದ್ದಾರೆ ಎನ್ನುವುದು ಅವರ ಅಭಿಮಾನಿಗಳ ನಿರೀಕ್ಷೆ.

  • ಮೋಹನ್ ಲಾಲ್‍ರಿಂದ ವಿದ್ಯಾ ಬಾಲನ್ ಕಲಿತ ದೊಡ್ಡ ಪಾಠವೇನು ಗೊತ್ತಾ?

    ಮೋಹನ್ ಲಾಲ್‍ರಿಂದ ವಿದ್ಯಾ ಬಾಲನ್ ಕಲಿತ ದೊಡ್ಡ ಪಾಠವೇನು ಗೊತ್ತಾ?

    ಬಾಲಿವುಡ್ ನಟಿ ವಿದ್ಯಾ ಬಾಲನ್ ಅತ್ಯಂತ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ತಮ್ಮ ನಟನಾ ಕೌಶಲ್ಯದಿಂದ ಮತ್ತೆ, ಮತ್ತೆ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ಈ ನಟಿ ದಕ್ಷಿಣದ ಸೂಪರ್ಸ್ಟಾರ್ ಮೋಹನ್ಲಾಲ್ ಅವರೊಂದಿಗೆ ಒಟ್ಟಿಗೆ ಕೆಲಸ ಮಾಡುತ್ತಾ, ಅವರಿಂದ ಕಲಿತ ಪಾಠವೇನು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

    ವಿದ್ಯಾ ಬಾಲನ್ ಅವರು ಮೋಹನ್ಲಾಲ್ ಅವರ ಜೊತೆಗೆ ಸಿನಿಮಾ ಮಾಡುತ್ತಿದ್ದರು. ಆದರೆ ದುರದೃಷ್ಟವಶಾತ್, ಆ ಚಿತ್ರವು ಸ್ಥಗಿತಗೊಂಡಿತು. ಈ ಚಿತ್ರದ ಕುರಿತು ಮಾತನಾಡಿದ ವಿದ್ಯಾ, ಈ ಚಿತ್ರಕ್ಕಾಗಿ ಸುಮಾರು 2 ವಾರಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೆ. ಮೋಹನ್ಲಾಲ್ ಮತ್ತು ನಿರ್ದೇಶಕರಿಗೆ ಸಮಸ್ಯೆಗಳಿವೆ, ಆದ್ದರಿಂದ ಬಹಳಷ್ಟು ಬಾರಿ ಚಿತ್ರೀಕರಣವನ್ನು ರದ್ದುಗೊಳಿಸಲಾಯಿತು. ಅವರ ಜೊತೆ ಕೇವಲ 6-7 ದಿನ ಕೆಲಸ ಮಾಡಿದ್ದೇನೆ ಎಂದು ವಿದ್ಯಾ ಬಾಲನ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್


    ನಾನೊಬ್ಬಳು ನಟಿಯಾಗಿ ಮೋಹನ್ ಲಾಲ್ ಅವರನ್ನು ಪ್ರೀತಿಸುತ್ತೇನೆ. ಅವರಿಂದ ನಾನು ದೊಡ್ಡ ಪಾಠವನ್ನು ಕಲಿತಿದ್ದೇನೆ. ನಾನು ಯಾವಾಗಲೂ ಅವರು ನನ್ನ ನೆಚ್ಚಿನ ನಟ ಎಂದು ಹೇಳುತ್ತಿದ್ದೆ. ಸೆಟ್ನಲ್ಲಿ ನಾನು ಮೋಹನ್ಲಾಲ್ ಅವರ ಜೊತೆಗೆ ಸಾಕಷ್ಟು ಸಮಯ ಕಳೆದಿದ್ದೇನೆ. ಅವರ ನನಗೆ ಹೇಳಿದ್ದರು, ನಾನು ಸ್ಕ್ರಿಪ್ಟ್ ಓದಲು ಬಯಸುವುದಿಲ್ಲ. ಆದರೆ ನಿರ್ದೇಶಕರು ಕರೆದಾಗ ಮ್ಯಾಜಿಕ್ ಆಗುವಂತೆ ನಾನು ನಟಿಸಲು ನಾನು ಬಯಸುತ್ತೇನೆ. ಅವರು ಯಾವಾಗಲೂ ಸಿನಿಮಾ ತಂಡವನ್ನು ಬೆಂಬಲಿಸುತ್ತಿದ್ದರು. ಸಂಕ್ಷಿಪ್ತವಾಗಿ ಹೇಳುವುದಾದರೆ, ನಾನು ಅವರಿಂದ ದೊಡ್ಡ ಪಾಠವನ್ನು ಕಲಿತಿದ್ದೇನೆ ಎಂದು ಹೇಳಿದ್ದಾರೆ.

  • ಕಿಚ್ಚನ ‘ವಿಕ್ರಾಂತ್ ರೋಣ’ ಹಿಂದಿ ಟೀಸರ್ ರಿಲೀಸ್ ಮಾಡಲಿದ್ದಾರೆ ಸಲ್ಮಾನ್ ಖಾನ್

    ಕಿಚ್ಚನ ‘ವಿಕ್ರಾಂತ್ ರೋಣ’ ಹಿಂದಿ ಟೀಸರ್ ರಿಲೀಸ್ ಮಾಡಲಿದ್ದಾರೆ ಸಲ್ಮಾನ್ ಖಾನ್

    ಕಿಚ್ಚ ಸುದೀಪ್ ಅವರನ್ನು ತಮ್ಮ ಸಹೋದರ ಎಂದೇ ಕರೆಯುವ ಬಾಲಿವುಡ್ ನಟ ಸಲ್ಮಾನ್ ಖಾನ್ ಕಿಚ್ಚನ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲಿದ್ದಾರೆ.  ಮೆಗಾ ಪ್ಯಾನ್ ಇಂಡಿಯಾ ಈ ಚಿತ್ರ ದ ಟೀಸರ್ ಬಿಡುಗಡೆ ಯುಗಾದಿ ಹಬ್ಬದಂದು ಬಿಡುಗಡೆ ಆಗುತ್ತಿದ್ದು, ಏಪ್ರಿಲ್ 2 ರಂದು ಬೆಳಗ್ಗೆ 9.55ಕ್ಕೆ ಹಲವು ಭಾಷೆಗಳಲ್ಲಿ ಈ ಟೀಸರ್ ಬಿಡುಗಡೆ ಆಗಲಿದೆ. ಆಯಾ ಭಾಷೆಗಳ ಹೆಸರಾಂತ ನಟರು ಈ ಟೀಸರ್ ಅನ್ನು ರಿಲೀಸ್ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ: ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ

    ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ನಲ್ಲೂ ಈ ಚಿತ್ರವನ್ನು ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ಮಾಪಕ ಜಾಕ್ ಮಂಜು. ಅದಕ್ಕೂ ಮುನ್ನ ಟೀಸರ್ , ಹಾಡುಗಳನ್ನು ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ. ಪ್ರಿ ರಿಲೀಸ್ ಇವೆಂಟ್ ಕೂಡ ಆಯೋಜನೆ ಮಾಡುವ ಉದ್ದೇಶವೂ ಇದೆ. ಇದನ್ನೂ ಓದಿ: ʼಆರ್‌ಆರ್‌ಆರ್‌ʼ ರಿಲೀಸ್ ಆದ ಕೆಲವೇ ದಿನಗಳಲ್ಲಿ 100 ಮಿಲಿಯನ್ ದಾಖಲೆ

    ಏ.2 ರಂದು ರಿಲೀಸ್ ಆಗಲಿರುವ ಟೀಸರ್ ಅನ್ನು ಮಲಯಾಳಂ ಭಾಷೆಯಲ್ಲಿ ಖ್ಯಾತ ನಟ ಮೋಹನ್ ಲಾಲ್ ರಿಲೀಸ್ ಮಾಡುತ್ತಿದ್ದಾರೆ. ಮೋಹನ್ ಲಾಲ್ ಕಿಚ್ಚ ಸುದೀಪ್ ಅವರ ಜತೆ ನಟಿಸದೇ ಇದ್ದರೂ, ಸುದೀಪ್ ಅವರ ಮೇಲೆ ಅವರಿಗೆ ಅಪಾರ ಗೌರವ. ಅಲ್ಲದೇ ಕನ್ನಡದಲ್ಲಿ ಅವರು ಪುನೀತ್ ಅವರ ಜತೆ ನಟಿಸಿದ್ದಾರೆ. ಕಿಚ್ಚನಿಗೂ ಮತ್ತು ಪುನೀತ್ ಅವರಿಗೂ ಇದ್ದ ಬಾಂಧವ್ಯದ ಅರಿವು ಅವರಿಗಿದೆ. ಹೀಗಾಗಿ ಟೀಸರ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ : ಸೆನ್ಸಾರ್ ಪಾಸ್ ಆದ ರಾಕಿಭಾಯ್ : ಕೆಜಿಎಫ್ 1 ಗಿಂತ ಕೆಜಿಎಫ್ 2 ಸಿನಿಮಾ 13 ನಿಮಿಷ ಉದ್ದ

    ಮಲಯಾಳಂನಲ್ಲಿ ಮೋಹನ್ ಲಾಲ್ ಬಿಡುಗಡೆ ಮಾಡುತ್ತಿದ್ದರೆ, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ ಟೀಸರ್ ಅನ್ನು ರಿಲೀಸ್ ಮಾಡು‍ತ್ತಿದ್ದಾರೆ. ಚಿರಂಜೀವಿ ಜತೆ ಕಿಚ್ಚನಿಗೆ ಒಳ್ಳೆಯ ಬಾಂಧವ್ಯವಿದೆ. ಅಲ್ಲದೇ ಒಟ್ಟಿಗೆ ಕೆಲಸ ಕೂಡ ಮಾಡಿದ್ದಾರೆ. ತೆಲುಗಿನಲ್ಲಿ ಕಿಚ್ಚನಿಗೆ ಉತ್ತಮ ಕಾಂಟ್ಯಾಕ್ಟ್ ಕೂಡ ಇದೆ. ಅಲ್ಲಿ ಕಿಚ್ಚನ ಅಪಾರ ಅಭಿಮಾನಿ ಬಳಗವನ್ನೂ ಹೊಂದಿದ್ದಾರೆ.

  • ಏ. 2 ರಂದು ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ : ತೆಲುಗಿನಲ್ಲಿ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ ಲಾಲ್

    ಏ. 2 ರಂದು ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ : ತೆಲುಗಿನಲ್ಲಿ ಚಿರಂಜೀವಿ, ಮಲಯಾಳಂನಲ್ಲಿ ಮೋಹನ್ ಲಾಲ್

    ಕಿಚ್ಚ ಸುದೀಪ್ ಅಭಿನಯದ ಕನ್ನಡದ ಮತ್ತೊಂದು ಮೆಗಾ ಪ್ಯಾನ್ ಇಂಡಿಯಾ ಚಿತ್ರ ‘ವಿಕ್ರಾಂತ್ ರೋಣ’ದ ಟೀಸರ್ ಬಿಡುಗಡೆ ಯುಗಾದಿ ಹಬ್ಬದಂದು ಬಿಡುಗಡೆ ಆಗುತ್ತಿದೆ. ಏಪ್ರಿಲ್ 2 ರಂದು ಬೆಳಗ್ಗೆ 9.55ಕ್ಕೆ ಹಲವು ಭಾಷೆಗಳಲ್ಲಿ ಈ ಟೀಸರ್ ಬಿಡುಗಡೆ ಆಗುತ್ತಿದ್ದು, ಆಯಾ ಭಾಷೆಗಳ ಹೆಸರಾಂತ ನಟರು ಈ ಟೀಸರ್ ಅನ್ನು ರಿಲೀಸ್ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ : ಏಪ್ರಿಲ್ 2ಕ್ಕೆ ಗಣೇಶ್ ನಟನೆಯ ಹೊಸ ಸಿನಿಮಾದ ಟೈಟಲ್ ಲಾಂಚ್

    ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಸಿನಿಮಾ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್ ನಲ್ಲೂ ಈ ಚಿತ್ರವನ್ನು ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ಮಾಪಕ ಜಾಕ್ ಮಂಜು. ಅದಕ್ಕೂ ಮುನ್ನ ಟೀಸರ್ , ಹಾಡುಗಳನ್ನು ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ. ಪ್ರಿ ರಿಲೀಸ್ ಇವೆಂಟ್ ಕೂಡ ಆಯೋಜನೆ ಮಾಡುವ ಉದ್ದೇಶವೂ ಇದೆ. ಇದನ್ನೂ ಓದಿ : ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಏ.2 ರಂದು ರಿಲೀಸ್ ಆಗಲಿರುವ ಟೀಸರ್ ಅನ್ನು ಮಲಯಾಳಂ ಭಾಷೆಯಲ್ಲಿ ಖ್ಯಾತ ನಟ ಮೋಹನ್ ಲಾಲ್ ರಿಲೀಸ್ ಮಾಡುತ್ತಿದ್ದಾರೆ. ಮೋಹನ್ ಲಾಲ್ ಕಿಚ್ಚ ಸುದೀಪ್ ಅವರ ಜತೆ ನಟಿಸದೇ ಇದ್ದರೂ, ಸುದೀಪ್ ಅವರ ಮೇಲೆ ಅವರಿಗೆ ಅಪಾರ ಗೌರವ. ಅಲ್ಲದೇ ಕನ್ನಡದಲ್ಲಿ ಅವರು ಪುನೀತ್ ಅವರ ಜತೆ ನಟಿಸಿದ್ದಾರೆ. ಕಿಚ್ಚನಿಗೂ ಮತ್ತು ಪುನೀತ್ ಅವರಿಗೂ ಇದ್ದ ಬಾಂಧವ್ಯದ ಅರಿವು ಅವರಿಗಿದೆ. ಹೀಗಾಗಿ ಟೀಸರ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ:  ‘ಕೆಜಿಎಫ್ 2’ ರಿಲೀಸ್ ದಿನವೇ ಪುನೀತ್ ‘ಜೇಮ್ಸ್’ ಸಿನಿಮಾ ಓಟಿಟಿಯಲ್ಲಿ ರಿಲೀಸ್

    ಮಲಯಾಳಂನಲ್ಲಿ ಮೋಹನ್ ಲಾಲ್ ಬಿಡುಗಡೆ ಮಾಡುತ್ತಿದ್ದರೆ, ತೆಲುಗಿನಲ್ಲಿ ಮೆಗಾಸ್ಟಾರ್ ಚಿರಂಜೀವಿ ಟೀಸರ್ ಅನ್ನು ರಿಲೀಸ್ ಮಾಡು‍ತ್ತಿದ್ದಾರೆ. ಚಿರಂಜೀವಿ ಜತೆ ಕಿಚ್ಚನಿಗೆ ಒಳ್ಳೆಯ ಬಾಂಧವ್ಯವಿದೆ. ಅಲ್ಲದೇ ಒಟ್ಟಿಗೆ ಕೆಲಸ ಕೂಡ ಮಾಡಿದ್ದಾರೆ. ತೆಲುಗಿನಲ್ಲಿ ಕಿಚ್ಚನಿಗೆ ಉತ್ತಮ ಕಾಂಟ್ಯಾಕ್ಟ್ ಕೂಡ ಇದೆ. ಅಲ್ಲಿ ಕಿಚ್ಚನ ಅಪಾರ ಅಭಿಮಾನಿ ಬಳಗವನ್ನೂ ಹೊಂದಿದ್ದಾರೆ. ಇದನ್ನೂ ಓದಿ: ಆರ್.ಆರ್.ಆರ್ ನಿಖರ ಗಳಿಕೆ 611 ರೂ.ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ಉಳಿದಂತೆ ತಮಿಳು ಮತ್ತು ಹಿಂದಿಯ ಟೀಸರ್ ಅನ್ನು ಅಲ್ಲಿನ ಹೆಸರಾಂತ ಕಲಾವಿದರೇ ಬಿಡುಗಡೆ ಮಾಡುತ್ತಿದ್ದು, ಗಂಟೆಗೊಂದು ಈ ವಿಷಯವನ್ನು ಅಪ್ ಡೇಟ್ ಮಾಡುತ್ತಿದ್ದಾರೆ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ.

  • ನೆಚ್ಚಿನ ನಟನನ್ನು ಮಾತಾಡಿಸುತ್ತಾ ವೀಡಿಯೋ ಕಾಲ್‍ನಲ್ಲೇ ಗಳಗಳನೇ ಅತ್ತ ವೃದ್ಧೆ!

    ನೆಚ್ಚಿನ ನಟನನ್ನು ಮಾತಾಡಿಸುತ್ತಾ ವೀಡಿಯೋ ಕಾಲ್‍ನಲ್ಲೇ ಗಳಗಳನೇ ಅತ್ತ ವೃದ್ಧೆ!

    – ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್
    – ಅಜ್ಜಿಯ ವೀಡಿಯೋ ನೋಡಿ ನೆಟ್ಟಿಗರೂ ಕಣ್ಣೀರು

    ಹೈದರಾಬಾದ್: ವೃದ್ಧೆ ಅಭಿಮಾನಿಯೊಬ್ಬರ ಆಸೆಯನ್ನು ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಈಡೇರಿಸಿದ್ದಾರೆ. ಈ ಮೂಲಕ ಅಭಿಮಾನಿಯ ಮೊಗದಲ್ಲಿ ಸಂತಸ ಮೂಡಿಸಿದ್ದಾರೆ.

    ರುಕ್ಮಿಣಿ ಮಾಮಿಯವರು ಮೋಹನ್ ಲಾಲ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರನ್ನು ನೋಡುವ ಬಯಕೆಯನ್ನು ವೀಡಿಯೋ ಮೂಲಕ ಹೊರಹಾಕಿದ್ದರು. ಈ ಅಜ್ಜಿಯ ವೀಡಿಯೋವನ್ನು ಅಭಿಮಾನಿಗಳು ನಟನಿಗೆ ತಲುಪಿಸಿದ್ದಾರೆ. ಈ ಹೃದಯ ಸ್ಪರ್ಶಿ ವೀಡಿಯೋ ನೋಡಿದ ನಟ ಮೋಹನ್‌ ಲಾಲ್‌, ರುಕ್ಮಿಣಿ ಮಾಮಿಯವರಿಗೆ ವೀಡಿಯೋ ಕಾಲ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ: ನೀರಜ್ ಚೋಪ್ರಾ ಬ್ರ್ಯಾಂಡ್‍ನ ಜೆರ್ಸಿ ನೀರಿನ ಬಾಟಲಿ ಮಾರುಕಟ್ಟೆಗೆ

    https://twitter.com/MohanlalMFC/status/1439976831768150016

    ರುಕ್ಮಿಣಿ ಮಾಮಿ ಮೂಲತಃ ಕೇರಳ ತ್ರಿಶೂರಿನ ಪುಂಕನ್ನಂಲ್ಲಿರುವ ಅನಾಥಾಶ್ರಮದಲ್ಲಿ ನೆಲೆಸಿದ್ದಾರೆ. ದೇವಸ್ಥಾನದ ಅರ್ಚಕರಾಗಿದ್ದ ಆಕೆಯ ಪತಿ ಕೆಲ ವರ್ಷಗಳ ಹಿಂದೆ ತೀರಿಕೊಂಡಿದ್ದರು. ಸದಾ ಮೋಹನ್ ಲಾಲ್ ಬಗ್ಗೆ ಮಾತನಾಡುತ್ತಿದ್ದ ಆಕೆಯನ್ನು ಜೊತೆಗಿದ್ದವರು ಚುಡಾಯಿಸುತ್ತಿದ್ದರು. ಇದರ ಬಗ್ಗೆ ಅಳಲು ತೋಡಿಕೊಂಡಿರುವ ರುಕ್ಮಿಣಿ ಮಾಮಿಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನೂ ಓದಿ: ಐಪಿಎಲ್‍ನಲ್ಲಿ ವಾರ್ನರ್ ದಾಖಲೆ ಹಿಂದಿಕ್ಕಿದ ಕನ್ನಡಿಗ ಕೆ.ಎಲ್ ರಾಹುಲ್

    ಇದನ್ನು ಅರಿತ ನಟ ಮೋಹನ್ ಲಾಲ್, ಅಜ್ಜಿಯ ಜೊತೆ ವೀಡಿಯೋ ಕಾಲ್‍ನಲ್ಲಿ ಮಾತನಾಡಿ ಸಂತಸ ಮೂಡಿಸಿದ್ದಾರೆ. ಅಲ್ಲದೆ ಕೋವಿಡ್ ಕಡಿಮೆಯಾದ ನಂತರ ಅಜ್ಜಿಯನ್ನು ಭೇಟಿಯಾಗುವ ಭರವಸೆಯನ್ನು ಕೂಡ ನೀಡಿದ್ದಾರೆ. ಸದ್ಯ ಹೈದರಾಬಾದ್‍ನಲ್ಲಿ ಸಿನಿಮಾ ಶೂಟಿಂಗ್‍ನಲ್ಲಿ ಬ್ಯುಸಿಯಾಗಿರುವ ನಟ ಮೋಹನ್ ಲಾಲ್, ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

  • ಮಲೆಯಾಳಂ ಬಿಗ್‍ಬಾಸ್ ಶೂಟಿಂಗ್ ಸೆಟ್‍ಗೆ ಬೀಗ ಜಡಿದ ಪೊಲೀಸರು

    ಮಲೆಯಾಳಂ ಬಿಗ್‍ಬಾಸ್ ಶೂಟಿಂಗ್ ಸೆಟ್‍ಗೆ ಬೀಗ ಜಡಿದ ಪೊಲೀಸರು

    ಚೆನ್ನೈ: ಕೊರೊನಾ ಲಾಕ್‍ಡೌನ್ ನಡುವೆ ನಡೆಯುತ್ತಿದ್ದ ಮಲೆಯಾಳಂನ ಬಿಗ್‍ಬಾಸ್ ಶೋನ ಶೂಟಿಂಗ್ ಸೆಟ್‍ಗೆ ದಾಳಿ ಮಾಡಿದ ಪೊಲೀಸರು ಬೀಗ ಜಡಿದಿದ್ದಾರೆ.

    ಕೊರೊನಾ ಎರಡನೇ ಅಲೆಯಿಂದಾಗಿ ದೇಶದಲ್ಲಿ ಚಲಚಚಿತ್ರ ಮತ್ತು ಧಾರವಾಹಿಗಳ ಚಿತ್ರೀಕರಣಕ್ಕೆ ನಿಷೇಧವಿದೆ. ಆದರೆ ಮಲೆಯಾಳಂನ ಬಿಗ್‍ಬಾಸ್ ಶೋದ ಚಿತ್ರೀಕರ ಚೆನ್ನೈನ ಇವಿಪಿ ಫಿಲಂ ಸಿಟಿ ಚೆಂಬರಂಕ್ಕಂನಲ್ಲಿ ನಡೆಯುತ್ತಿತ್ತು. ಹಾಗಾಗಿ ಇಲ್ಲಿಗೆ ದಾಳಿ ಮಾಡಿದ ಕಂದಾಯ ವಿಭಾಗೀಯ ಅಧಿಕಾರಿ ತಿರುವಳ್ಳೂರು, ಪ್ರೀತಿ ಪಾರ್ಕವಿ ನೇತೃತ್ವದ ತಂಡ ಶೂಟಿಂಗ್ ಸೆಟ್‍ನಲ್ಲಿದ್ದವರನೆಲ್ಲ ಹೊರಹಾಕಿ ಸೆಟ್‍ಗೆ ಬೀಗ ಹಾಕಿದ್ದಾರೆ. ಕೆಲ ಮಾಹಿತಿಗಳ ಪ್ರಕಾರ ಶೂಟಿಂಗ್ ಸೆಟ್‍ನಲ್ಲಿದ್ದ 8 ಜನ ಕೆಲಸಗಾರರಿಗೆ ಕೊರೊನಾ ಪಾಸಿಟಿವ್ ಆಗಿತ್ತು ಎಂದು ವರದಿಯಾಗಿದೆ.

    ತಮಿಳುನಾಡು ವಿಪತ್ತು ನಿರ್ವಹಣೆ ಕಾಯ್ದೆ ಮತ್ತು ಸರ್ಕಾರದ ನಿಯಮ ಉಲ್ಲಂಘಣೆ ಆಧಾರದಲ್ಲಿ ಕೇಸ್ ಕೂಡ ದಾಖಲಾಗಿದೆ. ಮೂಲಗಳ ಪ್ರಕಾರ ಬಿಗ್‍ಬಾಸ್ ಮಲೆಯಾಳಂ ಶೋನಲ್ಲಿ ಒಟ್ಟು 14 ಜನ ಸ್ಪರ್ಧಿಗಳಿದ್ದರು ಮತ್ತು ಖ್ಯಾತ ನಟ ಮೋಹನ್‍ಲಾಲ್ ಶೋವನ್ನು ನಡೆಸಿಕೊಡುತ್ತಿದ್ದರು.