Tag: Mohit Sharma

  • ಹೈದರಾಬಾದ್‌ ಪಾಲಿಗೆ ಕಿಲ್ಲರ್‌ ಆದ ಮಿಲ್ಲರ್‌ – ಗುಜರಾತ್‌ ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    ಹೈದರಾಬಾದ್‌ ಪಾಲಿಗೆ ಕಿಲ್ಲರ್‌ ಆದ ಮಿಲ್ಲರ್‌ – ಗುಜರಾತ್‌ ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    – ಮಿಂಚಿದ ಮಿಲ್ಲರ್‌, ಮೋಹಿತ್‌ ಶರ್ಮಾ – ಗಿಲ್‌ ನಾಯಕತ್ವದಲ್ಲಿ 2ನೇ ಜಯ

    ಅಹಮದಾಬಾದ್‌: ಡೇವಿಡ್‌ ಮಿಲ್ಲರ್‌, ಸಾಯಿ ಸುದರ್ಶನ್‌ ಹಾಗೂ ಶುಭಮನ್‌ ಗಿಲ್‌ (Shubman Gill) ಸಂಘಟಿತ ಬ್ಯಾಟಿಂಗ್‌ ಹಾಗೂ ಮೋಹಿತ್‌ ಶರ್ಮಾ ಬೌಲಿಂಗ್‌ ದಾಳಿ ನೆರವಿನಿಂದ ಗುಜರಾತ್‌ ಟೈಟಾನ್ಸ್‌ ತಂಡವು ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳಲ್ಲಿ 2ನೇ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 162 ರನ್‌ ಗಳಿಸಿತ್ತು. 163 ರನ್‌ಗಳ ಗುರಿ ಬೆನ್ನತ್ತಿದ ಟೈಟಾನ್ಸ್‌ (Gujarat Titans) ಪಡೆ 19.1 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿ ಗೆಲುವು ಸಾಧಿಸಿತು. ಸ್ಫೋಟಕ ಬ್ಯಾಟರ್‌ ಡೇವಿಡ್‌ ಮಿಲ್ಲರ್‌ ಕೊನೇ ಓವರ್‌ ಮೊದಲ ಎಸೆತದಲ್ಲೇ ಅದ್ಧೂರಿ ಸಿಕ್ಸರ್‌ ಬಾರಿಸುವ ಮೂಲಕ ಗೆಲುವಿನ ಕೇಕೆ ಹಾಕಿದರು.

    ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್​ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಕಳೆದ ಪಂದ್ಯದಲ್ಲಿ ಮುಂವೈ ವಿರುದ್ಧ ದಾಖಲೆಯ 277 ರನ್​ ಬಾರಿಸಿದ್ದ ಎಸ್​ಆರ್​ಎಚ್ ಈ ಪಂದ್ಯದಲ್ಲಿ ಆರಂಭದಿಂದಲೇ ವಿಕೆಟ್​ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಯಾಂಕ್ ಅಗರ್ವಾಲ್​ 16 ರನ್​ಗೆ ಔಟಾದರೆ, ಟ್ರಾವಿಸ್​ ಹೆಡ್​ 19 ರನ್​ಗೆ ಬೌಲ್ಡ್ ಆದರು. ಅಭಿಷೇಕ್ ಶರ್ಮಾ 29 ರನ್, ಏಡೆನ್​ ಮಾರ್ಕ್ರಮ್​ 17 ರನ್​ಗೆ ಸೀಮಿತಗೊಂಡರು. ಹೆನ್ರಿಚ್ ಕ್ಲಾಸೆನ್​ 24 ಹಾಗೂ ಶಾಬಾಜ್‌ ಅಹಮದ್​ 22 ರನ್ ಬಾರಿಸಿದರು. ಕೊನೆಯಲ್ಲಿ ಅಬ್ದುಲ್​ ಸಮದ್ 29 ರನ್ ಬಾರಿಸುವ ಮೂಲಕ ಸ್ಪರ್ಧಾತ್ಮಕ ಗುರಿ ನೀಡುವಲ್ಲಿ ತಂಡಕ್ಕೆ ನೆರವಾದರು.

    ಗುಜರಾತ್‌ಗೆ ಸುಲಭ ತುತ್ತಾದ ಹೈದರಾಬಾದ್‌:
    ಸ್ಪರ್ಧಾತ್ಮಕ ಗುರಿ ಎದುರಿಸಲು ಕಣಕ್ಕಿಳಿದ ಗುಜರಾತ್​ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 36 ರನ್ ಬಾರಿಸಿತು. ವೃದ್ಧಿಮಾನ್​ ಸಾಹ 25 ರನ್ ಬಾರಿಸಿದರೆ ನಾಯಕ ಶುಭ್​ಮನ್​ ಗಿಲ್​ 36 ರನ್​ ಕೊಡುಗೆ ನೀಡಿದರು. 3ನೇ ಕ್ರಮಾಂಕದಲ್ಲಿ ಆಡಿದ ಸಾಯಿ ಸುದರ್ಶನ್​ 45 ರನ್ ಬಾರಿಸಿದರೆ ಡೇವಿಡ್ ಮಿಲ್ಲರ್​ ಅಜೇಯ 44 ರನ್​ ಬಾರಿಸುವ ಮೂಲಕ ಸುಲಭ ಗೆಲುವು ತಂದುಕೊಟ್ಟರು. ವಿಜಯ್ ಶಂಕರ್​ 14 ರನ್​ ಬಾರಿಸಿ ಕ್ರೀಸ್‌ನಲ್ಲಿ ಉಳಿದರು.

  • ಕೊನೆಯಲ್ಲಿ ಜಡೇಜಾ ಸಿಕ್ಸರ್‌, ಬೌಂಡರಿ – ಆ ರಾತ್ರಿ ನನಗೆ ನಿದ್ರೆಯೇ ಬರಲಿಲ್ಲ: ಮೋಹಿತ್‌ ಶರ್ಮಾ

    ಕೊನೆಯಲ್ಲಿ ಜಡೇಜಾ ಸಿಕ್ಸರ್‌, ಬೌಂಡರಿ – ಆ ರಾತ್ರಿ ನನಗೆ ನಿದ್ರೆಯೇ ಬರಲಿಲ್ಲ: ಮೋಹಿತ್‌ ಶರ್ಮಾ

    ಅಹಮದಾಬಾದ್‌: 16ನೇ ಆವೃತ್ತಿಯ ಐಪಿಎಲ್‌ (IPL 2023) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ (CSK) 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಚೊಚ್ಚಲ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿದ್ದ ಗುಜರಾತ್‌ ಟೈಟಾನ್ಸ್‌ (GT) 2ನೇ ಆವೃತ್ತಿಯಲ್ಲಿ ರನ್ನರ್‌ ಅಪ್‌ ಪ್ರಶಸ್ತಿ ಪಡೆದುಕೊಂಡಿದೆ. ಐಪಿಎಲ್‌ ಮುಗಿದು 3 ದಿನ ಕಳೆದರೂ ಕೊನೇ ಕ್ಷಣದಲ್ಲಿ ತಂಡದಲ್ಲಿ ಆದ ಕೆಲವೊಂದು ಬದಲಾವಣೆಗಳು ಇನ್ನೂ ಚರ್ಚೆಯಲ್ಲಿವೆ. ದಿನಕ್ಕೊಂದು ಹೊಸ ಹೇಳಿಕೆಗಳು ಕೇಳಿಬರುತ್ತಿವೆ.

    ಹೌದು.. ಮಳೆಕಾಟದಿಂದಾಗಿ ಡಕ್ವರ್ತ್‌ ಲೂಯಿಸ್‌ (DSL) ನಿಯಮದನ್ವಯ ಸಿಎಸ್‌ಕೆ ಫೈನಲ್‌ ಪಂದ್ಯದಲ್ಲಿ ಟೈಟಾನ್ಸ್‌ ವಿರುದ್ಧ 15 ಓವರ್‌ಗಳಲ್ಲಿ 171 ರನ್‌ ಟಾರ್ಗೆಟ್‌ ಪಡೆಯಿತು. ಕೊನೆಯ ಓವರ್‌ನಲ್ಲಿ ಚೆನ್ನೈ ಗೆಲುವಿಗೆ 13 ರನ್‌ಗಳ ಅಗತ್ಯವಿತ್ತು. ಬೌಲಿಂಗ್‌ನಲ್ಲಿದ್ದ ಮೋಹಿತ್‌ ಶರ್ಮಾ ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ ನೀಡಿದ್ದರು. ಆದ್ರೆ ಕೊನೆಯ 2 ಎಸೆತಗಳಲ್ಲಿ ರವೀಂದ್ರ ಜಡೇಜಾ ಅವರಿಂದ ಸಿಕ್ಸರ್‌, ಬೌಂಡರಿ ಚಚ್ಚಿಸಿಕೊಂಡರು. ಇದರಿಂದಾಗಿ ಗುಜರಾತ್‌ ಟೈಟಾನ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

    ಸಿಎಸ್‌ಕೆ ವಿರುದ್ಧ ಫೈನಲ್​​​​ ಓವರ್​​ನಲ್ಲಿ ತಾನು ಹಾಕಿಕೊಂಡಿದ್ದ ಗೇಮ್​ ಪ್ಲ್ಯಾನ್‌ ಬಗ್ಗೆ ಗುಜರಾತ್‌ ಟೈಟಾನ್ಸ್‌ ಆಟಗಾರ ಮೋಹಿತ್‌ ಶರ್ಮಾ ಮಾತನಾಡಿದ್ದು, ಆ ದಿನ ಇಡೀ ರಾತ್ರಿ ನಾನು ಏನ್‌ ಮಾಡ್ಬೇಕು ಅಂತಾ ಯೋಚಿಸುತ್ತಲೇ ಇದ್ದೆ, ನಿದ್ರೆ ಮಾಡೋಕೆ ಆಗ್ತಿಲ್ಲಾ ಅಂತಾ ಹೇಳಿದ್ದಾರೆ. ಇದನ್ನೂ ಓದಿ: IPL Champions 2023: ಕೊನೆಯಲ್ಲಿ ಜಡೇಜಾ ಜಾದು, 5ನೇ ಬಾರಿಗೆ ಚೆನ್ನೈಗೆ ಚಾಂಪಿಯನ್‌ ಕಿರೀಟ

    ಅಂತಿಮ ಓವರ್​ನಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ ನನಗೆ ಗೊಂದಲ ಇರಲಿಲ್ಲ. ನೆಟ್ಸ್​​​ನಲ್ಲೂ ಲೆಕ್ಕಾಚಾರ ಹಾಕಿಕೊಂಡು ಅಭ್ಯಾಸ ಮಾಡಿದ್ದೆ. ಈ ಹಿಂದೆಯೂ ಇಂತಹ ಒತ್ತಡಗಳಲ್ಲಿ ಬೌಲಿಂಗ್​ ಮಾಡಿದ ಅನುಭವ ನನಗಿತ್ತು. ನಾಯಕ ಹಾರ್ದಿಕ್​ ಪಾಂಡ್ಯಗೆ ಓವರ್​​​ನ ಎಲ್ಲಾ ಬಾಲ್​​ಗಳನ್ನೂ ಯಾರ್ಕರ್ ಹಾಕುತ್ತೇನೆ ಎಂದು ಹೇಳಿದ್ದೆ. ನನ್ನ ಬಲವಾದ ನಂಬಿಕೆಯಿಂದ ಬೌಲಿಂಗ್‌ ಮಾಡಿದ್ದೆ. ಆದರೂ ನನ್ನಿಂದ ಸೋಲಾಗಿದ್ದು, ಬೇಸರ ಉಂಟು ಮಾಡಿತು ಎಂದು ಹೇಳಿದ್ದಾರೆ.

    ಸೋತ ನಂತರ ನನಗೆ ಆ ರಾತ್ರಿ ನಿದ್ದೆ ಬರಲಿಲ್ಲ. ಸೋತಿದ್ದನ್ನೇ ಹೆಚ್ಚು ಯೋಚಿಸುತ್ತಿದ್ದೆ. ಕೊನೆಯಲ್ಲಿ ಆ ಎಸೆತ ಎಸೆದಿದ್ದರೆ ನಾವು ಗೆಲ್ಲುತ್ತಿದ್ದೆವಾ? ಹೀಗೆ ಮಾಡಿದ್ದರೆ, ಗೆಲ್ಲುತ್ತಿದ್ದೆವಾ? ಎಂಬುದನ್ನೇ ಹೆಚ್ಚು ಯೋಚಿಸುತ್ತಿದ್ದೆ. ಇದು ನಿಜವಾಗಿಯೂ ಒಳ್ಳೆಯ ಭಾವನೆ ಅಲ್ಲ. ಆದ್ರೆ ಎಲ್ಲೋ ಒಂದು ಕಡೆ ನನ್ನಿಂದಲೇ ಸೋತಿದ್ದು, ಎನಿಸುತ್ತಿದೆ. ಸದ್ಯ ಅದರಿಂದ ಹೊರ ಬರಲು ಪ್ರಯತ್ನಿಸುತ್ತಿದ್ದೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: Record… Record… Record: ಫೈನಲ್‌ ಮ್ಯಾಚ್‌ನಲ್ಲಿ ಎಲ್ಲಾ ದಾಖಲೆ ಉಡೀಸ್‌ – ಜಿಯೋಸಿನಿಮಾದಲ್ಲಿ ಏಕಕಾಲಕ್ಕೆ 3.2 ಕೋಟಿ ಜನ ವೀಕ್ಷಣೆ

    ಐಪಿಎಲ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೋಹಿತ್​ ಶರ್ಮಾ ಪರ್ಪಲ್​ ಕ್ಯಾಪ್​ ರೇಸ್​ನಲ್ಲಿದ್ದರು. 14 ಪಂದ್ಯಗಳಲ್ಲಿ 27 ವಿಕೆಟ್​ ಪಡೆದಿದ್ದರು. ಇದರೊಂದಿಗೆ 1 ವಿಕೆಟ್​ ಅಂತರದಿಂದ ಪರ್ಪಲ್​ ಕ್ಯಾಪ್​ನಿಂದ ವಂಚಿತರಾದರು. ಫೈನಲ್​ ಪಂದ್ಯದಲ್ಲೂ ಪ್ರಮುಖ 3 ವಿಕೆಟ್​ ಉರುಳಿಸಿ ಗಮನ ಸೆಳೆದಿದ್ದರು.

  • ಧೋನಿಯ ನಂಬಿಕಸ್ಥ ಬೌಲರ್, 2014ರ ಪರ್ಪಲ್ ಕ್ಯಾಪ್ ವಿನ್ನರ್ – ಇದೀಗ ನೆಟ್ ಬೌಲರ್!

    ಧೋನಿಯ ನಂಬಿಕಸ್ಥ ಬೌಲರ್, 2014ರ ಪರ್ಪಲ್ ಕ್ಯಾಪ್ ವಿನ್ನರ್ – ಇದೀಗ ನೆಟ್ ಬೌಲರ್!

    ಮುಂಬೈ: 2014ರ ಐಪಿಎಲ್‍ನಲ್ಲಿ ಪರ್ಪಲ್ ಕ್ಯಾಪ್ ವಿಜೇತ ಬೌಲರ್, ಐಪಿಎಲ್‍ನಲ್ಲಿ ಮಿಂಚಿ ಸ್ಟಾರ್ ಆಟಗಾರ ಎನಿಸಿಕೊಂಡಿದ್ದ ಮೋಹಿತ್ ಶರ್ಮಾ ಇದೀಗ ಗುಜರಾತ್ ಟೈಟಾನ್ಸ್‌ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದಾರೆ.

    ಐಪಿಎಲ್ ಅದೇಷ್ಟೋ ಪ್ರತಿಭಾವಂತ ಆಟಗಾರರನ್ನು ಭಾರತ ತಂಡಕ್ಕೆ ಪರಿಚಯಿಸಿದ ಕೀರ್ತಿ ಹೊಂದಿದೆ. ಕೆಲ ಆಟಗಾರರು ಪ್ರತಿಭೆಯನ್ನು ಸಮರ್ಥವಾಗಿ ಬಳಸಿಕೊಂಡು ಸ್ಟಾರ್ ಆಟಗಾರರಾಗಿ ಗುರುತಿಸಿಕೊಂಡರೆ, ಕೆಲ ಆಟಗಾರರು ಮಿಂಚಿ ಮರೆಯಾಗಿದ್ದಾರೆ. ಅಂತವರ ಸಾಲಿನಲ್ಲಿ ಇದೀಗ ಹರಿಯಾಣ ಮೂಲದ ವೇಗಿ ಮೋಹಿತ್ ಶರ್ಮಾ ಗುರುತಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಮೋಹಿತ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪೇಸ್ ಬೌಲಿಂಗ್ ದಾಳಿಯ ಮುಂಚೂಣಿಯಲ್ಲಿದ್ದರು. ಎಂಎಸ್ ಧೋನಿ ಗರಡಿಯಲ್ಲಿ ನಂಬಿಕಸ್ಥ ಬೌಲರ್ ಆಗಿದ್ದ ಮೋಹಿತ್ ಯಶಸ್ಸಿನ ತುತ್ತತುದಿಯಲ್ಲಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಪಿಚ್‍ಗೆ -1 ರೇಟಿಂಗ್ – ಐಸಿಸಿ ಅಸಮಾಧಾನ

    ಮೋಹಿತ್ ತನ್ನ ಸ್ಲೋವರ್ ಬೌಲಿಂಗ್‍ನಿಂದ ಬ್ಯಾಟ್ಸ್‌ಮ್ಯಾನ್‌ಗಳಿಗೆ ಕಂಟಕವಾಗಿದ್ದರು. ಐಪಿಎಲ್‍ನಲ್ಲಿ ಒಟ್ಟು 86 ಪಂದ್ಯಗಳಲ್ಲಿ 92 ವಿಕೆಟ್ ಪಡೆದಿದ್ದು, 2014ರ ಐಪಿಎಲ್‍ನಲ್ಲಿ ಸಿಎಸ್‍ಕೆ ಪರ ಒಟ್ಟು 16 ಪಂದ್ಯಗಳನ್ನು ಆಡಿದ ಮೋಹಿತ್ ಶರ್ಮಾ ಒಟ್ಟು 23 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದಿದ್ದಾರೆ. ಈ ಪ್ರದರ್ಶನದಿಂದಲೇ ಮೋಹಿತ್ ಶರ್ಮಾ 2014ರ ಟಿ20 ವಿಶ್ವಕಪ್ ಹಾಗೂ 2015ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತ ತಂಡದ ಪರ ಆಡಿದ್ದರು. ಇದನ್ನೂ ಓದಿ: 7 ನಂಬರ್ ಜೆರ್ಸಿ ಹಿಂದಿನ ಕಹಾನಿ ಬಿಚ್ಚಿಟ್ಟ ಧೋನಿ

    ಆದರೆ ದುರದೃಷ್ಟ ವೆಂಬಂತೆ ಸಿಎಸ್‍ಕೆ ತಂಡ ಐಪಿಎಲ್‍ನಿಂದ 2 ವರ್ಷ ನಿಷೇಧಕ್ಕೆ ಒಳಗಾದ ಬಳಿಕ ಮೋಹಿತ್ ಫಾರ್ಮ್ ಕೂಡ ಕೈಕೊಟ್ಟಿತು. ಆ ಬಳಿಕ ಮತ್ತೆ ಐಪಿಎಲ್‍ನಲ್ಲಿ ಕಾಣಿಸಿಕೊಂಡರು ಕೂಡ ಈ ಹಿಂದಿನ ಚಾರ್ಮ್ ಅವರಲ್ಲಿ ಕಾಣಸಿಗಲಿಲ್ಲ.

    ಮೋಹಿತ್ ಶರ್ಮಾ ನಂತರ ಪಂಜಾಬ್‍ಕಿಂಗ್ಸ್ ಮತ್ತು ಡೆಲ್ಲಿ ತಂಡದ ಪರ ಆಡಿದರು ಕೂಡ ಈ ಹಿಂದಿನ ರೀತಿಯ ಪ್ರದರ್ಶನಗಳನ್ನು ನೀಡಲು ಸಾಧ್ಯವಾಗಲಿಲ್ಲ. 2022ರ ಐಪಿಎಲ್ ಹರಾಜಿನಲ್ಲಿ ಮೋಹಿತ್ ಕಾಣಿಸಿಕೊಂಡಿದ್ದರು. ಆದರೆ ಅವರನ್ನು ಖರೀದಿಸಲು ಯಾವ ತಂಡ ಕೂಡ ಮುಂದೆ ಬಂದಿರಲಿಲ್ಲ. ಇದೀಗ ಮೋಹಿತ್ ಐಪಿಎಲ್‍ನ ನೂತನ ತಂಡ ಗುಜರಾತ್ ಸೂಪರ್ ಜೈಂಟ್ಸ್ ಪರ ನೆಟ್ ಬೌಲರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.