Tag: Money Doubling

  • ಸಾಂಸ್ಕೃತಿಕ ನಗರಿಯಲ್ಲಿ ಶೂಟೌಟ್ – ಮನಿ ಡಬ್ಲಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಓರ್ವ ಸಾವು

    ಸಾಂಸ್ಕೃತಿಕ ನಗರಿಯಲ್ಲಿ ಶೂಟೌಟ್ – ಮನಿ ಡಬ್ಲಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಓರ್ವ ಸಾವು

    ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರಿಂದ ಶೂಟೌಟ್ ನಡೆದಿದ್ದು, ಖಾಕಿ ಗುಂಡೇಟಿಗೆ ಓರ್ವ ಸಾವನ್ನಪ್ಪಿದ್ದಾನೆ.

    ನಗರದ ಹೆಬ್ಬಾಳ್ ರಿಂಗ್ ರಸ್ತೆ ಬಳಿಯ ಅಪಾರ್ಟ್‌ಮೆಂಟ್ ಮೇಲೆ ಮೈಸೂರಿನ ವಿಜಯನಗರ ಪೊಲೀಸರು ಶೂಟೌಟ್ ನಡೆಸಿದ್ದಾರೆ. ಬಾಂಬೆ ಮೂಲದ ವ್ಯಕ್ತಿಗಳು ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಆರೋಪಿಗಳನ್ನು ಸೆರೆಹಿಡಿಯಲು ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಫೈರಿಂಗ್‍ನಲ್ಲಿ ಓರ್ವ ದಂಧೆಕೋರ ಸಾವನ್ನಪ್ಪಿದ್ದು, ಇನ್ನಿತರರು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾರೆ.

    ಶೂಟೌಟ್ ಬಳಿಕ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಗನ್ ಸಮೇತ ನಾಪತ್ತೆಯಾಗಿದ್ದಾರೆ. ಆರೋಪಿಗಳ ಸೆರೆಗೆ ಪೊಲೀಸರು ಬಲೆ ಬೀಸಿದ್ದು, ಚೆಕ್ ಪೋಸ್ಟ್ ಗಳಲ್ಲಿ ಅಲರ್ಟ್ ಆಗಿರುವಂತೆ ಸಿಬ್ಬಂದಿಗೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನಿಸಲಾಗಿದೆ.

    ಸದ್ಯ ಸ್ಥಳಕ್ಕೆ ಮೈಸೂರು ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೀಗ ಕೆ.ಆರ್.ಆಸ್ಪತ್ರೆಗೆ ಮೃತದೇಹವನ್ನು ಪೊಲೀಸರು ಕೊಂಡೊಯ್ದಿದ್ದು, ಆಸ್ಪತ್ರೆ ಸುತ್ತಲು ಪೊಲೀಸರ ಸರ್ಪಗಾವಲು ಹಾಕಲಾಗಿದೆ.

  • 1 ಲಕ್ಷ ಕೊಟ್ಟರೆ 2ಲಕ್ಷ ಕೊಡ್ತೀವಿ- ಖತರ್ನಾಕ್ ಗ್ಯಾಂಗ್ ಅರೆಸ್ಟ್

    1 ಲಕ್ಷ ಕೊಟ್ಟರೆ 2ಲಕ್ಷ ಕೊಡ್ತೀವಿ- ಖತರ್ನಾಕ್ ಗ್ಯಾಂಗ್ ಅರೆಸ್ಟ್

    ಚಿಕ್ಕಬಳ್ಳಾಪುರ: ಒಂದು ಲಕ್ಷ ಕೊಟ್ಟರೆ ನಿಮಗೆ ಎರಡು ಲಕ್ಷ ಮಾಡಿಕೊಡುತ್ತೇವೆ ಎಂದು ನಂಬಿಸಿ ಜನರಿಗೆ ಪಂಗನಾಮ ಹಾಕುತ್ತಿದ್ದ ಖತರ್ನಾಕ್ ಮನಿ ಡಬ್ಲಿಂಗ್ ಗ್ಯಾಂಗನ್ನು ಬಂಧಿಸುವಲ್ಲಿ ಕೆಂಚಾರ್ಲಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಗಳನ್ನು ಮುರಗಮಲ್ಲ ಗ್ರಾಮದ ಕಾಂತಮ್ಮ, ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ದೇವರಕೊಂಡದ ಕೇಶವ, ಚಂದ್ರಶೇಖರ್, ಇಡಗುಟ್ಟ ಕೇಶವ ಮತ್ತು ಶಿಡ್ಲಘಟ್ಟದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 1 ಲಕ್ಷ 75 ಸಾವಿರ ನಗದನ್ನು ಜಪ್ತಿ ಮಾಡಲಾಗಿದೆ.

    ಮುರಗಮಲ್ಲ ಗ್ರಾಮದ ಭಾರ್ಗವೇಂದ್ರ ಎಂಬವರಿಗೆ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಹೇಳಿ 5 ಲಕ್ಷದ 50 ಸಾವಿರ ಹಣ ತೆಗೆದುಕೊಂಡು ಪಂಗನಾಮ ಹಾಕಿದ್ದರು. ಹೀಗಾಗಿ ವಂಚನೆಗೊಳಗಾದ ಭಾರ್ಗವೇಂದ್ರ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಕಾರ್ಯಾಚರಣೆಗಿಳಿದ ಪೊಲೀಸರು ಐವರು ಮನಿ ಡಬ್ಲಿಂಗ್ ದಂಧೆ ಮಾಡುತ್ತಿದ್ದವರನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ವಿಚಾರಣೆ ಮಾಡಿದಾಗ ಅವರು ಅಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ ಭಾಗಗಳಲ್ಲಿ ಇದೇ ರೀತಿಯ ಮನಿ ಡಬ್ಲಿಂಗ್ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.