Tag: Money Transfer

  • ಇನ್ಮುಂದೆ ನೆಟ್‌ ಇಲ್ಲದಿದ್ದರೂ ಹಣ ವರ್ಗಾವಣೆ ಮಾಡ್ಬೋದು – RBIನಿಂದ ಆಫ್‌ಲೈನ್‌ ಡಿಜಿ ರುಪಿ ಬಿಡುಗಡೆ

    ಇನ್ಮುಂದೆ ನೆಟ್‌ ಇಲ್ಲದಿದ್ದರೂ ಹಣ ವರ್ಗಾವಣೆ ಮಾಡ್ಬೋದು – RBIನಿಂದ ಆಫ್‌ಲೈನ್‌ ಡಿಜಿ ರುಪಿ ಬಿಡುಗಡೆ

    ಇತ್ತೀಚಿನ ದಿನಗಳಲ್ಲಿ ಮೊಬೈಲ್ ಅನ್ನೋದು ಎಷ್ಟು ಮುಖ್ಯವೋ ಅದೇ ರೀತಿ ಇಂಟರ್ನೆಟ್ ಎನ್ನುವುದು ಕೂಡ ತುಂಬಾ ಮುಖ್ಯ. ಪ್ರಸ್ತುತ ದಿನಗಳಲ್ಲಿ ಇಂಟರ್ನೆಟ್ ಇಲ್ಲದೇ ಎಲ್ಲವೂ ಅಸಾಧ್ಯ ಎನ್ನುವಂತಾಗಿದೆ. ಆನ್ಲೈನ್ ಆರ್ಡರ್ ಮಾಡುವುದು, ಹಣ ವರ್ಗಾವಣೆ, ಊಟ, ಕೆಲವು ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳು ಸೇರಿದಂತೆ    ಇನ್ನಿತರವುಗಳನ್ನು ನಾವು ಇಂಟರ್ನೆಟ್ ಮೂಲಕ ಮಾಡುತ್ತೇವೆ. ಅದರಲ್ಲಿ ಮುಖ್ಯವಾಗಿ ಹಣ ವರ್ಗಾವಣೆ. ಆದರೆ ಇದೀಗ ಆರ್‌ಬಿಐ ಇಂಟರ್ನೆಟ್ ಇಲ್ಲದೆ ಹಣ ವರ್ಗಾವಣೆ ಮಾಡುವ ಡಿಜಿ ರುಪಿ  ಎಂಬ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಏನಿದು? ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. 

    ಇಂಟರ್ನೆಟ್ ಇಲ್ಲದೆ ಡಿಜಿ ರೂಪಾಯಿ ಹಣ ವರ್ಗಾವಣೆ ಮಾಡಲು ಸಹಾಯ ಮಾಡುತ್ತದೆ. ಇಂಟರ್ನೆಟ್ ಅಥವಾ ದೂರವಾಣಿ ಸಂಪರ್ಕ ಇಲ್ಲದ ಪ್ರದೇಶದಲ್ಲಿ ಈ ಡಿಜಿ ರೂಪಾಯಿ ಹಣ ವರ್ಗಾವಣೆ ಮಾಡಲು ಸಹಾಯಮಾಡುತ್ತದೆ. ಇಂತಹ ಒಂದು ವ್ಯವಸ್ಥೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಪರಿಚಯಿಸಿದೆ. ಇದು ದೇಶದ ಡಿಜಿಟಲ್ ಹಣಕಾಸು ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲಾಗಿದೆ. 

    ಇತ್ತೀಚಿಗೆ ಮುಂಬೈನಲ್ಲಿ ನಡೆದ ಫಿನ್ಟೆಕ್ ಫೆಸ್ಟ್ 2025 ರಲ್ಲಿ ಈ ಡಿಜಿ ರುಪಾಯಿ ವ್ಯವಸ್ಥೆಯನ್ನು ಘೋಷಿಸಲಾಯಿತು. ಮೂಲಕ ಭಾರತ ಹಾಗೂ ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಇದು ಹೊಂದಿದೆ.

    ಏನಿದು ಡಿಜಿ ರೂಪಾಯಿ?

    ಡಿಜಿ ರೂಪಾಯಿ ಎನ್ನುವುದು ಭಾರತೀಯ ರಿಸರ್ವ್ ಬ್ಯಾಂಕಿನ ಕರೆನ್ಸಿ ಆಗಿದೆ. ಭೌತಿಕ ಹಣದ ಡಿಜಿಟಲ್ ರೂಪ ಇದಾಗಿದೆ. ಈ ಡಿಜಿಟಲ್ ರೂಪಾಯಿಯನ್ನು ಆರ್‌ಬಿಐ ಬಿಡುಗಡೆ ಮಾಡಿದ್ದು, ಭೌತಿಕ ಹಣಕ್ಕೆ ಇರುವ ಮೌಲ್ಯ ಈ ಡಿಜಿಟಲ್ ರೂಪಾಯಿಗೆ ಇರಲಿದೆ. ಈ ಹಣ ಬ್ಯಾಂಕುಗಳ ವ್ಯಾಲೆಟ್ ನಲ್ಲಿ ಇರಲಿದೆ. ಯುಪಿಐ ವ್ಯವಸ್ಥೆಯಲ್ಲಿ ಬ್ಯಾಂಕಿನಿಂದ ಬ್ಯಾಂಕಿಗೆ ಹಣ ವರ್ಗಾವಣೆಯಾಗುತ್ತದೆ. ಆದರೆ ಡಿಜಿಟಲ್ ರೂಪಾಯಿ ಮೂಲಕ ಹಣ ವರ್ಗಾವಣೆ ಮಾಡುವಾಗ ಬ್ಯಾಂಕ್ ಖಾತೆಯ ಅಗತ್ಯವಿರುವುದಿಲ್ಲ. ಇದು ಯುಪಿಐ ಕಾರ್ಯನಿರ್ವಹಿಸುವ ವಿಧಾನಕ್ಕಿಂತ ವಿಭಿನ್ನವಾಗಿ ಕೆಲಸ ನಿರ್ವಹಿಸುತ್ತದೆ. ಡಿಜಿಟಲ್ ರೂಪಾಯಿ  ಇರುವ ವ್ಯಾಲೆಟ್ ಗಳು ಯುಪಿಐ ಶುಗರ್ ಗಳನ್ನ ಸ್ಕ್ಯಾನ್ ಮಾಡಿ ಕೆಲಸ ನಿರ್ವಹಿಸುತ್ತದೆ.

    ಡಿಜಿಟಲ್ ರೂಪಾಯಿ ಹೇಗೆ ಕಾರ್ಯನಿರ್ವಹಿಸುತ್ತದೆ?

    ಈ ಡಿಜಿಟಲ್ ರೂಪಾಯಿಯು ಟೆಲಿಕಾಂ ನೆರವಿನ ಆಫ್ಲೈನ್ ಪೇಮೆಂಟ್ ಮತ್ತು NFC (Near Field communication) ಆಧಾರಿತ ಪೇಮೆಂಟ್ ವ್ಯವಸ್ಥೆ ಮೂಲಕ ಕಾರ್ಯನಿರ್ವಹಿಸುತ್ತದೆ. ಟೆಲಿಕಾಂ ನೆರವಿನ ಪೇಮೆಂಟ್ ವ್ಯವಸ್ಥೆಗೆ ಕನಿಷ್ಠ ನೆಟ್ವರ್ಕ್ ಸಿಗ್ನಲ್ ಇದ್ದರೆ ಕಾರ್ಯನಿರ್ವಹಿಸುತ್ತದೆ. ಎನ್ ಎಫ್ ಸಿ ವ್ಯವಸ್ಥೆಯು ಇಂಟರ್ನೆಟ್ ಹಾಗೂ ಟೆಲಿಕಾಂ ಸಿಗ್ನಲ್ ಇಲ್ಲದೆಯೂ ಕಾರ್ಯನಿರ್ವಹಿಸುತ್ತದೆ. 

    ಇದನ್ನ ಬಳಸೋದು ಹೇಗೆ? 

    ಹಣ ವರ್ಗಾಯಿಸುವವರು ತಮ್ಮ ಮೊಬೈಲನ್ನು ಟ್ಯಾಪ್ ಮಾಡುವ ಮೂಲಕ ಹಣ ವರ್ಗಾವಣೆಯಾಗುತ್ತದೆ. ಈ ಮೂಲಕ ಹಣ ಯುಪಿಐ ರೀತಿ ವ್ಯಕ್ತಿಯಿಂದ ವ್ಯಾಪಾರಗಳಿಗೆ ಹಣ ವರ್ಗಾವಣೆ ಆಗುತ್ತದೆ. 

    ಸದ್ಯ ಡಿಜಿಟಲ್ ರೂಪಾಯಿ ವ್ಯಾಲೆಟ್ ನೀಡುತ್ತಿರುವ ಬ್ಯಾಂಕುಗಳು: 

    1. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 
    2. ಐಸಿಐಸಿಐ ಬ್ಯಾಂಕ್ 
    3. ಐಡಿಎಫ್‍ಸಿ ಫಸ್ಟ್ ಬ್ಯಾಂಕ್ 
    4. ಯೆಸ್ ಬ್ಯಾಂಕ್ 
    5. ಎಚ್ ಡಿ ಎಫ್ ಸಿ ಬ್ಯಾಂಕ್ 
    6. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 
    7. ಬ್ಯಾಂಕ್ ಆಫ್ ಬರೋಡಾ 
    8. ಕೋಟಕ್ ಮಹೀಂದ್ರಾ ಬ್ಯಾಂಕ್ 
    9. ಕೆನರಾ ಬ್ಯಾಂಕ್ 
    10. ಆಕ್ಸಿಸ್ ಬ್ಯಾಂಕ್ 
    11. ಇಂಡಸ್ ಇಂಡ್ ಬ್ಯಾಂಕ್ 
    12. ಪಂಜಾಬ್ ನ್ಯಾಷನಲ್ ಬ್ಯಾಂಕ್ 
    13. ಫೆಡರಲ್ ಬ್ಯಾಂಕ್ 
    14. ಕರ್ನಾಟಕ ಬ್ಯಾಂಕ್ 
    15. ಇಂಡಿಯನ್ ಬ್ಯಾಂಕ್ 

    ಡಿಜಿಟಲ್ ರೂಪಾಯಿ ವ್ಯಾಲೆಟ್ ನೀಡುತ್ತಿರುವ ಬ್ಯಾಂಕುಗಳ ಹೆಸರುಗಳೊಂದಿಗೆ ಆಪ್ ಗಳು ಲಭ್ಯವಿದ್ದು, ಬಳಕೆದಾರರು ಈ ಅಪ್ಲಿಕೇಶನ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ಹಾಗೂ ಆಪಲ್ ಆಪ್ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಬಳಿಕ ಡಿಜಿಟಲ್ ರೂಪಾಯಿ ಮೂಲಕ ಹಣ ವರ್ಗಾಯಿಸುವವರು ಆಪ್ ಮೂಲಕ ವ್ಯಾಲೆಟ್ ಗಳನ್ನು ಬಳಸಬಹುದು. ಕನಿಷ್ಠ ಬ್ಯಾಲೆನ್ಸ್, ಬ್ಯಾಲೆನ್ಸ್ಗಳ ಮೇಲೆ ಪಾವತಿಸಬೇಕಾದ ಬಡ್ಡಿ ಹಾಗೂ ಮೊಬೈಲ್ ಕಳೆದುಹೋದರೂ ಕೂಡ ಈ ಬ್ಯಾಲೆಟ್ ಗಳನ್ನು ಮರಳಿ ಪಡೆಯಬಹುದು.

    ಪ್ರಯೋಜನಗಳೇನು? 

    ಈ ಡಿಜಿಟಲ್ ರುಪಾಯಿ ಮೂಲಕ ನೆಟ್ವರ್ಕ್ ಸಮಸ್ಯೆಗಳಿಂದ ಆಗುವ ತೊಂದರೆಗಳನ್ನು ಕಡಿಮೆ ಮಾಡುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಅಥವಾ ಕಡಿಮೆ ನೆಟ್ವರ್ಕ್ ಇರುವ ಸಮಸ್ಯೆಗಳಲ್ಲಿ ಹಣ ವರ್ಗಾವಣೆಗೆ ಇದು ಸಹಾಯ ಮಾಡುತ್ತದೆ. ಸಂಪರ್ಕವಿಲ್ಲದಿದ್ದರೂ ಕೂಡ ಹಣ ವರ್ಗಾವಣೆ ಮಾಡಬಹುದು. ಇದು ದಿನನಿತ್ಯದ ಚಟುವಟಿಕೆಗಳಿಗೆ ಹೆಚ್ಚು ಅನುಕೂಲವಾಗಲಿದ್ದು, ವೈಯಕ್ತಿಕ ಹಣ ವರ್ಗಾವಣೆಯಿಂದ ಹಿಡಿದು ವ್ಯಾಪಾರ ವಹಿವಾಟುಗಳಿಗೂ ಇದನ್ನು ಬಳಸಬಹುದು.

  • Cyber Crimeː 4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!

    Cyber Crimeː 4 ವರ್ಷಗಳಲ್ಲಿ ರಾಜ್ಯಕ್ಕೆ 722 ಕೋಟಿ ನಷ್ಟ!

    ಬೆಂಗಳೂರು: ಆನ್‌ಲೈನ್ ವ್ಯವಹಾರ (Online Money Transfer) ಹೆಚ್ಚಿದಂತೆ ಸೈಬರ್ ವಂಚಕರ ಜಾಲ ಬೃಹತ್ತಾಗಿ ಬೆಳೆದಿದ್ದು, ನೇರವಾಗಿ ಗ್ರಾಹಕರ ಖಾತೆಗೆ ಕನ್ನ ಹಾಕುವ ಕೆಲಸ ನಡೆಯುತ್ತಿದೆ.

    ಹಾಗೆಯೇ 2019 ರಿಂದ 2023ರ ವರೆಗೆ ಸೈಬರ್ ಅಪರಾಧಗಳ (Cyber Crime) ಅಡಿಯಲ್ಲಿ ಬರೋಬ್ಬರಿ 722 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಾಖಲಾಗಿದ್ದು, 722 ಕೋಟಿ ರೂ. ನಷ್ಟವಾಗಿದೆ ಎಂಬ ಅಂಕಿ-ಅಂಶ ಇಲಾಖೆ ಬಿಡುಗಡೆ ಮಾಡಿದೆ. ಅದರಲ್ಲಿ ಸ್ವಲ್ಪ ಪ್ರಮಾಣದ ಹಣವನ್ನು ಪೊಲೀಸರು ಸಂಗ್ರಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

    ಅಲ್ಲದೆ, ಸೈಬರ್ ಅಪರಾಧಗಳಿಂದ ಎಚ್ಚರ ವಹಿಸುವಂತೆ ವಿಶೇಷ ಕೈಪಿಡಿ ಸಿದ್ಧಪಡಿಸಿದ್ದು, ಯುವಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಇದನ್ನೂ ಓದಿ: ಹಳೆಯ ದ್ವೇಷಕ್ಕೆ ಕತ್ತಿಯಿಂದ ಕಡಿದು ಯುವಕನ ಭೀಕರ ಹತ್ಯೆ

    ಯಾವ ವರ್ಷ ಎಷ್ಟು ನಷ್ಟ?
    2019ರಲ್ಲಿ ಸೈಬರ್ ಅಪರಾಧದಲ್ಲಿ ರಾಜ್ಯಕ್ಕೆ 71.27 ಕೋಟಿ ರೂ. ನಷ್ಟವಾಗಿತ್ತು, ಅದರಲ್ಲಿ 8.59 ಕೋಟಿ ರೂ.ಗಳನ್ನು ಪೊಲೀಸರು ಸಂಗ್ರಹಿಸಿಕೊಟ್ಟಿದ್ದಾರೆ. 2020ರಲ್ಲಿ 105.99 ಕೋಟಿ ರೂ. ನಷ್ಟವಾಗಿದ್ದು, 14.83 ಕೋಟಿ ರೂ. ವಸೂಲಿ ಮಾಡಿದ್ದಾರೆ. 2021ರಲ್ಲಿ 145.05 ಕೋಟಿ ನಷ್ಟವಾಗಿದ್ದು, 25.96 ಕೋಟಿ ರೂ. ವಸೂಲಿ, 2022ರಲ್ಲಿ 363.11 ಕೋಟಿ ಕಳೆದುಕೊಳ್ಳಲಾಗಿದ್ದು, 46.87 ಕೋಟಿ ವಸೂಲಿ ಮಾಡಿದ್ದಾರೆ. ಇನ್ನೂ 2023ರ ಪ್ರಸಕ್ತ ವರ್ಷದಲ್ಲಿ ಜನವರಿ ತಿಂಗಳ ಅಂತ್ಯದ ವರೆಗೆ 36.63 ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದ್ದು, ಪೊಲೀಸರು 1.03 ಕೋಟಿ ರೂ. ಮಾತ್ರ ವಸೂಲಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸೈಬರ್ ಕ್ರೈಂ ವಿಭಾಗ ಮಾಹಿತಿ ನೀಡಿದೆ.

  • ದನ ಸಾಗಾಟ ವಿಚಾರಕ್ಕೆ ಮೂವರ ಬರ್ಬರ ಕೊಲೆ – 15 ಮಂದಿ ಬಂಧನ

    ದನ ಸಾಗಾಟ ವಿಚಾರಕ್ಕೆ ಮೂವರ ಬರ್ಬರ ಕೊಲೆ – 15 ಮಂದಿ ಬಂಧನ

    – ರಂಜಾನ್ ಮರುದಿನವೇ ಹರಿದಿತ್ತು ನೆತ್ತರು

    ಚಾಮರಾಜನಗರ: ಜಿಲ್ಲೆ ಗುಂಡ್ಲುಪೇಟೆಯಲ್ಲಿ ರಂಜಾನ್ ಮರುದಿನವೇ ನಡೆದಿದ್ದ ಮೂವರ ಬರ್ಬರ ಹತ್ಯೆ ಪ್ರಕರಣದ ಪ್ರಮುಖ 15 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಕೇವಲ ಎಂಟು ದಿನದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಮೇ 26ರ ರಾತ್ರಿ ಗುಂಡ್ಲುಪೇಟೆ ಜಾಕೀರ್ ಹುಸೇನ್ ನಗರದಲ್ಲಿ ಇನಾಯತ್ ಹಾಗೂ ನೂರುಲ್ಲಾಗೆ ಸೇರಿದ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.

    ಹಳೆ ದ್ವೇಷ, ದನ ಸಾಗಾಟ, ಹೊಟೇಲ್ ವ್ಯವಹಾರ, ಹಣಕಾಸು ವ್ಯವಹಾರಗಳಲ್ಲಿ ಪೈಪೋಟಿ ಹಿನ್ನೆಲೆಯಲ್ಲಿ ಆಗಾಗ್ಗೆ ಗಲಾಟೆ ಘರ್ಷಣೆಗಳು ನಡೆದು ಮೇ.26 ರಂದು ಈ ಗಲಾಟೆ ತಾರಕ್ಕಕ್ಕೇರಿತ್ತು. ಅಂದು ರಾತ್ರಿ ಇನಾಯತ್ ಗುಂಪಿನವರು ನೂರುಲ್ಲಾ ಗುಂಪಿಗೆ ಸೇರಿದ ಮೂವರನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಘಟನೆಯಲ್ಲಿ ಐವರು ಮಾರಣಾಂತಿಕವಾಗಿ ಗಾಯಗೊಂಡಿದ್ದರು.

    ಪ್ರಕರಣ ಬೇಧಿಸಲು ಹೆಚ್ಚುವರಿ ಎಸ್‍ಪಿ ಅನಿತಾ ಹದ್ದಣ್ಣನವರ್ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ವಿವಿಧೆಡೆ ತಲೆಮರೆಸಿಕೊಂಡಿದ್ದ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದ ಮೂವರಿಗೆ ಶೋಧ ಕಾರ್ಯ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ತಿಳಿಸಿದ್ದಾರೆ.

  • ಆರ್‌ಟಿಜಿಎಸ್‌, ನೆಫ್ಟ್ ಮೂಲಕ ಹಣ ವರ್ಗಾವಣೆ ಮೇಲೆ ಯಾವುದೇ ಶುಲ್ಕವಿಲ್ಲ

    ಆರ್‌ಟಿಜಿಎಸ್‌, ನೆಫ್ಟ್ ಮೂಲಕ ಹಣ ವರ್ಗಾವಣೆ ಮೇಲೆ ಯಾವುದೇ ಶುಲ್ಕವಿಲ್ಲ

    – ಆರ್‌ಬಿಐ ಹೊಸ ನಿಯಮ ಇಂದಿನಿಂದ ಜಾರಿ

    ಮುಂಬೈ: ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಇಂದಿನಿಂದ ಅಗ್ಗ ವಾಗಲಿದೆ. ರಿಯಲ್-ಟೈಮ್ ಗ್ರೋಸ್ ಸೆಟಲ್ಮೆಂಟ್(ಆರ್‌ಟಿಜಿಎಸ್‌) ಹಾಗೂ ನ್ಯಾಷನಲ್ ಇಲೆಕ್ಟ್ರಾನಿಕ್ ಫಂಡ್ಸ್ ಟ್ರಾನ್ಸ್ಫರ್ (ನೆಫ್ಟ್) ಮೂಲಕ ಹಣ ವರ್ಗಾವಣೆಗೆ ಯಾವುದೇ ಶುಲ್ಕವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.

    ಈ ಕ್ರಮ ಇಂದಿನಿಂದ ಜಾರಿಗೆ ಬರುತ್ತಿದ್ದು, ಇಂದಿನಿಂದಲೇ ಆರ್‍ಬಿಐ ಅಡಿಯಲ್ಲಿ ಬರುವಾ ಎಲ್ಲಾ ಬ್ಯಾಂಕ್‍ಗಳು ಇದನ್ನು ಅನುಸರಿಸಬೇಕೆಂದು ಸೂಚಿಸಲಾಗಿದೆ. 2 ಲಕ್ಷ ರೂ. ವರೆಗಿನ ಹಣ ವರ್ಗಾವಣೆಗೆ ನೆಫ್ಟ್ ಬಳಸಲಾಗುತ್ತದೆ.

    ಅಲ್ಲದೆ ಭಾರಿ ಮೊತ್ತದ ಹಣವನ್ನು ವರ್ಗಾವಣೆ ಮಾಡಲು ಆರ್‌ಟಿಜಿಎಸ್‌ ಅನ್ನು ಗ್ರಾಹಕರು ಬಳಸುತ್ತಾರೆ. ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‍ಬಿಐ, ನೆಫ್ಟ್ ಗೆ 1 ರಿಂದ 5 ರೂ. ಹಾಗೂ ಆರ್‌ಟಿಜಿಎಸ್‌ ಗೆ 5ರಿಂದ 50 ರೂಪಾಯಿವರೆಗೆ ಶುಲ್ಕ ವಿಧಿಸುತ್ತಿತ್ತು.

    ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲು, ಆರ್‌ಟಿಜಿಎಸ್‌ ಮೂಲಕ ಡಿಜಿಟಲ್ ವಹಿವಾಟುಗಳಿಗಾಗಿ ಆರ್‌ಬಿಐ ಬ್ಯಾಂಕುಗಳಿಗೆ ವಿಧಿಸುವ ಸಂಸ್ಕರಣಾ ಶುಲ್ಕಗಳು ಮತ್ತು ಸಮಯ-ಬದಲಾಗುವ ಶುಲ್ಕಗಳನ್ನು ತೆಗೆದುಹಾಕಲು ನಿರ್ಧರಿಸಿದೆ.

    ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಆರ್‌ಬಿಐ ಇಂತಿಷ್ಟು ಶುಲ್ಕ ಎಂದು ವಿಧಿಸುತ್ತಿತ್ತು. ಆ ಶುಲ್ಕ ಹಾಗೂ ಅದರ ಮೇಲೆ ಒಂದಿಷ್ಟು ಲೆವಿ ವಿಧಿಸಿ ಬಳಿಕ ಬ್ಯಾಂಕುಗಳು ಗ್ರಾಹಕರಿಗೆ ಹಣವನ್ನು ವರ್ಗಾಯಿಸುತ್ತಿದ್ದವು.

    ಆರ್‌ಬಿಐ ಐಬಿಎ ಮುಖ್ಯ ಕಾರ್ಯನಿರ್ವಾಹಕ ವಿ.ಜಿ ಕಣ್ಣನ್ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ತೆರಿಗೆಗಳನ್ನು ಪರಿಶೀಲಿಸುವ ಬೇಡಿಕೆಗಳ ಮಧ್ಯೆ ಬ್ಯಾಂಕುಗಳು ಎಟಿಎಂ ಶುಲ್ಕಗಳ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ.

    ಎಟಿಎಂ ಬಳಕೆ ಗಮನಾರ್ಹವಾಗಿ ಬೆಳೆಯುತ್ತಿದ್ದು, ಈಗಾಗಲೇ ಎಟಿಎಂ ಚಾರ್ಜ್ ಮತ್ತು ಶುಲ್ಕಗಳನ್ನು ಬದಲಾಯಿಸುವಂತೆ ಗ್ರಾಹಕರು ಆಗ್ರಹಿಸುತ್ತಿದ್ದಾರೆ.

  • ಫಲಾನುಭವಿಗಳ ಹಣವನ್ನು ತಂದೆ-ಸಹೋದರನ ಖಾತೆಗೆ ಹಾಕಿದ ಡಾಟಾ ಎಂಟ್ರಿ ಆಪರೇಟರ್!

    ಫಲಾನುಭವಿಗಳ ಹಣವನ್ನು ತಂದೆ-ಸಹೋದರನ ಖಾತೆಗೆ ಹಾಕಿದ ಡಾಟಾ ಎಂಟ್ರಿ ಆಪರೇಟರ್!

    ಮೈಸೂರು: ಜನರಿಗೆ ನೀಡಬೇಕಿದ್ದ ಸ್ವಚ್ಛಭಾರತ್ ಮಿಷನ್ ಯೋಜನೆಯ ಹಣವನ್ನು ಡಾಟಾ ಎಂಟ್ರಿ ಆಪರೇಟರ್, ತನ್ನ ತಂದೆ ಹಾಗೂ ಸಹೋದರನ ಖಾತೆಗೆ ಜಮಾ ಮಾಡಿರುವ ಪ್ರಕರಣ ಮೈಸೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ನಂಜನಗೂಡು ತಾಲೂಕಿನ ವರುಣಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ ಗ್ರಾಮ ಪಂಚಾಯಿತಿಯಲ್ಲಿ ಅಕ್ರಮ ನಡೆದಿದೆ. ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಚಾಂದಿನಿ, ಫಲಾನುಭವಿಗಳಿಗೆ ತಲುಪಬೇಕಾದ ಪ್ರೋತ್ಸಾಹ ಧನವನ್ನು ತನ್ನ ತಂದೆ ಹಾಗೂ ಸಹೋದರನ ಖಾತೆಗೆ ವರ್ಗಾಯಿಸಿದ್ದಾರೆ. ಚಾಂದಿನಿ ಇದುವರೆಗೂ ತನ್ನ ತಂದೆ ಖಾತೆಗೆ 27 ಸಾವಿರ ಹಾಗೂ ಸಹೋದರನ ಖಾತೆಗೆ 36 ಸಾವಿರ ಹಣ ವರ್ಗಾವಣೆ ಮಾಡಿದ್ದಾರೆ.

    ಈ ಸಂಬಂಧ ಡಾಟಾ ಆಪರೇಟರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಒಟ್ಟು 63 ಸಾವಿರ ಹಣ ದುರುಪಯೋಗ ಆಗಿರುವುದು ಬೆಳಕಿಗೆ ಬಂದಿದೆ.

  • ಇನ್ಮುಂದೆ ವಿದೇಶಕ್ಕೆ ಹಣ ರವಾನೆಗೆ ಪಾನ್ ಕಾರ್ಡ್ ಕಡ್ಡಾಯ

    ಇನ್ಮುಂದೆ ವಿದೇಶಕ್ಕೆ ಹಣ ರವಾನೆಗೆ ಪಾನ್ ಕಾರ್ಡ್ ಕಡ್ಡಾಯ

    ನವದೆಹಲಿ: ಇನ್ನು ಮುಂದೆ ವಿದೇಶಗಳಿಗೆ ಹಣ ಕಳುಹಿಸಬೇಕಾದರೆ ಪಾನ್ ಕಾರ್ಡ್ ನಂಬರನ್ನು ಕಡ್ಡಾಯವಾಗಿ ನಮೂದಿಸಬೇಕು.

    ಮಕ್ಕಳ ಶಿಕ್ಷಣ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶೇರು ಕೊಳ್ಳಲು ಹೊರ ದೇಶಗಳಿಗೆ ಹಣ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಪಾನ್ ಕಾರ್ಡ್ ನಂಬರನ್ನು ಕಡ್ಡಾಯವಾಗಿ ನಮೂದಿಸಬೇಕೆಂದು ಆರ್ ಬಿ ಐ  ಹೇಳಿದೆ.

    ರಿಸರ್ವ್ ಬ್ಯಾಂಕ್ ಉದಾರ ಪಾವತಿ ಯೋಜನೆ(ಎಲ್‍ಆರ್‍ಎಸ್) ನಿಯಮದ ಅಡಿ ಇಲ್ಲಿಯವರೆಗೆ 25 ಸಾವಿರ ಡಾಲರ್(ಅಂದಾಜು 16.75 ಲಕ್ಷ ರೂ.) ವರೆಗಿನ ಹಂಣವನ್ನು ಕಳುಹಿಸಲು ಯಾವುದೇ ದಾಖಲೆಗಳ ಅಗತ್ಯವಿರಲ್ಲ. ಆದರೆ ಈ ಹಣವನ್ನು ಕಳುಹಿಸುವ ಮೂಲಕ ಅಕ್ರಮಗಳು ನಡೆಯುತ್ತಿದೆ ಎನ್ನುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಆರ್ ಬಿ ಐ ಈಗ ನಿಯಮವನ್ನು ಬಿಗಿಗೊಳಿಸಿದೆ.

    ಈ ಹೊಸ ನಿಯಮದಿಂದಾಗಿ ದೇಶದಿಂದ ಹೊರ ಹೋಗುತ್ತಿದ್ದ ಅನಧಿಕೃತ ಹಣಕ್ಕೆ ಬ್ರೇಕ್ ಬೀಳಲಿದೆ. ಅಲ್ಲದೇ ತೆರಿಗೆ ರೂಪದಲ್ಲಿ ಸರಕಾರದ ಬೊಕ್ಕಸ ತುಂಬಲಿದೆ. ವ್ಯವಸ್ಥೆಯಲ್ಲಿ ಪಾನ್ ಕಾರ್ಡ್ ಕಡ್ಡಾಯವಾದ್ದರಿಂದ ಹಣ ಸಂದಾಯ ಮಾಡುವವರ ಖಾತೆಗಳ ಮೇಲೆ ನಿಗಾವಹಿಸಲು ಸಾಧ್ಯವಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

    ಹೊರದೇಶಗಳಿಗೆ ತಮ್ಮ ಮಕ್ಕಳ ಶಿಕ್ಷಣ, ವಿದೇಶಿ ಸ್ಟಾಕ್ ಮಾರುಕಟ್ಟೆಗಳಲ್ಲಿ ಹಣ ಹೂಡಬಯಸುವ ಹಾಗೂ ವಿದೇಶಗಳಲ್ಲಿ ಆಸ್ತಿ ಖರೀದಿಸಬಯಸುವ ಭಾರತೀಯರಿಗೆ ಈ ನಿಯಮ ಅನ್ವಯವಾಗಲಿದೆ.