Tag: monkeys

  • ಚಾರ್ಮಾಡಿ ಘಾಟಿನಲ್ಲಿ ನೀರವ ಮೌನ – ಮಂಗಗಳ ಹಸಿವಿನ ರೋಧನೆ

    ಚಾರ್ಮಾಡಿ ಘಾಟಿನಲ್ಲಿ ನೀರವ ಮೌನ – ಮಂಗಗಳ ಹಸಿವಿನ ರೋಧನೆ

    ಮಂಗಳೂರು: ಚಾರ್ಮಾಡಿ ಘಾಟಿಯಲ್ಲೀಗ ನೀರವ ಮೌನ ಆವರಿಸಿದ್ದು, ಹೆದ್ದಾರಿ ಬಂದ್ ಆದ ಬಳಿಕ ಮನುಷ್ಯ, ವಾಹನಗಳ ಪ್ರವೇಶ ಇಲ್ಲದೆ ಅಲ್ಲಿನ ಬೆಟ್ಟಗಳು ಮಂಜು ಹೊದ್ದುಕೊಂಡು ಮಲಗಿಬಿಟ್ಟಿದೆ. ಆದರೆ ಅಲ್ಲಿನ ಮೂಕ ಪ್ರಾಣಿಗಳ ರೋದನೆ ಮಾತ್ರ ಹೇಳತೀರದ್ದಾಗಿದೆ.

    ಚಾರ್ಮಾಡಿ ವೀವ್ ಪಾಯಿಂಟ್ ಬಳಿಯಿರುವ ಅಣ್ಣಪ್ಪ ಸ್ವಾಮಿ ಗುಡಿಗೆ ಬಾಗಿಲು ಮುಚ್ಚಿ ತಿಂಗಳಾಗುತ್ತಾ ಬಂದಿದೆ. ಹೀಗಾಗಿ ಅಲ್ಲಿರುವ ಮಂಗಗಳು ಆಹಾರ ಇಲ್ಲದೆ ಪರದಾಡುತ್ತಿವೆ. ಯಾರಾದರೂ ಅಲ್ಲಿಗೆ ಹೋದಲ್ಲಿ ಹಿಂದಿನಿಂದ ಓಡುತ್ತಾ ಬಂದು ಕೈಚಾಚುತ್ತವೆ. ಮಂಗಗಳು ಹಸಿವಿನಿಂದ ರೋದಿಸುತ್ತಾ ತನ್ನ ಮರಿಗಳೊಂದಿಗೆ ಓಡಿಬರುವುದು ಮನ ಕಲಕುತ್ತದೆ.

    ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರು ಕೊಡುವ ಬಾಳೆಹಣ್ಣು, ಬಿಸ್ಕಟ್‍ಗಳೇ ಈ ಮಂಗಗಳಿಗೆ ಆಹಾರವಾಗಿತ್ತು. ಆದರೆ ಈಗ ಒಂದು ತಿಂಗಳಲ್ಲಿ ಎಲ್ಲಿ ನೋಡಿದರೂ ನೀರವ ಮೌನ ಆವರಿಸಿದ್ದು, ಬೀದಿನಾಯಿಗಳು ಹಾಗೂ ಮಂಗಗಳು ಹಸಿವಿನಿಂದ ರೋದಿಸುವಂತೆ ಮಾಡಿದೆ.

    ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿದ ಮಹಾಮಳೆಗೆ ಮಂಗಳೂರು ಮತ್ತು ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ ಭೂ ಕುಸಿತ ಉಂಟಾಗಿ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಮಣ್ಣು ತೆರವು ಕಾರ್ಯಾಚರಣೆ ಮುಗಿದು ಪೂರ್ಣಗೊಳ್ಳುವವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

  • ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ – 8 ದಿನಗಳಿಂದ ಜಲ ದಿಗ್ಬಂಧನದಲ್ಲಿ ಮಂಗಗಳು

    ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ – 8 ದಿನಗಳಿಂದ ಜಲ ದಿಗ್ಬಂಧನದಲ್ಲಿ ಮಂಗಗಳು

    ಚಿಕ್ಕೋಡಿ: ಕೃಷ್ಣಾ ನದಿ ತೀರದ ಜೊತೆಗೆ ಹಿರಣ್ಯಕೇಶಿ ನದಿ ತೀರದಲ್ಲೂ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ದಡದ ಸಂಕೇಶ್ವರ ಪಟ್ಟಣದ 500 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಸಂಕಷ್ಟದಲ್ಲಿರುವ ಜನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಗೊಳ್ಳುತ್ತಿದ್ದಾರೆ. ಇತ್ತ ಹಿರಣ್ಯಕೇಶಿ ನದಿ ಮಧ್ಯ ಭಾಗದಲ್ಲಿದ್ದ ಮರಗಳಲ್ಲಿ ಸುಮಾರು 25ಕ್ಕೂ ಮಂಗಗಳು ಕಳೆದ 8 ದಿನಗಳಿಂದ ಜಲ ಜಲ ದಿಗ್ಬಂಧನದಲ್ಲಿ ಸಿಲುಕಿದೆ.

    ಹಿರಣ್ಯಕೇಶಿ ನದಿ ನೀರು ಉಕ್ಕಿ ಹರಿಯುತ್ತಿರುವ ಪರಿಣಾಮ ನದಿ ಪಾತ್ರದ ಸುಮಾರು 5 ರಿಂದ 6 ಗ್ರಾಮಗಳಲ್ಲಿ ಜನರು ಪ್ರವಾಹದ ಸಮಸ್ಯೆಯನ್ನು ಎದುರಿಸಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಗ್ರಾಮಸ್ಥರನ್ನ ರಕ್ಷಣೆ ಮಾಡಿ ಸ್ಥಳಾಂತರ ಮಾಡುವ ಕಾರ್ಯವನ್ನು ಜಿಲ್ಲಾಡಳಿತ ಮಾಡುತ್ತಿದೆ. ನದಿ ಪಾತ್ರದ ಸುತ್ತಮುತ್ತಲಿನ ಸಾವಿರಾರು ಎಕರೆ ಕೃಷಿ ಭೂಮಿ ಕೂಡ ಮುಳುಗಡೆಯಾಗಿದ್ದು, ಅಪಾರ ಪ್ರಮಾಣದ ನಷ್ಟ ಎದುರಾಗಿದೆ.

    ಪ್ರವಾಹದಿಂದ ಜನರಿಗೆ ಮಾತ್ರವಲ್ಲದೇ ಜಾನುವಾರುಗಳಿಗೂ ಮೇವಿನ ಸಮಸ್ಯೆ ಎದುರಾಗಿದ್ದು, ಮೇವಿಗಾಗಿ ರೈತರು ಹರಸಾಹಸ ಪಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣಕ್ಕೆ ನದಿ ನೀರು ನುಗ್ಗಿದೆ. ಪರಿಣಾಮ ವಯೋವೃದ್ಧರು, ಮಕ್ಕಳು, ಮಹಿಳೆಯರು ಸುರಕ್ಷಿತ ಸ್ಥಳಗಳಿಗೆ ತೆರಳಲು ಪರದಾಟ ನಡೆಸಿದ್ದಾರೆ. ಪಟ್ಟಣದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ.

    ಮಹಾರಾಷ್ಟ್ರದಲ್ಲಿ ಉಂಟಾಗಿರುವ ಭಾರೀ ಮಳೆಗೆ ಕೃಷ್ಣೆ ಉಕ್ಕಿ ಹರಿಯುತ್ತಿರುವ ಪರಿಣಾಮ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಜತ್ತ – ಜಾಂಬೋಟಿ ರಾಜ್ಯ ಹೆದ್ದಾರಿ, ಸಂಕೇಶ್ವರ – ಜೇವರ್ಗಿ ರಾಜ್ಯ ಹೆದ್ದಾರಿಗಳು ಬಂದ್ ಆಗಿದೆ. ಬಾಗಲಕೋಟೆ ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿಯ ಬಂದ್ ಆಗಿದೆ. ಅಥಣಿ ತಾಲೂಕಿನ ದರೂರ ಸೇತುವೆ ಕೂಡ ಮುಳುಗಡೆಯಾಗಿದೆ.

  • ಹಸಿವಿನಿಂದ ಬಳಲಿದ್ದ ಮಂಗಗಳಿಗೆ ಹಾಲುಣಿಸಿದ ಕಾಮಧೇನು

    ಹಸಿವಿನಿಂದ ಬಳಲಿದ್ದ ಮಂಗಗಳಿಗೆ ಹಾಲುಣಿಸಿದ ಕಾಮಧೇನು

    ಜೈಪುರ: ರಾಜಸ್ಥಾನದ ಸಿರೊಹಿಯಲ್ಲಿ ಭಾರೀ ಬಿಸಿಲಿನಿಂದಾಗಿ ಜನಸಾಮಾನ್ಯರ ಜೊತೆಗೆ ಪ್ರಾಣಿಗಳು ತತ್ತರಿಸಿವೆ. ಹೀಗೆ ಒಂದೆಡೆ ಬಿಸಿಲು ಇನ್ನೊಂದೆಡೆ ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಬಳಲುತ್ತಿದ್ದ ಮಂಗಗಳಿಗೆ ಹಸುವೊಂದು ಹಾಲುಣಿಸಿ ತಾಯಿಯಾಗಿದೆ.

    ಹೌದು. ಸಿರೋಹಿ ಜಿಲ್ಲೆಯ ಪಿಂಡ್ವಾಲಾ ಪ್ರದೇಶದಲ್ಲಿ ವಿಪಿನ್ ಸಮೀಪದ ರೋಹಿಡಾದ ಜಬೇಶ್ವರ ಮಹಾದೇವ್ ದೇವಾಲಯದಲ್ಲಿ ಇರುವ ಹಸು ಈಗ ಭಾರೀ ಸುದ್ದಿಯಾಗಿದೆ. ಈ ಹಸು ಈ ದಿನಗಳಲ್ಲಿ ಇಡೀ ಜಿಲ್ಲೆಯಲ್ಲಿ ಚರ್ಚೆಯ ವಿಷಯವಾಗಿಬಿಟ್ಟಿದೆ. ಯಾಕೆಂದರೆ ಹಸು ಹಸಿವಿನ ಬೇಗೆಯಲ್ಲಿ ಬಳಲಿ, ರೋಸಿಹೋಗಿದ್ದ ಮಂಗಗಳಿಗೆ ಹಾಲು ನೀಡಿ ತಾಯಿಯಾಗಿ ಪೋಷಿಸುತ್ತಿದೆ.

    ಬಹಳ ವರ್ಷಗಳಿಂದ ರೋಹಿಡಾದ ಜಬೇಶ್ವರ ಮಹಾದೇವ್ ದೇವಾಲಯದಲ್ಲಿಯೇ ವಾಸಿಸುತ್ತಿರುವ ಈ ಹಸು ಪ್ರತಿನಿತ್ಯ ಮಂಗಗಳಿಗೆ ಹಾಲು ನೀಡಿ ಅವುಗಳ ಜೀವ ಉಳಿಸಿದೆ.

    ಬೇಸಿಗೆ ಬೇಗೆಗೆ ನೀರು, ಆಹಾರವಿಲ್ಲದೆ ಪ್ರಾಣಿಗಳು ಪರದಾಡುತ್ತಿವೆ. ಹೀಗೆ ಆಹಾರ, ನೀರಿಗಾಗಿ ಹಸಿವಿನಿಂದ ಬಳಲಿದ್ದ ದೇವಸ್ಥಾನದ ಸಮೀಪದಲ್ಲಿದ್ದ ಮಂಗಗಳಿಗೆ ಹಸು ಒಂದು ಬಾರಿ ಹಾಲು ನೀಡಿತ್ತು. ಆ ಬಳಿಕ ಈಗ ಪ್ರತಿದಿನವೂ ಈ ಮಂಗಗಳಿಗೆ ಹಾಲು ನೀಡಿ ಅವುಗಳ ಹೊಟ್ಟೆ ತುಂಬಿಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಈ ಮೂಲಕ ಈ ವಿಶೇಷ ಹಸು ಜಿಲ್ಲೆಯಲ್ಲಿ ಸಿಕ್ಕಪಟ್ಟೆ ಫೇಮಸ್ ಆಗಿಬಿಟ್ಟಿದೆ. ಹೀಗಾಗಿ ಇದನ್ನು ನೋಡಲು ಅಕ್ಕ-ಪಕ್ಕದ ಗ್ರಾಮದಿಂದ ಜನರು ದೇವಸ್ಥಾನದತ್ತ ಆಗಮಿಸುತ್ತಿದ್ದಾರೆ. ಹಾಗೆಯೇ ತಾಯಿಯ ಸ್ಥಾನದಲ್ಲಿ ನಿಂತು ಮಂಗಗಳಿಗೆ ಹಾಲು ನೀಡಿ ಪೋಷಿಸುತ್ತಿರುವ ಹಸುವನ್ನು ಕಂಡು ಖುಷಿಪಡುತ್ತಿದ್ದಾರೆ.

  • ನೀರು ಕುಡಿಯಲು ಹೋಗಿ ಟ್ಯಾಂಕಿನಲ್ಲಿ ಬಿದ್ದು 4 ಕೋತಿಗಳು ಸಾವು!

    ನೀರು ಕುಡಿಯಲು ಹೋಗಿ ಟ್ಯಾಂಕಿನಲ್ಲಿ ಬಿದ್ದು 4 ಕೋತಿಗಳು ಸಾವು!

    ರಾಯಚೂರು: ಸಾರ್ವಜನಿಕರ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಕೋತಿಗಳು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಜೆ. ಮಲ್ಲಾಪುರದಲ್ಲಿ ನಡೆದಿದೆ.

    ಬೀಸಿಲಿನ ಝಳಕ್ಕೆ ಬಾಯಾರಿಕೆಯಾಗಿ ಜೆ ಮಲ್ಲಾಪುರ ಗ್ರಾಮದಲ್ಲಿ ಇದ್ದ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಕೋತಿಗಳು ಇಳಿದಿವೆ. ನೀರು ಕುಡಿಯಲು ಒಟ್ಟು 10 ಕೋತಿಗಳು ಟ್ಯಾಂಕಿನಲ್ಲಿ ಇಳಿದಿದ್ದವು, ಆದರೆ ಅದರಲ್ಲಿ ನಾಲ್ಕು ಕೋತಿಗಳು ಸಾವನ್ನಪ್ಪಿವೆ. ಈ ವಿಷಯ ಊರಿನ ಜನಕ್ಕೆ ತಿಳಿದಿರಲಿಲ್ಲ. ಇದನ್ನೂ ಓದಿ: ನೀರು ಅರಸಿ ಖಾಲಿ ಟ್ಯಾಂಕ್‍ಗೆ ಇಳಿದ ವಾನರ ಸೇನೆ, ಮೇಲೆ ಬರಲಾರದೆ 15 ದಿನ ಆಹಾರವಿಲ್ಲದೇ ನರಳಾಡಿ ಪ್ರಾಣಬಿಟ್ಟ ಮಂಗಗಳು-ಗ್ರಾಮಸ್ಥರಿಂದ ಅಂತ್ಯ ಸಂಸ್ಕಾರ

    ಗ್ರಾಮಸ್ಥರು ಕುಡಿಯಲು ಈ ಟ್ಯಾಂಕಿನ ನೀರನ್ನೇ ಉಪಯೋಗಿಸುತ್ತಾರೆ. ಆದರೆ ಕಳೆದ ಎರಡು ದಿನಗಳಿಂದ ಈ ನೀರು ಬಳಸಿದ ಮಂದಿಗೆ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ಆದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ನೀರಿನ ಟ್ಯಾಂಕಿನಲ್ಲಿ ಇಣುಕಿದಾಗ ಸತ್ಯಾಂಶ ತಿಳಿದಿದೆ.

    ಟ್ಯಾಂಕಿನಲ್ಲಿ ಕೆಲವು ಕೋತಿಗಳು ಸಾವನ್ನಪ್ಪಿದ್ದವು, ಇನ್ನೂ ಕೆಲವು ಟ್ಯಾಂಕಿನಿಂದ ಮೇಲೆ ಬರಲಾಗದೆ ಒದ್ದಾಡುತ್ತಿದ್ದವು. ಇದನ್ನು ಕಂಡ ಗ್ರಾಮಸ್ಥರು ತಾವೇ ಖುದ್ದಾಗಿ ಟ್ಯಾಂಕಿನಲ್ಲಿ ಇಳಿದು ಬದುಕುಳಿದಿದ್ದ ಕೋತಿಗಳನ್ನು ರಕ್ಷಿಸಿದ್ದಾರೆ. ಹಾಗೆಯೇ ಸಾವನ್ನಪ್ಪಿದ್ದ ಕೋತಿಗಳ ಮೃತದೇಹಗಳನ್ನು ಹೊರ ತೆಗೆದು ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದಾರೆ.

  • ತೊಟ್ಟಿಯಲ್ಲಿ ಕೋತಿಗಳ ಸ್ವಿಮ್ಮಿಂಗ್ – ವಿಡಿಯೋ ವೈರಲ್

    ತೊಟ್ಟಿಯಲ್ಲಿ ಕೋತಿಗಳ ಸ್ವಿಮ್ಮಿಂಗ್ – ವಿಡಿಯೋ ವೈರಲ್

    ಮಂಡ್ಯ: ಮಳವಳ್ಳಿ ತಾಲೂಕಿನ ಬಸವನ ಬೆಟ್ಟದಲ್ಲಿ ಬಿಸಿಲಿನ ತಾಪ ತಾಳಲಾರದೆ ಕೋತಿಗಳು ನೀರಿನ ತೊಟ್ಟಿಗಿಳಿದು ಸ್ನಾನ ಮಾಡುತ್ತ ಆಟವಾಡುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

    ಬಸವನ ಬೆಟ್ಟದ ಬಳಿಯಿರುವ ಹೆಬ್ಬೆಟ್ಟೇ ಬಸವೇಶ್ವರಸ್ವಾಮಿ ದೇವಸ್ಥಾನದ ಬಳಿ ಕೋತಿಗಳು ಸ್ವಿಮ್ಮಿಂಗ್ ಕಂಡು ಬಂದಿದೆ. ಪ್ರವಾಸಿಗರೊಬ್ಬರು ಅದನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಆ ವಿಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸುಮಾರು 10-15 ಕೋತಿಗಳು ನೀರಿನ ತೊಟ್ಟಿ ಸುತ್ತಾ ಕುಳಿತಿದ್ದು, ಒಂದರಂದೆ ಒಂದು ತೊಟ್ಟಿಗೆ ಮುಳುಗಿ ಏಳುತ್ತಿವೆ. ಕೆಲವು ಕೋತಿಗಳು ತೊಟ್ಟಿಯಲ್ಲಿಯೇ ಸ್ವಿಮ್ಮಿಂಗ್ ಮಾಡುತ್ತಿವೆ. ಇನ್ನೂ ಜೋಡಿಯಾಗಿಯೂ ಮುಳುಗಿ-ಮುಳುಗಿ ಎದ್ದೇಳುತ್ತಿವೆ. ಬಿಸಿಲಿನ ತಾಪಕ್ಕೆ ಕೋತಿಗಳು ನೀರನ್ನು ಕಂಡ ಸಂತಸಕ್ಕೆ ತೊಟ್ಟಿಯಲ್ಲಿ ಮುಳುಗಿ ಎಂಜಾಯ್ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

    ಮಳೆ ಇಲ್ಲದೆ ಕಾಡು ಒಣಗಿದ್ದು, ಹಲವಾರು ಮರಗಳು ಎಲೆಗಳು ಉದುರಿ ನಿಂತಿವೆ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಮಂಗಗಳು ಮತ್ತು ಕಾಡು ಪ್ರಾಣಿಗಳು ಹಾಹಾಕಾರ ಪಡುತ್ತಿವೆ. ಈ ವೇಳೆ ದೇವಾಲಯದ ಸಮೀಪವಿರುವ ಕಾಡಿನಲ್ಲಿ ವಾಸವಿರುವ ಮಂಗಗಳು ನೀರಿನ ತೊಟ್ಟಿಗೆ ಜಿಗಿದು ದೇಹವನ್ನು ತಂಪು ಮಾಡಿಕೊಳ್ಳುತ್ತಿದ್ದಾವೆ ಎಂದು ಪ್ರವಾಸಿಗ ಲೋಕೇಶ್ ಹೇಳಿದ್ದಾರೆ.

  • ಕಾಫಿ ನಾಡಿಗೂ ಕಾಲಿಡ್ತಾ ಹೆಮ್ಮಾರಿ ಮಂಗನ ಕಾಯಿಲೆ?

    ಕಾಫಿ ನಾಡಿಗೂ ಕಾಲಿಡ್ತಾ ಹೆಮ್ಮಾರಿ ಮಂಗನ ಕಾಯಿಲೆ?

    ಚಿಕ್ಕಮಗಳೂರು: ವಿಜ್ಞಾನಿಗಳು ಮಂಗನಿಂದ ಮಾನವ ಎಂದಿದ್ರು. ಆದ್ರೆ ಈಗ ಮಲೆನಾಡಿಗರು ಮಂಗನಿಂದ ಮರಣ ಅಂತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಜನರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಈಗ ಚಿಕ್ಕಮಗಳೂರಿಗೂ ಕಾಲು ಇಟ್ಟಿದಿಯಾ ಎನ್ನುವ ಅನುಮಾನ ಸೃಷ್ಟಿಯಾಗಿದೆ.

    ಮೊದಲೆಲ್ಲ ದೇವಸ್ಥಾನದಲ್ಲಿ ಮಂಗನನ್ನ ಕಂಡರೆ ಆಂಜನೇಯನ ಸ್ವರೂಪ ಅಂತಿದ್ದರು. ಆದ್ರೆ ಮಲೆನಾಡಲ್ಲಿ ಮಂಗನನ್ನ ಕಂಡರೆ ಅದು ನಡುಗ್ತಿದ್ಯಾ, ಬಳಲುತ್ತಿದ್ಯಾ ಅಂತ ನೋಡ್ತಾರೆ. ಒಂದು ವೇಳೆ ನಡುಗ್ತಿದ್ದರೆ ಎದ್ನೋ-ಬಿದ್ನೋ ಅಂತ ಜನ ಮಂಗಗಳಿಂದ ದೂರ ಓಡ್ತಾರೆ. ಯಾಕಂದ್ರೆ ಮಲೆನಾಡಿನ ಭಾಗದಲ್ಲಿ ಮಂಗ ಅನ್ನೋ ಪದ ಹುಟ್ಟಿಸಿರೋ ಭಯ ಅಂತದ್ದು. ಮಂಗನ ಕಾಯಿಲೆ ಹೆಸರು ಕೇಳಿದ್ರೇನೆ ಒಂದು ಕ್ಷಣ ವಿಚಲಿತಗೊಳ್ತೀವಿ. ಶಿವಮೊಗ್ಗದಲ್ಲಿ ತನ್ನ ಅಟ್ಟಹಾಸ ತೋರಿದ್ದ ಈ ಕಾಯಿಲೆ ಇದೀಗ ಕಾಫಿನಾಡಿನ ಮಲೆನಾಡು ಭಾಗಕ್ಕೂ ಆವರಿಸಿರೋ ಅನುಮಾನ ಹುಟ್ಟಿದೆ. ಜಿಲ್ಲೆಯ ಶೃಂಗೇರಿ, ಕೊಪ್ಪ ಹಾಗೂ ಎನ್.ಆರ್.ಪುರ ತಾಲೂಕಿನ ಒಂಬತ್ತು ಕಡೆ ಮಂಗಗಳು ಸಾವನ್ನಪ್ಪುತ್ತಿವೆ. ಈ ಮಂಗಗಳ ಸಾವು ಜಿಲ್ಲೆಯ ಜನರ ನಿದ್ದೆಗೆಡಿಸಿದ್ದು, ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಇದನ್ನೂ ಓದಿ: ಏನಿದು ಮಂಗನ ಜ್ವರ? ಕಾಯಿಲೆ ಹೇಗೆ ಬರುತ್ತೆ? ರೋಗ ಲಕ್ಷಣ ಏನು? ಚಿಕಿತ್ಸೆ ಹೇಗೆ- ಇಲ್ಲಿದೆ ಸಂಪೂರ್ಣ ಮಾಹಿತಿ

    ಎನ್.ಆರ್ ಪುರದ ಬಾಳೆಹೊನ್ನೂರು, ಶೃಂಗೇರಿಯ ಮೇಲ್ಪಾಲ್ ಸೇರಿದಂತೆ ಐದಾರು ಕಡೆ ಮಂಗಗಳ ಸಾವಿನಿಂದ ಗ್ರಾಮೀಣ ಭಾಗದ ಜನ ಆತಂಕದಲ್ಲಿ ಬದುಕುತ್ತಿದ್ದಾರೆ. ಈಗಾಗಲೇ ಸಾಕಷ್ಟು ಜನರನ್ನ ಬಲಿ ಪಡೆದಿರೋ ಈ ಮಂಗನ ಕಾಯಿಲೆ ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲೂ ಆತಂಕ ಸೃಷ್ಟಿಸಿದೆ. ಸತ್ತ ಮಂಗಗಳ ಶವಪರೀಕ್ಷೆ ನಡೆಸಿ ಬೆಂಗಳೂರು, ಶಿವಮೊಗ್ಗ, ಪುಣೆ ಹಾಗೂ ಮಣಿಪಾಲ್ ಸಂಶೋಧನಾ ಕೇಂದ್ರಕ್ಕೆ ಪರೀಕ್ಷೆಗೆಂದು ರಕ್ತದ ಮಾದರಿಯನ್ನ ಕಳುಹಿಸಲಾಗಿದೆ. ಅಷ್ಟೇ ಅಲ್ಲದೆ, ಮಂಗಗಳು ಸತ್ತಿರೋ ಗ್ರಾಮದ ಸುತ್ತಮುತ್ತಲಿನ ಜನರ ರಕ್ತದ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ.

    ತೀರ್ಥಹಳ್ಳಿ, ಸಾಗರದ ಮಲೆನಾಡಲ್ಲಿ ಮರಣ ಮೃದಂಗ ಬಾರಿಸುತ್ತಿರೋ ಈ ಕಾಯಿಲೆ ಎಲ್ಲಿ ನಮಗೂ ತಟ್ಟುತ್ತೋ ಅಂತ ಕಾಫಿನಾಡ ಮಲೆನಾಡು ಭಾಗದ ಜನ ಕೂಡ ಆತಂಕದಲ್ಲಿದ್ದಾರೆ. ಮಲೆನಾಡಲ್ಲಿ ಮೊದಲೇ ಸುಸರ್ಜಿತ ಸರ್ಕಾರಿ ಆಸ್ಪತ್ರೆಗಳಿಲ್ಲ. ಖಾಸಗಿ ಆಸ್ಪತ್ರೆಗಳಿಗೇ ಹೋಗಬೇಕು. ಜನಸಾಮಾನ್ಯರಿಗೆ ಕೂಲಿ ಹಾಗೂ ಹಣದ ಸಮಸ್ಯೆ ಇದೆ. ಒಂದು ವೇಳೆ, ಲ್ಯಾಬ್‍ನಿಂದ ವರದಿ ಪಾಸಿಟಿವ್ ಎಂದು ಬಂದರೆ ಈ ಹೆಮ್ಮಾರಿ ಕಾಯಿಲೆ ಕಾಫಿನಾಡಲ್ಲಿ ಇನ್ನೆಷ್ಟು ಬಲಿ ಪಡಿಯುತ್ತೋ ಗೊತ್ತಿಲ್ಲ. ಹಾಗಾಗಿ, ಜಿಲ್ಲಾಡಳಿತ ಈಗಾಗಲೇ ಮುಂಜಾಗೃತ ಕ್ರಮವಾಗಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ರಾಜ್ಯ ಸರ್ಕಾರಕ್ಕೆ 2000 ಚುಚ್ಚು ಮದ್ದುಗಳಿಗೆ ಮನವಿ ಮಾಡಲಾಗಿದೆ. ಜಾನುವಾರುಗಳನ್ನ ಕಾಡಿಗೆ ಕರೆದುಕೊಂಡು ಹೋಗುವವರಿಗೆ ಡಿಎಂಪಿ ತೈಲವನ್ನು ನೀಡಲಾಗಿದೆ. ಈ ಕುರಿತು ಮಲೆನಾಡಿನ ಪ್ರತಿ ಆಸ್ಪತ್ರೆಯ ವೈದ್ಯರಿಗೂ ಸೂಚನೆ ನೀಡಲಾಗಿದೆ. ಹಾಗೆಯೇ ಸುತ್ತಮುತ್ತಲಿನ ಪರಿಸರವನ್ನ ಸ್ವಚ್ಛವಾಗಿಡಲು ಆದೇಶಿಸಿದೆ. ಅಷ್ಟೇ ಅಲ್ಲದೆ ಅಗತ್ಯ ಬಿದ್ದರೆ ಮುನ್ನೇಚ್ಛರಿಕೆಯಾಗಿ ಜನಸಾಮಾನ್ಯರಿಗೆ ಔಷಧಿಗಳನ್ನ ನೀಡೋದಕ್ಕೂ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

    ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಈ ಮಹಾಮಾರಿಗೆ 1993 ರಿಂದ 1995ರ ಅವಧಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೆ ಆ ಹೆಮ್ಮಾರಿ ಬರುವ ಸೂಚನೆ ಸಿಕ್ಕಿರೋದು ಜಿಲ್ಲಾಡಳಿತಕ್ಕೆ ಬಿಸಿ ತುಪ್ಪವಾಗಿದೆ. ಅದೇನೆ ಆಗಲಿ ಮಂಗನ ಕಾಯಿಲೆ ಸೋಂಕು ನಮಗೆ ತಗುಲದೆ ಇರಲಿ ಅಂತ ಮಲೆನಾಡಿಗರು ಆಂಜನೇಯನ ಬಳಿ ಹರಕೆ ಕಟ್ಟಿಕೊಳ್ಳುತ್ತಿದ್ದಾರೆ. ಆದ್ರೆ, ಲ್ಯಾಬ್‍ನಿಂದ ವರದಿ ಬಂದ್ಮೇಲಷ್ಟೆ ಇಲ್ಲಿನ ವಾಸ್ತವ ಸ್ಥಿತಿಗತಿಯ ಬಗ್ಗೆ ಮನವರಿಕೆಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 6,000 ವರ್ಷದ ಇತಿಹಾಸ – ಆಂಜನೇಯನ ಮಂಗಳಾರತಿಗೆ ವಾನರ ದಂಡು

    6,000 ವರ್ಷದ ಇತಿಹಾಸ – ಆಂಜನೇಯನ ಮಂಗಳಾರತಿಗೆ ವಾನರ ದಂಡು

    ಬೀದರ್: ಕಾರ್ಗಿಲ್ ಯುದ್ದದಲ್ಲಿ ಯೋಧರು ಹೋರಾಟ ಮಾಡಿದ್ದನ್ನು ನೀವು ಕೇಳಿದ್ದೀರಿ. ಆದರೆ ಗಡಿ ಜಿಲ್ಲೆಯಲ್ಲಿ ನಿಜಾಮರಿಂದ ಹಿಂದೂಗಳ ಮೇಲೆ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿದ್ದಾಗ ನಿಜಾಮನ ವಿರುದ್ಧ ವಾನರಗಳು ಹೋರಾಡಿದ ಇತಿಹಾಸವಿದೆ.

    ಹೌದು. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಾಳಕಾಪೂರ್ ಗ್ರಾಮದಲ್ಲಿರುವ ಪವಾಡ ಪುರುಷ ಆಂಜನೇಯನ ದೇವಸ್ಥಾನದಲ್ಲಿ ಚಮತ್ಕಾರ ನಡೆಯುತ್ತಿದೆ. 6 ಸಾವಿರ ವರ್ಷ ಇತಿಹಾಸವಿರುವ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ಶನಿವಾರ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯುತ್ತದೆ. ಆ ಸಮಯಕ್ಕೆ ಸರಿಯಾಗಿ ನೂರಾರು ಕೋತಿಗಳು ಹಾಜರಾಗಿ ಒಗಟ್ಟು ತೋರಿಸುತ್ತವೆ.

    ಬೇರೆ ಸಮಯದಲ್ಲಿ ನೋಡಲು ಒಂದು ಮಂಗಗಳು ಸಿಗುವುದಿಲ್ಲ. ಆದರೆ ಮಹಾಮಂಗಳಾರತಿ ಸಮಯಕ್ಕೆ ಸರಿಯಾಗಿ ನೂರಾರು ಮಂಗಗಳು ಎಲ್ಲಿಂದ ಬರುತ್ತವೆ ಎಂಬುದು ಆಶ್ಚರ್ಯಕ್ಕೆ ಕಾರಣವಾಗಿದೆ. ಜೊತೆಗೆ 200 ವರ್ಷಗಳ ಹಿಂದೆ ನಿಜಾಮರ ದೌಬ್ಬಾಳಿಕೆ, ದೌರ್ಜನ್ಯ, ಅತ್ಯಾಚಾರ ನಡೆಯುತ್ತಿದ್ದಾಗ ಸಾವಿರಾರು ಮಂಗಳು ಒಟ್ಟಾಗಿ ಸೇರಿ ನಿಜಾಮರ ವಿರುದ್ಧ ಹೋರಾಡಿ ನಿಜಾಮರಿಂದ ಮುಕ್ತಿ ನೀಡುತ್ತಿದ್ದು, ಅಂದಿನಿಂದ ಹಿಂದೂಗಳು ನಿರಾಳವಾಗಿ ಬದುಕುತ್ತಿದ್ದಾರೆ ಎಂದು ಸ್ಥಳೀಯ ಭಕ್ರ ಅನೀಲ್‍ಕುಮಾರ್ ಕೋರೆ ಹೇಳಿದ್ದಾರೆ.

    ಈ ದೇವಸ್ಥಾನಕ್ಕೆ ಬಹುದೊಡ್ಡ ಇತಿಹಾಸವಿದ್ದು, ಶ್ರೀರಾಮ, ಲಕ್ಷ್ಮಣ ವನವಾಸದಲ್ಲಿ ಇರುವಾಗ ಈ ಚಳಕಾಪೂರ್ ಅರಣ್ಯದಲ್ಲಿ ವಾಸವಾಗಿದ್ದರಂತೆ. ಚಳಕಾ ದೇವಿಯ ಮಾತಿನಂತೆ ಶ್ರೀರಾಮ ಅಸುರನ್ನು ಸಂಹಾರ ಮಾಡಿದ್ದರಿಂದ “ಚಳಕಾಪೂರ್” ಎಂದು ಹೆಸರು ಬಂದಿದೆ ಎನ್ನುವ ಪ್ರತೀತಿ ಇದೆ. ಇನ್ನು ಹನುಮಂತ ಸಂಜೀನಿ ಪರ್ವತ ಅಂಗೈಯಲ್ಲಿ ತೆಗೆದುಕೊಂಡು ಹೋಗಬೇಕಾದರೆ ಒಂದು ಸಣ್ಣ ತುಂಡು ಈ ಸ್ಥಳದಲ್ಲಿ ಬಿದ್ದಿರುವ ಕಾರಣ ಇಲ್ಲಿ ಆಂಜನೇಯ ನೆಲೆಸಿದ್ದಾನೆ. ಈ ದೇವಸ್ಥಾಕ್ಕೆ ಬಂದು ಹರಕೆ ಬೇಡಿಕೊಂಡರೆ ಮನಸ್ಸಿನ ಇಷ್ಟಾರ್ಥ ದಯ ಪಾಲಿಸುತ್ತಾನೆ ಎಂಬ ನಂಬಿಕೆ ಭಕ್ತರದ್ದಾಗಿದೆ.

    ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ್ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಬಂದು ಪವರ್ ಫುಲ್ ಆಂಜನೇಯನ ದರ್ಶನ ಪಡೆದುಕೊಂಡು ಹೋಗುತ್ತಾರೆ. ಈ ದೇವರ ವಿಶೇಷತೆ ಜೊತೆಗೆ ಭಕ್ತರು ಮಂಗಗಳ ಪವಾಡ ನೋಡಿ ಆಶ್ಚರ್ಯಚಕಿತರಾಗಿ ಮಂಗಗಳಿಗೆ ಹಣ್ಣು, ಹಂಪಲು ನೀಡಿ ದರ್ಶನ ಪಡೆಯುತ್ತಾರೆ ಎಂದು ಭಕ್ತ ಆಕಾಶ್ ಮಾಳೆ ತಿಳಿಸಿದ್ದಾರೆ.

    ನಾವು ಹಲವಾರು ರೀತಿಯ ಪವಾಡಗಳನ್ನು ನೋಡಿದ್ದೇವೆ. ಆದರೆ ಈ ರೀತಿ ಮಂಗಗಳ ಪವಾಡ ನೋಡುತ್ತಿರುವುದು ಇದೇ ಮೊದಲು ಎನ್ನಬಹುದು. ಮಂಗಗಳಲ್ಲಿ ದೇವರು ಸ್ವರೂಪ ಇದೆ ಎನ್ನುವುದಕ್ಕೆ ಈ ದೇವಸ್ಥಾನಕ್ಕೆ ಬರುವ ಕೋತಿಗಳ ಸಮೂಹವೇ ಸಾಕ್ಷಿಯಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇಟ್ಟಿಗೆ ಎಸೆದು ವ್ಯಕ್ತಿಯನ್ನು ಹತ್ಯೆಗೈದ ಕೋತಿಗಳು!

    ಇಟ್ಟಿಗೆ ಎಸೆದು ವ್ಯಕ್ತಿಯನ್ನು ಹತ್ಯೆಗೈದ ಕೋತಿಗಳು!

    ಲಕ್ನೋ: ಕೋತಿಗಳು ಇಟ್ಟಿಗೆ ಕಲ್ಲು ಎಸೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬಾಘಪತ್‍ನ ಟಿಕ್ರಿ ಪ್ರದೇಶದಲ್ಲಿ ನಡೆದಿದೆ.

    ಧರ್ಮಪಾಲ್ ಸಿಂಗ್(72) ಮಂಗಗಳ ದಾಳಿಗೆ ಬಲಿಯಾದ ವ್ಯಕ್ತಿ. ಪೊಲೀಸರ ಪ್ರಕಾರ ಸಿಂಗ್ ಅವರು ಒಣ ಕಟ್ಟಿಗೆಯ ತುಂಡುಗಳನ್ನು ಸಂಗ್ರಹಿಸುತ್ತಿರುವಾಗ ಮಂಗಗಳು ಅವರ ಮೇಲೆ ಇಟ್ಟಿಗೆಯ ತುಂಡುಗಳನ್ನು ಎಸೆದಿವೆ. ಇದರ ಪರಿಣಾಮ ಸಿಂಗ್ ಅವರ ತಲೆ ಮತ್ತು ಎದೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಈ ಘಟನೆ ಕುರಿತು ಸಿಂಗ್ ಅವರ ಕುಟುಂಬಸ್ಥರು ಮಂಗಗಳ ಮೇಲೆ ದೂರು ದಾಖಲಿಸಲು ಮುಂದಾಗಿದ್ದು, ಆದರೆ ಪೊಲೀಸರು ಈ ಅವಘಡ ಆಕಸ್ಮಿಕ ಘಟನೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಿಂದಾಗಿ ಕೋಪಗೊಂಡ ಕುಟುಂಬಸ್ಥರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ.

     

    ಧರ್ಮಪಾಲ್ ಅವರ ಸಹೋದರ ಕೃಷ್ಣಪಾಲ್ ಸಿಂಗ್ ಪ್ರತಿಕ್ರಿಯಿಸಿ, 20 ಕ್ಕೂ ಅಧಿಕ ಇಟ್ಟಿಗೆ ಕಲ್ಲುಗಳನ್ನು ಮಂಗಗಳು ಎಸೆದಿದ್ದು, ಧರ್ಮಪಾಲ್ ತಲೆ ಎದೆ ಮತ್ತು ಕಾಲಿನ ಭಾಗಕ್ಕೆ ಬಿದ್ದಿದೆ. ಈ ಘಟನೆ ಮಂಗಗಳಿಂದಲೇ ಆಗಿದ್ದು, ಅವುಗಳ ಮೇಲೆ ದೂರು ದಾಖಲಿಸದೇ ಪೊಲೀಸರು ಅದನ್ನು ಆಕಸ್ಮಿಕ ಘಟನೆ ಎಂದು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ ಇದರಿಂದಾಗಿ ನಮಗೆ ನ್ಯಾಯ ಸಿಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಮಂಗಗಳ ಹಾವಳಿಯಿಂದ ಇಡೀ ಹಳ್ಳಿಯೇ ನರಕಯಾತನೆಯನ್ನು ಅನುಭವಿಸುವಂತಾಗಿದೆ. ಇದೀಗ ಧರ್ಮಪಾಲ್ ಅವರ ಜೀವವನ್ನೇ ಕಸಿದುಕೊಂಡಿದೆ. ಇದೇ ರೀತಿ ಗ್ರಾಮಸ್ಥರು ಕೂಡ ಇಲ್ಲಿನ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ ಎಂದು ಸ್ಥಳೀಯರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

    ಡೊಘಾಟ್ ಪೊಲೀಸ್ ಠಾಣೆಯ ಅಧಿಕಾರಿ ಚಿತ್ವಾನ್ ಸಿಂಗ್ ಪ್ರತಿಕ್ರಿಯಿಸಿ, ಕೋತಿಗಳ ವಿರುದ್ಧ ನಾವು ಹೇಗೆ ಪ್ರಕರಣ ದಾಖಲಿಸಬಹುದು? ಇದು ಅಪಹಾಸ್ಯಕ್ಕೆ ದಾರಿ ಮಾಡಿ ಕೊಡುತ್ತದೆ. ನಾವು ಖಂಡಿತವಾಗಿಯೂ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದೇವೆ ಹಾಗೂ ಈ ಪ್ರಕರಣ ಕುರಿತು ಡೈರಿಯಲ್ಲಿ ನೊಂದಾಯಿಸಿದ್ದೇವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೂ ಕೂಡ ಒಳಪಡಿಸಲಾಗಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾರು ಡಿಕ್ಕಿ ಹೊಡೆದು 6 ಮಂಗಗಳು ಸಾವು- ಗ್ರಾಮಸ್ಥರಿಂದ ಅಂತ್ಯಸಂಸ್ಕಾರ

    ಕಾರು ಡಿಕ್ಕಿ ಹೊಡೆದು 6 ಮಂಗಗಳು ಸಾವು- ಗ್ರಾಮಸ್ಥರಿಂದ ಅಂತ್ಯಸಂಸ್ಕಾರ

    ಬೆಳಗಾವಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು 6 ಮಂಗಗಳ ಸಾವನ್ನಪ್ಪಿರುವ ಮನ ಕಲಕುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನರಶಿಂಗಪೂರ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

    ಹೆದ್ದಾರಿ ದಾಟುವಾಗ ವೇಗವಾಗಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 3 ತಾಯಿ ಮಂಗ ಹಾಗೂ 4 ಮರಿಗಳ ಮಂಗಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಒಂದು ಮರಿ ಮಂಗವನ್ನ ರಕ್ಷಿಸಲು ಹೋಗಿ ತಾಯಿ ಮರಿ ಸಹಿತ 7 ಮಂಗಗಳು ಸಾವನ್ನಪ್ಪಿವೆ. ಮಂಗಗಳ ಅಂತ್ಯಕ್ರಿಯೆಯನ್ನ ಸ್ಥಳೀಯರು ನೆರವೇರಿಸಿದ್ದು ಘಟನೆಗೆ ಸಾಕಷ್ಟು ಜನರು ಮರುಕ ವ್ಯಕ್ತ ಪಡಿಸಿದ್ದಾರೆ.

    ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 30ಕ್ಕೂ ಹೆಚ್ಚು ಕೋತಿಗಳನ್ನು ಕೊಂದು ಬೆಟ್ಟದಲ್ಲಿ ತಂದು ಬಿಸಾಡಿದ್ರು!

    30ಕ್ಕೂ ಹೆಚ್ಚು ಕೋತಿಗಳನ್ನು ಕೊಂದು ಬೆಟ್ಟದಲ್ಲಿ ತಂದು ಬಿಸಾಡಿದ್ರು!

    ಕೋಲಾರ: ಮೂವತ್ತಕ್ಕೂ ಹೆಚ್ಚು ಕೋತಿಗಳನ್ನು ದುಷ್ಕರ್ಮಿಗಳು ಕೊಂದು ಬೆಟ್ಟದಲ್ಲಿ ತಂದು ಬಿಸಾಡಿರುವ ದಾರುಣ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಬಳಿಯ ಯರ್ರಕೊಂಡ ಬೆಟ್ಟದಲ್ಲಿ ನಡೆದಿದೆ.

    ಬುಧವಾರ ರಾತ್ರಿ ಯಾರೋ ದುಷ್ಕರ್ಮಿಗಳು ಕೋತಿಗಳನ್ನು ಕೊಂದು, ಮೂಟೆಗಳಲ್ಲಿ ತುಂಬಿಕೊಂಡು ಬಂದು ಬಿಸಾಡಿ ಹೋಗಿದ್ದಾರೆ. ಇಂದು ಬೆಳಿಗ್ಗೆ ಸ್ಥಳೀಯರು ಬೆಟ್ಟದ ಕಡೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

    ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಹಾಗೂ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮಸ್ಥರೆಲ್ಲರೂ ಸೇರಿ ಕೋತಿಗಳ ಸಾಮೂಹಿಕ ಅಂತ್ಯಸಂಸ್ಕಾರ ಕಾರ್ಯವನ್ನು ಮಾಡಿದ್ದಾರೆ.