Tag: monsoon session

  • ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

    ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

    – ಲೋಕಸಭೆಯಲ್ಲಿ 14 ಮಸೂದೆ ಮಂಡನೆ, 12 ಮಸೂದೆಗಳ ಅಂಗೀಕಾರ
    – ಕಲಾಪ ಅಡ್ಡಿಪಡಿಸುವವರಿಗೆ ಸ್ಪೀಕರ ಓಂ ಬಿರ್ಲಾ ಪಾಠ
    – 419 ಪ್ರಶ್ನೆಗಳಲ್ಲಿ 55 ಪ್ರಶ್ನೆಗಳಿಗಷ್ಟೇ ಮೌಖಿಕ ಉತ್ತರ

    ನವದೆಹಲಿ: ವಿಪಕ್ಷಗಳ ಪ್ರತಿಭಟನೆ, ಕಲಾಪಕ್ಕೆ ಅಡ್ಡಿ, ಸಭಾತ್ಯಾಗಗಳ ನಡುವೆಯೇ ಮುಂಗಾರು ಅಧಿವೇಶನ (Monsoon Session) ಅಂತ್ಯಗೊಂಡಿದ್ದು, ಲೋಕಸಭೆ ಕಲಾಪವನ್ನು (Lok Sabha Session) ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

    ಅಧಿವೇಶನದ ಕೊನೆಯ ದಿನವಾದ ಇಂದು ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ಕುರಿತು ವಿಪಕ್ಷಗಳ ಗದ್ದಲ ಮುಂದುವರಿದಿದ್ದರಿಂದ ಕಲಾಪ ನಡೆಸಲು ಸಾಧ್ಯವಾಗದೇ ಸ್ಪೀಕರ್‌ ಅವರು ಮಧ್ಯಾಹ್ನ 12 ಗಂಟೆವರೆಗೆ ಕಲಾಪ ಮುಂದೂಡಿದ್ದರು. ನಂತರ ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಿದರು. ಈ ಮೂಲಕ ಕಲಾಪಕ್ಕೆ ಅಡ್ಡಿಪಡಿಸುವವರಿಗೆ ಸ್ಪೀಕರ ಓಂ ಬಿರ್ಲಾ (Om Birla) ತಕ್ಕ ಪಾಠ ಕಲಿಸಿದರು. ಇದನ್ನೂ ಓದಿ: ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

    ಗದ್ದಲ, ವಿಪಕ್ಷಗಳ ಪ್ರತಿಭಟನೆ ನಡುವೆಯೇ ಹಲವಾರು ಪ್ರಮುಖ ಮಸೂದೆಗಳು ಅಂಗೀಕಾರಗೊಂಡವು. ಲೋಕಸಭೆಯಲ್ಲಿ 14 ಮಸೂದೆಗಳು ಮಂಡನೆಯಾಗಿದ್ದು, ಈ ಪೈಕಿ 12 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ತಿಳಿಸಿದರು. ಇದನ್ನೂ ಓದಿ: ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

    12 ಮಸೂದೆಗಳ ಅಂಗೀಕಾರ: ಸ್ಪೀಕರ್
    ಅಧಿವೇಶನದ ವಿವರ ಮಂಡಿಸಿದ ಸ್ಪೀಕರ್‌ ಓಂ ಬಿರ್ಲಾ, ಒಟ್ಟು 14 ಸರ್ಕಾರಿ ಮಸೂದೆಗಳನ್ನ ಮಂಡಿಸಲಾಗಿದ್ದು, ಅವುಗಳಲ್ಲಿ 12 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಜುಲೈ 28 ಮತ್ತು 29 ರಂದು ವಿಶೇಷ ಚರ್ಚೆಗಳು ನಡೆದವು, ಇದು ಪ್ರಧಾನ ಮಂತ್ರಿಯವರ ಉತ್ತರದೊಂದಿಗೆ ಮುಕ್ತಾಯವಾಯಿತು. ಆಗಸ್ಟ್ 18ರಂದು ಬಾಹ್ಯಾಕಾಶ ಕಾರ್ಯಕ್ರಮದ ಸಾಧನೆಗಳ ಕುರಿತು ವಿಶೇಷ ಚರ್ಚೆಯನ್ನೂ ಸಹ ನಡೆಸಲಾಯಿತು ಎಂದು ತಿಳಿಸಿದರು.

    120 ಗಂಟೆಗಳ ಪೈಕಿ ಕೇವಲ 37 ಗಂಟೆ ಚರ್ಚೆ
    ಮುಂದುವರಿದು.. ಒಟ್ಟು 419 ಪ್ರಶ್ನೆಗಳನ್ನು ಕೇಳಲಾಗಿದ್ದು, ಕೇವಲ 55 ಪ್ರಶ್ನೆಗಳಿಗಷ್ಟೇ ಮೌಖಿಕವಾಗಿ ಉತ್ತರಿಸಲಾಯಿತು. ಎಲ್ಲರೂ ಆರಂಭದಲ್ಲಿ 120 ಗಂಟೆಗಳ ಕಾಲ ಚರ್ಚಿಸುವುದಾಗಿ ನಿರ್ಧರಿಸಿದ್ದರು. ಆದ್ರೆ ನಿರಂತರ ಕಲಾಪ ಮುಂದೂಡಿಕೆ, ಸಭಾತ್ಯಾಗ, ಪ್ರತಿಭಟನೆಯ ಕಾರಣಗಳಿಂದಾಗಿ ಕೇಲವ 37 ಗಂಟೆಗಳ ಕಾಲವಷ್ಟೇ ಚರ್ಚಿಸಲಾಯಿತು ಎಂದು ಸ್ಪೀಕರ್‌ ವಿವರ ಕೊಟ್ಟರು. ಇದನ್ನೂ ಓದಿ: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

    ಸಭ್ಯತೆಯ ಪಾಠ ಹೇಳಿದ ಸ್ಪೀಕರ್‌
    ಇಡೀ ದೇಶ ನಮ್ಮ ನಡವಳಿಕೆಗಳನ್ನು ಗಮನಿಸುತ್ತದೆ. ಜನ ನಮ್ಮ ಮೇಲೆ ಬಹಳಷ್ಟು ನಿರೀಕ್ಷೆಯಿಟ್ಟು ಆಯ್ಕೆ ಮಾಡಿ ಕಳಿಸಿರುತ್ತಾರೆ. ಹಾಗಾಗಿ ನಾವು ಗೌರವಯುತ ಚರ್ಚೆ ನಡೆಸಬೇಕು. ಆದ್ರೆ ಕೆಲ ದಿನಗಳಿಂದ ಸಹನ ಸರಿಯಾಗಿ ನಡೆಯುತ್ತಿಲ್ಲ. ಗದ್ದಲದಿಂದಲೇ ಕೂಡಿರುತ್ತದೆ. ಇದು ನಮ್ಮ ಸಂಸತ್ತಿನ ಸಂಪ್ರದಾಯವೂ ಅಲ್ಲ. ಈ ಅಧಿವೇಶನದಲ್ಲಿ ಬಳಸಿದ ಭಾಷೆ, ಘೋಷಣೆಗಳನ್ನು ಎತ್ತುವ ರೀತಿ, ಅದು ಸಭ್ಯತೆಯೂ ಅಲ್ಲ. ಇನ್ನು ಮುಂದಾದರೂ ಘೋಷಣೆ, ಪ್ರತಿಭಟನೆಗಳನ್ನು ತಪ್ಪಿಸಿ ಗೌರವಯುತ ಚರ್ಚೆ ನಡೆಸಬೇಕೆಂದು ಬಯಸುತ್ತೇನೆ ಎಂಬುದಾಗಿ ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಮುಂದಿನ ಬಾರಿ ರಾಹುಲ್ ಗಾಂಧಿಯನ್ನ ಪ್ರಧಾನಿ ಮಾಡುತ್ತೇವೆ – ಮತದಾರ ಅಧಿಕಾರ್ ರ‍್ಯಾಲಿಯಲ್ಲಿ ತೇಜಸ್ವಿ ಯಾದವ್ ಘೋಷಣೆ

    ಅಂಗೀಕಾರಗೊಂಡ ಪ್ರಮುಖ ಮಸೂದೆಗಳು
    * ವ್ಯಾಪಾರಿ ಸಾಗಣೆ, ಬಂದರುಗಳು, ಗಣಿ ಮತ್ತು ಖನಿಜ ಮಸೂದೆಗಳು
    * ಕ್ರೀಡಾ ಆಡಳಿತ ಮತ್ತು ಡೋಪಿಂಗ್ ವಿರೋಧಿ ಸುಧಾರಣೆ ಮಸೂದೆ
    * ಆದಾಯ ತೆರಿಗೆ ಪರಿಷ್ಕರಣೆ ಮತ್ತು GST ತಿದ್ದುಪಡಿ ಮಸೂದೆ
    * ಕಡಲ ಸುಧಾರಣೆಗಳು: ಸರಕು ಸಾಗಣೆ, ಸಮುದ್ರ ಮತ್ತು ಕರಾವಳಿ ಸಾಗಣೆ ಮಸೂದೆ
    * ಗೋವಾದಲ್ಲಿ ಟ್ರಿಸ್ತಾನ್ ಸೀಟುಗಳನ್ನು ಮರುಹೊಂದಿಕೆ
    * ಆನ್‌ಲೈನ್ ಗೇಮಿಂಗ್ ನಿಯಂತ್ರಣ ಮಸೂದೆಗಳನ್ನು ಅಂಗೀಕರಿಸಲಾಗಿದೆ.

  • ಮಳೆಗಾಲದ ಅಧಿವೇಶನ – ಸರ್ಕಾರಕ್ಕೆ ಮೊದಲ ದಿನವೇ ದೋಸ್ತಿಗಳಿಂದ ಪ್ರತಿಭಟನೆ ಬಿಸಿ

    ಮಳೆಗಾಲದ ಅಧಿವೇಶನ – ಸರ್ಕಾರಕ್ಕೆ ಮೊದಲ ದಿನವೇ ದೋಸ್ತಿಗಳಿಂದ ಪ್ರತಿಭಟನೆ ಬಿಸಿ

    ಬೆಂಗಳೂರು: ಮಳೆಗಾಲ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟ ಮೂಲಕ ಬಿಸಿ ಮುಟ್ಟಿಸಿದೆ. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕೆಂದು ಆಗ್ರಹಿಸಿ ಇಂದು (ಆ.11) ಬೆಳಿಗ್ಗೆ ಸದನ ಆರಂಭಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು.ಇದನ್ನೂ ಓದಿ: ಚಾ.ನಗರ| ಫೋಟೊ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ

    ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶನ ಮಾಡಿ ವಿಪಕ್ಷ ನಾಯಕರು ಘೋಷಣೆ ಕೂಗಿದರು. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ಮೇಲೆ ತಪ್ಪು ಹೊರಿಸಿ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಂಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ದಲಿತರ ಹಣ ದುರ್ಬಳಕೆ ಮಾಡಿದೆ, ರಸಗೊಬ್ಬರ ಅಭಾವ ಎದುರಾಗಿದೆ, ಕೊಲೆ, ಅತ್ಯಾಚಾರ ಚಟುವಟಿಕೆ ಹೆಚ್ಚಾಗಿದೆ, ಇದು ರೈತ ವಿರೋಧಿ, ಅಭಿವೃದ್ಧಿ ವಿರೋಧಿ ಸರ್ಕಾರ ಎಂದು ವಿಪಕ್ಷ ನಾಯಕರು ವಾಗ್ದಾಳಿ ನಡೆಸಿದರು.

    ಸದನದಲ್ಲಿ ಸರ್ಕಾರದ ವೈಫಲ್ಯಗಳನ್ನು ಪ್ರಸ್ತಾಪಿಸಿ ಪರಿಣಾಮಕಾರಿ ಹೋರಾಟ ಮಾಡೋದಾಗಿ ವಿಪಕ್ಷ ನಾಯಕರು ಗುಡುಗಿದರು.ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

     

  • ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ, ಮತ್ತೆ ಪರಿಷ್ಕರಣೆ ಮಾಡ್ತೀವಿ: ಸಚಿವ ಮುನಿಯಪ್ಪ

    ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲೇ, ಮತ್ತೆ ಪರಿಷ್ಕರಣೆ ಮಾಡ್ತೀವಿ: ಸಚಿವ ಮುನಿಯಪ್ಪ

    – ರಾಜ್ಯದಲ್ಲಿ 1.28 ಕೋಟಿ ಬಿಪಿಎಲ್ ಕಾರ್ಡ್‌ ಇವೆ
    – 5 ಮಾನದಂಡಗಳನ್ನ ಕಟ್ಟುನಿಟ್ಟಾಗಿ ಪಾಲಿಸಲು ಬದ್ಧ

    ಬೆಂಗಳೂರು: ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಬಿಪಿಎಲ್ ಕಾರ್ಡ್ (BPL Card) ಇರೋದು ಕರ್ನಾಟಕದಲ್ಲೇ, 1.28 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು 4 ಕೋಟಿ ಜನ ಇದ್ದಾರೆ. ಎಪಿಎಲ್‌ ಅರ್ಹತೆ ಹೊಂದಿರೋರು ಬಿಪಿಎಲ್‌ ಕಾರ್ಡ್‌ ಹೊಂದಿರುವುದೇ ಇದಕ್ಕೆ ಕಾರಣ. ಇದನ್ನ ಮತ್ತೆ ಪರಿಷ್ಕರಣೆ ಮಾಡ್ತೀವಿ ಎಂದು ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ (KH Muniyappa) ತಿಳಿಸಿದರು.

    ಮಳೆಗಾಲದ ಅಧಿವೇಶನ (Monsoon Session) ಇಂದಿನಿಂದ ಆರಂಭವಾಗಿದ್ದು, ಮೊದಲಿಗೆ ನಿಧನರಾದ ಗಣ್ಯರಿಗೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿ ಆರ್‌ಸಿಬಿ ಅಭಿಮಾನಿಗಳಿಗೆ ಸಂತಾಪ ಸೂಚಿಸಲಾಯಿತು. ಬಳಿಕ ಪ್ರಶೋತ್ತರ ಅವಧಿಯಲ್ಲಿ ಮಾತನಾಡಿದ, ಕಾಂಗ್ರೆಸ್‌ನ ವಿಧಾನ ಪರಿಷತ್‌ ಸದಸ್ಯ ಕಾಂಗ್ರೆಸ್ ನಾಗರಾಜ್ ಯಾದವ್, ಪಡಿತರ ಕೊಡುವ ತಂತ್ರಾಂಶದಲ್ಲಿ ಲೋಪ ಇದೆ. e-PoS ತಂತ್ರಾಂಶದಲ್ಲಿ ದೊಡ್ಡ ಲೋಪ ಆಗಿದೆ. ಇದರಿಂದ 1.5 ಕೋಟಿ ಪಡಿತರ ಚೀಟಿ ಹೊಂದಿರೋರಿಗೆ ಸಮಸ್ಯೆ ಆಗ್ತಿದೆ. ಪಡಿತರ ಕೊಡೋದ್ರಲ್ಲಿ ಅಕ್ರಮವಾಗ್ತಿದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ರು.

    ಕಾಳಸಂತೆಯಲ್ಲಿ ಮಾರಾಟ ಆಗ್ತಿರೋದು ಸತ್ಯ
    ಇದಕ್ಕೆ ಉತ್ತರಿಸಿದ ಸಚಿವ ಕೆ.ಹೆಚ್‌ ಮುನಿಯಪ್ಪ, ಮೊದಲು ತಂತ್ರಾಂಶದಲ್ಲಿ ಲೋಪ ಇತ್ತು, ಈಗ ಆ ಸಮಸ್ಯೆ ಇಲ್ಲ. ಅಲ್ಲದೇ ಪಡಿತರ ರೇಷನ್‌ ಕಾಳ ಸಂತೆಯಲ್ಲಿ ಮಾರಾಟ ಆಗ್ತಿರೋದು ಸತ್ಯ. ಇದನ್ನ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳಲಾಗಿದೆ. ಅನೇಕ ಕೇಸ್ ಹಾಕಲಾಗಿದೆ. ದಂಡ ವಸೂಲಿ ಮಾಡಲಾಗಿದೆ ಎಂದು ವಿವರಿಸಿದರು.

    ಮುಂದುವರಿದು.. ಎಪಿಎಲ್ ಕಾರ್ಡ್ ಅರ್ಹತೆ ಇರೋರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಇರೋದು ಕರ್ನಾಟಕದಲ್ಲಿ. ಕರ್ನಾಟಕದಲ್ಲೇ 75%. ಬಿಪಿಎಲ್ ಕಾರ್ಡ್ ಇವೆ. 1.28 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4 ಕೋಟಿ ಜನ ಇದ್ದಾರೆ. ಈ ಹಿಂದೆ ಎಪಿಎಲ್ ಅರ್ಹತೆ ಇರೋರು ಬಿಪಿಎಲ್‌ನಲ್ಲಿ ಇದ್ದರು. ಅದನ್ನ ಸರಿ ಮಾಡೋಕೆ ಮುಂದಾಗಿದ್ದೆವು, ಆಗ ಗಲಾಟೆ ಆಯ್ತು. ಈಗ ಮತ್ತೆ ಅದನ್ನ ಪರಿಷ್ಕರಣೆ ಮಾಡ್ತೀವಿ. ಇದಕ್ಕೆ ಎಲ್ಲಾ ಸದಸ್ಯರ ಸಹಕಾರ ಬೇಕು ಎಂದು ಮಾಹಿತಿ ನೀಡಿದರು.

    ರಾಜ್ಯದಲ್ಲಿ 5 ಮಾನದಂಡ ಇಟ್ಟುಕೊಂಡು ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇರೋರಿಗೆ ಕಾರ್ಡ್ ರದ್ದು ಮಾಡೊಲ್ಲ. ಅವರಿಗೆ ಎಪಿಎಲ್ ಕೊಡ್ತೀವಿ. ಮಾನದಂಡಗಳನ್ನು ಸರಿಯಾಗಿ ಅನುಷ್ಠಾನ ಮಾಡೋ ಕೆಲಸ ಮಾಡ್ತೀವಿ ಎಂದು ಸಭೆಗೆ ತಿಳಿಸಿದರು.

  • `ಆಪರೇಷನ್ ಸಿಂಧೂರ’ ಬಗ್ಗೆ ಸದನದಲ್ಲಿ ಮುಂದಿನ ವಾರ ಚರ್ಚೆ – ಲೋಕಸಭೆಯಲ್ಲಿ 16 ಗಂಟೆ, ರಾಜ್ಯಸಭೆಯಲ್ಲಿ 9 ಗಂಟೆ ನಿಗದಿ

    `ಆಪರೇಷನ್ ಸಿಂಧೂರ’ ಬಗ್ಗೆ ಸದನದಲ್ಲಿ ಮುಂದಿನ ವಾರ ಚರ್ಚೆ – ಲೋಕಸಭೆಯಲ್ಲಿ 16 ಗಂಟೆ, ರಾಜ್ಯಸಭೆಯಲ್ಲಿ 9 ಗಂಟೆ ನಿಗದಿ

    – ಸಂಸತ್ತಿನಲ್ಲಿ ಮೊದಲ ದಿನವೇ `ಪಹಲ್ಗಾಮ್’ ಗದ್ದಲ

    ನವದೆಹಲಿ: ಪಹಲ್ಗಾಮ್ ಉಗ್ರರದಾಳಿಗೆ ಪ್ರತೀಕಾರವಾಗಿ ಪಾಕ್ (Pakistan) ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ ವಿಚಾರದಲ್ಲಿ ಸಂಸತ್ತಿನಲ್ಲಿ ಪ್ರಸ್ತಾಪವಾಗಿ ಗದ್ದಲ-ಕೋಲಾಹಲದಿಂದಾಗಿ ಕಲಾಪವನ್ನು ಮಂಗಳವಾರಕ್ಕೆ (ಜು.22) ಮುಂದೂಡಲಾಗಿದೆ.

    ಪಹಲ್ಗಾಮ್ ಉಗ್ರರ ದಾಳಿ (Pahalgam Attack) ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿದ್ದವು. ಪ್ರಶ್ನೋತ್ತರ ಅವಧಿ ಬಳಿಕ ಅವಕಾಶ ಕೊಡ್ತೇವೆ ಅಂತ ಸ್ಪೀಕರ್ ಓಂಬಿರ್ಲಾ ಹೇಳಿದರೂ ವಿಪಕ್ಷಗಳ ಘೋಷಣೆ, ಗೋಜಲು ಹೆಚ್ಚಾಗಿ ಕಲಾಪವನ್ನು ಪದೇ ಪದೇ ಮುಂದೂಡಬೇಕಾಯಿತು. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

    ಇನ್ನೂ ಸಂಸತ್ ವ್ಯವಹಾರ ಸಲಹಾ ಸಮಿತಿಯು ʻಆಪರೇಷನ್‌ ಸಿಂಧೂರʼ (Operation Sindoor) ಕುರಿತು ಚರ್ಚೆ ನಡೆಸಲು ಮುಂದಿನವಾರ ಸಮಯ ನಿಗದಿ ಮಾಡಿದೆ. ವಿಪಕ್ಷಗಳ ಬಿಗಿ ಪಟ್ಟಿನ ಬಳಿಕ ಲೋಕಸಭೆಯಲ್ಲಿ 16 ಗಂಟೆ ಹಾಗೂ ರಾಜ್ಯಸಭೆಯಲ್ಲಿ 9 ಗಂಟೆಗಳ ಸಮಯವನ್ನ ಚರ್ಚೆಗೆ ನಿಗದಿ ಮಾಡಿರುವುದಾಗಿ ಘೋಷಿಸಿದೆ. ವಿಪಕ್ಷಗಳು ಈ ವಾರವೇ ಕಲಾಪದಲ್ಲಿ ಚರ್ಚೆ ನಡೆಸಬೇಕೆಂದು ಬಿಗಿ ಪಟ್ಟು ಹಿಡಿದಿದ್ದವು. ಆದ್ರೆ ಪ್ರಧಾನಿಯವರ ವಿದೇಶಿ ಪ್ರವಾಸದ ಹಿನ್ನೆಲೆ ಚರ್ಚೆಯನ್ನು ಮುಂದಿನ ವಾರಕ್ಕೆ ನಿಗದಿಪಡಿಸಲಾಗಿದೆ.

    ಕಳೆದ ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನವಾಗಿದೆ. ಅಲ್ಲದೇ ಆಪರೇಷನ್‌ ಸಿಂಧೂರ ವಿಪಕ್ಷಗಳು ಚರ್ಚೆಗೆ ಕೋರಿದ್ದ 8 ವಿಷಯಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

    ವಿಜಯೋತ್ಸವಕ್ಕಾಗಿ ಮುಂಗಾರು ಅಧಿವೇಶನ
    ಇನ್ನೂ ಅಧಿವೇಶನಕ್ಕೂ ಮುನ್ನ ಮಾತನಾಡಿದ ಮೋದಿ, ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಶೇ.100ರಷ್ಟು ಗುರಿಯನ್ನು ಸಾಧಿಸಲಾಗಿದೆ. ಭಯೋತ್ಪಾದಕರ ನೆಲೆಗಳನ್ನು ಕೇವಲ 22 ನಿಮಿಷಗಳಲ್ಲಿ ನೆಲಸಮ ಮಾಡಲಾಗಿದೆ. ವಿಜಯೋತ್ಸವದ ಸಂಭ್ರಮಕ್ಕಾಗಿಯೇ ಈ ಮುಂಗಾರು ಅಧಿವೇಶನ. ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸದಸ್ಯರು ಈ ವಿಜಯೋತ್ಸವವನ್ನು ಆಚರಿಸುತ್ತಾರೆಂಬ ಭರವಸೆಯಿದೆ ಎಂದು ಹೇಳಿದರು. ಅಲ್ಲದೆ, ಇಡೀ ವಿಶ್ವವೇ ಭಾರತದ ಸೇನಾ ಶಕ್ತಿಯತ್ತ ಆಕರ್ಷಿತವಾಗಿವೆ. ನನ್ನ ವಿದೇಶಿ ಭೇಟಿಯಲ್ಲಿ ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚ ಆಕರ್ಷಣೆಗೊಳಗಾಗಿರುವುದನ್ನು ಗಮನಿಸಿದ್ದೇನೆ ಅಂದರು.

  • ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

    ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

    – ಶುಭಾಂಶು ಶುಕ್ಲಾ ಸಾಧನೆ ಕೊಂಡಾಡಿದ ಪ್ರಧಾನಿ – ಅಂತರಿಕ್ಷದಲ್ಲಿ ತ್ರಿವರ್ಣ ಧ್ವಜ ಹೆಮ್ಮೆಯ ಕ್ಷಣ ಎಂದು ಬಣ್ಣನೆ

    ನವದೆಹಲಿ: ʻಆಪರೇಷನ್ ಸಿಂಧೂರʼದಲ್ಲಿ (Operation Sindoor) ಶೇ.100ರಷ್ಟು ಗುರಿಯನ್ನು ಸಾಧಿಸಲಾಗಿದೆ. ಇಂದು ಇಡೀ ವಿಶ್ವವೇ ಭಾರತದ ಸೇನಾ ಶಕ್ತಿಯತ್ತ ಆಕರ್ಷಿತವಾಗಿವೆ. ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಹೇಳಿದರು.

    ಸಂಸತ್ (Parliament) ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಅವರು, ಆಪರೇಷನ್ ಸಿಂಧೂರ ಹಾಗೂ ಭಯೋತ್ಪಾದನೆ ಕುರಿತು ಮಾತನಾಡಿದರು ವಿಜಯೋತ್ಸವದ ಸಂಭ್ರಮಕ್ಕಾಗಿಯೇ ಈ ಮುಂಗಾರು ಅಧಿವೇಶನ (Monsoon session) ಎಂದು ಹೇಳಿದರು. ಇಡೀ ವಿಶ್ವವೇ ಭಾರತದ ಸೇನಾ ಶಕ್ತಿಯ ಬಲವನ್ನ ನೋಡಿದೆ. ಆಪರೇಷನ್ ಸಿಂಧೂರದಲ್ಲಿ ಭಾರತ ಸೇನೆಯು ನಿಗದಿಪಡಿಸಿದ ಶೇ.100ರಷ್ಟು ಗುರಿಯನ್ನು ಸಾಧಿಸಿದೆ. ʻಆಪರೇಷನ್ ಸಿಂಧೂರʼ ಅಡಿಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಕೇವಲ 22 ನಿಮಿಷಗಳಲ್ಲಿ ನೆಲ ಸಮ ಮಾಡಲಾಯಿತು ಎಂದು ಬಣ್ಣಿಸಿದರು.

    ಈ ಮಳೆಗಾಲದ ಅಧಿವೇಶನವು ವಿಜಯೋತ್ಸವದ ಆಚರಣೆಯಾಗಿದೆ. ಇಡೀ ಜಗತ್ತು ಭಾರತದ ಶಕ್ತಿಯನ್ನ ನೋಡಿದೆ. ಭಾರತದ ಈ ಹೊಸ ರೂಪದ ಸೇನಾ ಶಕ್ತಿಗೆ ಇಡೀ ವಿಶ್ವವೇ ಆಕರ್ಷಿತವಾಗಿದೆ. ಇತ್ತೀಚಿನ ದಿನಗಳಲ್ಲಿ, ನಾನು ವಿದೇಶಕ್ಕೆ ಭೇಟಿ ನೀಡಿದಾಗಲೆಲ್ಲಾ ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳ ಕಡೆಗೆ ಪ್ರಪಂಚ ಆಕರ್ಷಣೆಗೊಳಗಾಗಿರುವುದನ್ನ ನಾನು ಗಮನಿಸಿದೆ ಎಂದು ಹೇಳಿದರು.

    ಇದೇ ವೇಳೆ ಆಕ್ಸಿಯಂ-4 ಮಿಷನ್ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಶುಭಾಂಶು ಶುಕ್ಲಾ ಅವರ ಸಾಧನೆಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದರು. ಈ ಮಳೆಗಾಲದ ಅಧಿವೇಶನವು ವಿಜಯೋತ್ಸವದ ಆಚರಣೆಯಾಗಿದೆ. ಈ ಋತುವು ರಾಷ್ಟ್ರೀಯ ಹೆಮ್ಮೆ ಮತ್ತು ವಿಜಯೋತ್ಸವದ ಋತುವಾಗಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೊದಲ ಬಾರಿಗೆ ಭಾರತೀಯ ತ್ರಿವರ್ಣ ಧ್ವಜವನ್ನು ಹಾರಿಸುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಈ ಯಶಸ್ವಿ ಪ್ರಯಾಣವು ದೇಶದಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆಯ ಕಡೆಗೆ ಹೊಸ ಉತ್ಸಾಹ ತುಂಬುತ್ತಿದೆ. ಇಡೀ ಸಂಸತ್ತು ಮತ್ತು ದೇಶದ ಜನತೆ ಈ ಹೆಮ್ಮೆಯಲ್ಲಿ ಒಂದೇ ಧ್ವನಿಯಲ್ಲಿ ಸೇರಿಕೊಂಡಾಗ ಅದು ಮತ್ತಷ್ಟು ಯಶಸ್ವಿಯಾಗುತ್ತದೆ ಎಂದು ಹೇಳಿದರು.

    ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಸದಸ್ಯರು ಈ ವಿಜಯೋತ್ಸವ ಆಚರಿಸುತ್ತಾರೆಂಬ ಭರವಸೆಯಿದೆ. ಇದು ಭಾರತೀಯ ರಕ್ಷಣಾ ಪಡೆಗಳ ಉತ್ಸಾಹವನ್ನ ಮತ್ತಷ್ಟು ಬಲಪಡಿಸುತ್ತದೆ ಮತ್ತು ಸೇನಾ ಕ್ಷೇತ್ರದಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಉತ್ಪಾದನೆಯನ್ನ ಪ್ರೋತ್ಸಾಹಿಸುತ್ತದೆ ಎಂದು ತಿಳಿಸಿದರು. ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ನೀರಿನ ಸಂಗ್ರಹ ಸುಮಾರು 3 ಪಟ್ಟು ಹೆಚ್ಚಾಗಿದೆ, ಇದು ಇಡೀ ದೇಶಕ್ಕೆ. ವಿಶೇಷವಾಗಿ ರೈತರು, ಹಳ್ಳಿಗಳು ಮತ್ತು ಸಾಮಾನ್ಯ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

  • ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

    ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

    ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ (Monsoon Session) ಆಪರೇಷನ್‌ ಸಿಂಧೂರ (Operation Sindoor) ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು (Kiren Rijiju) ತಿಳಿಸಿದ್ದಾರೆ.

    ಅಧಿವೇಶನಕ್ಕೆ ಮುಂಚಿತವಾಗಿ ಕರೆಯಲ್ಪಟ್ಟ ಎಲ್ಲಾ ಪಕ್ಷದ ಸಭೆಯಲ್ಲಿ ಮಾತನಾಡಿದ ರಿಜಿಜು, ಸದನದ ಸುಗಮ ಕಾರ್ಯವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಹೆಚ್ಚಿನ ಸಮನ್ವಯ ಸಾಧಿಸಬೇಕೆಂದು ಹೇಳಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ

    ಸಂಸತ್ತಿನಲ್ಲಿ ಆಪರೇಷನ್ ಸಿಂಧೂರದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ನಾವು ತುಂಬಾ ಮುಕ್ತರಾಗಿದ್ದೇವೆ. ಸಂಸತ್ತನ್ನು ಸರಾಗವಾಗಿ ನಡೆಸುವಲ್ಲಿ ಸರ್ಕಾರಿ-ಆಪರೀಟಿ ಸಮನ್ವಯ ಇರಬೇಕು ಎಂದಿದ್ದಾರೆ.

    ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಿದ್ದೇನೆಂದು ನೀಡಿರುವ ಹೇಳಿಕೆಯು ಸಹ ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಜಿಜು, ಸರ್ಕಾರವು ಸದನದಲ್ಲಿ ಎಲ್ಲದಕ್ಕೂ ಉತ್ತರಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

    ಸರ್ವಪಕ್ಷೀಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಸಂಸತ್ತಿನಲ್ಲಿ ಹೈಲೈಟ್ ಮಾಡಲು ಯೋಜಿಸಿರುವ ಹಲವಾರು ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

  • ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

    ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

    ನವದೆಹಲಿ: ಈಸ್ಟ್ ಇಂಡಿಯಾ ಕಂಪನಿ, ಪಿಎಫ್‌ಐ, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಎನ್ನುವ ಪದವಿದೆ. ಭಾರತ ಎಂದು ಹೆಸರಿದ್ದ ಮಾತ್ರಕ್ಕೆ ಅದು ಭಾರತವಾಗುವುದಿಲ್ಲ ಎಂದು ವಿಪಕ್ಷಗಳ I.N.D.I.A ಒಕ್ಕೂಟಕ್ಕೆ ಟಾಂಗ್‌ ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ತಿರುಗೇಟು ನೀಡಿದ್ದಾರೆ.

    ಮಿಸ್ಟರ್‌ ಮೋದಿ ಅವರೇ, ನಿಮಗೆ ಹೇಗೆ ಬೇಕೋ ಹಾಗೆ ನಮ್ಮನ್ನು ಕರೆಯಿರಿ. ನಾವು INDIA. ಮಣಿಪುರ ಸಂಘರ್ಷ ಸರಿಪಡಿಸಲು ಮತ್ತು ಪ್ರತಿ ಮಹಿಳೆ, ಮಗುವಿನ ಕಣ್ಣೀರು ಒರೆಸಲು ಸಹಾಯ ಮಾಡುತ್ತೇವೆ. ಎಲ್ಲ ಜನರಿಗೆ ಪ್ರೀತಿ ಮತ್ತು ಶಾಂತಿಯನ್ನು ಮರಳಿ ತರುತ್ತೇವೆ. ನಾವು ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: PFI, ಇಂಡಿಯನ್ ಮುಜಾಹಿದೀನ್‌ನಲ್ಲೂ ಭಾರತ ಅನ್ನೋ ಪದವಿದೆ – ವಿಪಕ್ಷಗಳ INDIA ಒಕ್ಕೂಟಕ್ಕೆ ಮೋದಿ ಟಾಂಗ್‌

    ಸಂಸತ್ತಿನ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭಗೊಂಡಿದ್ದು, ಪ್ರತಿಪಕ್ಷಗಳು ಮಣಿಪುರದ ಬಗ್ಗೆ ವಿಸ್ತೃತ ಚರ್ಚೆಗೆ ಒತ್ತಾಯಿಸಿವೆ. ಮಣಿಪುರ ಸಂಘರ್ಷ ವಿಚಾರವಾಗಿ ಸದನದಲ್ಲಿ ಗದ್ದಲ ಉಂಟಾಗಿದೆ. ಈ ವಿಷಯದ ಬಗ್ಗೆ ಪ್ರಧಾನಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

    ಈ ಕುರಿತು ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸರ್ಕಾರದ ನಿಲುವನ್ನು ಮುಂದಿಡಲು ಸಿದ್ಧ ಎಂದು ಹೇಳಿದ್ದರು. ಆದರೆ ಪ್ರಧಾನಿಗಳು ಮಾತನಾಡಬೇಕು ಎಂದು ಪ್ರತಿಪಕ್ಷಗಳು ಬಿಗಿಪಟ್ಟು ಹಿಡಿದಿವೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಚಿಂತನೆ

    ರಾಹುಲ್ ಗಾಂಧಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ‌ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಮುಂಗಾರು ಅಧಿವೇಶನಕ್ಕೆ ಹಾಜರಾಗುತ್ತಿಲ್ಲ. ಹೀಗಾಗಿ ಟ್ವೀಟ್‌ ಮೂಲಕ ಪ್ರಧಾನಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರಲ್ಲಿ ವಿಪಕ್ಷಗಳ ನಾಯಕರ ಸಭೆ – ಮತ್ತೆ ದಿನಾಂಕ ಮುಂದೂಡಿಕೆ

    ಬೆಂಗ್ಳೂರಲ್ಲಿ ವಿಪಕ್ಷಗಳ ನಾಯಕರ ಸಭೆ – ಮತ್ತೆ ದಿನಾಂಕ ಮುಂದೂಡಿಕೆ

    ನವದೆಹಲಿ: ಬೆಂಗಳೂರಿನಲ್ಲಿ (Bengaluru) ಜುಲೈ 17-18 ರಂದು ನಿಗಧಿಯಾಗಿದ್ದ ವಿಪಕ್ಷಗಳ ಸಭೆಯನ್ನು (All Opposition Meeting) ಮತ್ತೆ ಮುಂದೂಡಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ವಿಪಕ್ಷಗಳ ನಾಯಕರ ಸಭೆ ನಡೆಸಲಿದ್ದು ಶೀಘ್ರದಲ್ಲಿ ದಿನಾಂಕ ‌ನಿಗಧಿ ಮಾಡಲಿದ್ದೇವೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಹೇಳಿದ್ದಾರೆ.

    ನವದೆಹಲಿಯಲ್ಲಿ (NewDelhi) ಮಾತನಾಡಿದ ಅವರು, ಜುಲೈ 20 ರಿಂದ ಸಂಸತ್ ಅಧಿವೇಶನ ಆರಂಭವಾಗಲಿದೆ. ಈ ಅವಧಿಯೊಳಗೆ ನಾವು ಖಂಡಿತವಾಗಿ ವಿಪಕ್ಷಗಳ ನಾಯಕರ 2ನೇ ಸಭೆ ಕರೆಯುತ್ತೇವೆ. ದಿನಾಂಕ ಅಂತಿಮಗೊಳಿಸುವ ಬಗ್ಗೆ ಇತರೆ ನಾಯಕರೊಂದಿಗೆ ಚರ್ಚೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ- ವಿಸ್ತೃತ ವರದಿ ಕೇಳಿದ ಸುಪ್ರೀಂ ಕೋರ್ಟ್

    ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾತನಾಡಿ, ಅಜಿತ್ ಪವಾರ್ ಏಕನಾಥ್ ಶಿಂಧೆ ಸರ್ಕಾರಕ್ಕೆ ಬೆಂಬಲ‌ ನೀಡಿರುವುದು ಮಹಾ ವಿಕಾಸ್ ಅಘಾಡಿ ಒಕ್ಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಇದನ್ನೂ ಓದಿ: Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

    ಇತ್ತಿಚೆಗೆ ಪ್ರಧಾನಿ ನರೇಂದ್ರ ಮೋದಿ ಎನ್‌ಸಿಪಿ ನಾಯಕರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು ಈಗ ಅವರ ಬೆಂಬಲವನ್ನೇ ಪಡೆದಿದ್ದಾರೆ. ನಾವು ನಾಟಕ ನೋಡುತ್ತಿದ್ದೇವೆ ಇದೆಲ್ಲ ED ಅಂತಹ ಏಜೆನ್ಸಿಗಳ ಪ್ರಾಯೋಜಿತ ಎಂದು ವಾಗ್ದಾಳಿ ನಡೆಸಿದರು.

    ಈ ಹಿಂದೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ 2ನೇ ಸಭೆ ನಡೆಸಲು ತಿರ್ಮಾನಿಸಲಾಗಿತ್ತು. ಅಲ್ಲಿ ಹವಾಮಾನ ಸೂಕ್ತವಾಗಿರದ ಹಿನ್ನಲೆ ಬೆಂಗಳೂರಿನಲ್ಲಿ ಜುಲೈ 17-18 ರಂದು ಸಭೆ ಸೇರಲು ನಿರ್ಧರಿಸಿದೆ ಎಂದು ಈ ಹಿಂದೆ ಶರದ್ ಪವಾರ್ ಹೇಳಿದ್ದರು. ಈಗ ಎರಡನೇ ಬಾರಿಗೆ ಸಭೆಯ ದಿನಾಂಕ ಮುಂದೂಡಿಕೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆಯಿಂದ ಮಳೆಗಾಲದ ಅಧಿವೇಶನ- ಕಾಂಗ್ರೆಸ್ ವಿರುದ್ಧ ರೀಡೂ ಅಸ್ತ್ರಕ್ಕೆ ಬಿಜೆಪಿ ಸಿದ್ಧತೆ

    ನಾಳೆಯಿಂದ ಮಳೆಗಾಲದ ಅಧಿವೇಶನ- ಕಾಂಗ್ರೆಸ್ ವಿರುದ್ಧ ರೀಡೂ ಅಸ್ತ್ರಕ್ಕೆ ಬಿಜೆಪಿ ಸಿದ್ಧತೆ

    ಬೆಂಗಳೂರು: ನಾಳೆಯಿಂದ ಮಳೆಗಾಳದ ಅಧಿವೇಶನ (Monsoon session) ಆರಂಭವಾಗಲಿದ್ದು, ಆರಂಭದಿಂದಲೇ ಕಲಾಪ ಕಾವೇರುವ ಸಾಧ್ಯತೆ ಇದೆ. ಸಿದ್ದರಾಮಯ್ಯ (Siddaramaiah) ವಿರುದ್ಧ ಹಳೇ ಕೇಸ್ ಮೂಲಕ ಬಿಜೆಪಿ (BJP) ಸರ್ಕಾರ ಸೇಡು ತೀರಿಸಿಕೊಳ್ಳಲು ಸಿದ್ಧವಾಗಿದೆ.

    2015ರಲ್ಲಿ ಅರ್ಕಾವತಿ ಬಡಾವಣೆಯ 541 ಎಕರೆ ರೀಡು ಡಿನೋಟಿಫೈ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಆಗಿನ ಕಾಂಗ್ರೆಸ್ (Congress) ಸರ್ಕಾರವೇ ನ್ಯಾ.ಕೆಂಪಣ್ಣ ಆಯೋಗ ರಚಿಸಿತ್ತು. ಈ ಆಯೋಗ 2017ರ ಆಗಸ್ಟ್ 23ರಂದು ಸರ್ಕಾರಕ್ಕೆ 4 ಸಂಪುಟಗಳಲ್ಲಿ ಸುಮಾರು 9 ಸಾವಿರ ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ 5 ವರ್ಷವಾದ್ರೂ ಶಾಸನ ಸಭೆಯಲ್ಲಿ ಇಲ್ಲಿ ತನಕ ನ್ಯಾ.ಕೆಂಪಣ್ಣ ಆಯೋಗದ ವರದಿ ಮಂಡನೆ ಆಗಿಲ್ಲ.

    ಈಗ ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ವರದಿ ಮಂಡನೆಗೆ ಹೈಕಮಾಂಡ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ನಿನ್ನೆಯ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿ.ಟಿ.ರವಿ (C.T Ravi)ರೀಡು ಬಗ್ಗೆ ನೇರವಾಗಿ ಪ್ರಸ್ತಾಪ ಮಾಡಿದ್ರು. ಈ ಪ್ರಸ್ತಾಪದ ಬೆನ್ನಲ್ಲೇ ಸಿಎಂ ಬೊಮ್ಮಾಯಿ (Basavaraj Bommai) ವರದಿ ಮಂಡನೆಗೆ ಕಾನೂನು ತಜ್ಞರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಅಪ್ಪು ನೆನಪು

    ಈ ಅಧಿವೇಶನ ಬಿಜೆಪಿ ವರ್ಸಸ್ ಕಾಂಗ್ರೆಸ್ ಫೈಟ್‍ಗೆ ವೇದಿಕೆ ಆಗೋದು ಖಚಿತವಾದಂತಿದೆ. ಈಗಾಗಲೇ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ (Corruption) ದ ಅಸ್ತ್ರ ಪ್ರಯೋಗಕ್ಕೆ ಕಾಂಗ್ರೆಸ್ ಸಿದ್ಧವಾಗಿದ್ದು, ಸರ್ಕಾರವನ್ನ ಕಟ್ಟಿ ಹಾಕಲು ಕೈ ಪಡೆ ತಯಾರಿ ಮಾಡಿಕೊಂಡಿದೆ. ಇಷ್ಟಲ್ಲದೇ ಅಧಿವೇಶನದಿಂದಲೇ 2023ರ ಚುನಾವಣೆಗೆ ರಣಕಹಳೆ ಊದಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಂತಿದೆ. ಆದರೆ ಕಾಂಗ್ರೆಸ್ ಅಸ್ತ್ರಕ್ಕೆ ಬಿಜೆಪಿಯಿಂದಲೂ ಪ್ರತ್ತಾಸ್ತ್ರ ರೆಡಿ ಆಗ್ತಿದೆ. ಕಾಂಗ್ರೆಸ್ ಸರ್ಕಾರದ ಹಗರಣಗಳನ್ನ ಇಟ್ಕೊಂಡು ತಿರುಗೇಟು ಕೊಡೋಕೆ ಸರ್ಕಾರ ಪ್ಲ್ಯಾನ್ ಮಾಡಿದೆ. ಇದಕ್ಕಾಗಿ ಕಾಂಗ್ರೆಸ್ ಹಗರಣಗಳ ಪಟ್ಟಿಗಳನ್ನ ಬೊಮ್ಮಾಯಿ ಸರ್ಕಾರ ಸಿದ್ಧ ಮಾಡಿಕೊಂಡಿದೆ.

    ಸರ್ಕಾರದ ವಿರುದ್ದ ಕಾಂಗ್ರೆಸ್ ಅಸ್ತ್ರವೇನು!?: 40% ಕಮಿಷನ್ ಆರೋಪ, ನ್ಯಾಯಾಂಗ ತನಿಖೆಗೆ ಒತ್ತಾಯಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಲೋಕೋಪಯೋಗಿ, ಆರೋಗ್ಯ ಇಲಾಖೆ, ತೋಟಗಾರಿಕೆ ಇಲಾಖೆಗಳಲ್ಲಿ 40% ಭ್ರಷ್ಟಾಚಾರ ಆರೋಪ ಪ್ರಸ್ತಾಪ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ, ಮಹನೀಯರು ಪಠ್ಯಕ್ಕೆ ಕೊಕ್ ಕೊಟ್ಟಿರೋ ವಿಚಾರ ಪ್ರಸ್ತಾಪಿಸುವ ಸಾಧ್ಯತೆ ಇದೆ. ಬೆಂಗಳೂರು ಮಳೆ ಅನಾಹುತ ವಿಚಾರದಲ್ಲಿ ವಾಗ್ದಾಳಿ ನಡೆಸಲು ಸಿದ್ಧತೆ ನಡೆಯುತ್ತಿದೆ.

    ಬೆಂಗಳೂರಿನ ನಿರ್ವಾಹಣೆ ಬಿಜೆಪಿ ಕಾಲದಲ್ಲಿ ಸರಿಯಾಗಿ ಆಗಿಲ್ಲ. ಇವತ್ತಿನ ಪರಿಸ್ಥಿತಿಗೆ ಬಿಜೆಪಿ ಕಾರಣ ಅಂತ ಸದನದಲ್ಲಿ ತರಾಟೆಗೆ ಹಾಗೂ ಪಿಎಸ್‍ಐ ನೇಮಕಾತಿ ಹಗರಣ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ, ರಾಯಚೂರಲ್ಲಿ ಟ್ರ್ಯಾಕ್ಟರ್ ಹೆಸರಲ್ಲಿ ರೈತರಿಗೆ ಮೋಸ

    ಕಾಂಗ್ರೆಸ್ ಅಸ್ತ್ರಕ್ಕೆ ಸರ್ಕಾರದ ಪ್ರತ್ಯಾಸ್ತ್ರ: ಸಿದ್ದರಾಮಯ್ಯ ಅವಧಿಯಲ್ಲಿ ಆಗಿರೋ ರೀ ಡೂ ಹಗರಣ ಪ್ರಸ್ತಾಪಕ್ಕೆ ಸಿದ್ಧತೆ ನಡೆಯುತ್ತಿದೆ. ಕೆಂಪಣ್ಣ ಆಯೋಗದ ವರದಿ ಸದನದಲ್ಲಿ ಮಂಡಿಸಿ ತನಿಖೆಗೆ ಒಪ್ಪಿಸುವ ಬಗ್ಗೆ ಚರ್ಚೆ, ಕಾಂಗ್ರೆಸ್ ಸರ್ಕಾರದ ಸೋಲಾರ್ ಹಗರಣ (Solar Scam) ಪ್ರಸ್ತಾಪಕ್ಕೂ ಸಿದ್ಧತೆ ನಡೆದಿದೆ. ಕೇವಲ 7 ಸೆಕೆಂಡ್‍ನಲ್ಲಿ ಟೆಂಡರ್ ಪ್ರಕ್ರಿಯೆ ಮುಗಿಸಿದ ಸೋಲಾರ್ ಹಗರಣ, ಕಾಂಗ್ರೆಸ್ ಅವಧಿಯ ವಿದ್ಯುತ್ ಖರೀದಿಯಲ್ಲಿ ಆಗಿರೋ ಅಕ್ರಮ, ಸಿದ್ದರಾಮಯ್ಯ ಕಾಲದಲ್ಲಿ ಇಂಧನ ಇಲಾಖೆಯಲ್ಲಿನ ವಿದ್ಯುತ್ ಹಗರಣ ಹಾಗೂ 2014-15ನೇ ಸಾಲಿನ ಶಿಕ್ಷಕರ ನೇಮಕಾತಿ ಅಕ್ರಮದ ಹಗರಣ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ. ಈಗಾಗಲೇ ಸಿದ್ದು ಕಾಲದ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮದ ಬಗ್ಗೆ ಸಿಐಡಿ (CID) ತನಿಖೆಗೆ ಒತ್ತಾಯಿಸುವ ಸಾಧ್ಯತೆಗಳಿವೆ.

    Live Tv
    [brid partner=56869869 player=32851 video=960834 autoplay=true]

  • ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    ನವದೆಹಲಿ: ಮುಂಗಾರು ಅಧಿವೇಶನದ ವೇಳೆ ಬೆಲೆ ಏರಿಕೆ ಖಂಡಿಸಿ ಸದನದೊಳಗೇ ಭಿತ್ತಿಪತ್ರ (ಪ್ಲೇ-ಕಾರ್ಡ್) ಹಿಡಿದು ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ.

    ಸದನದಲ್ಲೇ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸಂಸದರಾದ ಮಾಣಿಕಂ ಟ್ಯಾಗೋರ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿಎನ್ ಪ್ರತಾಪನ್ ಅವರನ್ನ ಅಮಾನತು ಮಾಡಲಾಗಿದ್ದು, ಆಗಸ್ಟ್ 12ರ ವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ಹೊರಗಿಡುವಂತೆ ಸಭಾಧ್ಯಕ್ಷ ಓಂ ಬಿರ್ಲಾ ಸೂಚಿಸಿದ್ದಾರೆ. ಇದನ್ನೂ ಓದಿ: ಸಂಸತ್‌ ಅಧಿವೇಶನದಲ್ಲಿ ಧರಣಿ ನಡೆಸುವಂತಿಲ್ಲ: ಆದೇಶ ಪ್ರಕಟ

    ಇದಕ್ಕೂ ಮುನ್ನ ಸಭಾಧ್ಯಕ್ಷರು `ನಾನು ಚರ್ಚೆಗೆ ಸಿದ್ಧನಿದ್ದೇನೆ. ಇಲ್ಲಿ ಸಮಸ್ಯೆಗಳ ಬಗ್ಗೆ ಚರ್ಚೆಗಳು ಆಗಬೇಕು. ನೀವು ಪ್ರತಿಭಟನೆ ಮಾಡುವುದಿದ್ದರೆ ಸದನದಿಂದ ಹೊರಗೆ ಮಾಡಿ. ಆದರೆ ನನ್ನ ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    ಮಧ್ಯಾಹ್ನದ 3 ಗಂಟೆಯ ಬಳಿಕ ಚರ್ಚೆ ಮುಂದುವರಿಸುವುದಾಗಿ ಹೇಳಿದ್ದರು. ಆದರೆ ಶೂನ್ಯ ಸಮಯ ಆರಂಭವಾಗುವ 20 ನಿಮಿಷದ ಮುನ್ನವೇ ಚರ್ಚೆ ಅರಂಭವಾಯಿತು. ಈ ವೇಳೆ ಕಾಂಗ್ರೆಸ್ ಸಂಸದರು ಪ್ಲೇ ಕಾರ್ಡ್ ಹಿಡಿದು ಪ್ರವೇಶಿಸಿದ್ದರಿಂದ ಅವರನ್ನು ಇಡೀ ಅಧಿವೇಶನದಿಂದ ಅಮಾನತು ಮಾಡಿ, ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.

    ಸ್ಪೀಕರ್ ಕ್ರಮದ ನಂತರವೂ ನಾಲ್ವರು ಸಂಸದರು ಸಂಸತ್ ಮೈದಾನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ತೆರಳಿ ಘೋಷಣೆಗಳನ್ನು ಕೂಗಿದ್ದಾರೆ. ಕಾಂಗ್ರೆಸ್ ಸಂಸದರು ಪ್ರಮುಖ ಸಮಸ್ಯೆಗಳನ್ನು ಎತ್ತಲು ಪ್ರತ್ನಿಸುತ್ತಿದ್ದಾರೆ. ಆದರೆ ಕೆಲವರನ್ನು ಅಮಾನತು ಮಾಡುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಸದರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]