Tag: monsoon

  • ಉಡುಪಿಯಲ್ಲಿ ಗಾಳಿ ಮಳೆ- ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

    ಉಡುಪಿಯಲ್ಲಿ ಗಾಳಿ ಮಳೆ- ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

    – ದ.ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆ

    ಉಡುಪಿ: ಜಿಲ್ಲೆಯಲ್ಲಿ ಆರು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾನೆಯಿಂದಲೇ ಉಡುಪಿ ಜಿಲ್ಲೆಯ ಅಲ್ಲಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಸುಮಾರು 80 ಮಿಲಿ ಮೀಟರ್ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಜಿಲ್ಲೆಯ ಕಾಪು ಉಡುಪಿ ಕುಂದಾಪುರ ಮತ್ತು ಬೈಂದೂರ್ ತಾಲೂಕಿನಲ್ಲಿ ನಾಡದೋಣಿ ಮೀನುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ 45 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅಲೆಗಳ ಪ್ರಮಾಣ ಏರಿಕೆಯಾಗಲಿದೆ. ಸಮುದ್ರ ತೀರದಲ್ಲಿ ವಾಸಿಸುವ ಮೀನುಗಾರರು ಎಚ್ಚರಿಕೆಯಿಂದ ಇರಬೇಕು. ಕಡಲತೀರದಲ್ಲಿ 2 ಮೀಟರ್ ವರೆಗೂ ಅಲೆಗಳು ಹೇಳಬಹುದು ಮೀನುಗಾರರು ಎಚ್ಚರಿಕೆಯಿಂದ ಇರಿ ಎಂದು ಸೂಚಿಸಲಾಗಿದೆ.

    ಮುಂದಿನ ನಾಲ್ಕೈದು ದಿನ ಗಾಳಿ ಜೊತೆ ಮಳೆಯಾಗುವ ಮುನ್ಸೂಚನೆ ಇದೆ. ನದಿ, ಸಮುದ್ರ ತೀರದ ಜನ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಹೇಳಿದೆ. ನದಿ ಮತ್ತು ಸಮುದ್ರ ತೀರಕ್ಕೆ ಬರುವ ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು. ನೀರಿಗೆ ಇಳಿಯಬಾರದು ಎಂದು ಡಿಸಿ ಜಗದೀಶ್ ಸೂಚನೆ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹವಾಮಾನ ಇಲಾಖೆ ಎಚ್ಚರಿಕೆಯಂತೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೆಲಸ ಕಾರ್ಯದ ನಿಮಿತ್ತ ಓಡಾಡುವ ಜನ ಎಚ್ಚರಿಕೆಯಿಂದ ಇರಬೇಕು. ನದೀತೀರದಲ್ಲಿ ಸಮುದ್ರ ತೀರದಲ್ಲಿ ನೀರಿನ ಮಟ್ಟ ಜಾಸ್ತಿಯಾದರೆ ತಕ್ಷಣ ಕಂಟ್ರೋಲ್ ರೂಮ್ ಅಲ್ಲ ಸಂಪರ್ಕ ಮಾಡಬೇಕು ಎತ್ತರ ಪ್ರದೇಶಗಳಿಗೆ ಹೋಗಬೇಕು ಎಂದು ಮಾಹಿತಿ ನೀಡಿದರು. ಜಿಲ್ಲಾಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಯಾರು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದ್ದಾರೆ.

    ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ
    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ ಮುಂದುವರಿದಿದ್ದು, ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ,ಬೆಳ್ತಂಗಡಿ ತಾಲೂರು ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ಮಂಗಳೂರು ನಗರ ಪ್ರದೇಶದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದರೂ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ.

    ಪಶ್ಚಿಮಘಟ್ಟದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜೀವನದಿಗಳಿಗೆ ಮಳೆ ನೀರು ಹರಿದು ಬರುತ್ತಿರೋದ್ರಿಂದ ಜೀವನದಿಗಳು ತುಂಬಲಾರಂಭಿಸಿದೆ. ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

  • ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಐದು ದಿನ ಆರೆಂಜ್ ಅಲರ್ಟ್

    ಉಡುಪಿಯಲ್ಲಿ ಮುಂದುವರಿದ ಮುಂಗಾರು ಮಳೆ- ಐದು ದಿನ ಆರೆಂಜ್ ಅಲರ್ಟ್

    ಉಡುಪಿ: ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ಮುಂಗಾರು ಮಳೆ ಸುರಿಯುತ್ತಿದೆ. ಮುಂದಿನ ಐದು ದಿನ ಜಿಲ್ಲೆಗೆ ಆರೆಂಜ್ ಅಲರ್ಟ್ ವಿಸ್ತರಣೆ ಮಾಡಿ ರಾಜ್ಯ ಹವಾಮಾನ ಇಲಾಖೆ ಆದೇಶ ಹೊರಡಿಸಿದೆ.

    ಎರಡು ದಿನ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, 40-50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ನಾಡದೋಣಿ ಮೀನುಗಾರಿಕೆ ನಡೆಸದಂತೆ ಸೂಚನೆ ನೀಡಲಾಗಿದ್ದು, ನದಿ, ಸಮುದ್ರ ಪಾತ್ರದ ಜನ ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾಡಳಿತ ಸೂಚನೆ ನೀಡಿದೆ.

    ಜೂನ್ ತಿಂಗಳಲ್ಲಿ ಮುಂಗಾರು ಮಳೆ ನಿಗದಿತ ಪ್ರಮಾಣದಲ್ಲಿ ಸುರಿದಿಲ್ಲ. ಜುಲೈನಲ್ಲಿ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿತ್ತು. ರೋಮನ ಇಲಾಖೆ ಸೂಚನೆಯಂತೆ ಜುಲೈ ಮೊದಲ ವಾರದಲ್ಲಿ ಭಾರಿ ಮಳೆ ಆರಂಭವಾಗಿದೆ.

    ಕಳೆದ 10 ದಿನಗಳಿಂದ ಮುಂಗಾರುಮಳೆ ಕ್ಷೀಣಿಸಿರುವ ಕಾರಣ ಬೇಸಾಯಗಾರರು ಆತಂಕಕ್ಕೊಳಗಾಗಿದ್ದರು. ಬಿತ್ತನೆ ಮಾಡಿದವರು ನಾಟಿ ಪೂರೈಸಿದವರು ಗದ್ದೆ ಒಣಗಬಹುದು ಎಂಬ ಚಿಂತೆಯಲ್ಲಿದ್ದರು. ಸೂಕ್ತ ಕಾಲದಲ್ಲಿ ಮುಂಗಾರುಮಳೆ ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವುದರಿಂದ ಕೃಷಿಕರ ರೈತರ ಆತಂಕ ದೂರಾಗಿದೆ.

  • ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ- ಒಂದು ವಾರ ಆರೆಂಜ್ ಅಲರ್ಟ್ ಘೋಷಣೆ

    ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ- ಒಂದು ವಾರ ಆರೆಂಜ್ ಅಲರ್ಟ್ ಘೋಷಣೆ

    – ಬೆಂಗಳೂರಲ್ಲಿ ಎರಡು ದಿನ ಹೆಚ್ಚು ಮಳೆ ಸಾಧ್ಯತೆ
    – ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆ

    ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ಕರಾವಳೆಯ ಕೆಲ ಜಿಲ್ಲಗಳಲ್ಲಿ ಮಳೆಯ ಅಬ್ಬರ ಶುರುವಾಗಿದೆ.

    ಜೂನ್ 12 ರಿಂದ ಒಂದು ವಾರದ ಕಾಲ ಗುಡುಗುಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅಲ್ಲದೆ ಇಂದಿನಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆ ಮೋಡ ಕವಿದ ವಾತಾವರಣವಿರುತ್ತದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಜೂನ್ 12 ರಿಂದ 16ರ ವರೆಗೆ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ಗದಗ, ಕೋಲಾರ, ಕೊಪ್ಪಳ, ದಾವಣಗೆರೆ ಹಾಗೂ ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ನೈಋತ್ಯ ಮುಂಗಾರು ಚುರುಕು- ಉಡುಪಿಯಲ್ಲಿ ಗಾಳಿ ಮಳೆ

    ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆಯ ಮುನ್ಸೂಚನೆ ನೀಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರತೀ 24 ತಾಸುಗಳಲ್ಲಿ ಜಿಲ್ಲೆಯಲ್ಲಿ 64 ರಿಂದ 115 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಉಡುಪಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ.

    ತಾಸಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರ, ಕಾಪು, ಬ್ರಹ್ಮಾವರ, ಬೈಂದೂರು, ಹೆಬ್ರಿ, ಉಡುಪಿ ಎಲ್ಲಾ ತಾಲೂಕುಗಳಲ್ಲಿಯೂ ವ್ಯಾಪಕ ಮಳೆ ಸುರಿಯುತ್ತಿದೆ. ಇದರಿಂದ ಭತ್ತದ ಬೇಸಾಯ ಆರಂಭಿಸಲು ಕಾದಿದ್ದ ಕೃಷಿಕರಿಗೆ ಅನುಕೂಲವಾಗಿದೆ.

  • ಸಿಎಂ ವಿರುದ್ಧ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ಆರ್ ಅಶೋಕ್ ಎಚ್ಚರಿಕೆ

    ಸಿಎಂ ವಿರುದ್ಧ ಹೇಳಿಕೆ ನೀಡಿದರೆ ಶಿಸ್ತು ಕ್ರಮ: ಆರ್ ಅಶೋಕ್ ಎಚ್ಚರಿಕೆ

    ಬೆಂಗಳೂರು: ನಿಸ್ಸಂಶಯವಾಗಿ ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ಬದಲಾವಣೆ ಕೇವಲ ಊಹಾಪೋಹ. ಈ ವಿಚಾರ ಮುಗಿದು ಹೋಗಿದ್ದು, ಪಕ್ಷದ ನಾಯಕರು ಸಿಎಂ ಬದಲಾವಣೆ ಕುರಿತಂತೆ ಹೇಳಿಕೆಗಳನ್ನು ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಎಚ್ಚರಿಸಿದರು.

    ಈ ಕುರಿತಂತೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಿದ್ದು, ಮುಖ್ಯಮಂತ್ರಿಗಳು, ಪ್ರಧಾನ ಕಾರ್ಯದರ್ಶಿ ಹಾಗೂ ಮೂವರು ಹಿರಿಯ ಸಚಿವರು ಇದರಲ್ಲಿ ಇರಲಿದ್ದಾರೆ. ಈ ಸಮಿತಿಯ ಉದ್ದೇಶವೇ ಊಹಾಪೋಹದ ಸುದ್ದಿಗಳಿಗೆ ಕಡಿವಾಣ ಹಾಕುವುದಾಗಿದೆ. ಅದು ಪರವಾದರೂ ಆಗಿರಬಹುದು ಅಥವಾ ವಿರುದ್ಧವಾದರೂ ಇರಬಹುದು. ಈ ಶಿಸ್ತನ್ನು ಉಲ್ಲಂಘಿಸಿದ್ದೇ ಆದಲ್ಲಿ ಅಂಥವರ ವಿರುದ್ಧ ಪಕ್ಷ ಗಂಭೀರ ಕ್ರಮ ಜರುಗಿಸಲಿದೆ ಎಂದು ಹೇಳಿದರು.

    ಸಿಎಂ ಬದಲಾವಣೆ ವಿಚಾರಕ್ಕೆ ಫುಲ್ ಸ್ಟಾಪ್ ಹಾಕಲಾಗಿದೆ ಎಂದು ನಾನು ಭಾನುವಾರವೇ ಸ್ಪಷ್ಟಪಡಿಸಿದ್ದೇನೆ. ಯಡಿಯೂರಪ್ಪನವರೇ ನಮ್ಮ ನಾಯಕರಾಗಿದ್ದು, ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮುಂಗಾರು ಪ್ರವಾಹ ಪೂರ್ವ ಸಿದ್ಧತೆ: ಕಂದಾಯ ಸಚಿವ ಅಶೋಕ್ ಸಭೆ

    ಈ ವೇಳೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹಾಗೂ ಸದಸ್ಯರು ಕಾವೇರಿಯಲ್ಲಿ ಅಸ್ಥಿ ವಿಸರ್ಜನೆಯ ಕಾರ್ಯ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

  • ಮುಂಗಾರು ಪ್ರವಾಹ ಪೂರ್ವ ಸಿದ್ಧತೆ: ಕಂದಾಯ ಸಚಿವ ಅಶೋಕ್ ಸಭೆ

    ಮುಂಗಾರು ಪ್ರವಾಹ ಪೂರ್ವ ಸಿದ್ಧತೆ: ಕಂದಾಯ ಸಚಿವ ಅಶೋಕ್ ಸಭೆ

    ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಘಟಿಸಿದ ಪ್ರವಾಹ ಪರಿಸ್ಥಿತಿಗಳಿಂದ ಕಲಿತ ಪಾಠ ಹಾಗೂ ಅನುಭವಗಳನ್ನ ಗಮನದಲ್ಲಿಟ್ಟುಕೊಂಡು ಮತ್ತು ದೇಶದ ಇತರ ಭಾಗಗಳಲ್ಲಿ ಪ್ರವಾಹವಾದಾಗ ಹೇಗೆ ನಿರ್ವಹಿಸಲಾಗಿತ್ತು ಎಂಬುದನ್ನು ಪರಿಗಣನೆಗೆ ತೆಗದುಕೊಂಡು ಕರ್ನಾಟಕ ಪ್ರವಾಹ ನಿರ್ವಹಣಾ ಕ್ರಿಯಾ ಯೋಜನೆ 2021ನ್ನು ಸಿದ್ಧಪಡಿಸಲಾಗಿದೆ. ಕಂದಾಯ ಸಚಿವ ಹಾಗೂ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾದ ಆರ್ ಅಶೋಕ ಮುಂಗಾರು ಪ್ರವಾಹ ಪೂರ್ವ ಸಿದ್ಧತೆ ಕುರಿತಂತೆ ಸೋಮವಾರ ಸಭೆ ಕರೆದು ಚರ್ಚೆ ನಡೆಸಿದರು.

    ಈ ಸಭೆ ಕುರಿತಂತೆ ಮಾಹಿತಿ ನೀಡಿದ ಸಚಿವ ಅಶೋಕ್‌, ಕರ್ನಾಟಕದಲ್ಲಿ 1,710 ಗ್ರಾಮಗಳನ್ನ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳೆಂದು ಗುರುತಿಸಲಾಗಿದೆ. ಅದರಲ್ಲಿ 758 ಗ್ರಾಮಗಳನ್ನ ಹೆಚ್ಚು ವಿಪತ್ತಿಗೆ ಒಳಗಾಗುವ ಮತ್ತು 952 ಗ್ರಾಮಗಳನ್ನ ಮಧ್ಯಮ ವಿಪತ್ತಿನ ಗ್ರಾಮಗಳೆಂದು ವಿಭಾಗಿಸಲಾಗಿದೆ. ಈ ಕುರಿತಂತೆ ಕೈಗೊಳ್ಳಬೇಕಾದ ಅಂಶಗಳನ್ನ ಪಟ್ಟಿ ಮಾಡಿ ಸಂಬಂಧಿತ ಅಧಿಕಾರಿಗಳಿಗೆ ಕಳುಹಿಸಲಾಗಿದ್ದು, ಪ್ರವಾಹ ಪರಿಸ್ಥಿತಿಯಲ್ಲಿ ಸೂಚಿಸಿದ ಅಂಶಗಳ ಹೊರತಾಗಿಯೂ ಬೇರೆ, ಬೇರೆ ಇಲಾಖೆಗಳ ಜೊತೆಗೆ ಸಮನ್ವಯ ಸಾಧಿಸಿ ಪರಿಸ್ಥಿತಿ ನಿಭಾಯಿಸಲು ತಿಳಿಸಲಾಗಿದೆ ಎಂದರು.

    ಪರಿಹಾರ ಕಾರ್ಯಗಳ ಕುರಿತಂತೆ ಗ್ರಾಮಸ್ಥರನ್ನ ಒಳಗೊಂಡ ವಿವಿಧ ಸಮಿತಿಗಳನ್ನು ರೂಪಿಸಿ ಅವರಿಗೆ ನಿರ್ದಿಷ್ಟ ಜವಾಬ್ದಾರಿಗಳನ್ನ ನೀಡಬೇಕಿದೆ. ಪ್ರವಾಹ ಉಂಟಾದಾಗ ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಸಂಪರ್ಕ ನೀಡಬೇಕು. ಪರಿಹಾರ ಕಾರ್ಯಗಳ ಕುರಿತಂತೆ ಪಾರದರ್ಶಕತೆ ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದ್ದು, ಹಿರಿಯ ನಾಗರಿಕರು, ವಿಕಲಚೇತನರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಲಾಗುವುದು. ಗಂಜಿ ಕೇಂದ್ರ ಎಂಬ ಪದಬಳಕೆ ಕೈಬಿಡಲಾಗಿದ್ದು, ಕಡ್ಡಾಯವಾಗಿ ಪೌಷ್ಠಿಕ ಆಹಾರ ನೀಡುವಂತೆ ತಿಳಿಸಲಾಗಿದೆ. ಸ್ಥಳಾಂತರಗೊಂಡಿರುವವರಿಗೆ ಹೊದಿಕೆ ಕೂಡಾ ನೀಡಲು ಸೂಚಿಸಲಾಗಿದೆ. 2021ನೇ ಸಾಲಿಗೆ ಕೇಂದ್ರವು ಎಸ್.ಡಿ.ಆರ್.ಎಫ್ ನಿಧಿ ಅಡಿಯಲ್ಲಿ 1054 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಮೊದಲ ಕಂತಿನ ಭಾಗವಾಗಿ ಈಗಾಗಲೇ 316.4 ಕೋಟಿ ರೂಪಾಯಿ ಅನುದಾನವನ್ನ ಮಂಜೂರು ಮಾಡಿದ್ದು, ಅದು ಈಗಾಗಲೇ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯವಿರುತ್ತದೆ. ಟೌಟೆ ಚಂಡಮಾರುತದಿಂದಾದ ಹಾನಿಯ ವರದಿಯನ್ನು ಆದಷ್ಟು ಬೇಗ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದರು. ಇದನ್ನೂ ಓದಿ: ಮುಂಗಾರುಮಳೆ-2 ಚಿತ್ರದ ನಟಿಯ ತಂದೆ ಅರೆಸ್ಟ್..!

    ಈ ಬಾರಿ ಮಳೆ ಹೇಗೆ..?: ಮುಂಗಾರು ಪೂರ್ವ ಅವಧಿಯಲ್ಲಿ ಕರ್ನಾಟಕದಲ್ಲಿ ಶೇ.74ರಷ್ಟು ಅಧಿಕ ಮಳೆಯಾಗಿದೆ (ಜನವರಿ 1ರಿಂದ ಮೇ 31ರ ವರೆಗೆ). 30 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಮಳೆ ಕೊರತೆ ಕಂಡು ಬಂದಿದೆ. ಮುಂಗಾರು ಋತುವಿನಲ್ಲಿ (ಜೂನ್-ಸೆಪ್ಟೆಂಬರ್) ರಾಜ್ಯದಲ್ಲಿ ಶೇ. 74ರಷ್ಟು ಮಳೆಯನ್ನ ನಿರೀಕ್ಷಿಸಲಾಗುತ್ತಿದೆ. ಕೃಷಿ ಬಿತ್ತನೆ, ಉತ್ಪಾದನೆ ಹಾಗೂ ಜಲ ಸಂಪನ್ಮೂಲಗಳು ಇದರ ಮೇಲೆಯೇ ಅವಲಂಬಿತವಾಗಿವೆ. ಬಾರತೀಯ ಹವಾಮಾನ ಇಲಾಖೆಯ ಅನುಸಾರ ವಾಡಿಕೆಯಷ್ಟು ಮಳೆ ಬೀಳುವ ಸಾಧ್ಯತೆಯಿದೆ. 30 ಜಿಲ್ಲೆಗಳ ಪೈಕಿ 23 ಜಿಲ್ಲೆಗಳಲ್ಲಿ ವಾಡಿಕೆ ಅಥವಾ ಅದಕ್ಕಿಂತ ಉತ್ತಮ ಹಾಗೂ 7 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಅಥವಾ ಅದಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. 16 ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ, 10 ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮತ್ತು 4 ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದರು.

    ಸಿದ್ಧತೆ ಹೇಗಿದೆ?: 2021ರಲ್ಲಿ ಹವಾಮಾನ ಇಲಾಖೆ ವಾಡಿಕೆಯಷ್ಟು ಮಳೆ ಬೀಳಬಹುದು ಎಂಬ ಮುನ್ಸೂಚನೆ ನೀಡಿದ್ದು, ನಾವು ಅನಿರೀಕ್ಷಿತ ಘಟನೆಗಳಾದ ಪ್ರವಾಹ, ಭೂಕುಸಿತ, ಬರ ಮತ್ತು ಸಿಡಿಲು ಸಂಭವಿಸಿದ ವೇಳೆ ಕೈಗೊಳ್ಳಬಹುದಾದ ಸಿದ್ಧತೆ ಕುರಿತಂತೆ ಸಭೆ ನಡೆಸಿದ್ದೇವೆ. ಈ ವಿಪತ್ತುಗಳನ್ನ ನಿರ್ವಹಿಸಲು ಕಾರ್ಯತಂತ್ರಗಳನ್ನ ರೂಪಿಸಬೇಕಿದೆ. ಮೊದಲು ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನ ಗುರುತಿಸಿ ಅವುಗಳಿಗೆ ಪ್ರವಾಹ ನಿರ್ವಹಣಾ ಯೋಜನೆಗಳನ್ನು ಮಾಡಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ಪ್ರವಾಹ ಮುನ್ಸೂಚನಾ ಘಟಕವನ್ನು ಸ್ಥಾಪಿಸಲಾಗಿದೆ. ಆಣೆಕಟ್ಟು ಜಲ ನಿರ್ವಹಣೆ ಹಾಗೂ ಮಾಹಿತಿ ವಿನಿಮಯ ಕುರಿತಂತೆ ಅಂತರ್ ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಲಾಗಿದೆ. ವಿಕೋಪ ನಿರ್ವಹಣೆಗೆ ನಾಲ್ಕು NDRF ತಂಡಗಳನ್ನ ನಿಯೋಜನೆ ಮಾಡಲಾಗಿದೆ. ಸುಮಾರು 400ಕ್ಕೂ ಹೆಚ್ಚು SDRF ತಂಡಗಳನ್ನ ಸಿದ್ಧಪಡಿಸಿ, ತುರ್ತು ಪರಿಹಾರ ಪರಿಕರ ಸಾಮಗ್ರಿಗಳೊಂದಿಗೆ ಸನ್ನದ್ಧಗೊಳಿಸಲಾಗಿದೆ. ಪ್ರತಿವಾರ ಸಂಬಂಧಿಸಿದ ಇಲಾಖೆಗಳೊಂದಿಗೆ ಸಭೆ ನಡೆಸಿ ಅವಲೋಕನ ಮಾಡಿ ಸೂಕ್ತ ನಿರ್ದೇಶನಗಳನ್ನ ನೀಡಲಾಗುತ್ತಿದೆ ಎಂದರು.

    ಟೌಟೆ ಚಂಡಮಾರುತದ ಹಾನಿಯ ಪ್ರಮಾಣ ತಗ್ಗಿಸಲು ನನ್ನ ಅಧ್ಯಕ್ಷತೆಯಲ್ಲಿ ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತದೊಂದಿಗೆ ಮೇ 15ರಂದು ಸಭೆ ನಡೆಸಲಾಯಿತು. ಮೇ 17, 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಹಾನಿಯ ಪ್ರಮಾಣ ಮತ್ತು ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲಾಯಿತು ಎಂದು ಸಚಿವರು ಹೇಳಿದರು.

    ಇದನ್ನೂ ಓದಿ: ಸದಾ ನೆನಪಿನಲ್ಲಿಯೇ ಇರ್ತಿಯಾ ಗೆಳೆಯ: ಚಿರು ನೆನೆದ ದಚ್ಚು
    ಇದನ್ನೂ ಓದಿ: ಪ್ರೀತ್ಸೆ..ಪ್ರೀತ್ಸೆ ಅಂತ ಕಾಡಿದ ಪಾಗಲ್ ಪ್ರೇಮಿ – ಯುವಕನ ಕಾಟ ಸಹಿಸಲಾರದೆ ವಿದ್ಯಾರ್ಥಿನಿ ಆತ್ಮಹತ್ಯೆ
    ಇದನ್ನೂ ಓದಿ: ನರೇಗಾ ಯೋಜನೆಯಡಿ ಬಾಳೆ ಬೆಳೆದು ಬಾಳು ಹಸನಾಗಿಸಿಕೊಂಡ ಕೊಪ್ಪಳದ ರೈತ
    ಇದನ್ನೂ ಓದಿ: ನೀನು ಎಲ್ಲಿದ್ದರೂ ನಿನ್ನ ನಗು ಜೀವಂತ ಚಿರು ಮಗನೆ: ಅರ್ಜುನ್ ಸರ್ಜಾ ಭಾವುಕ
    ಇದನ್ನೂ ಓದಿ: ಮಾರ್ಚ್ 15ರ ನಂತ್ರ ಜೀವನವೇ ಬದಲಾಯ್ತು: ನಟಿ ಮಯೂರಿ

  • ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ – ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ – ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಮಾಹಿತಿ ನೀಡಿದೆ. ಇದನ್ನೂ ಓದಿ : ಒಂದೇ ಗಂಟೆಗೆ ಒಂದುಕಾಲು ಇಂಚು ಮಳೆ – ಮಲೆನಾಡಿಗರಿಗೆ ಸಂತೋಷದ ಜೊತೆ ಆತಂಕ

    ಕೇರಳಕ್ಕೆ ನೈರುತ್ಯ ಮಾರುತಗಳು ಈಗಾಗಲೇ ಪ್ರವೇಶಿಸಿದೆ. ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ.

    ಜೂನ್ 6ರ ತನಕವೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.ಒಟ್ಟು 17 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು, ಹಾಸನ, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

    ಎಷ್ಟು ಮಳೆಯಾಗುತ್ತೆ?
    64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್ ಅಲರ್ಟ್ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್ ಅಲರ್ಟ್ ಘೋಷಣೆ ಮಾಡಲಾಗುತ್ತದೆ.

  • ಒಂದೇ ಗಂಟೆಗೆ ಒಂದುಕಾಲು ಇಂಚು ಮಳೆ – ಮಲೆನಾಡಿಗರಿಗೆ ಸಂತೋಷದ ಜೊತೆ ಆತಂಕ

    ಒಂದೇ ಗಂಟೆಗೆ ಒಂದುಕಾಲು ಇಂಚು ಮಳೆ – ಮಲೆನಾಡಿಗರಿಗೆ ಸಂತೋಷದ ಜೊತೆ ಆತಂಕ

    ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಕೆಲ ಭಾಗದಲ್ಲಿ ಮಳೆರಾಯ ಅಪ್ಪರಿಸಿ ಬೊಬ್ಬಿರಿದಿದ್ದಾನೆ. ಮಳೆ ಕಂಡು ಮಲೆನಾಡಿಗರಿಗೆ ಒಂದೆಡೆ ಖುಷಿ, ಮತ್ತೊಂದೆಡೆ ಆತಂಕದ ಸ್ಥಿತಿ ನಿರ್ಮಾಣವಾಗಿದೆ.

    ಕೊಪ್ಪ ತಾಲೂಕಿನ ಜಯಪುರದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆ ಸುರಿದಿದೆ. ಮಳೆಯ ಅಬ್ಬರ ಎಷ್ಟು ಜೋರಾಗಿತ್ತು ಎಂದರೆ, ಸುಮಾರು ಒಂದು ಗಂಟೆಗೆ ಒಂದೂಕಾಲು ಇಂಚಿನಷ್ಟು ಮಳೆ ಸುರಿದಿದೆ. ಮಳೆಯ ಅಬ್ಬರ ಕಂಡು ಜಯಪುರ ಸುತ್ತಮುತ್ತಲ್ಲಿನ ಜನ ಆತಂಕಕ್ಕೀಡಾಗಿದ್ದರು. ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ ಸಂಜೆ 5.30ರ ತನಕವೂ ಒಂದೇ ಸಮನೆ ಸುರಿದಿದೆ. ಭಾರೀ ಮಳೆಗಾಳಿಗೆ ರಸ್ತೆ ಬದಿಯ ಮರದ ಟೊಂಗೆಗಳು ಮುರಿದು ಬಿದ್ದಿವೆ. ಜಯಪುರ ಸುತ್ತಮುತ್ತಲಿನ ಕೆಲ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕೂಡ ಕಡಿತಗೊಂಡಿದೆ.

    ಇನ್ನೂ ಮಲೆನಾಡು ಭಾಗಗಳಾದ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರದಲ್ಲೂ ಮೋಡಕವಿದ ವಾತಾವರಣವಿದ್ದು ಅಲ್ಲಲ್ಲೆ ಸಾಧಾರಣ ಮಳೆ ಸುರಿದಿದೆ. ಬಿಸಿಲಿನ ಝಳಕ್ಕೆ ಬೇಸತ್ತಿದ್ದ ಮಲೆನಾಡಿಗರಿಗೆ ವರುಣದೇವ ತಂಪೆರೆದಿದ್ದಾನೆ. ಕಳೆದೊಂದು ವಾರದಿಂದಲೂ ಮಲೆನಾಡಲ್ಲಿ ಮೋಡಕವಿಯುತ್ತಿದ್ದು ಅಷ್ಟಾಗಿ ಮಳೆಯಾಗಿರಲಿಲ್ಲ. ಇಂದು ಜಯಪುರದಲ್ಲಿ ಸುರಿದ ಮಳೆ ಕಂಡು ಮಲೆನಾಡಿಗರು ಮತ್ತೆ ಆತಂಕಕ್ಕೀಡಾಗಿದ್ದಾರೆ. ಇನ್ನೇನು ಮಲೆನಾಡಲ್ಲಿ ನಾಳೆ-ನಾಡಿದ್ದು ಎನ್ನುವಷ್ಟರಲ್ಲಿ ಮಳೆಗಾಲದ ಆರಂಭವಾಗಲಿದೆ.

    ಮಳೆಗಾಲದ ಆರಂಭದ ಮೊದಲ ಮಳೆಯೇ ಈ ಪ್ರಮಾಣದಲ್ಲಿ ಸುರಿದಿದೆ ಅಂದರೆ, ಈ ಬಾರಿಯ ಮಳೆಗಾಲ ಹೇಗಿರಬಹುದು ಎಂದು ಜನ ಈಗಲೇ ಚಿಂತಾಕ್ರಾಂತರಾಗಿದ್ದಾರೆ. ಯಾಕಂದರೆ ಕಾಫಿನಾಡಲ್ಲಿ ಕಳೆದ ಎರಡ್ಮೂರು ವರ್ಷಗಳ ಮಳೆ ಮಲೆನಾಡಿಗರಿಗೆ ಮಳೆ ಎಂದರೆ ಭಯಪಡುವಂತಹಾ ಸ್ಥಿತಿ ನಿರ್ಮಿಸಿತ್ತು.

  • ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ರಸಗೊಬ್ಬರ ಸಾಗಾಟ, ಮಾರಾಟಕ್ಕೆ ಅನುಮತಿ- ಸರ್ಕಾರದಿಂದ ಘೋಷಣೆ

    ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ರಸಗೊಬ್ಬರ ಸಾಗಾಟ, ಮಾರಾಟಕ್ಕೆ ಅನುಮತಿ- ಸರ್ಕಾರದಿಂದ ಘೋಷಣೆ

    – ಮುಂಗಾರು ಚುರುಕು ಹಿನ್ನೆಲೆ ಕ್ರಮ

    ಬೆಂಗಳೂರು: ಕೇರಳಕ್ಕೆ ನಾಳೆ ಮಾನ್ಸೂನ್ ಮಾರುತಗಳು ಪ್ರವೇಶಿಸಲಿದ್ದು, ಈ ಹಿನ್ನೆಲೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಸಹ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಹೀಗಾಗಿ ಮುಂಗಾರು ಹಂಗಾಮಿಗೆ ರೈತರು ಭರ್ಜರಿ ಸಿದ್ಧತೆ ನಡೆಸಿದ್ದು, ಬೀಜ, ಗೊಬ್ಬರ ಖರೀದಿಯಲ್ಲಿ ತೊಡಗಿದ್ದಾರೆ. ಹೀಗಾಗಿ ಅಂಗಡಿಗಳ ಮುಂದೆರ ಸಾಲು ಹೆಚ್ಚುತ್ತಿದೆ. ಉದನ್ನು ಮನಗಂಡ ಸರ್ಕಾರ ರಸಗೊಬ್ಬರ ಸಾಗಣೆ ಹಾಗೂ ಮಾರಾಟಕ್ಕೆ ಅನುಮತಿ ನೀಡಿದೆ.

    ಈ ಕುರಿತು ಸರ್ಕಾರ ಆದೇಶ ಹೊರಡಿಸಿದ್ದು, ಬೆ. 6 ರಿಂದ ಸಂಜೆ 6 ಗಂಟೆಯವರೆಗೆ ರಸಗೊಬ್ಬರ ಸಾಗಾಟ, ಮಾರಾಟಕ್ಕೆ ಅನುಮತಿ ನೀಡಿದೆ. ಇದರಿಂದಾಗಿ ರೈತರು ಬೆಳಗ್ಗೆ ಬೇಗ ತೆರಳಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವುದು ತಪ್ಪಿದಂತಾಗುತ್ತದೆ. ಇದನ್ನೂ ಓದಿ: ಮುಂಗಾರು ಆರಂಭ- ಬೀಜ, ಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

    ಮತ್ತೊಂದು ಮಹತ್ವದ ಘೋಷಣೆ ಮಾಡಿರುವ ಸರ್ಕಾರ, ರಫ್ತು ವಲಯದ ಕೈಗಾರಿಕೆಗಳು ಹಾಗೂ ಗಾರ್ಮೆಂಟ್ಸ್ ಗಳ ಕಾರ್ಯಾಚರಣೆಗೆ ಷರತ್ತುಬದ್ಧ ಅನುಮತಿ ನೀಡಿದೆ. ಶೇ.50 ರಷ್ಟು ಕಾರ್ಮಿಕರನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲು ಸಮ್ಮತಿಸಿದೆ. 1,000 ಕಾರ್ಮಿಕರ ಮೇಲಿರುವ ಕೈಗಾರಿಕೆಗಳಲ್ಲಿ ಶೇ.10ರಷ್ಟು ಕಾರ್ಮಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯವಾಗಿದ್ದು, ವಾರಕ್ಕೆ ಎರಡು ಬಾರಿ ಟೆಸ್ಟ್ ಮಾಡಬೇಕು ಎಂದು ಷರತ್ತುಬದ್ಧ ಅನುಮತಿ ನೀಡಿದೆ.

  • ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ

    ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ

    ಮಡಿಕೇರಿ: ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಬಳಿಕ ಮಾತನಾಡಿದ ಅವರು, ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಾಲೂಕುವಾರು ಪ್ರತ್ಯೇಕವಾಗಿ ಸಭೆ ನಡೆಸಿರು.

    ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುಂಚಿತವಾಗಿ, ಲಿಖಿತವಾಗಿ ಕುಟುಂಬಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಲೋಕೋಪಯೋಗಿ ಹೀಗೆ ಹಲವು ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮಳೆ ಹಾನಿ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.

    ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್‍ಪೊರ್ಸ್ ಸಮಿತಿ ಸಭೆ ನಡೆಸಿ, ಸೂಕ್ಷ್ಮ ಪ್ರದೇಶಗಳಿಗೆ ಎನ್‍ಡಿಆರೆಫ್ ತಂಡ ಭೇಟಿ ನೀಡುವುದು, ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು. ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಫೋಟೋ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಭೂ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯತ್ ತಂತಿ ಮೇಲೆ ಮರ ಬಿದ್ದಲ್ಲಿ ತಕ್ಷಣವೇ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.

    ತಹಶೀಲ್ದಾರ್ ಗೋವಿಂದರಾಜು ಮಾಹಿತಿ ನೀಡಿ, ಮುಂಗಾರು ಸಂಬಂಧ ಸೋಮವಾರಪೇಟೆ ತಾಲೂಕಿನಲ್ಲಿ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳ 775 ಕುಟುಂಬಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಕುಶಾಲನಗರ ನೆಲ್ಯಹುದಿಕೇರಿ, ಮಾದಾಪುರ, ಗರ್ವಾಲೆ, ಸೂರ್ಲಬಿ ಮತ್ತಿತ್ತರ ಕಡೆಯಲ್ಲಿ ಪ್ರವಾಹ ಉಂಟಾಗಲಿದ್ದು, ಈ ಪ್ರದೇಶದಲ್ಲಿನ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಪರಿಹಾರ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವುದರಿಂದ ಸೀಮೆಎಣ್ಣೆ ಪೂರೈಸಬೇಕಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದರು.

  • ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

    ಅರಿಶಿಣ, ಕೊಬ್ಬರಿ ಎಣ್ಣೆ, ಕಹಿಬೇವು, ಕಡಲೆಹಿಟ್ಟಿನಿಂದ ಮಳೆಗಾಲದಲ್ಲಿ ತ್ವಚೆಯ ರಕ್ಷಣೆ

    ನೇಕ ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಈ ನಡುವೆ ಮಳೆಯಲ್ಲಿ ಆರೋಗ್ಯ ರೀತಿಯ ತ್ವಚೆಯ ರಕ್ಷಣೆ ಮಾಡಿಕೊಳ್ಳಬೇಕು. ಮಳೆಗಾಲದಲ್ಲಿ ಶೀತ, ಉಸಿರಾಟದ ತೊಂದರೆ ಮತ್ತು ಚರ್ಮದ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಕಾಲಕ್ಕೆ ತಕ್ಕಂತೆ ನಮ್ಮ ತ್ವಚೆಯ ರಕ್ಷಣೆ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಇದನ್ನೂ ಓದಿ: ಪುರುಷರ ತ್ವಚೆಯ ರಕ್ಷಣೆಗಾಗಿ ನಾಲ್ಕು ಸರಳ ಹೆಲ್ತ್ ಟಿಪ್ಸ್

    ಸಾಮಾನ್ಯವಾಗಿ ಮಳೆಗಾಲದಲ್ಲಿ ವಾತಾವರಣದಲ್ಲಿ ಅಧಿಕ ತೇವಾಂಶವಿರುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಅಲರ್ಜಿ, ಒಡಕು ಇಂತಹ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಈ ರೀತಿ ಸಮಸ್ಯೆಗಳಿಂದ ಚರ್ಮವನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದರೆ ಕೆಲ ಉಪಯುಕ್ತ ಸಲಹೆಗಳು ನಿಮಗಾಗಿ ಇಲ್ಲಿವೆ.

    * ಮಳೆಗಾಲದಲ್ಲಿ ನಮ್ಮ ರೋಗ-ನಿರೋಧಕ ಶಕ್ತಿಯನ್ನು ನಾವು ಹೆಚ್ಚಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಏಕೆಂದರೆ ಸೋಂಕುಗಳ ಹಾವಳಿ ಈ ಸಮಯದಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಆರೋಗ್ಯ ಬೇರೆ ಸಮಯಕ್ಕೆ ಹೋಲಿಸಿದರೆ ಮಳೆಗಾಲದಲ್ಲಿ ಹೆಚ್ಚು ಹದಗೆಡುತ್ತದೆ. ಹಾಗಾಗಿ ಬೆಳಗಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಸ್ವಲ್ಪ ಜೇನು ತುಪ್ಪವನ್ನು ಹಾಕಿ ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದು ದೇಹದಿಂದ ವಿಷಕಾರಿ ಅಂಶಗಳನ್ನು ಮತ್ತು ಸೋಂಕುಕಾರಕ ಕ್ರಿಮಿಗಳನ್ನು ಹೊರಹಾಕುವಲ್ಲಿ ತುಂಬಾ ಸಹಾಯಕ.

    * ಮಳೆಗಾಲದಲ ವಾತಾವರಣದಲ್ಲಿ ತೇವಾಂಶ ಅಧಿಕವಿರುವುದರಿಂದ ತ್ವಚೆಯಲ್ಲಿ ತುರಿಕೆ. ಅಲರ್ಜಿ ಮುಂತಾದ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಹೀಗಾಗಿ ಲೋಳೆಸರದಲ್ಲಿ ಏನಾದರೂ ತ್ವಚೆ ಅಲರ್ಜಿ ಆಗಿದ್ದರೆ ಅದನ್ನು ಗುಣಪಡಿಸುವ ಸಾಮರ್ಥ್ಯ ಇದೆ. ತಾಜಾ ಲೋಳೆಸರವನ್ನು ತ್ವಚೆ ಅಲರ್ಜಿಯಾಗಿರುವ ಜಾಗಕ್ಕೆ ಹಚ್ಚಿದರೆ ಅಲರ್ಜಿ ಕಡಿಮೆಯಾಗುವುದು. ಅಲ್ಲದೆ ಲೋಳೆಸರ ಹಚ್ಚುವುದರಿಂದ ತ್ವಚೆ ಕಾಂತಿ ಹೆಚ್ಚುವುದು.
    * ಕಹಿಬೇವಿನಲ್ಲಿ ಸೋಂಕು ನಿವಾರಕ ಗುಣವಿದೆ. ಹೀಗಾಗಿ ಮೊಡವೆ, ಕಪ್ಪು ಕಲೆ, ಮೈ ಮೇಲೆ ಗುಳ್ಳೆಗಳು ಇವುಗಳನ್ನು ಗುಣಪಡಿಸುವಲ್ಲಿ ಕಹಿಬೇವು ಸಹಕಾರಿ.

    * ಮೊಡವೆ, ಕಪ್ಪುಕಲೆ ಮುಂತಾದ ತೊಂದರೆಗೆ ಮುಖಕ್ಕೆ ಅರಿಶಿಣ ಹಚ್ಚಿದರೆ ಒಳ್ಳೆಯದು. ಅರಿಶಿಣವನ್ನು ಆಹಾರದಲ್ಲಿ ಬಳಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಮಳೆಗಾಲದ ಆಹಾರದಲ್ಲಿ ಅರಿಶಿಣ ಇರಬೇಕು.
    * ಬಿಸಿ ನೀರಿಗೆ ಒಂದು ಚಮಚ ಕೊಬ್ಬರಿ ಎಣ್ಣೆ ಹಾಕಿ ಸ್ನಾನ ಮಾಡುವುದು. ಇದರಿಂದ ಚರ್ಮದಲ್ಲಿನ ಡ್ರೈನೆಸ್ ಹೋಗುತ್ತದೆ.
    * ತ್ವಚೆ ಒಣಗಿದಂತೆ ಅಥವಾ ತುರಿಕೆಯಂತಹ ಸಮಸ್ಯೆ ಕಂಡುಬಂದರೆ ಕೊಬ್ಬರಿ ಎಣ್ಣೆಯನ್ನು ಮೈಗೆ ಹಚ್ಚಿ, ಅರ್ಧ ಗಂಟೆ ಬಿಟ್ಟು ಬಿಸಿ ನೀರಿನಿಂದ ಸ್ನಾನ ಮಾಡುವುದು.
    * ಸ್ನಾನದ ನೀರಿನಲ್ಲಿ ಗುಲಾಬಿ ಎಸಳುಗಳನ್ನು ಹಾಕಿ ಕೆಲ ಸಮಯದ ಬಳಿಕ ಆ ನೀರಿನಲ್ಲಿ ಸ್ನಾನ ಮಾಡಬೇಕು. ಇದರಿಂದ ಮಳೆಗಾಲದಲ್ಲಿ ತ್ವಚೆ ಕಾಂತಿಯುತವಾಗಿರುತ್ತದೆ.

    * ಮುಖದಲ್ಲಿ ತುರಿಕೆಯಂತಹ ಸಮಸ್ಯೆ ಇದ್ದರೆ ಒಂದು ಚಮಚ ಕೊಬ್ಬರಿ ಎಣ್ಣೆಗೆ ಸ್ವಲ್ಪ ಸಕ್ಕರೆ ಬೆರೆಸಿ ಹಚ್ಚಿ. ಎರಡು ನಿಮಷ ಸ್ಕ್ರಬ್ ಮಾಡಿ. ಬೆಚ್ಚಗಿನ ನೀರಿನಲ್ಲಿ ಮುಖ ತೊಳೆದುಕೊಳ್ಳಿ.
    * ಹೆಚ್ಚಾಗಿ ನೀರು ಕುಡಿಯುವುದು ಕೂಡ ತ್ವಚೆಯ ರಕ್ಷಣೆಗೆ ಉಪಯೋಗಕಾರಿ
    * ಮುಖದಲ್ಲಿ ಮೊಡವೆ, ಗುಳ್ಳೆಗಳಂತಹ ಸಮಸ್ಯೆಯಿದ್ದರೆ ಆಯಿಂಟ್‍ಮೆಂಟ್ ಬದಲಾಗಿ ಅರಿಶಿಣ ಹಚ್ಚುವುದು ಉತ್ತಮ.
    * ಮಳೆಗಾಲದಲ್ಲಿ ವಾರಕ್ಕೊಮ್ಮೆ ತಲೆ ಸ್ನಾನ ಮಾಡುವುದು ಉತ್ತಮ. ತೇವ ಇರುವಾಗಲೇ ಕೂದದಲನ್ನು ಬಾಚಬಾರದು. ಆದಷ್ಟೂ ಬಿಸಿಲಿನಲ್ಲಿ ಕೂದಲನ್ನು ಒಣಗಿಸಬೇಕು.

    * ಎಣ್ಣೆ ಚರ್ಮದವರು ಮುಣದ ಅಂದವನ್ನು ಕಾಪಾಡಿಕೊಳ್ಳಲು ಸೋಪು ಬಳಸುವುದುಕ್ಕಿಂತ ಕಡಲೆಹಿಟ್ಟಿನಿಂದ ಮುಖ ತೊಳೆಯುವುದು ಉತ್ತಮ.
    * ಪಪ್ಪಾಯ ಹಣ್ಣನ್ನು ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಎಣ್ಣೆ ಅಂಶ ಕಡಿಮೆಯಾಗುವಂತೆ ಮಾಡಬಹುದು.