Tag: Moon South Pole

  • ಪ್ರಜ್ಞಾನ್ ರೋವರ್‌ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ – ಇನ್ನು 10 ದಿನ ಮಾತ್ರ ಬಾಕಿ

    ಪ್ರಜ್ಞಾನ್ ರೋವರ್‌ಗೆ ಎದುರಾಯ್ತು ದೊಡ್ಡ ಕುಳಿ, ಮಾರ್ಗ ಬದಲಿಸಿದ ಇಸ್ರೋ – ಇನ್ನು 10 ದಿನ ಮಾತ್ರ ಬಾಕಿ

    ನವದೆಹಲಿ/ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ವಿ ಕಾರ್ಯಾಚರಣೆಗೆ ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪ್ರಜ್ಞಾನ್ ರೋವರ್ (Pragyan Rover) ಚಂದ್ರನ ಮೇಲ್ಮೈನ ದತ್ತಾಂಶ ಸಂಗ್ರಹಿಸುವ ಕಾರ್ಯವನ್ನು ಚುರುಕುಗೊಳಿಸಿದೆ. ಒಂದು ಚಂದ್ರನ ದಿನ ಪೂರ್ಣಗೊಳ್ಳಲು ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದೆ. ಚಂದ್ರನ ಅಂಗಳದಲ್ಲಿ ಅಧ್ಯಯನ ನಡೆಸುತ್ತಿರುವ ಪ್ರಜ್ಞಾನ್ ರೋವರ್ ದೊಡ್ಡದೊಂದು ಕುಳಿಗೆ ಮುಖಾಮುಖಿಯಾಗಿದೆ.

    4 ಮೀಟರ್ ಸುತ್ತಳತೆ ಹೊಂದಿರುವ ಗುಂಡಿಯೊಂದನ್ನ ರೋವರ್ ಗುರುತಿಸಿದೆ. ಈ ಕುಳಿಯಿಂದ ಪ್ರಜ್ಞಾನ್ ರೋವರ್ 3 ಮೀಟರ್ ದೂರದಲ್ಲಿ ಇತ್ತು. ಹೀಗಾಗಿ ರೋವರ್‌ನ ಪಥ ಬದಲಾವಣೆಗೆ ಇಸ್ರೋ (ISRO) ನಿಯಂತ್ರಣ ಕೊಠಡಿ ಸೂಚನೆ ರವಾನಿಸಿತು. ಇದೀಗ ಹೊಸ ಹಾದಿಯಲ್ಲಿ ರೋವರ್ ಮುಂದೆ ಸಾಗಿದೆ ಎಂದು ಇಸ್ರೋ ತನ್ನ ಟ್ವಿಟ್ಟರ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಈಗ ಇಸ್ರೋದಿಂದ ಸೂರ್ಯನ ಅಧ್ಯಯನ – ಆದಿತ್ಯ ಉಡಾವಣೆಗೆ ಮುಹೂರ್ತ ಫಿಕ್ಸ್

    ಸೋಮವಾರ ಮಧ್ಯಾಹ್ನ ಇಸ್ರೋ ನಿಯಂತ್ರಣ ಕೊಠಡಿಗೆ ಪ್ರಜ್ಞಾನ್ ತನಗೆ ಗುಂಡಿಯೊಂದು ಎದುರಾಗಿರುವ ಕುರಿತಾಗಿ ಮಾಹಿತಿ ನೀಡಿತ್ತು. ಆ ನಂತರ ಸಕ್ರಿಯರಾದ ತಜ್ಞರ ತಂಡ ರೋವರ್‌ಗೆ ಹೊಸ ಮಾರ್ಗ ಸೂಚಿಸಿತು. ನಂತರ ರೋವರ್‌ನ ಬದಲಾದ ಮಾರ್ಗದ ಫೋಟೋ ಸಮೇತ ಇಸ್ರೋ ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ಇದನ್ನೂ ಓದಿ: 15 ದಿನಗಳ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ತಮಿಳುನಾಡಿಗೆ ಹರಿಸಿ – ಕರ್ನಾಟಕಕ್ಕೆ CWRC ಆದೇಶ

    ಚಂದ್ರನ ಅಂಗಳದಲ್ಲಿ ಈಗಾಗಲೇ 4 ದಿನಗಳ ಕಾರ್ಯಾಚರಣೆ ನಡೆಸಿರುವ ಪ್ರಗ್ಯಾನ್ ರೋವರ್‌ಗೆ ಇನ್ನು ಕೇವಲ 10 ದಿನ ಮಾತ್ರ ಬಾಕಿ ಉಳಿದಿದೆ. ಚಂದ್ರನ ಮೇಲೆ ಒಂದು ದಿನ ಕಳೆಯಲು ಭೂಮಿಯ 14 ದಿನಗಳು ಆಗುತ್ತವೆ. ನಂತರದ 14 ದಿನಗಳ ಕಾಲ ಚಂದ್ರನ ದಕ್ಷಿಣ ಧ್ರುವದ ಮೇಲೆ ಕತ್ತಲು ಕವಿಯುತ್ತದೆ. ಹೀಗಾಗಿ ಈ 14 ದಿನಗಳ ಒಳಗೆ ಕಾರ್ಯಾಚರಣೆ ಮುಕ್ತಾಯಗೊಳಿಸಬೇಕಿದೆ. ಒಂದು ವೇಳೆ ಚಂದ್ರನ ದಕ್ಷಿಣ ಧ್ರವದಲ್ಲಿ ಕತ್ತಲು ಕವಿಯುವ 14 ದಿನಗಳ ಬಳಿಕವೂ ರೋವರ್ ಜೀವಂತವಾಗಿದ್ದರೆ, ಅದನ್ನು ಮುಂದಿನ ಕಾರ್ಯಾಚರಣೆಗಳಿಗೆ ಬಳಸಿಕೊಳ್ಳಬಹುದಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    Chandrayaan-3: ಚಂದ್ರನ ದಕ್ಷಿಣ ಧ್ರುವದಲ್ಲಿ ಹೆಜ್ಜೆ ಇಟ್ಟ ಮೊದಲ ದೇಶ ಭಾರತ

    ನವದೆಹಲಿ: ಚಂದ್ರನ ದಕ್ಷಿಣ ಧ್ರುವದ (Moon South Pole) ಒರಟು, ಶೀತ (ತಾಪಮಾನವು ಮೈನಸ್ 230 ಡಿಗ್ರಿ ಸೆಂಟಿಗ್ರೇಡ್‌ಗೆ ಇಳಿಯಬಹುದು) ಮತ್ತು ಕಗ್ಗತ್ತಲು ಭೂಪ್ರದೇಶದ ಮೇಲೆ ಚಂದ್ರಯಾನ-3 ರ (Chandrayaan-3) ಲ್ಯಾಂಡರ್ ಮಾಡ್ಯೂಲ್ ಅನ್ನು ಯಶಸ್ವಿಯಾಗಿ ಇಳಿಸುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರನ ದಕ್ಷಿಣ ಧ್ರುವಕ್ಕೆ ಹೆಜ್ಜೆ ಇಟ್ಟ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.

    ರಷ್ಯಾದ ಲೂನಾ-25 (Luna-25) ಬಾಹ್ಯಾಕಾಶ ನೌಕೆ ಚಂದ್ರನ ಮೇಲೆ ಲ್ಯಾಂಡ್‌ ಆಗಿದ್ದರೆ, ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿತ್ತು. ಆದರೆ ಆಗಸ್ಟ್‌ 20 ರಂದು ಲೂನಾ-25 ಚಂದ್ರನ ಮೇಲೆ ಪ್ರೀ ಲ್ಯಾಂಡಿಂಗ್‌ ವೇಳೆ ವಿಫಲವಾಗಿ ಪತನವಾಯಿತು. ಇದರಿಂದ ಸಹಜವಾಗಿ ಭಾರತದ ಚಂದ್ರಯಾನ-3 ವಿಶ್ವದ ಗಮನ ಕೇಂದ್ರೀಕರಿಸಿತು. ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿದು ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಇದನ್ನೂ ಓದಿ: Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

    ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಮಾಡುವುದು ಸಾಧಾರಣ ಸಾಧನೆಯಲ್ಲ. ಚಂದ್ರನ ಮೇಲೆ ತಮ್ಮ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇರಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ ನಾಲ್ಕು ದೇಶಗಳ ಸಾಲಿಗೆ ಭಾರತವೂ ಸೇರಿದೆ. ಚಂದ್ರನಲ್ಲಿ ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಯಶಸ್ವಿ ಕಾರ್ಯಾಚರಣೆ ನಡೆಸಿವೆ. ಇದರ ಜೊತೆಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್‌ ಮತ್ತು ರೋವರ್‌ ಇಳಿಸಿದ ನಾಲ್ಕನೇ ದೇಶ ಎನಿಸಿಕೊಂಡಿದೆ ಭಾರತ. ಆದರೆ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡಿಂಗ್‌ ಮಾಡಿದ ಮೊದಲ ದೇಶವಾಗಿ ಭಾರತ ಹೆಸರಾಗಿದೆ.

    ಈಗ ಭಾರತವು ಚಂದ್ರನ ಮೇಲೆ ಇಳಿಯುವಲ್ಲಿ ತನ್ನ ತಾಂತ್ರಿಕ ಪರಿಣತಿಯನ್ನು ಪ್ರದರ್ಶಿಸಿದೆ. ಇಸ್ರೇಲ್, ಜಪಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ಇತರ ದೇಶಗಳು ಈ ಹಿಂದೆ ಚಂದ್ರನ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿ ವಿಫಲವಾಗಿವೆ. ಇದನ್ನೂ ಓದಿ: ಇದು ನವಭಾರತದ ಉದಯ: ಇಸ್ರೋದ ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಶುಭಾಶಯ

    ಚಂದ್ರಯಾನ-3 ಸಾಫ್ಟ್‌ ಲ್ಯಾಂಡಿಂಗ್‌ ಯಶಸ್ವಿಯಾಗಿದ್ದು, ಈಗ ಆರು ಚಕ್ರಗಳ ರೋವರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಒಂದು ಚಂದ್ರನ ದಿನ (ಭೂಮಿಯ 14 ದಿನ) ಪ್ರಯೋಗಗಳನ್ನು ನಡೆಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ-3 ಯಶಸ್ವಿಯಾಗಲಿ – ರಾಯಚೂರಿನ ಪುಟಾಣಿ ಮಕ್ಕಳಿಂದ ಶಿವಲಿಂಗಕ್ಕೆ ಹಾಲಿನ ಅಭಿಷೇಕ

    ಚಂದ್ರಯಾನ-3 ಯಶಸ್ವಿಯಾಗಲಿ – ರಾಯಚೂರಿನ ಪುಟಾಣಿ ಮಕ್ಕಳಿಂದ ಶಿವಲಿಂಗಕ್ಕೆ ಹಾಲಿನ ಅಭಿಷೇಕ

    ರಾಯಚೂರು: ಇಡೀ ವಿಶ್ವವೇ ಕಾತುರದಿಂದ ಎದುರು ನೋಡುತ್ತಿರುವ ಚಂದ್ರಯಾನ-3 (Chandrayaan-3) ಯಶಸ್ವಿಯಾಗಲೆಂದು ರಾಯಚೂರಿನಲ್ಲಿ (Raichur) ಪುಟಾಣಿ ಮಕ್ಕಳು ವಿಶೇಷ ಪೂಜೆ (Speical Pooja), ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವಲಿಂಗಕ್ಕೆ ಕ್ಷೀರಾಭಿಷೇಕ ಮಾಡುವ ಮೂಲಕ ಮಕ್ಕಳು ಪ್ರಾರ್ಥಿಸಿದ್ದಾರೆ.

    ನಗರದ NIG ಕಾಲೋನಿಯ ಕಾಶಿ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಪುಟಾಣಿ ಮಕ್ಕಳೇ ಪೂಜೆ ನೆರವೇರಿಸಿದ್ದಾರೆ. ಶಿವಲಿಂಗಕ್ಕೆ ಹಾಲಿನ ಅಭಿಷೇಕ ಮಾಡಿ ಶ್ಲೋಕಗಳನ್ನ ಹೇಳುತ್ತಾ ಇಸ್ರೋದ ಪ್ರಯತ್ನಕ್ಕೆ ಜಯ ಸಿಗಲಿ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಕ್ಕಳ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 (Chandrayaan-3) ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. ಪ್ರಗ್ಯಾನ್ ರೋವರ್ (Pragyan Rover) ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಇದನ್ನೂ ಓದಿ: ಟಾಟಾ ಸಮೂಹಕ್ಕೆ ಮಾಯಾ ಉತ್ತರಾಧಿಕಾರಿ – ಶೀಘ್ರದಲ್ಲೇ ಘೋಷಣೆ ಸಾಧ್ಯತೆ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    Chandrayaan-3ಕ್ಕೆ ಇಂದು ಕ್ಲೈಮ್ಯಾಕ್ಸ್; ಸಂಜೆ 6:04ಕ್ಕೆ ಸಾಫ್ಟ್ ಲ್ಯಾಂಡಿಂಗ್

    – ಐತಿಹಾಸಿಕ ಕ್ಷಣಕ್ಕೆ ಭಾರತ ಕಾತರ!

    ಬೆಂಗಳೂರು: ಚಂದ್ರನ ಅಂಗಳದಲ್ಲಿ ನಮ್ಮ ದೇಶದ ಗಗನನೌಕೆ ಇಳಿಯುವ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಕೊನೆಯ ಆ 20 ನಿಮಿಷಗಳು ಬಹುಶಃ ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 (Chandrayaan-3) ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆ. ಅದಕ್ಕಾಗಿ ವಿಜ್ಞಾನಿಗಳು (Scientists) ಮಾತ್ರವಲ್ಲ, ಜನಸಾಮಾನ್ಯರೂ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

    ಪ್ರಗ್ಯಾನ್ ರೋವರ್ (Pragyan Rover) ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿದ್ದು, ದಕ್ಷಿಣ ಧ್ರುವದ ಮೇಲೆ ಸಂಜೆ 6:04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕ.

    ಕೌತುಕಭರಿತ ಲ್ಯಾಂಡಿಂಗ್ ಆಪರೇಷನ್ ಪ್ರಕ್ರಿಯೆಯನ್ನ ಇಸ್ರೋ ಇಂದು ಸಂಜೆ 5 ಗಂಟೆ 20 ನಿಮಿಷದಿಂದ ಲೈವ್ ಟೆಲಿಕಾಸ್ಟ್ ಮಾಡಲಿದೆ. ನಿಮ್ಮ ಪಬ್ಲಿಕ್ ಟಿವಿ ಕೂಡ ಚಂದ್ರ ಚುಂಬನದ ಕ್ಷಣಕ್ಷಣದ ಮಾಹಿತಿಯನ್ನು ವಿಶ್ಲೇಷಣೆ ಸಹಿತ ನಿಮಗೆ ಒದಗಿಸಲಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಕ್ರಿಯೆ ಮುಗಿದ ಬಳಿಕ ಇಸ್ರೋ ವಿಜ್ಞಾನಿಗಳನ್ನು ಜೋಹನ್ಸ್‌ಬರ್ಗ್‌ನಲ್ಲಿರುವ ಪ್ರಧಾನಿ ಮೋದಿ ವರ್ಚೂವಲ್ ಆಗಿ ಭೇಟಿ ಮಾಡಲಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲೇ ಮೊದಲ ಬಾರಿಗೆ ಮೊಬೈಲ್ ಪ್ರೀಪೇಯ್ಡ್ ಪ್ಲ್ಯಾನ್‌ ಜೊತೆಗೆ ನೆಟ್‌ಫ್ಲಿಕ್ಸ್‌ ಸಬ್‌ಸ್ಕ್ರಿಪ್ಷನ್ ಪರಿಚಯಿಸುತ್ತಿದೆ Reliance Jio

    ಆರಂಭದ ಪ್ರಯಾಣ ಹೇಗಿತ್ತು?
    ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಕೇಂದ್ರದ (ಇಸ್ರೋ) ಬಾಹುಬಲಿ ರಾಕೆಟ್ ಅಥವಾ ಉಡಾವಣಾ ವಾಹನ ಮಾರ್ಕ್-3, ಚಂದ್ರಯಾನ-3 ಅನ್ನು ಹೊತ್ತು ತಂದು ಕಕ್ಷೆಗೆ ಸೇರ್ಪಡೆ ಮಾಡಿತ್ತು. ಆಗಸ್ಟ್ 1ರಂದು ಚಂದ್ರನ ಕಡೆಗಿನ 3.84 ಲಕ್ಷ ಕಿಮೀ ಪ್ರಯಾಣ ಆರಂಭಿಸಿ, ಆಗಸ್ಟ್ 5ರಂದು ಚಂದ್ರಯಾನ ಉಪಗ್ರಹವು ಚಂದ್ರನ ಕಕ್ಷೆಗೆ ಪ್ರವೇಶಿಸಿತ್ತು. ಅನೇಕ ದಿನಗಳವರೆಗೆ ಅಲ್ಲಿಯೇ ಅದು ಸ್ಥಿರವಾಗಿ ನಿಂತಿತ್ತು. ಇದನ್ನೂ ಓದಿ: Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು…

    ಚಂದ್ರಯಾನದ ಒಂದೊಂದೇ ಪ್ರಕ್ರಿಯೆಗಳನ್ನು ಇಸ್ರೋ ಹಂತ ಹಂತವಾಗಿ ಮತ್ತು ಸೂಕ್ಷ್ಮವಾಗಿ ನೆರವೇರಿಸುತ್ತಾ ಬಂದಿದೆ. ಇದರಲ್ಲಿ ನಿರ್ಣಾಯಕ ಮತ್ತು ಕ್ಲಿಷ್ಟಕರ ಕಾರ್ಯವೆಂದರೆ ಆಗಸ್ಟ್ 17ರಂದು ನಡೆದ ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಪ್ರತ್ಯೇಕಿಸುವುದು. ಕಕ್ಷೆಯಲ್ಲಿ ಚಂದ್ರನಿಂದ 153*163 ಕಿಮೀ ದೂರದಲ್ಲಿ ಇರುವಾಗ ಡಿಬೂಸ್ಟಿಂಗ್ ಮಾಡುವ ಕಾರ್ಯ ಯಶಸ್ವಿಯಾಗಿತ್ತು. ನಿಯಂತ್ರಿತ ಅವರೋಹಣ ಕಾರ್ಯ ಆರಂಭಕ್ಕೂ ಮುನ್ನ ವಿಕ್ರಮ್ ಲ್ಯಾಂಡರ್ ಅನ್ನು 134*25 ಕಿಮೀ ದೀರ್ಘ ವೃತ್ತಾಕಾರದ ಕಕ್ಷೆಯಲ್ಲಿ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿ ಇಳಿಸಲಾಗಿತ್ತು. ಈವರೆಗೂ ಚಂದ್ರಯಾನ-3ರ ಎಲ್ಲಾ ಪ್ರಕ್ರಿಯೆಗಳೂ ಅಡೆತಡೆಯಿಲ್ಲದೆ ಸಫಲವಾಗಿ ನಡೆದಿದೆ. ಚಂದ್ರಯಾನ-2ರಲ್ಲಿಯೂ ಈವರೆಗಿನ ಹಂತಗಳು ಯಶಸ್ವಿಯಾಗಿದ್ದವು ಎನ್ನುವುದು ಗಮನಾರ್ಹ.

    ಚಂದ್ರಯಾನ-3 ಹಾದಿ
    * ಉಡಾವಣೆ – ಜುಲೈ 14
    * ವೆಚ್ಚ – 615 ಕೋಟಿ (ಅವತಾರ್ 2-1930 ಕೋಟಿ)
    * ತೂಕ – 3,900 ಕೆಜಿ (ಲ್ಯಾಂಡರ್, ರೋವರ್)
    * ಹಂತ – 3 ಹಂತಗಳಲ್ಲಿ ಕಕ್ಷೆ ಸೇರ್ಪಡೆ
    * ದೂರ – 3,84,400 ಕಿ.ಮೀ.
    * ಪಯಣ – 40 ದಿನ
    * ಲ್ಯಾಂಡರ್ – ವಿಕ್ರಮ್
    * ರೋವರ್ – ಪ್ರಗ್ಯಾನ್
    * ಲ್ಯಾಂಡಿAಗ್ – ಆಗಸ್ಟ್ 23, ಸಂಜೆ 6.04 ಗಂಟೆ
    * ಮೀಸಲು ದಿನ – ಆಗಸ್ಟ್ 27
    * ಉದ್ದೇಶ – ಚಂದ್ರನ ಮಣ್ಣು, ಮೇಲ್ಮೈ ಅಧ್ಯಯನ
    * ನಿರ್ವಹಣೆ – ಪೀಣ್ಯ, ಬೆಂಗಳೂರು ಇಸ್ರೋ ಕೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಂಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು…

    Chandrayaan-3: ಕೊನೆಯ ಆ 20 ನಿಮಿಷವೇ ಆತಂಕ – ಲ್ಯಾಂಡಿಂಗ್‌ ಹೇಗಿರುತ್ತೆ? ಈ ಬಗ್ಗೆ ನೀವು ತಿಳಿಯಲೇಬೇಕು…

    ಬೆಂಗಳೂರು: ಬುಧವಾರ (ಆ.23) ಕೊನೆಯ ಆ 20 ನಿಮಿಷಗಳು ಬಹುಶಃ ಪ್ರತಿಯೊಬ್ಬ ಭಾರತೀಯರ ಎದೆಬಡಿತ ಹೆಚ್ಚಾಗಿರುತ್ತೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ-3 (Chandrayaan-3) ನೌಕೆಯ ವಿಕ್ರಮ್ ಲ್ಯಾಂಡರ್ (Vikram Lander) ಅನ್ನು ಇಳಿಸುವ ಈ ಮಹತ್ವದ ಕ್ಷಣವನ್ನ ಕಣ್ತುಂಬಿಕೊಳ್ಳಲು ಜನ ಕಾತುರವಾಗಿದ್ದಾರೆ. 2019ರ ಸೆಪ್ಟೆಂಬರ್ 6ರಂದು ಆ ಕ್ಷಣದಲ್ಲಿ ಉಂಟಾದ ಆಘಾತ, ನೋವು ಮತ್ತೆ ಎದುರಾಗದಿರಲಿ ಅನ್ನೋದು ಕೋಟ್ಯಂತರ ಜನರ ಪ್ರಾರ್ಥನೆ. ಅದಕ್ಕಾಗಿ ವಿಜ್ಞಾನಿಗಳು (ISRO Scientist) ಮಾತ್ರವಲ್ಲ, ಜನಸಾಮಾನ್ಯರೂ ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

    ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್, ದಕ್ಷಿಣ ಧ್ರುವದ ಮೇಲೆ ಸಂಜೆ 6.04ರ ವೇಳೆಗೆ ಯಾವುದೇ ಅಡೆತಡೆ ಇಲ್ಲದೇ ಚಂದ್ರನ ಅಂಗಳದಲ್ಲಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸುವ ಭರವಸೆ ಮೂಡಿಸಿದೆ. ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ-3 ನೌಕೆಯ ಇಷ್ಟು ದಿನದ ಪಯಣದಂತೆಯೇ ಕೊನೆಯ 20 ನಿಮಿಷಗಳ ಯಾನ ಅತ್ಯಂತ ನಿರ್ಣಾಯಕ.

    ಆರಂಭದ ಪ್ರಯಾಣ ಹೇಗಿತ್ತು?

    ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಕೇಂದ್ರದ (ಇಸ್ರೋ) ಬಾಹುಬಲಿ ರಾಕೆಟ್ ಅಥವಾ ಉಡಾವಣಾ ವಾಹನ ಮಾರ್ಕ್-3, ಚಂದ್ರಯಾನ-3 ಅನ್ನು ಹೊತ್ತು ತಂದು ಕಕ್ಷೆಗೆ ಸೇರ್ಪಡೆ ಮಾಡಿತ್ತು. ಆಗಸ್ಟ್ 1ರಂದು ಚಂದ್ರನ ಕಡೆಗಿನ 3.84 ಲಕ್ಷ ಕಿಮೀ ಪ್ರಯಾಣ ಆರಂಭಿಸಿ, ಆಗಸ್ಟ್ 5ರಂದು ಚಂದ್ರಯಾನ ಉಪಗ್ರಹವು ಚಂದ್ರನ ಕಕ್ಷೆಗೆ ಪ್ರವೇಶಿಸಿತ್ತು. ಅನೇಕ ದಿನಗಳವರೆಗೆ ಅಲ್ಲಿಯೇ ಅದು ಸ್ಥಿರವಾಗಿ ನಿಂತಿತ್ತು.

    ಚಂದ್ರಯಾನದ ಒಂದೊಂದೇ ಪ್ರಕ್ರಿಯೆಗಳನ್ನು ಇಸ್ರೋ ಹಂತ ಹಂತವಾಗಿ ಮತ್ತು ಸೂಕ್ಷ್ಮವಾಗಿ ನೆರವೇರಿಸುತ್ತಾ ಬಂದಿದೆ. ಇದರಲ್ಲಿ ನಿರ್ಣಾಯಕ ಮತ್ತು ಕ್ಲಿಷ್ಟಕರ ಕಾರ್ಯವೆಂದರೆ ಆಗಸ್ಟ್ 17ರಂದು ನಡೆದ ಪ್ರೊಪಲ್ಷನ್ ಮಾಡ್ಯೂಲ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ವಿಕ್ರಮ್ ಲ್ಯಾಂಡರ್ ಪ್ರತ್ಯೇಕಿಸುವುದು. ಕಕ್ಷೆಯಲ್ಲಿ ಚಂದ್ರನಿಂದ 153*163 ಕಿಮೀ ದೂರದಲ್ಲಿ ಇರುವಾಗ ಡಿಬೂಸ್ಟಿಂಗ್‌ ಮಾಡುವ ಕಾರ್ಯ ಯಶಸ್ವಿಯಾಗಿತ್ತು. ನಿಯಂತ್ರಿತ ಅವರೋಹಣ ಕಾರ್ಯ ಆರಂಭಕ್ಕೂ ಮುನ್ನ ವಿಕ್ರಮ್ ಲ್ಯಾಂಡರ್ ಅನ್ನು 134*25 ಕಿಮೀ ದೀರ್ಘ ವೃತ್ತಾಕಾರದ ಕಕ್ಷೆಯಲ್ಲಿ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿ ಇಳಿಸಲಾಗಿತ್ತು. ಈವರೆಗೂ ಚಂದ್ರಯಾನ-3ರ ಎಲ್ಲಾ ಪ್ರಕ್ರಿಯೆಗಳೂ ಅಡೆತಡೆಯಿಲ್ಲದೆ ಸಫಲವಾಗಿ ನಡೆದಿದೆ. ಚಂದ್ರಯಾನ-2ರಲ್ಲಿಯೂ ಈವರೆಗಿನ ಹಂತಗಳು ಯಶಸ್ವಿಯಾಗಿದ್ದವು ಎನ್ನುವುದು ಗಮನಾರ್ಹ.

    ಕೊನೆಯ 20 ನಿಮಿಷದ ರೋಚಕತೆ ಹೇಗಿರುತ್ತೆ?

    ಇಸ್ರೋ ಪ್ರಸ್ತುತ ನಿಗದಿಪಡಿಸಿರುವ ಆ.23ರ ಸಂಜೆ 6.04ರ ವರೆಗಿನ 20 ನಿಮಿಷ ನಿಜಕ್ಕೂ ಆತಂಕ ಹಾಗೂ ರೋಚಕತೆಯಿಂದ ಕೂಡಿರುವ ಸಮಯ. ಬೆಂಗಳೂರಿನ ಇಸ್ರೋ ಕೇಂದ್ರದಿಂದ ವಿಕ್ರಮ್ ಲ್ಯಾಂಡರ್‌ಗೆ ನೀಡುವ ಆದೇಶಗಳಂತೆ ಅದು 25 ಕಿಮೀ ಎತ್ತರದಿಂದ ಚಂದಮಾಮನ ಅಂಗಳದ ಕಡೆಗೆ ಇಳಿಯಲು ಆರಂಭಿಸುತ್ತದೆ. ಚಾಲಿತ ಅವರೋಹಣದಲ್ಲಿ ವಿಕ್ರಮ್ ಲ್ಯಾಂಡರ್ ಪ್ರತಿ ಸೆಕೆಂಡ್‌ಗೆ 1.68 ಕಿಮೀ, ಅಂದರೆ ಗಂಟೆಗೆ 6,048 ಕಿಮೀ ವೇಗದಲ್ಲಿ ಚಂದ್ರನ ಕಡೆಗೆ ಧಾವಿಸುತ್ತದೆ. ಇದು ವಿಮಾನದ ವೇಗದ ಹತ್ತುಪಟ್ಟು ಅಧಿಕವಾಗಿರುತ್ತದೆ. ವಿಕ್ರಮ್ ಲ್ಯಾಂಡರ್‌ ಕ್ರಮೇಣ ನಿಧಾನವಾಗುತ್ತದೆ. ಆದರೆ ಲ್ಯಾಂಡರ್ ಚಂದ್ರನ ಮೇಲ್ಮೈಗೆ ಬಹುತೇಕ ಸಮತಲವಾಗಿಯೇ ಇರುತ್ತದೆ. ಇದನ್ನು ರಫ್ ಬ್ರೇಕಿಂಗ್ ಹಂತ (ವೇಗ ತಡೆಯುವ) ಎಂದು ಕರೆಯಲಾಗುತ್ತದೆ. ಇದು ಸುಮಾರು 11 ನಿಮಿಷ ನಡೆಯುತ್ತದೆ. ಕೆಲವು ಪ್ರಕ್ರಿಯೆಗಳ ಮೂಲಕ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈಗೆ ಲಂಬವಾಗಿ ಇರುವಂತೆ ಮಾಡಲಾಗುತ್ತದೆ. ಇದನ್ನು ‘ಫೈನ್ ಬ್ರೇಕಿಂಗ್ ಹಂತ’ ಎಂದು ಕರೆಯಲಾಗುತ್ತದೆ.

    2019ರಲ್ಲಿ ಚಂದ್ರಯಾನ-2ರಲ್ಲಿ ಈ ಫೈನ್ ಬ್ರೇಕಿಂಗ್ ಹಂತದಲ್ಲಿಯೇ ವಿಕ್ರಮ್ ಲ್ಯಾಂಡರ್ ನಿಯಂತ್ರಣ ಕಳೆದುಕೊಂಡಿತ್ತು. ಚಂದ್ರನ ಮೇಲ್ಮೈನ 800 ಮೀಟರ್ ಮೇಲ್ಭಾಗದಲ್ಲಿ ವೇಗವು ಶೂನ್ಯಕ್ಕೆ ಬರುತ್ತದೆ. ಆಗ ವಿಕ್ರಮ್ ಲ್ಯಾಂಡರ್, ಚಂದ್ರನ ಮೇಲ್ಮೈ ಮೇಲೆ ಇಳಿಯುವ ಭಾಗವನ್ನ ಸಮೀಕ್ಷೆ ಮಾಡುತ್ತದೆ. ನಂತರ ಮತ್ತೆ 150 ಮೀಟರ್‌ವರೆಗೂ ಇಳಿಯುವ ಲ್ಯಾಂಡರ್, ಯಾವುದಾದರೂ ಅಡೆತಡೆಗಳು ಇದೆಯೇ ಎಂದು ಪರಿಶೀಲಿಸಲು ಚಿತ್ರಗಳನ್ನ ತೆಗೆದುಕೊಳ್ಳುತ್ತದೆ ಮತ್ತು ಒಳ್ಳೆಯ ಲ್ಯಾಂಡಿಂಗ್ ಜಾಗಕ್ಕಾಗಿ ಹುಡುಕಾಡುತ್ತದೆ.

    ಚಂದ್ರನ ಅಂಗಳಕ್ಕೆ ಕಾಲಿಟ್ಟ ಬಳಿಕ ಮುಂದೇನು?

    ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಟ್ಟ ಮೇಲೆ ಧೂಳು ದೂರ ಸರಿದ ಬಳಿಕ ಲ್ಯಾಂಡರ್‌ ತೆರೆದುಕೊಳ್ಳುತ್ತದೆ. ಪ್ರಗ್ಯಾನ್ ರೋವರ್ ನಿಧಾನವಾಗಿ ಹೊರಗೆ ಬರುತ್ತದೆ. ಒಮ್ಮೆ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈಗೆ ತಲುಪಿದ ನಂತರ, ಅದು ಚಂದಿರನ ಅಂಗಳದ ಸುತ್ತಲೂ ಅಡ್ಡಾಡಲು ಮುಕ್ತವಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ 4ನೇ ದೇಶ ಎಂಬ ಕೀರ್ತಿಗೆ ಭಾರತ ಭಾಜನವಾಗಲಿದೆ. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿನ ಗಮನಾರ್ಹ ಸಾಧನೆಯಷ್ಟೇ ಅಲ್ಲ, ಜಗತ್ತಿನಲ್ಲೆಡೆ ಭಾರತದ ಹೆಸರನ್ನ ಮತ್ತಷ್ಟು ಪ್ರಜ್ವಲಿಸುವಂತೆ ಮಾಡಲಿದೆ.

    ಚಂದ್ರಯಾನ-3 ಹಾದಿ….

    * ಉಡಾವಣೆ – ಜುಲೈ 14
    * ವೆಚ್ಚ – 615 ಕೋಟಿ (ಅವತಾರ್ 2-1930 ಕೋಟಿ)
    * ತೂಕ – 3,900 ಕೆಜಿ (ಲ್ಯಾಂಡರ್, ರೋವರ್)
    * ಹಂತ – 3 ಹಂತಗಳಲ್ಲಿ ಕಕ್ಷೆ ಸೇರ್ಪಡೆ
    * ದೂರ – 3,84,400 ಕಿ.ಮೀ.
    * ಪಯಣ – 40 ದಿನ
    * ಲ್ಯಾಂಡರ್ – ವಿಕ್ರಮ್
    * ರೋವರ್ – ಪ್ರಗ್ಯಾನ್
    * ಲ್ಯಾಂಡಿಂಗ್ – ಆಗಸ್ಟ್ 23, ಸಂಜೆ 6.04 ಗಂಟೆ
    * ಮೀಸಲು ದಿನ – ಆಗಸ್ಟ್ 27
    * ಉದ್ದೇಶ – ಚಂದ್ರನ ಮಣ್ಣು, ಮೇಲ್ಮೈ ಅಧ್ಯಯನ
    * ನಿರ್ವಹಣೆ – ಪೀಣ್ಯ, ಬೆಂಗಳೂರು ಇಸ್ರೋ ಕೇಂದ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]