Tag: Morbi Gujarat

  • ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

    ಮೋರ್ಬಿ ತೂಗು ಸೇತುವೆ ದುರಂತಕ್ಕೆ 135 ಬಲಿ – ಸಂತ್ರಸ್ತರಿಗೆ ಪ್ರಧಾನಿ ಮೋದಿ ಸಾಂತ್ವನ

    ಗಾಂಧಿನಗರ: ಮೋರ್ಬಿ ತೂಗುಸೇತುವೆ ದುರಂತ (Morbi Bridge Collapse) ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ. ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.

    ಮೃತರ ಕುಟುಂಬಗಳಿಗೆ ಗುಜರಾತ್ ಸರ್ಕಾರ (Gujarat Government) 5.40 ಕೋಟಿ ಪರಿಹಾರ ವಿತರಿಸಿದೆ. ನಾಳೆ ಗುಜರಾತ್‌ನಲ್ಲಿ ಶೋಕಾಚರಣೆಗೆ ಸರ್ಕಾರ ನಿರ್ಧರಿಸಿದೆ. ಈ ಮಧ್ಯೆ, ಇವತ್ತು ಮೋರ್ಬಿಗೆ ಪ್ರಧಾನಿ ಮೋದಿ (Narendra Modi) ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ಎಸ್‌ಪಿ ಕಚೇರಿಯಲ್ಲಿ ಸಿಎಂ (Chief Minister) ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಮೋದಿ ಆಗಮನ ಕಾರಣ ನಿನ್ನೆ ರಾತ್ರಿ ತರಾತುರಿಯಲ್ಲಿ ಮೋರ್ಬಿ ಸರ್ಕಾರಿ ಆಸ್ಪತ್ರೆಗೆ (Hospital) ಸುಣ್ಣ-ಬಣ್ಣ ಬಳಿದಿದ್ದು, ವಿಪಕ್ಷಗಳಿಗೆ ಆಹಾರವಾಗಿದೆ. ದುರಂತಕ್ಕೆ ಕಾರಣರಾದವರ ವಿರುದ್ಧ ಈವರೆಗೂ ಯಾವುದೇ ಕ್ರಮ ಇಲ್ಲ. ಆದ್ರೆ ಫೋಟೋಶೂಟ್‌ಗಾಗಿ ಹೇಗೆಲ್ಲಾ ಮಾಡ್ತಿದ್ದಾರೆ ಎಂದು ಎಎಪಿ (AAP) ಕಿಡಿಕಾರಿದೆ. ಇದನ್ನೂ ಓದಿ: ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಭಾರೀ ಭ್ರಷ್ಟಾಚಾರದ ಕಾರಣ ಈ ದುರಂತ ಸಂಭವಿಸಿದೆ. ಇದು ಸರ್ಕಾರವೇ ನಡೆಸಿದ ಸರ್ಕಾರಿ ಕೊಲೆ ಎಂದು ಸಿಎಂ ಕೇಜ್ರಿವಾಲ್ (Arvind Kejriwal) ಆಪಾದಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇದನ್ನ ನಾನು ರಾಜಕೀಯಗೊಳಿಸಲು ಬಯಸಲ್ಲ ಎಂದು ಮೃದುಸ್ವಭಾವ ತೋರಿಸಿದ್ದಾರೆ.

    ಈ ಮಧ್ಯೆ ಮೋರ್ಬಿ ದುರಂತದ ಬಗ್ಗೆ ಸುಪ್ರೀಂಕೋರ್ಟ್ (Supreme Court) ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ ವಕೀಲರೊಬ್ಬರು ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ. ನವೆಂಬರ್ 14ರಂದು ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆ ನಡೆಸಲಿದೆ.

    Live Tv
    [brid partner=56869869 player=32851 video=960834 autoplay=true]

  • ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

    ಗಾಂಧಿನಗರ: ಮೋರ್ಬಿಯಲ್ಲಿ ತೂಗು ಸೇತುವೆ (MorbiBridge) ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ (Narendra Modi) ಮತ್ತು ಗುಜರಾತ್ ಸರ್ಕಾರದ (Gujarat Government) ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

    ತೂಗು ಸೇತುವೆ ಕುಸಿದು 135 ಮಂದಿ ಮೃತಪಟ್ಟಿದ್ದಾರೆ, ಅವರಲ್ಲಿ 47 ಮಕ್ಕಳಿದ್ದಾರೆ. ರಕ್ಷಣೆ ಮಾಡಿರುವ 100ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಸಂತ್ರಸ್ತರನ್ನ ಭೇಟಿ ಮಾಡಲು ತೆರಳಿದ್ದಾರೆ. ಮೋರ್ಬಿ ಆಸ್ಪತ್ರೆಗೆ (Morbi Hospital) ಹಾಗೂ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆಯೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಸಾಮಾಜಿಕ ಜಾಲತಾಣದಲ್ಲಿ ಬಾಯ್‌ಕಾಟ್ ಮೋದಿ, ಬಾಯ್‌ಕಾಟ್ ಬಿಜೆಪಿ (BJP) ಹಾಗೂ ಗೋ ಬ್ಯಾಕ್ ಮೋದಿ (Go-Back-Modi) ಅಭಿಯಾನ ಆರಂಭಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ. `ಭಾರತಕ್ಕೆ ಪ್ರಧಾನಿ ಬೇಕು, ಜೋಕರ್ ಬೇಡ, ಫ್ಯಾಷನ್ ಡಿಸೈನರ್ ಬೇಡ, ಪ್ರಧಾನಿ ಮೋದಿ ಅವಧಿಯಲ್ಲಿ ದೇಶದಲ್ಲೇ ಅತಿಹೆಚ್ಚು ಭ್ರಷ್ಟ ಅಧಿಕಾರಿಗಳಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ: ಅತಿಥಿಯಾಗಿ ಬೆಂಗಳೂರಿಗೆ ಬಂದ ಜ್ಯೂನಿಯರ್ ಎನ್.ಟಿ.ಆರ್

    ಗುಜರಾತಿನಲ್ಲಿ ನಡೆದ ದುರಂತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ನಿಮ್ಮ ಗಮನ ಮಾತ್ರ ಚುನಾವಣೆಯ ಮೇಲಿದೆ. ಇದು ಮೋದಿ ಅವರಿಗೆ ನಾಚಿಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರಲ್ಲದೇ ಪ್ರಾಣ ಕಳೆದುಕೊಂಡವರಿಂದಾಗಿ ಅವರಿಗೆ 134 ಮತಗಳು ನಷ್ಟವಾಗಿದೆ ಎಂಬ ಚಿಂತೆ ಅವರಿಗಿದೆ ಎಂದು ಟೀಕಿಸಿದ್ದಾರೆ.

    ನಮಗೆ ಪ್ರಧಾನಿ ಬೇಕಾಗಿದೆಯೇ ಹೊರತು ಸ್ವಂತ ದೇಶದ ಜನರ ಜೀವಗಳ ಜೊತೆ ಚೆಲ್ಲಾಟ ಆಡೋರು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋರ್ಬಿ ದುರಂತ ರಾಜಕೀಯಗೊಳಿಸೋದು ಅಗೌರವ – ಮೃದು ಸ್ವಭಾವ ತೋರಿದ ರಾಹುಲ್

    ಮೋರ್ಬಿ ದುರಂತ ರಾಜಕೀಯಗೊಳಿಸೋದು ಅಗೌರವ – ಮೃದು ಸ್ವಭಾವ ತೋರಿದ ರಾಹುಲ್

    ಗಾಂಧಿನಗರ/ಹೈದರಾಬಾದ್: ಬಿಜೆಪಿ (BJP) ಆಡಳಿತ ರಾಜ್ಯದ ಪ್ರತಿಯೊಂದು ಹಗರಣಗಳ ಬಗ್ಗೆ ಕಿಡಿ ಕಾರುತ್ತಿದ್ದ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಗುಜರಾತಿನ ಮೋರ್ಬಿ ತೂಗು ಸೇತುವೆ ದುರಂತದ ವಿಷಯದಲ್ಲಿ ಮೃದು ಸ್ವಭಾವ ತಾಳಿದ್ದಾರೆ.

    ತೆಲಂಗಾಣದ ಭಾರತ್ ಜೋಡೋ ಯಾತ್ರೆಯಲ್ಲಿರುವ (Bharat Jodo Yatra) ರಾಹುಲ್ ಗಾಂಧಿ ಅವರು ಪ್ರತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಇದನ್ನು ರಾಜಕೀಯಗೊಳಿಸುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    ಮೋರ್ಬಿ ಸೇತುವೆ ಕುಸಿತಕ್ಕೆ (Morbi Bridge Collapse) ಯಾರು ಹೊಣೆ ಎಂದು ನೀವು ಭಾವಿಸುತ್ತೀರಿ? ಎಂಬ ಪ್ರಶ್ನೆಗೆ ನಾನು ಈ ಘಟನೆಯನ್ನು ರಾಜಕೀಯಗೊಳಿಸಲು (Politicise) ಬಯಸೋದಿಲ್ಲ. ಜನರು ಅಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದನ್ನು ರಾಜಕೀಯಗೊಳಿಸುವುದು ಅಗೌರವ. ನಾನು ಅದನ್ನು ಮಾಡಲು ಹೋಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತ, 9 ಮಂದಿ ಅರೆಸ್ಟ್‌ – ಟೆಂಡರ್‌ ಪಡೆದು ಇನ್ನೊಂದು ಕಂಪನಿಯಿಂದ ರಿಪೇರಿ

    150 ವರ್ಷಗಳಷ್ಟು ಹಳೆಯದ್ದಾದ ಗುಜರಾತ್‌ನ ಮೋರ್ಬಿ ಸೇತುವೆ ಕುಸಿದು 141 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಸುಮಾರು 2 ವರ್ಷದೊಳಗಿನ 47 ಮಕ್ಕಳೂ ಇದ್ದಾರೆ. 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಕೇಂದ್ರದ ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

    ಸದ್ಯ ಮೋದಿ ತವರಿನಲ್ಲೇ ಈ ದುರಂತ ಘಟನೆ ನಡೆದಿದ್ದು, ಮಂಗಳವಾರ ಮೊರ್ಬಿಗೆ ಭೇಟಿ ನೀಡುವುದಾಗಿ ಪ್ರಧಾನಿ ತಿಳಿಸಿದ್ದಾರೆ. ಈ ಘಟನೆಯನ್ನು 2016ರಲ್ಲಿ ಮಧ್ಯ ಕೋಲ್ಕತ್ತಾದಲ್ಲಿ ಫ್ಲೈಒವರ್ ಕುಸಿತಕ್ಕೆ ಹೋಲಿಸಿದ್ದು, ಮೋದಿ ವಿರುದ್ಧ ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]