Tag: mother

  • Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    Mysuru | ವಿದ್ಯುತ್ ತಂತಿ ತಗುಲಿ ತಾಯಿ-ಮಗ ದುರ್ಮರಣ

    ಮೈಸೂರು: ವಿದ್ಯುತ್ ತಂತಿ ತಗುಲಿ ತಾಯಿ-ಮಗ (Mother-Son) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು (Hunsur) ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ನೀಲಮ್ಮ (39), ಹರೀಶ್ (19) ಮೃತ ದುರ್ದೈವಿಗಳು. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ. ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೊದಲು ತಾಯಿ ನೀಲಮ್ಮಗೆ ವಿದ್ಯುತ್ ಶಾಕ್ (Electric Shock) ಹೊಡೆದಿದೆ. ಈ ವೇಳೆ ತಾಯಿಯನ್ನು ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ. ಇದನ್ನೂ ಓದಿ: ಕ್ರಿಮಿನಲ್‌ ಕೇಸ್‌ಗಳಲ್ಲಿ ಆರೋಪಪಟ್ಟಿ ರೂಪಿಸಲು ವಿಳಂಬ – ಸುಪ್ರೀಂ ಕಳವಳ

    ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿದ್ಯುತ್ ಇಲಾಖೆ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಆರೋಪಿಸಲಾಗಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನವೆಂಬರ್ 14ರ ಬಳಿಕ ಕಾಂಗ್ರೆಸ್ ಸರ್ಕಾರ ಪತನ: ಸುರೇಶ್ ಗೌಡ

  • ಹಾಸನ | ಅಡುಗೆ ವಿಚಾರಕ್ಕೆ ಕಿರಿಕ್‌ – ಕಂಠಪೂರ್ತಿ ಕುಡಿದು ತಾಯಿಯನ್ನೇ ಕೊಂದ ಮಗ

    ಹಾಸನ | ಅಡುಗೆ ವಿಚಾರಕ್ಕೆ ಕಿರಿಕ್‌ – ಕಂಠಪೂರ್ತಿ ಕುಡಿದು ತಾಯಿಯನ್ನೇ ಕೊಂದ ಮಗ

    ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ (Mother) ಕೊಲೆಯಲ್ಲಿ (Murder) ಅಂತ್ಯವಾಗಿರುವುದು ಆಲೂರಿನ (Alur) ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ.

    ಪ್ರೇಮ (45) ಮಗನಿಂದಲೇ ಕೊಲೆಯಾದ ದುರ್ದೈವಿ. ಸಂತೋಷ್‌ (19) ಹೆತ್ತ ತಾಯಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಗುರುವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. ಈ ವೇಳೆ ತಾಯಿ ಅಡುಗೆ ಮಾಡದಿದ್ದಕ್ಕೆ ಜಗಳ ತೆಗೆದು, ಮಾತಿಗೆ ಮಾತು ಬೆಳೆದು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದ. ಇದನ್ನೂ ಓದಿ: ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    ತೀವ್ರವಾಗಿ ಗಾಯಗೊಂಡಿದ್ದ ಪ್ರೇಮರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸ್ವಾಮಿ ಚೈತನ್ಯಾನಂದಗೆ ಸಹಕರಿಸುವಂತೆ ವಿದ್ಯಾರ್ಥಿನಿಯರಿಗೆ ಒತ್ತಡ – ಮೂವರು ಸಹಾಯಕಿಯರು ಅರೆಸ್ಟ್‌

  • ಶಿವಮೊಗ್ಗ | ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

    ಶಿವಮೊಗ್ಗ | ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

    ಶಿವಮೊಗ್ಗ: ನಗರದ (Shivamogga) ಮೆಗ್ಗಾನ್​ ಆಸ್ಪತ್ರೆಯ (McGann Hospital) ನರ್ಸಿಂಗ್​​ ಕ್ವಾಟ್ರಸ್​ನಲ್ಲಿ ತಾಯಿಯೇ (Mother) ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಶೃತಿ (38) ಎಂದು ಗುರುತಿಸಲಾಗಿದೆ. ಮಹಿಳೆ ಆತ್ಮಹತ್ಯೆಗೂ ಮುನ್ನ ಮಗಳಿಗೆ ಮಚ್ಚಿನಿಂದ ಹೊಡೆದು ಕೊಂದಿದ್ದಾಳೆ. ಬಳಿಕ ಆಕೆಯ ಮೃತದೇಹದ ಮೇಲೆ ನಿಂತುಕೊಂಡ ಪ್ಯಾನ್​ಗೆ ನೇಣುಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶೃತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

    ಮಹಿಳೆಯ ಪತಿ ರಾಮಣ್ಣ ಮೆಗ್ಗಾನ್‌ ಆಸ್ಪತ್ರೆಯಲ್ಲಿ ನೈಟ್ ಶಿಫ್ಟ್ ಡ್ಯೂಟಿಯಲ್ಲಿದ್ದರು. ಬೆಳಗ್ಗೆ ಕೆಲಸ ಮುಗಿಸಿ ಕ್ವಾಟ್ರಸ್​​ಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: 5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್

  • Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    ಚಿಕ್ಕಬಳ್ಳಾಪುರ: ಜ್ಯೂಸ್ ಬಾಟಲಿಯೊಳಗೆ ವಿಷ ಮಿಶ್ರಣ ಮಾಡಿಕೊಂಡು ಸೇವಿಸಿ, ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಎರಡು ಮಕ್ಕಳ ತಾಯಿ ಪ್ಲಾನ್ ಮಾಡಿಕೊಂಡಿದ್ದು, ಅದೃಷ್ಟವಶಾತ್ ಇಬ್ಬರು ಹೆಣ್ಣು ಮಕ್ಕಳು ಪಾರಾಗಿ, ತಾಯಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಮಂಚೇನಹಳ್ಳಿ (Manchenahalli) ತಾಲೂಕಿನ ಮಿಣಕನಗುರ್ಕಿ ಗ್ರಾಮದ ಬಳಿ ನಡೆದಿದೆ.

    36 ವರ್ಷದ ಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. 8 ವರ್ಷ ಹಾಗೂ 15 ವರ್ಷದ ಹೆಣ್ಣುಮಕ್ಕಳು ಸಾವಿನ ದವಡೆಯಿಂದ ಪಾರಾಗಿದ್ದಾರೆ. ಅಂದಹಾಗೆ ಮೂಲತಃ ಗೌರಿಬಿದನೂರು ತಾಲೂಕಿನ ಬೇವಿನಹಳ್ಳಿ ಗ್ರಾಮದ ಲಕ್ಷ್ಮೀ ಎಂಬಾಕೆ ನಾರಾಯಣ ಎಂಬವರ ಜೊತೆ ಎರಡನೇ ವಿವಾಹವಾಗಿ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಆದರೆ ಅದೇನು ಸಮಸ್ಯೆಯೋ ಏನೋ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ಲಾನ್ ಮಾಡಿಕೊಂಡಿದ್ದಳು. ಇದನ್ನೂ ಓದಿ: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

    ಸೀದಾ ಸಿಂಗನಾಯಕನಹಳ್ಳಿಯಿಂದ ಹಿರಿಯ ಮಗಳು ವ್ಯಾಸಂಗ ಮಾಡುತ್ತಿರುವ ಮಂಚೇನಹಳ್ಳಿ ತಾಲೂಕಿನ ಹನುಮಂತಪುರ ಗ್ರಾಮದ ಬಳಿಯ ವಸತಿ ಶಾಲೆಗೆ ಬಂದು ಮಗಳನ್ನ ಕಳುಹಿಸುವಂತೆ ಶಿಕ್ಷಕರ ಬಳಿ ಕೇಳಿಕೊಂಡಿದ್ದಾಳೆ. ಆದರೆ ಪರೀಕ್ಷೆಗಳು ಸಮೀಪ ಇದೆ, ಮಗಳನ್ನ ಕಳುಹಿಸಲು ಆಗಲ್ಲ ಎಂದು ಶಿಕ್ಷಕರು ಹೇಳಿದ್ದು, ಮಗಳಿಗೆ ಬಿರಿಯಾನಿ ತಿನ್ನಿಸಿ ಚೆನ್ನಾಗಿ ಒದಿಕೊಳ್ಳುವಂತೆ ಹೇಳಿ ಅಲ್ಲಿಂದ ಕಿರಿಯ ಮಗಳ ಜೊತೆ ವಾಪಸ್ ಆಗಿದ್ದಾಳೆ. ದಾರಿ ಮಧ್ಯೆ ಮಿಣಕನಗುರ್ಕಿ ಬಳಿ ಜ್ಯೂಸ್ ಬಾಟಲಿಗೆ ವಿಷ ಬೆರೆಸಿ ತಾನೂ ಕುಡಿದು ಕಿರಿಯ ಮಗಳಿಗೂ ಕೊಟ್ಟಿದ್ದಾಳೆ. ಆದರೆ ಮಗಳು ಕುಡಿದಿಲ್ಲ. ಇನ್ನೂ ವಿಷ ಸೇವನೆಗೂ ಮುನ್ನ ತನ್ನ ಅಕ್ಕನಿಗೆ ಕರೆ ಮಾಡಿ ಹಿರಿ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಹೇಳಿದ್ದಾಳೆ. ಗಂಡ ನಾರಾಯಣ್‌ಗೆ ಮಗಳು ಹಾಗೂ ಆಕೆ ಬಾಯ್ ಮಾಡುವ ವೀಡಿಯೋ ಮಾಡಿ ಕೊನೆಯ ಸಂದೇಶ ಕಳುಹಿಸಿದ್ದಾಳೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ – ಜನಸಾಗರ, ಡಿಜೆ ಸದ್ದಿಗೆ ಯುವ ಸಮೂಹ ಭರ್ಜರಿ ಡ್ಯಾನ್ಸ್

    ಇನ್ನೂ ವಿಷ ಕುಡಿದು ವಿಲವಿಲ ಒದ್ದಾಡುತ್ತಿದ್ದ ತಾಯಿಯನ್ನ ಕಂಡು ಮಗು ರಸ್ತೆಗೆ ಬಂದು ರಕ್ಷಣೆ ಮಾಡುವಂತೆ ಅಂಗಲಾಚಿಕೊಂಡಿದ್ದಾಳೆ, ರಸ್ತೆಗೆ ಅಡ್ಡ ಬಂದು ಗಾಡಿಗಳನ್ನು ಅಡ್ಡ ಹಾಕಲು ಪ್ರಯತ್ನಿಸಿ ಕೊನೆಗೆ ಆಟೋಗೆ ಅಡ್ಡಲಾಗಿ ನಿಂತು ತಾಯಿಯನ್ನ ಆಸ್ಪತ್ರೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಆದರೆ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀ ಸಾವನ್ನಪ್ಪಿದ್ದಾಳೆ. ಇಬ್ಬರು ಮಕ್ಕಳು ತಾಯಿಯಿಲ್ಲದ ತಬ್ಬಲಿಗಳಾಗದ್ದಾರೆ. ಮತ್ತೊಂದೆಡೆ ಗಂಡ ದಿನೇಶ್ ಮೊದಲನೇ ಹೆಂಡತಿ ಸಹ ಸೂಸೈಡ್ ಮಾಡಿಕೊಂಡಿದ್ದಳಂತೆ. ಈಗ ಎರಡನೇ ಹೆಂಡತಿ ಸಹ ಸೂಸೈಡ್ ಮಾಡಿಕೊಂಡಿದ್ದಾಳೆ. ಸಂಬಂಧಿಕರು ಹೊಟ್ಟೆನೋವಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಕ್ತರಿಗೆ ಸಿಹಿಸುದ್ದಿ; ಮಾದಪ್ಪನ ದರ್ಶನಕ್ಕೆ ತಿರುಪತಿ ಮಾದರಿ ವ್ಯವಸ್ಥೆ

  • ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಹತ್ಯೆಗೈದಿದ್ದ ಪಾಪಿ ತಾಯಿ ಅರೆಸ್ಟ್‌

    ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಹತ್ಯೆಗೈದಿದ್ದ ಪಾಪಿ ತಾಯಿ ಅರೆಸ್ಟ್‌

    ಶಿವಮೊಗ್ಗ: ನಗರದ (Shivamogga) ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್ ( McGann Hospital) ಶೌಚಾಲಯ ಕೊಠಡಿಯಲ್ಲಿ, ನವಜಾತ ಗಂಡು ಶಿಶುವಿನ ಕತ್ತು ಸೀಳಿ ಕೊಲೆ ಮಾಡಿದ್ದ ತಾಯಿಯನ್ನು (Mother) ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತಳನ್ನು ದಾವಣಗೆರೆಯ (Davanagere) ಹೊನ್ನಾಳಿ ತಾಲೂಕಿನ ತಿಮ್ಲಾಪುರದ ಶೈಲಾ ಎಂದು ಗುರುತಿಸಲಾಗಿದೆ. ಆ.16 ರಂದು ಮೆಗ್ಗಾನ್ ಆಸ್ಪತ್ರೆ ಹೆರಿಗೆ ವಾರ್ಡ್‌ನ ಶೌಚಾಲಯದಲ್ಲಿ ಕತ್ತು ಸೀಳಿ ಹತ್ಯೆ ಮಾಡಿದ್ದ ಸ್ಥಿತಿಯಲ್ಲಿ ನವಜಾತ ಗಂಡು ಶಿಶುವಿನ ಶವ ಪತ್ತೆಯಾಗಿತ್ತು. ಆಸ್ಪತ್ರೆ ಸಿಬ್ಬಂದಿ ಹೆರಿಗೆ ವಾರ್ಡ್‌ನಲ್ಲಿ ದಾಖಲಾಗಿದ್ದ ಮಹಿಳೆಯರು ಹಾಗೂ ಶಿಶುಗಳ ವಿವರ ಕಲೆ ಹಾಕಿದ್ದರು. ಹೆರಿಗೆಯಾದ ಎಲ್ಲಾ ಶಿಶುಗಳು ವಾರ್ಡ್ ನಲ್ಲಿರುವುದು ಕಂಡುಬಂದಿತ್ತು. ಅದೇ ದಿನ ಮನೆಯಲ್ಲಿ ಅಬಾರ್ಷನ್ ಆಗಿದೆ ಹಾಗೂ ಹೊಟ್ಟೆ ನೋವೆಂದು ಹೇಳಿ, ಹೆರಿಗೆ ವಾರ್ಡ್‌ನಲ್ಲಿ ದಾಖಲಾಗಿದ್ದ ಶೈಲಾ ಬಳಿಯೂ ಆಸ್ಪತ್ರೆ ಸಿಬ್ಬಂದಿ ವಿಚಾರಿಸಿದ್ದರು. ಆದರೆ ಶಿಶು ತನ್ನದಲ್ಲವೆಂದು ನಿರಾಕರಿಸಿದ್ದಳು. ಇದನ್ನೂ ಓದಿ: ಹೇಮಾವತಿ ನದಿಗೆ ಬಿದ್ದ ಕಾರು – ಇಬ್ಬರ ಶವ ಪತ್ತೆ, ಮತ್ತಿಬ್ಬರು ಕೊಚ್ಚಿ ಹೋಗಿರೋ ಶಂಕೆ

    ಈ ಕುರಿತಂತೆ ಆಸ್ಪತ್ರೆ ಆಡಳಿತ ಮಂಡಳಿಯು, ದೊಡ್ಡಪೇಟೆ ಠಾಣೆಯಲ್ಲಿ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಶೈಲಾ ಮೇಲೆಯೇ ಅನುಮಾನ ವ್ಯಕ್ತಪಡಿಸಿ ಆಕೆಯ ಚಲನವಲನದ ಮೇಲೆ ನಿಗಾವಹಿಸಿದ್ದರು. ಆಕೆ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ, ಪೊಲೀಸರು ಆಕೆಯನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ಈ ವೇಳೆ ಶೌಚಾಲಯದಲ್ಲಿ ಪತ್ತೆಯಾದ ಶಿಶು ತನ್ನದಾಗಿದ್ದು, ತಾನೇ ಕೊಲೆ ಮಾಡಿರುವ ಸಂಗತಿ ಬಾಯ್ಬಿಟ್ಟಿದ್ದಳು.

    ಕೊಲೆಗೆ ಕಾರಣವೇನು?
    ಈಗಾಗಲೇ ಶೈಲಾಗೆ ಇಬ್ಬರು ಮಕ್ಕಳಿದ್ದಾರೆ. ಮತ್ತೊಂದೆಡೆ, 4 ವರ್ಷಗಳ ಹಿಂದೆ ಸಂತಾನಹರಣ ಚಿಕಿತ್ಸೆಯೂ ಆಗಿತ್ತು. ಇದರ ನಡುವೆ ಆಕೆ ಗರ್ಭಿಣಿಯಾಗಿದ್ದಳು. ಇದನ್ನು ಕುಟುಂಬದವರಿಂದ ಆಕೆ ಮುಚ್ಚಿಟ್ಟಿದ್ದಳು. ಆ.16 ರಂದು ತನಗೆ ಮನೆಯಲ್ಲಿ ತನಗೆ ಅಬಾರ್ಷನ್ ಆಗಿದೆ ಹಾಗೂ ಹೊಟ್ಟೆ ನೋವೆಂದು ಹೇಳಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಳು. ಈ ವೇಳೆ ಕೊಲೆ ಮಾಡಿದ ಶಿಶುವವನ್ನು ಶೌಚಾಲಯದಲ್ಲಿ ಹಾಕಿದ್ದಳು ಎಂದು ಹೇಳಲಾಗುತ್ತಿದೆ.

    ಕೆಲವು ಮೂಲಗಳ ಪ್ರಕಾರ, ಹೆರಿಗೆ ವಾರ್ಡ್‌ನಲ್ಲಿ ದಾಖಲಾಗಿದ್ದ ಮಹಿಳೆಯೋರ್ವರನ್ನು ನೋಡಲು ಆಗಮಿಸಿದ ವೇಳೆ ಆಕೆಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಶೌಚಾಲಯಕ್ಕೆ ತೆರಳಿದ ವೇಳೆ ನಾರ್ಮಲ್ ಹೆರಿಗೆಯಾಗಿದೆ. ಅಲ್ಲಿಯೇ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್ ನಿಂದ ಮಗುವಿನ ಕತ್ತು ಸೀಳಿ ಕೊಲೆ ಮಾಡಿದ್ದಳು ಎನ್ನಲಾಗುತ್ತಿದೆ. ಇದನ್ನೂ ಓದಿ: ಪ್ರೀತ್ಸೆ ಪ್ರೀತ್ಸೆ ಎಂದು ವಿದ್ಯಾರ್ಥಿನಿಯ ಹಿಂದೆ ಬಿದ್ದು, ಕೊಲೆ ಬೆದರಿಕೆ – ಪಾಗಲ್ ಪ್ರೇಮಿ ಅರೆಸ್ಟ್

  • ಪತಿ ಜೊತೆ ಜಗಳ| ಚಹಾಗೆ ಇಲಿ ಪಾಷಾಣ ಬೆರೆಸಿ ಮಗು ಜೊತೆ ಕುಡಿದ್ಳು – ಪುತ್ರಿ ಸಾವು, ತಾಯಿ ಗಂಭೀರ

    ಪತಿ ಜೊತೆ ಜಗಳ| ಚಹಾಗೆ ಇಲಿ ಪಾಷಾಣ ಬೆರೆಸಿ ಮಗು ಜೊತೆ ಕುಡಿದ್ಳು – ಪುತ್ರಿ ಸಾವು, ತಾಯಿ ಗಂಭೀರ

    ಬೆಂಗಳೂರು: ಗಂಡನ ಮೇಲಿನ ಕೋಪಕ್ಕೆ ಪತ್ನಿಯೊಬ್ಬಳು ಮಗು ಜೊತೆ ಇಲಿ ಪಾಷಾಣ ಬೆರೆಸಿದ ಚಹಾವನ್ನು ಕುಡಿದ ಘಟನೆ ನಗರದಲ್ಲಿ ನಡೆದಿದೆ.

    ಘಟನೆಯಲ್ಲಿ 1 ವರ್ಷ 8 ತಿಂಗಳ ಮಗು ಚಾರ್ವಿ ಮೃತಪಟ್ಟರೆ ತಾಯಿ ಚಂದ್ರಿಕಾ (26) ಆಸ್ಪತ್ರೆ ಪಾಲಾಗಿದ್ದಾಳೆ. ಇದನ್ನೂ ಓದಿ: ಬೆಂಗ್ಳೂರಿನ ಪ್ರತಿಷ್ಠಿತ ಕಂಪನಿಯ ಸರ್ವರ್ ಹ್ಯಾಕ್ – 378 ಕೋಟಿ ಕ್ರಿಪ್ಟೋ ಕರೆನ್ಸಿ ಕಳ್ಳತನ

     

    ಬೆಂಗಳೂರಿನ ತಿಗಳರಪಾಳ್ಯದಲ್ಲಿ ಯೋಗೇಶ್, ಚಂದ್ರಿಕಾ ದಂಪತಿ ನೆಲೆಸಿದ್ದರು. ಜಗಳ ಮಾಡಿದ ನಂತರ ಯೋಗೇಶ್‌ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗಿದ್ದಾಗ ಚಹಾಗೆ ಇಲಿ ಪಾಷಾಣ ಬೆರೆಸಿ ಮಗಳಿಗೆ ಕುಡಿಸಿ ಚಂದ್ರಿಕಾ ಕುಡಿದಿದ್ದಾಳೆ.

    ಇಲಿ ಪಾಷಾಣ ಸೇವಿಸಿದ ಬಳಿಕ ಪತಿಗೆ ಕರೆ ಮಾಡಿ ಚಂದ್ರಿಕಾ ವಿಷಯ ತಿಳಿಸಿದ್ದಾಳೆ. ಕೂಡಲೇ ಮನೆ ಬಳಿ ಬಂದು ಮಗು ಮತ್ತು ಪತ್ನಿಯನ್ನ ಯೋಗೇಶ್‌ ಆಸ್ಪತ್ರೆಗೆ ದಾಖಲಿಸಿದ್ದ. ಚಿಕಿತ್ಸೆ ಫಲಕಾರಿಯಾಗದೇ ಚಾರ್ವಿ ಸಾವನ್ನಪ್ಪಿದರೆ, ಚಂದ್ರಿಕಾಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್‌

    ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್‌

    ಚಿಕ್ಕಮಗಳೂರು:  ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ ಪವನ್‌ ಕಳೆದ ರಾತ್ರಿ ತಾಯಿಯನ್ನು ಕೊಂದು ಮನೆಯೊಳಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದಾನೆ. ಬಳಿಕ ತಾಯಿ ಮೃತದೇಹ ಬೆಂಕಿಯಲ್ಲಿ ಬೇಯುತ್ತಿದ್ದರೆ ಕೊಲೆಗಾರ ಮಗ ಪ್ರಜ್ಞೆ ಇಲ್ಲದವನಂತೆ ಅಲ್ಲೇ ಪಕ್ಕದಲ್ಲಿ ಮಲಗಿದ್ದಾನೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; ದೂರುದಾರ ಮಾನಸಿಕ ಅಸ್ವಸ್ಥನೋ, ಸ್ವಸ್ಥನೋ ಪರೀಕ್ಷಿಸಬೇಕು: ಬಿ.ಸಿ.ಪಾಟೀಲ್

    ತಾಯಿ ಭವಾನಿ ಮೃತದೇಹ ಬಹುತೇಕ ಸುಟ್ಟುಹೋಗಿದ್ದು ಕಾಲು ಹಾಗೂ ಕೈ ಮಾತ್ರ ಉಳಿದಿದೆ. ಅಕ್ಕಪಕ್ಕದವರಿಂದ ವಿಷಯ ತಿಳಿದು ಆಲ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಾಯಿಯನ್ನ ಕೊಂದ ಪುತ್ರನನ್ನು ಆಲ್ದೂರು ಪೊಲೀಸರು ಬಂಧಿಸಿದ್ದಾರೆ.

  • ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ತಾಯಿ, ಅಂಗವಿಕಲೆ ಮಗಳು ಆತ್ಮಹತ್ಯೆ

    ದಾವಣಗೆರೆ: ಸಾಲ ಮರುಪಾವತಿಸುವಂತೆ ಮೈಕ್ರೋ ಫೈನಾನ್ಸ್ (Micro Finance) ಹಾಗೂ ಸ್ವಸಹಾಯ ಸಂಘಗಳ ಕಿರುಕುಳಕ್ಕೆ ಬೇಸತ್ತು ತಾಯಿ ಹಾಗೂ ಅಂಗವಿಕಲೆ ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ನಗರದ ಬಳಿ ಇರುವ ತುಂಗಭದ್ರ ನದಿ ಸೇತುವೆ ಬಳಿ ನಡೆದಿದೆ.

    ಗಂಗನರಸಿ ಗ್ರಾಮದ ಸುವರ್ಣಮ್ಮ (56), ಅಂಗವಿಕಲ ಮಗಳು ಗೌರಮ್ಮ (26) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಸುವರ್ಣಮ್ಮ, ಕೆಲ ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಮೂವರು ಪುತ್ರಿಯರಲ್ಲಿ ಇಬ್ಬರ ವಿವಾಹವಾಗಿದ್ದು, ಅಂಗವಿಕಲೆಯಾದ ಗೌರಮ್ಮ ತಾಯಿಯೊಂದಿಗೆ ನೆಲೆಸಿದ್ದರು. ಕೂಲಿ ಮಾಡಿಕೊಂಡು ಸಂಸಾರ ಸಾಗಿಸುತ್ತಿದ್ದ ಸುವರ್ಣಮ್ಮ, ಸಾಲದ ಹೊರೆಗೆ ಬಳಲಿದ್ದರು ಎನ್ನಲಾಗುತ್ತಿದ್ದು, ಮೈಕ್ರೊ ಫೈನಾನ್ಸ್ ಮತ್ತು ಸ್ವಸಹಾಯ ಸಂಘಗಳಲ್ಲಿ 3 ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು. 2 ಸಾಲಕ್ಕೆ ವಾರಕ್ಕೊಮ್ಮೆ ಹಾಗೂ 1 ಸಾಲಕ್ಕೆ ತಿಂಗಳ ಕಂತುಗಳಲ್ಲಿ ಮರುಪಾವತಿ ಮಾಡಬೇಕಿತ್ತು. ಸಾಲದ ಕಂತು ಸರಿಯಾಗಿ ಪಾವತಿಸಲು ಕಷ್ಟಪಡುತ್ತಿದ್ದರು. ಇದನ್ನೂ ಓದಿ: ಕಲಬುರಗಿ | ಗಾಣಗಾಪುರದ ದತ್ತನ ಸನ್ನಿಧಿಯಲ್ಲಿ ಕಾಲ್ತುಳಿತ – ಮಹಿಳೆ ಸಾವು

    ಸಾಲಗಾರರ ಕಾಟ ತಾಳಲಾರದೆ ಇಂದು ತುಂಗಾಭದ್ರಾ ನದಿಗೆ ನಿರ್ಮಿಸಿದ ರೈಲ್ವೆ ಸೇತುವೆಯ ಮೇಲೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮೃತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

  • ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

    ಒಂದೂವರೆ ತಿಂಗಳ ಗಂಡು ಮಗುವನ್ನು ನೀರಿನ ಹಂಡೆಯಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ

    ನೆಲಮಂಗಲ: ಒಂದೂವರೆ ತಿಂಗಳ ಹಸುಗೂಸು ಗಂಡು ಮಗುವನ್ನು (Boy Baby) ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಪಾಪಿ ತಾಯಿ ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ವಿಶ್ವೇಶ್ವರಪುರದಲ್ಲಿ ನಡೆದಿದೆ.

    ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆ ಮಗುವನ್ನು ತಾಯಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಶೌಚಾಲಯದಲ್ಲಿ ನೀರು ಕಾಯಿಸುವ ಹಂಡೆಯಲ್ಲಿ ತನ್ನ ಒಂದೂವರೆ ತಿಂಗಳ ಮಗುವನ್ನು ಮುಳುಗಿಸಿ ತಾಯಿ ಕೊಲೆ ಮಾಡಿದ್ದು, ಘಟನೆ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಕೋವಿಡ್‌ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ: ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

    ನಗರದ ವಿಶ್ವೇಶ್ವರಪುರದಲ್ಲಿ ವಾಸವಾಗಿದ್ದ ಪವನ್ ಮತ್ತು ರಾಧಾ ದಂಪತಿಯ ಗಂಡು ಮಗುವನ್ನು ತಡರಾತ್ರಿ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಆರೋಪಿ ರಾಧಾಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಖಲಿಸ್ತಾನಿ ಭಯೋತ್ಪಾದಕ ಹ್ಯಾಪಿ ಪಾಸಿಯಾ ಭಾರತಕ್ಕೆ ಹಸ್ತಾಂತರ ಪ್ರಕ್ರಿಯೆ ಶುರು

    ಪತಿ ಪವನ್ ಆಟೋ ಡೈವರ್ ಆಗಿದ್ದು, ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದೆ. ಇನ್ನೂ ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಹಾಗೂ ಮನಸ್ತಾಪ ಇದ್ದು, ಮಗುವಿನ ಕೊಲೆಗೆ ನಿಖರವಾದ ಕಾರಣ ಕಲೆಹಾಕಲು ನೆಲಮಂಗಲ ಟೌನ್ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ನಾನು ಪಾಕಿಸ್ತಾನಿ ಸೇನೆಯ ವಿಶ್ವಾಸಾರ್ಹ ಏಜೆಂಟ್ – ಮುಂಬೈ ದಾಳಿಯ ಸಂಚುಕೋರ ರಾಣಾ ತಪ್ಪೊಪ್ಪಿಗೆ

  • ಅಮ್ಮ, ಸೋದರನಿಗೆ ಡ್ರಗ್ಸ್ ಚಟ | ಬಾಲಕನಿಗೆ ನಾಯಿಗಳೇ ಆಸರೆ – ಬೊಗಳುವ ಮೂಲಕ ಮಾತ್ರ ಸಂವಹನ!

    ಅಮ್ಮ, ಸೋದರನಿಗೆ ಡ್ರಗ್ಸ್ ಚಟ | ಬಾಲಕನಿಗೆ ನಾಯಿಗಳೇ ಆಸರೆ – ಬೊಗಳುವ ಮೂಲಕ ಮಾತ್ರ ಸಂವಹನ!

    – ಥಾಯ್ಲೆಂಡ್‍ನ 8 ವರ್ಷದ ಬಾಲಕನ ಹೃದಯ ವಿದ್ರಾವಕ ಕತೆ

    ಬ್ಯಾಂಕಾಕ್‌: ಥಾಯ್ಲೆಂಡ್‍ನಲ್ಲಿ (Thailand) ಮನುಷ್ಯ ಪ್ರಪಂಚದ ಅರಿವೇ ಇಲ್ಲದೇ, ನಾಯಿಗಳ (Dog) ಜೊತೆಯೇ ಬೆಳೆದು ಮಾತನಾಡಲು ಬಾರದೇ ಸಂವಹನಕ್ಕಾಗಿ ನಾಯಿಯಂತೆಯೇ ಬೊಗಳುತ್ತಿದ್ದ ಬಾಲಕನೊಬ್ಬನನ್ನು (Boy) ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

    ಬಾಲಕನ ತಾಯಿ (Mother ) ಹಾಗೂ ಆತನ ಸಹೋದರ ಡ್ರಗ್ಸ್ ಚಟಕ್ಕೆ ಬಿದ್ದಿದ್ದರು. ಇದರಿಂದ ಬಾಲಕನನ್ನು ನಿರ್ಲಕ್ಷಿಸಿ, ಸಮಾಜದಲ್ಲಿ ಬೆರೆಯಲು ಬಿಡದೇ, ಮನೆಯಲ್ಲಿದ್ದ 6 ನಾಯಿಗಳ ಜೊತೆ ಬಿಟ್ಟಿದ್ದರು. ಇದರ ಪರಿಣಾಮ ಬಾಲಕ ಮಾತನಾಡಲು ಕಲಿತಿಲ್ಲ. ಆತ ನಾಯಿಯಂತೆಯೇ ಬೊಗಳಿ ಸಂವಹನ ನಡೆಸುತ್ತಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿ ಸ್ಥಿತಿ ಗಂಭೀರ

    ಶಾಲೆಯ ಪ್ರಾಂಶುಪಾಲರು ಮತ್ತು ಸ್ಥಳೀಯ ಕಾರ್ಯಕರ್ತರು ಬಾಲಕನ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅಧಿಕಾರಿಗಳು, ಜೂ.30 ರಂದು ಥಾಯ್ಲೆಂಡ್‍ನ ಉತ್ತರಾದಿತ್ ಪ್ರಾಂತ್ಯದ ಲ್ಯಾಪ್ಲೇ ಜಿಲ್ಲೆಯಲ್ಲಿ ಬಾಲಕನನ್ನು ರಕ್ಷಿಸಿದ್ದಾರೆ. ರಕ್ಷಣೆ ವೇಳೆ, ಆತ ಮಾತನಾಡದೇ ನಾಯಿಯಂತೆಯೇ ಬೊಗಳುತ್ತಿದ್ದ ಎಂದು ಪವಿನಾ ಹಾಂಗ್‌ಸಕುಲ್ ಫೌಂಡೇಶನ್ ಫಾರ್ ಚಿಲ್ಡ್ರನ್ & ವುಮೆನ್‌ನ ಅಧ್ಯಕ್ಷೆ ಪವಿನಾ ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯರು, ಬಾಲಕನ ತಾಯಿ ಆರು ನಾಯಿಗಳ ಜೊತೆ ಅವನನ್ನು ಬಿಟ್ಟು, ಅಲ್ಲಿ ಇಲ್ಲಿ ಸುತ್ತಾಡುತ್ತಿದ್ದಳು. ತಾಯಿಯ ವರ್ತನೆಯಿಂದ ಬೇಸತ್ತ ನೆರೆಹೊರೆಯವರು ತಮ್ಮ ಮಕ್ಕಳು ಅವನೊಂದಿಗೆ ಆಟವಾಡುವುದನ್ನು ತಡೆದರು. ಇದರಿಂದ ಆತ ಸಾಮಾಜಿಕವಾಗಿ ಬೆರೆಯಲಿಲ್ಲ ಮತ್ತು ಮಾತನಾಡಲು ಕಲಿಯಲಿಲ್ಲ. ನಾಯಿಗಳ ಜೊತೆಗೆ ಇದ್ದು ಅವುಗಳಂತೆ ವರ್ತಿಸಲು ಶುರುಮಾಡಿದ್ದ ಎಂದು ತಿಳಿಸಿದ್ದಾರೆ.

    ಬಾಲಕನಿಗೆ ಅಧಿಕಾರಿಗಳು ʻಬಾಯ್‌ ಎʼ ಎಂದು ಹೆಸರಿಟ್ಟಿದ್ದಾರೆ. ಅವನ ತಾಯಿ ಮತ್ತು ಅವನ 23 ವರ್ಷದ ಸಹೋದರ ಇಬ್ಬರೂ ಮಾದಕ ದ್ರವ್ಯ ಸೇವನೆ ಮಾಡುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇನ್ನೂ ಬಾಲಕನ ತಾಯಿ ಅವನ ಶಿಕ್ಷಣಕ್ಕಾಗಿ ಸರ್ಕಾರದಿಂದ 400 ಬಹ್ತ್ ನೆರವು ಪಡೆದಿದ್ದಳು. ಆದರೆ ಅವನನ್ನು ಶಾಲೆಗೆ ಸೇರಿಸಿರಲಿಲ್ಲ. ಒಂದು ದಿನ ಮಾತ್ರ ಶಾಲೆಗೆ ಹೋಗಿದ್ದ, ಆದರೆ ಮತ್ತೆ ಎಂದೂ ಶಾಲೆ ಕಡೆ ಮುಖಮಾಡಿರಲಿಲ್ಲ ಎಂದು ವರದಿಯಾಗಿದೆ.

    ಬಾಲಕನನ್ನು ಮಕ್ಕಳ ಆಶ್ರಯ ಶಿಬಿರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಆತನಿಗೆ ಉತ್ತಮ ಜೀವನ ನಡೆಸಲು ಅವಕಾಶ ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಲೋ ಪಾಯ್ಸನ್ ನೀಡಿ ಪತಿಯ ಹತ್ಯೆ ಆರೋಪ – ವಿಡಿಯೋ ಸಾಕ್ಷಿ ಇದ್ರೂ ಪತ್ನಿಯನ್ನು ಬಂಧಿಸದ ಪೊಲೀಸರು