Tag: mother son

  • ಗೋಡೆಗೆ ಬಡಿದು ತಾಯಿಯನ್ನೇ ಕೊಂದ ಪಾಪಿ ಮಗ

    ಗೋಡೆಗೆ ಬಡಿದು ತಾಯಿಯನ್ನೇ ಕೊಂದ ಪಾಪಿ ಮಗ

    ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಸ್ವಂತ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಗೋಡೆಗೆ ಬಡಿದು ಕೊಂದಿರುವ ಘಟನೆ ಕೊಚ್ಚಿಯ ಮುವಾಟ್ಟುಪುಳದ ಪಲ್ಲಿಚಿರಂಗರಾದಲ್ಲಿ ನಡೆದಿದೆ.

    ಆರೋಪಿ ಮನೋಜ್(46) ತನ್ನ ತಾಯಿ ಶಾಂತಮ್ಮ ನೆರೆಹೊರೆಯವರ ಮುಂದೆ ತನ್ನ ಬಗ್ಗೆ ಅನಗತ್ಯ ವಿಚಾರಗಳನ್ನು ಹೇಳುತ್ತಿರುತ್ತಾರೆ ಎಂಬ ಕಾರಣಕ್ಕೆ ಜಗಳವಾಡಿ ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಟ್ರಿಪಲ್‌ ರೈಡಿಂಗ್‌ಗೆ ಅವಕಾಶ: SBSP ಭರವಸೆ

    ಫೆಬ್ರವರಿ 5 ರ ರಾತ್ರಿ ಮನೋಜ್ ತಾಯಿ ಶಾಂತಮ್ಮ ಅವರ ಮೇಲೆ ಕೋಪಗೊಂಡು ಜಗಳ ಪ್ರಾರಂಭಿಸಿದ್ದಾನೆ. ತಾಯಿ-ಮಗನ ನಡುವಿನ ಜಗಳ ವಿಕೋಪಕ್ಕೆ ತಿರುಗಿತ್ತು. ಕೋಪದ ಭರದಲ್ಲಿ ಮನೋಜ್ ತಾಯಿಯ ಮುಖವನ್ನು ಅಡುಗೆಮನೆ ಗೋಡೆಗೆ ಹೊಡೆದಿದ್ದಾನೆ. ತಾಯಿ ಸಾಯುವವರೆಗೂ ಮುಖಕ್ಕೆ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ.

    ಬಳಿಕ ಆರೋಪಿ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದಾನೆ. ತಾಯಿಯನ್ನು ಕೊಂದ ಬಳಿಕ ಗೋಡೆಗೆ ಅಂಟಿದ್ದ ರಕ್ತದ ಕಲೆಯನ್ನು ಒರೆಸಿ ಸ್ವಚ್ಛಗೊಳಿಸಿದ್ದಾನೆ. ತಾನು ಎಸಗಿರುವ ಕೃತ್ಯ ಯಾರಿಗೂ ತಿಳಿಯಬಾರದೆಂದು ಮರುದಿನ ಬೆಳಗ್ಗೆ ತಾಯಿ ಎದ್ದೇಳುತ್ತಿಲ್ಲ, ಒಂದು ಬಾರಿ ಪರೀಕ್ಷಿಸಿ ಎಂದು ನೆರೆಹೊರೆಯವರನ್ನು ಕರೆದು ಕೇಳಿದ್ದಾನೆ. ಇದನ್ನೂ ಓದಿ: ಖಾಸಗಿ ಸಂಸ್ಥೆಯಲ್ಲಿ ಭಾರೀ ಅಗ್ನಿ ಅವಘಡ

    POLICE JEEP

    ನೆರೆಹೊರೆಯವರು ಆಕೆಯನ್ನು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವ ವಿಚಾರ ತಿಳಿದುಬಂದಿದೆ. ತಕ್ಷಣ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೋಜ್ ಮೇಲೆ ಪ್ರಕರಣ ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದಾರೆ.

  • ಮಗನಿಗೆ ಗಂಜಿ, ತಾಯಿಗೆ ತಣ್ಣೀರು ಬಟ್ಟೆ- ಊಟವಿಲ್ಲದೆ ನರಳಾಟ

    ಮಗನಿಗೆ ಗಂಜಿ, ತಾಯಿಗೆ ತಣ್ಣೀರು ಬಟ್ಟೆ- ಊಟವಿಲ್ಲದೆ ನರಳಾಟ

    – ತಾನು ಉಪವಾಸವಿದ್ದು ಮಗನನ್ನು ಸಾಕುತ್ತಿದ್ದಾರೆ ತಾಯಿ

    ಮಡಿಕೇರಿ: ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದು, ಲಾಕ್‍ಡೌನ್ ಆಗಿರುವುದರಿಂದ ಕೂಲಿ ಕೆಲಸ ಇಲ್ಲದೆ ಗಂಜಿ ಕುಡಿದು ಬದುಕು ದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

    ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹಂಚಿತ್ತಿಟ್ಟು ಗ್ರಾಮದಲ್ಲಿ ಇಂತಹ ಮನಕಲಕುವ ಸ್ಥಿತಿ ಇದ್ದು, ಮಹಿಳೆ ಶಾಂತಮ್ಮ, ಬೆನ್ನು ಮೂಳೆ ಮುರಿದುಕೊಂಡು 13 ವರ್ಷದಿಂದ ಹಾಸಿಗೆ ಹಿಡಿದಿರುವ ಮಗನನ್ನು ಸಾಕುತ್ತಿದ್ದಾರೆ. ಕೂಲಿ ಮಾಡುತ್ತಿದ್ದ ಶಾಂತಮ್ಮ ಅದೇ ಹಣದಿಂದ ತನ್ನ ಮಗ ವಿಠಲನಿಗೆ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಲಾಕ್‍ಡೌನ್ ಆಗಿರುವ ಹಿನ್ನೆಲೆಯಲ್ಲಿ ಕೂಲಿಯೂ ಇಲ್ಲದೆ, ಮಗನಿಗೆ ಚಿಕಿತ್ಸೆ ಕೊಡಿಸಲು ಮಂಗಳೂರಿಗೆ ಕರೆದೊಯ್ಯಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ದುಡಿಮೆ ಇಲ್ಲದ್ದರಿಂದ ತಿನ್ನುವ ಅನ್ನಕ್ಕೂ ಆಹಾಕಾರ ಎದುರಾಗಿದೆ.

    ಸರ್ಕಾರ ಕೊಟ್ಟಿರುವ ಕೇವಲ ಐದು ಕೆ.ಜಿ ಅಕ್ಕಿಯಿಂದ ನಾನೇನು ಮಾಡಲು ಸಾಧ್ಯ. ಸೊಂಟ ಮುರಿದುಕೊಂಡು ನಡೆದಾಡಲು ಸಾಧ್ಯವಿಲ್ಲದೆ ಹಾಸಿಗೆ ಹಿಡಿದಿರುವ ಮಗನಿಗೆ ಗಂಜಿ ಹಾಕಿ ಹಸಿವಿನಿಂದಲೇ ಇರುತ್ತೇನೆ. ಇದರ ನಡುವೆ ಯಾರಾದರೂ ಕೂಲಿ ಕೆಲಸಕ್ಕೆ ಕರೆದರೆ, ಕೆಲಸಕ್ಕೆ ಬಂದಿರುವವರು ಏನಾದ್ರು ಕೊಟ್ಟರೆ ಅದನ್ನು ತಿನ್ನುತ್ತೇನೆ ಎಂದು ಶಾಂತಮ್ಮ ಕಣ್ಣೀರಿಡುತ್ತಿದ್ದಾರೆ. ಈ ಮೂಲಕ ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

  • ನರ ರೋಗದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್

    ನರ ರೋಗದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆಗೆ ಕೊರೊನಾ ಪಾಸಿಟಿವ್

    – ಆರೈಕೆ ಮಾಡುತ್ತಿದ್ದ ಮಗನಿಗೂ ಸೋಂಕು

    ಮಂಗಳೂರು: ಕೊರೊನಾ ಸೋಂಕಿತ ವೃದ್ಧೆಯ ಸಾವಿನ ಬಳಿಕ ಕೊರೊನಾ ಹಾಟ್‍ಸ್ಪಾಟ್ ಆಗಿ ಬದಲಾಗಿರುವ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗಲಿದೆ.

    ವೃದ್ಧೆಯ ಪಕ್ಕದ ಬೆಡ್ ನಲ್ಲಿದ್ದ 80 ವರ್ಷದ ತಾಯಿ ಮತ್ತು ಆಕೆಯ ಆರೈಕೆಗೆ ಬಂದಿದ್ದ 45 ವರ್ಷದ ಮಗನಿಗೆ ಸೋಂಕು ಕಾಣಿಸಿಕೊಂಡಿದೆ. ಇವರು ಮಂಗಳೂರಿನ ಶಕ್ತಿನಗರದ ನಿವಾಸಿಗಳಾಗಿದ್ದು, ಆ ಏರಿಯಾವನ್ನು ಕಂಪ್ಲೀಟ್ ಸೀಲ್‍ಡೌನ್ ಮಾಡಲಾಗಿದೆ.

    ನರ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ತಾಯಿಯನ್ನು ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲು ಮಾಡಿದ್ದು, ಸ್ವತಃ ಮಗನೇ ಜೊತೆಗಿದ್ದು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಇವರಿಬ್ಬರಿಗೂ ಸೋಂಕು ತಗಲಿದ್ದು ಮತ್ತೊಂದು ರೀತಿಯ ಆತಂಕಕ್ಕೆ ಒಳಗಾಗಿದ್ದಾರೆ. ಏಪ್ರಿಲ್ 23ರಂದು ಇದೇ ಆಸ್ಪತ್ರೆಯಲ್ಲಿದ್ದ ವೃದ್ಧೆ ಸೋಂಕಿನಿಂದ ಮೃತಪಟ್ಟಿದ್ದರು. ಆ ಬಳಿಕ ಖಾಸಗಿ ಆಸ್ಪತ್ರೆಯನ್ನು ವಶಕ್ಕೆ ಪಡೆದು ಎಲ್ಲ ಸಿಬಂದಿ ಮತ್ತು ರೋಗಿಗಳನ್ನು ತಪಾಸಣೆಗೆ ಒಳಪಡಿಸಿತ್ತು. ಇದನ್ನು ಓದಿ: ತಾಯಿ, ಮಗನಿಗೆ ಕೊರೊನಾ – ಮಂಗ್ಳೂರು ನಗರ ಸೀಲ್ ಡೌನ್

    ಮೃತ ಪಟ್ಟ ಸೋಂಕಿತೆಯ ಸಂಪರ್ಕದಲ್ಲಿ ಇದ್ದ 190ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು, ಈಗ ದಿನದಿಂದ ದಿನಕ್ಕೆ ಆಸ್ಪತ್ರೆಯಲ್ಲಿ ಇದ್ದವರಿಗೆ ಕಪರೊನಾ ಪಾಸಿಟಿವ್ ಬಂದಿದೆ. ನಿನ್ನೆಯಷ್ಟೆ ಆಸ್ಪತ್ರೆಯಲ್ಲಿ ಸ್ವೀಪರ್ ಆಗಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಮೂಲಕ ಆಸ್ಪತ್ರೆಗೆ ಬಂದು ಹೋದವರಿಗೆಲ್ಲ ಆತಂಕ ಶುರುವಾಗಿದೆ.

  • ಬೈಕ್‍ಗಳ ಮುಖಾಮುಖಿ ಡಿಕ್ಕಿ-ತಾಯಿ, ಮಗ ಸೇರಿದಂತೆ ಮೂವರ ಸಾವು

    ಬೈಕ್‍ಗಳ ಮುಖಾಮುಖಿ ಡಿಕ್ಕಿ-ತಾಯಿ, ಮಗ ಸೇರಿದಂತೆ ಮೂವರ ಸಾವು

    ಚಿತ್ರದುರ್ಗ: ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಯಿ, ಮಗ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಹೊರವಲಯದ ಸಮೀಪ ಕ್ಯಾದಿಗೆರೆ ಬಳಿ ನಡೆದಿದೆ.

    ರಫೀಕ್ (26), ರಜೀಯಾ (50) ಮೃತ ದುರ್ದೈವಿಗಳಾಗಿದ್ದು, ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಮೃತರನ್ನು ನಗರದ ಕಾಮನಬಾವಿ ಬಡಾವಣೆಯ ನಿವಾಸಿಗಳೆಂದು ಗುರುತಿಸಲಾಗಿದೆ.

    ಮೃತ ರಫೀಕ್ ಹಾಗೂ ರಜೀಯಾ ಸಂಬಂಧಿಕರ ವಿವಾಹ ಸಮಾರಂಭಕ್ಕೆ ಬೈಕಿನಲ್ಲಿ ತೆರಳಿದ್ದರು. ಮದುವೆ ಕಾರ್ಯಕ್ರಮ ಮುಗಿದ ಬಳಿಕ ಮರಡಿಹಳ್ಳಿಗೆ ವಾಪಾಸ್ಸಾಗುತ್ತಿದ್ದರು. ಈ ವೇಳೆ ಕ್ಯಾದಿಗೆರೆ ಸಮೀಪ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

    ಡಿಕ್ಕಿಯ ರಭಸಕ್ಕೆ ಎರಡೂ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಚಿತ್ರದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಪಾರ್ಟ್‍ಮೆಂಟ್‍ನ 3ನೇ ಮಹಡಿಯಿಂದ ಬಿದ್ದು ತಾಯಿ-ಮಗ ಅನುಮಾನಾಸ್ಪದ ಸಾವು

    ಅಪಾರ್ಟ್‍ಮೆಂಟ್‍ನ 3ನೇ ಮಹಡಿಯಿಂದ ಬಿದ್ದು ತಾಯಿ-ಮಗ ಅನುಮಾನಾಸ್ಪದ ಸಾವು

    ಬೆಂಗಳೂರು: ಅಪಾರ್ಟ್‍ಮೆಂಟ್ ಮೇಲಿಂದ ಬಿದ್ದು ತಾಯಿ, ಮಗ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿಯ ಬೆಳ್ತೂರಿನಲ್ಲಿ ನಡೆದಿದೆ.

    ಯಾದಗಿರಿ ಮೂಲದ ತಾಯಿ ಸುಂದರಮ್ಮ(55) ಹಾಗೂ ಮಗ ಮೌನೇಶ್(36) ಮೃತ ದುದೈರ್ವಿಗಳು. ಮೌನೇಶ್ ಕೆಎಸ್‍ಆರ್ ಟಿಸಿ ಬಸ್ ಚಾಲಕರಾಗಿದ್ದು, 4 ದಿನದ ಹಿಂದಷ್ಟೇ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದರು. ಕಾಡುಗೋಡಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಚಂದ್ರಪ್ಪ ಎಂಬವರು ವಾಸವಿದ್ದ ಅಪಾರ್ಟ್‍ಮೆಂಟ್ ಫ್ಲಾಟ್ ಮೇಲಿಂದ ಬಿದ್ದು ಇಂದು ತಾಯಿ-ಮಗ ಸಾವನ್ನಪ್ಪಿದ್ದಾರೆ.

    ಇನ್ಸ ಪೆಕ್ಟರ್ ಚಂದ್ರಪ್ಪ ಅವರ ತಂಗಿ ಹಾಗೂ ಮೃತ ಮೌನೇಶ್ ಗೆ ಪ್ರೇಮಾಂಕುರವಾಗಿತ್ತು. ಎರಡು-ಮೂರು ಬಾರಿ ಚಂದ್ರಪ್ಪ ಸಹೋದರಿ ಮೌನೇಶ್ ಜೊತೆ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಕೋಪಗೊಂಡಿದ್ದ ಚಂದ್ರಪ್ಪ, ಮೌನೇಶ್ ಹಾಗೂ ಅವರ ತಾಯಿಯನ್ನು ತಂದು ಕೂಡಿಹಾಕಿದ್ದರು ಎಂದು ಹೇಳಲಾಗಿದೆ. ಆದರೆ ಇಂದು ಅನುಮಾನಾಸ್ಪದ ರೀತಿಯಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

    ಇತ್ತೀಚೆಗೆ ಕಾಡುಗೋಡಿಯಿಂದ ಇನ್ಸ್ ಪೆಕ್ಟರ್ ಚಂದ್ರಪ್ಪ ಅವರ ವರ್ಗಾವಣೆ ಆಗಿತ್ತು. ಸದ್ಯ ಘಟನೆ ಸಂಬಂಧ ಕಾಡುಗೋಡಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಚಂದ್ರಪ್ಪ ಅವರನ್ನ ಕರೆಸಿ ಪೊಲೀಸರು ವಿಚಾರಣೆ ಮಾಡಿದ್ದು, ಅವರನ್ನು ಕರೆಸಿ ಮಾತನಾಡಿದ್ದು ನಿಜ. ಆದ್ರೆ ಅವರೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಚಂದ್ರಪ್ಪ ಹೇಳಿದ್ದಾರೆ.

  • `ಭಾರತ್ ಮಾತಾ ಕೀ ಜೈ’ ಅನ್ನೋದು ಅಪರಾಧವಾದ್ರೆ, ನನ್ನನ್ನೂ ಶೂಟ್ ಮಾಡಿ: ಮೃತನ ತಾಯಿ

    `ಭಾರತ್ ಮಾತಾ ಕೀ ಜೈ’ ಅನ್ನೋದು ಅಪರಾಧವಾದ್ರೆ, ನನ್ನನ್ನೂ ಶೂಟ್ ಮಾಡಿ: ಮೃತನ ತಾಯಿ

    ಲಕ್ನೋ: ಉತ್ತರಪ್ರದೇಶದ ಕಾಸ್ ಗಂಜ್ ನಲ್ಲಿ ಗಣರಾಜ್ಯೋತ್ಸವ ದಿನದಂದೇ ಭುಗಿಲೆದ್ದ ಹಿಂಸಾಚಾರದಲ್ಲಿ 23 ವರ್ಷದ ಯುವಕನೊಬ್ಬ ಮೃತಪಟ್ಟಿದ್ದು, ಈ ಕುರಿತು ಮೃತನ ತಾಯಿ ತನ್ನ ಆಕ್ರೋಶ ಹೊರ ಹಾಕಿದ್ದಾರೆ.

    ಈ ನೆಲದಲ್ಲೇ ಬದುಕಿ, ಹಿಂದೂಸ್ತಾನ್ ಜಿಂದಾಬಾದ್… ಭಾರತ್ ಮಾತಾ ಕೀ ಜೈ ಅಂತ ಹೇಳೋದು ಅಪರಾಧವಾಗೋದಾದ್ರೆ ನನ್ನನ್ನೂ ಕೂಡ ಗುಂಡಿಕ್ಕಿ ಸಾಯಿಸಿ ಅಂತ ಚಂದನ್ ತಾಯಿ ಸಂಗೀತ ಗುಪ್ತಾ ಹೇಳಿದ್ದಾರೆ.

    ಏನಿದು ಘಟನೆ?: ಉತ್ತರಪ್ರದೇಶದ ಕಾಸ್ ಗಂಜ್ ನಲ್ಲಿ 69 ಗಣರಾಜ್ಯೋತ್ಸವ ದಿನದ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷದ್ ಕಾರ್ಯಕರ್ತರು ನಗರದಲ್ಲಿ ಬೈಕ್ ಜಾಥಾ ನಡೆಸಿದ್ದರು. ಈ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಈ ಹಿಂಸಾಚಾರದಲ್ಲಿ 22 ವರ್ಷದ ಚಂದನ್ ಬಲಿಯಾಗಿದ್ದರು. ಪರಿಣಾಮ ನಗರದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

    ನನ್ನ ಮಗ ಪಾಕಿಸ್ತಾನಕ್ಕೆ ಜಿಂದಾಬಾದ್ ಅಂತ ಹೇಳಿಲ್ಲವೆಂದು ದುಷ್ಕರ್ಮಿಗಳು ಆತನನ್ನು ಕೊಲೆ ಮಾಡಿದ್ದಾರೆ ಅಂತ ಚಂದನ್ ತಂದೆ ಸುಶೀಲ್ ಗುಪ್ತಾ ಆರೋಪಿಸಿದ್ದಾರೆ.

    ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರೋ ಇವರು, ನನ್ನ ಮಗ ಪಾಕಿಸ್ತಾನಕ್ಕೆ ಜಿಂದಾಬಾದ್, ಹಿಂದೂಸ್ತಾನ್ ಮುರ್ದಾಬಾದ್ ಎಂದು ಹೇಳುವುದನ್ನು ನಿಲ್ಲಿಸಿ ಭಾರತ್ ಮಾತಾ ಕೀ ಜೈ ಅಂತ ಘೋಷಣೆ ಕೂಗಿದ್ದಾನೆ. ಇದರಿಂದ ಸಿಟ್ಟುಗೊಂಡ ದುಷ್ಕರ್ಮಿಗಳು ಆತನ ಮೇಲೆ ಕಲ್ಲು ತೂರಾಟ ನಡೆಸಿ ಹತ್ಯೆಗೈದಿದ್ದಾರೆ ಅಂತ ಅವರು ಅಳಲು ತೋಡಿಕೊಂಡಿದ್ದಾರೆ.

    ನಗರದ ಕಾಲೇಜೊಂದರಲ್ಲಿ ಬಿಕಾಂ ಓದುತ್ತಿರೋ ಚಂದನ್, ಸಂಕಲ್ಪ ಅನ್ನೋ ಖಾಸಗಿ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿದ್ದನು ಎಂದು ಅವರು ತಿಳಿಸಿದ್ದಾರೆ.

    ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಮಾರು 53 ಮಂದಿಯನ್ನು ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ದುಷ್ಕರ್ಮಿಗಳು 3 ಅಂಗಡಿಗಳು ಹಾಗೂ ಕೆಲ ವಾಣಿಜ್ಯ ಸಂಸ್ಥೆಗಳಿಗೆ ತೊಂದರೆ ನೀಡಿದ್ದಾರೆ. ಅಲ್ಲದೇ ಬಸ್ ಗೂ ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಬಳಿಕ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಹಿಂಸಾಚಾರದಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.