Tag: mother

  • ಆಂಬುಲೆನ್ಸ್ ಸಿಗದೆ ತಾಯಿಯನ್ನ ಮಗ ಹೊತ್ತೊಯ್ದ ಪ್ರಕರಣ: ತೀವ್ರ ಗಾಯಗೊಂಡಿದ್ದ ಅಜ್ಜಿ ಸಾವು

    ಆಂಬುಲೆನ್ಸ್ ಸಿಗದೆ ತಾಯಿಯನ್ನ ಮಗ ಹೊತ್ತೊಯ್ದ ಪ್ರಕರಣ: ತೀವ್ರ ಗಾಯಗೊಂಡಿದ್ದ ಅಜ್ಜಿ ಸಾವು

    ಕಲಬುರಗಿ: ಆಂಬುಲೆನ್ಸ್ ಸಿಗದೇ ತಾಯಿಯನ್ನು ಮಗ ಹೊತ್ತೊಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೀವ್ರ ಗಾಯಗೊಂಡಿದ್ದ ಅಜ್ಜಿ ಮೃತಪಟ್ಟಿದ್ದಾರೆ.

    ಕಲಬುರಗಿಯ ಉದನೂರ ಕ್ರಾಸ್ ಬಳಿ ಸಿದ್ದಮ್ಮ ಎಂಬ ಅಜ್ಜಿಗೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದಿತ್ತು. ಘಟನೆಯ ನಂತರ ಆಕೆಯ ಮಗ ಮಹಾಂತೇಷ 108 ಆಂಬುಲೆನ್ಸ್ ಗೆ ಕರೆ ಮಾಡಿದ್ರು ಸಕಾಲಕ್ಕೆ ಬರಲಿಲ್ಲ.

    ನಂತರ ಸ್ಥಳೀಯರ ಬಳಿ ನೆರವು ಕೇಳಿದ್ರು ಮಾನವಿಯತೆ ಮರೆತ ಜನ ಯಾರು ಸಹಾಯ ಮಾಡಿರಲಿಲ್ಲ. ಕೊನೆಗೆ ಮಗ ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ತಾಯಿಯನ್ನು ಹೊತ್ತು 45 ನಿಮಿಷಗಳ ಕಾಲ ಹೊತ್ತು ಸಾಗಿದ್ದರು. ನಂತರ ಇದನ್ನು ಗಮನಿಸಿದ ಪೊಲೀಸರು ಎಸ್ಕಾರ್ಟ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು.

    ಮೃತ ಸಿದ್ದಮ್ಮಳ ಕಡು ಬಡವರಾಗಿದ್ದು, ಈ ಕುರಿತು ಸುದ್ದಿ ಪಬ್ಲಿಕ್ ಟಿವಿ ಪ್ರಸಾರ ಮಾಡಿದ ನಂತರ ಯುನೈಟೆಡ್ ಆಸ್ಪತ್ರೆಯವರು ಉಚಿತ ಚಿಕಿತ್ಸೆ ಕೊಟ್ಟು ಮಾನವಿಯತೆ ಮೆರೆದಿದ್ದಾರೆ. ಆದ್ರೆ ಘಟನೆ ನಂತರ ಅಜ್ಜಿಗೆ ತೀವ್ರ ರಕ್ತ ಆದ ಕಾರಣ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಅಪಘಾತವಾಗಿ ಗಾಯಗೊಂಡಿದ್ದ ತಾಯಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಸಾಗಿದ ಮಗ

    https://www.youtube.com/watch?v=_FXNSRP_ceg

  • ಅಪಘಾತವಾಗಿ ಗಾಯಗೊಂಡಿದ್ದ ತಾಯಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಸಾಗಿದ ಮಗ

    ಅಪಘಾತವಾಗಿ ಗಾಯಗೊಂಡಿದ್ದ ತಾಯಿಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಸಾಗಿದ ಮಗ

    ಕಲಬುರಗಿ: ಅಪಘಾತವಾದಾಗ ಸಹಾಯಕ್ಕೆ ಧಾವಿಸಿ ಮಾನವೀಯತೆಯನ್ನು ತೋರಿಸಬೇಕೆಂದು ಎಲ್ಲರೂ ಹೇಳುತ್ತಾರೆ. ಆದರೆ ಅಪಘಾತವಾದ ಸಂದರ್ಭದಲ್ಲಿ ಮಾನವೀಯತೆ ಸತ್ತುಹೋಗುತ್ತದೆ ಎನ್ನುವುದಕ್ಕೆ ರಾಜ್ಯದಲ್ಲಿ ಮತ್ತೊಂದು ಪ್ರಕರಣ ಈಗ ಸಿಕ್ಕಿದೆ.

    ಬೈಕ್ ಅಪಘಾತ ನಡೆದು 108 ಅಂಬುಲೆನ್ಸ್ ಬರದ ಹಿನ್ನಲೆ ತಾಯಿಯನ್ನು ಹೊತ್ತು ಮಗ ಆಸ್ಪತ್ರಗೆ ಸಾಗಿರುವ, ಹೃದಯ ವಿದ್ರಾವಕ ಘಟನೆ ಕಲಬುರಗಿಯ ಉದನೂರ ಕ್ರಾಸ್ ಬಳಿ ಗುರುವಾರ ನಡೆದಿದೆ.

    ಏನಿದು ಘಟನೆ?
    ಮಗನನ್ನು ಭೇಟಿಯಾಗಲು ಸಿದ್ದಮ್ಮ ಎಂಬವರು ಬರುತ್ತಿದ್ದಾಗ ಪಲ್ಸರ್ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ನಂತರ ತೀವ್ರ ರಕ್ತ ಸ್ರಾವದಲ್ಲಿ ಬಳಲುತ್ತಿದ್ದ ಸಿದ್ದಮ್ಮ ಅವರನ್ನು ಆಸ್ಪತ್ರಗೆ ದಾಖಲಿಸಲು ಮಗ ಮಹಾಂತೇಶ 108 ಅಂಬ್ಯುಲೆನ್ಸ್ ಗೆ ಕರೆ ಮಾಡುತ್ತಾರೆ.

    ವಿಚಾರ ತಿಳಿದರೂ ಒಂದು ಗಂಟೆಯಾದರೂ ಅಂಬುಲೆನ್ಸ್ ಸ್ಥಳಕ್ಕೆ ಬರಲೇ ಇಲ್ಲ. ಜನ ಸಾಮಾನ್ಯರು ಈ ದೃಶ್ಯವನ್ನು ನೋಡುತ್ತಿದ್ದರೆ ವಿನಾಃ ಯಾರೂ ಸಹಾಯ ಮಾಡಲು ಮುಂದಾಗಲೇ ಇಲ್ಲ.

    ಕೊನೆಗೆ ಯಾರ ಸಹಾಯ ಸಿಗದೇ ಇದ್ದಾಗ ತಾಯಿಯನ್ನ ಎತ್ತಿಕೊಂಡು ಆಸ್ಪತ್ರೆಗೆ ನಡೆದಿದ್ದಾರೆ. ಅಷ್ಟರಲ್ಲಿ  ಪೊಲೀಸ್ ಜೀಪೊಂದು ಬಂದು ಸಿದ್ದಮ್ಮ ಅವರನ್ನು ಆಸ್ಪತ್ರೆಗೆ ಸಾಗಿಸಿದೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹಣವಿಲ್ಲ ಅಂತಾ ಪಬ್ಲಿಕ್ ಟಿವಿ ವರದಿ ನಂತರ, ಆಸ್ಪತ್ರೆಯ ಮುಖ್ಯಸ್ಥ ವಿಕ್ರಂ ರೆಡ್ಡಿ ಅವರು ಮಾನವೀಯತೆ ತೋರಿ ಉಚಿತ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಆದರೆ ಸಿದ್ದಮ್ಮ ಸ್ಥಿತಿ ಚಿಂತಾಜನಕವಾಗಿದೆ ಅಂತ ವೈದ್ಯರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣವಾಗಿದ್ದ ಬೈಕ್ ಸವಾರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    https://youtu.be/_FXNSRP_ceg

     

  • ತಂದೆ-ತಾಯಿ ಟಿವಿ ನೋಡುತ್ತಿದ್ದ ವೇಳೆ ಕೊಳಕ್ಕೆ ಬಿದ್ದು ಮಗು ಸಾವು

    ತಂದೆ-ತಾಯಿ ಟಿವಿ ನೋಡುತ್ತಿದ್ದ ವೇಳೆ ಕೊಳಕ್ಕೆ ಬಿದ್ದು ಮಗು ಸಾವು

    ಕೊಚ್ಚಿ: ತಂದೆ-ತಾಯಿ ಟಿವಿ ಕಾರ್ಯಕ್ರಮವೊಂದನ್ನು ನೋಡುತ್ತಾ ಕುಳಿತಿದ್ದ ವೇಳೆ ಮಗುವೊಂದು ಆಟವಾಡಲು ತೆರಳಿ ಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಕೊಚ್ಚಿಯಲ್ಲಿ ನಡೆದಿದೆ.

    ಸೋಮವಾರ ಈ ಘಟನೆ ನಡೆದಿದ್ದು, ಮಗುವನ್ನು ಪನಂಗಾಡ್ ನಿವಾಸಿ ಉಮೇಶ್ ಎಂಬವರ ಪುತ್ರ ಸಬರಿನಾಥ್(2) ಎಂಬುವುದಾಗಿ ಗುರುತಿಸಲಾಗಿದೆ.

    ಏನಿದು ಘಟನೆ?: ಮಗುವಿನ ಪೋಷಕರು ಟಿವಿ ಕಾರ್ಯಕ್ರಮವೊಂದನ್ನು ನೋಡುತ್ತಿದ್ದರು. ಪೋಷಕರು ತೊಡೆಯಲ್ಲಿ ಸಬರಿನಾಥನು ಕುಳಿತಿದ್ದನು. ಇದ್ದಕ್ಕಿದ್ದಂತೆಯೇ ಸುಮಾರು 6 ಗಂಟೆಯ ಸುಮಾರಿಗೆ ಆಟವಾಡಲೆಂದು ಹೋದ ಮಗು ಕೆಲ ಹೊತ್ತು ಒಳಗೆ ಬಾರದೇ ಇರುವುದನ್ನು ಗಮನಿಸಿದ ಪೋಷಕರು ಮಗುವನ್ನು ಸುತ್ತಮುತ್ತ ಹುಡುಕಾಡಿದ್ದಾರೆ. ಅಲ್ಲದೇ ಸ್ಥಳೀಯ ನಿವಾಸಿಗಳು ಕೂಡ ಹುಡುಕಾಟ ಆರಂಭಿಸಿದ್ದರು. ಆದ್ರೆ ಮಗುವಿನ ಸುಳಿವೇ ಇರಲಿಲ್ಲ. ಕೊನೆಗೆ ಮನೆಯ ಹತ್ತಿರವೇ ಇದ್ದ ಕೊಳದಲ್ಲಿ ಮಗು ಒದ್ದಾಡುತ್ತಿರುವುದನ್ನು ಕಂಡ ಸ್ಥಳೀಯರು ಪೋಷಕರಿಗೆ ತಿಳಿಸಿದ್ದಾರೆ. ಕೂಡಲೇ ಮಗುವನ್ನು ಕೊಳದಿಂದ ಹೊರತೆಗೆದ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಅದಾಗಲೇ ಮಗು ಮೃತಪಟ್ಟಿದೆ ಅಂತಾ ವೈದ್ಯರು ತಿಳಿಸಿದ್ದಾರೆ.

    ಒಟ್ಟಿನಲ್ಲಿ ಮಕ್ಕಳನ್ನು ಹೆತ್ತವರು ಅತ್ಯಂತ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಹಾಗೂ ಮಕ್ಕಳು ತಮ್ಮ ಕಣ್ಣ ಮುಂದೆಯೇ ಆಟವಾಡುತ್ತಿರುವಂತೆ ನೋಡಿಕೊಳ್ಳಬೇಕು ಅಂತಾ ಪೊಲೀಸರು ತಿಳಿಸಿದ್ದಾರೆ.

  • 35 ಸಾವಿರ ಅಡಿ ಎತ್ತರದದಲ್ಲಿ ಮಗುವಿಗೆ ಜನ್ಮ ನೀಡಿದ್ಳು ತಾಯಿ!

    35 ಸಾವಿರ ಅಡಿ ಎತ್ತರದದಲ್ಲಿ ಮಗುವಿಗೆ ಜನ್ಮ ನೀಡಿದ್ಳು ತಾಯಿ!

    ನವದೆಹಲಿ: ಸೌದಿ ಅರೇಬಿಯಾದಿಂದ ಭಾರತಕ್ಕೆ ಪ್ರಯಾಣಿಸುತ್ತಿದ್ದಾಗ ಗರ್ಭಿಣಿಯೊಬ್ಬರು ಜೆಟ್ ಏರ್‍ವೇಸ್ ವಿಮಾನದಲ್ಲಿ ಮಾರ್ಗ ಮಧ್ಯ ಅನಿರೀಕ್ಷಿತವಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

    ಹೌದು. ಭಾನುವಾರ ಬೆಳಗ್ಗೆ 2.55ಕ್ಕೆ ಜೆಟ್ ಏರ್‍ವೇಸ್ 9 ಡಬ್ಲ್ಯು 569 ವಿಮಾನ ದಮ್ಮಾಮ್‍ನಿಂದ ಕೊಚ್ಚಿಗೆ ಆಗಮಿಸುತಿತ್ತು. ಮಾರ್ಗ ಮಧ್ಯೆ ವಿಮಾನದಲ್ಲಿದ್ದ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ವೈದ್ಯಕೀಯ ಚಿಕಿತ್ಸೆ ಅಗತ್ಯವಿದೆ ಎಂದು ವಿಮಾನದ ಸಿಬ್ಬಂದಿ ತುರ್ತು ಘೋಷಣೆ ನೀಡಿದರು. ತಕ್ಷಣವೇ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲಾಯಿತು.

    ಅರಬ್ಬಿ ಸಮುದ್ರದ ಮೇಲೆ ಪ್ರಯಾಣಿಸುತ್ತಿದ್ದಾಗಲೇ ವಿಮಾನದಲ್ಲಿ ತಾಯಿ ಮಗುವಿಗೆ ಜನ್ಮ ನೀಡಿದ್ದು, ವಿಮಾನದ ಸಿಬ್ಬಂದಿ ಮತ್ತು ಕೇರಳಕ್ಕೆ ಪ್ರಯಾಣಿಸುತ್ತಿದ್ದ ನರ್ಸ್ ಸಹಾಯಕಿಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.

    ವಿಮಾನವು ಮುಂಬೈನಲ್ಲಿ ಇಳಿದಿದ್ದು, ತಕ್ಷಣ ತಾಯಿ ಮತ್ತು ನವಜಾತ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಚ್ಚಿಗೆ  12.45ಕ್ಕೆ ತಲುಪಬೇಕಿದ್ದ ವಿಮಾನ 90 ನಿಮಿಷ ತಡವಾಗಿ ತಲುಪಿದೆ.

    ಕಂಪೆನಿಯ ವಿಮಾನದಲ್ಲಿ ಈ ಮಗು ಜನಿಸಿದ್ದಕ್ಕೆ,  ಜೀವಿತಾವಧಿಯಲ್ಲಿ ಈ ಗಂಡು ಮಗುವಿಗೆ ವಿಮಾನದಲ್ಲಿ ಉಚಿತವಾಗಿ ಪ್ರಯಾಣಿಸುವ ಉಡುಗೊರೆಯನ್ನು ದಂಪತಿಗೆ ಏರ್‍ವೇಸ್ ನೀಡಿದೆ.

     

     

  • ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

    ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

    ಬಳ್ಳಾರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗಂಗಮ್ಮ (35) ತನ್ನ ಮಕ್ಕಳಾದ ಆಕಾಶ್(8) ಹಾಗೂ ಗುರು(6) ಹೇನಿನ ಪುಡಿಯ ಔಷಧಿ ಕುಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷ ಸೇವನೆಯಿಂದ ಆಕಾಶ್ ಮೃತಪಟ್ಟಿದ್ದು, ಗುರುವಿನ ಸ್ಥಿತಿ ಗಂಭೀರವಾಗಿದ್ದು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಗಂಗಮ್ಮ ಮಾನಸಿಕ ಅಸ್ವಸ್ಥಯಾಗಿದ್ದು ಕೌಟುಂಬಿಕ ಕಲಹದಿಂದ ಮನನೊಂದು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ ಎಂದು ಸಂಬಂಧಿಕರು ಹೇಳಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಮದ್ಯಪಾನಕ್ಕೆ 20 ರೂ. ಕೊಡ್ಲಿಲ್ಲ ಅಂತ ತಾಯಿಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡ್ದ!

    ಮದ್ಯಪಾನಕ್ಕೆ 20 ರೂ. ಕೊಡ್ಲಿಲ್ಲ ಅಂತ ತಾಯಿಯ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡ್ದ!

    ಬೆಳಗಾವಿ: ವ್ಯಕ್ತಿಯೊಬ್ಬ ಮದ್ಯಪಾನ ಮಾಡಲು 20 ರೂ ನೀಡಲಿಲ್ಲ ಎಂದು ತನ್ನ ವೃದ್ಧ ತಾಯಿಯನ್ನೇ ಕಲ್ಲು, ಕಟ್ಟಿಗೆಯಿಂದ ತಲೆಗೆ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಗುಗ್ರಾನಟ್ಟಿ ಗ್ರಾಮದಲ್ಲಿ ನಡೆದಿದೆ.

    66 ವರ್ಷದ ಪಾರ್ವತಿ ಕೊಲೆಯಾದ ತಾಯಿ. ಇವರ ಮಗನಾದ ಆರೋಪಿ ಸುರೇಶ ದಾಸರಕರ ಕಳೆದ ಹಲವಾರು ವರ್ಷಗಳಿಂದ ಕುಡಿತದ ಚಟಕ್ಕೆ ಬಲಿಯಾಗಿದ್ದ. ಕಳೆದ ರಾತ್ರಿ ಸುರೇಶ್ ತಾಯಿ ಪಾರ್ವತಿ ಜೊತೆ ಜಗಳವಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ತಕ್ಷಣ ತಾಯಿಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಸಾವನ್ನಪ್ಪಿದ್ದಾರೆ.

    ಈ ಬಗ್ಗೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸುರೇಶ್‍ನನ್ನು ಬಂಧಿಸಲಾಗಿದೆ.

     

  • 7 ವರ್ಷದ ಮಗನನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ತಾಯಿ

    7 ವರ್ಷದ ಮಗನನ್ನ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ತಾಯಿ

    ಶಿವಮೊಗ್ಗ: ತನ್ನ ಅನೈತಿಕ ಸಂಬಂಧಕ್ಕೆ ಮಗ ಅಡಚಣೆಯಾಗ್ತಾನೆಂದು ತಾಯಿಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿರುವ ಅಮಾನವೀಯ ಘಟನೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದಲ್ಲಿ ನಡೆದಿದೆ.

    7 ವರ್ಷದ ಪ್ರಮೋದ ಕೊಲೆಯಾದ ಬಾಲಕ. ಪ್ರಮೋದನ ತಾಯಿ ರೇಖಾ ಅಲಿಯಾಸ್ ಬೇಬಿ ತನ್ನ ಪ್ರಿಯಕರ ತಿಮ್ಮನಗೌಡ ಎಂಬಾತನಿಂದ ಮಗನ ಕೊಲೆ ಮಾಡಿಸಿದ್ದಾಳೆ. ಪ್ರಮೋದ ಚೋರಡಿಯ ರಾಮಕೃಷ್ಣ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ. ಇದೇ ತಿಂಗಳು ಜೂನ್ 2ರಂದು ಪ್ರಮೋದನನ್ನು ಅಪಹರಿಸಿ ಕೊಲೆ ಮಾಡಲಾಗಿತ್ತು. ಚೋರಡಿಯ ಕುಮದ್ವತಿ ನದಿ ಬಳಿ ಪ್ರಮೋದನ ಮೃತದೇಹವನ್ನು ಎಸೆಯಲಾಗಿತ್ತು.

    ರೇಖಾ ಪತಿ

    ರೇಖಾ ಹತ್ತು ವರ್ಷಗಳ ಹಿಂದೆ ಹಿರೇಕೆರೂರು ತಾಲೂಕಿನ ಹಳಿಯಾಳ ಗ್ರಾಮದ ವೀರಭದ್ರ ಎಂಬವರೊಂದಿಗೆ ಮದುವೆಯಾಗಿದ್ದಳು. ಮದುವೆಯ ಆರು ತಿಂಗಳ ನಂತರ ರೇಖಾ ಪತಿಯಿಂದ ದೂರವಾಗಿದ್ದಳು. ರೇಖಾ ಮತ್ತು ತಿಮ್ಮನಗೌಡನ ನಡುವೆ ಅನೈತಿಕ ಸಂಬಂಧವಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಗೊಂಡಿದ್ದರು. ಈ ಹಿನ್ನೆಲೆಯಲ್ಲಿ ತಿಮ್ಮನಗೌಡನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾನೆ.

    ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಬೇಸತ್ತು ಗಂಡನ ಕೊಲೆಗೆ 5 ಲಕ್ಷ ರೂ.ಗೆ ಸುಪಾರಿ ಕೊಟ್ಟ ಪತ್ನಿ

    ರೇಖಾ ಮತ್ತು ತಿಮ್ಮನಗೌಡ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಇದನ್ನೂ ಓದಿ: ಗಂಡನ ಕಾಮದಾಟ ಬೇಸತ್ತು ಸುಪಾರಿ ಕೊಟ್ಟು ಗಂಡನನ್ನೇ ಕೊಲ್ಲಿಸಿದ್ಳು! 

     

  • ಮರ್ಯಾದಾ ಹತ್ಯೆ: ಪ್ರೀತಿಯಲ್ಲಿ ಬಿದ್ದ ಮಗಳು ತಾಯಿಯಿಂದ ಕೊಲೆಯಾದ್ಳು!

    ಮರ್ಯಾದಾ ಹತ್ಯೆ: ಪ್ರೀತಿಯಲ್ಲಿ ಬಿದ್ದ ಮಗಳು ತಾಯಿಯಿಂದ ಕೊಲೆಯಾದ್ಳು!

    ಕೋಲಾರ: ಪ್ರೇಮ ವಿಚಾರ ತಿಳಿದು ತಾಯಿಯೇ ತಾನು ಬೆಳಸಿದ್ದ ಮಗಳನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

    18 ವರ್ಷದ ರಾಜೇಶ್ವರಿ ಕೊಲೆಯಾದ ಯುವತಿ. ತಂದೆಯಿಲ್ಲದ ರಾಜೇಶ್ವರಿಯನ್ನು ತಾಯಿ ವೆಂಕಟಮ್ಮ ಕೂಲಿ ನಾಲಿ ಮಾಡಿ ಸಾಕಿದ್ದರು. ಮಗಳು ಚೆನ್ನಾಗಿರಲಿ ಎಂದು ಪಿಯುಸಿ ಓದಿಸುತ್ತಿದ್ದರು. ಆದರೆ ರಾಜೇಶ್ವರಿ ಅದೇ ಗ್ರಾಮದ ಯುವಕನ ಪ್ರೇಮಪಾಶದಲ್ಲಿ ಸಿಲುಕಿದ್ದಳು.

    ರಾಜೇಶ್ವರಿಯ ಪ್ರೇಮ ವಿಚಾರವನ್ನು ತಿಳಿದ ಗ್ರಾಮಸ್ಥರು ಆಕೆಯ ತಾಯಿಯನ್ನು ನಿಂದಿಸಿದ್ರು. ಇದರಿಂದ ನೊಂದ ತಾಯಿ ಸಾಕಷ್ಟು ಬಾರಿ ಮಗಳಿಗೆ ಬುದ್ದಿ ಮಾತು ಹೇಳಿದ್ರು ಕೇಳಲಿಲ್ಲ. ಸೋಮವಾರ ರಾತ್ರಿ ಮರ್ಯಾದೆಗೆ ಅಂಜಿದ ತಾಯಿ ಮಗಳನ್ನ ಥಳಿಸಿದ್ದಾಳೆ. ಈ ವೇಳೆ ಕಪಾಳಕ್ಕೆ ಜೋರಾಗಿ ಪೆಟ್ಟುಬಿದ್ದ ಪರಿಣಾಮ ರಾಜೇಶ್ವರಿ ಮೃತಪಟ್ಟಿದ್ದಾಳೆ.

    ಇನ್ನೂ ಬೆಳಗ್ಗೆ ಗುಟ್ಟಾಗಿ ಮಗಳ ಅಂತ್ಯಸಂಸ್ಕಾರಕ್ಕೆ ವೆಂಕಟಮ್ಮ ಮುಂದಾಗಿದ್ರು. ಅನುಮಾನಗೊಂಡ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆಯಲ್ಲಿ ವೆಂಕಟಮ್ಮ ಮಗಳ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • 6 ತಿಂಗಳ ಮಗುವನ್ನ ರೈಲಿನಲ್ಲಿ ಬಿಟ್ಟು ಹೋದ ತಾಯಿ

    6 ತಿಂಗಳ ಮಗುವನ್ನ ರೈಲಿನಲ್ಲಿ ಬಿಟ್ಟು ಹೋದ ತಾಯಿ

    ಯಾದಗಿರಿ: ತಾಯಿಯೊಬ್ಬಳು ತನ್ನ ಆರು ತಿಂಗಳ ಗಂಡು ಮಗುವನ್ನು ರೈಲಿನಲ್ಲಿಯೇ ಬಿಟ್ಟುಹೋಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

    ಗುಂತಕಲ್-ಗುಲ್ಬರ್ಗಾ ಪ್ಯಾಸೆಂಜರ್ ರೈಲಿನಲ್ಲಿ ಮಗು ಪತ್ತೆಯಾಗಿದೆ. ಮಗು ಅನಾಥವಾಗಿರುವುದು ಯಾದಗಿರಿ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಮಗುವಿನ ಜೊತೆ ಒಂದು ಬ್ಯಾಗ್ ಸಹ ಸಿಕ್ಕಿದೆ. ಬ್ಯಾಗ್‍ನಲ್ಲಿ ರಾಯಚೂರುನಿಂದ ಯಾದಗಿರಿ ವರೆಗಿನ ರೈಲ್ವೆ ಟಿಕೆಟ್, ತಾಯಿಯ ಫೋಟೋ ಮತ್ತು ಒಂದು ಮೊಬೈಲ್ ಪತ್ತೆಯಾಗಿದೆ.

    ಪ್ರಯಾಣಿಕರ ಸಹಾಯದಿಂದ ಮಗುವನ್ನು ಗುಲ್ಬರ್ಗಾ ರೈಲು ನಿಲ್ದಾಣಕ್ಕೆ ತಲುಪಿಸಲಾಗಿದೆ. ಮಗುವನ್ನು ವಶಕ್ಕೆ ಪಡೆದ ಆರ್‍ಪಿಎಫ್ ಪೊಲೀಸರು ಮಕ್ಕಳ ಸಂರಕ್ಷಣ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ. ಪೊಲೀಸರು ತಾಯಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

     

  • ಮಹಿಳೆಯ ಕೊಲೆ, ನನ್ನನ್ನು ಹಿಡಿದು ಗಲ್ಲಿಗೇರಿಸಿ ಎಂದು ಆಕೆಯ ರಕ್ತದಲ್ಲೇ ಸಂದೇಶ- ಆರೋಪಿ ಮಗ ಪೊಲೀಸರ ವಶಕ್ಕೆ

    ಮಹಿಳೆಯ ಕೊಲೆ, ನನ್ನನ್ನು ಹಿಡಿದು ಗಲ್ಲಿಗೇರಿಸಿ ಎಂದು ಆಕೆಯ ರಕ್ತದಲ್ಲೇ ಸಂದೇಶ- ಆರೋಪಿ ಮಗ ಪೊಲೀಸರ ವಶಕ್ಕೆ

    ಮುಂಬೈ: ಮಹಿಳೆಯನ್ನ ಚಾಕುವಿನಿಂದ ಇರಿದು ಕೊಂದು ಆಕೆಯ ರಕ್ತದಲ್ಲಿ “ಈಕೆಯಿಂದ ಬೇಸತ್ತು ಹೋಗಿದ್ದೇನೆ, ನನ್ನನ್ನು ಹಿಡಿದು ಗಲ್ಲಿಗೇರಿಸಿ ಎಂದು ಬರೆದು ಕೊನೆಯಲ್ಲಿ ಸ್ಮೈಲಿಯನ್ನೂ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ 21 ವರ್ಷದ ಮಗನನ್ನು ಈಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ದೇಶದಲ್ಲಿ ಭಾರೀ ಸುದ್ದಿಯಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣವನ್ನ ಮೊದಲಿಗೆ ತನಿಖೆ ಮಾಡಿದ್ದ ಮುಂಬೈನ ಪೊಲೀಸ್ ಅಧಿಕಾರಿ ಧ್ಯಾನೇಶ್ವರ್ ಗಾನೋರ್ ಅವರ ಪತ್ನಿ ದೀಪಾಲಿ ಕೊಲೆಯಾದ ಮಹಿಳೆ. ಬುಧವಾರದಂದು ದೀಪಾಲಿ ಮುಂಬೈನ ಸಾಂಟಾಕ್ರೂಜ್‍ನಲ್ಲಿರೋ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಧ್ಯಾನೇಶ್ವರ್ ಅವರು ಕೆಲಸ ಮುಗಿಸಿ ಮನೆಗೆ ಬಂದಾಗ ಹೆಂಡತಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನ ನೋಡಿದ್ದರು. ಅಲ್ಲದೆ ಶವದ ಪಕ್ಕದಲ್ಲಿ ಆಕೆಯದ್ದೇ ರಕ್ತದಿಂದ ಬರೆದ ಸಂದೇಶ ಕೂಡ ಇತ್ತು. ಈಕೆಯಿಂದ ಬೇಸತ್ತು ಹೋಗಿದ್ದೇನೆ, ನನ್ನನ್ನು ಹಿಡಿಯಿರಿ, ಗಲ್ಲಿಗೇರಿಸಿ ಎಂಬ ಸಾಲುಗಳ ಜೊತೆ ಕೊನೆಯಲ್ಲಿ ಸ್ಮೈಲಿ ಫೇಸ್ ಕೂಡ ಬರೆಯಲಾಗಿತ್ತು. ಇದರಿಂದ ಪೊಲೀಸರೇ ಬೆಚ್ಚಿ ಬಿದ್ದಿದ್ದರು.

    ದೀಪಾಲಿ ಕೊಲೆಯಾದ ದಿನದಿಂದ ಅವರ 21 ವರ್ಷದ ಮಗ ಸಿದ್ಧಾಂತ್ ಕಾಣೆಯಾಗಿದ್ದ. ಹೀಗಾಗಿ ಈತನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ರು. ಸಿದ್ಧಾಂತ್ ಜೈಪುರಕ್ಕೆ ಪರಾರಿಯಾಗಿದ್ದಾನೆಂದು ತಿಳಿದು ಅಧಿಕಾರಿಗಳು ಕೂಡಲೇ 3 ಪೊಲೀಸರ ತಂಡವನ್ನ ಅಲ್ಲಿಗೆ ಕಳಿಸಿದ್ರು. ಆದ್ರೆ ಪೊಲೀಸರ ತಂಡ ಜೈಪುರ್‍ಗೆ ಹೋಗುವ ವೇಳೆಗೆ ಸಿದ್ಧಾಂತ್ ಜೋಧ್‍ಪುರಕ್ಕೆ ಹೋಗಿದ್ದ. ನಂತರ ಪೊಲೀಸರು ಸಿದ್ಧಾಂತ್‍ನ ಫೋಟೋವನ್ನ ಜೋಧ್‍ಪುರ್ ಪೊಲೀಸರೊಂದಿಗೆ ಹಂಚಿಕೊಂಡಿದ್ದು, ಅಲ್ಲಿ ಸಿದ್ಧಾಂತ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಆತನನ್ನು ಮುಂಬೈಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ರಶ್ಮಿ ಕಾರಂಡಿಕ್ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದು, ಸಿದ್ಧಾಂತ್‍ನನ್ನು ಇನ್ನೂ ಆರೋಪಿಯಾಗಿ ಮಾಡುವುದು ಬಾಕಿ ಇದೆ. ಎಫ್‍ಐಆರ್‍ನಲ್ಲಿ ಇನ್ನೂ ಅಪರಿಚಿತ ವ್ಯಕ್ತಿಗಳಿಂದ ಕೊಲೆ ಎಂದೇ ಇರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.